ಅತಿಯಾದ ಒತ್ತಡದ ಜೀವನಶೈಲಿ, ಮಾನಸಿಕ ಖಿನ್ನತೆ, ಮಧ್ಯ ರಾತ್ರಿ ಕಳೆದರೂ ಕೂಡ ಮೊಬೈಲ್ ಕಂಪ್ಯೂಟರ್ ಗಳಲ್ಲಿ ನಿರತರಾಗಿರುವುದು, ಇದರ ಜೊತೆಗೆ ಕೆಲ ವೊಂದು ದುರಾಭ್ಯಾಸಗಳಿಂದಾಗಿ, ನಿದ್ರಾಹೀನತೆಯಂತಹ ಆರೋಗ್ಯ ಸಮಸ್ಗಳು ಇಂದು ಹೆಚ್ಚಾಗಿ ಜನರನ್ನು ಕಾಡುತ್ತಿದೆ. ಇನ್ನು ಕೆಲವರು ರಾತ್ರಿ ಊಟ ಮಾಡಿ, ಬೇಗನೇ ಮಲಗಿದರೂ ಕೂಡ ನಿದ್ದೆ ಮಾತ್ರ ಹತ್ತಿರನೇ ಸುಳಿಯುವುದಿಲ್ಲ, ಇದರಿಂದಾಗಿ ಮರುದಿನ ಬೆಳಗ್ಗೆ ಯಾವ ಕೆಲಸ ಕಾರ್ಯಗಳನ್ನು ಕೂಡ ಸರಿಯಾಗಿ ಮಾಡಲಾಗದೇ, ತುಂಬಾನೇ ಹೈರಾಣಾಗಿ ಬಿಡುತ್ತಾರೆ. ನಿದ್ದೆ ಪ್ರತೀ ಜೀವಿಯ ಅಗತ್ಯ ಅಂಶಗಳಲ್ಲಿ ಒಂದಾಗಿದೆ. ಹೀಗಾಗಿ ನಿದ್ದೆಯ ಸಮಸ್ಯೆಯನ್ನು ನಿವಾರಿಸಲು, ಈ ಲೇಖನದಲ್ಲಿ ಕೆಲವೊಂದು ಆಹಾರಗಳು ಹಾಗೂ ಪಾನೀಯಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ ಮುಂದೆ ಓದಿ.. ಬೆಚ್ಚಗಿನ ಹಾಲಿಗೆ ಒಂದು ಚಮಚ ಜೇನು ಬೆರೆಸಿ ಕುಡಿಯಿರಿ ಬಹುದಿನಗಳಿಂದ ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವ ಜನರು ರಾತ್ರಿ ಸಮಯದಲ್ಲಿ ಮಲಗುವ ಮುನ್ನ, ಅಂದರೆ ರಾತ್ರಿ ಊಟ ವಾದ ಮೇಲೆ ಒಂದು ಲೋಟ ಉಗುರುಬೆಚ್ಚಗಿನ ಹಾಲಿಗೆ, ಒಂದು ಟೇಬಲ್ ಚಮಚ ಆಗುವಷ್ಟು ಜೇನುತುಪ್…
Author: AIN Author
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಹರ್ಮನ್ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಈ ಸೀಸನ್ನಲ್ಲಿ ಎರಡನೇ ಸ್ಥಾನ ಗಳಿಸಿದರೆ ಆರ್ಸಿಬಿ ಮೂರನೇ ಸ್ಥಾನ ಗಳಿಸಿತು. ಬುಧವಾರ ಸಂಜೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ತಂಡ ಮತ್ತೊಮ್ಮೆ ಗೆದ್ದು ಫೈನಲ್ ತಲುಪಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಕಳೆದ ಸೀಸನ್ನಲ್ಲಿಯೂ ಡೆಲ್ಲಿ ಮೊದಲು ಫೈನಲ್ಗೆ ಲಗ್ಗೆ ಇಟ್ಟಿತ್ತು. ಆದರೆ ಫೈನಲ್ನಲ್ಲಿ ಮುಂಬೈ ಎದುರು ಸೋಲನುಭವಿಸಬೇಕಾಯಿತು. ಇನ್ನು ಇದೇ ಶುಕ್ರವಾರ (ಮಾರ್ಚ್ 15) ಮುಂಬೈ ಇಂಡಿಯನ್ಸ್ ಮತ್ತು ಆರ್ಸಿಬಿ ನಡುವೆ ಎರಡನೇ ಫೈನಲಿಸ್ಟ್ ಆಗಲು ತೀವ್ರ ಪೈಪೋಟಿ ನಡೆಯಲಿದೆ. ಮಂಧಾನ ತಂಡ ಈ ಸೀಸನ್ನಲ್ಲಿ ಒಟ್ಟು ಎಂಟು ಪಂದ್ಯಗಳನ್ನು ಆಡಿದ್ದು, ಅದರಲ್ಲಿ ನಾಲ್ಕರಲ್ಲಿ ಗೆಲುವಿನ ರುಚಿ ಕಂಡಿದೆ. ಅದೇ ಸಮಯದಲ್ಲಿ ಮುಂಬೈ ಎಂಟು ಪಂದ್ಯಗಳಲ್ಲಿ ಐದರಲ್ಲಿ ಗೆಲುವು…
ನಿಮ್ಮಲ್ಲಿ ಪೇಟಿಎಂ ಫಾಸ್ಟ್ಯಾಗ್ ಇದ್ದು, ಮಾರ್ಚ್ 15ರೊಳಗೆ ಬೇರೆ ಬ್ಯಾಂಕ್ನ ಫಾಸ್ಟ್ಯಾಗ್ ಪಡೆಯಬೇಕಾಗುತ್ತದೆ. ಮಾರ್ಚ್ 15ರ ನಂತರ ಅದು ನಿಷ್ಕ್ರಿಯಗೊಳ್ಳುವುದಿಲ್ಲ. ಆ ಖಾತೆಯಲ್ಲಿ ಹಣ ಇದ್ದರೆ ಅದು ಮುಗಿಯುವವರೆಗೂ ಬಳಸಬಹುದು. ಮಾರ್ಚ್ 15ರ ಬಳಿಕ ಹೊಸದಾಗಿ ಹಣ ಸೇರಿಸಲಾಗುವುದಿಲ್ಲ, ರೀಚಾರ್ಜ್ ಮಾಡಲಾಗುವುದಿಲ್ಲ. Ayodhya Ram Mandir: ಇನ್ಮುಂದೆ ದೂರದರ್ಶನದಲ್ಲಿ ಬಾಲ ರಾಮನ ಬೆಳಗ್ಗಿನ ಪೂಜೆ ನೋಡಲು ಅವಕಾಶ! ಮಾರ್ಚ್ 15ರ ಬಳಿಕ ಪೇಟಿಎಂ ಫಾಸ್ಟ್ಯಾಗ್ ಖಾತೆಗೆ ರೀಚಾರ್ಜ್ ಮಾಡಲು ಸಾಧ್ಯವಾಗುವುದಿಲ್ಲ. ಮಾರ್ಚ್ 15ರೊಳಗೆ ಬೇರೆ ಬ್ಯಾಂಕ್ನಿಂದ ಫಾಸ್ಟ್ಯಾಗ್ ಪಡೆಯುವಂತೆ ಎನ್ಎಚ್ಎಐ ಮತ್ತೊಮ್ಮೆ ಅಧಿಕೃತವಾಗಿ ಸೂಚನೆ ನೀಡಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ ಆರ್ಬಿಐ ನಿರ್ಬಂಧ ಹಾಕಿರುವ ಹಿನ್ನೆಲೆಯಲ್ಲಿ ಅದರ ಫಾಸ್ಟ್ಯಾಗ್ಗೂ ಪರಿಣಾಮ ಬಿದ್ದಿದೆ. ಪೇಟಿಎಂನ ಫಾಸ್ಟ್ಯಾಗ್ ಪೇಮೆಂಟ್ಸ್ ಬ್ಯಾಂಕ್ಗೆ ಜೋಡಿತವಾಗಿರುವುದರಿಂದ ಅದಕ್ಕೂ ನಿರ್ಬಂಧ ಅನ್ವಯ ಆಗುತ್ತದೆ
ಮೈಸೂರು: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚುನಾವಣಾ ರಾಜಕೀಯಕ್ಕೆ ಕಾಲಿಡಲಿದ್ದು, ಒಡೆಯರ್ ರಾಜವಂಶದ ಕೊನೆಯ ವಂಶಸ್ಥರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪತ್ನಿ ಪ್ರಮೋದಾ ದೇವಿ ಒಡೆಯರ್ ಅವರು ಮಕ್ಕಳಿಲ್ಲದ ಕಾರಣ ಯದುವೀರ್ ಗೋಪಾಲ್ ರಾಜ್ ಅರಸ್ ಅವರನ್ನು ದತ್ತು ಪಡೆದರು. ನಂತರ ಅವರನ್ನು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ಮರುನಾಮಕರಣ ಮಾಡಲಾಯಿತು. ಇದಾದ ನಂತರ ಸತತ ಒಂಬತ್ತು ವರ್ಷದಿಂದ ಮೈಸೂರು ಅರಮನೆಯ ಭಾಗವೇ ಆಗಿರುವ ಯದುವಂಶದ ಯದುವೀರ್ ಅವರು ಓದಿದ್ದು ಬೆಂಗಳೂರು ಹಾಗೂ ವಿದೇಶದಲ್ಲಿ. ಅರ್ಥಶಾಸ್ತ್ರದಲ್ಲಿ ಬಿಎ. ಎಂಎ ಪದವಿಯನ್ನು ಪಡೆದವರು, ಯದುವೀರ್ಗೆ ಈಗ 32 ವರ್ಷ. ಜನಿಸಿದ್ದು 24 ಮಾರ್ಚ್ 1992 ರಂದು ಬೆಂಗಳೂರಿನಲ್ಲಿ. ಅವರ ತಂದೆ ಸ್ವರೂಪ ಗೋಪಾಲರಾಜೇ ಅರಸ್ ಬೆಂಗಳೂರಿನಲ್ಲಿದ್ದ ಕಾರಣ ಅಲ್ಲಿಯೇ ಜನನವಾಯಿತು. ಮೈಸೂರು ಹಾಗೂ ಬೆಂಗಳೂರು ಅರಮನೆಯ ಉಸ್ತುವಾರಿ, ರಾಜವಂಶಸ್ಥ ಆಸ್ತಿಗಳು, ಸಂಸ್ಥೆಗಳನ್ನು ಯದುವೀರ್ ಒಡೆಯರ್ ನೋಡಿಕೊಂಡು ಬರುತ್ತಿದ್ದಾರೆ. ಅಲ್ಲದೇ ದಸರಾ ಸೇರಿದಂತೆ ವರ್ಷದ ವಿವಿಧ ಸಮಯದಲ್ಲಿ ಅರಮನೆಯಲ್ಲಿ…
ಸೊಪ್ಪು ತರಕಾರಿಯನ್ನು ಕೆಲವರು ಹೆಚ್ಚು ಸೇವನೆ ಮಾಡುತ್ತಾರೆ. ಆದರೆ ಸೊಪ್ಪುಗಳನ್ನು ಕಡಿಮೆ ಸೇವನೆ ಮಾಡುತ್ತಾರೆ. ಸೊಪ್ಪಿನಲ್ಲಿ ಹಲವಾರು ರೀತಿಯ ಪೋಷಕಾಂಶಗಳಿದ್ದು,ಅದು ನಮ್ಮ ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ. ವಿಶೇಷವಾಗಿ ಕ್ಯಾಲ್ಸಿಯಂ,ಕಬ್ಬಿಣ,ಖನಿಜಗಳು,ಜೀವಸತ್ವಗಳು,ಪ್ರೋಟೀನ್ ಮತ್ತು ಪೋಲಿಕ್ ಆಮ್ಲದಂತಹ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಹಾಗಾದರೆ ಅಂತಹ ಸೊಪ್ಪು ತರಕಾರಿಗಳು ಯಾವುದು ಎಂದು ತಿಳಿಯೋಣ ಬನ್ನಿ. ಒಂದೆಲಗ ಸೊಪ್ಪು :ಬ್ರಾಹ್ಮಿ ಅಥವಾ ಒಂದೆಲಗ ಎನ್ನುವುದು ಹಲವಾರು ಔಷಧೀಯ ಗುಣಗಳನ್ನು ಹೊಂದಿರುವಂತ ಒಂದು ಅದ್ಭುತ ಸೊಪ್ಪು. ಇದನ್ನು ಹಿಂದಿನಿಂದಲೂ ಆಹಾರ ಕ್ರಮ ಹಾಗೂ ಔಷಧಿಯಾಗಿ ಬಳಕೆ ಮಾಡಲಾಗುತ್ತದೆ. ಮಕ್ಕಳಲ್ಲಿ ಏಕಾಗ್ರತೆ ಹಾಗೂ ಸ್ಮರಣೆ ಶಕ್ತಿ ವೃದ್ಧಿ,ಕಲಿಕೆಯ ಶಕ್ತಿ ಹೆಚ್ಚಿಸಲು ಈ ಸೊಪ್ಪು ತುಂಬಾ ಸಹಾಯಕಾರಿ. ಕೊತ್ತಂಬರಿ ಸೊಪ್ಪು: ಈ ಸೊಪ್ಪಿನಲ್ಲಿ ವಿಟಮಿನ್ ಎ,ಸಿ ಮತ್ತು ಆ್ಯಂಟಿ ಆಕ್ಸಿಡೆಂಟ್ಗಳು ಅಧಿಕವಾಗಿದ್ದು,ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಸೊಪ್ಪನ್ನು ತಿಂದರೆ ಕಣ್ಣು ಮತ್ತು ಚರ್ಮದ ಆರೋಗ್ಯಕ್ಕೆ ಒಳ್ಳೆಯದು. ಇದು ಕ್ಯಾಲ್ಸಿಯಂ,ಕಬ್ಬಿಣ ಮೆಗ್ನೀಸಿಯಂ ಮತ್ತು ಪೊಟ್ಯಾಸಿಯಮ್ನಂತಹ ಖನಿಜಗಳಲ್ಲಿ ಸಮೃದ್ಧವಾಗಿದೆ. ಮೆಂತೆ ಸೊಪ್ಪು…
ಬೆಂಗಳೂರು:- ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ಶಾರ್ಟ್ ಸರ್ಕ್ಯೂಟ್ನಿಂದ ಲಾರಿಯೊಂದು ಹೊತ್ತಿ ಉರಿದ ಘಟನೆ ಜರುಗಿದೆ. ಬೆಂಕಿ ಕಾಣಿಸಿಕೊಳ್ಳುವಾಗಲೇ ಚಾಲಕ ವಿದ್ಯಾನಂದರಾಮ್ ಪಾರಾಗಿದ್ದಾರೆ. ಇನ್ನು ಈ ಲಾರಿ ಎಲೆಕ್ಟ್ರಾನಿಕ್ ವಸ್ತುಗಳನ್ನು ತುಂಬಿಕೊಂಡು ಕನಕಪುರದಿಂದ ವಿಶಾಖಪಟ್ಟಣಕ್ಕೆ ಹೊರಟಿತ್ತು. ಈ ವೇಳೆ ದುರ್ಘಟನೆ ಸಂಭವಿಸಿದೆ. ಕೂಡಲೇ ಪೀಣ್ಯಾ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇತ್ತ ಬೆಂಕಿ ನಂದಿಸಲು ಅಗ್ನಿ ಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದರೆ, ಅಗ್ನಿ ಅವಘಡದಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಹಿನ್ನಲೆ ನೆಲಮಂಗಲ ಸಂಚಾರಿ ಪೊಲೀಸರು ಟ್ರಾಫಿಕ್ ನಿಯಂತ್ರಣ ಮಾಡಲು ಹರಸಾಹಸಪಟ್ಟಿದ್ದಾರೆ.
ಬೆಂಗಳೂರು:- ಆಸ್ತಿ ತೆರಿಗೆ ಕಟ್ಟುವ ತೆರಿಗೆದಾರರಿಗೆ ಬಿಬಿಎಂಪಿ ಗುಡ್ ನ್ಯೂಸ್ ನೀಡಿದ್ದು, ಸಮಯಕ್ಕೆ ಸರಿಯಾಗಿ ಕಟ್ಟುವವರಿಗೆ ಶೇಕಡಾ 5 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತಿದೆ. ಅಷ್ಟೆ ಅಲ್ಲದೇ ಈ ಬಾರಿ ಅವಧಿಯನ್ನು ಮೇ 1ರಿಂದ ಜುಲೈ 31ರವರೆಗೆ ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೊರಡಿಸಿದ ಸುತ್ತೋಲೆ ಪ್ರಕಾರ, ತೆರಿಗೆದಾರರು 2024-25ನೇ ಹಣಕಾಸು ವರ್ಷದ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರೊಳಗೆ ಪಾವತಿಸಿದರೆ ರಿಯಾಯಿತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಜೊತೆಗೆ ವಿನಾಯಿತಿ ನೀಡುವ ಸೌಲಭ್ಯವನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ. ಇನ್ನೇನು ಲೋಕಸಭೆ ಚುನಾವಣೆ ಘೋಷಣೆಯಾಗುವ ನಿರೀಕ್ಷೆ ಇರುವುದರಿಂದ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚುನಾವಣಾ ಸಂಬಂಧಿತ ಕೆಲಸಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ತೆರಿಗೆ ಪಾವತಿಗಳ ಪ್ರಕ್ರಿಯೆಗೊಳಿಸಲು ಕಷ್ಟವಾಗಲಿದೆ ತಿಳಿಸಲಾಗಿದೆ. ಇದಲ್ಲದೆ, ಏಪ್ರಿಲ್ ತಿಂಗಳಲ್ಲಿ ಹಲವಾರು ಸಾರ್ವಜನಿಕ ರಜಾದಿನಗಳಿವೆ. ತೆರಿಗೆ ಪಾವತಿದಾರರು ಅವುಗಳನ್ನು ಆಯ್ದ ಬ್ಯಾಂಕ್ ಶಾಖೆಗಳಲ್ಲಿ ಪಾವತಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಈ ಎಲ್ಲಾ…
ಹುಬ್ಬಳ್ಳಿ: ಇಲ್ಲಿಯ ಜೆ.ಸಿ. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಆದಾಯ ತೆರಿಗೆ ಕುರಿತು ಸಂವಾದ ಕಾರ್ಯಕ್ರಮವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು. ಆದಾಯ ತೆರಿಗೆ ಇಲಾಖೆ ಪ್ರಧಾನ ಆಯುಕ್ತ ಅರುಣಕುಮಾರ ಮಾತನಾಡಿ, ಅರಿತು ವ್ಯವಹಾರ ಮಾಡಿದರೆ ಉದ್ದಿಮೆ, ವ್ಯಾಪಾರದಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಸಕಾಲಕ್ಕೆ ತೆರಿಗೆ ಪಾವತಿಸುವ ಮೂಲಕ ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಇತ್ತೀಚಿನ ವರ್ಷಗಳಲ್ಲಿ ಕಾಯ್ದೆಗಳು ಮತ್ತಷ್ಟು ಕಠಿಣವಾಗಿವೆ. ವಾಣಿಜ್ಯೋದ್ಯಮಿಗಳು ಹಣಕಾಸು ವರ್ಷದ ಆದಾಯ ತೆರಿಗೆಯನ್ನು ಮುಂಗಡವಾಗಿ ಪಾವತಿಸಬೇಕು ಎಂದರು. ಕಳೆದ ವರ್ಷದ ಆರ್ಥಿಕ ವರ್ಷದಲ್ಲಿ 13 ಜಿಲ್ಲೆಯ ವ್ಯಾಪ್ತಿಯ ಕಚೇರಿಗೆ 1049 ಕೋಟಿ ರೂ. ಆದಾಯ ತೆರಿಗೆ ಗುರಿ ಹೊಂದಿತ್ತು. ಪ್ರಸಕ್ತ ಸಾಲಿನಲ್ಲಿ ನೀಡಿದ್ದ 2000 ಕೋಟಿ ರೂ. ಗುರಿಯಲ್ಲಿ ಶೇ. 60 ಸಾಧನೆ ಮಾಡಲಾಗಿದೆ ಎಂದರು. ಆದಾಯ ತೆರಿಗೆ ಉಪ ಆಯುಕ್ತ(ಟಿಡಿಎಸ್) ಕೀರ್ತಿ ನಾಯಕ ಮಾತನಾಡಿ, ಉದ್ಯಮ ಆರಂಭಿಸುವ ಮುನ್ನ ಆದಾಯ ತೆರಿಗೆ ಪಾವತಿ ಬಗ್ಗೆ ತಿಳಿದುಕೊಳ್ಳಬೇಕು. ಟಿಡಿಎಸ್ ಕಡಿತಕ್ಕೆ ಒಳ ಪಡುತ್ತೇವೆಯೋ ಎಂಬುದನ್ನು ಖಾತ್ರಿ ಮಾಡಿಕೊಳ್ಳಬೇಕು. ಇದೊಂದು…
ಮುಂಬೈ:- ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 3 ದಿನದ ಹಿಂದೆ ಔರಾದ್ ನಿವಾಸದಲ್ಲಿದ್ದ ವೇಳೆ ಪ್ರಭು ಸೌ ಅವರ ಎದೆ ಬಡಿತದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಎಸ್ ಲೋಖಂಡವಾಲಾ ನೇತೃತ್ವದಲ್ಲಿ ಪ್ರಭು ಚೌಹಾಣ್ ಗೆ ಕಿರು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯ ಪ್ರಭು ಚೌಹಾಣ್ ಆರೋಗ್ಯ ಸ್ಛಿರವಾಗಿದೆ ಬೀದರ್ ಕ್ಷೇತ್ರದಿಂದ ಭಗವಂತ್ ಖೂಬಾಗೆ ಟಿಕೆಟ್ ನೀಡಬೇಡಿ ಎಂದು ಪ್ರಭು ಚೌಹಾಣ್ ಪಟ್ಟು ಹಿಡಿದಿದ್ದರು. ಅಲ್ಲದೇ ಖುದ್ದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾಲಿಗೆ ಬಿದ್ದು ಬೇಡಿಕೊಂಡಿದ್ದರು. ಆದ್ರೆ, ಬಿಜೆಪಿ ಹೈಕಮಾಂಡ್, ಮತ್ತೆ ಬೀದರ್ ಟಿಕೆಟ್ ಭಗವಂತ್ ಖೂಬಾಗೆ ನೀಡಿದೆ. ಭಗವಂತ್ ಖೂಬಾಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರಾಗಿದೆ
ಬೆಂಗಳೂರು: ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಗೃಹಲಕ್ಷ್ಮಿ ಯೋಜನೆಯ ಇನ್ನೊಂದು ಬಿಗ್ ಅಪ್ಡೇಟ್ ಮಿಸ್ ಏನಾಪ್ಪಾ ಅಂದ್ರೆ ಗೃಹ ಲಕ್ಷ್ಮಿ ಯೋಜನೆಯ ಹಣ ಯಾರ ಖಾತೆಗೆ ಜಮಾ ಆಗುತ್ತಿಲ್ಲವೋ ಅವರ ಸಮಸ್ಯೆಯನ್ನು ಪರಿಹರಿಸಲು ಅಧಿಕಾರಿಗಳು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಭಾರತ Vs ಪಾಕಿಸ್ತಾನ ಪಂದ್ಯಗಳ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್: ಟಿಕೆಟ್ ದರ ಕೇಳಿದ್ರೆ ಶಾಕ್! ಈಗಾಗಲೇ ಸರ್ಕಾರವು ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 6 ಕಂತುಗಳ ಹಣವನ್ನು ಜಮಾ ಮಾಡಿದೆ ಎಂದು ಕೆಲಕಡೆ ಸುದ್ದಿಯಾಗಿದ್ದು ಪ್ರತಿ ತಿಂಗಳ 20ನೇ ತಾರೀಖಿನೊಳಗೆ ರಾಜ್ಯ ಸರ್ಕಾರವು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುತ್ತಿದ್ದು, ಸದ್ಯ ಯಜಮಾನಿಯರು ಇದೀಗ 7ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಗೃಹಲಕ್ಷ್ಮಿ ಡಿಬಿಟಿ ಮೂಲಕ ಈ ತಿಂಗಳ(ಮಾರ್ಚ್) ಹಣವನ್ನು 2-3ನೇ ವಾರದಲ್ಲಿ ವರ್ಗಾಯಿಸುವ ಸಾಧ್ಯತೆ ಇದೆ. ಹಣ ಬಾರದೇ ಇದ್ದಲ್ಲಿ ಹೀಗೆ ಮಾಡಿ: ನೊಂದಣಿ ಮಾಡಿದ ಮಹೀಳೆಯರಿಗೆ ಗೃಹಲಕ್ಷ್ಮಿ ಹಣ (Gruha Lakshmi Money) ಬಾರದೇ ಇದ್ದಲ್ಲಿ ಬ್ಯಾಂಕ್ ಖಾತೆಗೆ ತೆರಳಿ ಮತ್ತೊಮ್ಮೆ ಕೆವೈಸಿ ಮಾಡಿಸಿ,…