ಹೆಚ್ಚಿನ ಜನರು ತೂಕ ಕಡಿಮೆ ಮಾಡಿಕೊಳ್ಳಲು ಮತ್ತು ತೂಕ ನಿಯಂತ್ರಣಕ್ಕಾಗಿ ಗ್ರೀನ್ ಟೀ ಕುಡಿಯುತ್ತಾರೆ. ಇದು ಕೇವಲ ತೂಕ ಕಡಿಮೆ ಮಾಡುವುದಲ್ಲದೇ ಹೃದಯ ಸಂಬಂಧಿ ಸಮಸ್ಯೆ ಹಾಗೂ ಕರುಳಿನ ಆರೋಗ್ಯಕ್ಕೂ ಉತ್ತಮವಾಗಿದೆ. ಹಲವಾರು ರೋಗಕ್ಕೆ ರಾಮಬಾಣ ಹೆಚ್ಚಿನ ಜನರು ಗ್ರೀನ್ ಟೀ ಅಂದ್ರೆ ಮುಖ ತಿರುಗಿಸಿಕೊಳ್ಳುತ್ತಾರೆ. ಕನಿಷ್ಠ ಪಕ್ಷ ಅದರ ಉಪಯೊಗವನ್ನು ತಿಳಿದುಕೊಳ್ಳುವ ಪ್ರಯತ್ನವನ್ನೂ ಮಾಡಲ್ಲ. ಈ ಗ್ರೀನ್ ಟೀ, ಹಲವಾರು ಗಿಡ ಮೂಲಿಕೆಯಿಂದ ಕೂಡಿದ್ದು, ಹಲವಾರು ಕಾಯಿಲೆಗಳಿಗೆ ಮದ್ದಾಗಿದೆ. ಇದು ಪರಿಧಮನಿಯ ಕಾಯಿಲೆ, ಟೈಪ್ 2 ಮಧುಮೇಹ ಮತ್ತು ಬೊಜ್ಜು, ಚರ್ಮ ಸಂಬಂಧಿ ಸಮಸ್ಯೆಗಳನ್ನು ದೂರ ಮಾಡುತ್ತದೆ. ಸೌಂದರ್ಯವರ್ಧಕ ಗ್ರೀನ್ ಟೀಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ದೇಹವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದರೊಂದಿಗೆ ತ್ವಚ್ಛೆಯ ಅಂದವನ್ನು ಹೆಚ್ಚಿಸುವ ಗುಣವೂ ಇದರಲ್ಲಿದೆ. ಸೌಂದರ್ಯ ಉತ್ಪನ್ನಗಳಲ್ಲಿ ಕೂಡ ಗ್ರೀನ್ ಟೀಯನ್ನು ಬಳಕೆ ಮಾಡುತ್ತಾರೆ. ಇದು ಯುವಿ ಕಿರಣಗಳಿಂದ ತ್ವಚ್ಚೆಯನ್ನು ರಕ್ಷಿಸುವ ಗುಣ, ಅಕಾಲಿಕ ನೆರೆ ತಡೆಯುವುದು, ಉರಿಯೂತದ ಲಕ್ಷಣಗಳನ್ನು ನಿವಾರಿಸುತ್ತದೆ.…
Author: AIN Author
ಬೆಂಗಳೂರು:- ಬೆಂಗಳೂರು ನಗರದಾದ್ಯಂತ ಅನ್ಬಾಕ್ಸಿಂಗ್ ಬೆಂಗಳೂರು ಪೌಂಡೇಷನ್ ವತಿಯಿಂದ ಡಿಸೆಂಬರ್-2023ರ ಮಾಹೆಯಲ್ಲಿ “ಬೆಂಗಳೂರು ಹಬ್ಬ”ಕ್ಕೆ* ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಹಬ್ಬ ಆಚರಣೆಗೆ ಪಾಲಿಕೆ ಸಹಕಾರ ನೀಡುವ ಸಂಬಂಧ ಪಾಲಿಕೆ ಕೇಂದ್ರ ಕಛೇರಿ ಮುಖ್ಯ ಆಯುಕ್ತರ ಕಛೇರಿಯಲ್ಲಿ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಘನತೆ ಹಾಗೂ ಬೆಂಗಳೂರಿನ ಬ್ರಾಂಡ್ ಅನ್ನು ಹೆಚ್ಚಿಸುವ ಸಲುವಾಗಿ ಇದೇ ಡಿಸೆಂಬರ್ ತಿಂಗಳಲ್ಲಿ ಬೆಂಗಳೂರು ಹಬ್ಬವನ್ನು ಆಚರಿಸಲಾಗುತ್ತಿದ್ದು, ಅದಕ್ಕೆ ಬೇಕಾದಂತಹ ಸಹಕಾರವನ್ನು ಪಾಲಿಕೆಯಿಂದ ನೀಡಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು ಸೂಕ್ತ ಕ್ರಮಗಳನ್ನು ಕೈಗೊಂಡು ಅಗತ್ಯ ಸಹಕಾರವನ್ನು ನೀಡಬೇಕೆಂದು ಸೂಚನೆ ನೀಡಿದರು. ಬೆಂಗಳೂರು ಹಬ್ಬವನ್ನು 2024ರಿಂದ ಆಯಾ ಖುತುವಿಗೆ ತಕ್ಕಂತೆ ಹಬ್ಬಗಳನ್ನು ಆಚಾರಿಸಲಾಗುತ್ತದೆ. ಬೆಂಗಳೂರು ಹಬ್ಬಕ್ಕೆ ಪ್ರಮುಖ ಸ್ಥಳ, ಜಂಕ್ಷನ್ಗಳು, ಮೇಲುಸೇತುವೆ, ಉದ್ಯಾನವನಗಳು, ಮಾರುಕಟ್ಟೆಗಳನ್ನು ಗುರುತಿಸಿ…
ಬೆಂಗಳೂರು:ಬಿಎಂಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಯುವ ಮತದಾರರ ನೋಂದಣಿ ಕಾರ್ಯಕ್ರಮ ವನ್ನು ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಶ್ರೀ ಆರ್ ರಾಮಚಂದ್ರನ್ ಅವರು ಇಂದು ಉದ್ಘಾಟಿಸಿದರು. ದೇಶದೆಲ್ಲೆಡೆ ಇಂದು ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಜಾಗೃತಿ ವೇದಿಕೆ (Voters Awareness Forum) ಮತ್ತು ಚುನಾವಣಾ ಸಾಕ್ಷರತಾ ಕ್ಲಬ್ (Electoral Literact Club) ಗಳನ್ನೂ ಸಹಾ ಉದ್ಘಾಟಿಸಿದರು. ಬಿಎಂಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಬಿ. ಪದ್ಮ, ಚುನಾವಣಾ ಸಾಕ್ಷರತಾ ಕ್ಲಬ್ ನ ಸಂಚಾಲಕಿ ಡಾ. ಕೆ ವೀಣಾ, ಸಂಯೋಜಕಿ ಶ್ರೀಮತಿ ಬಿ. ಭಾನು ಹಾಗೂ ಸುಮಾರು 1000 ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮೈಸೂರು: ನಾಳೆ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯ ವಿರುದ್ಧ ಭಾರತದ ವಿಶ್ವ ಕಪ್ ಗೆದ್ದು ಬರಲಿ ಎಂದು ಕ್ರಿಕೆಟ್ ಪ್ರೇಮಿಗಳಿಂದ ವಿದ್ಯಾರ್ಥಿಗಳ ಜೊತೆ ಸೇರಿ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಭಾರತದ ತಂಡದ ಆಟಗಾರರ ಭಾವಚಿತ್ರ ಹಿಡಿದು ಭಾರತದ ತಂಡದ ಆಟಗಾರರಿಗೆ ಶುಭಕೋರಿ ಹಾಗೂ ಗೆದ್ದು ಬಾ ಗೆದ್ದು ಬಾ ಬಾರತ ಗೆದ್ದು ಬಾ, ನಮ್ಮದೇ ನಮ್ಮದೇ ವಿಶ್ವಕಪ್ ನಮ್ಮದೇ, ಹಲವಾರು ಘೋಷಣೆ ಕೂಗುತ್ತಾ ಶುಭ ಹಾರೈಸಿದರು, ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ. ಪ್ರಕಾಶ್ ರವರು ಮಾತನಾಡಿ ವಿಶ್ವಕಪ್ ನಲ್ಲಿ ಭಾರತದ ತಂಡವು ಸತತವಾಗಿ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಎಉ ಬಂದಿದ್ದು ಕ್ರಿಕೇಟ್ ಪ್ರೇಮಿಗಳ ಮನವನ್ನು ಗೆದ್ದಿದೆ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಪ್ರತಿಯೊಬ್ಬ ಆಟಗಾರರೂ ಸಹ ಅತ್ಯುತ್ತಮ ಸಮನ್ವತೆ ಮತ್ತು ಸಮರ್ಥ ಪ್ರದರ್ಶನದಿಂದಾಗಿ ಈ ಭಾರಿ ವಿಶ್ವಕಪ್ ಗೆಲ್ಲಲಿದೆ ಎಂದರು. https://ainlivenews.com/high-speed-internet-unveiled-in-china-100-gb-net-per-second/ ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನರೇಂದ್ರ ಮೋದಿ ಬಂದಿ ವೀಕ್ಷಣೆ ಮಾಡುತ್ತಿರುವುದು ನಮ್ಮ…
ಬೆಂಗಳೂರು:- ಬಿ.ವೈ. ವಿಜಯೇಂದ್ರ ಬಳಸಿ ಬೀಸಾಡಲು ತಂದಿರುವ ಹೊಸ “ಹರಕೆಯ ಕುರಿ” ಎಂದು ಹೇಳುವ ಮೂಲಕ ಕಾಂಗ್ರೆಸ್ ಟೀಕೆ ಮಾಡಿದ್ದಾರೆ https://twitter.com/INCKarnataka/status/1725783706164732361?ref_src=twsrc%5Etfw%7Ctwcamp%5Etweetembed%7Ctwterm%5E1725783706164732361%7Ctwgr%5Efd36467f82f04de22cb4b4251f90aa48ab6f0b24%7Ctwcon%5Es1_c10&ref_url=http%3A%2F%2Fapi-news.dailyhunt.in%2F ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ! ◆ಯಡಿಯೂರಪ್ಪರನ್ನು ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು. ◆ಜಗದೀಶ್ ಶೆಟ್ಟರ್ ರವರನ್ನು ಅಧಿಕಾರದಿಂದ ದೂರವಿಟ್ಟು ವಂಚಿಸಿತ್ತು. ◆ವಿ. ಸೋಮಣ್ಣರನ್ನು ವ್ಯವಸ್ಥಿತವಾಗಿ ಸೋಲಿನ ಹೊಂಡಕ್ಕೆ ತಳ್ಳಲಾಗಿತ್ತು. ◆ಲಕ್ಷ್ಮಣ್ ಸವದಿಯವರನ್ನು ಮೂಲೆಗುಂಪು ಮಾಡಿ ಕೂರಿಸಲಾಗಿತ್ತು. ◆ಈಗ ಸಿಎಂ ಆಗಿದ್ದ ಬೊಮ್ಮಾಯಿಯವರು ಆಟಕ್ಕೂ ಇಲ್ಲ, ಲೆಕ್ಕಕ್ಕೂ ಇಲ್ಲದಂತೆ ನಿರ್ಲಕ್ಷಿಸಲಾಗಿದೆ. ಇದೇ ಮಾದರಿಯಲ್ಲಿ ವಿಜಯೇಂದ್ರ ಕೂಡ ಬಳಸಿ ಬೀಸಾಡಲು ತಂದಿರುವ ಹೊಸ ‘ಹರಕೆಯ ಕುರಿ’ ಅಷ್ಟೇ! ಎಂದಿದೆ.
ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ವಿಚಾರ ಸಂಬಂಧ ಉಡುಪಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಪ್ರತಿಕ್ರಿಯೆ ನೋಡಿದ್ದು, ವಿಜಯೇಂದ್ರ, ಅಶೋಕ್ ಇಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ. https://ainlivenews.com/how-to-make-hotel-style-palak-paneer-antira-here-it-is/ ಇಬ್ಬರ ನೇತೃತ್ವದಲ್ಲಿ ಬಿಜೆಪಿ ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿ. ಕಾರ್ಯಕರ್ತರ ಭಾವನೆ, ಜನರ ಆಶೋತ್ತರ ಗಮನಿಸಿ ಪಕ್ಷ ಬೆಳೆಸಲಿ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಗೆಲ್ಲಿಸಲಿ ಎಂದು ಹಾರೈಸುವೆ ಎಂದರು.
ಬೆಂಗಳೂರು:- ಬೆಂಗಳೂರಿನ ಖಾಸಗಿ ಹೊಟೇಲ್ವೊಂದರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿದ್ದ, ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬೆಲ್ಲದ್ ಮೂವರು ಸಭೆ ಶುರುವಾಗುವ ಮುಂಚೆಯೇ ಹೊರನಡೆದಿದ್ದು, ಇದೀಗ ಆಡಳಿತ ಪಕ್ಷ ಕಾಂಗ್ರೆಸ್, ಟ್ವೀಟ್ ಮೂಲಕ ಟೀಕಾ ಪ್ರಹಾರ ನಡೆಸಿದೆ. ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ ಎಂದು ಹೊರಗೆ ಟೀ ಕುಡಿಯಲು ಹೋದವರು ಜಗನ್ನಾಥ ಭವನದ ಎದುರು ಟೀ ಮಾರಿಕೊಂಡು ಕೂತಿದ್ದಾರಂತೆ, ಮೋದಿ ಮಾದರಿ! ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ? ‘ಜಾರಿದವರ ಯತ್ನ ಬೆಲ್ಲ’ ಆಗ್ಲಿಲ್ಲವಲ್ಲಪ್ಪ ಎಂದು ಟ್ವೀಟ್ ಮೂಲಕ ಟೀಕಿಸಿದೆ. ಇನ್ನು ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್ ‘ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ ಎಂದಿದೆ. ಯಡಿಯೂರಪ್ಪರನ್ನು ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು, ಜಗದೀಶ್ ಶೆಟ್ಟರ್ ರವರನ್ನು ಅಧಿಕಾರದಿಂದ ದೂರವಿಟ್ಟು ವಂಚಿಸಿತ್ತು , ವಿ. ಸೋಮಣ್ಣರನ್ನು ವ್ಯವಸ್ಥಿತವಾಗಿ ಸೋಲಿನ ಹೊಂಡಕ್ಕೆ ತಳ್ಳಲಾಗಿತ್ತು, ಲಕ್ಷ್ಮಣ್ ಸವದಿಯವರನ್ನು ಮೂಲೆಗುಂಪು…
ಉತ್ತರ ಕನ್ನಡ: ನನ್ನ ಅಸಮಾಧಾನದ ಬಗ್ಗೆ ಎಲ್ಲಿ ಹೇಳಬೇಕೋ ಅಲ್ಲಿ ಹೇಳಿದ್ದೇನೆ ಎಂದು ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ತಿಳಿಸಿದರು. ನಾಯಕತ್ವ ಆಧಾರದ ಮೇಲೆ ರಾಜಕೀಯ ಮಾಡುತ್ತಿಲ್ಲ. https://ainlivenews.com/how-to-make-hotel-style-palak-paneer-antira-here-it-is/ ನನ್ನ ಕ್ಷೇತ್ರದ ಜನರ ಜೊತೆಗೆ ಜನರಿಂದ ರಾಜಕೀಯ ಮಾಡ್ತಿದ್ದೇನೆ. ನನ್ನ ಭಾವನೆಗಳಿಗೆ ಧಕ್ಕೆ ಬಂದಾಗ ಸಹಿಸಿಕೊಳ್ಳುವುದಿಲ್ಲ. ಮುಂದಿನ ಸಭೆಯಲ್ಲಿ ಭಾಗವಹಿಸಬೇಕೋ ಬೇಡವೋ ನೋಡೋಣ. ಈಗಲೇ ಎಲ್ಲವನ್ನೂ ನಿರ್ಧಾರ ಮಾಡುವುದು ಬೇಡ ಎಂದರು.
ಬೆಂಗಳೂರು:- ವರ್ಗಾವಣೆ ದಂಧೆ ಸಾಬೀತುಪಡಿಸಿದ್ರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ. ವರ್ಗಾವಣೆ ದಂಧೆ ಸಾಬೀತುಪಡಿಸಿದರೆ ಸಿಎಂ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಎಂದಿದ್ದರು. ಪೊಲೀಸ್ ವರ್ಗಾವಣೆ ಪಟ್ಟಿಯಿಂದ ಸಿಎಂ ಸುಳ್ಳು ಹೇಳಿದ್ದೆಂದು ಗೊತ್ತಾಗಿದೆ. ಹಾಗಾದ್ರೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದರು. ಈಗ ಸಿಎಂ ಸಿದ್ದರಾಮಯ್ಯ ಹೇಳಬೇಕು, ಯಾವಾಗ ನಿವೃತ್ತಿ ಆಗ್ತೀನೆಂದು. ಸಿದ್ದರಾಮಯ್ಯ ಇನ್ನುಂದೆ ಸುಳ್ಳುರಾಮಯ್ಯ ಎಂದು ಕಿಡಿಕಾರಿದ್ದಾರೆ. ಸ್ಪೀಕರ್ ಕುರ್ಚಿಯನ್ನು ಜಮೀರ್ ತಾಲಿಬಾನ್ ಮಾಡಲು ಹೊರಟಿದ್ದಾರೆ. ಮುಸ್ಲಿಮರಿಗೆ ಸ್ಥಾನ ಕೊಟ್ಟಿದ್ದೇವೆ, ಬಿಜೆಪಿ ಅವರು ನಮಸ್ಕರಿಸ್ತಾರೆಂದು ಹೇಳಿದ್ದಾರೆ. ಇದಕ್ಕಿಂತ ಕೆಟ್ಟ ಸಂಸ್ಕೃತಿ ಇಲ್ಲ, ಯಾವ ಕಾಂಗ್ರೆಸ್ಸಿಗರು ಇದನ್ನು ಖಂಡಿಸಿಲ್ಲ. ಕ್ಷಮೆ ಕೇಳಬೇಕು, ಇಲ್ಲವೇ ಜಮೀರ್ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ವಾಗ್ದಾಳಿ ಮಾಡಿದ್ದಾರೆ. ಸ್ಪೀಕರ್ ಸ್ಥಾನ ಬಗ್ಗೆ ಸಚಿವ ಜಮೀರ್ ವಿವಾದಾತ್ಮಕ…
ಲಕ್ನೋ: ವಿಶ್ವಕಪ್ ಟೂರ್ನಿಯಲ್ಲಿ (World Cup Cricket) ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ವೇಗಿ ಮೊಹಮ್ಮದ್ ಶಮಿ (Mohammed Shami) ಅವರ ಗ್ರಾಮದಲ್ಲೇ ಸಣ್ಣ ಕ್ರೀಡಾಂಗಣ (Minis Stadium) ನಿರ್ಮಾಣಕ್ಕೆ ಉತ್ತರ ಪ್ರದೇಶ ಸರ್ಕಾರ (Uttar Pradesh) ಮುಂದಾಗಿದೆ. ಉತ್ತರ ಪ್ರದೇಶದ ಅಮ್ರೋಹಾ (Amroha) ಜಿಲ್ಲೆಯ ಸಹಾಸ್ಪುರ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಈಗಾಗಲೇ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ಕ್ರೀಡಾಂಗಣದ ಕಾಮಗಾರಿ ಆರಂಭಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ. ಮೊಹಮ್ಮದ್ ಶಮಿ ಅವರ ಹಳ್ಳಿಯಾದ ಸಹಸ್ಪುರ ಅಲಿನಗರದಲ್ಲಿ ಮಿನಿ ಕ್ರೀಡಾಂಗಣವನ್ನು ನಿರ್ಮಿಸಲು ನಾವು ಪ್ರಸ್ತಾಪಿಸುತ್ತಿದ್ದೇವೆ. ಇದರಲ್ಲಿ ಮಿನಿ ಕ್ರೀಡಾಂಗಣದ ಜೊತೆಗೆ ತೆರೆದ ಜಿಮ್ ಸೇರಿದೆ ಎಂದು ಜಿಲ್ಲಾಧಿಕಾರಿ ರಾಜೇಶ್ ತ್ಯಾಗಿ ಹೇಳಿದ್ದಾರೆ. ಸರ್ಕಾರದಿಂದ ಘೋಷಣೆ ಹೊರ ಬಿದ್ದ ಬೆನ್ನಲ್ಲೇ ಉತ್ತರ ಪ್ರದೇಶದ ರಾಷ್ಟ್ರೀಯ ಲೋಕದಳ ಪಕ್ಷದ ರಾಜ್ಯಸಭಾ ಸದಸ್ಯ ಜಯಂತ್ ಸಿಂಗ್ ಎಕ್ಸ್ನಲ್ಲಿ ಪೋಸ್ಟ್ ಮಾಡಿ, https://twitter.com/PTI_News/status/1725550800691253680?ref_src=twsrc%5Etfw%7Ctwcamp%5Etweetembed%7Ctwterm%5E1725550800691253680%7Ctwgr%5Ec216af4670f6692674cb4e7fda9c64456366e6cf%7Ctwcon%5Es1_&ref_url=https%3A%2F%2Fpublictv.in%2Futtar-pradesh-yogi-govt-to-construct-stadium-at-mohammed-shamis-native-village-in-amroha%2F ಶಮಿ ತವರಿನಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಸಹಾಯ ಮಾಡಲು ನನ್ನ ಸಂಸದರ ನಿಧಿಯನ್ನು ನೀಡಲು ಉತ್ಸುಕನಾಗಿದ್ದೇನೆ…