ದಾವಣಗೆರೆ:- ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹನುಮಂತಾಪುರ ಗೊಲ್ಲರಹಟ್ಟಿಯಲ್ಲಿ ಸಿಲಿಂಡರ್ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಿರಾಣಿ ಅಂಗಡಿ ಸುಟ್ಟು ಕರಕಲಾದ ಘಟನೆ ಜರುಗಿದೆ. https://ainlivenews.com/congress-leader-haider-murder-case/ ಗ್ರಾಮದ ಕುಮಾರ್ ಎನ್ನುವರಿಗೆ ಸೇರಿದ ಕಿರಾಣಿ ಅಂಗಡಿ ಇದಾಗಿದ್ದು, ಅಂಗಡಿಯಲ್ಲಿ ಇರಿಸಿದ್ದ ಸಿಲಿಂಡರ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಹೊರ ಓಡಿಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಘಟನೆಯಿಂದ ಅಂಗಡಿಯಲ್ಲಿದ್ದ ಎಲ್ಲಾ ಸಾಮಗ್ರಿಗಳು ಸುಟ್ಟು ಕರಕಲಾಗಿದ್ದು, ಅಂಗಡಿ ಮಾಲೀಕ ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
Author: AIN Author
ಬೆಂಗಳೂರು:ಶಾಂತಿನಗರ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆ ಹಿಂದೆ ಕೈ ನಾಯಕರ ಕೈವಾಡವಿರೋ ಶಂಕೆ ವ್ಯಕ್ತವಾಗಿದೆ. https://ainlivenews.com/navarasan-entered-the-sports-world-by-organizing-the-celebrity-womens-kabbadi-league/ ಶನಿವಾರ ಮಧ್ಯರಾತ್ರಿ ಅಶೋಕನಗರ ಪೊಲೀಸ್ ಠಾಣಾವ್ಯಾಪ್ತಿಯ ಫುಟ್ ಬಾಲ್ ಗ್ರೌಂಡ್ ಬಳಿ ಕಾಂಗ್ರೆಸ್ ಮುಖಂಡ ಹೈದರ್ ಕೊಲೆ ನಡೆದಿತ್ತು. ಶಾಂತಿನಗರ ಶಾಸಕ ಹ್ಯಾರಿಸ್ ಗೆ ಹೈದರ್ ಆಪ್ತನಾಗಿದ್ದ. ಬಿಬಿಎಂಪಿ ಚುನಾವಣೆಗೆ ಸಜ್ಜಾಗಿ ಎಂದು ಕಾಂಗ್ರೆಸ್ ವರಿಷ್ಠರು ಕರೆ ಕೊಟ್ಟ ಬೆನ್ನಲ್ಲೇ ಕೈ ಮುಖಂರು ಚುನಾವಣೆಗೆ ತಯಾರಿ ನಡೆಸಿದ್ರು. ಈ ಬಾರಿ ಬಿಬಿಎಂಪಿ ಚುನಾವಣೆಗೆ ಹೈದರ್ ಸಹೋದರ ಸಲೀಮ್ ಗೆ ಟಿಕೆಟ್ ಕನ್ಫರ್ಮ್ ಅಂತಾ ಇಡೀ ಏರಿಯಾದಲ್ಲಿ ಚರ್ಚೆಯಾಗ್ತಿತ್ತು.ಇದು ಕೆಲ ಕಾಂಗ್ರೆಸ್ ಮುಖಂಡರಿಗೆ ನುಂಗಲಾರದ ತುತ್ತಾಗಿದೆ. ಇದೇ ಕಾರಣಕ್ಕೆ ಕೊಲೆ ನಡೆದಿದೆ ಎಂದು ಹೇಳಲಾಗ್ತಿದೆ.ಶಾಸಕ ಹ್ಯಾರಿಸ್ ಮತ್ತು ಹ್ಯಾರಿಸ್ ಪುತ್ರ ನಲಪಾಡ್ ಆಪ್ತ ವಲಯದಲ್ಲಿ ಗುರುತಿಸಿಕೊಂಡವರಿಂದಲೇ ಈ ಕೊಲೆ ನಡೆದಿದೆ ಎನ್ನಲಾಗ್ತಿದೆ. ಕೊಲೆ ಸಂಬಂಧ ಈಗಾಗ್ಲೆ ಅಶೋಕನ ಪೊಲೀಸ್ರು ನಾಲ್ವರನ್ನ ವಶಕ್ಕೆ ಪಡುದಿದ್ದಾರೆ.ನಲಪಾಡ್ ಆಪ್ತ ವಲದಲ್ಲಿ ಗುರುತಿಸಿಕೊಂಡಿದ್ದ ನಾಜ್ ಸೇರಿ ನಾಲ್ವರನ್ನ ಅಶೋಕ ನಗರ ಪೊಲೀಸ್ರು…
ಗರ್ಭಾವಸ್ಥೆಯಲ್ಲಿ ಮಹಿಳೆಯರು ದೈಹಿಕ ಆಯಾಸವನ್ನು ಅನುಭವಿಸುವುದು ಸಹಜ. ಹೀಗಾಗಿ, ಅನೇಕ ಮಹಿಳೆಯರು ಹೆಚ್ಚು ವಿಶ್ರಾಂತಿ ತೆಗೆದುಕೊಳ್ಳುತ್ತಾರೆ. ನಿರ್ದಿಷ್ಟವಾಗಿ ಹೇಳುವುದಾದರೆ, ಗರ್ಭಾವಸ್ಥೆಯಲ್ಲಿ 7 ರಿಂದ 8 ಗಂಟೆಗಳ ಆಳವಾದ ನಿದ್ರೆ ತಾಯಿ ಮತ್ತು ಮಗುವಿಗೆ ಪ್ರಯೋಜನಕಾರಿಯಾಗಿದೆ. ಕೆಲವು ಜನರು ನಿದ್ರಾಹೀನತೆಯನ್ನು ಅನುಭವಿಸಬಹುದು. ಇದರಿಂದ ಮಗುವಿನ ಬೆಳವಣಿಗೆ ಕುಂಠಿತವಾಗಬಹುದು ಮತ್ತು ಮಗು ಅವಧಿಗೂ ಮುನ್ನವೇ ಜನಿಸಬಹುದು. ಇಂದು ನಾವು ಮಗು ಗರ್ಭದಲ್ಲಿ ಯಾವಾಗ ಮತ್ತು ಎಷ್ಟು ನಿದ್ರೆ ಮಾಡುತ್ತದೆ ಮತ್ತು ಉಳಿದ ಸಮಯದಲ್ಲಿ ಅದು ಏನು ಮಾಡುತ್ತದೆ ಎಂಬುದನ್ನು ನಿಮಗೆ ತಿಳಿಸುತ್ತೇವೆ. ಯಾವುದೇ ಮಗುವಿನ ಬೆಳವಣಿಗೆ ಪೂರ್ಣಗೊಳ್ಳುವುದು ತಾಯಿಯ ಗರ್ಭದಲ್ಲಿ 9 ತಿಂಗಳು ಇದ್ದ ನಂತರವೇ. ಅದಕ್ಕಾಗಿಯೇ ವೈದ್ಯರು ಸೇರಿದಂತೆ ಎಲ್ಲಾ ತಜ್ಞರು ಮಹಿಳೆಯರಿಗೆ ಗರ್ಭಾವಸ್ಥೆಯಲ್ಲಿ ಮಗುವನ್ನು 9 ತಿಂಗಳುಗಳ ಕಾಲ ಇಟ್ಟುಕೊಳ್ಳುವುದು ಮುಖ್ಯ ಎಂದು ಸಲಹೆ ನೀಡುತ್ತಾರೆ. ಆದರೆ ಈ ತಿಂಗಳುಗಳಲ್ಲಿ ಮಗು ಎಷ್ಟು ಹೊತ್ತು ಮಲಗುತ್ತದೆ ಮತ್ತು ಉಳಿದ ಸಮಯದಲ್ಲಿ ಅವನು ಏನು ಮಾಡುತ್ತಾನೆಂದು ನಿಮಗೆ ತಿಳಿದಿದೆಯೇ? ಇಂದು ನಾವು ನಿಮಗೆ…
ಬೆಂಗಳೂರು:- ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ರಂಜಾನ್ ಹಬ್ಬಕ್ಕೂ ಮುನ್ನ ಹಣ ಕಳೆದುಕೊಂಡವರಿಗೆ ಪರಿಹಾರ ಕೊಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ಹೇಳಿದ್ದಾರೆ. ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು. ಈ ವೇಳೆ ಸಂತ್ರಸ್ತರಿಗೆ ಭರವಸೆ ನೀಡಿದ ಅವರು, ರಂಜಾನ್ ಹಬ್ಬಕ್ಕೂ ಹತ್ತು ದಿನ ಮೊದಲೇ ಐಎಂಎ ನಲ್ಲಿ ಹಣ ಹೂಡಿ ಮೋಸ ಹೋದವರಿಗೆ ಅವರ ಹೂಡಿಕೆಯ ಅನುಪಾತದ ಆಧಾರದಲ್ಲಿ ಪರಿಹಾರ ನೀಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ ಹಣ ಡಬ್ಲಿಂಗ್ ಆಸೆಯಿಂದಾಗಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಠೇವಣಿದಾರರ ಖಾತೆಗಳ ಮೂಲಕ 3213.58 ಕೋಟಿ ರೂ.ಗಳನ್ನು ಐಎಂಎ ಕಂಪೆನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಕಂಪೆನಿಯ ಒಟ್ಟು ಠೇವಣಿದಾರರ ಸಂಖ್ಯೆ…
ಮಂಡ್ಯ:- ಮಂಡ್ಯದಲ್ಲಿ ಪುಡಿರೌಡಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮೀಸೆ ಚಿಗುರದ ಅಪ್ರಾಪ್ತ ಬಾಲಕರ ಕ್ರೌರ್ಯ ಜಿಲ್ಲೆಯ ಜನರನ್ನ ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಅಂದಹಾಗೆ ಯುವತಿಯೊಬ್ಬಳ ವಿಚಾರವಾಗಿ ಮಂಡ್ಯದಲ್ಲಿ ಇತ್ತೀಚಿಗೆ ಎರಡು ಗುಂಪುಗಳ ನಡುವೆ ವಾರ್ ನಡೆದಿದೆ. https://ainlivenews.com/rape-case-constable-who-committed-raped-on-a-girl/ ಮಂಡ್ಯದಲ್ಲಿ ಐಟಿಐ ಮಾಡುತ್ತಿದ್ದ ಮೈಸೂರು ಜಿಲ್ಲೆಯ ಟೀ ನರಸಿಪುರ ಮೂಲದ 19 ವರ್ಷದ ಯುವಕನೊಬ್ಬನನ್ನ ಸುಮಾರು ಏಳೆಂಟು ಅಪ್ರಾಪ್ತ ಬಾಲಕರು ಮಂಡ್ಯದ ಹೊರವಲಯದ ಸ್ಮಶಾನಕ್ಕೆ ಕರೆದುಕೊಂಡು ಹೋಗಿ ಲಾಂಗ್ನಿಂದ ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಕಾಲಿನಿಂದ ಒದ್ದು, ಅವಾಚ್ಯ ಶಬ್ಧಗಳಿಂದ ಬೈದು ಬೆದರಿಕೆ ಹಾಕುವ ಜೊತೆಗೆ ಫೇಸ್ ಬುಕ್ ಲೈವ್ ಮಾಡಿದ್ದಾರೆ. ಸಂತ್ರಸ್ತ ಯುವಕ ಪರಿಪರಿಯಾಗಿ ಬೇಡಿಕೊಂಡರು ಬಿಡದ ಅಪ್ರಾಪ್ತರು ಕ್ರೌರ್ಯ ಮೆರೆದಿದ್ದಾರೆ. ಅಂದಹಾಗೆ ಫೇಸ್ ಬುಕ್ನಲ್ಲಿ ಲೈವ್ ಆದ ಕ್ರೌರ್ಯದ ವಿಡಿಯೋ ಆನಂತರ ಜಿಲ್ಲೆಯಾದ್ಯಂತ ವೈರಲ್ ಆಗಿದೆ. ಮೀಸೆ ಚಿಗುರದ ಅಪ್ರಾಪ್ತರ ಅಟ್ಟಹಾಸ ಬೆಚ್ಚಿ ಜನತೆಯನ್ನ ಬೀಳುವಂತೆ ಮಾಡಿದೆ. ಇನ್ನು ಘಟನೆ ಸಂಬಂಧ ಸಂತ್ರಸ್ತ ಯುವಕ ದೂರು ನೀಡಲು ಹಿಂದೇಟು…
ಬೆಂಗಳೂರು:- ದೂರು ನೀಡಲು ಠಾಣೆಗೆ ಬಂದ ಅಪ್ರಾಪ್ತೆ ವಯಸ್ಸಿನ ಹುಡುಗಿಗೆ ಸಹಾಯ ಮಾಡುವ ನೆಪದಲ್ಲಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ ಎಂದು ಬೊಮ್ಮನಹಳ್ಳಿ ಠಾಣೆಯ ಕಾನ್ ಸ್ಟೇಬಲ್ ಅರುಣ್ ವಿರುದ್ಧ ಗಂಭೀರ ಆರೋಪ ಬಂದಿದ್ದು, ಈ ಸಂಬಂಧ ಬೊಮ್ಮನಹಳ್ಳಿ ಪೊಲೀಸರು, ಕಾನ್ಸ್ಟೇಬಲ್ ಸೇರಿ ಇಬ್ಬರನ್ನ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. https://ainlivenews.com/rachins-century-new-zealand-win-pakistan-from-the-tournament-bangladesh-out/ ತಮಗಾದ ಅನ್ಯಾಯ ಬಗ್ಗೆ ಬಾಲಕಿ ಹಾಗೂ ಬಾಲಕಿ ತಾಯಿ ದೂರು ನೀಡಲು ಠಾಣೆಗೆ ಹೋಗಿದ್ದು, ಬೊಮ್ಮನಹಳ್ಳಿ ಪೋಲಿಸ್ ಠಾಣಾ ಪೇದೆ ಬಾಲಕಿಯ ನಂಬರ್ ಪಡೆದು ಆಕೆಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ವೆಸಗಿದ್ದಾನೆಂದು ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಬಗ್ಗೆ ದೂರು ದಾಖಲಾಗಿದ್ದು, ಆರೋಪಿಗಳಾದ ಪೇದೆ ಅರುಣ್ ಹಾಗೂ ವಿಕ್ಕಿ ಎಂಬುವ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಸಂತ್ರಸ್ಥೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದಳು. ಈ ವೇಳೆ ನೆರೆಮನೆ ನಿವಾಸಿ ವಿವಾಹಿತ ವ್ಯಕ್ತಿಯ ಪರಿಚಯವಾಗಿದೆ. ಬಳಿಕ ಪ್ರೀತಿಸಿ ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಆತ್ಯಾಚಾರವೆಸಗಿ ಹಲ್ಲೆ ಮಾಡಿದ್ದಾನೆ. ಇದರಿಂದ…
ಬಾಂಗ್ಲಾ ವಿರುದ್ಧದ ಚಾಂಪಿಯನ್ ಟ್ರೋಫಿ ಪಂದ್ಯದಲ್ಲಿ ನ್ಯೂಜಿಲೆಂಡ್ ಜಯದೊಂದಿಗೆ ಟೂರ್ನಿಯಿಂದಲೇ ಬಾಂಗ್ಲಾದೇಶ ಮತ್ತು ಅತಿಥೇಯ ಪಾಕಿಸ್ತಾನ ನಿರ್ಗಮಿಸಿದೆ. https://ainlivenews.com/wpl-2025-up-warriors-won-against-rcb/ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ 50 ಓವರ್ಗಳಲ್ಲಿ 236 ರನ್ ಗಳಿಸಿತು. ಸುಲಭ ಸವಾಲನ್ನು ಪಡೆದ ನ್ಯೂಜಿಲೆಂಡ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡರೂ ಅಂತಿಮವಾಗಿ 46.1 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 240 ರನ್ ಹೊಡೆದು ಸೆಮಿಫೈನಲ್ ಪ್ರವೇಶಿಸಿತು. ಪಂದ್ಯ ಬಾಂಗ್ಲಾದೇಶ ಮತ್ತು ಪಾಕಿಸ್ತಾನಕ್ಕೆ ನಿರ್ಣಾಯಕವಾಗಿತ್ತು. ಪಂದ್ಯದಲ್ಲಿ ಬಾಂಗ್ಲಾದೇಶ ಗೆದ್ದು, ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ಜಯಗಳಿಸಿ ಬಾಂಗ್ಲಾ ವಿರುದ್ಧ ಪಾಕ್ ಗೆದ್ದಿದ್ದರೆ ರನ್ ರೇಟ್ ಆಧಾರದಲ್ಲಿ ತಂಡಗಳು ಸೆಮಿಫೈನಲ್ ಪ್ರವೇಶಿಸಬೇಕಿತ್ತು. ಆದರೆ ಈಗ ಬಾಂಗ್ಲಾ ಸೋಲುವ ಮೂಲಕ ನ್ಯೂಜಿಲೆಂಡ್ ಮತ್ತು ಭಾರತ ಅಧಿಕೃತವಾಗಿ ಸೆಮಿಫೈನಲ್ ಪ್ರವೇಶಿಸಿವೆ. ನ್ಯೂಜಿಲೆಂಡ್ ಪರ ಡಿವೋನ್ ಕಾನ್ವೇ 45 ಎಸೆತಗಳಲ್ಲಿ 6 ಬೌಂಡರಿ ನೆರವಿಂದ 30 ರನ್, ರಚಿನ್ ರವೀಂದ್ರ 105 ಎಸೆತಗಳಲ್ಲಿ 1 ಸಿಕ್ಸರ್, 12 ಬೌಂಡರಿ ನೆರವಿನಿಂದ 112 ರನ್ ಹೊಡೆದರು.…
RCB ವಿರುದ್ಧ ಯುಪಿ ವಾರಿಯರ್ಸ್ ಗೆದ್ದು ಬೀಗಿದೆ. ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನಡೆದ ಮೊದಲ ಸೂಪರ್ ಓವರ್ನಲ್ಲಿ ಯುಪಿ ವಾರಿಯರ್ಸ್ ಆರ್ಸಿಬಿ ವಿರುದ್ಧ ಗೆದ್ದು ಬೀಗಿದೆ. ಸೋಫಿ ಎಕ್ಲೆಸ್ಟೋನ್ ಅವರ ಆಲ್ರೌಂಡರ್ ಆಟದ ಪ್ರದರ್ಶನದಿಂದ ತವರಿನಲ್ಲಿ ಆರ್ಸಿಬಿ ಸೋತಿದೆ. https://ainlivenews.com/young-man-killed-in-wild-elephant-attack-in-hassan-family-members-in-shock/ ಪಂದ್ಯದಲ್ಲಿ ಟಾಸ್ ಗೆದ್ದ ಯುಪಿ ವಾರಿಯರ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಎಲ್ಲಿಸ್ ಪೆರ್ರಿ ಅದ್ಭುತ ಇನ್ನಿಂಗ್ಸ್ ಆಡಿದರು. ಇದರಿಂದಾಗಿ ಆರ್ಸಿಬಿ ತಂಡವು 20 ಓವರ್ಗಳಲ್ಲಿ 6 ವಿಕೆಟ್ಗಳ ನಷ್ಟಕ್ಕೆ 180 ರನ್ ಗಳಿಸಿತು. ಎಲ್ಲಿಸ್ ಪೆರ್ರಿ 56 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್ಗಳ ನೆರವಿನಿಂದ ಅಜೇಯ 90 ರನ್ ಗಳಿಸಿದರು. ಅವರಲ್ಲದೆ, ಡ್ಯಾನಿ ವ್ಯಾಟ್ ಕೂಡ 57 ರನ್ಗಳ ಕೊಡುಗೆ ನೀಡಿದರು. ಪೆರ್ರಿ ಡ್ಯಾನಿ ವ್ಯಾಟ್ ಜೊತೆ ಅರ್ಧಶತಕದ ಪಾಲುದಾರಿಕೆಯನ್ನು ಹಂಚಿಕೊಂಡರು. ಮತ್ತೊಂದೆಡೆ, ಈ ಗುರಿ ಬೆನ್ನಟ್ಟಿದ ಯುಪಿ ವಾರಿಯರ್ಸ್ 20 ಓವರ್ಗಳಲ್ಲಿ…
ಹಾಸನ:- ಹಾಸನದಲ್ಲಿ ಕಾಡಾನೆ ದಾಳಿಗೆ ಯುವಕ ಬಲಿಯಾಗಿರುವ ಘಟನೆ ಜರುಗಿದೆ. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. https://ainlivenews.com/did-parameshwara-decide-to-leave-the-home-ministry-after-his-visit-to-delhi-what-is-the-real-secret/ ಬೇಲೂರು ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಘಟನೆ ಜರುಗಿದೆ. 28 ವರ್ಷದ ಅನಿಲ್ ಮೃತ ಯುವಕ. ಮೃತ ಅನಿಲ್ ಕೆಲಸ ಮುಗಿಸಿ ಅಣ್ಣಾಮಲೈ ಎಸ್ಟೇಟ್ನಿಂದ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಸೊಂಡಲಿನಿಂದ ಎತ್ತಿ ಬಿಸಾಕಿ ತುಳಿದು ಸಾಯಿಸಿದೆ. ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು :- ರಾಜ್ಯದಲ್ಲಿ ಒಂದು ಕಡೆ ಸಿಎಂ ಬದಲಾವಣೆಯ ಸುದ್ದಿ ಸದ್ದು ಮಾಡುತ್ತಿದೆ.. ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆಯೂ ಕಾವೇರಿಸಿದೆ.. ಇದೆಲ್ಲದರ ಮಧ್ಯೆ ತೇಲಿಬಂದ ಗೃಹಸಚಿವ ಜಿ.ಪರಮೇಶ್ವರ್ ರಾಜೀನಾಮೆ ಮಾತು ಇದೀಗ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಪರಮೇಶ್ವರ್ ದಿಢೀರ್ ರಾಜಕೀಯ ಮಾತನ್ನಾಡಿರೋದು ಏಕೆ.. ಏನಿದರ ಅಸಲಿ ಮರ್ಮ.. ಅದನ್ನು ನೋಡೋಣ. https://ainlivenews.com/mahakumbh-mela-reaches-final-stage-along-with-the-specials-there-are-plenty-of-disasters/ ಎಸ್.. ರಾಜ್ಯ ಕಾಂಗ್ರೆಸ್ನಲ್ಲಿ ಪಟ್ಟಕ್ಕಾಗಿ ಫೈಟ್ ನಡೀತಿದೆ.. ಒಂದು ಕಡೆ ಸಿಎಂ ಕುರ್ಚಿ.. ಇನ್ನೊಂದ್ಕಡೆ ಕೆಪಿಸಿಸಿ ಅಧ್ಯಕ್ಷ ಗಾದಿ ಎರಡು ಕುರ್ಚಿಗಳಿಗೋಸ್ಕರ ಭಾರೀ ಲಾಬಿಯೇ ನಡೀತಿದೆ.. ಒಂದು ಕಡೆ ಜಾರಕಿಹೊಳಿ ಟೀಂ ಅಧ್ಯಕ್ಷ ಗಾದಿಗೆ ಸರ್ಕಸ್ ಮಾಡ್ತಿದ್ರೆ, ಇತ್ತ ಕೆಎನ್ ರಾಜಣ್ಣ ಸಹ ಕೆಪಿಸಿಸಿ ಅಧ್ಯಕ್ಷ ಕುರ್ಚಿ ಮೇಲೆ ನಾನು ಇದ್ದೀನಿ ಸ್ವಾಮಿ ಅಂತಾ ಟವಲ್ ಹಾಕಿದ್ದಾರೆ. ಇಷ್ಟು ದಿನದವರೆಗೂ ಸಿಎಂ ಕುರ್ಚಿ ಹತ್ತೋಕೆ ಬಿಗಿಪಟ್ಟು ಹಿಡಿದಿದ್ದ ಡಿಕೆಶಿವಕುಮಾರ್ ಇದೀಗ ವರಸೆ ಬದಲಾಯಿಸಿ, ನನ್ನ ನೇತೃತ್ವದಲ್ಲಿ ಮುಂದಿನ ಚುನಾವಣೆ ಅಂತೀದ್ದಾರೆ.. ಇದೆಲ್ಲಾ ಗೊಂದಲದ ನಡುವೆ ಪರಮೇಶ್ವರ್…