ನಾ ಕೋಳಿಕ್ಕೆ ರಂಗ.. ದೀಪಾವಳಿ ಸಂಭ್ರಮ ಹೆಚ್ಚಿಸಲು ಇಂದು ತೆರೆಕಂಡ ಮತ್ತೊಂದು ಕನ್ನಡದ ಸಿನಿಮಾ. ಮೆಜೆಸ್ಟಿಕ್ನಲ್ಲಿ ಅನ್ನದಾತರಾಗಿ ಗುರುತಿಸಿಕೊಂಡಿರುವ ಸೋಮಶೇಖರ್, ಒಂದೊಂದು ರೂಪಾಯಿಯನ ಕೂಡಿಟ್ಟು ಮಾಡಿರುವ ಚಿತ್ರ. ಮಾಸ್ಟರ್ ಆನಂದ್ ಹಾಗೂ ಅಭಿನೇತ್ರಿ ಭವ್ಯ ನಟನೆಯ ಈ ಸಿನಿಮಾ ಹೇಗಿದೆ? ಪ್ರೇಕ್ಷಕರು ಏನಂದ್ರು? ಎಷ್ಟು ಸ್ಟಾರ್ ರೇಟಿಂಗ್? ಇಲ್ಲಿದೆ ನೋಡಿ ಫುಲ್ ಡೀಟೈಲ್ಸ್. ನಾ ಕೋಳಿಕ್ಕೆ ರಂಗ.. ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಂಡು, ಭರ್ಜರಿ ಓಪನಿಂಗ್ ಪಡೆದುಕೊಂಡಿರುವ ಹೊಸ ಪ್ರತಿಭೆಗಳೇ ಕೂಡಿ ಮಾಡಿರುವ ಸಿನಿಮಾ. ಗೊರವಾಲೆ ಮಹೇಶ್ ನಿರ್ದೇಶನದಲ್ಲಿ ಮಾಸ್ಟರ್ ಆನಂದ್ನ ಟನಾಗಿ ಬಣ್ಣ ಹಚ್ಚಿದ್ದು, ತಾಯಿ ಪಾತ್ರದಲ್ಲಿ ಹಿರಿಯ ನಟಿ ಭವ್ಯ ಮಿಂಚಿದ್ದಾರೆ. ಅಲ್ಲದೆ, ಹೊನ್ನವಳ್ಳಿ ಕೃಷ್ಣ, ಶೋಭರಾಜ್, ಬಿರಾದಾರ್, ರಾಕ್ಲೈನ್ ಸುಧಾಕರ್ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಕಲ್ಲಿನಕೋಟೆ ಚಿತ್ರದುರ್ಗದಿಂದ ಬಂದು ಮೆಜೆಸ್ಟಿಕ್ನಲ್ಲಿ ನಾಲ್ಕೈದು ಮೊಬೈಲ್ ಕ್ಯಾಂಟೀನ್ಗಳನ್ನ ನಡೆಸುತ್ತಿರುವ ಎಸ್.ಟಿ. ಸೋಮಶೇಖರ್, ಈ ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಅಂದಹಾಗೆ ಇವರ ಮಗಳು ರಾಜೇಶ್ವರಿಯೇ ಈ ಚಿತ್ರದ ಕಥಾನಾಯಕಿ. ಈಕೆ ಈ ಚಿತ್ರದಿಂದ…
Author: AIN Author
ಸ್ಯಾಂಡಲ್ವುಡ್ (Sandalwood) ನಟಿ ರಾಧಿಕಾ ಕುಮಾರಸ್ವಾಮಿ (Radhika Kumarswamy) ಇಂದು ತಮ್ಮ ಹುಟ್ಟು ಹಬ್ಬವನ್ನು (Birthday) ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟು ಹಬ್ಬದ ದಿನದಂದು ಅವರ ನಟನೆಯ ಭೈರಾದೇವಿ ಮತ್ತು ಅಜಾಗ್ರತ ಚಿತ್ರಗಳ ಪೋಸ್ಟರ್ ರಿಲೀಸ್ ಆಗುತ್ತಿವೆ. ಕಳೆದ ಕೆಲವು ವರ್ಷಗಳಿಂದ ಬರ್ತ್ಡೇ ಆಚರಣೆಯಿಂದ ದೂರವಿದ್ದ ಸ್ವೀಟಿ, ಈ ಬಾರಿ ಫ್ಯಾನ್ಸ್ಗೆ ಭೇಟಿಯಾಗಲು ಸಮಯ ಮೀಸಲಿಟ್ಟಿದ್ದಾರೆ. ಅಭಿಮಾನಿಗಳ ಜೊತೆಯೇ ಇಂದು ತಮ್ಮ ಹುಟ್ಟುಹಬ್ಬವನ್ನು (Birthday) ಫ್ಯಾನ್ಸ್ ಜೊತೆ ನಟಿ ಆಚರಿಸಿಕೊಳ್ಳಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಶೇರ್ ಮಾಡುವ ಮೂಲಕ ನಟಿ ಫ್ಯಾನ್ಸ್ಗೆ ಆಹ್ವಾನ ನೀಡಿದ್ದರು. ನಮಸ್ಕಾರ, ಹಲವು ವರ್ಷಗಳಿಂದ ಅಭಿಮಾನಿಗಳನ್ನ ಭೇಟಿ ಮಾಡೋಕೆ ಆಗಿರಲಿಲ್ಲ. ನ.11ರಂದು ಶನಿವಾರ ನನ್ನ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತೇನೆ. ಅಂದು ನಿಮಗೆ ಸಿಗುತ್ತೇನೆ ಎಂದಿದ್ದರು ರಾಧಿಕಾ ಕುಮಾರಸ್ವಾಮಿ. ಇದೇ ಮೊದಲ ಬಾರಿಗೆ ಅವರು ತಮ್ಮ ಮನೆಯ ವಿಳಾಸ ಕೂಡ ನೀಡಿದ್ದರು. 10/11 ಎರಡನೇ ಮುಖ್ಯ ರಸ್ತೆ, ಎರಡನೇ ಕ್ರಾಸ್ ಆರ್ಎಂವಿ ಎರಡನೇ ಸ್ಟೇಜ್, ಮೂರನೇ ಬ್ಲಾಕ್ ನ್ಯೂ…
ಹೈದರಾಬಾದ್: ಪಂಚರಾಜ್ಯ ಚುನಾವಣೆಯಲ್ಲಿ ಗ್ಯಾರಂಟಿಗಳು ಸಖತ್ ಸದ್ದು ಮಾಡ್ತಿವೆ. ತೆಲಂಗಾಣದಲ್ಲಿ (Telangana) ಅಧಿಕಾರದ ಫಸಲು ತೆಗೆಯಲು ಕರ್ನಾಟಕ ಮಾದರಿಯಲ್ಲೇ ಇಲ್ಲೂ ಕೂಡ ಕಾಂಗ್ರೆಸ್ ಪಕ್ಷ (Congress Guarantee) ಗ್ಯಾರಂಟಿಗಳನ್ನು ನಂಬಿಕೊಂಡಿದೆ. ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಆರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. https://ainlivenews.com/great-job-opportunity-in-hindustan-aeronautics-limited-posting-in-bangalore/ ಕಾಮಾರೆಡ್ಡಿ ಕ್ಷೇತ್ರದಲ್ಲಿ ರೇವಂತ್ ರೆಡ್ಡಿ (Revanth Reddy) ಪರ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಿದ್ರು. ಸಿಎಂ ಕೆಸಿಆರ್ ವಿರುದ್ಧ ರೇವಂತ್ ಗೆಲ್ಲೋದು ಫಿಕ್ಸ್ ಅಂದ್ರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನೂರು ದಿನದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡಲಾಗುತ್ತೆ ಎಂಬ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ರು. ಕೆಸಿಆರ್ ಕರ್ನಾಟಕಕ್ಕೆ ಬಂದು ಗ್ಯಾರಂಟಿಗಳ ಜಾರಿಯನ್ನು ನೋಡಲಿ ಎಂದು ಸವಾಲ್ ಹಾಕಿದ್ರು. ಕಾಂಗ್ರೆಸ್ನಲ್ಲಿ ಆರು ಗ್ಯಾರಂಟಿ..! * ಗ್ಯಾರಂಟಿ 1 – ಪ್ರತಿ ತಿಂಗಳು ಅತ್ತೆಗೆ 4,000 ರೂ. – ಸೊಸೆಗೆ 2,500 ರೂ. * ಗ್ಯಾರಂಟಿ 2 – ಪ್ರತಿ ಹೆಣ್ಣುಮಗುವಿನ ಖಾತೆಗೆ ಪ್ರತಿ ತಿಂಗಳು 2,500 ರೂ. (ಮಹಾಲಕ್ಷ್ಮಿ ಯೋಜನೆ) * ಗ್ಯಾರಂಟಿ 3 –…
ಬೆಂಗಳೂರು: ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ಸಿಗುತ್ತೆ ಅಂತ ನಾವ್ಯಾರು ನಿರೀಕ್ಷೆ ಇಟ್ಟಿರಲಿಲ್ಲ ದೆಹಲಿಗೆ ಹೋಗಿ ರಾಜ್ಯಾಧ್ಯಕ್ಷ ಹುದ್ದೆ ಕೊಡಿ ಅಂತಾನೂ ಕೇಳಿರಲಿಲ್ಲ 25 ಲೋಕಸಭಾ ಕ್ಷೇತ್ರ ಗೆಲ್ಲಬೇಕು ಅನ್ನೋದು ಸುಲಭದ ಮಾತಲ್ಲ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಗುರಿ ಇಟ್ಟಿದ್ದೇವೆ. ಮೋದಿ ಮತ್ತೆ ಪ್ರಧಾನಿಯಾಗಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ನಾನು ಯಾರ ಬಳಿಯೂ ಮನವಿ ಮಾಡಿಲ್ಲ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡುವಂತೆ ಮನವಿ ಮಾಡಿಲ್ಲ. ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.
ಬೆಂಗಳೂರು: ರೌಡಿಶೀಟರ್ ಸಹದೇವ್ ಹತ್ಯೆ ಪ್ರಕರಣ ಸಂಬಂಧ ಪುಟ್ಟೇನಹಳ್ಳಿ ಪೊಲೀಸರಿಂದ 8 ಆರೋಪಿಗಳನ್ನ ಬಂಧಿಸಲಾಗಿದೆ. ವಿನಯ್, ಧರ್ಮ ಸೇರಿ ಎಂಟು ಮಂದಿ ಬಂಧಿತ ಆರೋಪಿಗಳು https://ainlivenews.com/only-green-firecrackers-allowed-what-are-the-mandatory-rules-for-bursting-firecrackers/ ಗಣೇಶ ಹಬ್ಬದಿಂದಲೂ ಗಲಾಟೆ ಮಾಡಿಕೊಳ್ಳುತ್ತಿದ್ದ ಗ್ಯಾಂಗ್ ಗಣೇಶ ಬಿಡುವ ವಿಚಾರಕ್ಕೆ ಸಹದೇಹ ಮತ್ತು ವಿನಯ್ ನಡುವೆ ಗಲಾಟೆ.. ಈ ವೇಳೆ ಆರೋಪಿ ವಿನಯ್ ಮೇಲೆ ಹಲ್ಲೆ ಮಾಡಿದ್ದ ಸಹದೇವ. ನಂತರ ಆರೋಪಿ ವಿನಯ್ ತಮ್ಮನ ಮೇಲೂ ಹಲ್ಲೆ ಮಾಡಿದ್ದ ಸಹದೇವ.. ನಂತರ ನವೆಂಬರ್ 8 ರಂದು ಟೀ ಕುಡಿಯಲು ಬಂದಿದ್ದ ಸಹದೇವ.. ಈ ವೇಳೆ ಅಲ್ಲಿಯೇ ಇದ್ದ ವಿನಯ್ ಗ್ಯಾಂಗ್.ಕ್ಷುಲ್ಲಕ ವಿಚಾರಕ್ಕೆ ವಿನಯ್ ಸಹದೇವ ನಡುವೆ ಕಿರಿಕ್. ಯಾಕೆ ಅವತ್ತು ಕೊಟ್ಟಿದ್ದು ಸಾಕಾಗಿಲ್ವಾ ಎಂದಿದ್ದ ಸಹದೇವ.. ಈ ವೇಳೆ ಮಾರಕಾಸ್ತ್ರಗಳಿಂದ ಸಹದೇವ ಮೇಲೆ ಅಟ್ಯಾಕ್ ಮಾಡಿದ ವಿನಯ್ ಗ್ಯಾಂಗ್.. ವಿನಯ್, ಧರ್ಮನಿಂದ ಸಹದೇವನ ಮೇಲೆ ಅಟ್ಯಾಕ್.. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದ ಸಹದೇವ.. ಈ ಬಗ್ಗೆ ಪ್ರಕರಣ ದಾಖಲಿಸಿದ್ದ ಪುಟ್ಟೇನಹಳ್ಳಿ ಪೊಲೀಸರು..
ಕೋಲಾರ: ಕೋಲಾರಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದು, ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಯರಗೋಳ್ ನೀರಾವರಿ ಯೋಜನೆ ಲೋಕಾರ್ಪಣೆಗೊಳಿಸಲಿದ್ದಾರೆ. HAL ನಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 11.30 ಕ್ಕೆ ಯರಗೋಳ್ ಗೆ ಆಗಮಿಸಲಿರುವ ಸಿದ್ದರಾಮಯ್ಯ ಅವರಿಗೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ಕೃಷ್ಣಬೈರೇಗೌಡ, ಕೆಹೆಚ್ ಮುನಿಯಪ್ಪ ಹಾಗೂ ಜಿಲ್ಲೆಯ ಶಾಸಕರು ಸಾಥ್ ನೀಡಲಿದ್ದಾರೆ. ಅದರಂತೆ ಯರಗೋಳ್ ಡ್ಯಾ. ಪಕ್ಕದಲ್ಲಿಯೇ ಬೃಹತ್ ವೇದಿಕೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜುಗೊಳಿಸಿದ್ದು ಸುಮಾರು 15 ಸಾವಿರ ಜನರು ಸೇರುವ ನಿರೀಕ್ಷೆ ಇದೆ. https://ainlivenews.com/great-job-opportunity-in-hindustan-aeronautics-limited-posting-in-bangalore/ ಜೊತೆಗೆ ಕಾರ್ಯಕ್ರಮದಲ್ಲಿ ಯಾವುದೇ ಅಹಿತರಕ ಘಟನೆಗಳು ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನೂ ಬಂಗಾರಪೇಟೆ, ಕೋಲಾರ, ಮಾಲೂರು ಹಾಗೂ ಮಾರ್ಗ ಮಧ್ಯೆಯ 45 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಇದಾಗಿದ್ದು,2006 ರಲ್ಲಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ವೇಳೆ ಯರಗೋಳ್ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಗಿತ್ತು…
ರಾಮನಗರ : ಹೆಸರು ಬದಲಾವಣೆ ಮಾಡುವುದರಿಂದ ಯಾರೂ ಬರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ಅಲ್ಲದಿದ್ರೆ ದೆಹಲಿ ಅಂತ ಮಾಡಲಿ. ದೆಹಲಿ ಅಂತ ಮಾಡಿದ್ರೆ ಪ್ರಪಂಚದ ಮೂಲೆ ಮೂಲೆ ಇಂದ ಎಲ್ಲಾ ಬರ್ತಾರೆ. ರಾಮನಗರವನ್ನ ಬೆಂಗಳೂರು ಮಾಡೋದು ಬೇಡ, https://ainlivenews.com/great-job-opportunity-in-hindustan-aeronautics-limited-posting-in-bangalore/ ದೆಹಲಿ ಅಥವಾ ದುಬೈ ಅಂತಾನೆ ಮಾಡಿ ಎಂದು ಕುಟುಕಿದ್ದಾರೆ. ಹೆಸರು ಬದಲಾವಣೆ ಮಾಡುವುದರಿಂದ ಯಾರೂ ಬರಲ್ಲ. ನೀವೇನು ಮೂಲಭೂತ ಸೌಕರ್ಯ ಕೊಡ್ತಿರಿ, ಅಭಿವೃದ್ಧಿ ಮಾಡ್ತೀರಿ ಅದರ ಮೇಲೆ ಜನ ಬರೋದು. ಅವರಿಗೆ ಬೇರೆ ಕೆಲಸ ಇಲ್ಲ, ಜನರ ಕೆಲಸ ಮಾಡಲ್ಲ. ಜನರ ಗಮನಸೆಳೆಯೋಕೆ ಹೀಗೆ ಮಾತನಾಡ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಪ್ರತಿ ಆರು ತಿಂಗಳಿಗೊಮ್ಮೆ ಆರ್ಥಿಕ ಸ್ಥಿತಿಗತಿಗಳನ್ನು ಆಧರಿಸಿ ಹಾಲಿನ ದರ ಹೆಚ್ಚಳಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಶುಸಂಗೋಪನಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. https://ainlivenews.com/good-news-for-metro-passengers-6-tickets-can-be-purchased-through-qr-code/ ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಠ ಶೇ. 5ರವರೆಗೆ ಹಾಲಿನ ದರ ಹೆಚ್ಚಳಕ್ಕೆ ಅವಕಾಶ ನೀಡಬೇಕು. ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಹಂತದಲ್ಲೇ ಹಾಲಿನ ದರ ಪರಿಷ್ಕರಣೆಗೆ ಅನುಮತಿ ನೀಡಬೇಕು ಎಂದು ಪ್ರಸ್ತಾವದಲ್ಲಿ ತಿಳಿಸಲಾಗಿದೆ. ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ಸುದ್ದಿಗಾರರ ಜೊತೆ ಮಾತನಾಡಿ, “ಹಾಲಿನ ದರ ಏರಿಕೆ ಮಾಡುವಂತೆ ರೈತರು ಮತ್ತು ಹಾಲು ಒಕ್ಕೂಟಗಳಿಂದ ಒತ್ತಡವಿದೆ. ಆದರೆ, ಸದ್ಯಕ್ಕೆ ದರ ಹೆಚ್ಚಳ ಇಲ್ಲ” ಎಂದು ಹೇಳಿದರು.
ಕೊಲಂಬೊ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ (ICC ODI World Cup 2023) ಕಳಪೆ ಪ್ರದರ್ಶನ ನೀಡಿ ಸೆಮಿಫೈನಲ್ಗೆ ಅರ್ಹತೆ ಪಡೆಯಲು ವಿಫಲವಾದ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ (Sri Lanka Cricket) ಮತ್ತೊಂದು ಆಘಾತವಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (International Cricket Board) ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಶ್ರೀಲಂಕಾ ಸರ್ಕಾರ ಹಸ್ತಕ್ಷೇಪ ನಡೆಸುತ್ತಿರುವ ಹಿನ್ನೆಲೆಯಲ್ಲಿ ಐಸಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದೆ ಐಸಿಸಿ ಮಂಡಳಿಯು ಇಂದು ಸಭೆ ನಡೆಸಿತು. ಜೊತೆಗೆ ಶ್ರೀಲಂಕಾ ಕ್ರಿಕೆಟ್ ಸದಸ್ಯರಾಗಿ ಅದರ ಜವಾಬ್ದಾರಿಗಳನ್ನು ಗಂಭೀರವಾಗಿ ಉಲ್ಲಂಘಿಸುತ್ತಿದೆ ಎನ್ನುವುದನ್ನು ಖಚಿತಪಡಿಸಿದೆ. ಶ್ರೀಲಂಕಾದಲ್ಲಿ ಕ್ರಿಕೆಟ್ ಹಾಗೂ ಅದರ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸುವ ಅವಶ್ಯಕತೆ ಮತ್ತು ಆಡಳಿತ, ನಿಯಂತ್ರಣ ಮತ್ತು/ಅಥವಾ ಆಡಳಿತದಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿರಬಾರದು ಎನ್ನುವ ಅಗತ್ಯವನ್ನು ಪೂರೈಸುವಲ್ಲಿ ಮಂಡಳಿ ವಿಫಲವಾಗಿದೆ ಎಂದು ಐಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಅಮಾನತುಗೊಳಿಸುವಿಕೆಯ ಷರತ್ತುಗಳನ್ನು ಐಸಿಸಿ ಮಂಡಳಿಯು ಸರಿಯಾದ ಸಮಯದಲ್ಲಿ ನಿರ್ಧರಿಸುತ್ತದೆ. ನವೆಂಬರ್ 21 ರಂದು ಐಸಿಸಿ…
ಮೈಸೂರು: ಯಾವುದೇ ರೀತಿಯ ತಾರತಮ್ಯವಿಲ್ಲದೇ ಮಕ್ಕಳನ್ನು ರಕ್ಷಿಸುವ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಜವಾಬ್ದಾರಿಯಾಗಿದ್ದು, ಈ ಕುರಿತಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಕಾಯಿದೆಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಮಂಜು ಎಸ್. ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಕಛೇರಿಯ ಡಿ. ದೇವರಾಜ ಅರಸು ಸಭಾಂಗಣದಲ್ಲಿ ಜಿಲ್ಲಾ ಮ, ತ್ತು ತಾಲ್ಲೂಕು ಮಟ್ಟದಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಮತ್ತು ಅವುಗಳ ರೂಪುರೇಷೆಗಳನ್ನು ತಯಾರಿಸುವ ಬಗ್ಗೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು. ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಮಕ್ಕಳ ರಕ್ಷಣೆಗೆ ಬದ್ದವಾಗಿದ್ದು, ಅವುಗಳ ಉಲ್ಲಂಘನೆಯಾಗಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ತಮಗೆ ನಿಗದಿ ಪಡಿಸಿರುವ ಕರ್ತವ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಮಕ್ಕಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಸದಸ್ಯರು ತಿಳಿಸಿದರು. https://ainlivenews.com/great-job-opportunity-in-hindustan-aeronautics-limited-posting-in-bangalore/ ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ…