ಬೆಂಗಳೂರು: ಲೋಕಸಭೆ ಚುನಾವಣೆಯ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಶಾಕ್ ಇಂದು ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿಗೆ ಗುಡ್ ಬೈ ಹೇಳಿ ಕೈ ಹಿಡಿಯಲಿದ್ದಾರೆ. Gruhalakshmi Yojane: ಮಹಿಳೆಯರಿಗೆ ಗುಡ್ನ್ಯೂಸ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್ ! – ಇಲ್ಲಿದೆ ಕಂಪ್ಲೀಟ್ ಮಾಹಿತಿ! ಇಂದು ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ರಾಜಣ್ಣ ಸಮ್ಮುಖದಲ್ಲಿ ಇಂದು ಸೇರ್ಪಡೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಟಿಕೆಟ್ ಕೈತಪ್ಪಿತ್ತು ಕಾಂಗ್ರೆಸ್ ತೊರೆದು BJP ಸೇರಿದ್ದ ಮಾಜಿ ಸಂಸದ ಮುದ್ದಹನುಮೇಗೌಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಲ್ಲೂ ಟಿಕೆಟ್ ವಂಚಿತರಾಗಿದ್ರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್ ಕೈತಪ್ಪುವ ಭೀತಿ ಹೀಗಾಗಿ ಮತ್ತೆ ಕಾಂಗ್ರೆಸ್ಸಿನತ್ತ ಮುಖಮಾಡಿದ್ದಾರೆ.
Author: AIN Author
ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ಮೂಡಿಬಂದಿರುವ “ಪುರುಷೋತ್ತಮನ ಪ್ರಸಂಗ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ನಟ ಶರಣ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ಪರುಷೋತ್ತಮನ ಪ್ರಸಂಗ” ಶೀರ್ಷಿಕೆಯೇ ಮನ ಮುಟ್ಟುವಂತಿದೆ ಎಂದು ಮಾತನಾಡಿದ ನಟ ಶರಣ್, ಪುರುಷೋತ್ತಮ ಎಂದರೆ ರಾಮ. ಆ ರಾಮನ ಹೆಸರಿನಲ್ಲಿ ಬರುತ್ತಿರುವ ಈ ಚಿತ್ರ ಖಂಡಿತವಾಗಿಯೂ ಗೆಲ್ಲುತ್ತದೆ. ಇನ್ನು ಟ್ರೇಲರ್ ನೋಡಿದಾಗ ಅಜಯ್ ಅವರು ನಾಯಕನಾಗಿ ನಟಿಸಿರುವ ಮೊದಲ ಚಿತ್ರ ಅನಿಸುವುದಿಲ್ಲ. ಅಷ್ಟು ಚೆನ್ನಾಗಿ ಅಜಯ್(ನಿರ್ಮಾಪಕ ರವಿಕುಮಾರ್ ಅವರ ಪುತ್ರ) ಅಭಿನಯಿಸಿದ್ದಾರೆ. ನಾನು ಟ್ರೇಲರ್ ಗೆ ಧ್ವನಿ ನೀಡಿದ್ದೇನೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸುತ್ತೇನೆ ಎಂದರು. ಇದೊಂದು ಉತ್ತಮ ಹಾಸ್ಯ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ. ನಮ್ಮ ತಂದೆ ದೇವದಾಸ್ ಕಾಪಿಕಾಡ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಮೊದಲ ಕನ್ನಡ…
ಕಲಬುರಗಿ: ತೋಳ ದಾಳಿ ಮಾಡಿದ ಹಿನ್ನಲೆ ಹೊಲದಲ್ಲಿದ್ದ 8 ಜನರು ಗಾಯಗೊಂಡು ಆಸ್ಪತ್ರೆ ಪಾಲಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅಳಂದ ತಾಲೂಕಿನ ಚಲಗೇರಾ ಗ್ರಾಮದಲ್ಲಿ ಘಟನೆ ನಡೆದಿದ್ದು ಹೊಲದಲ್ಲಿನ ಕೊಟ್ಟಿಗೆಯಲ್ಲಿ ಕಸಗೂಡಿಸುತಿದ್ದ ರೈತರ ಮೇಲೆ ತೋಳ ಯದ್ವಾತದ್ವಾ ಅಟ್ಯಾಕ್ ಮಾಡಿದೆ.. ಮೊದಲು ರೈತ ಶರಣಪ್ಪ ನಂತ್ರ ನೀಲಕಂಠ ಹೀಗೆ ಇಬ್ಬರೂ ದಾಳಿಗೆ ಒಳಗಾಗಿದ್ದಾರೆ..ನಂತ್ರ ಸರಣಿ ದಾಳಿಯಾಗಿ 8 ಜನ ಹೈರಾಣಾಗಿದ್ದಾರೆ..ಓರ್ವ ಸೊಲ್ಲಾಪುರ ಉಳಿದವರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ..
ತುಮಕೂರು: ಕಳಪೆ ಇಟಾಚಿ ಕೊಟ್ಟು ರೈತನಿಗೆ ತ್ರಾಸ್ ಕೊಟ್ಟಿದ್ದಾರೆಂದು ಆರೋಪಿಸಿ ಶೋಂರೂಮ್ ಸಿಬ್ಬಂದಿ ವಿರುದ್ದ ಶೋ ರೂಂ ಎದುರು ಶಾಮಿಯಾನ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ರೈತ ರವಿ ಎಂಬುವವರು ತುಮಕೂರಿನ ಅಂತಸರನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಶೋ ರೂಂನಲ್ಲಿ 02_03_23ರಲ್ಲಿ ಟಾಟಾ ಇಟಾಚಿ ವಾಹನ 25 ಲಕ್ಷ ರೂಪಾಯಿ ನೀಡಿ ಖರೀದಿಸಿದ್ದರು. ಇಟಾಚಿ ಖರೀದಿಸಿದ ಮೂರೇ ತಿಂಗಳಿಗೆ ಇಂಜಿನ್ ನಲ್ಲಿ ತೀವ್ರ ಬಿಸಿ. ಹಾಗೂ ಮೂರ್ನಾಲ್ಕು ಬಾರಿ ರಿಪೇರಿಗೆ ಬಂದಿತ್ತು. ರಿಪೇರಿ ಮಾಡಿದರೂ ಸಹ ಸರಿಯಾಗದ ಮಿನಿ ಇಚಾಟಿ, ಇದ್ದರಿಂದ ಇಟಾಚಿ ಬದಲಾಯಿಸಿ ಕೊಡುವಂತೆ ರೈತ ಪಟ್ಟು ಹಿಡಿದಿದ್ದು, ಶೋ ರೂಂ ಮುಂದೆ ಶಾಮಿಯಾನ ಹಾಕಿಕೊಂಡು ಪ್ರತಿಭಟನೆಗೆ ಕುಳಿತಿದ್ದಾರೆ. ಶೋ ರೂಂಗೆ ಯಾರು ಓಡಾಡದ ರೀತಿಯಲ್ಲಿ ದಿಗ್ಬಂಧನ ಹಾಕಿದ ರೈತ. ಬದಲಿ ಇಟಾಚಿ ಕೊಡುವವರೆಗೂ ಪ್ರತಿಭಟನೆ ಕೈ ಬಿಡಲ್ಲವೆಂದು ಪಟ್ಟು ಹಿಡಿದಿದ್ದಾರೆ. PNS ಕನ್ಸ್ಟ್ರಕ್ಷನ್ ಎಕ್ಯೂಮೆಂಟ್ ಪ್ರವೈಟ್ ಲಿಮಿಟೆಡ್ ಹೆಸರಿನ ಶೋ ರೂಂ ಆಗಿದ್ದು, ಇಟಾಚಿ ಮಾಲೀಕ ಸರಿಯಾಗಿ…
ಬೆಂಗಳೂರು:- ಮಾಜಿ ಸಚಿವ ಸುಧಾಕರ್ ಅವರನ್ನು ಮರಳಿ ಪಕ್ಷಕ್ಕೆ ಕರಿಸಿಕೊಳ್ಳುವ ಬಗ್ಗೆ ಚಿಕ್ಕಬಳ್ಳಾಪುರ ನಾಯಕರಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಆದರೆ ಶಾಸಕ ಪ್ರದೀಪ್ ಈಶ್ವರ್ ತಟಸ್ಥ ನಿಲುವು ಕಾಯ್ದುಕೊಂಡಿದ್ದಾರೆ. ಇಂಥ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವಷ್ಟು ದೊಡ್ಡವನಲ್ಲ. ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ ಯಶವಂತಪುರ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಹಾಗೂ ಇತರ ನಾಯಕರ ಜೊತೆ ಚರ್ಚಿಸಿರುವ ಸುಧಾಕರ್, ನಿರಂತರವಾಗಿ ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆ ಎನ್ನಲಾಗಿದೆ. ಮೂರು ದಿನಗಳ ಹಿಂದಷ್ಟೇ ಸೋಮಶೇಖರ್ ಜೊತೆ ಸುಧಾಕರ್ ಮಾತುಕತೆ ನಡೆಸಿದ್ದರು. ಇದಕ್ಕೆ ಹೊಸಕೋಟೆ ನಾಯಕನಿಂದ ವೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಎಂದೂ ಹೇಳಲಾಗುತ್ತಿದೆ. ಮತ್ತೊಂದಡೆ, ಸುಧಾಕರ್ ಅವರನ್ನು ಮರಳಿ ಪಕ್ಷಕ್ಕೆ ಕರೆಸಿಕೊಳ್ಳುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುಧಾಕರ್ ಅವರು ಲೋಕಸಭೆ…
ಬೆಂಗಳೂರು: ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಮಕ್ಕಳ ಫೇವರಿಟ್ ಬಾಂಬೆ ಮಿಠಾಯಿ? ಈಗಾಗಲೇ ತಮಿಳುನಾಡು ಹಾಗೂ ಪುದುಚರಿ ಮಾದರಿಯಲ್ಲೇ ಕರ್ನಾಟಕದಲ್ಲೂ ನಿಷೇಧಕ್ಕೆ ತಯಾರಿ ನಡೆಸಿದ್ದು ಬಾಂಬೆ ಮಿಠಾಯಿ ಬಣ್ಣದಲ್ಲಿ ಪತ್ತೆಯಾದ ಕ್ಯಾನರ್ ಕಾರಕ ರೋಡ್ ಮೈನ್ -ಬಿ ತುಂಬಾ ವಿಷಕಾರಿ ಅಂಶ ಬೆಳಕಿಗೆ ಬಂದಿದೆ. Gruhalakshmi Yojane: ಮಹಿಳೆಯರಿಗೆ ಗುಡ್ನ್ಯೂಸ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್ ! – ಇಲ್ಲಿದೆ ಕಂಪ್ಲೀಟ್ ಮಾಹಿತಿ! ತಮಿಳುನಾಡು ಸರ್ಕಾರ ನಡೆಸಿದ ಪ್ರಯೋಗದಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ಈ ಹಿನ್ನೆಲೆಯಲ್ಲಿ ಎರಡು ರಾಜ್ಯದಲ್ಲಿ ಕಾಟನ್ ಕ್ಯಾಂಡಿ ನಿಷೇಧ ಇದರ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಕಾಟನ್ ಕ್ಯಾಂಡಿ ಪರೀಕ್ಷೆಗೆ ಸಜ್ಜಾಘಿದೆ. ಬ್ಯಾನ್ ಆಗುತ್ತಾ ಬಾಂಬೆ ಮಿಠಾಯಿ? ರಾಜ್ಯದಾದ್ಯಂತ ಪಾರ್ಕ್ ಸೇರಿ ವಿವಿಧ ಸ್ಥಳಗಳಿಂದ ಮಾರುತ್ತಿರುವ ಕಾಟನ್ ಕ್ಯಾಂಡಿ ಮಾದರಿ ಸಂಗ್ರಹ ಮಾದರಿ ಸಂಗ್ರಹ ಮಾಡಿ ಪರೀಕ್ಷೆಗೆ ಕಳುಹಿಸಿರುವ ಎಫ್ಎಸ್ಎಸ್ಎಐ ಎಫ್ಎಸ್ಎಸ್ಎಐ – ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಪರೀಕ್ಷೆಯ ಫಲಿತಾಂಶಗಳ ನಂತರ ಬಾಂಬೆ ಮಿಠಾಯಿ ನಿಷೇಧದ ಬಗ್ಗೆ…
ಬೆಂಗಳೂರು: ಎಲ್ಲೆಡೆ ಕಸ ಕಸ ಕಸ … ಪೌರಕಾರ್ಮಿಕರು ಒಂದೇ ಒಂದು ದಿನ ಬಂದು ಕಸ ವಿಲೇವಾರಿ ಮಾಡಿಲ್ಲ ಎಂದರೆ ಸಾಕು ಬೆಂಗಳೂರು ತುಂಬಾ ಕಸಮಯ ಆಗಿ ರುತ್ತದೆ.. ಇದೇ ಕಾರಣಕ್ಕೆ ಇದೀಗ ಬೆಂಗಳೂರಿನ ಕಸಮಯವಾಗಿದೆ.. ಅದ್ಯಾಕೆ ಅಂತೀರಾ.. ಹಾಗಿದ್ದರೆ ಈ ಸ್ಟೋರಿ ನೋಡಿ.. ಸಿಲಿಕಾನ್ ಸಿಟಿ ಬೆಂಗಳೂರು ಮತ್ತೆ ಗಾರ್ಬೆಜ್ ಸಿಟಿ ಎಂಬ ಅಪಖ್ಯಾತಿಗೆ ಒಳಗಾಗುವ ಭೀತಿಗೆ ಸಿಲುಕಿಕೊಂಡಿದೆ. ನಗರದಲ್ಲಿ ಕಳೆದ ಮೂರು ದಿನಗಳಿಂದ ಕಸ ಸಂಗ್ರಹ ಸ್ಥಗಿತವಾಗಿರುವುದರಿಂದ ಇಡಿ ನಗರ ಗಬ್ಬೆದ್ದು ಹೋಗಿರುವುದು ಕಂಡು ಬರುತ್ತಿದೆ. ಕಸದ ಕ್ವಾರಿಗಳಲ್ಲಿ ಕಸ ಡಂಪ್ ಮಾಡಲು ಅವಕಾಶ ಸಿಗದಿರುವುದರಿಂದ ಪೌರ ಕಾರ್ಮಿಕರು ನಗರದಲ್ಲಿ ಮನೆ ಮನೆಯಿಂದ ಕಸ ಪಡೆಯುವ ಪ್ರಕ್ರಿಯೆ ಸ್ಥಗಿತಗೊಳಿಸಿದ್ದಾರೆ. ನಗರದ ಕಸ ವಿಲೇವಾರಿ ಮಾಡುವ ಬೆಳ್ಳಳ್ಳಿ ಕ್ವಾರಿಯಲ್ಲಿ ಕಸ ಡಂಪ್ ಮಾಡಲು ಅವಕಾಶ ನಿರಾಕರಿಸಲಾಗಿದೆ. ಹೀಗಾಗಿ ಕಳೆದ ಮೂರು ದಿನಗಳಿಂದ ಬೆಳ್ಳಳ್ಳಿ ಕ್ವಾರಿಯಲ್ಲೇ ಕಸದ ಲಾರಿಗಳು ಸಾಲುಗಟ್ಟಿ ನಿಲ್ಲುವಂತಾಗಿದೆ. ಕಸದ ಲಾರಿಗಳು ಬಾರದ ಕಾರಣ, ಕಸ ಸಂಗ್ರಹ ಮಾಡಲು…
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಿಸುವಂತೆ ಒತ್ತಾಯಿಸಿ ಇಂದು ಧರಣಿ ನಡೆಸಿದರು.ಈ ಬಾರಿಯ ಬಜೆಟ್ ನಲ್ಲಿ ವಿವಿಧ ಯೋಜನೆಗಳಡಿ ಸ್ಕೀಮ್ ವರ್ಕರ್ಸ್ ಗಳಾಗಿ ದುಡಿಯುತ್ತಿರುವ ಮಹಿಳಾ ಸಮುದಾಯವನ್ನು ಸಬಲೀಕರಣ ಗೊಳಿಸುವ ಬಗ್ಗೆ ನಿರ್ಲಕ್ಷಿಸಿರುವುದು ನಿರಾಶೆಯನ್ನುಂಟು ಮಾಡಿದೆ ಎಂದು ಧರಣಿ ನಿರತರು ಒತ್ತಾಯಿಸಿದರು. Gruhalakshmi Yojane: ಮಹಿಳೆಯರಿಗೆ ಗುಡ್ನ್ಯೂಸ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್ ! – ಇಲ್ಲಿದೆ ಕಂಪ್ಲೀಟ್ ಮಾಹಿತಿ! ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯಾಧ್ಯಕ್ಷ ಬಿ.ಅಮ್ಮದ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ನೇತೃತ್ವ ವಹಿಸಿದ್ದರು.ಕಳೆದ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಹಾಗೂ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿಯವರು ಆರನೇ ಗ್ಯಾರೆಂಟಿಯಾಗಿ ಘೋಷಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ 15000 ಹಾಗೂ ಸಹಾಯಕಿಯರಿಗೆ 10,000 ರೂ ಮಾಸಿಕ ಗೌರವದನವನ್ನು ಹೆಚ್ಚಳ ಮಾಡುವ ಭರವಸೆ ನೀಡಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳಾಯಿತು ಈವರೆಗೆ ಭರವಸೆ ಈಡೇರಿಸಿಲ್ಲ ಎಂದು ಅವರು ಬೇಸರ…
ಮಂಡ್ಯ:- ಹೈಕಮಾಂಡ್ ಘೋಷಣೆಗೂ ಮುನ್ನ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಅವರು ಮಂಡ್ಯದ ಅಭ್ಯರ್ಥಿ ಹೆಸರು ಘೋಷಣೆ ಮಾಡಿ ಅವರ ಪರ ಪ್ರಚಾರವನ್ನೂ ಆರಂಭಿಸಿದ್ದಾರೆ. ನಾಗಮಂಗಲದ ಉದ್ಯಮಿ ಸ್ಟಾರ್ ಚಂದ್ರು ಅಲಿಯಾಸ್ ವೆಂಕಟರಮಣೇಗೌಡ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಕ್ಷೇತ್ರದ ಮತದಾರರಿಗೆ ಶಾಸಕರ ರವಿ ಗಣಿಗ ಅವರು ಪರಿಚಯ ಮಾಡಿಕೊಡುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಸ್ಟಾರ್ ಚಂದ್ರು ಅವರನ್ನು ನಿಲ್ಲಿಸುತ್ತಿದ್ದೇವೆ. ಆಶೀರ್ವಾದ ಮಾಡುವಂತೆ ಮನವಿ ಮಾಡುತ್ತಿದ್ದಾರೆ.
ಭಾರತದಲ್ಲಿ ಇವತ್ತು ಗುರುವಾರ ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 25 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 20 ಪೈಸೆಯಷ್ಟು ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,740 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,570 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,250 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 22ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,600 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,740 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 757 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,600 ರೂ 24 ಕ್ಯಾರಟ್ನ…