ಲಕ್ನೋ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ 2018 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗಳ ವಿರುದ್ಧ ಬಿಜೆಪಿ ನಾಯಕರೊಬ್ಬರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಉತ್ತರ ಪ್ರದೇಶದ ಸುಲ್ತಾನ್ಪುರದ ಸ್ಥಳೀಯ ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ. ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಬಿಜೆಪಿ ತನ್ನ ರಾಜಕೀಯ ಶುದ್ಧವಾಗಿದೆ ಎಂದು ಹೇಳಿಕೊಂಡಿದ್ದರೂ, ಕೊಲೆ ಪ್ರಕರಣದ ಆರೋಪಿಯನ್ನು ಪಕ್ಷದ ಅಧ್ಯಕ್ಷರನ್ನಾಗಿ ಹೊಂದಿದೆ ಎಂದಿದ್ದರು. ಆಗ ಅಮಿತ್ ಶಾ ಬಿಜೆಪಿ ಅಧ್ಯಕ್ಷರಾಗಿದ್ದರು. ಈ ವಿಚಾರವಾಗಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಪ್ರಕರಣ ದಾಖಲಿಸಿದ್ದರು. https://ainlivenews.com/here-is-a-super-home-remedy-to-keep-sugar-disease-under-control/ 2014 ರಲ್ಲಿ ವಿಶೇಷ ಸಿಬಿಐ ನ್ಯಾಯಾಲಯದಿಂದ ಅಮಿತ್ ಶಾ ಅವರನ್ನು ಬಿಡುಗಡೆ ಮಾಡಿದ ಸೊಹ್ರಾಬುದ್ದೀನ್ ಎನ್ಕೌಂಟರ್ ಪ್ರಕರಣವನ್ನು ರಾಹುಲ್ ಉಲ್ಲೇಖಿಸಿದ್ದರು. ಇಂತಹ ಆಕ್ಷೇಪಾರ್ಹ ಹೇಳಿಕೆಗಳು ಅಮಿತ್ ಶಾ ಅವರ ವರ್ಚಸ್ಸಿಗೆ ಕಳಂಕ ತಂದಿದೆ ಎಂದು ಮಿಶ್ರಾ ದೂರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಸುಲ್ತಾನ್ಪುರದ ಸ್ಥಳೀಯ ನ್ಯಾಯಾಲಯ ರಾಹುಲ್ ಗಾಂಧಿಯವರಿಗೆ ಜಾಮೀನು…
Author: AIN Author
ಬೆಂಗಳೂರು : ಡಿ.ಕೆ. ಶಿವಕುಮಾರ್ ಗಡ್ಡ ತೆಗೆಯುವ ಕಾಲ ಹತ್ತಿರ ಬಂದಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ನಗೆ ಚಟಾಕಿ ಹಾರಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಆಪ್ತರೊಬ್ಬರು ಈ ಬಗ್ಗೆ ನನಗೆ ಹೇಳಿದ್ದಾರೆ ಎಂದು ಡಿಕೆಶಿ ಸಿಎಂ ಕನಸ್ಸಿನ ಆಸೆ ಬಗ್ಗೆ ಲೇವಡಿ ಮಾಡಿದ್ದಾರೆ. Bigg Breaking: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಅಲ್ಲ: ಸರ್ಕಾರದಿಂದ ಮತ್ತೊಂದು ವಿವಾದಿತ ಆದೇಶ ಡಿ.ಕೆ. ಶಿವಕುಮಾರ್ ಗಡ್ಡ ತೆಗೆಯುವ ಕಾಲ ಹತ್ತಿರ ಬಂದಿದೆ ಎಂದು ಅವರ ಆಪ್ತರು ಹೇಳಿದ್ದಾರೆ. ಡಿಸೆಂಬರ್ ಒಳಗೆ ಮುಖ್ಯಮಂತ್ರಿ ಆದರೆ ಆಗ್ತೀಯಾ. ಇಲ್ಲ ಅಂದರೆ ಈ ಜನ್ಮದಲ್ಲಿ ಆಗಲ್ಲ ಎಂದು ಹೇಳಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ಈ ವೇಳೆ ಅಶೋಕ್ ಏನು ಹೇಳಿದ್ರು ಡಿಕೆಶಿ, ಕೇಳಿಸಿಕೊಂಡು ಸೈಲೆಂಟಾಗಿಯೇ ನಗುತ್ತಾ ಸುಮ್ಮನೆ ಕುಳಿತಿದ್ದರು. ಡಿ.ಕೆ. ಶಿವಕುಮಾರ್ ಅವರು ಯಾವಾಗ ಗಡ್ಡ ತೆಗೆಯುತ್ತಾರೆ..? ಅವರ ಆಸೆ ಯಾವಾಗ ಈಡೇರಿಸ್ತೀರಾ ಎಂಬುದನ್ನು ಹೇಳಿ ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನಿಸಿದರು. ಈ…
ಬೆಂಗಳೂರು: ಒಂದು ಕಡೆ ಜಲಮಂಡಳಿ ನೀರು ಸರಬರಾಜಿನಲ್ಲಿ ವ್ಯತ್ಯಯ ಇನ್ನೊಂದು ಕಡೆ ಕೈ ಕೊಟ್ಟ ಶುದ್ಧ ನೀರಿನ ಘಟಕ..ಈ ಪರಿಣಾಮ ಬೆಂಗಳೂರಿಗೆ ಫೆಬ್ರವರಿಯಲ್ಲೇ ನೀರಿನ ಸಮಸ್ಯೆ (Water Problem) ಆರಂಭವಾಗಿದೆ.ನಗರದ ಬಹುತೇಕ ಭಾಗಗಳಿಗೆ ಫೆ.27ರ ಬೆಳಗ್ಗೆ 6 ರಿಂದ ಫೆ.28ರ ಬೆಳಗ್ಗೆ 6ರ ವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ವಾಹನ ಸವಾರರೇ ಇಲ್ಲಿ ಕೇಳಿ – ಆ್ಯಂಬುಲೆನ್ಸ್ಗೆ ದಾರಿ ಬಿಡದೆ ಅಡ್ಡಾದಿಡ್ಡಿ ಗಾಡಿ ಓಡಿಸಿದ್ರೆ ಬೀಳುತ್ತೆ ದಂಡ! 4ನೇ ಬ್ಲಾಕ್ ನಂದಿನಿ ಲೇಔಟ್, ಬಿಎಚ್ಇಎಲ್ ಲೇಔಟ್, ನಂದಿನಿ ಲೇಔಟ್, ಶ್ರೀನಿವಾಸನಗರ, ಜೈಮಾರುತಿ ನಗರ ಮತ್ತು ಬಡವಣೆ, ಸಾಕಮ್ಮ ಲೇಔಟ್, ನರಸಿಂಹ ಸ್ವಾಮಿ ಲೇಔಟ್, ಮುನೇಶ್ವರ ನಗರ, ಜ್ಞಾನ ಜ್ಯೋತಿ ನಗರ, ಜ್ಞಾನಗಂಗಾನಗರ, ಮಲ್ಲತ್ತಹಳ್ಳಿ, ಎನ್ಜಿಇ ಫಲಹಳ್ಳಿ ಭಾಗಗಳಲ್ಲಿ ನೀರು ಸರಬರಾಜು ಬಂದ್ ಆಗಲಿದೆ. Bigg Breaking: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಅಲ್ಲ: ಸರ್ಕಾರದಿಂದ ಮತ್ತೊಂದು ವಿವಾದಿತ ಆದೇಶ RHBCS ಲೇಔಟ್ 1ನೇ ಮತ್ತು 2ನೇ ಹಂತ, ಬೈರವೇಶ್ವರನಗರ,…
ರಾಮನಗರ: ವಕೀಲರ ಹೋರಾಟಕ್ಕೆ ಕೊನೆಗೂ ಸರ್ಕಾರ ಮಣಿದಿದ್ದು ಐಜೂರು ಠಾಣೆ ಪಿಎಸ್ಐ ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಲಾಗಿದೆ. ರಾಮನಗರ ಜಿಲ್ಲಾಡಳಿತ ಕಚೇರಿಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ ಬಳಿಕ ವಿಧಾನಸೌಧ ಚಲೋಗೆ ವಕೀಲರು ಕರೆ ನೀಡಿದ್ದರು. ವಕೀಲರ ಪ್ರತಿಭಟನೆಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಮುಜುಗರ ತಪ್ಪಿಸಿಕೊಳ್ಳಲು ಪಿಎಸ್ಐ ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಿದೆ. https://ainlivenews.com/here-is-a-super-home-remedy-to-keep-sugar-disease-under-control/ ಅಮಾನತು ಆದೇಶದ ಬಗ್ಗೆ ಸದನದಲ್ಲಿ ಗೃಹ ಸಚಿವ ಪರಮೇಶ್ವರ್ ಅವರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. 40 ವಕೀಲರ ವಿರುದ್ಧ ಸುಳ್ಳು ಎಫ್ಐಆರ್ ದಾಖಲಿಸಿದ ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ರಾಮನಗರ ವಕೀಲರು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಮತ್ತು ವಿಧಾನಸಭೆಯ ವಿಪಕ್ಷ ನಾಯಕ ಅಶೋಕ್ ಬೆಂಬಲ ನೀಡಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದರು. ಪಿಎಸ್ಐ ಅಮಾನತು ಯಾಕೆ? ಉತ್ತರ ಪ್ರದೇಶದ ಜ್ಞಾನವಾಪಿ…
ಬೀದರ್: ಇಡಿ ಹಾಗೂ ಐಟಿಯನ್ನು ನರೇಂದ್ರ ಮೋದಿ ಹಾಗೂ ಅಮಿತ್ ಶಾ ಕಂಟ್ರೋಲ್ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆರೋಪಿಸಿದ್ದಾರೆ. ನಗರದ ನೆಹರೂ ಸ್ಟೇಡಿಯಂನಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಎಲ್ಲಾ ನಾಯಕರಿಗೆ ಇಡಿ, ಐಟಿ ಹಾಗೂ ಮೋದಿ ಭಯವಿದೆ. ಕಾಂಗ್ರೆಸ್ನಿಂದ ಲಾಭ ತೆಗೆದುಕೊಂಡ ಯಾರ ಬಳಿಯೂ ಧೈರ್ಯವಿಲ್ಲದೇ ಬಿಜೆಪಿಗೆ ಹೋಗುತ್ತಾರೆ. ಈ ಬಾರಿ ಚುನಾವಣೆಯಲ್ಲಿ ಸಹಕಾರ ಕೊಡದೇ ಇದ್ದರೆ ಪ್ರಜಾಪ್ರಭುತ್ವ, ಸಂವಿಧಾನ ಉಳಿಯುವುದಿಲ್ಲ. ಈ ಸಂವಿಧಾನವನ್ನು ಮೋದಿ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಸಂವಿಧಾನ ಉಳಿಯಬೇಕು ಎಂದರೆ ಕಾಂಗ್ರೆಸ್ಗೆ ಸಹಕಾರ ನೀಡಲೇಬೇಕು ಎಂದಿದ್ದಾರೆ. ಎಲ್ಲರಿಗೂ ಉಚಿತವಾಗಿ ನಾವು ಪಡಿತರ ಅಕ್ಕಿಯನ್ನು ಕೊಡುತ್ತಿದ್ದೇವೆ. https://ainlivenews.com/here-is-a-super-home-remedy-to-keep-sugar-disease-under-control/ ನೆಹರೂ ಅವರು ದೊಡ್ಡ ದೊಡ್ಡ ಕಾರ್ಖಾನೆಗಳನ್ನು ಸ್ಥಾಪನೆ ಮಾಡಿದ್ದರು. ಮೋದಿ 2 ಕೋಟಿ ಉದ್ಯೋಗ ಕೊಡುತ್ತೇನೆ ಎಂದು ಸುಳ್ಳು ಹೇಳಿದ್ದಾರೆ. ರಾಮಮಂದಿರದಲ್ಲಿ ರಾಜಕೀಯ ಏಕೆ ಬಂತು? ಮೋದಿ ಜನ, ಧರ್ಮ, ಜಾತಿಯನ್ನ ಬೇರೆ ಬೇರೆ ಮಾಡಲು ನೋಡುತ್ತಾರೆ. ಈ ಬಾರಿ ಮೋದಿಯವರನ್ನು ಅಧಿಕಾರದಿಂದ ಹೊರಗೆ…
ಬೆಂಗಳೂರು: ನಾಳೆಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ನಾಳೆ ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. Bigg Breaking: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಅಲ್ಲ: ಸರ್ಕಾರದಿಂದ ಮತ್ತೊಂದು ವಿವಾದಿತ ಆದೇಶ ಅದಕ್ಕೂ ವಿರೋಧ ಮಾಡಿದ್ರು. ನಮ್ಮ ರಾಜ್ಯದ ರೋಗಿಗಳು ಆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಅಂದಿದ್ದರು. ಅದೇ ರೀತಿ ಆನೆ ತುಳಿದು ಮೃತಪಟ್ಟಿದ್ದಕ್ಕೆ ಪರಿಹಾರ ಕೊಟ್ಟಿದ್ದಾರೆ. ಬಿಜೆಪಿಯವರಿಗೆ ಯಾವುದೇ ಕೆಲಸ ಇಲ್ಲ. ಅದಕ್ಕೆ ಇಂತಹ ಕೆಲಸ ಮಾಡ್ತಾರೆ. ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಘೋಷವಾಕ್ಯ ಬದಲಾವಣೆಗೆ ಸರ್ಕಾರ ಯಾವುದೇ ಆದೇಶ ಮಾಡಿರಲಿಲ್ಲ. ಯಾವುದೋ ವಾಟ್ಸಾಪ್ ನಲ್ಲಿ ಬಂದ ಮೆಸೇಜ್ನಿಂದ ಗೊಂದಲವಾಗಿದೆ ಎಂದರು. ವಾಹನ ಸವಾರರೇ ಇಲ್ಲಿ…
ರಾಮನಗರ: ಮಾತೆತ್ತಿದರೆ ನಾವು ಗಂಡಸರು ಎಂದು ಹೇಳಿಕೊಳ್ಳುವ ಬಿಜೆಪಿಯವರು (BJP) ಭದ್ರಾ ಮೇಲ್ದಂಡೆ ಯೋಜನೆಗೆ ನಿರ್ಮಲಾ ಸೀತಾರಾಮನ್ ಬಳಿ ಹಣ ಬಿಡುಗಡೆ ಮಾಡಿಸಿಕೊಂಡು ಬನ್ನಿ ಎಂದು ಬಿಜೆಪಿಗರಿಗೆ ಶಾಸಕ ಹೆಚ್.ಸಿ ಬಾಲಕೃಷ್ಣ (H.C Balakrishna) ಸವಾಲು ಹಾಕಿದ್ದಾರೆ. ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಎಂಬ ಬರಹ ಬದಲಾಯಿಸುವ ವಿಚಾರ ಕುರಿತು ಮಾತನಾಡಿದರು. ಧೈರ್ಯವಾಗಿ ಪ್ರಶ್ನಿಸಿ ಎಂದು ಬರೆದಿರೋದ್ರಲ್ಲಿ ಏನು ತಪ್ಪಿದೆ? ವಿಚಾರ ಮಾಡೋಕೆ ಬೇಕಾದಷ್ಟಿದೆ. ಅದು ಬಿಟ್ಟು ಬಿಜೆಪಿಯವರು ಇದನ್ನ ಹಿಡಿದುಕೊಂಡು ಅಳ್ಳಾಡಿಸುತ್ತಿದ್ದಾರೆ. ಈ ವಿಚಾರದಲ್ಲಿ ಯಾರಿಗೂ ಅವಮಾನ ಮಾಡಬೇಕು ಎನ್ನುವ ಉದ್ದೇಶ ಇಲ್ಲ ಎಂದಿದ್ದಾರೆ. https://ainlivenews.com/do-you-keep-eggs-in-the-fridge-and-eat-them-then-see-this-story/ ಶಾಲೆಗಳಲ್ಲಿ ಬರಹದ ವಿಚಾರ ಸರ್ಕಾರದ ಆದೇಶ ಕೂಡಾ ಅಲ್ಲ. ಸ್ಥಳೀಯವಾಗಿ ಏನೋ ಮಾಡಿಕೊಂಡಿದ್ದಾರೆ ಅಷ್ಟೇ. ಇದರಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ತಪ್ಪಾಗಿದ್ರೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ಮಂತ್ರಿಗಳೇನು ಆದೇಶ ಮಾಡಿಲ್ಲ. ಅಸಲಿಗೆ ಇದು ವಿಚಾರವೇ ಅಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ ಎಂದು…
ಚಿಕ್ಕಬಳ್ಳಾಪುರ : ಕೌಟುಂಬಿಕ ಕಲಹದ ಹಿನ್ನೆಲೆ ಹೆಂಡತಿಯ ಕತ್ತನ್ನು ಸಿಲಿ ಮತ್ತು ತಾನೆ ತನ್ನ ಕತ್ತನ್ನು ಚಾಕುವಿನಿಂದ ಇರಿದು ಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ನೆಹರು ಜಿ ಕಾಲೋನಿಯಲ್ಲಿ ನಡೆದಿದೆ.. ಹೆಂಡತಿ ಸ್ವಪ್ನ ಎಂಬುವವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವೇದಲ ವೇಷಣಿ ಗ್ರಾಮದವರಾಗಿದ್ದು ಗಂಡ ಮಂಜುನಾಥ್ ಸಬ್ಬನಹಳ್ಳಿ ಗ್ರಾಮದ ನಿವಾಸಿಯಾಗಿದ್ದು ಇಬ್ಬರಿಗೂ ವಿವಾಹವಾಗಿರುತ್ತದೆ.. ಹೆಂಡತಿ ಸ್ವಪ್ನ (25) ದೊಡ್ಡಬಳ್ಳಾಪುರದಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು.. ಗಂಡ ಮಂಜುನಾಥ್ 35 ಗಾರೆ ಕೆಲಸ ಮಾಡಿಕೊಂಡು ಇಬ್ಬರೂ ಸಹ ಜೀವನ ಸಾಗಿಸುತ್ತಿದ್ದರು. ಹೆಂಡತಿ ಮೇಲೆ ಅಕ್ರಮ ಸಂಬಂಧದ ಅನುಮಾನದಿಂದ ಗಂಡ ಮಂಜುನಾಥ್ ಇಂದು ಬೆಳಗ್ಗೆ ಹೆಂಡತಿಯ ಮೇಲೆ ಜಗಳ ಮತ್ತು ಹಲ್ಲೆ ಮಾಡಿ ಹೆಂಡತಿ ಸ್ವಪ್ನ ಳ ಕತ್ತಿಗೆ ಚಾಕುವಿನಿಂದ ಇರಿದು ಅಲ್ಲೇ ಮಾಡಿರುತ್ತಾನೆ ಮತ್ತು ಗಂಡ ಮಂಜುನಾಥ್ ಆತನೇ ತನ್ನ ಕತ್ತಿಗೆ ಚಾಕುವಿನಿಂದ ಇರಿದು ಕೊಂಡು ನರಲಾಡುತ್ತಿದ್ದ. https://ainlivenews.com/do-you-keep-eggs-in-the-fridge-and-eat-them-then-see-this-story/ ಸಮಯದಲ್ಲಿ ಸ್ಥಳೀಯರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಸರ್ಕಾರಿ ತಾಯಿ ಮತ್ತು…
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬಿಟ್ ಕಾಯಿನ್ ಪ್ರಕರಣ ಸದ್ದು ಮಾಡುತ್ತಿದ್ದು ಘಟನೆಗೆ ಸಂಬಂಧ ಪಟ್ಟಂತೆ ಹಿರಿಯ ಅಧಿಕಾರಿಗೆ ಬುಲಾವ್ ನೀಡಲಾಗಿದ್ದು ಹಿರಿಯ ಅಧಿಕಾರಿ ಸಂದೀಪ್ ಪಾಟೀಲ್ ಗೆ SIT ಬುಲಾವ್ ನೀಡಿದೆ Bigg Breaking: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಅಲ್ಲ: ಸರ್ಕಾರದಿಂದ ಮತ್ತೊಂದು ವಿವಾದಿತ ಆದೇಶ ಸಿಐಡಿ ಬಿಟ್ ಕಾಯಿನ್ ಹಗರಣದ ತನಿಖಾಧಿಕಾರಿಗಳಿಂದ ಬುಲಾವ್ ನೀಡಲಾಗಿದ್ದು ಕೆಲವು ಮಾಹಿತಿ ಗೆ ಸ್ಪಷ್ಟನೆ ಪಡೆಯಲು ಎಸ್ಐಟಿ ಟೀಂ ನಿಂದ ಬುಲಾವ್ ನೀಡಲಾಗಿದ್ದು ಬಿಟ್ ಕಾಯಿನ್ ಕೇಸ್ ಸಮಯದಲ್ಲಿ ಸಿಸಿಬಿ ಜಂಟಿಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಅವರ ಹೆಸರು ಕೂಡ ಈ ಪ್ರಕರಣದಲ್ಲು ತಳುಕು ಹಾಕಿಕೊಂಡಿದ್ದರಿಂದ SIT ಬುಲಾವ್ ನೀಡಿದೆ ವಾಹನ ಸವಾರರೇ ಇಲ್ಲಿ ಕೇಳಿ – ಆ್ಯಂಬುಲೆನ್ಸ್ಗೆ ದಾರಿ ಬಿಡದೆ ಅಡ್ಡಾದಿಡ್ಡಿ ಗಾಡಿ ಓಡಿಸಿದ್ರೆ ಬೀಳುತ್ತೆ ದಂಡ! ಬಿಟ್ ಕಾಯಿನ್ ಪ್ರಕರಣದ ತನಿಖೆಯಲ್ಲಿ ಹಿರಿಯ ಅಧಿಕಾರಿಯಾಗಿದ್ದ ಸಂದೀಪ್ ಪಾಟೀಲ್ ಪ್ರಕರಣದ ಇಂಚಿಂಚೂ ತನಿಖೆಗೆ ಆದೇಶಿಸಿದ್ದ ಸಂದೀಪ್ ಪಾಟೀಲ್ ಇದೇ ಹಿನ್ನೆಲೆ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ವೇಳೆ ನೈಟಿ ಹಾಕಿಕೊಂಡು ಅಪಾರ್ಟ್ಮೆಂಟ್ಗಳಲ್ಲಿ ಶೂ ಮತ್ತು ಚಪ್ಪಲಿಯನ್ನು ಕಳ್ಳನೊಬ್ಬಕದಿಯುತ್ತಿದ್ದಾನೆ. https://x.com/anilbulla/status/1759961401970323606?s=20 ಗುರುತು ಪತ್ತೆಯಾಗದೇ ಇರಲು ನೈಟಿ ಧರಿಸುತ್ತಿರುವ ಕಳ್ಳ ಶೂಗಳನ್ನ ಕದ್ದು ಕಾಂಪೌಂಡ್ ಹಾರಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಾಹನ ಸವಾರರೇ ಇಲ್ಲಿ ಕೇಳಿ – ಆ್ಯಂಬುಲೆನ್ಸ್ಗೆ ದಾರಿ ಬಿಡದೆ ಅಡ್ಡಾದಿಡ್ಡಿ ಗಾಡಿ ಓಡಿಸಿದ್ರೆ ಬೀಳುತ್ತೆ ದಂಡ! ಹೊರಗಡೆ ಚಪ್ಪಲಿ ಸ್ಟ್ಯಾಂಡ್ನಲ್ಲಿದ್ದ ಬೆಲೆ ಬಾಳುವ ಶೂಗಳನ್ನ ಕದ್ದು ಕಳ್ಳ ಪರಾರಿಯಾಗಿದ್ದಾನೆ. ಬೆಂಗಳೂರು ಪೊಲೀಸರಿಗೆ (Bengaluru Police) ಟ್ಯಾಗ್ ಮಾಡಿ ಆರೋಪಿಯನ್ನು ಪತ್ತೆ ಮಾಡುವಂತೆ ದೂರುದಾರರು ಮನವಿ ಮಾಡಿದ್ದಾರೆ