ಬೆಂಗಳೂರು: ಬಿಜೆಪಿಯವರಿಗೆ ದುರ್ಬುದ್ದಿ ಜಾಸ್ತಿ. ರಾಮನನ್ನು ಬೀದಿಗೆ ತಂದು ವೋಟು ಕೇಳುತ್ತಿದ್ದಾರೆ ಎಂದು ಬಿಜೆಪಿಗರ ವಿರುದ್ಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ತೆರಿಗೆ ಹಿಂದೂಗಳಿಗೆ ಕೋಡಬೇಕಂತೆ ಎಂದು ಟೀಕಿಸಿದರು. Gruha Lakshmi Scheme: ಅರ್ಜಿ ಸಲ್ಲಿಸಿದ್ರೂ ಇನ್ನೂ ಹಣ ಬಂದಿಲ್ಲವೇ : ಹೀಗೆ ಮಾಡಿ ಖಂಡಿತಾ ಬರುತ್ತೆ ನೋಡಿ! ಮುಸ್ಲಿಮರು, ಬಡವರು ತೆರಿಗೆ ಕಟ್ಟಿಲ್ವಾ..? ನಾವೆಲ್ಲ ಭಾರತಾಂಬೆಯ ಮಕ್ಕಳು ಅಲ್ವಾ..? ವಿರೋಧ ಪಕ್ಷದವರಿಗೆ ಜನರು ಉತ್ತರ ಕೊಡುತ್ತಾರೆ. ವಿರೋಧ ಪಕ್ಷದ ಟೀಕೆ ಟಿಪ್ಪಣಿ ನಮಗೆ ಕೇಳಬೇಡಿ ಎಂದು ತಿಳಿಸಿದರು. ಜನರೇ ಬಂದು ನಮಗೆ ಯೋಜನೆ ತಲುಪುತ್ತಿದೆ ಅನ್ನುತ್ತಿದ್ದಾರೆ. ಪಕ್ಷ, ಜಾತಿ, ಧರ್ಮ ನೋಡಿ ನಾವು ಯೋಜನೆ ಕೊಡಲ್ಲ. ನುಡಿದಂತೆ ನಡೆದ ಸರ್ಕಾರಕ್ಕೆ ಜನ ಬೆಂಬಲ ಕೇಳುತ್ತಿದ್ದಾರೆ ಎಂದು ಮಧು ಬಂಗಾರಪ್ಪ ತಿಳಿಸಿದರು.
Author: AIN Author
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ ದಿಕ್ಕು ದೆಸೆ ಇಲ್ಲದೆ ಓಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯ ಸಿಎಂ ಸಿದ್ದರಾಮಯ್ಯನವರು ಬೇರೆ.. ಈಗಿರುವ ಸಿಎಂ ಸಿದ್ದರಾಮಯ್ಯನವರೇ ಬೇರೆ ಎಂದು ಕುಟುಕಿದರು. Gruha Lakshmi Scheme: ಅರ್ಜಿ ಸಲ್ಲಿಸಿದ್ರೂ ಇನ್ನೂ ಹಣ ಬಂದಿಲ್ಲವೇ : ಹೀಗೆ ಮಾಡಿ ಖಂಡಿತಾ ಬರುತ್ತೆ ನೋಡಿ! ಸಿದ್ದರಾಮಯ್ಯನವರಿಗೆ ಆಡಳಿತದಲ್ಲಿ ಹಿಡಿತ ಇಲ್ಲ. ಮೊನ್ನೆ ರಾಜ್ಯ ಬಜೆಟ್ ಮಂಡಿಸಿದಾಗಲೂ ನೋಡಿದ್ದೇವೆ. ಅದು ಅವರ ಬಜೆಟ್ ಅಲ್ಲ, ಡೂಪ್ಲಿಕೇಟ್ ಬಜೆಟ್. ಅಧಿಕಾರಿಗಳು ಬೇಕಾಬಿಟ್ಟಿ ಆದೇಶನ ಚೇಂಜ್ ಮಾಡುತ್ತಿದ್ದಾರೆ. ಮಂತ್ರಿಗಳನ್ನ ಕೇಳಲ್ಲ, ಮುಖ್ಯಮಂತ್ರಿಗಳನ್ನ ಕೇಳಲ್ಲ ಎಂದು ಕಿಡಿಕಾರಿದರು. ಸರ್ಕಾರಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಸರ್ಕಾರಕ್ಕೆ ಅಧಿಕಾರಿಗಳಿಂದ ಕವಡೆ ಕಾಸಿನ ಕಿಮ್ಮತ್ತಿಲ್ಲ. ಇಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎನ್ನುವುದಲ್ಲ ವಿಚಾರ. ಇಲ್ಲಿ ಬರುವಾಗ ಭಕ್ತಿಯಿಂದ, ಪವಿತ್ರತೆಯಿಂದ ಬಾ ಎಂದು ಹೇಳೋದು. ನೀವು ಧೈರ್ಯದಿಂದ ಪ್ರಶ್ನೆ ಮಾಡಬೇಕಾಗಿರುವುದು ಮೇಷ್ಟ್ರ ಬಳಿ. ಸರಿಯಾಗಿ ಊಟ…
ಹುಬ್ಬಳ್ಳಿ: ಎರಡು ದಿನ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯ ಕಾರ್ಯಕಾರಿಣಿಯಲ್ಲಿ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಸಂಘಟನಾತ್ಮಕವಾಗಿ ಹಲವು ವಿಷಯಗಳು ಚರ್ಚೆಯಾದವು. ಆದರೆ, ಟಿಕೆಟ್ ಹಂಚಿಕೆ ವಿಚಾರವಾಗಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರು ಸ್ಪಷ್ಟಪಡಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯನ್ನು ಯಾವ ರೀತಿಯಾಗಿ ಎದುರಿಸಬೇಕು. ಸಂಘಟನೆಯನ್ನು ಹೇಗೆ ಮಾಡಬೇಕು. ಕಾರ್ಯಕರ್ತರು ಯಾವ ರೀತಿ ಕೆಲಸ ಮಾಡಬೇಕು ಎಂಬುದರ ಬಗ್ಗೆ ಸುದೀರ್ಘವಾಗಿ ಚರ್ಚೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ, ರಾಜನ್ನಾಥ್ ಸಿಂಗ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಕಾರ್ಯಕರ್ತರಿಗೆ ಸಂಘಟನಾತ್ಮಕವಾಗಿ ಮಾರ್ಗದರ್ಶನ ನೀಡಿದರು ಎಂದು ತಿಳಿಸಿದರು. ಕಾರ್ಯಕರ್ತರಲ್ಲಿ ಸಾಕಷ್ಟು ಹುರುಪಿದೆ. ಬಿಜೆಪಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ ಮುತ್ತು ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಕೂಡ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಮಲನಾಥ್ ಹಾಗೂ ಅವರ ಪುತ್ರ ಕೂಡ ಕಾಂಗ್ರೆಸ್ ಗೆ ವಿದಾಯ ಹೇಳುತ್ತಿದ್ದಾರೆ. ಇಂಡಿಯಾ ಒಕ್ಕೂಟ ಛಿದ್ರವಾಗಿದೆ. ಹೀಗಾಗಿ…
ಧಾರವಾಡ: ಇಡೀ ರಾಜ್ಯದಲ್ಲಿ ತೀವ್ರತರವಾದ ಬರಗಾಲ ಆವರಿಸಿದೆ. ಸದ್ಯ ಬೇಸಿಗೆ ಆರಂಭವಾಗುತ್ತಿ ರುವುದರಿಂದ ರೈತರು ಮೇವಿಗಾಗಿ ಪರದಾಡುವಂತಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಧಾರವಾಡ ಜಿಲ್ಲೆಯಲ್ಲಿ ಕಡಿಮೆ ಪ್ರಮಾಣದಲ್ಲಿ ಮೇವು ದಾಸ್ತಾನು ಇದೆ. ಮೇವಿನ ತೊಂದರೆ ಉಂಟಾಗದಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲು ಈಗ ಮುಂದಾಗಿದೆ. ಈ ನಿಟ್ಟಿನಲ್ಲಿಂದು ಧಾರವಾಡ ತಾಲೂಕಿನ ಮಾದನಭಾವಿ ಗ್ರಾಮದಲ್ಲಿರುವ ಸರ್ಕಾರಿ ಗೋಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಗೋಶಾಲೆಯಲ್ಲಿರುವ ಜಾನುವಾರುಗಳು ಮತ್ತು ಮೇವಿನ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ, ಮಾದನಭಾವಿ ಗ್ರಾಮದಲ್ಲಿರುವ ಸರ್ಕಾರಿ ಗೋಶಾಲೆ 100 ಜಾನುವಾರುಗಳನ್ನು ಜೋಪಾನ ಮಾಡುವಷ್ಟು ಸಾಮರ್ಥ್ಯ ಹೊಂದಿದೆ. ಆದರೆ, ವಿಶಾಲವಾದ ಜಾಗ ಹೊಂದಿರುವ ಈ ಗೋಶಾಲೆಯಲ್ಲಿ 500ರವರೆಗೂ ಜಾನುವಾರುಗಳನ್ನು ಜೋಪಾನ ಮಾಡಬಹುದಾಗಿದೆ. ಮೇವಿನ ಕೊರತೆಯುಂಟಾದಲ್ಲಿ ಈ ಗೋಶಾಲೆ ರೈತರಿಗೆ ಅನುಕೂಲ ವಾಗಲಿದೆ. ಧಾರವಾಡ ಜಿಲ್ಲೆಯಲ್ಲಿ 12 ವಾರಕ್ಕಾಗುವಷ್ಟು ಮೇವು ದಾಸ್ತಾನು ಇದ್ದು, ಶೀಘ್ರವಾಗಿ ಹುಬ್ಬಳ್ಳಿ ತಾಲೂಕಿನ ಶೆರೆವಾಡ ಮತ್ತು…
ಚಿತ್ರದುರ್ಗ: ದೇಶವನ್ನು ಹೊಡೆಯುವ ಪ್ರಯತ್ನವನ್ನು ಕಾಂಗ್ರೆಸ್ ನಡೆಸುತ್ತಿದೆ. ರಾಹುಲ್ ಗಾಂಧಿ ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಆಹ್ವಾನವಿರಲಿಲ್ಲ ಎಂದು ನೀಡಿರುವ ಹೇಳಿಕೆ ತುಂಬಾ ಬೇಸರವಾಗಿದ್ದು, ದೇಶದ ಜನತೆ ಕ್ಷಮೆ ಕೇಳಬೇಕೆಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಒತ್ತಾಯಿಸಿದರು. ಅವರು ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದರು. ರಾಮ ಮಂದಿರದ ಕಾರ್ಯಕ್ರಮ ಇಡೀದೇಶವನ್ನು ಒಂದು ಗೂಡಿಸುವ ಕಾರ್ಯಕ್ರಮ. ಎಲ್ಲಾ ಸಮಾಜದ ಹಿಂದೂ ಶ್ರೀಗಳು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು, ಹೋಗಿದ್ದರು.ಇಂತಹ ಸುಳ್ಳು ಹೇಳಿಕೆ ನೀಡಿರುವ ರಾಹುಲ್ ಗಾಂಧಿ ದೇಶದ ಜನತೆಯ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು. ಇನ್ನು ನಮ್ಮ ಸರ್ಕಾರದಲ್ಲಿ ಭ್ರಷ್ಠಾಚಾರ ಇಲ್ಲ ಎಂದುನಾನು ಹೇಳಲ್ಲ, ಇದೆ ಎಂದು ಸಿಎಂ ಹೇಳಿದ್ದಾರೆ. ಆದ್ದರಿಂದ ಹಿಂದಯೇ ವರ್ಗಾವಣೆಯಲ್ಲಿ ಆಗಿದ್ದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸುವಂತೆ ಒತ್ತಾಯಿಸಿದ್ದೆ ಆದರೆ ಸಿಎಂ ರಚಿಸಲಿಲ್ಲ. ರಾಮಂಮದಿರದ ಬಗ್ಗೆ ಮಾತಾಡುವ ಯೋಗ್ಯತೆಯೇ ಸಂತೋಷ್ ಲಾಡ್ ಗಿಲ್ಲ. ವಸತಿ ಶಾಲೆಗಳಲ್ಲಿ ಕೈಗಿ ಮುಗಿದು ಬಾ ಜ್ಞಾನ ದೇಗುಲಕೆ ಎಂಬ ಬರಹ ಬದಲಾಯಿಸಿದ್ದು, ಸರ್ಕಾರದ…
ಬೆಂಗಳೂರು ಗ್ರಾಮಾಂತರ: ಮದುವೆ ಮುಗಿಸಿಕೊಂಡು ಮನೆಗೆ ಹಿಂದಿರುವಾಗ ಅಪಘಾತ ಸಂಭವಿಸಿ ಯುವಕನೊಬ್ಬ ಮಸಣ ಸೇರಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಮೇಸ್ಟ್ರು ಮನೆ ಕ್ರಾಸ್ ಸಮೀಪ ಈ ದುರ್ಘಟನೆ ಸಂಭವಿಸಿದೆ. ಪವನ್ (26) ಅಪಘಾತದಲ್ಲಿ ಸಾವನ್ನಪ್ಪಿದ ಯುವಕ. Gruha Lakshmi Scheme: ಅರ್ಜಿ ಸಲ್ಲಿಸಿದ್ರೂ ಇನ್ನೂ ಹಣ ಬಂದಿಲ್ಲವೇ : ಹೀಗೆ ಮಾಡಿ ಖಂಡಿತಾ ಬರುತ್ತೆ ನೋಡಿ! ಮೃತ ಯುವಕ ಹೊಸಕೋಟೆ ತಾಲೂಕಿನ ಇಟ್ಟಸಂದ್ರ ಗ್ರಾಮದ ನಿವಾಸಿ. ಮದುವೆ ಮುಗಿಸಿ ವಾಪಾಸಾಗುವಾಗ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪವನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ, ಪುತ್ರ ಪವನ್ನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು: ಮೈತ್ರಿ ಇರುತ್ತೋ, ಮೈತ್ರಿ ಇರಲ್ವೋ.. ಎಲ್ಲಾ ಸಂದರ್ಭದಲ್ಲೂ ಹಾಸನ ಜಿಲ್ಲೆಯ ಜನ ಜನತಾದಳವನ್ನು ಗೆಲ್ಲಿಸಿಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಜನ ಎಂದೂ ನಮ್ಮನ್ನು ಕೈಬಿಟ್ಟಿಲ್ಲ. ಇಲ್ಲಿ ಜನತಾದಳದ ಅಭಿಮಾನಿಗಳಿದ್ದಾರೆ, ಅವರ ಶ್ರಮ ಇದೆ ಎಂದು ತಿಳಿಸಿದರು. Gruha Lakshmi Scheme: ಅರ್ಜಿ ಸಲ್ಲಿಸಿದ್ರೂ ಇನ್ನೂ ಹಣ ಬಂದಿಲ್ಲವೇ : ಹೀಗೆ ಮಾಡಿ ಖಂಡಿತಾ ಬರುತ್ತೆ ನೋಡಿ! ಕರ್ನಾಟಕದಲ್ಲಿ ಹಾಸನ ಜಿಲ್ಲೆ ಜೆಡಿಎಸ್ನ ಭದ್ರಕೋಟೆ. ಈ ಚುನಾವಣೆಯಲ್ಲಿ ಜನತದಾಳದ ಅಭ್ಯರ್ಥಿಯನ್ನು ಗೆಲ್ಲಿಸುವ ತೀರ್ಮಾ ಮಾಡ್ತಾರೆ ಎಂಬ ವಿಶ್ವಾಸ ನನಗಿದೆ. ಲೆಕ್ಕಕ್ಕೆ ಯಾರೂ ಇಲ್ಲಾ ಅಂತ ಹೇಳಲ್ಲ, ಯಾರ ಬಗ್ಗೆನೂ ದುರಂಹಕಾರದಿಂದ ಮಾತನಾಡಲ್ಲ. ಎಲ್ಲರೂ ಬೇಕು ನಮಗೆ. ಇವತ್ತಿನ ಏನು ಪರಿಸ್ಥಿತಿ ನಡೆಯುತ್ತಿದೆ ಎನ್ನುವುದನ್ನು ನೋಡಿ ಅವರು ಬದಲಾವಣೆ ಮಾಡಿಕೊಳ್ಳುವುದು ಒಳ್ಳೆಯದು ಎಂದು ಹೇಳಿದರು. ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಮೈತ್ರಿ ಬಗ್ಗೆ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ಅವರ ಬಗ್ಗೆ…
ಗದಗ: ನೂತನ ವಧು ವರರಿಂದ ಛತ್ರಪತಿ ಶಿವಾಜಿ ಮಹರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸೋ ಮೂಲಕ ವಿನೂತನವಾಗಿ ಶಿವಾಜಿ ಜಯಂತಿ ಆಚರಣೆ ಮಾಡಿದ್ದಾರೆ. ಗದಗ ನಗರದ ಶ್ರೀ ವೀರನಾರಾಯಣ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿಶಂಕರ ಮತ್ತು ಸಾಕ್ಷಿ ಮದುವೆ ಸಂಭ್ರಮವಿತ್ತು. ಈ ನಡುವೆ ಮದುವೆ ಮಂಟಪದಲ್ಲಿ ಶಿವಾಜಿ ಜಯಂತಿ ಆಚರಣೆ ಮಾಡಿದ್ದಾರೆ.
ಬೆಂಗಳೂರು: 2020ರಲ್ಲಿ ರೈತರು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಿದ್ದಾಗ ಬೆಂಬಲ ಬೆಲೆ ಕೊಡುವುದಾಗಿ, ರೈತರ ಬೇಡಿಕೆ ಈಡೇರಿಸುವುದಾಗಿ ಮಾತು ಕೊಟ್ಟಿದ್ದ ಕೇಂದ್ರ ಸರ್ಕಾರ ಇಂದು ಮಾತು ತಪ್ಪಿದ್ದು, ರೈತರ ಹೋರಾಟ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ರೈತರ ಹೋರಾಟವನ್ನು ಬೆಂಬಲಿಸಿ, ಕೇಂದ್ರ ಸರ್ಕಾರದ ದಮನಕಾರಿ ನೀತಿ ಖಂಡಿಸಿ ಆಮ್ ಆದ್ಮಿ ಪಾರ್ಟಿ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮೋಹನ್ ದಾಸರಿ, ಇಡೀ ದೇಶದ ರೈತರ ಅನುಕೂಲಕ್ಕಾಗಿ ಪಂಜಾಬ್ ಮತ್ತು ಹರ್ಯಾಣ ಗಡಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕನಿಷ್ಠ ಬೆಂಬಲ ಬೆಲೆಗಾಗಿ ಅವರು ಹೋರಾಟ ಮಾಡುತ್ತಿದ್ದಾರೆ. ಸ್ವಾಮಿನಾಥನ್ ತಮ್ಮ ವರದಿಯಲ್ಲಿ ಹೇಳಿರುವಂತೆ ಕನಿಷ್ಠ ಬೆಂಬಲ ಬೆಲೆ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಕೊಟ್ಟ ಕೇಂದ್ರ ಸರ್ಕಾರ, ಅವರು ಕೊಟ್ಟಿರುವ ವರದಿಯನ್ನು ಈಡೇರಿಸಲು ಮುಂದಾಗಿಲ್ಲ ಎಂದರು. ಸ್ವಾಮಿನಾಥನ್ ಅವರ ವರದಿ…
ಗದಗ: ಗದಗ ತೋಂಟದಾರ್ಯ ಮಠ ಹಾಗೂ ಶಿರಹಟ್ಟಿ ಫಕೀರೇಶ್ವರ ಮಠದ (Shirahatti ನಡುವೆ ಸಂಘರ್ಷ ಉಂಟಾಗಿದ್ದು ಒಂದು ಮಠದ ಆಚರಣೆ ವಿರುದ್ಧ ಮತ್ತೊಂದು ಮಠ ವಿರೋಧ ವ್ಯಕ್ತಪಡಿಸಿದೆ. ತೋಂಟದ ಸಿದ್ದಲಿಂಗ ಶ್ರೀಗಳ ಜಯಂತಿಯನ್ನ ಭಾವೈಕ್ಯತಾ ದಿನವನ್ನಾಗಿ ಆಚರಿಸುತ್ತಿರುವುದಕ್ಕೆ ಶುರಹಟ್ಟಿ ಫಕೀರೇಶ್ವರ ಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಗದಗದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ದಿಂಗಾಲೇಶ್ವರ ಶ್ರೀಗಳು, ಭಾವೈಕ್ಯತಾ ದಿನ, ಭಾವೈಕ್ಯತಾ ಯಾತ್ರೆ ಪದ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಫೆಬ್ರವರಿ 21ನೇ ತಾರೀಖು ಸಿದ್ದಲಿಂಗ ಸ್ವಾಮೀಜಿ 75ನೇ ಜಯಂತಿಯನ್ನು ಭಾವೈಕ್ಯತಾ ದಿನವನ್ನಾಗಿ ಆಚರಣೆ ಮಾಡಲು ತಯಾರಿ ನಡೆದಿದ್ದು ಭಾವೈಕ್ಯತಾ ದಿನ ಆಚರಿಸಿದರೆ ಶಿರಹಟ್ಟಿ ಮಠದ ಭಕ್ತರು ಕರಾಳ ದಿನ ಆಚರಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. https://ainlivenews.com/people-with-high-bp-must-read-this-useful-information-once/ ಫೆ.21ರಂದು ನಮ್ಮ ಮಠಕ್ಕೆ, ಭಕ್ತರ ಪಾಲಿಗೆ ಕರಾಳ ದಿನ ಎಂದು ಗದಗ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಫಕೀರ ದಿಂಗಾಲೇಶ್ವರ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ. ಭಾವೈಕ್ಯತೆಯ ಪರಂಪರೆ ಶಿರಹಟ್ಟಿಯ ಫಕೀರೇಶ್ವರ ಮಠದ್ದಾಗಿದೆ. ಲಿಂಗೈಕ್ಯ ಡಾ. ಸಿದ್ದಲಿಂಗ…