ಫೆಬ್ರವರಿ 23 ರಿಂದ ಫೆಬ್ರವರಿ 27ರ ವರೆಗೆ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯ ನಡೆಯಲಿದೆ. ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯ ರಾಂಚಿಯ ಜೆಎಸ್ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಭಾರತ- ಇಂಗ್ಲೆಂಡ್ ಟಿಸ್ಟ್ ಸರಣಿಯ ನಾಲ್ಕನೇ ಪಂದ್ಯದ ಲೈವ್ ಸ್ಟ್ರೀಮ್ JioCinema ಅಪ್ಲಿಕೇಶನ್ನಲ್ಲಿ ಲಭ್ಯವಿರುತ್ತದೆ. ಸ್ಪೋರ್ಟ್ಸ್ 18 ನೆಟ್ವರ್ಕ್ನಲ್ಲಿಯೂ ಪಂದ್ಯವನ್ನು ಲೈವ್ ಆಗಿ ವೀಕ್ಷಿಸಬಹುದು. ಭಾರತ ಹಾಗೂ ಇಂಗ್ಲೆಂಡ್ ಟಿಸ್ಟ್ ಸರಣಿಯ ನಾಲ್ಕನೇ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಬೆಳಗ್ಗೆ 9:30ಕ್ಕೆ ಆರಂಭವಾಗಲಿದೆ. ಇನ್ನೂ ರಾಜ್ಕೋಟ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗುಬಡಿದು ನಾಲ್ಕನೇ ದಿನದಲ್ಲೇ ಗೆದ್ದುಕೊಂಡಿದೆ. ಪಂದ್ಯ ಗೆಲ್ಲಲು ಟೀಮ್ ಇಂಡಿಯಾ (Team India) ಇಂಗ್ಲೆಂಡ್ಗೆ 557 ರನ್ಗಳ ಕಠಿಣ ಗುರಿ ನೀಡಿತ್ತು. ಆದರೆ, ಭಾರತದ ಬೌಲಿಂಗ್ ಬಿರುಗಾಳಿಗೆ ತತ್ತರಿಸಿದ ಇಂಗ್ಲೆಂಡ್ 122 ರನ್ಗಳಿಗೆ ಆಲೌಟ್ ಆಯಿತು. ರೋಹಿತ್ ಪಡೆ 434 ರನ್ಗಳ ದಾಖಲೆಯ ಜಯ ಸಾಧಿಸಿತು. ಬ್ಯಾಟಿಂಗ್ನಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ಸರ್ಫರಾಜ್ ಖಾನ್ ಸಂಚಲನ ಮೂಡಿಸಿದರೆ, ಬೌಲಿಂಗ್ನಲ್ಲಿ ರವೀಂದ್ರ…
Author: AIN Author
ಹೃದಯಾಘಾತದ ಚಿಹ್ನೆಗಳನ್ನು ಪಾದಗಳಿಂದ ಹೇಗೆ ಗುರುತಿಸುವುದು, ಹೃದಯಾಘಾತ ಮತ್ತು ಕಾಲು ನೋವಿನ ನಡುವಿನ ಸಂಬಂಧವೇನು? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಕಳಪೆ ಜೀವನಶೈಲಿ, ಒತ್ತಡ ಹಾಗೂ ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ಹೃದಯಾಘಾತದಂತಹ ಗಂಭೀರ ಸಮಸ್ಯೆಗಳು ಜನರನ್ನು ಕಾಡುತ್ತಿವೆ. ದೇಹದಲ್ಲಿ ಕಂಡುಬರುವ ಹೆಚ್ಚಿನ ರೋಗಲಕ್ಷಣಗಳು ನಿಮಗೆ ಅನೇಕ ರೋಗಗಳ ಬಗ್ಗೆ ಅರಿವು ಮೂಡಿಸಬಹುದು. ಅದೇ ರೀತಿ ಹೃದಯಾಘಾತದ ಕೆಲವು ಲಕ್ಷಣಗಳೂ ಇವೆ. ಆದರೆ ಕೆಲವೊಮ್ಮೆ ತಿಳುವಳಿಕೆಯ ಕೊರತೆಯಿಂದ ಇಂತಹ ವಿಷಯಗಳು ನಮಗೆ ಅರ್ಥವಾಗುವುದಿಲ್ಲ. ಆದರೆ, ಸಣ್ಣಪುಟ್ಟ ಸಮಸ್ಯೆಗಳನ್ನೂ ನಿರ್ಲಕ್ಷಿಸಬಾರದು ಎನ್ನುತ್ತಾರೆ ಆರೋಗ್ಯ ತಜ್ಞರು. ಹೃದಯಾಘಾತ ಮತ್ತು ಕಾಲು ನೋವಿನ ನಡುವಿನ ಸಂಬಂಧವೇನು? ರಕ್ತವು ದೇಹದ ಮೂಲಕ ಹರಿಯುವಾಗ, ಅದು ನಿಮ್ಮ ಕಾಲುಗಳ ಮೂಲಕ ಹಾದುಹೋಗುತ್ತದೆ ಮತ್ತು ಹೃದಯವನ್ನು ತಲುಪುತ್ತದೆ. ಆದ್ದರಿಂದ ನಿಮಗೆ ಯಾವುದೇ ಸಮಸ್ಯೆಗಳಿದ್ದರೆ, ನೋವು ಅನುಭವಿಸಿದರೆ, ಅದು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯಾಗಿರಬಹುದು. ಹೃದ್ರೋಗವು ಹೃದಯ ವೈಫಲ್ಯ ಮತ್ತು ರಕ್ತ ಹೆಪ್ಪುಗಟ್ಟುವಿಕೆಯನ್ನು ಸಹ ಒಳಗೊಂಡಿದೆ. ಇದರಲ್ಲಿ, ಕಾಲುಗಳಲ್ಲಿ ನೋವು ಅನುಭವಿಸಬಹುದು, ನಂತರ ಸಮಸ್ಯೆ ಹೃದ್ರೋಗದ…
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ (Paytm Payments Bank) ಫೆ.29 ರೊಳಗೆ ಎಲ್ಲಾ ಬಗೆಯ ಸೇವೆಗಳನ್ನು ಸ್ಥಗಿತಗೊಳಿಸಬೇಕು ಎಂದು ವಿಧಿಸಿದ್ದ ನಿರ್ಬಂಧವನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾ.15 ರವರೆಗೆ ವಿಸ್ತರಿಸಿದೆ. ಭಾರತದಲ್ಲೇ ಈ ಬಾರೀ IPL : ಊಹಾಪೋಹಗಳಿಗೆ ತೆರೆ ಎಳೆದ ಮುಖ್ಯಸ್ಥ ಅರುಣ್ ಧುಮಾಲ್ ಬಡ್ಡಿ, ಕ್ಯಾಶ್ಬ್ಯಾಕ್ಗಳು, ಪಾಲುದಾರ ಬ್ಯಾಂಕ್ಗಳಿಂದ ಸ್ವೀಪ್ ಅಥವಾ ಯಾವುದೇ ಸಮಯದಲ್ಲಿ ಕ್ರೆಡಿಟ್ ಮಾಡಬಹುದಾದ ಮರುಪಾವತಿಗಳನ್ನು ಹೊರತುಪಡಿಸಿ, ಮಾರ್ಚ್ 15 ರ ನಂತರ ಯಾವುದೇ ಗ್ರಾಹಕರ ಖಾತೆಗಳು, ಪ್ರಿಪೇಯ್ಡ್ ಉಪಕರಣಗಳು, ವ್ಯಾಲೆಟ್ಗಳು, ಫಾಸ್ಟ್ಟ್ಯಾಗ್ಗಳು, ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ಗಳು ಇತ್ಯಾದಿಗಳಲ್ಲಿ ಯಾವುದೇ ಹೆಚ್ಚಿನ ಠೇವಣಿ ಅಥವಾ ಕ್ರೆಡಿಟ್ ವಹಿವಾಟುಗಳು ಅಥವಾ ಟಾಪ್-ಅಪ್ಗಳನ್ನು ಅನುಮತಿಸಲಾಗುವುದಿಲ್ಲ ಎಂದು ಆರ್ಬಿಐ ಹೇಳಿದೆ ಪರ್ಯಾಯ ವ್ಯವಸ್ಥೆ ಮಾಡಲು ಸಮಯ ಬೇಕಾಗಬಹುದು. ಗ್ರಾಹಕರು ಮತ್ತು ವ್ಯಾಪಾರಿಗಳ ಹಿತದೃಷ್ಟಿಯಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ನಲ್ಲಿ ಗ್ರಾಹಕರು ಪದೇ ಪದೇ ಕೇಳಲಾಗಿರುವ ಪ್ರಶ್ನೆಗಳಿಗೆ ಆರ್ಬಿಐ ಉತ್ತರವನ್ನೂ ಬಿಡುಗಡೆ ಮಾಡಿದೆ.
ಹುಬ್ಬಳ್ಳಿ:- ದೇಶದಲ್ಲಿ ಹತ್ತು ವರ್ಷದಿಂದ ಸರ್ವಾಧಿಕಾರಿ ಧೋರಣೆ ನಡೆಯುತ್ತಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ದೇಶದಲ್ಲಿ ಹತ್ತು ವರ್ಷದಿಂದ ಸರ್ವಾಧಿಕಾರಿ ಧೋರಣೆ ನಡೆಯುತ್ತಿದೆ. ರಾಮ ಮಂದಿರದ ಹೆಸರಿನಲ್ಲಿ ಯಾಕೆ ಮತ ಕೇಳುತ್ತೀರಿ ಎಂದು ಪ್ರಶ್ನಿಸಿದರು. ಅಲ್ಲದೆ, ಕಳೆದ 10 ವರ್ಷದಲ್ಲಿ ಮೋದಿ ಸರ್ಕಾರ ಏನು ಕೆಲಸ ಮಾಡಿದೆ? ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ದರ ಕಡಿಮೆ ಆಗಿದೆಯಾ? ಬಡವರಿಗೆ ಅನುಕೂಲವಾಗುವ ಒಂದು ಕಾರ್ಯಕ್ರಮ ಮಾಡಿಲ್ಲ. ದೇಶ ಹಳ್ಳ ಹಿಡಿದು ಹೋಗಿದೆ ಎಂದರು. ಅಧಿಕಾರ ಇದೆ ಎಂದು ದುರುಪಯೋಗ ಮಾಡಬಾರದು. ನೀವ ಪ್ರಭಾವಿಯಾಗಿದ್ದರೆ ಟಿವಿ ಆಫ್ ಮಾಡಿ ಬನ್ನಿ. ರಾಮ ರಹೀಮ್, ಪಾಕಿಸ್ತಾನ ಅಪಘಾನಿಸ್ತಾನ ಹೆಸರು ಮೂಲಕ ಜನರನ್ನು ಹುಚ್ಚರನ್ನಾಗಿ ಮಾಡುತ್ತಾರೆ. ಕಳೆದ ಚುನಾವಣೆಯಲ್ಲಿ ಪುಲ್ವಾಮಾ ದಾಳಿ ಬಗ್ಗೆ ಮಾತಾಡಿದರು. ಹಾಗಿದ್ದರೆ RDX ಹೇಗೆ ಬಂತು? ದೇಶದಲ್ಲಿ ಈ ತರಹ ಚರ್ಚೆಗಳೇ ಆಗತಿಲ್ಲ ಎಂದರು. ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ಇಂದಿರಾ ಗಾಂಧಿ ಮೂರನೇ…
ನವದೆಹಲಿ: ದೇಶದ ಜನಪ್ರಿಯ ಸಿಎಂಗಳ ಪೈಕಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎರಡನೇ ಸ್ಥಾನದಲ್ಲಿದ್ದಾರೆ. ಇದು ತಮ್ಮ ರಾಜ್ಯಗಳಲ್ಲಿನ ನಾಯಕರ ಜನಪ್ರಿಯತೆಯನ್ನು ನಿರ್ಣಯಿಸುವ ಉದ್ದೇಶದಿಂದ ಇತ್ತೀಚೆಗೆ ಮಾಧ್ಯಮವೊಂದು ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಹಾಗಿದ್ರೆ ಮೊದಲನೇ ಸಿಎಂ ಯಾರು ಎಂಬುದನ್ನು ನೋಡೋಣ. ನವೀನ್ ಪಟ್ನಾಯಕ್ ಅತ್ಯಂತ ಜನಪ್ರಿಯ ಸಿಎಂ: ಹೌದು ಈ ಸಮೀಕ್ಷೆಯ ಪ್ರಕಾರ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು 52.7% ರೇಟಿಂಗ್ನೊಂದಿಗೆ ಜನಪ್ರಿಯ ಸಿಎಂ ಎನಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೀನ್ ಪಟ್ನಾಯಕ್ ಅವರು ಮೊದಲನೇ ಸ್ಥಾನದಲ್ಲಿದ್ದಾರೆ. https://ainlivenews.com/do-not-close-the-washing-machine-immediately-after-washing-clothes/ ಎರಡನೇ ಸ್ಥಾನದಲ್ಲಿ ಯೋಗಿ: ಯೋಗಿ ಆದಿತ್ಯನಾಥ್ (Yogi Adityanath) ಅವರು 51.3% ಜನಪ್ರಿಯತೆಯೊಂದಿಗೆ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹೊಸ ಮಾದರಿಯ ಆಡಳಿತವೇ ಯೋಗಿ ಆದಿತ್ಯನಾಥ್ ಅವರ ಜನಪ್ರಿಯತೆಗೆ ಕಾರಣವೆಂದು ಹೇಳಲಾಗುತ್ತದೆ. ಇದರಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಅತ್ಯಂತ ಮಹತ್ವದ್ದಾಗಿದೆ. ಸಮೀಕ್ಷೆಯಲ್ಲಿ ಶೇ.48.6 ರೇಟಿಂಗ್ ಪಡೆದಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himant Biswa Sharma) ಮೂರನೇ ಸ್ಥಾನದಲ್ಲಿದ್ದರೆ, ಶೇ.42.6 ರೇಟಿಂಗ್ ಪಡೆದಿರುವ…
ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ನೊಂದಾಯಿಸಿಯೂ ಹಣ ಸಿಗದೇ ಇದ್ದ ರೈತನ್ನು ತಲುಪಲು ಅಭಿಯಾನ ಆರಂಭಿಸಿದೆ. ಫಲಾನುಭವಿ ರೈತರಿಗೆ ವರ್ಷಕ್ಕೆ 6,000 ರೂ ಧನಸಹಾಯ ಸಿಗುತ್ತದೆ. 9 ಕೋಟಿಗೂ ಹೆಚ್ಚು ಮಂದಿ ರೈತರು ಈ ಸ್ಕೀಮ್ಗೆ ನೊಂದಾಯಿತರಾಗಿದ್ದು ಪ್ರತೀ ನಾಲ್ಕು ತಿಂಗಳಿಗೆ 2,000 ರೂ ಹಣವನ್ನು ತಮ್ಮ ಅಕೌಂಟ್ಗಳಲ್ಲಿ ಪಡೆಯುತ್ತಾರೆ. 2019ರಲ್ಲಿ ಆರಂಭಗೊಂಡ ಈ ಯೋಜನೆಯಲ್ಲಿ ಈವರೆಗೆ 15 ಕಂತುಗಳ ಹಣವು ರೈತರ ಖಾತೆಗಳಿಗೆ ವರ್ಗಾವಣೆ ಆಗಿದೆ. 16ನೇ ಕಂತಿನ ಹಣ ಈ ತಿಂಗಳು ಅಥವಾ ಮಾರ್ಚ್ ತಿಂಗಳಲ್ಲಿ ಬರುವ ಸಾಧ್ಯತೆ ಇದೆ. ಆದರೆ, ಯೋಜನೆಯಲ್ಲಿ ತಮ್ಮ ಹೆಸರು ನೊಂದಾಯಿಸಲಾಗಿದ್ದರೂ ಖಾತೆಗೆ ಹಣ ಬಂದಿಲ್ಲ ಎಂದು ಹಲವಾರು ರೈತರು ದೂರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ಈ ಸಮಸ್ಯೆಗೆ ಪರಿಹಾರ ಒದಗಿಸಲು ಸರ್ಕಾರ ಅಭಿಯಾನ ಆರಂಭಿಸಿದೆ. ಹತ್ತು ದಿನಗಳ ಕಾಲ ಕೃಷಿ ಸಚಿವಾಲಯವು ಈ ಅಭಿಯಾನ ಕೈಗೊಂಡಿದೆ. ದೇಶಾದ್ಯಂತ ವಿವಿಧ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಗಳು ಈ ಕಾರ್ಯದಲ್ಲಿ…
ಸಾಕಷ್ಟು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಕೂಡ ಮೊದಲನೇ ಕಂತಿನ ಹಣವೇ ಬಂದಿಲ್ಲ. ಹಾಗೂ ಬಹಳಷ್ಟು ಜನರಿಗೆ ಎರಡನೇ ಮತ್ತು ಮೂರನೇ ಕಂತಿನ ಹಣ ಪೆಂಡಿಂಗ್ ಇದೆ. ಈ ರೀತಿಯ ಸಮಸ್ಯೆ ಇರುವ ಎಲ್ಲಾ ಫಲಾನುಭವಿಗಳಿಗೆ ಸರ್ಕಾರ ಪೆಂಡಿಂಗ್ ಇರುವ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗದಿರಲು ಕಾರಣ: ಇಲ್ಲಿಯವರೆಗೂ ಬಹಳಷ್ಟು ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಎಲ್ಲ ಕಂತಿನ ಹಣ ಅವರ ಬ್ಯಾಂಕ್ ಖಾತೆ(Bank account)ಗೆ ಜಮಾ ಆಗಿದೆ. ಹಾಗೆಯೇ ಇನ್ನು ಅಲ್ಪ ಸಂಖ್ಯೆಯ ಮಹಿಳೆಯರ ಖಾತೆಗೆ ಕೆಲವು ಕಂತುಗಳ ಹಣ ಜಮಾ ಆಗಿದ್ದು ಇನ್ನು ಹಲವು ಕಂತುಗಳು ( Installments ) ಬರಲು ಬಾಕಿ ಇವೆ. ಆದರೆ ಇನ್ನೂ ಹಲವಾರು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲ. ಕಾರಣ ನೋಡುವುದಾದರೆ ಎಷ್ಟೋ ಮಹಿಳೆಯರ ಖಾತೆಗೆ ಕೆ ವೈ ಸಿ ( KYC )…
ಮೊಸರನ್ನು ಸಾಮಾನ್ಯವಾಗಿ ಎಲ್ಲಾ ಋತುವಿನಲ್ಲೂ ಸೇವಿಸಬಹುದಾದ ಆಹಾರವಾಗಿದೆ. ಇದರಲ್ಲಿ ಪ್ರೊಟೀನ್, ಕ್ಯಾಲ್ಸಿಯಂ, ಫೋಲಿಕ್ ಆಸಿಡ್, ಐರನ್, ಬಿ ವಿಟಮಿನ್ (ಪ್ರೋಟೀನ್, ಕ್ಯಾಲ್ಸಿಯಂ, ಫೋಲಿಕ್ ಆಸಿಡ್, ಐರನ್, ಬಿ ವಿಟಮಿನ್) ಹೇರಳವಾಗಿದೆ. ಪ್ರತಿನಿತ್ಯ ಮೊಸರು ಸೇವಿಸುವುದರಿಂದ ಹೊಟ್ಟೆಯ ಸಮಸ್ಯೆಗಳು ಬರುವುದಿಲ್ಲ.ಆದರೆ ಬೆಳಗ್ಗೆ ಅಥವಾ ರಾತ್ರಿ ಸೇವಿಸುವುದನ್ನು ತಪ್ಪಿಸಬೇಕು. ಏಕೆಂದರೆ ಹೀಗೆ ಮಾಡುವುದರಿಂದ ನೆಗಡಿ ಮತ್ತು ಇತರ ಸಮಸ್ಯೆಗಳು ಬರಬಹುದು. ಆದರೆ ಯಾವುದೋ ಕಾರಣದಿಂದ ನಿಮಗೆ ಮಧ್ಯಾಹ್ನ ಮೊಸರು ಸೇವಿಸಲು ಸಾಧ್ಯವಾಗದಿದ್ದರೆ, ನೀವು ಸಂಜೆ ಮೊಸರು ತಿನ್ನಬಹುದು, ಮತ್ತೊಂದೆಡೆ, ಸಂಜೆ ಮೊಸರು ಸೇವಿಸುವುದರಿಂದ ನೀವು ಅನೇಕ ಪ್ರಯೋಜನಗಳನ್ನು ಪಡೆಯುತ್ತೀರಿ. ರಾತ್ರಿ ಮೊಸರು ತಿನ್ನುವುದರಿಂದಾಗುವ ಪ್ರಯೋಜನಗಳು – ಹೊಟ್ಟೆ ಆರೋಗ್ಯವಾಗಿರುತ್ತದೆ: ಅತ್ಯುತ್ತಮವಾದ ಪ್ರೋಬಯಾಟಿಕ್ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ, ಇದು ನಿಮ್ಮ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ, ಆದ್ದರಿಂದ ನೀವು ಸಂಜೆಯ ಸಮಯದಲ್ಲಿ ನೀವು ಮೊಸರು ತಿಂದರೆ ನಿಮಗೆ ಹೊಟ್ಟೆಯ ಸಮಸ್ಯೆಗಳು ಬರುವುದಿಲ್ಲ. ಆದ್ದರಿಂದ ನೀವು ಸಂಜೆ ಮೊಸರು ಸೇವಿಸಬಹುದು. ತೂಕವು ನಿಯಂತ್ರಣದಲ್ಲಿರುತ್ತದೆ: ಕಡಿಮೆ ಕ್ಯಾಲೋರಿಗಳಿರುವುದರಿಂದ, ಇದು ನಿಮ್ಮ…
ಭಾರತ ಸೇರಿ ಬಹುತೇಕ ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಹೆಚ್ಚಳವಾಗಿದೆ. ಕೆಲವೆಡೆ ಏರಿಕೆ ಗಣನೀಯವಾಗಿ ಹೆಚ್ಚಿದೆ. ಭಾರತದಲ್ಲಿ ಗ್ರಾಮ್ಗೆ 10 ರೂನಷ್ಟು ದುಬಾರಿಯಾಗಿದೆ. ಆದರೆ, ಕಳೆದ 10 ದಿನಗಳ ಹಿಂದಿನ ಬೆಲೆಗಿಂತ ಕಡಿಮೆ ಇದೆ ಎನ್ನುವುದು ಚಿನ್ನ ಪ್ರಿಯರ ಸಮಾಧಾನ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 19ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,200 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,400 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ ಬೆಂಗಳೂರಿನಲ್ಲಿ…
“PM Surya Ghar Yojana” ಈ ಯೋಜನೆಯಡಿ ಸರ್ಕಾರ ಜನರಿಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲು ಯೋಜನೆ ರೂಪಿಸುತ್ತಿದೆ, ಇದಕ್ಕಾಗಿ ನಿಜವಾದ ಸಬ್ಸಿಡಿಯನ್ನು ನೀಡಲಾಗುವುದು ಅದನ್ನು ನೇರವಾಗಿ ಜನರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು ಎನ್ನಲಾಗಿದೆ. 75,000 ಕೋಟಿಗೂ ಹೆಚ್ಚು ಹೂಡಿಕೆಯೊಂದಿಗೆ ಈ ಯೋಜನೆಯು ಪ್ರತಿ ತಿಂಗಳು 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಅನ್ನು ಒದಗಿಸುವ ಮೂಲಕ 1 ಕೋಟಿ ಮನೆಗಳನ್ನು ಬೆಳಗಿಸುವ ಗುರಿಯನ್ನು ಹೊಂದಿದೆ. ಕಳೆದ ತಿಂಗಳು (ಜನವರಿ) ಪ್ರಧಾನಿ ಮೋದಿ ಅವರು ಪಿಎಂ ಸೂರ್ಯೋದಯ ಯೋಜನೆಯನ್ನು ಅನಾವರಣಗೊಳಿಸಿದರು. ಮನೆಗಳ ಮೇಲ್ಛಾವಣಿಯಲ್ಲಿ ಸೌರಫಲಕಗಳನ್ನು ಅಳವಡಿಸುವ ದೊಡ್ಡ ಯೋಜನೆ ಅದು. ಅದರ ಭಾಗವಾಗಿ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆ ಚಾಲನೆಗೆ ತರಲಾಗಿದೆ. ಒಂದು ಮನೆಗೆ ಪ್ರತೀ ತಿಂಗಳು 300 ಯೂನಿಟ್ಗಳಷ್ಟು ಉಚಿತ ವಿದ್ಯುತ್ ಒದಗಿಸುವ ಒಂದು ಯೋಜನೆ ಇದು. ಈ ರೀತಿ ದೇಶಾದ್ಯಂತ ಒಂದು ಕೋಟಿ ಮನೆಗಳಿಗೆ ಈ ಯೋಜನೆ ತಲುಪಿಸುವ ಗುರಿಯನ್ನು ಕೇಂದ್ರ ಸರ್ಕಾರ ಇಟ್ಟುಕೊಂಡಿದೆ. ಆರಂಭದಲ್ಲಿ…