ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಪಾಳಯದಲ್ಲಿ ಒಂದು ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾಯಿತು. ದೇಶಿ ಕ್ರಿಕೆಟ್ನಲ್ಲಿ ರನ್ ರಾಶಿಯನ್ನೇ ಗುಡ್ಡೆ ಟೀಂ ಇಂಡಿಯಾ ಬಾಗಿಲು ತಟ್ಟುತ್ತಿದ್ದ 26 ವರ್ಷದ ಪ್ರತಿಭಾನ್ವಿತ ಬ್ಯಾಟರ್ ಸರ್ಫರಾಜ್ ಖಾನ್ ಕೊನೆಗೂ ಭಾರತ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಜತೆಗೆ ವಿಕೆಟ್ ಕೀಪರ್ ಬ್ಯಾಟರ್ ಧೃವ್ ಜುರೆಲ್ ಕೂಡಾ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದರು. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಟಾಸ್ಗೂ ಮುನ್ನ ಭಾರತದ ದಿಗ್ಗಜ ಕ್ರಿಕೆಟಿಗ ಅನಿಲ್ ಕುಂಬ್ಳೆ, ಟೆಸ್ಟ್ ಕ್ಯಾಪ್ ನೀಡಿ ಭಾರತ ಟೆಸ್ಟ್ ತಂಡಕ್ಕೆ ಸ್ವಾಗತಿಸಿದರು. ಟೆಸ್ಟ್ ಕ್ಯಾಪ್ ನೀಡುವ ಮುನ್ನ ಅನಿಲ್ ಕುಂಬ್ಳೆ, https://ainlivenews.com/do-not-close-the-washing-machine-immediately-after-washing-clothes/ “ಈ ಹಂತಕ್ಕೆ ಬರಲು ನೀವು ಹಾಗೂ ನಿಮ್ಮ ಕುಟುಂಬದ ಪರಿಶ್ರಮ ಅನನ್ಯವಾದದ್ದು, ನಿಮ್ಮ ತಂದೆ ನಿಮ್ಮ ಸಾಧನೆಯ ಬಗ್ಗೆ ಖಂಡಿತವಾಗಿಯೂ ಹೆಮ್ಮೆ ಪಡುತ್ತಿದ್ದಾರೆ. ದೇಶಿ ಕ್ರಿಕೆಟ್ನಲ್ಲಿ ನೀವು ಸಾಕಷ್ಟು ರನ್…
Author: AIN Author
ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ ಬಳಕೆಯ ಎಲ್ಲಾ ವಸ್ತುಗಳ ಮೇಲೆ ಕ್ರಮೇಣ ಇದರ ಪರಿಣಾಮ ಬೀರುತ್ತದೆ. ಸರಕುಗಳ ಸಾಗಣೆಗೆ ಪೆಟ್ರೋಲ್ ಡಿಸೇಲ್ ಅಗತ್ಯವಾಗಿರುವುದರಿಂದ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರುತ್ತದೆ. ಹೀಗಾಗಿ ಪ್ರತಿದಿನ ಎಲ್ಲರೂ ಪೆಟ್ರೋಲ್ ಡಿಸೇಲ್ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕೆಲ ತಿಂಗಳಿಂದ ಬ್ರೇಕ್ ಬಿದ್ದಿದೆ. ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡು ಬರುತ್ತಿದೆ. ಇನ್ನು, ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್ (Petrol rate), ಡೀಸೆಲ್ ಬೆಲೆಯಲ್ಲಿ (diesel rate)ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ. https://ainlivenews.com/do-not-close-the-washing-machine-immediately-after-washing-clothes/ ದೆಹಲಿಯಲ್ಲಿ ಪೆಟ್ರೋಲ್ 96.72 ರೂ., ಡೀಸೆಲ್…
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿರೋದು ರಾಜಕೀಯ ಉದ್ದೇಶದಿಂದ ಅಂತ ಗೃಹ ಸಚಿವ ಪರಮೇಶ್ವರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ ಹೇಗಾದರೂ ಮಾಡಿ ತೊಂದರೆ ಕೊಡಬೇಕು ಅಂತ ನಿರ್ಧಾರ ಮಾಡಿದ ಹಾಗೆ ಇದೆ. ಸುಪ್ರೀಂ ಕೋರ್ಟ್ ಚುನಾವಣೆ ಬಾಂಡ್ ತೆಗೆದುಕೊಳ್ಳಬಾರದು ಅಂತ ಆದೇಶ ಮಾಡಿದೆ. ಇಲ್ಲಿವರೆಗೂ ತೆಗೆದುಕೊಂಡಿರೋ ಬಾಂಡ್ಗಳ ಬಗ್ಗೆ ಮಾಹಿತಿ ಕೊಡುವಂತೆ ಸುಪ್ರೀಂ ಕೋರ್ಟ್ ಕೇಳಿದೆ. ಈ ಹಿನ್ನೆಲೆಯಲ್ಲಿ ಅವರು ಸೀಜ್ ಮಾಡಿದ್ದಾರೆ ಅನ್ನಿಸುತ್ತೆ ಎಂದು ಕಿಡಿ ಕಾರಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಖಾತೆಗಳನ್ನ ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ. ಅಕೌಂಟ್ ವಿವರ ಕೇಳಬಹುದಿತ್ತು. ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ ಐಟಿಗೆ ಅರಿವಾದ ಮೇಲೆ ಅಕೌಂಟ್ ಓಪನ್ ಮಾಡಿದ್ದಾರೆ. https://ainlivenews.com/do-not-close-the-washing-machine-immediately-after-washing-clothes/ ಇದೆಲ್ಲವನ್ನು ನೋಡಿದ್ರೆ ಉದ್ದೇಶ ಪೂರ್ವಕವಾಗಿ ಕೇಂದ್ರ ಮಾಡ್ತಿದೆ ಅಂತ ನಮಗೆ ಅನಿಸುತ್ತದೆ. ಈ ಸಂಧರ್ಭದಲ್ಲಿ ಮಾಡಿದಾಗ ಉದ್ದೇಶಪೂರ್ವಕವಾಗಿ…
ನಿಂಬೆ ಪಾನಕ ಅಥವಾ ಜ್ಯೂಸ್ ಒಂದು ಉತ್ತಮ ಡಿಟಾಕ್ಸ್ ಪಾನೀಯವಾಗಿದೆ. ನಿಂಬೆಹಣ್ಣು ಸಾಕಷ್ಟು ಆರೋಗ್ಯಕಾರಿ ಅಂಶಗಳನ್ನು ಹೊಂದಿದೆ. ಇದು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ, ಇದು ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಆದರೆ ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ಸಾಮಾನ್ಯವಾಗಿ ಅಡುಗೆಗೆ ನಿಂಬೆಹಣ್ಣಿನ ಅಗತ್ಯವಿರುತ್ತದೆ, ಹಾಗಾಗಿ ಮಾರುಕಟ್ಟೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಿಂಬೆಹಣ್ಣನ್ನು ಖರೀದಿಸುತ್ತೇವೆ. ಆದರೆ ಅದನ್ನು ಸರಿಯಾಗಿ ಸಂಗ್ರಹಿಸದ ಕಾರಣ ಅವು ಬೇಗನೇ ಹಾಳಾಗುತ್ತದೆ. ನಿಂಬೆಹಣ್ಣನ್ನು ದೀರ್ಘಕಾಲದವರೆಗೆ ಸಂಗ್ರಹಿಸಲು ಕೆಲವೊಂದು ಟಿಪ್ಸ್ನ್ನು ಇಲ್ಲಿ ನೀಡಲಾಗಿದೆ. ಜಿಪ್-ಲಾಕ್ ಬ್ಯಾಗ್ ಮಾರುಕಟ್ಟೆಯಲ್ಲಿ ಸಿಗುವ ನಿಂಬೆಹಣ್ಣನ್ನು ಶೇಖರಿಸಿಡಲು ಜಿಪ್-ಲಾಕ್ ಬ್ಯಾಗ್ ತುಂಬಾ ಉಪಯೋಗಕ್ಕೆ ಬರಬಹುದು. ದೀರ್ಘಕಾಲದವರೆಗೆ ನಿಂಬೆಹಣ್ಣುಗಳನ್ನು ಸಂಗ್ರಹಿಸುವಾಗ ಅಂತಹ ಚೀಲಗಳು ಸಾಕಷ್ಟು ಸೂಕ್ತವಾಗಿವೆ. ಗಾಳಿಯಾಡದ ಬಿಗಿಯಾದ ಡಬ್ಬವನ್ನು ಬಳಸಿ ನಿಂಬೆ ಸಂಗ್ರಹಿಸಲು ಏರ್ ಟೈಟ್ ಕಂಟೇನರ್ ಅತ್ಯುತ್ತಮ ಆಯ್ಕೆಯಾಗಿದೆ. ನೀವು ನಿಂಬೆಯನ್ನು ಚೆನ್ನಾಗಿ ತೊಳೆದು ಒಣಗಿಸಿ ನಂತರ ಅದನ್ನು ಪಾಲಿಥಿನ್ನಲ್ಲಿ ಪ್ಯಾಕ್ ಮಾಡಿ, ಗಾಳಿಯಾಡದ ಡಬ್ಬದಲ್ಲಿ ಇರಿಸಿ. ಫ್ರಿಡ್ಜ್ನಲ್ಲಿಲ್ಲಿ ಇರಿಸಿ. ಎಣ್ಣೆಯನ್ನು ಬಳಸುವುದು…
ಕಲಬುರಗಿ: ಕಲಬುರಗಿ ನೂತನ ಪೋಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಹಾಕೈ ಅಧಿಕಾರ ವಹಿಸಿಕೊಂಡಿದ್ದಾರೆ..ಲೋಕಸಭಾ ಚುನಾವಣೆ ಹಿನ್ನಲೆ ಅಡ್ಡೂರು ಶ್ರೀನಿವಾಸಲು ಡೆಪ್ಯೂಟಿ ಕಮಾಂಡೆಂಟ್ ಆಗಿ ಬೆಂಗಳೂರಿಗೆ ವರ್ಗಾವಣೆ ಆಗಿದ್ದಾರೆ. ಡೆಪ್ಯುಟಿ ಕಮಾಂಡೆಂಟ್ ಆಗಿದ್ದ ಅಕ್ಷಯ್ ಹಾಕೈ ಯನ್ನ ಕಲಬುರಗಿ SP ಆಗಿ ಚುನಾವಣಾ ಆಯೋಗದ ನಿರ್ದೇಶನದಂತೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ..ಈ ಹಿನ್ನಲೆ ಇಂದು ಕಲಬುರಗಿಯ ಪೋಲೀಸ್ ಭವನದಲ್ಲಿ ಅಕ್ಷಯ್ ಹಾಕೈ SP ಆಗಿ ಅಧಿಕಾರ ಸ್ವೀಕಾರ ಮಾಡಿದ್ರು.
ಹೌದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಂದಿಗುಂದದ ಶ್ರೀ ಸಿದ್ದೇಶ್ವರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಘಟಕ ರಾಯಭಾಗ ವತಿಯಿಂದ 7 ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕಾಟಾಚಾರಕ್ಕೆ ಎಂಬಂತೆ ನಡೆಯಿತು, ಬಾರಿ ನೀರಸವಾಗಿ ಮೂಡಿಬಂದ ಕಾರ್ಯಕ್ರಮಕ್ಕೆ ಕನ್ನಡಮನಸುಗಳ ಅನುಪಸ್ಥಿತಿ, ಸಾಹಿತ್ಯಜಾತ್ರೆಗೆ ಮಕ್ಕಳೇ ಖಾತ್ರಿ ಸಾಹಿತ್ಯ ಬಿಂಬಿಸುವ ಪುಷ್ಟಿಕರಿಸುವ ಕನ್ನಡ ಸಾಹಿತ್ಯದ ದಿಗ್ಗಜರಿಗೆ ಭಾವಚಿತ್ರಗಳನ್ನು ಎಲ್ಲಿಯೂ ಬಳಸದೆ ಅವಮಾನ ಮಾಡಿದ್ದಾರೆ, ಜ್ಞಾನಪೀಠ ಪ್ರಶಸ್ತಿ ವಿಜೇತರ ಭಾವಚಿತ್ರಗಳು ಹಾಗೂ ಕನ್ನಡಕ್ಕೆ ದುಡಿದ ಹಾಗೂ ಮಡಿದ ಮನಸುಗಳು ಇಲ್ಲಿ ಮಾಯವಾಗಿ ಹೋಗಿ ಕನ್ನಡ ಪರಿಮಳವೆ ಪತ್ತೆಇಲ್ಲಾದಂತಾಗಿದೆ. ಕನ್ನಡದ ಕಣ್ಮಣಿಗಳ ಬದಲಾಗಿ ಪರಿಷತ್ತಿನ ಪದಾಧಿಕಾರಿಗಳ ಭಾವಚಿತ್ರ ಬಳಕೆ ಎಷ್ಟು ಸೂಕ್ತ..? ಭುವನೇಶ್ವರಿ ತಾಯಿಯ ಮೆರವಣಿಗೆಯಲ್ಲಿ ಬಳಸಲಾದ ವಾಹನವೊಂದನ್ನು ಹೊರತು ಪಡಿಸಿ, ಎಲ್ಲಿಯೂ ಸಾಹಿತಿಗಳ ಭಾವಚಿತ್ರ ಅಳವಡಿಕೆ ಮಾಡಿರುವದಿಲ್ಲ “ಕನ್ನಡ ಏನೆ ಕುಣಿದಾಡುವದೆನ್ನೆಡೆ” ಎಂಬಂತೆ ಅತ್ಯಂತ ಉತ್ಸಾಹ ತುಂಬಿ ಎತ್ತ ನೋಡಿದತ್ತ ಕನ್ನಡ ಬಾವುಟಗಳ ಹಾರಾಟವಾಗುವದು ಬಿಟ್ಟು ಕನ್ನಡ ಬಾವುಟಗಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಯಿತು, ಇತ್ತ…
ಕೋಲಾರ: ಕೋಲಾರದಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಜಾತಾ ಅದ್ದೂರಿಯಾಗಿ ಜರುಗಿದ್ದು, ಪುಟಾಣಿ ಮಕ್ಕಳು ನಗರದೆಲ್ಲಡೆ ಸ್ಕೇಟಿಂಗ್ ಮಾಡುವ ಮೂಲಕ ಅಭಿಯಾನ ನಡೆಸಿದ್ದಾರೆ. ಕೋಲಾರದ ಸರ್.ಎಂ.ವಿಶ್ವೇಶ್ವರಯ್ಯ ಶಾಲೆಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಕೋಲಾರ ನಗರದ ಕುವೆಂಪು ಪಾರ್ಕ್ನಿಂದ ಆರಂಭವಾದ ಈ ಜಾತಾ, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು. ಕಾರ್ಯಕ್ರಮಕ್ಕೆ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಅವರು ಚಾಲನೆ ನೀಡಿದ್ದು ವಿಶೇಷವಾಗಿತ್ತು.
ನವದೆಹಲಿ: ಖ್ಯಾತ ಉರ್ದು ಗೀತರಚನೆಕಾರ ಮತ್ತು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ 2023 ರ ಜ್ಞಾನಪೀಠ ಪ್ರಶಸ್ತಿ ಘೋಷಿಸಲಾಗಿದೆ. ಗುಲ್ಜಾರ್ ಅವರು ಪ್ರಸ್ತುತ ಕಾಲದ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು. ಗುಲ್ಜಾರ್ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಗೀತರಚನೆಗಳಿಗೆ ಹೆಸರುವಾಸಿಯಾಗಿದ್ದಾರೆ. ಈ ಯುಗದ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಈ ಹಿಂದೆ 2002ರಲ್ಲಿ ಉರ್ದು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004ರಲ್ಲಿ ಪದ್ಮಭೂಷಣ, ಮತ್ತು ಅವರ ಕೃತಿಗಳಿಗಾಗಿ ಕನಿಷ್ಠ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ. https://ainlivenews.com/do-not-close-the-washing-machine-immediately-after-washing-clothes/ ಮಧ್ಯಪ್ರದೇಶದ ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕರೂ ಹಾಗೂ ಮುಖ್ಯಸ್ಥರಾದ ಜಗದ್ಗುರು ರಾಮಭದ್ರಾಚಾರ್ಯರು ಹೆಸರಾಂತ ಸಂಸ್ಕೃತ ವಿದ್ವಾಂಸ, ಹಿಂದೂ ಆಧ್ಯಾತ್ಮಿಕ ನಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. 100ಕ್ಕೂ ಹೆಚ್ಚು ಪುಸ್ತಕಗಳ ಬರಹಗಾರರಾಗಿದ್ದಾರೆ. ಇವರು ಕೂಡ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಆಯ್ಕೆ ಸಮಿತಿ ತಿಳಿಸಿದೆ.
ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ಗೆ ಶಾಕ್ ಸರಣಿ ಮುಂದುವರಿದಿದೆ. ಒಂದೆಡೆ ಐ.ಎನ್.ಡಿ.ಐ.ಎ ಒಕ್ಕೂಟದಿಂದ ಒಬ್ಬೊಬ್ಬರೇ ಜಾಗ ಖಾಲಿ ಮಾಡುತ್ತಿದ್ದರೆ, ಮತ್ತೊಂದೆಡೆ ದಶಕಗಳ ಕಾಲ ಅಧಿಕಾರ ಅನುಭವಿಸಿದ ನಾಯಕರು ಗುಡ್ಬೈ ಹೇಳ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಅಶೋಕ್ ಚೌಹಾಣ್ ಬಳಿಕ ಮಧ್ಯಪ್ರದೇಶದಲ್ಲಿ ಶಾಕ್ ಎದುರಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ 3ನೇ ಮಗ ಎಂದೇ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೇಂದ್ರ ಸಚಿವ, ಮಧ್ಯಪ್ರದೇಶ ಸಿಎಂ ಆಗಿದ್ದ ಕಮಲ್ ನಾಥ್ ಇದೀಗ ಬಿಜೆಪಿಗೆ ಜಂಪ್ ಆಗುತ್ತಾರೆ ಎನ್ನಲಾಗುತ್ತಿದೆ. https://ainlivenews.com/do-not-close-the-washing-machine-immediately-after-washing-clothes/ ಛಿಂದ್ವಾರ ಸಂಸದ, ಪುತ್ರ ನಕುಲ್ನಾಥ್ ಜೊತೆ ಸೇರಿ ಕಮಲ್ನಾಥ್ 12 ಕ್ಕೂ ಹೆಚ್ಚು ಶಾಸಕರ ಜೊತೆಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಫೆ.22ಕ್ಕೆ ಮಧ್ಯಪ್ರದೇಶ ಪ್ರವೇಶವಾಗುವ ಹೊತ್ತಲ್ಲೇ ಈ ವಿಚಾರ ಕೇಳಿಬಂದಿದೆ. ಆದರೆ ಈ ವದಂತಿಗಳನ್ನು ಕಮಲ್ನಾಥ್ ಅಲ್ಲಗಳೆದಿದ್ದಾರೆ. ಪಕ್ಷಕ್ಕೆ ಯಾವುದೇ ರಾಜೀನಾಮೆ ಕೊಟ್ಟಿಲ್ಲ. ಆದರೆ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದ ಬೇಸರವಾಗಿದೆ. ಐದು ದಶಕಗಳ…
ಕೊಪ್ಪಳ: ನಾನು ವಾಪಸ್ ಬಿಜೆಪಿಗೆ ಸೇರುವ, ಪಕ್ಷ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ. ಇನ್ನೂ ಕಾಂಗ್ರೆಸ್ ಸೇರುವುದಂತೂ ಕನಸಿನಲ್ಲೂ ಆಗದ ಮಾತು ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮೆಚ್ಚಿದ್ದಾರೆ. ಈ ಹಿನ್ನೆಲೆ ಜನರ ಆಶಯಕ್ಕೆ ಪೂರಕವಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿಗೆ ನಾನು ಸಿದ್ಧನಿದ್ದೇನೆ. ಹಾಗೆಂದು ಕೆಆರ್ಪಿಪಿಯನ್ನು (KRPP) ವಿಲೀನ ಮಾಡುವುದಿಲ್ಲ. ನನ್ನ ಜೊತೆ ಮಾತನಾಡಿರುವ ಹಿರಿಯರಿಗೆ ನನ್ನ ವಿಚಾರ ಹೇಳಿದ್ದೇನೆ. ರಾಜ್ಯಸಭೆ ಚುನಾವಣೆ ಬಗ್ಗೆ ನನ್ನ ಜೊತೆ ಯಾರು ಮಾತನಾಡಿಲ್ಲ ಎಂದಿದ್ದಾರೆ. https://ainlivenews.com/do-not-close-the-washing-machine-immediately-after-washing-clothes/ ಮುಂದುವರೆದು, ನಾನು ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಉತ್ತಮ ಸ್ನೇಹಿತರು. ನಮ್ಮದು ಇಪ್ಪತ್ತು ವರ್ಷದ ಸಂಬಂಧ. ಸ್ನೇಹವೇ ಬೇರೆ ರಾಜಕಾರಣವೇ ಬೇರೆ. ಹಾಗಂತಾ ನಾನು ಕಾಂಗ್ರೆಸ್ಗೆ ಹೋಗುತ್ತೇನೆ ಎಂದರೆ ಅದು ಸುಳ್ಳು. ಕನಸಿನಲ್ಲಿಯೂ ಅದು ಸಾಧ್ಯವಿಲ್ಲ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರು ಅನುದಾನ ನೀಡಲು…