ಹಾಸನ : ನಾನು ಮಾಡಿರುವ ಕೆಲಸ, ತಂದಿರುವ ಅನುದಾನದ ಬಗ್ಗೆ ಒಂದು ಪುಸ್ತಕದ ಮೂಲಕ ಇಡೀ ಜಿಲ್ಲೆಯ ಜನರಿಗೆ ತಲುಪಿಸುವ ಕೆಲಸ ಮಾಡುತ್ತೇನೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಜಿಲ್ಲೆಯ ಜನ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಶೀರ್ವಾದ ಮಾಡಿದ್ದರು. ಅದಕ್ಕೆ ತಕ್ಕಂತೆ ದುಡಿಮೆ ಮಾಡಿದ್ದೇನೆ ಎಂದು ತಿಳಿಸಿದರು. ಭಾರತದಲ್ಲೇ ಈ ಬಾರೀ IPL : ಊಹಾಪೋಹಗಳಿಗೆ ತೆರೆ ಎಳೆದ ಮುಖ್ಯಸ್ಥ ಅರುಣ್ ಧುಮಾಲ್ ಕಳೆದ 5 ವರ್ಷದಲ್ಲಿ ಹನ್ನೆರಡುವರೆ ಸಾವಿರ ಕೋಟಿ ಕೇಂದ್ರದಿಂದ ಅನುದಾನ ತಂದಿದ್ದೇನೆ. ನನಗೆ ಮತ್ತೊಂದು ಅವಕಾಶ ಕೊಟ್ಟರೆ ಇನ್ನೂ ಹೆಚ್ಚಿನ ಕೆಲಸವನ್ನು ನಮ್ಮ ಜಿಲ್ಲೆಗೆ, ಜಿಲ್ಲೆಯ ಜನರಿಗೆ ಮಾಡ್ತಿನಿ. ಅವರ ದಿನಾಂಕ ತಗೊಂಡು ನನ್ನ ಸಾಧನೆಯ ಬಗ್ಗೆ ಪುಸ್ತಕವನ್ನು ಅವರ ಮುಖಾಂತರ ಬಿಡುಗಡೆ ಮಾಡುತ್ತೇನೆ. ಆ ಆಸೆ ನನಗೂ ಕೂಡ ಇದೆ ಎಂದು ತಿಳಿಸಿದರು. ನಾವು ಕಾಂಗ್ರೆಸ್ನ ತಿರಸ್ಕಾರ ಮಾಡಬೇಕು ಎಲ್ಲರದ್ದು ಒಂದೇ ಉದ್ದೇಶ, ನಾವು ಕಾಂಗ್ರೆಸ್ನ ತಿರಸ್ಕಾರ ಮಾಡಬೇಕು. ನರೇಂದ್ರ ಮೋದಿಯ…
Author: AIN Author
ರೈತರ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕನಿಷ್ಠ ಬೆಂಬಲ ಬೆಲೆ (MSP) ಕೊಡುವ ಗ್ಯಾರಂಟಿ ನೀಡುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಛತ್ತೀಸಗಢದ ಅಂಬಿಕಾಪುರದಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ I.N.D.I.A ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕನಿಷ್ಠ ಬೆಂಬಲ ಬೆಲೆ (MSP) ಸೇರಿ ಇತರೆ ಕಾನೂನು ಜಾರಿಗೊಳಿಸುತ್ತೇವೆ ಎಂದು ಘೋಷಿಸಿದ್ದಾರೆ. ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ! ಕಾಂಗ್ರೆಸ್ ಈ ಸಲ ಐತಿಹಾಸಕ ಪ್ರತಿಜ್ಞೆ ತೆಗೆದುಕೊಂಡಿದೆ. ಸ್ವಾಮಿನಾಥನ್ ವರದಿ ಪ್ರಕಾರ MPS ಕಾನೂನು ರೂಪಿಸುವ ಮೂಲಕ ದೇಶದ 15 ಕೋಟಿ ರೈತರಿಗೆ ಅನುಕೂಲ ಮಾಡಿಕೊಡಲಿದ್ದೇವೆ. ಇದು ರೈತರಿಗೆ ನೀಡುವ ಮೊದಲ ಗ್ಯಾರಂಟಿ ಎಂದು ಹೇಳಿದ್ದಾರೆ. ಎಂಎಸ್ಪಿ ಮೇಲಿನ ನಮ್ಮ ಕಾನೂನು ಬದ್ಧ ಖಾತರಿ ರೈತರ ಜೀವನದಲ್ಲಿ 3 ದೊಡ್ಡ ಬದಲಾವಣೆಗಳನ್ನು ತರುತ್ತದೆ. ಬೆಳೆಗೆ ಸರಿಯಾದ ಬೆಲೆ ಸಿಗುವುದರಿಂದ ರೈತ ಸಾಲದ ಬಾಧೆಯಿಂದ ಮುಕ್ತನಾಗುತ್ತಾನೆ. ಯಾವುದೇ ರೈತ ಆತ್ಮಹತ್ಯೆಯ…
ಚಂಡೀಗಢ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಬೇಡ, ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ (Jai Siya Ram) ಅಂತಾ ಘೋಷಣೆ ಕೂಗುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರೈತರಿಗೆ ಮಧ್ಯದ ಬೆರಳು ತೋರಿಸಿದ ಮಹಿಳೆ – ನೀವು ನನ್ನನ್ನು ಅನುಚಿತ ಸ್ಪರ್ಶಿಸಿದ್ದೀರಿ ಎಂದು ಗಲಾಟೆ ! ಹರ್ಯಾಣದ ರೇವಾರಿಯಲ್ಲಿ ಹಲವಾರು ಯೋಜನೆಗಳ ಉದ್ಘಾಟನೆ ಮತ್ತು AIIMS ಸಂಸ್ಥೆಯ ಅಡಿಪಾಯವನ್ನು ಹಾಕಿದ ಬಳಿಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ (Narendra Modi), ನಾನು ಕೊಟ್ಟಿದ್ದ ಕೆಲವೊಂದು ಭರವಸೆಗಳನ್ನು ಈಡೇರಿಸಿದ್ದೇನೆ. ದೇಶವು ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರವನ್ನು (Ram Mandir) ಬಯಸಿತ್ತು. ಅದು ಈಡೇರಿದೆ ಎಂದರು. ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವಲ್ಲಿ ಕಾಂಗ್ರೆಸ್ ದಶಕಗಳಿಂದ ಅಡೆತಡೆಗಳನ್ನು ಸೃಷ್ಟಿಸಿದೆ ಎಂದು ಕಿಡಿಕಾರಿದರು. ಭಾರತವು ಇಂದು ವಿಶ್ವದಲ್ಲಿಯೇ ಎತ್ತರದ ಸ್ಥಾನವನ್ನು ಅಲಂಕರಿಸಿದೆ. ಇದು ಜನರ ಆಶೀರ್ವಾದದಿಂದ ಸಾಧ್ಯವಾಗಿದೆ ಎಂದು ತಿಳಿಸಿದರು.
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಆರೋಗ್ಯವಾಗಿದ್ದಾರೆ, ಏನು ತೊಂದರೆಯಿಲ್ಲ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. . ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ (Manipal Hospital ) ದಾಖಲಿಸಲಾಗಿದ್ದು . ಇಂದು ಆಸ್ಪತ್ರೆಯಿಂದ . ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ (Manipal Hospital ) ದಾಖಲಿಸಲಾಗಿದ್ದು, ಸದ್ಯ ಬಂದಿರುವ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲದಿಂದ ತಿಳಿದುಬಂದಿದೆ. ರೈತರಿಗೆ ಮಧ್ಯದ ಬೆರಳು ತೋರಿಸಿದ ಮಹಿಳೆ – ನೀವು ನನ್ನನ್ನು ಅನುಚಿತ ಸ್ಪರ್ಶಿಸಿದ್ದೀರಿ ಎಂದು ಗಲಾಟೆ ! ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದ್ದು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ದೆಹಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ (Paytm Payments Bank) ಫೆ.29 ರೊಳಗೆ ಎಲ್ಲಾ ಬಗೆಯ ಸೇವೆಗಳನ್ನು ಸ್ಥಗಿತಗೊಳಿಸಬೇಕು ಎಂದು ವಿಧಿಸಿದ್ದ ನಿರ್ಬಂಧವನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾ.15 ರವರೆಗೆ ವಿಸ್ತರಿಸಿದೆ. ಭಾರತದಲ್ಲೇ ಈ ಬಾರೀ IPL : ಊಹಾಪೋಹಗಳಿಗೆ ತೆರೆ ಎಳೆದ ಮುಖ್ಯಸ್ಥ ಅರುಣ್ ಧುಮಾಲ್ ಬಡ್ಡಿ, ಕ್ಯಾಶ್ಬ್ಯಾಕ್ಗಳು, ಪಾಲುದಾರ ಬ್ಯಾಂಕ್ಗಳಿಂದ ಸ್ವೀಪ್ ಅಥವಾ ಯಾವುದೇ ಸಮಯದಲ್ಲಿ ಕ್ರೆಡಿಟ್ ಮಾಡಬಹುದಾದ ಮರುಪಾವತಿಗಳನ್ನು ಹೊರತುಪಡಿಸಿ, ಮಾರ್ಚ್ 15 ರ ನಂತರ ಯಾವುದೇ ಗ್ರಾಹಕರ ಖಾತೆಗಳು, ಪ್ರಿಪೇಯ್ಡ್ ಉಪಕರಣಗಳು, ವ್ಯಾಲೆಟ್ಗಳು, ಫಾಸ್ಟ್ಟ್ಯಾಗ್ಗಳು, ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ಗಳು ಇತ್ಯಾದಿಗಳಲ್ಲಿ ಯಾವುದೇ ಹೆಚ್ಚಿನ ಠೇವಣಿ ಅಥವಾ ಕ್ರೆಡಿಟ್ ವಹಿವಾಟುಗಳು ಅಥವಾ ಟಾಪ್-ಅಪ್ಗಳನ್ನು ಅನುಮತಿಸಲಾಗುವುದಿಲ್ಲ ಎಂದು ಆರ್ಬಿಐ ಹೇಳಿದೆ ಪರ್ಯಾಯ ವ್ಯವಸ್ಥೆ ಮಾಡಲು ಸಮಯ ಬೇಕಾಗಬಹುದು. ಗ್ರಾಹಕರು ಮತ್ತು ವ್ಯಾಪಾರಿಗಳ ಹಿತದೃಷ್ಟಿಯಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ನಲ್ಲಿ ಗ್ರಾಹಕರು ಪದೇ ಪದೇ ಕೇಳಲಾಗಿರುವ ಪ್ರಶ್ನೆಗಳಿಗೆ ಆರ್ಬಿಐ ಉತ್ತರವನ್ನೂ ಬಿಡುಗಡೆ ಮಾಡಿದೆ.
ದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ (Priyanaka Gandhi Vadra) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ಶುಕ್ರವಾರ ಉತ್ತರಪ್ರದೇಶದ (Uttar Pradesh) ಚಂದೌಲಿಯಲ್ಲಿ (Chandauli) ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಸ್ಪಷ್ಟಪಡಿಸಿದ್ದಾರೆ. ರೈತರಿಗೆ ಮಧ್ಯದ ಬೆರಳು ತೋರಿಸಿದ ಮಹಿಳೆ – ನೀವು ನನ್ನನ್ನು ಅನುಚಿತ ಸ್ಪರ್ಶಿಸಿದ್ದೀರಿ ಎಂದು ಗಲಾಟೆ ! ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಸ್ವತಃ ಪ್ರಿಯಾಂಕ ಗಾಂಧಿ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. ಬಿಹಾರದಿಂದ ಉತ್ತರಪ್ರದೇಶಕ್ಕೆ ಭಾರತ್ ಜೋಡೋ ನ್ಯಾಯ ಯಾತ್ರೆ (Bharat Jodo Nyay Yatra) ತಲುಪುವ ವೇಳೆ ತಾನೂ ಅದರಲ್ಲಿ ಪಾಲ್ಗೊಳ್ಳಬೇಕೆಂದು ಬಯಸಿದ್ದೆ. ಆದರೆ ಅನಾರೋಗ್ಯದಿಂದಾಗಿ ನಾನು ಆಸ್ಪತ್ರೆ ಸೇರಬೇಕಾಯಿತು. ಅನಾರೋಗ್ಯದಿಂದ ಚೇತರಿಸಿಕೊಂಡ ತಕ್ಷಣ ಮತ್ತೆ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಸ್ಪಷ್ಟನೆ ನೀಡಿದ್ದಾರೆ
ಕಲಬುರಗಿ: ಗಾಡಿ ಡಿಕ್ಕಿಯಲ್ಲಿಟ್ಟಿದ್ದ 2 ಲಕ್ಷ ರೂಪಾಯಿ ಎರಡೇ ನಿಮಿಷದಲ್ಲಿ ಕಳ್ಳನ ಪಾಲಾದ ಘಟನೆ ಕಲಬುರಗಿಯಲ್ಲಿ ನಡೆದಿದೆ.ನಗರದ ಚೌಕ್ ಠಾಣಾ ವ್ಯಾಪ್ತಿಯ ಸೂಪರ್ ಮಾರ್ಕೆಟ್ ದಲ್ಲಿ ಘಟನೆ ನಡೆದಿದ್ದು ಚಾಲಕಿ ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ..ಕಿರಾಣಿ ಅಂಗಡಿಯ ಮಾಲೀಕ ನಿತಿನ್ ಬಾವಗೆ ಎಂಬುವವರು ಹಣ ಕಳೆದುಕೊಂಡು ಇದೀಗ ದೂರು ನೀಡಿದ್ದಾರೆ. ಅಂಗಡಿ ಬಂದ್ ಮಾಡಿ ಮನೆಗೆ ಹೋಗುವಾಗ ಗಾಡಿ ಡಿಕ್ಕಿಯಲ್ಲಿ ಹಣ ಇಟ್ಟು ಎದುರಿನ ರಸ್ತೆಯಲ್ಲಿ ನಿಂತಿದ್ದ ಸ್ನೇಹಿತನ ಜೊತೆ ಮಾತಾಡಿ ಬರೋಷ್ಟರಲ್ಲಿ ಕೃತ್ಯ ನಡೆದಿದೆ..
ಬೆಂಗಳೂರು: ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ (Paris Olympics 2024) ಚಿನ್ನದ ಪದಕ ಗಳಿಸುವ ಕ್ರೀಡಾಪಟುಗಳಿಗೆ 6 ಕೋಟಿ ರೂ., ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 03 ಕೋಟಿ ರೂ. ಪ್ರೋತ್ಸಾಹಧನ ಘೋಷಣೆ. ಭಾರತದಲ್ಲೇ ಈ ಬಾರೀ IPL : ಊಹಾಪೋಹಗಳಿಗೆ ತೆರೆ ಎಳೆದ ಮುಖ್ಯಸ್ಥ ಅರುಣ್ ಧುಮಾಲ್ ಇದೇ 2024ರ ಜುಲೈ 26ರಿಂದ ಆಗಸ್ಟ್ 11ರ ವರೆಗೆ ಪ್ಯಾರಿಸ್ನಲ್ಲಿ ಒಲಿಂಪಿಕ್ಸ್ ಕ್ರೀಡಾಹಬ್ಬ ನಡೆಯಲಿದೆ. ಕ್ರೀಡೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ನಲ್ಲಿ ಪ್ರೋತ್ಸಾಹ ಧನ ಘೋಷಣೆ ಮಾಡಲಾಗಿದೆ. ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗಳಿಸುವ ಕ್ರೀಡಾಪಟುಗಳಿಗೆ 6 ಕೋಟಿ ರೂ., ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 03 ಕೋಟಿ ರೂ. ಪ್ರೋತ್ಸಾಹಧನ ಘೋಷಣೆ. • ಏಷ್ಯನ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ…
ಕನ್ನಡ ಚಿತ್ರರಂಗದ “ಕಲಾಕಾರ್’ ಖ್ಯಾತಿಯ ನಟ ಕಂ ನಿರ್ದೇಶಕ ಹರೀಶ್ ರಾಜ್ “ಪ್ರೇತ’ದ ಜೊತೆಗೆ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾರೆ. ಹರೀಶ್ ರಾಜ್ ನಾಯಕನಾಗಿ ನಟಿಸಿ, ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಔಟ್ ಆ್ಯಂಡ್ ಔಟ್ ಹಾರರ್-ಥ್ರಿಲ್ಲರ್ “ಪ್ರೇತ’ ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ 23ಕ್ಕೆ ಥಿಯೇಟರ್ನಲ್ಲಿ “ಪ್ರೇತ’ ಪ್ರೇಕ್ಷಕರನ್ನು ಬಿಚ್ಚಿಬೀಳಿಸುವ ಯೋಜನೆ ಹಾಕಿಕೊಂಡಿದೆ. ‘ಪ್ರೇತ’ ಸಿನಿಮಾದಲ್ಲಿ ಹರೀಶ್ ರಾಜ್ ಅವರೊಂದಿಗೆ ಅಮೂಲ್ಯ ಭಾರದ್ವಾಜ್, ಅಹಿರಾ ಶೆಟ್ಟಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಿ. ಎಂ. ವೆಂಕಟೇಶ್, ಅಮಿತ್ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಹರೀಶ್ ರಾಜ್ ಪ್ರೊಡಕ್ಷನ್’ ಬ್ಯಾನರ್ನಲ್ಲಿ “ಪ್ರೇತ’ ಸಿನಿಮಾ ನಿರ್ಮಾಣವಾಗಿದೆ. ಈವರೆಗೆ ‘ಕಲಾಕಾರ್’, ‘ಗನ್’, ‘ಶ್ರೀ ಸತ್ಯನಾರಾಯಣ’, ‘ಕಿಲಾಡಿ ಪೊಲೀಸ್’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು 3 ವರ್ಷದ ಗ್ಯಾಪ್ ಬಳಿಕ ಪ್ರೇತ ಚಿತ್ರದ ಮೂಲಕ ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಕಿರಣ್ ಆರ್ ಹೆಮ್ಮಿಗೆ ಸಂಭಾಷಣೆ, ಪ್ರವೀಣ್…
ರಾಜ್ಕೋಟ್: ಇಲ್ಲಿನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ (Team India) ಸ್ಪಿನ್ ಮಾಂತ್ರಿಕ ಆರ್.ಅಶ್ವಿನ್ (Ashwin) ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಭಾರತದಲ್ಲೇ ಈ ಬಾರೀ IPL : ಊಹಾಪೋಹಗಳಿಗೆ ತೆರೆ ಎಳೆದ ಮುಖ್ಯಸ್ಥ ಅರುಣ್ ಧುಮಾಲ್ ಇಂಗ್ಲೆಂಡ್ (England) ವಿರುದ್ಧ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡದ ಝಾಕ್ ಕ್ರಾವ್ಲಿ (Zak Crawley) ಅವರನ್ನು ಔಟ್ ಮಾಡುವ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಜೊತೆಗೆ ಟೆಸ್ಟ್ ಕ್ರಿಕೆಟ್ನಲ್ಲಿ (Test Cricket) 500 ವಿಕೆಟ್ ಪಡೆದ 2ನೇ ಭಾರತೀಯ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ. ದಿಗ್ಗಜರ ಎಲೈಟ್ ಲಿಸ್ಟ್ ಸೇರಿದ ಸ್ಪಿನ್ ಮಾಂತ್ರಿಕ: ಟೆಸ್ಟ್ ಕ್ರಿಕೆಟ್ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ವಿಶ್ವದ ಆಟಗಾರರ ಪೈಕಿ ಶ್ರೀಲಂಕಾದ ಮುತ್ತಯ್ಯ ಮುರಳಿಧರನ್ 800 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ. ಶೇನ್ ವಾರ್ನೆ (708 ವಿಕೆಟ್), ಜೇಮ್ಸ್…