ಗದಗ: ಎಲ್.ಕೆ ಅಡ್ವಾಣಿಗೆ (LK Advani) ಭಾರತ ರತ್ನ (Bharat Ratna) ಪ್ರಶಸ್ತಿ ನೀಡಿದ್ದು ಸಂತೋಷ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ನಗರದ ಹೊಸ ಬಸ್ ನಿಲ್ದಾಣದಲ್ಲಿ ನೂತನ 50 ಬಸ್ಗಳ ಉದ್ಘಾಟನೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಈ ಮಟ್ಟಕ್ಕೆ ಬೆಳೆಯಲು ಅಡ್ವಾಣಿ ಸಹ ಕಾರಣ. ಅವರನ್ನು ಮೂಲೆಗುಂಪು ಮಾಡಿದ್ದರು. ಈಗಲಾದರೂ ಬಿಜೆಪಿಯವರಿಗೆ ಬುದ್ಧಿ ಬಂದು ಅವರಿಗೆ ಭಾರತ ರತ್ನ ಘೋಷಣೆ ಮಾಡಿದ್ದು ಸಂತೋಷ ಎಂದರು. https://ainlivenews.com/india-336-for-6-on-the-first-day-yasshav-jaiswal-is-a-lone-struggle/ ಪ್ರಹ್ಲಾದ್ ಜೋಷಿ ಹಾಗೂ ಸಂತೋಷ್ ಅವರು ಸೇರಿ ಯಡಿಯೂರಪ್ಪಗೆ ಏನು ಮಾಡಿದ್ರು? ಯಡಿಯೂರಪ್ಪ ಅವರನ್ನು ಕೆಳಗೆ ಇಳಿಸಿದವರು ಯಾರು? ಇವರೆ ತಾನೇ ಇಳಿಸಿದ್ದು? ವಿಜಯೇಂದ್ರ ಏನು ಆಗಬಾರದು ಎಂದು ಮೊನ್ನೆಯೂ ಏನೋ ಪ್ರಯತ್ನ ಮಾಡಿದರು. ಆದರೂ ಏನು ನಡಿಯಲಿಲ್ಲ. ಚುನಾವಣೆ ಬಂತಲ್ವಾ, ಅದಕ್ಕೆ ಯಡಿಯೂರಪ್ಪ ಮುಖ ನೋಡಿ ಮತ ಹಾಕುತ್ತಾರೆ ಎಂದು ಸುಮ್ಮನಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
Author: AIN Author
ಕಲಬುರಗಿ: ನಾಯಿ ಮೇಲೆ ಚಿರತೆಯೊಂದು ದಾಳಿ ಮಾಡಿ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿ ಘಟನೆ ನಡೆದಿದ್ದು ಜಮೀನಿನಲ್ಲಿ ಓಡಾಡುತಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದೆ.. ಗುಡ್ಡಗಾಡು ಪ್ರದೇಶವಾದ ಲಾಡ್ಲಾಪುರ ಸುತ್ತಮುತ್ತ ಕೆಲ ದಿನಗಳ ಹಿಂದೆ ಸಹ ಚಿರತೆ ಓಡಾಡಿದ್ದನ್ನ ಗ್ರಾಮಸ್ಥರು ಗಮನಿಸಿದ್ದಾರೆ..ಈ ಬಗ್ಗೆ ಅಲರ್ಟ್ ಆಗಿರುವ ಅರಣ್ಯ ಇಲಾಖೆ ಚಿರತೆ ಪತ್ತೆ ಮಾಡಲು ಮುಂದಾಗಿದೆ..
ವಿಶಾಖಪಟ್ಟಣಂ: ಇಲ್ಲಿನ ವೈ.ಎಸ್.ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ (Y.S. Rajasekhara Reddy Cricket Stadium) ಟೀಂ ಇಂಡಿಯಾ (Team India) ಹಾಗೂ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ನ ಮೊದಲ ಇನಿಂಗ್ಸ್ ನಲ್ಲಿ ಜಸ್ಪ್ರೀತ್ ಬುಮ್ರಾ (Jasprit Bumrah) ಅವರು 6 ವಿಕೆಟ್ ಉರುಳಿಸುವುದರ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. 15.5 ಓವರ್ ಎಸೆದ ಬುಮ್ರಾ 45 ರನ್ ನೀಡಿ 6 ವಿಕೆಟ್ ಕಿತ್ತು ಇಂಗ್ಲೆಂಡ್ ತಂಡದ ವಿರುಧ್ಧ ಮುನ್ನಡೆ ಸಾಧಿಸಲು ಕಾರಣರಾಗಿದ್ದಾರೆ. ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಬುಮ್ರಾ ಈ ವಿಕೆಟ್ನೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ 150 ವಿಕೆಟ್ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಟೆಸ್ಟ್ನಲ್ಲಿ ಅತಿ ವೇಗವಾಗಿ 150 ವಿಕೆಟ್ ಪಡೆದ ಏಷ್ಯಾದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬುಮ್ರಾ, ಓಲಿ ಪೋಪ್, ಜೋ ರೂಟ್, ಜಾನಿ ಬೈರ್ಸ್ಟೋವ್, ಬೆನ್ ಸ್ಟೋಕ್ಸ್, ಟಾಮ್ ವಿಲಿಯಂ ಹಾಟ್ರ್ಲಿ ಹಾಗೂ ಜೇಮ್ಸ್ ಆಂಡರ್ಸನ್ ಅವರ ವಿಕೆಟ್ಗಳನ್ನು…
ಬೆಂಗಳೂರು: ರಾಜ್ಯದ ಜನರ ಹಿತ ಕಾಯಲು ನಾನು ಯಾವುದೇ ಹೋರಾಟಕ್ಕೂ ಸಿದ್ಧನಿದ್ದೇನೆ. ಕನ್ನಡಿಗರಿಗೆ ಅನ್ಯಾಯ ಆಗಿದೆ ಎಂದು ಮಾತನಾಡಿದರೆ ಅದನ್ನು ಬಿಜೆಪಿಯವರು ತಿರುಚಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯದ ಹಿತ ಕಾಯಲು ನಾನು ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ ಎಂದು ಸಂಸದ ಡಿಕೆ ಸುರೇಶ್ (DK Suresh) ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು (Bengaluru) ಹೊರವಲಯದ ಬನ್ನೇರುಘಟ್ಟದಲ್ಲಿ ಕಾವೇರಿ ಕುಡಿಯುವ ನೀರಿನ ಯೋಜನೆಯ ಪೈಪ್ಲೈನ್ ಕಾಮಗಾರಿ ವೇಳೆ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡಿಗರಿಗೆ ಅನ್ಯಾಯ ಆಗಿದೆ ಎಂದು ನಾನು ಮಾತನಾಡಿದ್ದೆ. ಉತ್ತರ ಪ್ರದೇಶಕ್ಕೆ 33% ರಷ್ಟು ಹಣವನ್ನು ನೀಡುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ತೆರಿಗೆಯ ಹಣವನ್ನು ವಾಪಸ್ ಕೊಡಿ ಎಂದು ಪ್ರಶ್ನೆ ಮಾಡಿದ್ದು ಹೇಗೆ ತಪ್ಪಾಗುತ್ತದೆ? ರಾಜ್ಯದಲ್ಲಿ ಬರಗಾಲ ತಾಂಡವ ಆಡುತ್ತಿದೆ. 224 ತಾಲೂಕು ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಆಗಿದೆ. ಆದರೂ ಸಹ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ನಾನು ಮಾತನಾಡಿದ್ದೇನೆ. ಅದರಲ್ಲಿ ಯಾವುದೇ ಹಿಂಪಡೆಯುವ…
ಅಭಿಮಾನಿಗಳಿಂದ ‘ಸುಂದರಿ’ ಪಟ್ಟ ಗಿಟ್ಟಿಸಿಕೊಂಡ ಸನೋನ್ Photos ನೋಡಿ..! ಅಭಿಮಾನಿಗಳಿಂದ ‘ಸುಂದರಿ’ ಪಟ್ಟ ಗಿಟ್ಟಿಸಿಕೊಂಡ ಸನೋನ್ Photos ನೋಡಿ..! ಅಭಿಮಾನಿಗಳಿಂದ ‘ಸುಂದರಿ’ ಪಟ್ಟ ಗಿಟ್ಟಿಸಿಕೊಂಡ ಸನೋನ್ Photos ನೋಡಿ..! ಅಭಿಮಾನಿಗಳಿಂದ ‘ಸುಂದರಿ’ ಪಟ್ಟ ಗಿಟ್ಟಿಸಿಕೊಂಡ ಸನೋನ್ Photos ನೋಡಿ..! ಅಭಿಮಾನಿಗಳಿಂದ ‘ಸುಂದರಿ’ ಪಟ್ಟ ಗಿಟ್ಟಿಸಿಕೊಂಡ ಸನೋನ್ Photos ನೋಡಿ..! ಅಭಿಮಾನಿಗಳಿಂದ ‘ಸುಂದರಿ’ ಪಟ್ಟ ಗಿಟ್ಟಿಸಿಕೊಂಡ ಸನೋನ್ Photos ನೋಡಿ..!
ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ಏರ್ಪೋರ್ಟ್ ಉದ್ಯೋಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಕಾಜೋಲ್ ಶಿಯಾನಿ ಮೃತರು. ಘಟನೆಯಲ್ಲಿ ರೀತು ಪಾಟೀಲ ಎಂಬ ಯುವತಿ ಸೇರಿದಂತೆ ಇನ್ನೂ ನಾಲ್ವರು ಗಾಯಗೊಂಡಿದ್ದಾರೆ. ಒಂದೇ ಕಾರಿನಲ್ಲಿ ಐದು ಜನ ಬೆಳಗಾವಿ ಏರ್ಪೋರ್ಟ್ ಉದ್ಯೋಗಿಗಳು ಪ್ರಯಾಣ ಬೆಳೆಸಿದ್ದರು. https://ainlivenews.com/do-you-know-the-benefits-of-eating-jalebi-with-hot-milk/ ಪಾರ್ಟಿ ಮುಗಿಸಿ ಮನೆಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾಜೋಲ್ ಶಿಯಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೌಲಾಲಂಪುರ್: ಮಲೇಷಿಯಾದ ಜೋಹರ್ ಪ್ರದೇಶವನ್ನು ಅಳುತ್ತಿದ್ದ ರಾಜ ಸುಲ್ತಾನ್ ಇಬ್ರಾಹಿಂ ಸುಲ್ತಾನ್ ಇಸ್ಕಂದರ್ ಅವರನ್ನು ಅದ್ದೂರಿ ಸಮಾರಂಭದಲ್ಲಿ ಮಲೇಷಿಯಾದ ನೂತನ ರಾಜನನ್ನಾಗಿ ನೇಮಿಸಲಾಗಿದೆ. ಮಲೇಷಿಯಾದಲ್ಲಿ ರಾಜಕೀಯ ಸ್ಥಿರತೆಯನ್ನು ಖಾತ್ರಿಡಿಸುವಲ್ಲಿ ಈ ಕೋಟ್ಯಾಧಿಪತಿ ರಾಜ ಪ್ರಮುಖ ಪಾತ್ರ ವಹಿಸಬಹುದು ಎಂದು ಊಹಿಸಲಾಗಿದೆ. ಒಬ್ಬರಾದ ಮೇಲೊಬ್ಬರಂತೆ ತಿರುಗುವ ವಿಶಿಷ್ಠವಾದ ರಾಜಪ್ರಭುತ್ವದ ವ್ಯವಸ್ಥೆಯ ಅಡಿಯಲ್ಲಿ ರಾಷ್ಟ್ರದ ಹೊಸ ರಾಜನಾಗಿ ಸುಲ್ತಾನ್ ಇಬ್ರಾಹಿಂ ಪ್ರಮಾಣವಚನ ಸ್ವೀಕರಿಸಿದರು. 65 ವರ್ಷದ ಸುಲ್ತಾನ್ ಇಬ್ರಾಹಿಂ ಇಸ್ಕಂದರ್ ಅವರು ಅರಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಸಂದರ್ಭದಲ್ಲಿ ಇತರ ರಾಜಮನೆತನಗಳು, ಪ್ರಧಾನಿ ಅನ್ವರ್ ಇಬ್ರಾಹಿಂ ಮತ್ತು ಕ್ಯಾಬಿನೆಟ್ ಸದಸ್ಯರು ಈ ಸಮಾರಂಭದಲ್ಲಿ ಹಾಜರಿದ್ದು, ಅಧಿಕಾರದ ಘೋಷಣೆಯ ದಾಖಲೆಗೆ ಸಹಿ ಹಾಕಿದರು.ಇದಾದ ಬಳಿಕ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಮಲೇಷ್ಯಾ ದೇಶದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಸುಲ್ತಾನ್ ಇಬ್ರಾಹಿಂ ಅವರು ರಿಯಲ್ ಎಸ್ಟೇಟ್ನಿಂದ ದೂರಸಂಪರ್ಕ ಮತ್ತು ವಿದ್ಯುತ್ ಸ್ಥಾವರಗಳವರೆಗೆ ವ್ಯಾಪಕವಾದ ವ್ಯಾಪಾರ ಸಾಮ್ರಾಜ್ಯದ ಮಾಲೀಕತ್ವವನ್ನು ಹೊಂದಿದ್ದಾರೆ. ಮಲೇಷ್ಯಾದಲ್ಲಿ ಆಡಳಿತದಲ್ಲಿರುವ ಸರ್ಕಾರದಿಂದ ಪ್ರಧಾನಿಯಾಗಿರುವ ಅನ್ವರ್…
ತುಮಕೂರು:- ಗುಬ್ಬಿ ಪೊಲೀಸ್ ಠಾಣೆಯಿಂದ ಸರಗಳ್ಳ ಪರಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಖತರ್ನಾಕ್ ಕಳ್ಳ ಕೊನೆಗೂ ಸೆರೆ ಸಿಕ್ಕಿದ್ದಾನೆ. ತುಮಕೂರು ಜಿಲ್ಲಾ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ತಡರಾತ್ರಿ ಆರೋಪಿಯನ್ನು ಸೆರೆಹಿಡಿಯಲಾಗಿದೆ. ಬೆಂಗಳೂರಿನಿಂದ ಬಾಂಬೆಗೆ ಪ್ರಯಾಣ ಮಾಡ್ತಿದ್ದ ಆರೋಪಿ ಸೈಯದ್ ಅಲಿ, ರೈಲಿನಲ್ಲಿ ಪರಾರಿಯಾಗ್ತಿದ್ದ. ತುಮಕೂರಿನ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶುಕ್ರವಾರ ಬೆಳಗಿನಜಾವ 4.30 ಕ್ಕೆ ಗುಬ್ಬಿ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ. ಕೂಡಲೇ ಮೂರು ತಂಡಗಳ ಮೂಲಕ ಆರೋಪಿ ಪತ್ತೆಗೆ ಎಸ್ ಪಿ ಅಶೋಕ್ ವೆಂಕಟ್ ಬಲೆ ಬೀಸಿದ್ದಾರೆ.ಗುಬ್ಬಿಯಿಂದ ಬೆಂಗಳೂರು ತೆರಳಿ ಸ್ನೇಹಿತರಿಂದ ಹಣ ಪಡೆದು ಬಾಂಬೆಗೆ ಆರೋಪಿ ಸೈಯದ್ ಅಲಿ ಎಸ್ಕೇಪ್ ಆಗುತ್ತಿದ್ದ. ಬೆಂಗಳೂರಿನಲ್ಲಿ ಸುತ್ತಾಡಿ ತಡರಾತ್ರಿ ಎಸ್ಕೇಪ್ ಆಗ್ತಿದ್ದ. ಆರೋಪಿಯು, ಇನ್ ಸ್ಟಾ ಕಾಲ್ ಸೇರಿದಂತೆ ಆನ್ ಲೈನ್ ಕಾಲ್ ನಲ್ಲಿ ಹಲವರ ಜೊತೆ ಮಾತಾಡಿದ್ದ. ಖಚಿತ ಮಾಹಿತಿ ಮೇರೆಗೆ ಆರೋಪಿಯ ಚಲನವಲನ ಮೇಲೆ ತುಮಕೂರು ಪೊಲೀಸರು ಕಣ್ಣಿಟ್ಟಿದ್ದಾರೆ. ಪೊಲೀಸರ ಸಮಯಪ್ರಜ್ಞೆಯಿಂದ ಪರಾರಿಯಾಗ್ತಿದ್ದ ಆರೋಪಿಯನ್ನ ಘಟನೆ ನಡೆದು 40…
ಮೊನ್ನೆ ಸತ್ತಿದ್ದ ಪೂನಂ ಪಾಂಡೆ ನಿನ್ನೆ ಜೀವಂತವಾಗಿದ್ದು, ನಟಿ ವಿರುದ್ಧ ಕೇಸ್ ದಾಖಲಿಸಲು ಸೂಚನೆ ನೀಡಲಾಗಿದೆ. ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್ ಪೂನಂ ಪಾಂಡೆಯನ್ನು ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್ ಪೂನಂ ಪಾಂಡೆ’ ಟ್ರೆಂಡ್ ಶುರು ಮಾಡಿದ್ದಾರೆ. ಈ ಬೆನ್ನಲ್ಲೇ ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ. ತಮ್ಮ ಪ್ರಚಾರಕ್ಕಾಗಿ ಇಂತಹ ಸ್ಟಂಟ್ಗಳನ್ನ ಮಾಡುವಂತವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಸಾವಿನ ಸುದ್ದಿಯಿಂದ ಗರ್ಭಕಂಠ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಇದು ಕ್ಯಾನ್ಸರ್ ಸಮಸ್ಯೆಯಿಂದ ಬುದುಕುಳಿದಿರುವವರನ್ನು ಗೇಲಿ ಮಾಡಿದಂತಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
ನವದೆಹಲಿ:- ವಿಶ್ವದಲ್ಲೇ ಅತಿ ಹೆಚ್ಚು ಟ್ರಾಫಿಕ್ ಇರೋ ನಗರಗಳ ಲಿಸ್ಟ್ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಪೈಕಿ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ 6ನೇ ಸ್ಥಾನದಲ್ಲಿದ್ದು, ದೇಶದಲ್ಲಿ ಮೊದಲನೇ ಸ್ಥಾನ ಪಡೆದಿದೆ. ಈ ಪೈಕಿ ವಿಶ್ವದ ಟಾಪ್ 10 ಅತಿ ಹೆಚ್ಚು ಸಂಚಾರ ದಟ್ಟಣೆ ಹೊಂದಿರುವ 387 ನಗರಗಳ ಪಟ್ಟಿಯ ಟಾಪ್ 10ರಲ್ಲಿ ಭಾರತದ ಎರಡು ನಗರಗಳಾದ ಬೆಂಗಳೂರು ಹಾಗೂ ಮಹಾರಾಷ್ಟ್ರದ ಪುಣೆ ಕ್ರಮವಾಗಿ 6 ಮತ್ತು 7ನೇ ಸ್ಥಾನದಲ್ಲಿವೆ. ಇನ್ನು ರಾಷ್ಟ್ರ ರಾಜಧಾನಿ ದೆಹಲಿಯು ಪಟ್ಟಿಯಲ್ಲಿ 44ನೇ ಸ್ಥಾನದಲ್ಲಿದೆ. ನಗರದಲ್ಲಿ ಸರಾಸರಿ ವೇಗ 18ಕಿ.ಮೀ.: ಬೆಂಗಳೂರು ನಗರದಲ್ಲಿ ಸಂಚರಿಸುವ ವಾಹನವೊಂದರ ಸರಾಸರಿ ವೇಗವು ಗಂಟೆಗೆ 18 ಕಿ.ಮೀ.ಗಳಾಗಿದೆ. ಅಲ್ಲದೇ ನಗರದಲ್ಲಿ 10 ಕಿ.ಮೀ. ಪ್ರಯಾಣಿಸಲು ಒಂದು ವಾಹನಕ್ಕೆ ಸರಾಸರಿ 28.10 ನಿಮಿಷಗಳ ಸಮಯ ಬೇಕಾಗುತ್ತದೆ ಎಂದು ವರದಿ ಹೇಳಿದೆ. ವಿಶ್ವದಲ್ಲಿ ಲಂಡನ್ ನಂ.1: ಇನ್ನು ಸಮೀಕ್ಷೆ ವರದಿಯ ಪಟ್ಟಿಯಲ್ಲಿ ಅತಿ ಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ನಗರಗಳಲ್ಲಿ ಬ್ರಿಟನ್ ರಾಜಧಾನಿ…