ಮೊಸರು ಮತ್ತು ಮಜ್ಜಿಗೆ ಎರಡೂ ದೇಹಕ್ಕೆ ಆರೋಗ್ಯಕರ. ಪ್ರಾಣಿಗಳ ಹಾಲು ಶುದ್ಧ ಸಸ್ಯಾಹಾರಿ ಅಲ್ಲ ಎಂದು ಅನೇಕ ಜನರು ಭಾವಿಸುತ್ತಾರೆ. ಹಸು ಮತ್ತು ಎಮ್ಮೆ ಎರಡೂ ಹಾಲು ಉತ್ಪಾದಿಸುವ ಪ್ರಾಣಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮೇಕೆ ಮತ್ತು ಒಂಟೆಗಳು ಸಹ ಹಾಲು ನೀಡುತ್ತವೆ ಆದ್ರೆ, ಆದರೆ ಹೆಚ್ಚಿನ ಪ್ರಮಾಣದಲ್ಲಿ ಅಲ್ಲ. ಆದ್ರೆ ಎಲ್ಲವೂ ಆರೋಗ್ಯ ಉತ್ತಮ. ಹಸುವಿನ ಹಾಲು ಎಮ್ಮೆಯ ಹಾಲಿಗಿಂತ ಹೆಚ್ಚು ಪೌಷ್ಟಿಕಾಂಶ ಮತ್ತು ಸುಲಭವಾಗಿ ಜೀರ್ಣವಾಗುತ್ತದೆ. ಹಸುವಿನ ಹಾಲು ಹೆಚ್ಚು ಕೊಬ್ಬಿನ ಅಂಶವನ್ನು ಹೊಂದಿರುತ್ತದೆ. ಹಾಲು ಪೌಷ್ಟಿಕ ಆಹಾರವಾದರೂ, ಇದು ಕೆಲವರಿಗೆ ಅಲರ್ಜಿಯನ್ನು ಉಂಟುಮಾಡುತ್ತದೆ. ಸರಿ, ಮೊಸರು ಸಸ್ಯಾಹಾರವೋ ಅಥವಾ ಮಾಂಸಾಹಾರವೋ ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಹೋಗುವುದಕ್ಕಿಂತ ಮೊದಲು, ಹಾಲಿನ ಪೋಷಕಾಂಶಗಳ ಬಗ್ಗೆ ತಿಳಿದುಕೊಳ್ಳುವುದು ಅವಶ್ಯಕ. ಹಾಲನ್ನು ಅತ್ಯುತ್ತಮ ಪೋಷಕಾಂಶ ಎಂದು ಕರೆಯಲಾಗುತ್ತದೆ. ಇದರಲ್ಲಿ ಪ್ರೋಟೀನ್, ಕ್ಯಾಲ್ಸಿಯಂ, ವಿಟಮಿನ್ ಬಿ, ವಿಟಮಿನ್ ಡಿ ಮುಂತಾದ ಹಲವು ಪೋಷಕಾಂಶಗಳಿವೆ. ನವಜಾತ ಶಿಶುವಿನಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಹಾಲು ಒಂದೇ. ಡೈರಿ…
Author: AIN Author
ಕೊತ್ತಂಬರಿ ಬೀಜಗಳು ಸಂಭವನೀಯ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ನಿಮ್ಮ ದೈನಂದಿನ ದಿನಚರಿಯಲ್ಲಿ ಈ ಪೋಷಕಾಂಶಭರಿತ ಕೊತ್ತಂಬರಿ ಬೀಜವನ್ನು ಬಳಸುವುದರಿಂದ ಆಗುವ ಪ್ರಯೋಜನಗಳಿವು. ಮಸಾಲೆ ಪದಾರ್ಥವಾಗಿ ಮಾತ್ರವಲ್ಲದೆ ಕೊತ್ತಂಬರಿ ಬೀಜ ಅನೇಕ ಇತರೆ ಆರೋಗ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ. ಕೊತ್ತಂಬರಿ ಬಹಳ ಹಳೆಯ ಮೂಲಿಕೆಯಾಗಿದ್ದು, ಇದು ಕ್ರಿ.ಪೂ. 5000ರಷ್ಟು ಹಿಂದೆಯೇ ಪರಿಚಿತವಾಗಿದೆ. ಇದನ್ನು ಮೊದಲು ಇಟಲಿಯಲ್ಲಿ ಬಳಸಲಾಯಿತು. ಭಾರತದ ಅಡುಗೆಯಲ್ಲಿ ಹೆಚ್ಚು ಬಳಸುವ ಕೊತ್ತಂಬರಿಭಾರತದ ಮೂಲದ್ದೇ ಅಲ್ಲ. ಕೊತ್ತಂಬರಿ ಬೀಜವನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಆ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಯಾವ ಪ್ರಯೋಜನಗಳಿವೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. – ಥೈರಾಯ್ಡ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೀರನ್ನು ಸೇವಿಸುವ ಮೂಲಕ ಥೈರಾಯ್ಡ್ ಸಮಸ್ಯೆಗಳನ್ನು ಸುಧಾರಿಸಬಹುದು. ಥೈರಾಯ್ಡ್ ಸಮಸ್ಯೆಗಳು ಅಸಮತೋಲಿತ ವಾತ ಮತ್ತು ಕಫ ದೋಷದಿಂದ ಉಂಟಾಗುವ ಹಾರ್ಮೋನ್ ಅಸಮತೋಲನಗಳಾಗಿವೆ. – ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಹಲವಾರು ಪ್ರಮುಖ ಖನಿಜಗಳು ಕೊತ್ತಂಬರಿ ಬೀಜಗಳನ್ನು ಒಳಗೊಂಡಿರುವ ಅನೇಕ…
ಮಕ್ಕಳ ಮೆದುಳು ಬೆಳವಣಿಗೆ ಹೊಂದುವಂತಹ ಆಹಾರವನ್ನು ನೀಡಿ. ಹಾಗಾಗಿ ಹಾಲಿಗೆ ಈ ವಸ್ತುಗಳನ್ನು ಬೆರೆಸಿ ಕುಡಿಸಿರಿ. ಮಕ್ಕಳಿಗೆ ಹಾಲಿಗೆ ಜೇನುತುಪ್ಪ ಬೆರೆಸಿ ಕೊಟ್ಟರೆ ತುಂಬಾ ಒಳ್ಳೆಯದು. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೇನುತುಪ್ಪ ಮೆದುಳಿನ ಕೋಶಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಇದರಿಂದ ಮಕ್ಕಳ ಮೆದುಳಿನ ಶಕ್ತಿ ಹೆಚ್ಚಾಗುತ್ತದೆ. ಅಲ್ಲದೇ ತ್ರಿಫಲ ಪುಡಿಯನ್ನು ಹಾಲಿನಲ್ಲಿ ಬೆರೆಸಿ ಮಕ್ಕಳಿಗೆ ಕುಡಿಸಿರಿ. ಇದು ದೇಹವನ್ನು ನಿರ್ವಿಷಗೊಳಿಸಿ ಮನಸ್ಸನ್ನು ಚುರುಕಾಗಿಸುತ್ತದೆ. ತ್ರಿಫಲ ಪುಡಿಯಲ್ಲಿ ವಿಟಮಿನ್ ಎಬಿಸಿ ಮತ್ತು ಒಮೆಗಾ 3 ನಂತಹ ಅನೇಕ ಜೀವಸತ್ವಗಳಿವೆ. ಇದು ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗೇ ಮಕ್ಕಳಿಗೆ ವಾಲ್ ನಟ್ಸ್ ಪುಡಿಯನ್ನು ಹಾಲಿನಲ್ಲಿ ಬೆರೆಸಿ ನೀಡಿ. ಅಲ್ಲದೇ ಅವರಿಗೆ ಇಷ್ಟವಾದ ಒಣಹಣ್ಣುಗಳನ್ನು ಪುಡಿಮಾಡಿ ಅದನ್ನು ಹಾಲಿನಲ್ಲಿ ಬೆರೆಸಿ ನೀಡಿ. ಇದು ಮೆದುಳಿನ ಕಾರ್ಯಕ್ಕೆ ಸಹಾಯ ಮಾಡುವಂತಹ ಪೋಷಕಾಂಶಗಳನ್ನು ಒಳಗೊಂಡಿದೆ.
ಡ್ರೋನ್ ಪ್ರತಾಪ್ (Drone Pratap) ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳದೇ ಇದ್ದರೂ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರಿಗೆ ಹೇಳಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸೋದಾಗಿ ಡ್ರೋನ್ ಪ್ರತಾಪ್ ಹಣ ಪಡೆದು ವಂಚಿಸಿದ್ದಾರೆ ಎಂದು ಚಂದನ್ ಕುಮಾರ್ ಗೌಡ ಎನ್ನುವವರು ದೂರು ನೀಡಿದ್ದಾರೆ. ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಡ್ರೋನ್ ಪ್ರತಾಪ್ ತಮ್ಮಿಂದ ಎರಡು ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರಿಗೆ ಚಂದನ್ ಕುಮಾರ್ ದೂರು ನೀಡಿದ್ದಾರೆ. ಈ ಕುರಿತಂತೆ ಡ್ರೋನ್ ಪ್ರತಾಪ್ ಜೊತೆ ಮಾತನಾಡಿರುವ ಆಡಿಯೋವನ್ನೂ ಅವರು ನೀಡಿದ್ದಾರೆ ಚಂದನ್ ಕುಮಾರ್ ಮತ್ತು ಡ್ರೋನ್ ಆಡಿದ ಆಡಿಯೋದಲ್ಲಿ , ನಂದು ಸ್ವಲ್ಪ ಕಾಂಟ್ರವರ್ಸಿ ಅದ್ಮೇಲೆ ಯುತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಡ್ತೇವೆ ಬಾ ಅಂದ್ರು. ಆಗ ನಾನು ಹೆಚ್ ಡಿಕೆ ಜೊತೆ ಇದ್ದೆ ಎಂದು ಡ್ರೋನ್ ಹೇಳ್ತಾರೆ. ದೂರುದಾರ ಚಂದನ್,’ ತುಂಬಾ ಜನಪ್ರಿಯವಾಗಿದ್ರಿ ಅಂತಾರೆ. ಮತ್ತೆ ಡ್ರೋನ್ ಪ್ರತಾಪ್ , ನನ್ನ ಭಾವಚಿತ್ರ…
ಬೆಂಗಳೂರು: ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಗೌರವ ಸಂದಿರುವುದು ಹೆಮ್ಮೆಯ ವಿಷಯವಾಗಿದ್ದು, ಅವರಿಗೆ ಅಭಿನಂದನೆ. ಎಲ್. ಕೆ. ಅಡ್ವಾಣಿ ಅವರು ನಿಜವಾದ ಭಾರತದ ಮಣ್ಣಿನ ಮಗನಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾಣಿಯವರಿಗೆ ಭಾರತ ರತ್ನ ಗೌರವ ಸಂದಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಅಡ್ವಾಣಿಯವರು ದೇಶ ವಿಭಜನೆಯ ಸಂದರ್ಭದಲ್ಲಿ ಭಾರತಕ್ಕೆ ಬಂದು ನೆಲೆಸಿದರು. ಅವರಿಗೆ ಭಾರತ ರತ್ನ ಗೌರವ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಅಡ್ವಾಣಿಯವರು ತಮ್ಮ ಸಾರ್ವಜನಿಕ ಜೀವನವನ್ನು ಜನಸಂಘದಿಂದ ಆರಂಭಿಸಿ, ಶ್ಯಾಮಪ್ರಸಾದ ಮುಖರ್ಜಿ ಅವರ ಜೊತೆಗೆ ಕಾಶ್ಮೀರ ಹೋರಾಟದಲ್ಲಿ ಪಾಲ್ಗೊಂಡು ತಮ್ಮ ದೇಶಪ್ರೇಮವನ್ನು ಮೆರೆದರು. ರಾಮಜನ್ಮಭೂಮಿ ಹೋರಾಟದಲ್ಲಿ ಅಡ್ವಾಣಿಯವರು ಅತ್ಯಂತ ಪ್ರಮುಖ ಪಾತ್ರವಹಿಸಿ, ದೇಶವನ್ನು ಭಾವನಾತ್ಮಕವಾಗಿ ಒಗ್ಗೂಡಿಸಿದರು. ಅವರ ಹೋರಾಟದ ಫಲವಾಗಿ ಕೋಟ್ಯಂತರ ಭಾರತೀಯರ ಕನಸಾಗಿದ್ದ ರಾಮಂದಿರ ಇಂದು ನನಸಾಗಿದೆ.
ಹುಬ್ಬಳ್ಳಿ: ಶೈಕ್ಷಣಿಕ ಪರೀಕ್ಷೆಗಳಿಗೆ ಬಯಪಡದೆ ಪರಿಪೂರ್ಣವಾಗಿ ಸಿದ್ಧಪಡಿಸಿಕೊಂಡು ಪರಿಕ್ಷೆಗಳನ್ನು ಎದುರಿಸಿ ಉತ್ತಮ ವಿದ್ಯಾರ್ಥಿಗಳಾಗಿರಿ, ನಿಮ್ಮ ಬಾಳು ಬಂಗಾರವಾಗಲಿ, ಕಾಲೇಜು ಜೀವನದಿಂದಲೆ ನಾವು ಉತ್ತಮ ಮನುಷ್ಯರಾಗಿ ಬದುಕುತ್ತ ಉಸಿರು ನಿಂತರು ಹೆಸರು ಉಳಿಸಬೇಕು ಎಂದು ಕನಕದಾಸ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ರವೀಂದ್ರನಾಥ ದಂಡಿನ ಹೇಳಿದರು. ನಗರದ ಕನಕದಾಸ ಶಿಕ್ಷಣ ಸಮಿತಿಯ ವಿಜಯನಗರ ಪದವಿ ಪೂರ್ವ ಕಾಲೇಜಿನ ಡಾ. ಬಿ.ಎಫ್ ದಂಡಿನ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪಾರಿತೋಷಕ ವಿತರಣೆ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಅವರು ಮಾತನಾಡಿದರು. ಪಿ.ಯು ವಿದ್ಯಾರ್ಥಿಗಳು ತಮ್ಮ ಪ್ರಬುದ್ಧತೆಯನ್ನು ಹೆಚ್ಚು ಮಾಡಿಕೊಂಡು, ಜೀವನದ ಗುರಿಯನ್ನು ತಲುಪಬೇಕು. ಓದುವ ಹಂತದಲ್ಲಿ ಬೇರೆಕಡೆ ಗಮನಹರಿಸದೆ ಅಭ್ಯಾಸಕ್ಕೆ ಒತ್ತು ನೀಡಿದರೆ ಗಿರಿ ತಲುಪುವ ಹಾದಿ ಸುಗಮವಾಗುತ್ತದೆ ಎಂದು ಕಿವಿಮಾತು ಹೇಳಿದರು. ನಿನ್ನೆ ಏನು ಆಯಿತು ಎಂಬ ಅರಿವಿನಿಂದ ಮುಂದೆ ಮಾಡಬಹುದಾದ ಗುರಿಸಾಧನೆಗಳನ್ನು ಇಂದು ಸಿದ್ಧಮಾಡಿಕೊಳ್ಳಬೇಕು. ಮತ್ತು ಸಮಯಕ್ಕೆ ಯಾರು ಬೆಲೆ ಕೊಡುತ್ತಾರೊ ಅವರು ಜೀವನದಲ್ಲಿ ಮುಂದೆ ಬರುತ್ತಾರೆ ಎಂದು ತಿಳಿಸಿದರು. ದೇಶಕ್ಕಾಗಿ…
ಪಂಜಾಬ್ : ಪಂಜಾಬ್ ನ ರಾಜ್ಯಪಾಲರಾದ ಪನ್ವಾರಿ ಲಾಲ್ ಪುರೋಹಿತ್ ಅವರು ತಮ್ಮ ರಾಜ್ಯಪಾಲ ಸ್ಥಾನಕ್ಕೆ ರಾಜಿನಾಮೆಯನ್ನು ಸಲ್ಲಿಸಿದ್ದಾರೆ. ಈ ಕುರಿತು ಪತ್ರವನ್ನು ಬರೆದಿರುವ ಅವರು, ನಾನು ನನ್ನ ವೈಯಕ್ತಿಕ ಕಾರಣಕ್ಕೆ ಪಂಜಾಬ್ ರಾಜ್ಯದ ರಾಜ್ಯಪಾಲ ಹುದ್ದೆಗೆ ಹಾಗು ಕೇಂದ್ರಾಡಳಿತ ಪ್ರದೇಶ ಚಂಡಿಘಡದ ರಾಜ್ಯಪಾಲ ಸ್ಥಾನಕ್ಕೆ ರಾಜಿನಾಮೆಯನ್ನು ಸಲ್ಲಿಸುತ್ತಿದ್ದೇನೆ ನನ್ನ ರಾಜೀನಾಮೆಯನ್ನು ಸ್ವೀಕರಿಸಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಆಡಳಿತವನ್ನು ನಡೆಸುತ್ತಿದ್ದು ಮುಖ್ಯಮಂತ್ರಿಗಳಾಗಿ ಭಗವಂತ್ ಮಾನ್ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಡುವೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ತಮ್ಮ ರಾಜ್ಯಪಾಲ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿದ್ದಾರೆ.
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಕ್ಷೇತ್ರವನ್ನು ಗೆಲ್ಲುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ತುಮಕೂರಿನಲ್ಲಿ ಬಿಜೆಪಿ ಆಯೋಜಿಸಿದ್ದ ರಾಜ್ಯ ಮಟ್ಟದ ಶಕ್ತಿವಂದನಾ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. “ಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರ ಸದ್ಯದಲ್ಲೇ ಹೈಮಾಂಡ್ ಮಟ್ಟದಲ್ಲಿ ಚರ್ಚೆಯಾಗಿ ತೀರ್ಮಾನವಾಗಲಿದೆ. ಮಾಜಿ ಸಚಿವ ವಿ ಸೋಮಣ್ಣ ತುಮಕೂರಿನಲ್ಲಿ ಸ್ಪರ್ಧಿಸಲು ವರಿಷ್ಠರು ಒಪ್ಪಿಗೆ ಸೂಚಿಸಿದರೆ, ನಮ್ಮದೇನು ಅಭ್ಯಂತರವಿಲ್ಲ” ಎಂದಿದ್ದಾರೆ. “ಸೋಮಣ್ಣನವರು ಹಿರಿಯರಿದ್ದಾರೆ. ಪಕ್ಷ ಒಟ್ಟಾಗಿ ಕೂತು ಚರ್ಚೆ ಮಾಡಲಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿಯೇ ವರಿಷ್ಠರು ತೀರ್ಮಾನ ಮಾಡುತ್ತಾರೆ. ತುಮಕೂರು ಜಿಲ್ಲೆಗೆ ಸೋಮಣ್ಣ ಅವರು ಸ್ಪರ್ಧಿಸುವ ವಿಚಾರವೂ ಕೂಡ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ ನಂತರ ತೀರ್ಮಾನ ಮಾಡಲಾಗುತ್ತದೆ” ಎಂದು ತಿಳಿಸಿದರು. “ಸೋಮಣ್ಣನವರು ಹಿರಿಯರಿದ್ದಾರೆ. ಪಕ್ಷ ಒಟ್ಟಾಗಿ ಕೂತು ಚರ್ಚೆ ಮಾಡಲಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿಯೇ ವರಿಷ್ಠರು ತೀರ್ಮಾನ ಮಾಡುತ್ತಾರೆ.…
ಹುಬ್ಬಳ್ಳಿ; ಕಳೆದ ಜನೆವರಿ 26 ರಂದು ರಾಜ್ಯ ವ್ಯಾಪಿ ಬಿಡುಗಡೆಯಾದ ನಮ್ಮ ಉಪಾಧ್ಯಕ್ಷ ಚಿತ್ರಕ್ಕೆ ಈಗ ಉತ್ತರ ಕರ್ನಾಟಕ ಸೇರಿ ಎಂಟೈರ್ ಕರ್ನಾಟಕದಲ್ಲಿ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು, ಬರುವ ದಿನಗಳಲ್ಲಿ ಮಲ್ಟಿಪ್ಲೆಕ್ಸ್ನಲ್ಲಿ ಚಿತ್ರ ಬುಡುಗಡೆ ಮಾಡಲಾಗುವುದು ಎಂದು ಚಿತ್ರ ನಟ ಚಿಕ್ಕಣ್ಣ ಹೇಳಿದರು. ನಗರದಲ್ಲಿ ಉಪಾಧ್ಯಕ್ಷ ಚಿತ್ರದ ಯಶಸ್ವಿ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ಅಪಾಧ್ಯಕ್ಷ ಚಿತ್ರವನ್ನು 150 ಚಿತ್ರ ಮಂದಿರಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ವಾರ ಇದಕ್ಕೆ ಮತ್ತೆ 50 ಚಿತ್ರ ಮಂದಿರಗಳು ಆ್ಯಡ್ ಆಗಿವೆ. ಈಗ ಒಟ್ಟು 222 ಚಿತ್ರ ಮಂದಿರಗಳಲ್ಲಿ ಚಿತ್ರ ಪ್ರದರ್ಶನವಾಗುತ್ತಿದೆ. ಕುಟುಂಬ ಸಮೇತರಾಗಿ ಚಿತ್ರ ಪ್ರೇಮಿಗಳು ಬಂದು ಚಿತ್ರ ವೀಕ್ಷಣೆ ಮಾಡುತ್ತಿದ್ದಾರೆ, ಇದು ತುಂಬಾ ಸಂತಸದ ಸಂಗತಿಯಾಗಿದೆ. ಇನ್ನೂ ಚುತ್ರ ಕಲೆಕ್ಷನ್ ಕೂಡಾ ಒಳ್ಳೆಯ ರೀತಿ ಸಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಜೊತೆಗೆ ಎಲ್ಲ ಚಿತ್ರ ರಸಿಕರು ಬಂದು ಯಾರು ಸಿನಿಮಾ ನೋಡಿಲ್ಲಾ, ಅವರೆಲ್ಲರೂ ಕುಟುಂಬ ಸಮೇತರಾಗಿ ಚಿತ್ರವನ್ನು ಆರ್ಶೀವಾದ…
ಶಿವಮೊಗ್ಗ: ನನ್ನ ಜೀವನಲ್ಲಿ ಮೂರು ಸಂತೋಷದ ದಿನಗಳನ್ನು ಬರುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ ಅದರಲ್ಲಿ ಎಲ್.ಕೆ ಅಡ್ವಾನಿಯವರಿಗೆ ಭಾರತ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿರುವುದು ಕೂಡ ಅದರಲ್ಲಿ ಒಂದು ಎಂದು ಅವರು ಸಂತಸ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಮಾದ್ಯಮದ ಜೊತೆ ಮಾತನಾಡಿದ ಅವರು, ಭಾರತದ ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾನಿಯವರಿಗೆ ಭಾರತ ಸರ್ಕಾರವು ಭಾರತ ರತ್ನ ನೀಡಿರುವುದು ಸಂಸತದ ಸಂಗತಿ, ರಥಯಾತ್ರೆ ಮಾಡುವಾಗ ನಾನು ಅಡ್ವಾಣಿಯವರ ಜೊತೆಯಲ್ಲಿ ಭಾಗವಹಿಸಿದ್ದೆ ಎಂದರು. ನನ್ನ ಜೀವನದಲ್ಲಿ ಮೂರು ಸಂತೋಷದ ದಿನಗಳು ಬರುತ್ತೆ ಅಂದುಕೊಂಡಿರಲಿಲ್ಲ. ಜೀವಂತವಾಗಿ ಇರುವಾಗಲೇ ರಾಮ ಮಂದಿರ ನನಸಾಗುತ್ತೆ ಅಂದುಕೊಂಡಿರಲಿಲ್ಲ ಅದು ನನಸಾಯಿತು. ಕಾಶಿ ವಿಶ್ವನಾಥನ ಜ್ಞಾನವ್ಯಾಪಿ ಜಾಗದಲ್ಲಿ ಪೂಜೆ ಆಗುವುದನ್ನು ಕಣ್ಣಿನಿಂದ ನೋಡಿ ಆನಂದ ಆಯ್ತು. ಇಡೀ ದೇಶದ ಕಾರ್ಯಕರ್ತರನ್ನ ಸಂಘಟನೆಗೆ ತೊಡಗಿಸಿದವರು ರಾಜಕೀಯ ಭೀಷ್ಮ ಅಡ್ವಾನಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿರುವುದು ನೋಡುತ್ತಿರುವುದು ಆನಂದ ತಂದಿದೆ ಎಂದರು. ಎಂಎಲ್ಎ, ಎಂಪಿ ಸಿಗಲಿಲ್ಲ ಅಂತ ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ…