ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಇಂಗ್ಲೆಂಡ್ ನ ಅನುಭವಿ ಸ್ಪಿನ್ನರ್ ಜ್ಯಾಕ್ ಲೀಚ್ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರನಡೆದಿದ್ದು ತಂಡಕ್ಕೆ ಆರಂಭಿಕ ಆಘಾತ ಉಂಟಾಗಿದೆ. ಸ್ಕೈ ಸ್ಪೋರ್ಟ್ಸ್ ಜೊತೆ ಸಂವಾದ ನಡೆಸಿರುವ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್, “ಇಂಗ್ಲೆಂಡ್ ನ ಅನುಭವಿ ಸ್ಪಿನ್ನರ್ ಜ್ಯಾಕ್ ಲೀಚ್ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರು ಮೊಣಕಾಲಿನ ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ. “ಲೀಚ್ ತಂಡದಿಂದ ಹೊರ ಬಿದ್ದಿರುವುದು ನಿಜಕ್ಕೂ ಇಂಗ್ಲೆಂಡ್ ತಂಡಕ್ಕೆ ದೊಡ್ಡ ಅವಮಾನವಾಗಿದೆ. ಆತ(ಜ್ಯಾಕ್ ಲೀಚ್) ನಿಗೂ ತಲೆತಗ್ಗಿಸುವಂತಹ ವಿಷಯವಾಗಿದೆ. ಆದರೆ ನಾವು ಫಿಸಿಯೋ ಹಾಗೂ ವೈದ್ಯರ ತಂಡದೊಂದಿಗೆ ಸತತ ಸಂಪರ್ಕದಲ್ಲಿದ್ದೇವೆ. ಅಲ್ಲದೆ ಗಾಯದ ಸಮಸ್ಯೆಯು ಗಂಭೀರ ಸ್ವರೂಪವಾಗಿಲ್ಲದ ಕಾರಣ ಆತ ಶೀಘ್ರವೇ ತಂಡವನ್ನು ಕೂಡಿಕೊಳ್ಳಲಿದ್ದಾರೆ” ಎಂದು ಬೆನ್ ಸ್ಟೋಕ್ಸ್ ಹೇಳಿದ್ದಾರೆ. ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ ನ 26ನೇ ಓವರ್ ನಲ್ಲಿ ಜ್ಯಾಕ್ ಲೀಚ್ ಅವರು ಗಾಯಗೊಂಡಿದ್ದು…
Author: AIN Author
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲು ಆರಂಭಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಹಾಗೆಯೇ ಪ್ರಧಾನಿ ಮೋದಿ (Narendra Modi) ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಕೂಡ ಇದಾಗಿರಲಿದೆ. ಲೋಕಸಭೆ ಚುನಾವಣೆಯ ನಂತರ ಸರ್ಕಾರ ರಚನೆಯಾಗುವವರೆಗೆ ಮಧ್ಯಂತರ ಬಜೆಟ್ (Union Budget 2024) ಮಧ್ಯಂತರ ಅವಧಿಯ ಹಣಕಾಸಿನ ಅಗತ್ಯಗಳನ್ನು ನೋಡಿಕೊಳ್ಳುತ್ತದೆ. ಹೊಸ ಸರ್ಕಾರದಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುವುದು. ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡುವ ಮೂಲಕ ಸಂಸತ್ತಿನ ಬಜೆಟ್ ಅಧಿವೇಶನ ಬುಧವಾರ ಪ್ರಾರಂಭವಾಯಿತು. ರಾಷ್ಟ್ರಪತಿ ಭಾಷಣದಲ್ಲಿ, 2023 ದೇಶಕ್ಕೆ ಐತಿಹಾಸಿಕ ವರ್ಷವಾಗಿದೆ. ದೇಶವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯ ವೇಗವನ್ನು ಮುಂದುವರೆಸಿದೆ ಎಂದು ಹೇಳಿದ್ದರು.
ವಿನಯ್ (Vinay) ಮೊದಲ ಬಾರಿ ಮನಸಿನ ಮಾತನ್ನು ಹಂಚಿಕೊಂಡಿದ್ದಾರೆ. ಬಿಗ್ ಬಾಸ್ನಿಂದ (Bigg Boss Kannada) ಹೊರ ಬಂದ ಮೇಲೆ ಒಳಗಿದ್ದ ಸಂತಸ, ನೋವು, ಎಲ್ಲವನ್ನು ಹರವಿಟ್ಟಿದ್ದಾರೆ. ಗೆಲ್ಲಲೇಬೇಕೆಂದು ಅಖಾಡಕ್ಕೆ ಇಳಿದಿದ್ದ ಆನೆ ಈಗ ಏನನ್ನು ಹೇಳಿದ್ದಾರೆ ? ಯಾರನ್ನು ದೂರಿದ್ದಾರೆ ? ಯಾರನ್ನು ಹತ್ತಿರ ಬಿಟ್ಟುಕೊಂಡಿದ್ದಾರೆ ? ಸುದೀಪ್, ಸಂಗೀತಾ ಸೇರಿದಂತೆ ಎಲ್ಲರ ಬಗ್ಗೆ ಏನೇನು ಅನಿಸಿಕೆ ಹರವಿಟ್ಟಿದ್ದಾರೆ ? ಅದರ ಎಕ್ಸ್ ಕ್ಲ್ಯೂಸಿವ್ ಮಾಹಿತಿ ಇಲ್ಲಿದೆ. ಆನೆ ಘೀಳಿಟ್ಟಿದೆ. ಅಫ್ಕೋರ್ಸ್ ಬಿಗ್ಬಾಸ್ ಮನೆಯಲ್ಲಿದ್ದಾಗಲೇ ಆನೆ ಸುಮ್ಮನಿರಲಿಲ್ಲ. ಆಟ ಆಡುತ್ತಾ ಆಡುತ್ತಾ ರೊಚ್ಚೆಗೇಳುತ್ತಿದ್ದರು. ಸೇಮ್ ಟೈಮ್ ಇನ್ನೊಬ್ಬರನ್ನು ಅದೇ ರೀತಿ ಕೆಣಕುತ್ತಿದ್ದರು. ಅದನ್ನು ಉದ್ದೇಶ ಪೂರ್ವಕವಾಗಿ ಮಾಡಿರಲಿಲ್ಲ. ಆದರೆ ಕೆಲವರು ಹಾಗಂದುಕೊಂಡರು. ಏನಾದರೂ ಆಗಲಿ, ಕೊನೆಗೂ ಬಿಗ್ ಬಾಸ್ ಟಾಪ್ ಫೈವ್ ಸ್ಪರ್ಧಿಗಳಲ್ಲಿ ಒಬ್ಬರಾದರು. ಕರುನಾಡಿನಿಂದ ಶಬ್ಬಾಶ ಎನಿಸಿಕೊಂಡರು. ದಟ್ ಈಸ್ ವಿನಯ್ ಪವರ್. ಬಿಗ್ ಬಾಸ್ ಮನೆಯಲ್ಲಿ ವಿನಯ್ ಕೊನೇವರೆಗೂ ಇದ್ದರು. ಆರಂಭದಲ್ಲಿ ಇವರು ಅಷ್ಟು ದಿನ ಇರುವುದಿಲ್ಲ…
ಬೆಂಗಳೂರು: ಇಂದಿನಿಂದ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಶೀಘ್ರದಲ್ಲೇ ಲೋಕಸಭೆ ಚುನಾವಣೆ ನಡೆಯಲಿರುವ ಕಾರಣ, ಈ ಸಲದ ಬಜೆಟ್ ಕೇವಲ ವೋಟ್ ಆನ್ ಅಕೌಂಟ್ ಆಗಿರುತ್ತದೆ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಪಕ್ಷ ಹೊಸ ಸರ್ಕಾರ ರಚನೆ ಮಾಡಿ, ಜೂನ್ ನಲ್ಲಿ ಹೊಸ ಹಣಕಾಸು ವರ್ಷ (2024-25)ಕ್ಕೆ ಬೇಕಾದ ಪೂರ್ಣ ಬಜೆಟ್ ಮಂಡಿಸಲಿದೆ. ವೋಟ್ ಆನ್ ಅಕೌಂಟ್ನಲ್ಲಿ ಅಥವಾ ಮಧ್ಯಂತರ ಬಜೆಟ್ನಲ್ಲಿ ಜೂನ್ ಕೊನೆ ತನಕ ಸರ್ಕಾರದ ಖರ್ಚುವೆಚ್ಚ ನಿಭಾಯಿಸುವುದಕ್ಕೆ ಬೇಕಾದ ಹಣಕಾಸಿನ ಅನುಕೂಲಗಳನ್ನು ಮಾಡಿಕೊಡಲಾಗುತ್ತದೆ. ಬಜೆಟ್ನಿಂದ ರಾಜ್ಯದ ಜನರ ನಿರೀಕ್ಷೆಗಳೇನು? ಬರೀ ಘೋಷಣೆಗೆ ಮಾತ್ರ ಸೀಮಿತವಾಗಿರುವ ಗದಗ-ಯಲವಗಿ ರೈಲು ಮಾರ್ಗ ಅನುಷ್ಟಾನ ಗೊಳಿಸಲು ಅಗತ್ಯ ಅನುದಾನ. ಹೊಸ ರೈಲ್ವೆ ಮಾರ್ಗ, ರಾಜ್ಯ ರೈಲ್ವೆ ಡಬ್ಲಿಂಗ್, ಹೊಸ ಮಾರ್ಗ ಘೋಷಣೆ ಪೆಟ್ರೋಲ್-ಡೀಸೆಲ್, ಸಿಲಿಂಡರ್ ದರ ಇಳಿಕೆ ಮಾಡಬೇಕು. ಕಳೆದ ವರ್ಷ ಬಜೆಟ್ನಲ್ಲಿಘೋಷಿಸಿರುವ ಬೇಡ್ತಿ-ವರದಾ ನದಿ ಜೋಡಣೆ ಜಾರಿಗೊಳಿಸಲು ಅಗತ್ಯ ಅನುದಾನ. ಕೃಷಿಕರ ಸಾಲ ಸೌಲಭ್ಯಕ್ಕೆ ಸಿಬಿಲ್…
ಬೆಂಗಳೂರು: ಜಯದೇವ ಆಸ್ಪತ್ರೆಯ ನಿರ್ದೇಶಕರ (Jayadeva Hospital Director) ಸ್ಥಾನದಿಂದ ಡಾ. ಸಿಎನ್ ಮಂಜುನಾಥ್ (CN Manjunath) ಅವರು ನಿವೃತ್ತಿಯಾದ ಹಿನ್ನೆಲೆ, ಇದೀಗ ನಿರ್ದೇಶಕರ ಹುದ್ದೆಗಾಗಿ ವೈದ್ಯಕೀಯ ಶಿಕ್ಷಣ ಇಲಾಖೆಗೆ 21 ವೈದ್ಯರು ಅರ್ಜಿ ಸಲ್ಲಿಸಿದ್ದಾರೆ ಎಂದು ಇಲಾಖೆಯ ಉನ್ನತ ಅಧಿಕಾರಿಗಳಿಂದ ಮಾಹಿತಿ ದೊರೆತಿದೆ. ವೈದ್ಯಕೀಯ ಕಾಲೇಜ್ಗಳಲ್ಲಿ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿದ, ಬೆಂಗಳೂರು ಮತ್ತು ಮೈಸೂರು ಭಾಗದವರಿಂದ ಅರ್ಜಿ ಸಲ್ಲಿಕೆಯಾಗಿದೆ. ಈ 21 ಅರ್ಜಿಯಲ್ಲಿ 11 ಅಭ್ಯರ್ಥಿಗಳು ಈ ಹುದ್ದೆಗೆ ಅರ್ಹತೆ ಹೊಂದಿದ್ದಾರೆ. ಇನ್ನುಳಿದ 10 ಅರ್ಜಿಗಳಿಗೆ ಹುದ್ದೆಗೆ ಬೇಕಾದ ಅರ್ಹತೆ ಇಲ್ಲ ಎಂದು ತಿಳಿದು ಬಂದಿದೆ. ಸರ್ಕಾರ ಮುಂದಿನವಾರ ಜಯದೇವ ಆಸ್ಪತ್ರೆಯ ನಿರ್ದೇಶಕರನ್ನ ಆಯ್ಕೆ ಮಾಡುವ ಸಾಧ್ಯತೆ ಇದೆ. ಈಗ ಜಯದೇವ ಆಸ್ಪತ್ರೆಯ (Jayadeva Hospital) ಪ್ರಭಾರ ನಿರ್ದೇಶಕರಾಗಿ ಡಾ. ರವೀಂದ್ರ ಅವರನ್ನು ನೇಮಿಸಲಾಗಿದೆ. ಡಾ. ರವೀಂದ್ರ ಅವರು ನಿರ್ದೇಶಕರ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ. ಜಯದೇವ ಆಸ್ಪತ್ರೆ ನಿರ್ದೇಶಕ ಹುದ್ದೆ ಯಾರಿಗೆ ಒಲಿಯಲಿದೆ ಎಂಬುದೇ ಇದೀಗ ಕುತೂಹಲ ಮೂಡಿಸಿದೆ.…
ನವದೆಹಲಿ: ಕೇಂದ್ರ ಸಚಿವ ರಾವ್ ಇಂದರ್ಜಿತ್ ಅವರು ಸಂಸತ್ತಿಗೆ ಆಗಮಿಸಿದ್ದು, ಈ ಬಜೆಟ್ ಪ್ರಗತಿಪರವಾಗಿದ್ದು, ದೇಶದ ಅಭಿವೃದ್ಧಿಗಾಗಿಯೇ ಎಂದು ಹೇಳಿದ್ದಾರೆ. ಇನ್ನೂ ವೇಳೆ ನಿರ್ಮಲಾ ಸೀತಾರಾಮನ್ʼಗೆ ರಾಷ್ಟ್ರಪತಿ ಮುರ್ಮು ಸಿಹಿ ತಿನ್ನಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಹಾಗೆಯೇ ಪ್ರಧಾನಿ ಮೋದಿ (Narendra Modi) ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಕೂಡ ಇದಾಗಿರಲಿದೆ. ಲೋಕಸಭೆ ಚುನಾವಣೆಯ ನಂತರ ಸರ್ಕಾರ ರಚನೆಯಾಗುವವರೆಗೆ ಮಧ್ಯಂತರ ಬಜೆಟ್ (Union Budget 2024) ಮಧ್ಯಂತರ ಅವಧಿಯ ಹಣಕಾಸಿನ ಅಗತ್ಯಗಳನ್ನು ನೋಡಿಕೊಳ್ಳುತ್ತದೆ. ಹೊಸ ಸರ್ಕಾರದಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುವುದು.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಹಾಗೆಯೇ ಪ್ರಧಾನಿ ಮೋದಿ (Narendra Modi) ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಕೂಡ ಇದಾಗಿರಲಿದೆ. ಬಜೆಟ್ ಮಂಡನೆ ಬೆಳಗ್ಗೆ 11 ಗಂಟೆಗೆ ಶುರುವಾಗಲಿದೆ. ಬಜೆಟ್ನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಮಹತ್ವದ ಘೋಷಣೆಯಾಗಬಹುದು. ಯೋಜನೆಗೆ 12500 ಕೋಟಿ ರೂ. ಎಲ್ಲಾ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳನ್ನು ಸಹ ಇದರಲ್ಲಿ ಸೇರಿಸಲಾಗುವುದು. ಎಲೆಕ್ಟ್ರಿಕ್ ವಾಹನಗಳು ಮತ್ತು ಹೈಬ್ರಿಡ್ ವಾಹನಗಳಿಗೆ ಸಬ್ಸಿಡಿಯನ್ನು ಮುಂದುವರಿಸಲು ಸಿದ್ಧತೆಗಳು ನಡೆದಿವೆ. ಲೋಕಸಭೆ ಚುನಾವಣೆಯ ನಂತರ ಸರ್ಕಾರ ರಚನೆಯಾಗುವವರೆಗೆ ಮಧ್ಯಂತರ ಬಜೆಟ್ (Union Budget 2024) ಮಧ್ಯಂತರ ಅವಧಿಯ ಹಣಕಾಸಿನ ಅಗತ್ಯಗಳನ್ನು ನೋಡಿಕೊಳ್ಳುತ್ತದೆ. ಹೊಸ ಸರ್ಕಾರದಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುವುದು.
ಬೆಂಗಳೂರು: ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ನ್ಯಾಯಮೂರ್ತಿ ಕುಮಾರ್ ಅವರು ಈಗ ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಪ್ರಸನ್ನ ಬಿ. ವರಾಳೆ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ಹಂಗಾಮಿ ಸಿಜೆಯಾಗಿ ನೇಮಕಗೊಂಡಿದ್ದರು ನ್ಯಾ.ಪಿ.ಎಸ್. ದಿನೇಶ್ ಕುಮಾರ್ ಫೆಬ್ರವರಿ 24ರಂದು ಕರ್ತವ್ಯದಿಂದ ನಿವೃತ್ತರಾಗಲಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅವರ ಅಧಿಕಾರ ಅವಧಿ ಒಂದು ತಿಂಗಳಿಗೂ ಮೊದಲೇ ಕೊನೆಯಾಗಲಿದೆ. ನ್ಯಾಯಮೂರ್ತಿ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಬೇಕು ಎಂದು ಸುಪ್ರೀಂ ಕೋರ್ಟ್ನ ಕೊಲಿಜಿಯಂ ಜನವರಿ 19ರಂದು ಶಿಫಾರಸು ಮಾಡಿತ್ತು.
ಪುಷ್ಪ ಸಿನಿಮಾ ಶೂಟಿಂಗ್ ಸೆಟ್ ನಿಂದ ಅಲ್ಲು ಅರ್ಜುನ್ ಅವರ ಫೋಟೋವೊಂದು ಲೀಕ್ (Photo Leak) ಆಗಿದ್ದು, ಈ ಕೃತ್ಯ ಮಾಡಿದವರ ವಿರುದ್ಧ ಚಿತ್ರತಂಡ ಗರಂ ಆಗಿದೆ. ಅಲ್ಲು ಅರ್ಜುನ್ ಅವರು ಸೀರೆ ತೊಟ್ಟು ಶೂಟಿಂಗ್ ಗಾಗಿ ಕಾಯುತ್ತಿರುವ ಫೋಟೋ ಅದಾಗಿದ್ದು, ಸಿನಿಮಾದ ಪ್ರಮುಖ ದೃಶ್ಯದಲ್ಲಿ ಅವರು ಆ ರೀತಿ ಕಾಣಲಿದ್ದಾರಂತೆ. ಅದೇ ಫೋಟೋ ಇದೀಗ ಲೀಕ್ ಆಗಿ ಗುಟ್ಟು ರಟ್ಟು ಮಾಡಿದೆ. ಈ ನಡುವೆ ಪುಷ್ಪ-2 ಬಿಡುಗಡೆ ಕುರಿತಂತೆ ಮತ್ತೊಂದು ಸ್ಪಷ್ಟನೆ ಬಂದಿದೆ. ಅಲ್ಲಿಗೆ ನಿಗದಿತ ದಿನಾಂಕದಂದೆ ಸಿನಿಮಾ ರಿಲೀಸ್ (Released) ಆಗುವುದು ಫಿಕ್ಸ್ ಆಗಿದೆ. ನಿನ್ನೆಯಷ್ಟೇ ನಿರ್ಮಾಣ ಸಂಸ್ಥೆಯು ಪೋಸ್ಟರ್ ಹಂಚಿಕೊಂಡಿದ್ದು, ಪುಷ್ಪ 2 ಸಿನಿಮಾ ರಿಲೀಸ್ ಗೆ 200 ದಿನವಷ್ಟೇ ಬಾಕಿ ಎಂದು ಬರೆದಿತ್ತು. ಈ ಹಿಂದೆ ಸ್ವಾತಂತ್ರ್ಯ ದಿನದಂದು ಅಂದರೆ ಆಗಸ್ಟ್ 15ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ ಎಂದು ಸ್ಪೆಷಲ್ ಪೋಸ್ಟರ್ ಮೂಲಕ ಚಿತ್ರತಂಡ ರಿಲೀಸ್ ಡೇಟ್ ಘೋಷಿಸಿತ್ತು. ಫ್ಯಾನ್ಸ್ ಪುಷ್ಪ ಸೀಕ್ವೆಲ್ ನೋಡೋದಿಕ್ಕೆ…
ಬಾಲಿವುಡ್ ನಲ್ಲಿ ಮೂಡಿ ಬರುತ್ತಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದ ಪ್ರೊಮೋ ರಿಲೀಸ್ ಆಗಿದ್ದು, ಸಾರ್ವಕರ್ ಪತ್ನಿಯಾಗಿ ಬಿಗ್ ಬಾಸ್ ಸ್ಪರ್ಧಿ ಅಂಕಿತಾ ಲೋಕಂಡೆ (Ankita Lokande) ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟ ರಣದೀಪ್ ಹೂಡಾ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಅವರೇ ಸಾವರ್ಕರ್ ಪಾತ್ರವನ್ನೂ ನಿರ್ವಹಿಸಿದ್ದಾರೆ. ಈ ನಡುವೆ ಸಿನಿಮಾ ಬಗ್ಗೆ ಅಪಸ್ವರ ಕೇಳಿ ಬಂದಿದೆ. ನಿರ್ದೇಶಕರ ವಿರುದ್ಧ ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhash Chandra Bose) ಕುಟುಂಬ ಅಸಮಾಧಾನಗೊಂಡಿದೆ. ರಣದೀಪ್ ನಿರ್ದೇಶಿಸಿ, ನಟಿಸುತ್ತಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದ ಕುರಿತಾದ ಪೋಸ್ಟರ್ ನಲ್ಲಿ ನೇತಾಜಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ನೇತಾಜಿ ಮರಿ ಮೊಮ್ಮಗ ಚಂದ್ರಕುಮಾರ್ ಬೋಸ್ (Chandrakumar Bose) ಗರಂ ಆಗಿದ್ದಾರೆ. ಸಾವರ್ಕರ್ (Veer Savarkar) ಹುಟ್ಟು ಹಬ್ಬದ ದಿನದಂದು ರಣದೀಪ್ ತಮ್ಮ ಸಿನಿಮಾದ ಪೋಸ್ಟರ್ ನ್ನು ಹಂಚಿಕೊಂಡಿದ್ದರು. ಆ ಪೋಸ್ಟರ್ ಪೋಸ್ಟ್ ಮಾಡುವಾಗ ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಹಾಗೂ ಖುದಿರಾಮ್…