ಮಂಡ್ಯ: ಮಾಜಿ ಪ್ರಧಾನಿಯವರ ಮಗನಾದ ಕುಮಾರಸ್ವಾಮಿ ಅವರು ಜಿಲ್ಲೆಗೆ ಬಂದು ಶಾಂತಿ ಕದಡುವ ನಿರ್ಧಾರ ಮಾಡಿರೋದು ಸರಿಯಲ್ಲ ಎಂದು ಉಸ್ತುವಾರಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮಾಜಿ ಸಿಎಂ ಹೆಚ್ಡಿಕೆಗೆ ಮಂಡ್ಯ ಎಲ್ಲಾ ರೀತಿಯ ಶಕ್ತಿ ನೀಡಿದೆ. ಈ ಜಿಲ್ಲೆಯ ಜನರು ಅವರಿಗೆ ಸ್ವಂತ ಜಿಲ್ಲೆಗಿಂತ ಹೆಚ್ಚಿನ ಪ್ರೀತಿ, ಮಹತ್ವ ಕೊಟ್ಟಿದ್ದರು. ಆದರೂ ಅವರು ಇಲ್ಲಿನ ಜನರ ನೆಮ್ಮದಿ ಹಾಳು ಮಾಡುವ ಅವಶ್ಯಕತೆ ಇತ್ತಾ? ನಮ್ಮ ಯುವಕರ ನೆಮ್ಮದಿ ಹಾಳು ಮಾಡುವ ಕೆಲಸ ಮಾಡ್ತಿದ್ದಾರೆ. ಮಂಡ್ಯ ಜಿಲ್ಲೆ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ. ನನ್ನ ಮೇಲೆ ಅಥವಾ ಸ್ಥಳೀಯ ಶಾಸಕರ ಮೇಲೆ ದ್ವೇಷ ಮಾಡಿ. ಆದರೆ ಜಿಲ್ಲೆಯ ಜನತೆ ಮೇಲೆ ದ್ವೇಷ ಮಾಡಿ ಗಲಭೆ ಮಾಡಿಸಬೇಡಿ ಎಂದಿದ್ದಾರೆ. ನಮ್ಮ ಜಿಲ್ಲೆಯ ಜನ ಸ್ವಾಭಿಮಾನ, ಗೌರವದಲ್ಲಿ ರಾಜ್ಯದಲ್ಲೇ ಮಾದರಿ ಆಗಿದ್ದಾರೆ. ಇಂತಹ ಜಿಲ್ಲೆಯಲ್ಲಿ ಬಂದು ಜನರಿಗೆ ಅವಮಾನ ಮಾಡಬೇಡಿ ಎಂದಿದ್ದಾರೆ. ಕುಮಾರಸ್ವಾಮಿ ಸಿಎಂ ಮಾಡಲು ಈ ಜಿಲ್ಲೆ…
Author: AIN Author
ಹೊಸಪೇಟೆ:- ನಗರದ ಹೊರವಲಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಜೀರೆ ನಿಧನರಾಗಿದ್ದಾರೆ. ತಮ್ಮ ದ್ವಿಚಕ್ರ ವಾಹನದಲ್ಲಿ ಮುನಿರಾಬಾದ್ ಠಾಣಾ ವ್ಯಾಪ್ತಿಯ ಬೂದಗುಪ್ಪ ಕ್ರಾಸ್ ಬಳಿ ಸಂಚರಿಸುವಾಗ ಅಪಘಾತ ನಡೆದಿದ್ದು, ತೀವ್ರ ಗಾಯಗೊಂಡಿದ್ದ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ನಿಧನರಾಗಿದ್ದಾರೆ.
ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಸಾಧನೆಗಳ ಹಿನ್ನೆಲೆಯಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ರಾಜ್ಯದಲ್ಲಿ ಎಲ್ಲ 28 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ಸಾಧನೆಗಳನ್ನು ನೋಡಿ, ಪರಾಮರ್ಶಿಸಿದ ಬಳಿಕವೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಮೋದಿಯವರ ಕೈ ಬಲಪಡಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಹಾಗಾಗಿ, ಈ ನಿಟ್ಟಿನಲ್ಲಿ ಈಗಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿಯೊಂದಿಗೆ ಲೋಕಸಭೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ರಾಯಚೂರು:- ಸಿವಿಲ್ ನ್ಯಾಯಾಲಯ ಆದೇಶ ಹಿನ್ನೆಲೆ ಎಸಿ ಕಚೇರಿ ಪೀಠೋಪಕರಣ ಜಪ್ತಿ ಮಾಡಿರುವ ಘಟನೆ ರಾಯಚೂರಿನಲ್ಲಿ ಜರುಗಿದೆ. ಜಿಲ್ಲೆ ಮಾನ್ವಿ ತಾಲೂಕಿನ ದದ್ದಲ್ ಏತ ನೀರಾವರಿ ಹಾಗೂ ರಾಯಚೂರು ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡದ್ದಕ್ಕೆ ಇಲ್ಲಿನ ಸಿವಿಲ್ ನ್ಯಾಯಾಲಯ ಆದೇಶದ ಮೇರೆಗೆ ಸಹಾಯಕ ಆಯುಕ್ತರ ಕಚೇರಿ ಆಸ್ತಿ ಜಪ್ತಿ ಮಾಡಿಕೊಂಡ ಪ್ರಸಂಗ ಮಂಗಳವಾರ ನಡೆಯಿತು. ತಾಲೂಕಿನ ಮಾನ್ವಿ ದದ್ದಲ್, ಸುಂಕೇಶ್ವರಹಾಳ, ಮಲ್ಲಾಪುರ ಸೇರಿದಂತೆ ವಿವಿಧ ಗ್ರಾಮಗಳ ರೈತರಿಂದ 2008ರಲ್ಲಿ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಐದು ಬಾರಿ ಕಚೇರಿ ಸಾಮಗ್ರಿ ಜಪ್ತಿಗೆ ಆದೇಶ ಮಾಡಿದರೂ ಸಹಾಯಕ ಕಚೇರಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಕೊನೆಗೆ ಸಂತ್ರಸ್ತರ ಪರ ವಕೀಲರು ಹಾಗೂ ರೈತರು ಇಂದು ಎಸಿ ಕಚೇರಿಯ ಸಾಮಗ್ರಿಗಳನ್ನು ಜಪ್ತಿಗೆ ಮುಂದಾದರು. ಇದಕ್ಕೆ ಸಹಾಯಕ ಆಯುಕ್ತರು ವಿರೋಧ ವ್ಯಕ್ತಪಡಿಸಿದ್ದಲ್ಲದೇ ಆಕ್ರೋಶ ಹೊರಹಾಕಿದರು. ಆದರೂ ಲೆಕ್ಕಿಸದೆ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಿಕೊಂಡು ಕಚೇರಿ ಹೊರಭಾಗ ತಂದಿಡಲಾಯಿತು. ಕೊನೆಗೆ ಎಸಿ…
ವಿಜಯಪುರ:- ವಿಜಯಪುರ ನಗರದ ಜನರಿಗೆ ಸಂಕಷ್ಟ ಬಂದಿದ್ದು, ಸದ್ಯ ನಗರ ಭಾಗದ ಜನರು ವಿಷಾನಿಲ ಉಸಿರಾಡುವ ಸ್ಥಿತಿ ನಿರ್ಮಾಣವಾಗಿದೆ. ವಿಜಯಪುರ ನಗರ ಭಾಗದ ಜನರಿಗೆ ಇದೀಗ ಭಯ ಆವರಿಸಿದೆ. ಕಳೆದ 10 ದಿನದಿಂದ ಇಡೀ ನಗರದ ಅರ್ಧ ಭಾಗದ ಪ್ರದೇಶಗಳಲ್ಲಿ ವಿಷಾನಿಲ ವ್ಯಾಪಿಸಿದೆ. ನಗರದ ಹೊರ ಭಾಗದಲ್ಲಿರೋ ಮಹಾನಗರ ಪಾಲಿಕೆಯ ಘನತ್ಯಾಜ್ಯ ಸಂಸ್ಕರಣ ಹಾಗೂ ವಿಲೇವಾರಿ ಘಟಕದಲ್ಲಿರೋ ಮಿಶ್ರಣವಾಗಿರೋ ಕಸದ ರಾಶಿಗೆ ಬೆಂಕಿ ತಗುಲಿ ವಿಷಾನಿಲ ಹೊರ ಸೂಸುತ್ತಿದೆ. ಘನತ್ಯಾಜ್ಯ ಸಂಸ್ಕರಣ ಹಾಗೂ ವಿಲೇವಾರಿ ಘಟಕಲ್ಲಿ 15000 ಟನ್ ಸಂಗ್ರಹವಾಗಿರೋ ಮಿಶ್ರಕಸದ ರಾಶಿ ಬಿದ್ದಿದೆ. ಇದಕ್ಕೆ ಪಕ್ಕದಲ್ಲಿರೋ ಬಯೋ ಮೆಡಿಕಲ್ ವೇಸ್ಟ್ ನಿಂದ ಬೆಂಕಿ ಕಸದ ರಾಶಿಗೆ ಹಚ್ಚಿ ಇಲ್ಲಿರೋ ಕಸದ ರಾಶಿ ಹೊತ್ತಿ ಉರಿಯುತ್ತಿದೆ. ಕಸದ ರಾಶಿಯ ಬೆಂಕಿಯಿಂದ ದಟ್ಟ ಹೊಗೆ ಆವರಿಸಿದ್ದು ವಿಜಯಪುರ, ಇಂಡಿ ಹಾಗೂ ಮಹಾರಾಷ್ಟ್ರದ ಅಕ್ಕಲಕೋಟ ಪಟ್ಟಣ ಸೇರಿದಂತೆ ಇತರೆಡೆ ಸಂಪರ್ಕ ಕಲ್ಪಿಸಿರೋ ರಸ್ತೆಯಲ್ಲಿ ಸಂಚಾರ ಮಾಡದಷ್ಟು ಹೊಗೆ ಆವರಿಸಿದೆ. ನಿತ್ಯ ಸಾವಿರಾರು ವಾಹನಗಳು ವಾಹನ…
ಬೆಂಗಳೂರು:- ಪೀಣ್ಯ ಫ್ಲೈಓವರ್ ಘನ ವಾಹನ ಸಂಚಾರಕ್ಕೂ ಶೀಘ್ರ ಮುಕ್ತವಾಗಲಿದೆ. ಈ ಸಂಬಂಧ ಶುಕ್ರವಾರ ಅಧಿಕಾರಿಗಳ ಸಭೆ ಜರುಗಲಿದೆ. ಫ್ಲೈಓವರ್ನ ಮೂರು ವ್ಯಾಪ್ತಿಯಲ್ಲಿರುವ ಪ್ರಿಸ್ಟ್ರೆಸ್ಡ್ ಕೇಬಲ್ಗಳು ತುಕ್ಕು ಹಿಡಿದಿರುವುದು ಬೆಳಕಿಗೆ ಬಂದು ಘನ ವಾಹನ ಸಂಚಾರ ಅಸಾಧ್ಯವಾದ ಕಾರಣ ನಿಷೇಧ ನಿರ್ಧಾರ ಕೈಗೊಳ್ಳಲಾಗಿತ್ತು. ಇದು ಸರ್ವೀಸ್ ರಸ್ತೆಲ್ಲಿ ಸಂಚಾರ ದಟ್ಟಣೆಗೆ ಕಾರಣವಾಗಿತ್ತು. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಳೆದ ವರ್ಷ 38.5 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಕೇಬಲ್ಗಳನ್ನು ಹೆಚ್ಚುವರಿಯಾಗಿ ಸೇರಿಸಲು ಮತ್ತು ಫ್ಲೈಓವರ್ ಅನ್ನು ಬಲಪಡಿಸಲು ಕಾಮಗಾರಿ ಆರಂಭಿಸಿತ್ತು. ಫ್ಲೈಓವರ್ನಲ್ಲಿ 120 ಸ್ಪ್ಯಾನ್ಗಳೊಂದಿಗೆ, ಎನ್ಎಚ್ಎಐ 240 ಪ್ರಿಸ್ಟ್ರೆಸ್ಡ್ ಕೇಬಲ್ಗಳನ್ನು ಸೇರಿಸಿದ್ದು, ಅದನ್ನು ಬಲಪಡಿಸಿದೆ ಲೋಡ್ ಟೆಸ್ಟಿಂಗ್ ಫಲಿತಾಂಶಗಳು ತೃಪ್ತಿಕರವಾಗಿವೆ ಮತ್ತು ಮುಂದಿನ ಅಗತ್ಯ ಕ್ರಮಕ್ಕಾಗಿ ವರದಿಯನ್ನು ಎನ್ಎಚ್ಎಐ ಪ್ರಧಾನ ಕಚೇರಿಗೆ ಕಳುಹಿಸಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರೊ. ಚಂದ್ರ ಕಿಶನ್ ಜೆಎಂ ಹೇಳಿದ್ದಾರೆ. ಇವರು ಮೇಲ್ಸೇತುವೆ ಕುರಿತು ರಚಿಸಲಾಗಿರುವ ನಾಲ್ಕು…
ನವದೆಹಲಿ: ಭಯೋತ್ಪಾದನೆಯನ್ನು ಉತ್ತೇಜಿಸುವ ಮತ್ತು ದೇಶದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕದಡುವ ಭಯೋತ್ಪಾದಕ ಗುಂಪು ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (SIMI) ಮೇಲೆ ವಿಧಿಸಲಾದ ನಿಷೇಧವನ್ನು ಕೇಂದ್ರ ಸರ್ಕಾರ (Central Govt) 5 ವರ್ಷಗಳವರೆಗೆ ವಿಸ್ತರಿಸಿದೆ. ಈ ಸಂಬಂಧ ಗೃಹ ಸಚಿವ ಅಮಿತ್ ಶಾ ತಮ್ಮ ಎಕ್ಸ್ನಲ್ಲಿ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿಯಲ್ಲಿ SIMIಯನ್ನು ಮತ್ತೆ ಮುಂದಿನ 5 ವರ್ಷಗಳ ಅವಧಿಗೆ ‘ಕಾನೂನುಬಾಹಿರ ಸಂಘʼ ಎಂದು ಘೋಷಿಸಲಾಗಿದೆ. ಭಾರತದ ಸಾರ್ವಭೌಮತೆ, ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆ ತರಲು ಭಯೋತ್ಪಾದನೆಯನ್ನು ಉತ್ತೇಜಿಸುವಲ್ಲಿ, ಶಾಂತಿ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವಲ್ಲಿ ಸಿಮಿ ತೊಡಗಿಸಿಕೊಂಡಿದೆ ಎಂದು ಅಮಿತ್ ಶಾ (Amitshah) ತಿಳಿಸಿದ್ದಾರೆ. ಗೃಹಸಚಿವಾಲಯದ ಅಧಿಸೂಚನೆಯಲ್ಲಿ ಏನಿದೆ?: SIMI ತನ್ನ ವಿಧ್ವಂಸಕ ಚಟುವಟಿಕೆಗಳನ್ನು ಮುಂದುವರಿಸಿದೆ ಮತ್ತು ಇನ್ನೂ ತಲೆಮರೆಸಿಕೊಂಡಿರುವ ತನ್ನ ಕಾರ್ಯಕರ್ತರನ್ನು ಪುನಃ ಸಂಘಟಿಸುವ ಪ್ರಯತ್ನ ಮಾಡುತ್ತಿದೆ. ಈ ಗುಂಪು ಕೋಮುವಾದ, ಸೌಹಾರ್ದತೆಯನ್ನು ಸೃಷ್ಟಿಸುವ ಮೂಲಕ ಜನರ ಮನಸ್ಸನ್ನು ಕದಡಿಸುವುದರ ಜೊತೆಗೆ ದೇಶ ವಿರೋಧಿ ಭಾವನೆಗಳನ್ನು…
ಬೆಂಗಳೂರು:- ಇಂದು ಬೆಳ್ಳಂ ಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ. *ಮಂಡ್ಯದ ಲೋಕೋಪಯೋಗಿ ಇಲಾಖೆ ಇಇ ಆಗಿರುವ ಹರ್ಷಾ ಅವರ ಕಚೇರಿ, ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ, ಮಂಡ್ಯ ಜಿಲ್ಲೆಯಲ್ಲಿರುವ ಸಂಬಂಧಿಕರ ಮನೆಗಳು, ಮಂಡ್ಯದ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್ಹೌಸ್ ಮೇಲೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. *ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಾಸನದ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಫುಡ್ ಇನ್ಸ್ಪೆಕ್ಟರ್ ಜಗನ್ನಾಥ್ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕಚೇರಿ ಹಾಗೂ ನಿವಾಸದಲ್ಲಿ…
ಚಿತ್ರದುರ್ಗ:- ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಗ್ರಾಮದ ಬಳಿ ಜರುಗಿದೆ ಜನೇನಹಳ್ಳಿ ಗ್ರಾಮದ ವೆಂಕಟೇಶ (50), ವೆಂಕಟೇಶ (48) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕಾರಲ್ಲಿದ್ದ ಮತ್ತೊರ್ವ ಪ್ರಯಾಣಿಕ ಕಿಶೋರ್ ಎಂಬುವರಿಗೆ ಗಾಯಾಗಳಾಗಿದ್ದು, ಚಿತ್ರದುರ್ಗ (Chitradurga) ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಅಥಣಿ : ಮದುವೆಯಾಗಿ ಕೈ ಕೊಟ್ಟ ಹೆಂಡತಿ ಹಾಗೂ ಪ್ರಿಯತಮನನ್ನು ಮಾಜಿ ಪತಿ ಕೊಚ್ಚಿ ಕೊಲೆ ಮಾಡಿದ ದಾರುಣ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮದ ಹೊರವಲಯದಲ್ಲಿ ಡಬಲ್ ಮರ್ಡರ್ಗೆ ಗ್ರಾಮವೇ ಬೆಚ್ಚಿ ಬಿದ್ದಿದ್ದೆ, ಯಾಸಿನ ಬಾಗೊಡೆ (21) ಹೀನಾಕೌಸರ್ ಸುದಾರಾಣೆ (19) ಕೊಲೆಯಾದ ನವ ಜೋಡಿಗಳು. ಈ ಕೊಲೆಯನ್ನು ತಪ್ಪಿಸಲು ಅಮಿನಾಬಾಯಿ ಬಾಗೂಡ, ಹಾಗೂ ಮುಸ್ತಫಾ ಮುಲ್ಲಾ ಮಧ್ಯೆ ಪ್ರವೇಶಿಸಿದಾಗ ಅವರು ಮೇಲು ಆರೋಪಿ ತೌಫಿಕ್ ಕ್ಯಾಡಿ ಮಾರಣಾಂತಿಕ ಹಲ್ಲೆ ಮಾಡಿದ್ದು ಅವರನ್ನು ಮಹಾರಾಷ್ಟ್ರ ಮೀರಜ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ತಿಂಗಳ ಹಿಂದೆ ಹೀನಾಕೌಸರ ಹಾಗೂ ತೌಫಿಕ್ ನಡುವೆ ಮದುವೆ ನಡೆದಿತ್ತು ಮದುವೆಯಾಗಿ ಒಂದೆ ತಿಂಗಳಿಗೆ ಕೊಲೆಯಾದ ಯಾಸಿನ ಜೋತೆ ಪ್ರಿತಿಸಿ ಹೀನಾಕೌಸರ ಓಡಿ ಹೋಗಿದ್ದಳು , ಒಂದುವರೆ ತಿಂಗಳ ಬಳಿಕ ಸಮಾಜದವ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿದ್ದ ಗ್ರಾಮಸ್ಥರು ಮಾಜಿ ಪತಿ ತೌಫಿಕ ಜೋತೆ ವಿವಾಹ ಮುರಿದು ಯಾಸಿನ್ ಜೋತೆ ಮಧುವೆ ಮಾಡಿಸಿದ್ದರು…