Author: AIN Author

ದೊಡ್ಮನೆ ಆಟಕ್ಕೆ ಅದ್ಧೂರಿಯಾಗಿ ತೆರೆ ಬಿದ್ದಿದೆ. ‘ಬಿಗ್ ಬಾಸ್ ಕನ್ನಡ 10’ರ (Bigg Boss Kannada 10) ವಿನ್ನರ್ ಆಗಿ ಕಾರ್ತಿಕ್ ಮಹೇಶ್ (Karthik Mahesh) ಹೊರಹೊಮ್ಮಿದ್ದಾರೆ. ಪ್ರತಾಪ್ ಮೊದಲ ರನ್ನರ್ ಅಪ್ ಆಗಿದ್ದು, 2ನೇ ರನ್ನರ್ ಅಪ್ ಆಗಿ ಸಂಗೀತಾ, 3ನೇ ರನ್ನರ್ ಅಪ್ ಆಗಿ ವಿನಯ್ (Vinay) ಸ್ಥಾನ ಪಡೆದಿದ್ದಾರೆ. ಇದರ ನಡುವೆ ವಿನಯ್ ಜೊತೆ ಸುದೀಪ್ (Sudeep) ಸಿನಿಮಾ ಮಾಡ್ತಾರಾ ಎಂಬುದಕ್ಕೆ ಉತ್ತರ ಸಿಕ್ಕಿದೆ. ‘ಬಿಗ್ ಬಾಸ್’ (Bigg Boss Kannada 10) ಮನೆಯ ವಿಲನ್ ಎಂದೇ ಫೇಮಸ್ ಆಗಿದ್ದ ವಿನಯ್ ಗೌಡ. ಈ ಸೀಸನ್‌ನ ಕೇಂದ್ರ ಬಿಂದು ಆಗಿದ್ದರು. ವಾಹಿನಿಯ ಟಿಆರ್‌ಪಿ ಪೀಸ್ ಎಂದು ಹೇಳಿದರೆ ತಪ್ಪಾಗಲಾರದು. ‘ವಿನಯ್- ಸಂಗೀತಾ (Sangeetha) ಇಲ್ಲದಿದ್ದರೆ ಈ ಸೀಸನ್ ಅಪೂರ್ಣ’ ಎಂದು ಸುದೀಪ್ ಹೇಳಿದ್ದರು. ಇದೆಲ್ಲದರ ನಡುವೆ ಅಭಿಮಾನಿಗಳು ತಮ್ಮ ಆಸೆಯೊಂದನ್ನು ಸುದೀಪ್ ಮುಂದೆ ಇಟ್ಟಿದ್ದಾರೆ ಸೋಮವಾರ (ಜ.29) ‘ಆಸ್ಕ್ ಮೀ ಸೆಷನ್’ ಸೋಷಿಯಲ್ ಮೀಡಿಯಾದಲ್ಲಿ ನಡೆಸಿದ್ದರು. ಇದರಲ್ಲಿ…

Read More

ಬೆಂಗಳೂರು:- ನಗರದ ಹಲವೆಡೆ ಸಿಬ್ಬಂದಿಗಳ ತುರ್ತು ಕಾಮಗಾರಿ ಹಿನ್ನೆಲೆ ಪವರ್ ಕಟ್ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅನಂತನಹಲ್ಲಿ, ಹಲಾವಗಾಲು, ಹರವಿ, ಕುರುಬರಹಳ್ಳಿ, ಶಾಮ್ನೂರ್ ಶುಗರ್ಸ್, ವೆಸ್ಟಾಸ್ ವಿಂಡ್, ಹರಪನಹಲ್ಲಿ, ಪುನ್ನಬಘಟ್ಟ, ಜಿತಾನಕಟ್ಟೆ, ಚಿರಸ್ತಾಹಲ್ಲಿ, ಗುಂದಗಟ್ಟ, ಮಚಿಹಾಲಿ ತಾಂಡಾ, ತಲದಹಲ್ಲಿ ತಾಂಡಾ, ಕೊಕರಹಟ್ಟಿ, ಗುರುಶಾಂತನಹಳ್ಳಿ, ಮಾಚಿಹಳ್ಳಿ ಗ್ರಾಮ, ನೀಲಗುಂದ, ಬೇವಿನಹಳ್ಳಿ, ಇಟ್ಟಿಗುಡಿ, ಸಿದ್ದೇಶ್ವರ ನಗರ, ಚಾರೋನ್ ಪೋಕ್‌ಫಂಡ್ ಟ್ರೇಡಿಂಗ್ ಇಂಡಿಯಾ ಇಂಡಸ್ಟ್ರಿ, ಕಣವಿ, ಕುಂಚೂರು, ಗರ್ಭಗುಡಿ, ತಾವರಗುಂಡಿ, ನಂದ್ಯಾಲ, ಮುತ್ತೂರು, ನಿಟ್ಟೂರು, ಎನ್. ಬಸಾಪುರ, ದಿಟ್ಟೂರು, ವಟಗನಹಳ್ಳಿ, ಸರತಿ, ಚಿಕ್ಕನಹಳ್ಳಿ, ಚಿಕ್ಕನಹಳ್ಳಿ ಪ್ರದೇಶಗಳಲ್ಲಿ ಬುಧವಾರ ವಿದ್ಯುತ್ ಕಡಿತ ಇರಲಿದೆ. ದೇವನಹಳ್ಳಿ, ವಿಜಯಪುರ, ಯಶವಂತಪುರ ಕೈಗಾರಿಕಾ ಪ್ರದೇಶ, ಕೆಂಪೇಗೌಡ ನಗರ, ಲಗ್ಗೆರೆ, ವೆಲ್ಕಾಸ್ಟ್, ಪೀಣ್ಯ 1ನೇ ಹಂತ, ಇಸ್ರೋ ಮತ್ತು ಜಿಂದಾಲ್ ಪ್ರದೇಶಗಳಲ್ಲಿ ಮಂಗಳವಾರ (ಜನವರಿ 30) ವಿದ್ಯುತ್ ಕಡಿತ ಮಾಡಲಾಗಿತ್ತು. ಇಂದೂ (ಜನವರಿ 31) ಸಹ ಪವರ್ ಕಟ್ ಇರಲಿದೆ. ಓಬಳಾಪುರ, ದೊಡ್ಡಬೆಲೆ, ಕೊಡಿಗೇಹಳ್ಳಿ, ಗೆದ್ದಲಹಳ್ಳಿ, ಕೆರೆಕತ್ತಿಗನೂರು, ಕಾಸರಘಟ್ಟ, ಮಹಿಮಾಪುರ, ಲಕ್ಕೇನಹಳ್ಳಿ,…

Read More

ಕ್ರಿಕೆಟಿಗ ಮೊಹಮ್ಮದ್ ಶಮಿ ಮತ್ತು ಸಾನಿಯಾ ಮಿರ್ಜಾ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಭಾರತದ ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಕೆಲ ದಿನಗಳ ಹಿಂದೆ ಪಾಕಿಸ್ತಾನ ಕ್ರಿಕೆಟ್​ ತಂಡದ ಮಾಜಿ ಆಟಗಾರ ಶೋಯೆಬ್‌ ಮಲಿಕ್‌ ಅವರಿಗೆ ವಿಚ್ಚೇದನ ನೀಡಿದ್ದರು. ಈ ಮೂಲಕ 13 ವರ್ಷದ ದಾಂಪತ್ಯ ಜೀವನವನ್ನು ಅಂತ್ಯಗೊಳಿಸಿದ್ದರು. ಇದರ ಬೆನ್ನಲ್ಲೇ ಕೆಲ ಕಿಡಿಗೇಡಿಗಳು ಕ್ರಿಕೆಟಿಗ ಮೊಹಮ್ಮದ್ ಶಮಿ ಮತ್ತು ಸಾನಿಯಾ ಮಿರ್ಜಾ ನಿಶ್ಚಿತಾರ್ಥ ಮಾಡಿಕೋಂಡಿದ್ದು, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದ್ದಾರೆ. ಡೀಪ್‌ಫೇಕ್‌ ಮೂಲಕ ಶಮಿ ಮತ್ತು ಸಾನಿಯಾ ಮಿರ್ಜಾ ಅವರ ಮುಖವನ್ನು ಯಾರದ್ದೋ ಮದುವೆಯ ಫೋಟೊಗೆ ಎಡಿಟ್​ ಮಾಡಿ ಶಮಿ ಮತ್ತು ಸಾನಿಯಾ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೋಂಡಿದ್ದಾರೆ ಎಂದು ಟ್ವೀಟರ್​ ಎಕ್ಸ್​ನಲ್ಲಿ ಕಿಡಿಗೇಡಿಗಳು ವೈರಲ್​ ಮಾಡಿದ್ದಾರೆ. ಈ ಮೂಲಕ ಕೀಳು ಮಟ್ಟದ ಮನೋಭಾವ ತೋರಿದ್ದಾರೆ. ಶಮಿ ಮತ್ತು ಸಾನಿಯಾ ಮಿರ್ಜಾ ಅವರ ಡೀಪ್‌ಫೇಕ್‌ ಫೋಟೊ ಕಂಡ ಕೆಲ…

Read More

ನೂರಾರು ಬಾರಿ ಚಾಕುವಿನಿಂದ ಇರಿದು ಆತನ ಕೊಲೆ ಮಾಡಿರುವ ಆಘಾತಕಾರಿ ಪ್ರಕರಣ ವರದಿಯಾಗಿದೆ. ಆದರೂ ಸಹ ತನ್ನ ಪ್ರಿಯಕರನಿಗೆ 108 ಬಾರಿ ಚಾಕುವಿನಿಂದ ಇರಿದ ಪ್ರಕರಣದಲ್ಲಿ ಕ್ಯಾಲಿಫೋರ್ನಿಯಾ ಮಹಿಳೆಯನ್ನು ನ್ಯಾಯಾಧೀಶರು ಖುಲಾಸೆಗೊಳಿಸಿದ್ದಾರೆ. ಇದೇನಿದು ವಿಚಿತ್ರ ಅಂತೀರಾ.. ಕಾರಣ ಹೀಗಿದೆ.. ಅಮೆರಿಕದ ಮಹಿಳೆ ತನ್ನ ಬಾಯ್‌ಫ್ರೆಂಡ್‌ಗೆ ಇರಿದ ಸಂದರ್ಭದಲ್ಲಿ ಗಾಂಜಾ-ಪ್ರೇರಿತ ಮನೋವಿಕಾರ ದಲ್ಲಿದ್ದಳು ಮತ್ತು ಆಕೆಗೆ ತನ್ನ ಕ್ರಿಯೆಗಳ ಮೇಲೆ ಯಾವುದೇ ನಿಯಂತ್ರಣವಿರಲಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ ಎಂದು ಯುಎಸ್ ಮಾಧ್ಯಮ ವರದಿ ಮಾಡಿದೆ.  2018 ರಲ್ಲಿ 32 ವರ್ಷದ ಮಹಿಳೆ ಬ್ರೈನ್ ಸ್ಪೆಜ್ಚರ್ ಡ್ರಗ್ಸ್‌ ತೆಗೆದುಕೊಂಡ ನಶೆಯಲ್ಲಿದ್ದಾಗ ಚಾಡ್ ಒ’ಮೆಲಿಯಾಳನನ್ನು ಇರಿದಿದ್ದರು. ಮತ್ತು ಅನೈಚ್ಛಿಕ ನರಹತ್ಯೆಯ ತಪ್ಪಿತಸ್ಥನೆಂದು ಕಂಡುಬಂದಿತ್ತು. ಈ ಸಂಬಂಧ ಮಂಗಳವಾರ, ಆಕೆಗೆ ಎರಡು ವರ್ಷಗಳ ಶಿಕ್ಷೆ ವಿಧಿಸಲಾಯಿತು ಮತ್ತು 100 ಗಂಟೆಗಳ ಸಮುದಾಯ ಸೇವೆಯನ್ನು ನಿರ್ವಹಿಸಲು ಆದೇಶಿಸಲಾಗಿತ್ತು. ಆದರೆ, ಸುಪೀರಿಯರ್ ಕೋರ್ಟ್ ನ್ಯಾಯಾಧೀಶರಾದ ಡೇವಿಡ್ ವರ್ಲಿ, ಈ ಘಟನೆ ನಡೆದಾಗ ಆರೋಪಿ ಮಹಿಳೆ ಬ್ರೈನ್ ಸ್ಪೆಜ್ಜರ್‌ಗೆ ಆಕೆ…

Read More

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22 ರಂದು ಪ್ರಾಣ ಪ್ರತಿಷ್ಠಾಪನೆಗೊಂಡಿರುವ ರಾಮಮಂದಿರಕ್ಕೆ ಭವಿಷ್ಯದಲ್ಲಿ ಭೇಟಿ ನೀಡುವುದಾಗಿ ದಕ್ಷಿಣ ಆಫ್ರಿಕಾದಲ್ಲಿರುವ ಭಾರತದ ಸಂಜಾತ ಕೇಶವ್ ಮಹಾರಾಜ್ ತಿಳಿಸಿದ್ದಾರೆ. ಅಲ್ಲದೆ ತಾವು ಬ್ಯಾಟಿಂಗ್ ಮಾಡಲು ಬರುವಾಗ ‘ಆದಿಪುರುಷ್’ ಸಿನಿಮಾದ ‘ರಾಮ್ ಸೀತಾ ರಾಮ್’ ಗೀತೆಯನ್ನು ಪ್ಲೇ ಮಾಡುವ ಹಿಂದಿನ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. ಭಗವಾನ್ ಶ್ರೀರಾಮ ಮತ್ತು ಆಂಜನೇಯನ ಪರಮ ಭಕ್ತನಾಗಿರುವ ಕೇಶವ್ ಮಹಾರಾಜ್, ದಕ್ಷಿಣ ಆಫ್ರಿಕಾ ತಂಡದೊಂದಿಗೆ ಭಾರತದ ಪ್ರವಾಸ ಕೈಗೊಂಡಾಗ ಹಲವಾರು ದೇವಾಲಯಗಳಿಗೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ. ಅಲ್ಲದೆ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಅಂಗವಾಗಿ ಭಾರತೀಯರಿಗೆ ತಮ್ಮ ಎಕ್ಸ್ ಖಾತೆ ಮೂಲಕ ವಿಶೇಷ ಸಂದೇಶ ಕೋರಿದ್ದರು “ನಾನು ಈಗ ಬಿಡುವಿಲ್ಲದ ಕ್ರಿಕೆಟ್ ಆಡುತ್ತಿರುವುದರಿಂದ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಿರಲಿಲ್ಲ. ಆದರೆ ಭವಿಷ್ಯದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲು ತುಂಬಾ ಸಂತೋಷಪಡುತ್ತೇನೆ” ಎಂದು ದಕ್ಷಿಣ ಆಫ್ರಿಕಾದ ಖ್ಯಾತ ಸ್ಪಿನ್ನರ್ ಹೇಳಿದ್ದಾರೆ. ಖಂಡಿತವಾಗಿಯೂ ಭವಿಷ್ಯದಲ್ಲಿ…

Read More

ಬೆಂಗಳೂರು:- ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಅಳವಡಿಸಬೇಕಿದ್ದು, ಎಲ್ಲರೂ ಅದನ್ನು ಅನುಷ್ಠಾನಗೊಳಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಕೈಗಾರಿಕಾ ಮತ್ತು ವಾಣಿಜ್ಯ ಸಂಘ-ಸಂಸ್ಥೆಯ ಪ್ರತಿನಿಧಿಗಳಿಗೆ ತಿಳಿಸಿದರು. ಬೆಂಗಳೂರು ಅಭಿವೃದ್ಧಿ ಹಾಗೂ ನಾಗರಿಕ ಸಮಸ್ಯೆಗಳ ಕುರಿತು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ(FKCCI)ಯು ಕೈಗಾರಿಕಾ ಮತ್ತು ವಾಣಿಜ್ಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಏರ್ಪಡಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ಎಲ್ಲಾ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವ ಕುರಿತು ಈಗಾಗಲೇ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ಗಳಲ್ಲಿನ 40 ಅಡಿ ರಸ್ತೆಗಳಲ್ಲಿರುವ ಮಳಿಗೆಗಳನ್ನು ಸರ್ವೇ ಮಾಡಿ ತಿಳುವಳಿಕೆ ಪತ್ರ ನೀಡಿ ನಾಮಫಲಕಗಳನ್ನು ಬದಲಾವಣೆ ಮಾಡಲು ಸೂಚನೆ ನೀಡಲಾಗಿದೆ. ಅದರಂತೆ ಈಗಾಗಲೇ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಗ್ರಸ್ಥಾನದಲ್ಲಿ ಅಳವಡಿಸುವ ಕಾರ್ಯ ‌ನಗರದಾದ್ಯಂತ ಸಕ್ರಿಯವಾಗಿ ನಡೆಯುತ್ತಿದ್ದು, ಫೆಬ್ರವರಿ 28 ರೊಳಗಾಗಿ ಎಲ್ಲಾ ಮಳಿಗೆಗಳು ಕನ್ನಡ ನಾಮಫಲಕಗಳನ್ನು…

Read More

ಬಾಕ್ಸ್ ಆಫೀಸಿನಲ್ಲಿ ಭಾರೀ ಸದ್ದು ಮಾಡಿರುವ ಹನುಮಾನ್ ಸಿನಿಮಾ ಇನ್ನೂ ಥಿಯೇಟರ್ ನಲ್ಲಿ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಯಲ್ಲಿ (OTT) ಸ್ಟ್ರೀಮಿಂಗ್ ಆಗುವ ಕುರಿತಂತೆ ಸುದ್ದಿಯೊಂದು ಬಂದಿದೆ. ಒಪ್ಪಂದ ಪ್ರಕಾರ ಸಿನಿಮಾ ರಿಲೀಸ್ ಆಗಿ ಮೂರೇ ಮೂರು ವಾರದಲ್ಲಿ ಚಿತ್ರ ಒಟಿಟಿಯಲ್ಲಿ ಬರಬೇಕಿತ್ತು. ಸಿನಿಮಾ ಇನ್ನೂ ಥಿಯೇಟರ್ ನಲ್ಲಿ ಇರುವ ಕಾರಣದಿಂದಾಗಿ 55 ದಿನಗಳ ನಂತರ ಚಿತ್ರವನ್ನು ಒಟಿಟಿಯಲ್ಲಿ ತರಲು ನಿರ್ಧರಿಸಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಝೀ 5ನಲ್ಲಿ ಚಿತ್ರವನ್ನು ವೀಕ್ಷಿಸಬಹುದು. ಪ್ರಶಾಂತ್ ವರ್ಮಾ (Prashant Verma) ನಿರ್ದೇಶನದಲ್ಲಿ ಮೂಡಿ ಬಂದಿರುವ ಹನುಮಾನ್ (Hanuman) ಚಿತ್ರ ಜಾಗತಿಕ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. ರಿಲೀಸ್ ಆದ 14 ದಿನಕ್ಕೆ 250 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾ ತನ್ನ ನಾಗಲೋಟವನ್ನು ಮುಂದುವರೆಸಿದೆ. ಹನುಮಾನ್ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ಕಂಡಿರೋ ನಿರ್ದೇಶಕರಿಗೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದ್ದಾರೆ. ಹನುಮಾನ್ ಪಾರ್ಟ್ 2 ಮಾಡಲು ಅವರು ಮುಂದೆ ಬಂದಿದ್ದಾರೆ. ಕೇವಲ ಬಾಯಿ…

Read More

ಭಾರತದಲ್ಲಿ ಪ್ರೀಮಿಯಂ ವೈಶಿಷ್ಟ್ಯಗಳೊಂದಿಗೆ ಸ್ಯಾಮ್‌ಸಂಗ್ ಮಂಗಳವಾರ ದಿ ಸೆರಿಫ್ ಟಿವಿ ಮತ್ತು 2020 QLED 8K ಟಿವಿ ಲೈನ್ ಅನ್ನು ಬಿಡುಗಡೆ ಮಾಡಿದೆ.ಸೆರಿಫ್ ಮೂರು ಗಾತ್ರಗಳಲ್ಲಿ ಬರಲಿದೆ – 43-ಇಂಚಿನ (1m 08cm), 49-ಇಂಚಿನ (1m 23cm) ಮತ್ತು 55-ಇಂಚಿನ (1m 38cm), ಕ್ರಮವಾಗಿ ರೂ 83,900, ರೂ 1,16,900 ಮತ್ತು ರೂ 1,48,900, ಸ್ಯಾಮ್‌ಸಂಗ್ ಹೇಳಿದೆ. . ಅವುಗಳಲ್ಲಿ, OTT ಪ್ಲಾಟ್‌ಫಾರ್ಮ್‌ಗಳು, ಉತ್ತಮ ವಿಡಿಯೋ ಮತ್ತು ಆಡಿಯೋ ದೃಶ್ಯಗಳು ಸೇರಿವೆ. ಅದರಂತೆ, ಅನೇಕರು ಬಜೆಟ್ ಟಿವಿಗಳನ್ನು ಹುಡುಕುತ್ತಿರುತ್ತಾರೆ. ಈ ಹಿಂದೆ ದುಬಾರಿ ಬೆಲೆಗೆ ಸಿಗುತ್ತಿದ್ದ ಸ್ಮಾರ್ಟ್ ಟಿವಿಗಳು ಕೆಲ ದಿನಗಳಿಂದ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ. ನೀವು 32 ಇಂಚಿನ ಟಿವಿಗಳ ಮೇಲೆ ಕಣ್ಣಿಟ್ಟಿದ್ದರೆ ಇವು ರೂ. 7000 ರಿಂದ ಪ್ರಾರಂಭವಾಗುತ್ತದೆ. ಇವುಗಳಲ್ಲಿ ಎಲ್​ಜಿ, ಸ್ಯಾಮ್​ಸಂಗ್, ಸೋನಿ, ರೆಡ್ಮಿ ಯಂತಹ ಉನ್ನತ ಬ್ರಾಂಡ್‌ಗಳು ಸೇರಿವೆ Mi (32 ಇಂಚು) A ಸರಣಿ HD ರೆಡಿ ಟಿವಿ: ಈ ಟಿವಿ 60Hz…

Read More

ಮಯಾಂಕ್ ದಿಢೀರ್ ಅಸ್ವಸ್ಥರಾಗಲು ಕಾರಣ ಏನೆಂಬುವುದನ್ನು ಇಂಡಿಗೋ ಏರ್‌ಲೈನ್ಸ್ ಸ್ಪಷ್ಟನೆ ನೀಡಿದೆ. ಸೋಮವಾರ ತ್ರಿಪುರ ವಿರುದ್ಧ ಗೆಲುವು ದಾಖಲಿಸಿದ ಕರ್ನಾಟಕ ತಂಡ, ರೈಲ್ವೇಸ್ ವಿರುದ್ಧದ ತನ್ನ ಮುಂದಿನ ಪಂದ್ಯಕ್ಕಾಗಿ ಮಂಗಳವಾರ ಸೂರತ್‌ಗೆ ಪ್ರಯಾಣಿಸಲು ದೆಹಲಿ ವಿಮಾನ ಏರಿತು. ತಂಡದೊಂದಿಗೆ ವಿಮಾನ ಹತ್ತಿದ ಮಯಾಂಕ್ ಅಗರ್ವಾಲ್ ಸೀಟಿನ ಮುಂಭಾಗದಲ್ಲಿದ್ದ ನೀರು ಕುಡಿದಿದ್ದಾರೆ. ತಕ್ಷಣವೇ ಆರೋಗ್ಯದಲ್ಲಿ ಏರುಪೇರಾಗಿದ್ದು, ವಿಮಾನದಲ್ಲಿ ಒಂದೆರಡು ಬಾರಿ ವಾಂತಿ ಮಾಡಿಕೊಂಡಿದ್ದಾರೆ. ಕೂಡಲೆ ಮಯಾಂಕ್ ಅವರನ್ನು ವಿಮಾನದಿಂದ ಕೆಳಗೆ ಕರೆತಂದು ಅಗರ್ತಲದ ಐಎಲ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ವೈದ್ಯರು ಕೆಲ ಪರೀಕ್ಷೆಗಳಿಗೆ ಒಳಪಡಿಸಿದ್ದಾರೆ ಎಂದು ತ್ರಿಪುರ ಕ್ರಿಕೆಟ್ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಘಟನೆಯ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಆಗಿಲ್ಲ. ಮಯಾಂಕ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ನಂತರ ಶೀಘ್ರ ಬೆಂಗಳೂರಿಗೆ ಶ್‌ಟಿ ಮಾಡುವ ಸಾಧ್ಯತೆಗಳಿವೆ. ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ವಿಮಾನ…

Read More

ಬೆಂಗಳೂರು: ಸ್ಮಾರ್ಟ್​ಫೋನ್ ಹೆಂಡತಿಗಿಂತ ಇಂಪಾರ್ಟೆಂಟಾ? ಸ್ಮಾರ್ಟ್​ಫೋನ್ ಗರ್ಲ್​’ಫ್ರೆಂಡ್​’ಗಿಂತ ಇಂಪಾರ್ಟೆಂಟಾ? ಸ್ಮಾರ್ಟ್​ಫೋನ್ ಪ್ರಾಣ ಕೊಡೋ ಗೆಳೆಯರಿಗಿಂತ ಇಂಪಾರ್ಟೆಂಟಾ? ಸ್ಮಾರ್ಟ್​ಫೋನ್ ಜಾಬ್​’ಗಿಂತ ಇಂಪಾರ್ಟೆಂಟಾ? ಹೌದು.. ಅಂತಾರೆ ಒಂದಿಷ್ಟು ಜನ.ಒಂದಿಷ್ಟು ಜನರಿಗೆಲ್ಲಾ ಮೊಬೈಲ್ ಸದಾ ಕೈಯಲ್ಲೇ ಇರಬೇಕು. ಒಂದು ಕ್ಷಣ ಇಲ್ಲ ಅಂದರೂ ಚಡಪಡಿಸಿಹೋಗುತ್ತಾರೆ. ಯಾರದೋ ಕಾಲ್​.. ಯಾರದೋ ಮೆಸೇಜ್​.. ಯಾರದೋ ವಾಟ್ಸಪ್​. ಉಫ್​, ಬೇಕೋ ಬೇಡವೋ ಮೊಬೈಲ್’​ಗೆ ಮಿಡಿಯುತ್ತೆ ಮನ​. ಇತ್ತೀಚಿನ ದಿನಗಳಲ್ಲಿ ಸಿಕ್ಕಾಪಟ್ಟೆ ಮೊಬೈಲ್ (Mobile) ಬಳಕೆ ಹೆಚ್ಚಾಗಿದೆ. ಯಾವುದೇ ಟೈಮ್ ಇಲ್ಲದೆ ಏನು ಕೆಲಸ ಅಂತಾ ತಿಳಿಯದೇ ಮೊಬೈಲ್ ನೋಡೊವರ ಸಂಖ್ಯೆ ಹೆಚ್ಚಾಗ್ತಿದೆ. ಬಸ್​ಗೆ ಕಾಯುವಾಗ, ರಸ್ತೆ ದಾಟುವಾಗ ಹೀಗೆ ನಿರಂತರ ಮೊಬೈಲ್ ಬಳಕೆ ರಸ್ತೆ ಅಪಘಾತಕ್ಕೆ (Road Accident) ಕಾಣವಾಗ್ತೀದೆ. ಬೆಂಗಳೂರಿನಲ್ಲಿ ನಿತ್ಯ ಲಕ್ಷಂತಾರ ವಾಹನಗಳು ಸಂಚಾರ ಮಾಡ್ತೀದ್ದು ಹತ್ತಾರೂ ಅಪಘಾತಗಳು ಸಂಭವಿಸ್ತಾನೆ ಇರುತ್ತೆ. ಆದರೆ ಈ ಅಘಾತಗಳಿಗೆ ಅತಿಯಾದ ಮೊಬೈಲ್ ಬಳಕೆಯೂ ಕಾರಣವಾಗಿದೆ. ಸ್ಮಾರ್ಟ್‌ಫೋನ್ ಜೋಂಬಿಸ್ ಗೀಳು ಪಾದಚಾರಿಗಳ ಜೀವಕ್ಕೆ ಕುತ್ತು ತರ್ತಿದೆ ಎಂಬ ಬಗ್ಗೆ ವರದಿಯೊಂದರ ಮೂಲಕ…

Read More