ಭಾರತದ ಒಟ್ಟು ಆದಾಯದ ಅರ್ಧದಷ್ಟು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದಲೇ ಉತ್ಪಾದನೆಯಾಗುತ್ತಿದೆ. ನಮ್ಮ ದೈನಂದಿನ ಜೀವನದಲ್ಲಿ ಬೀದಿ ವ್ಯಾಪಾರಿಗಳು, ರಿಕ್ಷಾ ಎಳೆಯುವವರು, ಕಟ್ಟಡ ಕಾರ್ಮಿಕರು, ಮನೆಕೆಲಸದವರು, ಕೃಷಿ ಕಾರ್ಮಿಕರು, ಕಸ ಹೆಕ್ಕುವವರು, ಬೀಡಿ ಕಾರ್ಮಿಕರು, ಹ್ಯಾಡ್ಲೂಮ್ ಕಾರ್ಮಿಕರು, ಚರ್ಮೋದ್ಯಮ, ಚಿಂದಿ ಆಯುವವರು ಮತ್ತು ಇತರೇ ವಿವಿಧ ವೃತ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಸಂಘಟಿತ ಕಾರ್ಮಿಕರು ಕಂಡು ಬರುತ್ತಾರೆ. ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ರಕ್ಷಣೆ ಕಲ್ಪಿಸಲು ಪಿಂಚಣಿ ಸೌಲಭ್ಯವನ್ನು ವಿಸ್ತರಿಸಿ ಭಾರತ ಸರ್ಕಾರವು ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್-ಧನ್ (ಪಿಎಮ್-ಎಸ್ವೈಎಂ) ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿದೆ. ದಿನಕ್ಕೆ 2 ರೂಪಾಯಿ ಉಳಿಸಿದರೆ ವರ್ಷಕ್ಕೆ 36 ಸಾವಿರ ರೂ ಪಿಂಚಣಿ! ನೀವು 18 ವರ್ಷ ವಯಸ್ಸಿನಲ್ಲಿ ಈ ಯೋಜನೆಯನ್ನು ಆರಂಭಿಸಲು ಮಾಸಿಕ 55 ರೂ. ಠೇವಣಿ ಮಾಡಬೇಕು. ಅಂದರೆ, ದಿನಕ್ಕೆ ಸುಮಾರು 2 ರೂಪಾಯಿ ಉಳಿತಾಯ ಮಾಡಬೇಕು. ನಿಮಗೆ 60 ವರ್ಷ ತುಂಬಿದ ಬಳಿಕ ವಾರ್ಷಿಕ…
Author: AIN Author
ಬಿಗ್ ಬಾಸ್ ಸೀಸನ್ 10 ರ ಗ್ರ್ಯಾಂಡ್ ಫಿನಾಲೆಗೆ ಅದ್ದೂರಿ ತೆರೆ ಬಿದ್ದಿದೆ. ಈ ಸೀಸನ್ ನಲ್ಲಿ ಅತಿ ಹೆಚ್ಚು ಚರ್ಚೆ ಆಗಿದ್ದು ಸಂಗೀತಾ ಶೃಂಗೇರಿ ಮತ್ತು ಕಾರ್ತಿಕ್ ಮಹೇಶ್ ಅವರ ವಿಷಯ. ಮೊದಲು ಸ್ನೇಹಿತರಾಗಿದ್ದ ಅವರು ನಂತರ ಬೇರೆ-ಬೇರೆ ಆದರು. ಹಲವು ಬಾರಿ ಈ ಸ್ನೇಹವನ್ನು ಮುಂದುವರಿಸಲು ಕಾರ್ತಿಕ್ ಪ್ರಯತ್ನಿಸಿದರೂ ಕೂಡ ಅದಕ್ಕೆ ಸಂಗೀತಾ ಶೃಂಗೇರಿ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಲಿಲ್ಲ. ಈಗ ಬಿಗ್ ಬಾಸ್ ಆಟ ಅಂತ್ಯವಾಗಿದೆ. ಕಾರ್ತಿಕ್ ಅವರು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಸಂಗೀತಾ ಶೃಂಗೇರಿ ಅವರು ಎರಡನೇ ರನ್ನರ್ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ದೊಡ್ಮನೆಯಿಂದ ಹೊರಬಂದ ಬಳಿಕ ಸಂಗೀತಾ ಜೊತೆ ಸ್ನೇಹ ಮುಂದುವರಿಸುವ ಕುರಿತು ತಮ್ಮ ನಿರ್ಧಾರ ಏನು ಎಂಬುದನ್ನು ಕಾರ್ತಿಕ್ ಮಹೇಶ್ ತಿಳಿಸಿದ್ದಾರೆ. ‘ ಬಿಗ್ ಬಾಸ್ ಗೆದ್ದ ಬಳಿಕ ಕಾರ್ತಿಕ್ಗೆ ಸಂಗೀತಾ ಏನು ಹೇಳಿದರು ಎಂಬುದನ್ನು ತಿಳಿಯುವ ಕುತೂಹಲ ಎಲ್ಲರಿಗೂ ಇದೆ. ಆ ಪ್ರಶ್ನೆಗೆ ಕಾರ್ತಿಕ್ ಮಹೇಶ್ ಉತ್ತರಿಸಿದ್ದಾರೆ. ‘ಅವರು ಏನೂ ಹೇಳಲಿಲ್ಲ. ವಿಶ್…
ಸೂರ್ಯೋದಯ: 06:52, ಸೂರ್ಯಾಸ್ತ : 06:06 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪುಷ್ಯ ಮಾಸ , ಕೃಷ್ಣ ಪಕ್ಷ, ಉತ್ತರಾಯಣಂ, ಹೇಮಂತ ಋತು, ರಾಹು ಕಾಲ: 03:00 ನಿಂದ 04:30 ತನಕ ಯಮಗಂಡ: 09:00 ನಿಂದ 10:30 ತನಕ ಗುಳಿಕ ಕಾಲ: 12:00 ನಿಂದ 01:30 ತನಕ ಅಮೃತಕಾಲ: ಮ.1:57 ನಿಂದ ಮ.3:46 ತನಕ ಅಭಿಜಿತ್ ಮುಹುರ್ತ: ಮ.12:06 ನಿಂದ ಮ.12:51 ತನಕ ಮೇಷ ರಾಶಿ ಎಂಜಿನಿಯರಿಂಗ್ ಮೆಡಿಕಲ್ ಕ್ಷೇತ್ರದವರಿಗೆ ಶುಭ ಸಂದೇಶ, ನಾಜೂಕಿನ ಮತ್ತು ಹಿತವಚನದಿಂದ ಸಂಗಾತಿಯ ಮನಸ್ಸು ಗೆಲ್ಲುವಿರಿ, ಕುರಿ ಕೋಳಿ ಸಾಕಾಣಿಕೆ ಉದ್ಯಮದವರಿಗೆ ಆರ್ಥಿಕ ಚೇತರಿಕೆ,ಗಂಡು ಸಂತಾನ ಜನನ ಮನೆಯಲ್ಲಿ ಸಂತಸ ವಾತಾವರಣ, ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ, ವಾಹನ ಚಾಲನೆ ಜಾಗೃತಿ ವಹಿಸಿ,ಮೊದಲನೇ ಬಾರಿ ಗರ್ಭಿಣಿಯಾದ ಹೆಣ್ಣುಮಕ್ಕಳು ಎಚ್ಚರದಿಂದಿರಬೇಕು, ಇವರಿಗೆ ಕುಟುಂಬ ವರ್ಗದಿಂದ ಕಾಳಜಿ ಮಾಡುವುದು ಉತ್ತಮ, ವಿಶ್ರಾಂತಿ ಅವಶ್ಯಕವಾಗಿದೆ, ವಿಚ್ಛೇದನ ಪಡೆದ ಮತ್ತು ವಿಧವಾ ಎರಡನೇ ಮದುವೆ ಚರ್ಚೆ ನಡೆಯಲಿದೆ,…
ಚಿಕ್ಕಮಗಳೂರು:- 30 ಕಾಡಾನೆಗಳಿರುವ ಬೀಟಮ್ಮ ಗ್ಯಾಂಗ್ ನಗರದ ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆಯಲ್ಲಿ ಬಿಟ್ಟಿದೆ. ಹೀಗಾಗಿ ವಸತಿ ಶಾಲೆಯಲ್ಲಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ಸಿಬ್ಬಂದಿಗಳು ಆತಂಕಗೊಂಡಿದ್ದರು. ಇದೀಗ ಶಾಲೆಯ ಆವರಣದಲ್ಲಿ ಬೀಡುಬಿಟ್ಟಿದ್ದ 30 ಕಾಡಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಓಡಿಸಲಾಗಿದ್ದು, ಶಾಲಾ ಆವರಣದಿಂದ ಕಾಡಾನೆ ಹಿಂಡು ಹೊರಬಂದಿದೆ. ಆವರಣದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಪಟಾಕಿ ಸಿಡಿಸಿ ಸಿಬ್ಬಂದಿಗಳು ಓಡಿಸುತ್ತಿದ್ದಾರೆ. ಈ ಹಿನ್ನಲೆ ಕಾಡಾನೆ ಸಂಚಾರ ಮಾಡುವ ರಸ್ತೆಗಳಲ್ಲಿ ಬಿಗಿ ಭದ್ರತೆ ಮಾಡಲಾಗಿದೆ. ಇದೀಗ ಕಾಡಾನೆ ಹಿಂಡು ಕದ್ರಿಮಿದ್ರಿ ಗ್ರಾಮದ ಕಡೆ ಸಂಚಾರ ಮಾಡುತ್ತಿದ್ದು, 9 ಕ್ಕೂ ಅಧಿಕ ಗ್ರಾಮಗಳಲ್ಲಿ ಆತಂಕ ಹೆಚ್ಚಿದೆ ಹೀಗಾಗಿ ಗ್ರಾಹಕರು ಮತ್ತು ಸವಾರರು ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು:- Cm ಸಿದ್ದರಾಮಯ್ಯ ಅವರು ಜಂಟಿ ಅಧಿವೇಶನಕ್ಕ ರಾಜ್ಯಪಾಲರನ್ನು ಅಧಿಕೃತ ಆಹ್ವಾನ ನೀಡಿದ್ದಾರೆ. ರಾಜ್ಯಪಾಲರ ಭೇಟಿ ವೇಳೆ ಫೆಬ್ರವರಿ 12 ರಿಂದ ಅಧಿವೇಶನಕ್ಕೆ ಆಹ್ವಾನ ನೀಡಿದ್ದಾರೆ. ಇದೇ ಸಮಯದಲ್ಲಿ ಫೆಬ್ರವರಿ 16 ರಂದು ಶಿಕ್ಷಕರ ಕ್ಷೇತ್ರದ ಚುನಾವಣಾ ಹಿನ್ನೆಲೆ ಬಜೆಟ್ ದಿನಾಂಕ ಮುಂದೂಡಿ ಎಂದು ಬಿಜೆಪಿ ದೂರಿನ ವಿಚಾರವೂ ರಾಜ್ಯಪಾಲರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.
ಮಂಗಳೂರು:- ಶೆಟ್ಟರ್ ಡೀಸೆಂಟ್ ಜಂಟಲ್ ಮ್ಯಾನ್, ಕಾಂಗ್ರೆಸ್ಸಿಗರು ಉಳಿಸಿಕೊಳ್ಳಬೇಕಾಗಿತ್ತು ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮತ್ತೆ ಕಮಲ ಹಿಡಿದಿರುವ ಜಗದೀಶ್ ಶೆಟ್ಟರ್ ಅವರು ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದು, ಡೀಸೆಂಟ್ ಜಂಟಲ್ ಮ್ಯಾನ್. ಅವರನ್ನ ನಾವು ಉಳಿಸಿಕೊಳ್ಳಬೇಕಾಗಿತ್ತು. ಶೆಟ್ಟರ್ ಬಿಟ್ಟು ಹೋಗಿದ್ದಾರೆ ಅವರಿಗೆ ಒಳ್ಳೆಯದಾಗಲಿ. ಬೇರೆ ಯಾರು ಪಕ್ಷ ಬಿಟ್ಟು ಹೋಗುತ್ತಾರೆ ಅನ್ನೋ ಬಗ್ಗೆ ಮಾಹಿತಿ ಇಲ್ಲ. ಗುಪ್ತಚಾರ ಇಲಾಖೆ ನನ್ನ ಹತ್ತಿರ ಇಲ್ಲ. ಹಾಗಾಗಿ ಹೇಳಲು ಆಗಲ್ಲ ಎಂದರು. ಆರ್.ಅಶೋಕ್ ಪಾಪ ತಿರುಕನ ಕನಸು ಕಾಣುತ್ತಿದ್ದಾರೆ. ಅವರಿಗೆ ಆದಷ್ಟು ಬೇಗ ಮುಖ್ಯಮಂತ್ರಿ ಆಗುವ ಆಸೆ. ಅದಕ್ಕಾಗಿ ಬಹಳಷ್ಟು ಜನ ಸರತಿಯಲ್ಲಿ ನಿಂತಿದ್ದಾರೆ ಹಾಗಾಗಿ ಅವರ ಆಸೆ ಪೂರೈಸಲ್ಲ. ಅವರ ಆಸೆ ತಿರುಕನ ಕನಸಾಗೇ ಇರುತ್ತೆ. ಲೋಕಸಭಾ ಚುನಾವಣೆಗೆ ನನ್ನ ಹೆಸರು ಎಲ್ಲಿಯೂ ಪ್ರಸ್ತಾಪ ಇಲ್ಲ ಎಂದು ಹೇಳಿದರು. ಇದೇ ವೇಳೆ ಕೆರಗೋಡು ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಬಿಕೆಹೆಚ್, ಕೆರಗೋಡು ಘಟನೆ ಬಿಜೆಪಿ ಗುಪ್ತ ಕಾರ್ಯಸೂಚಿ ಹಿಡನ್ ಅಜೆಂಡಾ.…
ಕೋಲಾರ : – ಈ ದೇಶದಲ್ಲಿ ರೈತರನ್ನು ಕಾಪಾಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಈ ದೇಶದಲ್ಲಿ ರೈತರು ಇಲ್ಲದೆ ಇದ್ದರೆ ನಮಗೆ ಊಟ ಸಿಗುವುದಿಲ್ಲ ರೈತರಿಗೆ ಮೋಸ ಮಾಡುವುದು ಬಿಜೆಪಿಯವರು ಎಂದು ಕೋಲಾರ ಶಾಸಕರಾದ ಡಾ ಕೊತ್ತೂರು ಮಂಜುನಾಥ್ ಅವ್ರು ಹೇಳಿದ್ರು. ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವ್ರು, ಸ್ವಾತಂತ್ರ್ಯ ಬಂದಾಗಿನಿಂದಲು ಕಾಂಗ್ರೆಸ್ ಪಕ್ಷ ರೈತರನ್ನು ಕಾಪಾಡಿ ಬಂದಿದೆ 2014 ರಿಂದ ಬಿಜೆಪಿ ಸರ್ಕಾರ ಬಂದಿದೆ ಅಲ್ಲಿಯವರೆಗೆ ಭಾರತ ಯಾವತ್ತಾದರು ಕಷ್ಟ ಕಾಲದಲ್ಲಿ ಸಿಕ್ಕಿಹಾಕಿಕೊಂಡಿತ್ತಾ ದುಡ್ಡು ಇಲ್ಲದೆ ಇತ್ತಾ ಅಕ್ಕಿ ಇಲ್ಲದೆ ಇತ್ತಾ ಎಲ್ಲವು ಸಹ ನಡೆದುಕೊಂಡು ಬರತ್ತಾ ಇದೆ. ಕೇಂದ್ರ ಸರ್ಕಾರದಿಂದ ಎನ್ ಡಿ ಆರ್ ಎಫ್ ಅನುದಾನ ಬಂದಿಲ್ಲ ಕಾಂಗ್ರೆಸ್ ಸರ್ಕಾರದಲ್ಲಿ ದುಡ್ಡು ಇಲ್ಲ ಎಂದು ಬಿಜೆಪಿ ಯವರು ದಾಖಲೆಯನ್ನು ಬಿಡುಗಡೆ ಮಾಡಿದ್ದಾರಾ ಬಾಯಿಗೆ ಬಂದಂತೆ ಮಾತನಾಡೊದು ಗಾಳಿಗೆ ಹೇಳಿದಂತೆ ಹೇಳಿಬಿಟ್ಟು ಹೋಗುವುದು ಬಿಜೆಪಿಯವರು ಹೇಳುವು ಮಾತುಗಳು ನೀರಿನ ಮೇಲೆ ಬರೆಯುವುದು ಎರಡು ಒಂದೇ ಎಂದು ಬಿಜೆಪಿ…
ಕಲಬುರ್ಗಿ:- ಕಾಂಗ್ರೆಸ್ ಪಕ್ಷದವರಿಗೆ ಕೇಸರಿ ಕಂಡ್ರೆ ಆಗಿ ಬರ್ತಿಲ್ಲ ಕೇಸರಿ ನೋಡಿದ್ರೆ ಹೊಟ್ಟೆ ಉರಿ ಕಣ್ಣುರಿ ಬರ್ತಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಏರ್ಪಡಿಸಿದ್ದ ಜಿಲ್ಲಾಘಟಕ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ ಕಾಂಗ್ರೆಸ್ ಪಕ್ಷದವರಿಗೆ ಇತ್ತೀಚಿಗೆ ಕೇಸರಿ ಕಂಡರೆ ಆಗಿ ಬರ್ತಿಲ್ಲ ಕೇಸರಿ ನೋಡಿದ್ರೇನೆ ಹೊಟ್ಟೆಉರಿ ಆಗ್ತಿದೆ ಕಾರಣ ಕೇಸರಿ ಕಾರ್ಯಕರ್ತರ ಪಡೆ ನೋಡಿ ಭಯ ಆಗ್ತಿದೆ ಅಷ್ಟೇಅಲ್ಲ ಬರುವ ಲೋಕ ಚುನಾವಣೆಯಲ್ಲಿ ಬಿಜೆಪಿ ಶಕ್ತಿಯ ಎದುರು ಸೋಲ್ತೇವೆ ಅನ್ನೋ ಭಯ ಶುರುವಾಗಿದೆ ಅಂದ್ರು..
ಬೆಳಗಾವಿ:- ಲಕ್ಷ್ಮಣ ಸವದಿ ಸಹ ಬಿಜೆಪಿಗೆ ಘರ್ ವಾಪ್ಸಿ ಮಾಡುತ್ತಾರೆ ಎನ್ನುವ ಚರ್ಚೆಗಳು ನಡೆದಿವೆ. ಆದ್ರ, ಬಿಜೆಪಿಗೆ ಹೋಗಲ್ಲ ಎಂದು ಲಕ್ಷ್ಮಣ ಸವದಿ ಕಡ್ಡಿ ಮುರಿದಂತೆ ಹೇಳಿದ್ದಾರೆ. ಆದರೂ ಇದರ ನಡುವೆ ಲಕ್ಷ್ಮಣ ಸವದಿ ಅವರು ಬಿಜೆಪಿ ನಾಯಕರ ಜತೆಗೆ ಓಡಾಟ ಮಾಡುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇಂದು ಲಕ್ಷ್ಮಣ ಸವದಿ ಕಾರಿನಲ್ಲೇ ಬಿಜೆಪಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಬಿಜೆಪಿಯ ಮಾಜಿ ಶಾಸಕ ಮಹಾಂತೇಶ್ ದೊಡ್ಡಗೌಡರ ಸುತ್ತಾಡಿದ್ದಾರೆ. ಅಲ್ಲದೇ ಡಿಸಿಸಿ ಬ್ಯಾಂಕ್ ಸಾಮಾನ್ಯ ಸಭೆಗೆ ಒಟ್ಟಾಗಿ ಆಗಮಿಸಿದ್ದಾರೆ. ಆದರೆ, ಬ್ಯಾಂಕ್ ಸಭೆಗೆ ಬರುವ ಮುನ್ನ ಬೆಳಗಾವಿಯ ಸದಾಶಿವನಗರದಲ್ಲಿರುವ ಸವದಿ ನಿವಾಸದಲ್ಲಿ ಊಟದ ನೆಪದಲ್ಲಿ ಗೌಪ್ಯ ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಬಿಡುವುದಿಲ್ಲ ಎಂದು ಹೇಳುತ್ತಿರುವ ಶಾಸಕ ಲಕ್ಷ್ಮಣ ಸವದಿ, ಡಿಸಿಸಿ ಬ್ಯಾಂಕ್ ಸಾಮಾನ್ಯ ಸಭೆಯ ನೆಪದಲ್ಲಿ ರಾಜಕೀಯ ಚರ್ಚೆ ನಡೆಸಿದ್ರಾ ? ಸವದಿ ವಾಪಸ್ ಬಿಜೆಪಿಗೆ ಹೋಗುತ್ತಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿರುವ ಮಧ್ಯೆ ಸವದಿ ಬಿಜೆಪಿ ನಾಯಕರ ಜತೆ…
ಕೊಳ್ಳೇಗಾಲ:- ಮಂಡ್ಯದ ಕೆರೆಗೋಡಿನ ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯವರು ಧರ್ಮದ ಆಧಾರದಲ್ಲಿ ಜನರನ್ನು ಪ್ರಚೋದಿಸಲು ಹೊರಟಿದ್ದಾರೆ. ಸಮಾಜದಲ್ಲಿ ಘರ್ಷಣೆ, ಹಿಂಸೆ ಸೃಷ್ಟಿಸಿ ಜನರನ್ನು ಭಾವನಾತ್ಮಕವಾಗಿ ಕೆರಳಿಸುವುದೇ ಅವರ ಕಾರ್ಯಸೂಚಿ’ ಎಂದರು. ಅಲ್ಲಿ ಅನುಮತಿ ಪಡೆದಿರುವ ಉದ್ದೇಶವೇ ಬೇರೆ. ಆಗುತ್ತಿರುವುದೇ ಬೇರೆ. ಧರ್ಮದ ವಿಚಾರ ಪ್ರಸ್ತಾಪಿಸಿ ದೇಶದ್ರೋಹಿ, ಧರ್ಮವಿರೋಧಿ, ಪಾಕಿಸ್ತಾನಕ್ಕೆ ಹೋಗಿ ಎಂದೆಲ್ಲ ಹೇಳಿ ಬಿಜೆಪಿ ಜನರನ್ನು ಕೆರಳಿಸುತ್ತಿದೆ’ ಎಂದು ಟೀಕಿಸಿದರು. ‘ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೂ ಹಿಜಾಬ್, ಕೇಸರಿ ಶಾಲು, ಟಿಪ್ಪು ಸುಲ್ತಾನ್ ವಿಚಾರಗಳನ್ನಿಟ್ಟುಕೊಂಡೇ ರಾಜಕಾರಣ ಮಾಡಿದರು. ಭಾವನೆಗಳನ್ನು ಬಳಸಿಕೊಂಡು ಮತ ಪಡೆಯಬೇಕೆಂಬ ಅವರ ಉದ್ದೇಶವನ್ನು ಜನ ಅರಿಯಬೇಕು’ ಎಂದರು. ನಾವೇನು ಹಿಂದೂ ವಿರೋಧಿಗಳಾ? ನಮ್ಮ ಸಾಂಸ್ಕೃತಿಕ ನಾಯಕ ಬಸವಣ್ಣನವರ ಮಾತಿನಂತೆ, ಎಲ್ಲರನ್ನೂ ಪ್ರೀತಿಸಬೇಕು. ಎಚ್.ಡಿ.ಕುಮಾರಸ್ವಾಮಿಯವರು ಬಿಜೆಪಿಯವರೊಂದಿಗೆ ಹೋಗಿರುವುದರಿಂದ ಹಿಂದೂಗಳ ಬಗ್ಗೆ ಅವರಿಗೆ ಹೆಚ್ಚು ಪ್ರೀತಿ ಬಂದಿರಬಹುದು’ ಎಂದು ವ್ಯಂಗ್ಯವಾಡಿದರು.