ಇತ್ತೀಚೆಗೆ ಹದಿಹರೆಯದವರಿಗೆ ಕೂಡ ಮಧುಮೇಹ ಅಥವಾ ಡಯಾಬಿಟಿಸ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಮಧುಮೇಹಿಗಳು ಮೊಸರು ಮತ್ತು ಬಿಳಿ ಉಪ್ಪನ್ನು ಮಿತವಾಗಿ ಸೇವಿಸಬೇಕು ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದಕ್ಕೆ ಕಾರಣವೇನು? ಮಧುಮೇಹ ಹೊಂದಿರುವ ಜನರು ಸರಳವಾದ ಕಾರ್ಬೋಹೈಡ್ರೇಟ್ಗಳು, ಸಕ್ಕರೆ ಸೇರಿಸಿದ ಪಾನೀಯಗಳು, ಪ್ಯಾಕ್ ಮಾಡಿದ ಆಹಾರ ಮತ್ತು ಕರಿದ ಆಹಾರಗಳನ್ನು ಸೇವಿಸಬಾರದು ಎಂದು ಆಯುರ್ವೇದ ತಜ್ಞರು ಸಲಹೆ ನೀಡುತ್ತಾರೆ. ಏಕೆಂದರೆ ಅವುಗಳು ರಕ್ತದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಅಪಾಯ ಹೊಂದಿರುತ್ತವೆ. ಇದು ದೀರ್ಘಾವಧಿಯಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಆದರೆ, ಸಕ್ಕರೆ ಮಟ್ಟವನ್ನು ಹೆಚ್ಚಿಸದ ಕೆಲವು ಆಹಾರಗಳನ್ನು ಕೂಡ ವೈದ್ಯರು ಮಧುಮೇಹಿಗಳಿಗೆ ಮಿತವಾಗಿ ಸೇವಿಸಲು ಸೂಚಿಸುತ್ತಾರೆ. ಅವುಗಳಲ್ಲಿ ಮೊಸರು ಮತ್ತು ಉಪ್ಪು ಕೂಡ ಸೇರಿದೆ. ಮೊಸರು ಮತ್ತು ಬಿಳಿ ಉಪ್ಪು ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತವೆ. ಈ ಬಗ್ಗೆ ಆಯುರ್ವೇದ ತಜ್ಞರು ತಮ್ಮ ಇತ್ತೀಚಿನ ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ದೀರ್ಘಾವಧಿಯ ತೊಡಕುಗಳನ್ನು ತಡೆಗಟ್ಟಲು ಮಧುಮೇಹ ಹೊಂದಿರುವವರು ಅವಾಯ್ಡ್ ಮಾಡಬೇಕಾದ 3 ಆಹಾರಗಳ ಬಗ್ಗೆ ತಿಳಿಸಿದ್ದಾರೆ. 1.…
Author: AIN Author
ಮೂಲಂಗಿಯನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.ಮೂಲಂಗಿ ಎಲೆಯನ್ನು ತೆಗೆದುಕೊಳ್ಳುವುದರಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ. ಈ ಎಲೆಗಳ ಪ್ರಯೋಜನಗಳು ಯಾವುವು ಎಂಬುದನ್ನು ತಿಳಿಯೋಣ. * ಮೂಲಂಗಿ ಎಲೆಗಳು ಪೋಷಕಾಂಶಗಳ ಶಕ್ತಿ ಕೇಂದ್ರವಾಗಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಈ ಎಲೆಯಲ್ಲಿ ವಿಟಮಿನ್ ಸಿ, ಕೆ, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಫೋಲೇಟ್ ನಂತಹ ಪ್ರಮುಖ ಪೋಷಕಾಂಶಗಳಿವೆ. * ರಕ್ತಹೀನತೆಯಿಂದ ಬಳಲುತ್ತಿರುವವರು ಈ ಎಲೆಗಳನ್ನು ಸೇವಿಸುವ ಮೂಲಕ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡಬಹುದು. * ಮೂಲಂಗಿ ಎಲೆಗಳನ್ನು ದೇಹದಲ್ಲಿ ರಕ್ತವನ್ನು ಸ್ವಚ್ಛವಾಗಿಡಲು ಬಳಸಲಾಗುತ್ತದೆ. * ಮೂಲಂಗಿ ಎಲೆಗಳಲ್ಲಿ ಕಬ್ಬಿಣಾಂಶ ಸಮೃದ್ಧವಾಗಿದೆ. ಇದು ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ.* ಚರ್ಮ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಜನರು ಈ ಮೂಲಂಗಿ ಎಲೆಗಳನ್ನು ಸೇವಿಸುವ ಮೂಲಕ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. * ಮೂಲಂಗಿ ಎಲೆಗಳು ಮೂಲವ್ಯಾಧಿಯಿಂದ ಬಳಲುತ್ತಿರುವವರಿಗೆ ವರದಾನವಾಗಿದೆ.* ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಮೂಲಂಗಿ ಎಲೆಗಳು ತುಂಬಾ ಉಪಯುಕ್ತವಾಗಿವೆ. ಇದರಲ್ಲಿರುವ ಸೋಡಿಯಂ ರಕ್ತದೊತ್ತಡವನ್ನು ಸ್ಥಿರಗೊಳಿಸಲು…
ಹೆಸರುಕಾಳಿನಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತವೆ, ಅದು ರೋಗಗಳಿಂದ ರಕ್ಷಿಸುತ್ತದೆ. ಈ ಲೇಖನದಲ್ಲಿ ನಾವು ಹಸಿರು ಹೆಸರು ಮೊಳಕೆ ಕಾಳುಗಳನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಸಲಿದ್ದೇವೆ. ಹೆಸರು ಕಾಳು ಮೊಳಕೆಕಾಳುಗಳು ಸಾಕಷ್ಟು ಪ್ರಮಾಣದ ವಿಟಮಿನ್ ಸಿ, ಇ, ಕೆ ಅನ್ನು ಹೊಂದಿರುತ್ತವೆ. ಇದಲ್ಲದೆ, ಹಸಿರು ಕಾಳು ಪ್ರೋಟೀನ್ ನ ಉತ್ತಮ ಮೂಲವಾಗಿದೆ. ಇದಲ್ಲದೆ, ಹಸಿರು ಕಾಳು ಪೊಟ್ಯಾಸಿಯಮ್, ಸೆಲೆನಿಯಂ, ಕಬ್ಬಿಣ, ಫೋಲೇಟ್, ಫೈಬರ್ ಸೇರಿದಂತೆ ಅನೇಕ ಪೋಷಕಾಂಶಗಳನ್ನು ಹೊಂದಿರುತ್ತದೆ, ಇದು ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಬಲಪಡಿಸುತ್ತದೆ ಹಸಿರು ಕಾಳು ಮೊಳಕೆ ಕಾಳುಗಳು ಸಾಕಷ್ಟು ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತವೆ. ಇದನ್ನು ಸೇವಿಸುವುದರಿಂದ ಗ್ಯಾಸ್, ಮಲಬದ್ಧತೆ ಮತ್ತು ಹೊಟ್ಟೆ ನೋವಿನಂತಹ ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಇದಲ್ಲದೆ, ಬೆಳಿಗ್ಗೆ ಮಲವಿಸರ್ಜನೆಯಲ್ಲಿ ತೊಂದರೆ ಇರುವವರಿಗೆ ಹಸಿರು ಕಡಲೆ ಮೊಳಕೆ ಕಾಳುಗಳು ತುಂಬಾ ಪ್ರಯೋಜನಕಾರಿ. ತೂಕ ನಷ್ಟಕ್ಕೆ ಪ್ರಯೋಜನಕಾರಿ ಚಳಿಗಾಲದಲ್ಲಿ ತೂಕ ಇಳಿಸಿಕೊಳ್ಳಲು ಯೋಜಿಸುತ್ತಿರುವವರಿಗೆ ಹಸಿರು ಕಡಲೆ ಮೊಳಕೆ ಕಾಳುಗಳು ತುಂಬಾ ಪ್ರಯೋಜನಕಾರಿ ಎಂದು…
ಹುಬ್ಬಳ್ಳಿ: ಕಳೆದ ಮೂವತ್ತು-ನಲವತ್ತು ವರ್ಷಗಳಿಂದ ಕಟ್ಟಿ ಬೆಳೆಸಿದ್ದ ಬಿಜೆಪಿಯನ್ನು ಬಿಟ್ಟು ಕಾಂಗ್ರೆಸ್ ಕದ ತಟ್ಟಿದ್ದ ಜಗದೀಶ ಶೆಟ್ಟರ ಅವರನ್ನು ವಾಪಸ್ ಬಿಜೆಪಿಗೆ ಕರೆತರುವಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪಾತ್ರ ದೊಡ್ಡದಿದೆ ಎಂದು ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗದೀಶ ಶೆಟ್ಟರ ಅವರನ್ನು ಯಾವಾಗ ಮರಳಿ ಬಿಜೆಪಿಗೆ ಕರೆತರುವ ಪ್ರಯತ್ನಗಳು ನಡೆದವೋ ಅಂದಿನಿAದ ಎಲ್ಲ ವಿದ್ಯಮಾನಗಳು ಜೋಶಿ ಅವರ ಗಮನಕ್ಕೆ ಇತ್ತು. ಪ್ರಹ್ಲಾದ ಜೋಶಿ ಮತ್ತು ಜಗದೀಶ ಶೆಟ್ಟರ ಹಲವು ವರ್ಷಗಳಿಂದ ಪಕ್ಷದಲ್ಲಿ ಜೋಡೆತ್ತುಗಳ ರೀತಿ ಕಾರ್ಯ ನಿರ್ವಹಿಸಿದ್ದಾರೆ. ಮುಂದೆಯೂ ಅವರು ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಒಯ್ಯುವ ಕೆಲಸ ಮಾಡುತ್ತಾರೆ ಎಂದರು. ಜಗದೀಶ ಶೆಟ್ಟರ ಘರ್ ವಾಪ್ಸಿ ಆಗದಿದ್ದರೂ ನಾನು ಬಿಜೆಪಿ ತೊರೆಯುತ್ತಿರಲಿಲ್ಲ. ಪ್ರಹ್ಲಾದ ಜೋಶಿ, ಮಹೇಶ ಟೆಂಗಿನಕಾಯಿ ಅವರ ಜೊತೆ ಮಾತನಾಡಿದ್ದೇನೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ನಮ್ಮ ಗುರಿ. ಅದಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.…
ಹುಬ್ಬಳ್ಳಿ: ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಕಪಡುಗೆ ಅಪಾರ. ಧಾರವಾಡಲೋಕಸಭಾ ವ್ಯಾಪ್ತಿಯಲ್ಲಿ ಬರುವ ಪ್ರತಿ ತಾಲೂಕು ಮತ್ತು ಹಳ್ಳಿಗಳ ಬಣ್ಣ ದರ್ಪಣ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ಜಿಲ್ಲೆ ಮತ್ತು ತಾಲೂಕಿನ ಪ್ರತಿ ಗ್ರಾಮಗಳ ಸರ್ಕಾರಿ ಶಾಲೆಗಳ ಮಾನ್ಯ ಸಚಿವರ ನೇತೃತ್ವದಲ್ಲಿ ಸರಕಾರಿ ಶಾಲೆಗಳ ಬಣ್ಣಗಳ ಅರ್ಪಣೆ ಶಾಲೆಗಳಿಗೆ, ಮತ್ತು ವಿದ್ಯಾರ್ಥಿಗಳಲ್ಲಿ ಒಂದು ಹೊಸ ಕಳೆ ಒಂದು ಹೊಸ ಚಿಗುರು ಮಕ್ಕಳಲ್ಲಿ ಪ್ರತಿ ಹಳ್ಳಿಗಳಲ್ಲಿ ತಾಲೂಕಿನ ಶಾಲೆಗಳಲ್ಲಿ ಹೊಸ ಮಂದಹಾಸ ಬಣ್ಣದಿಂದ ಶಾಲೆಗಳ ಅಭಿವೃದ್ಧಿ ವಿದ್ಯಾರ್ಥಿಗಳ ಹಾಗೂ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಪ್ರತಿ ಸರ್ಕಾರಿ ಶಾಲೆಗಳು ಬಣ್ಣದಿಂದ ಕಂಗೊಳಿಸುತ್ತೇವೆ. ಮಕ್ಕಳಲ್ಲಿ ಎಲ್ಲಾ ಶಾಲೆಗಳು ಒಂದು ವಿಭಿನ್ನ ರೀತಿಯಾಗಿ ಬಣ್ಣದಿಂದ ಅಲಂಕಾರಗೊಂಡ ಒಂದು ದಿಟ್ಟ ಹೆಜ್ಜೆನಿಟ್ಟಂತಹ ಮಾನ್ಯ ಸಂಸದರಿಗೆ ಹಾಗೂ ಕೇಂದ್ರ ಸಚಿವರಿಗೆ ಸಲ್ಲುತ್ತದೆ. ಮಕ್ಕಳ ಪಾಲಕರಲ್ಲಿ ಬಣ್ಣ ದರ್ಪಣ ಕಾರ್ಯಕ್ರಮ ಪ್ರತಿ ಶಾಲೆಯು ಬಣ್ಣದಿಂದ ಹೊಸ ವಿನ್ಯಾಸವಾಗಿ ಕಳೆ ಬಂದಂತಾಗಿದೆ ಎಂದು ಪಾಲಕರು ಹೇಳುತ್ತಿದ್ದಾರೆ ಶಾಲೆಗಳಿಗೆ ಬಣ್ಣದಿಂದ ಮರುಜೀವ…
ಚಾಮರಾಜನಗರ: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಭಗವಾಧ್ವಜ ತೆರವು ಪ್ರಕರಣ ಖಂಡಿಸಿ ಗಡಿಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಣಿ ಕುಳಿತು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸಿಎಸ್ ನಿರಂಜನ್, ಮಾಜಿ ಸಚಿವ ಎನ್ ಮಹೇಶ್, ಮಾಜಿ ಶಾಸಕ ಬಾಲರಾಜ್, ಬಿಜೆಪಿ ಎಸ್ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಭಾರ್ಗವಿ ದ್ರಾವಿಡ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು..
ಧಾರವಾಡ: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ಬಿಜೆಪಿ ರಾಜ್ಯ ಘಟಕ ಪ್ರತಿಭಟನೆ ಕರೆಗೆ ಬೆಂಬಲಿಸಿ ಧಾರವಾಡ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಬೀದಿಗೆ ಇಳಿದು ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹು-ಧಾ ಮಾಹಾನಗರ ಬಿಜೆಪಿ ಪಧಾಧಿಕಾರಿಗಳ ನೇತೃತ್ವದಲ್ಲಿ, ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚೆಗೆ ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಮಂಡ್ಯದ ಕೆರೆಗೋಡಿನ ಗ್ರಾಮದಲ್ಲಿ ಹನುಮ ಧ್ವಜ ಧ್ವಜ ತೆರವು ಇದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಆಗಮನವನ್ನು ದೇಶವೇ ಸಂಭ್ರಮಿಸುತ್ತಿದೆ. ಅದರಂತೆಯೇ ಮಂಡ್ಯ ಜಿಲ್ಲೆಯಲ್ಲಿ ಕೆರಗೋಡು ಗ್ರಾಮದಲ್ಲಿ ಕೂಡ ಸಂಭ್ರಮ ಮನೆ ಮಾಡಿತ್ತು. ಆದರೆ ಹಿಂದೂ ವಿರೋಧಿ ಕಾಂಗ್ರೇಸ್ ಸರ್ಕಾರ ಸಂಭ್ರಮಕ್ಕೆ ಕೊಳ್ಳಿ ಇಡುವ ಕೆಲಸ ಮಾಡಿದೆ. ಗ್ರಾಮಸ್ಥರ ನಿರ್ಣಯದಂತೆ ಹಾರಿಸಲಾಗಿದ್ದ ಹನುಮಾನ್ ಧ್ವಜವನ್ನು ಹರಿದು ಹಾಕಿದ್ದನ್ನು ಖಂಡಿಸಿದರು. ಬಳಿಕ…
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ಏಕವಚನದಲ್ಲಿ ಸಿಎಂ ಸಿದ್ದರಾಮಯ್ಯ ಪದ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇದು ಮಾತನಾಡುವ ಬರದಲ್ಲಿ ಆ ರೀತಿ ಆಡು ಪದದಲ್ಲಿ ಹಾಗೆ ಮಾತನಾಡಿದ್ದಾರೆ ಅಷ್ಟೇ. ಬೇರೆ ಕೆಟ್ಟರೀತಿಯಲ್ಲಿ ಅವಹೇಳನ ಮಾಡುವ ಉದ್ದೇಶದಿಂದ ಮಾತನಾಡಿಲ್ಲ. ಚುನಾವಣೆ ಹತ್ತಿರವಿರುವ ಕಾರಣ ಈಗ ದಲಿತ ಅಹಿಂದ ಮತಗಳ ಓಲೈಕೆಗೆ ಬಿಜೆಪಿಯವರು ಮುಂದಾಗುತ್ತಿದ್ದಾರೆ. ಕೇಂದ್ರ ಬರಗಾಲಕ್ಕೆ ಬಿಡಿಗಾಸು ಕೊಟ್ಟಿಲ್ಲ. ಇದರ ಬಗ್ಗೆ ವಿಜಯೇಂದ್ರ, ಅಶೋಕ್ ಮಾತನಾಡಲ್ಲ ಇವರು ಯಾಕೆ ಈ ವಿಚಾರ ಮಾತನಾಡಲ್ಲ. GST ವಿಚಾರ ಬಗ್ಗೆ ಮಾತನಾಡಲ್ಲ ಬೆಲೆ ಏರಿಕೆ ಬಗ್ಗೆಯೂ ಮಾತನಾಡಲ್ಲ. ರಾಮ ಮಂದಿರ ಎಲ್ಲರೂ ಪ್ರೀತಿಸುತ್ತಾರೆ ಚುನಾವಣೆಗಾಗಿ ಈ ರೀತಿ ಮಾಡಬಾರದು ಅದು ಶ್ರೀರಾಮನಿಗೆ ಚ್ಯುತಿ ತಂದಂತೆ ಎಂದು ಅವರು ಹೇಳಿದರು.
ಬೆಂಗಳೂರು: ನಗರದ ಸರ್ವತೋಮುಖ ಅಭಿವೃದ್ಧಿಯ ಹಿತ ದೃಷ್ಟಿಯಿಂದ ಕೆಲವು ವಿಷಯಗಳನ್ನು ಚರ್ಚಿಸಲು ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರನ್ನು ಪರಿಷತ್ ಶಾಸಕರಾದ ಟಿ ಎ ಶರವಣ ಅವರು ಭೇಟಿ ಮಾಡಿದರು. ನಗರದ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಟಿ.ಎ,ಶರವಣ ಅವರು, ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು. ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಅವರು ಈ ಹಿನ್ನೆಲೆಯಲ್ಲಿ ಭೂಕಬಳಿಕೆ, ಸಂಚಾರ ದಟ್ಟನೆಯ ಸುವ್ಯವಸ್ಥೆ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಲಾಯಿತು, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ ಅವರು ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಭೂಕಬಳಿಕೆ,ಸಂಚಾರ ದಟ್ಟನೆಯ ಸುವ್ಯವಸ್ಥೆ, ಕರ್ನಾಟಕದಲ್ಲಿ ಕನ್ನಡ ಬೋರ್ಡ್ ಗಳ ಬಳಕೆಯ ಕುರಿತಂತೆ, ಬೆಂಗಳೂರಿನ ರಸ್ತೆ ನಿರ್ವಹಣೆಗೆ ಕಾಯ್ದೆಗಳ ತಿದ್ದುಪಡಿ , ಸಾರ್ವಜನಿಕರ ಕುಂದು ಕೊರತೆಗಳ ಕುರಿತು ಮತ್ತು ಹಲವಾರು ವಿಷಯಗಳ ಬಗ್ಗೆ ಚರ್ಚಿಸಿ, ಪತ್ರದ ಮುಖೇನ ಸಲಹೆ ನೀಡಿದರು.
ನವದೆಹಲಿ: ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಇಂದು ದಿನಾಂಕವನ್ನು ಪ್ರಕಟಿಸಿದೆ. ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ಕೂಡ ನಡೆಯಲಿದೆ. 56 ಸದಸ್ಯರ ಅಧಿಕಾರಾವಧಿಯು ಏಪ್ರಿಲ್ 2024 ರಲ್ಲಿ ಅವರ ನಿವೃತ್ತಿಯ ಮೇಲೆ ಮುಕ್ತಾಯಗೊಳ್ಳಲಿದೆ. ಕರ್ನಾಟಕ ಸೇರಿ ಒಟ್ಟು 13 ರಾಜ್ಯಗಳ 50 ರಾಜ್ಯಸಭಾ ಸದಸ್ಯರ ಅವಧಿ ಏಪ್ರಿಲ್ 2ರಂದು ಮುಗಿಯಲಿದ್ದರೆ, ಎರಡು ರಾಜ್ಯಗಳ ಉಳಿದ ಆರು ಸದಸ್ಯರು ಏಪ್ರಿಲ್ 3ರಂದು ನಿವೃತ್ತರಾಗಲಿದ್ದಾರೆ. ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳು ಖಾಲಿಯಾಗಲಿದ್ದು, ಜಿ.ಸಿ ಚಂದ್ರಶೇಖರ್, ಎಲ್ ಹನುಮಂತಯ್ಯ, ನಾಸೀರ್ ಹುಸೇನ್, ರಾಜೀವ್ ಚಂದ್ರಶೇಖರ್ ಅವರ ಅವಧಿ ಅಂತ್ಯವಾಗಲಿದೆ. https://ainlivenews.com/are-you-thinking-of-buying-a-home-low-interest-home-loan-available-in-these-banks/ ಚುನಾವಣಾ ಆಯೋಗದ ಪ್ರಕಾರ, ರಾಜ್ಯಸಭಾ ಚುನಾವಣೆಗೆ ಫೆ.8ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಫೆ.15 ಕೊನೆಯ ದಿನವಾಗಿದೆ. ಫೆ.16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಫೆ.20 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಫೆಬ್ರವರಿ 27 ರಂದು ಬೆಳಗ್ಗೆ 9 ರಿಂದ ಸಂಜೆ 4 ರ ನಡುವೆ…