Author: AIN Author

ಯಾದಗಿರಿ: ಜೆಡಿಎಸ್‌ನ ಮಾಜಿ ಶಾಸಕ ನಾಗನಗೌಡ ಕಂದಕೂರು(79) ತೀವ್ರ ಹೃದಯಾಘಾತದಿಂದ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.  ನಾಗನಗೌಡ ಕಂದಕೂರು (79) ಯಾದಗಿರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಗುರುಮಠಕಲ್‌ನ ಹಾಲಿ ಶಾಸಕ ಶರಣಗೌಡ ಕಂದಕೂರು ಅವರ ತಂದೆಯಾಗಿರುವ ನಾಗನಗೌಡ ಕಂದಕೂರು 2018ರಲ್ಲಿ ಗುರುಮಠಕಲ್ ಕ್ಷೇತ್ರದಿಂದ ಜೆಡಿಎಸ್ (JDS) ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು. ಇವರ ನಿಧನ ಸುದ್ದಿ ತಿಳಿದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅಭಿಮಾನಿ ಬಳಗ ಆಸ್ಪತ್ರೆಗೆ ಧಾವಿಸಿದೆ.  ಭಾನುವಾರ (ಜ.28) ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗೆ 11 ಗಂಟೆಗೆ ಹೃದಯಾಘಾತ (Heart Attack) ಸಂಭವಿಸಿ ಸಾವನ್ನಪ್ಪಿದ್ದಾರೆ. https://ainlivenews.com/loan-from-central-government-for-business-people-get-rs-10-lakh-easily/ ನಾಗನಗೌಡ ಕಂದಕೂರು ವಿಧಿವಶ ಹಿನ್ನೆಲೆ ಶಾಸಕ ಶರಣಗೌಡ ಕಂದಕೂರು ತಂದೆಯ ಪಾರ್ಥಿವ ಶರೀರವನ್ನು ಅಂಬುಲೆನ್ಸ್‌ನಲ್ಲಿ ಯಾದಗಿರಿ (Yadgiri) ನಗರದ ಮನೆಗೆ ತೆಗೆದುಕೊಂಡು ಬಂದಿದ್ದಾರೆ. ಪಾರ್ಥಿವ ಶರೀರ ಮನೆಗೆ ಬರುತ್ತಿದ್ದಂತೆ ಕುಟುಂಬಸ್ಥರು ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಪತಿಯ ಮೃತದೇಹವನ್ನು ಕಂಡು ಪತ್ನಿ ಕಣ್ಣೀರು…

Read More

ಚಿತ್ರದುರ್ಗ: 2028 ರ ವರೆಗೆ ನಾವು ಇಲ್ಲಿರ್ತೀವಿ. ಕರ್ನಾಟಕದಲ್ಲಿ‌ 2028ರ ವರೆಗೆ ಕಾಂಗ್ರೆಸ್ ಸರಕಾರ ಇರುತ್ತೆ ಅಷ್ಟು ಮಾತ್ರ ಗೊತ್ತು ಅಂತಾ ಯೋಜನೆ ಹಾಗೂ ಸಾಂಖ್ಯಿಕ ಸಚಿವ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿಕೆ ಸಧ್ಯ ಜಿಲ್ಲಾ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ  ಗ್ರಾಸವಾಗಿದೆ. ಚಿತ್ರದುರ್ಗದಲ್ಲಿ ಮಾತನಾಡಿರುವ ಡಿ. ಸುಧಾಕರ್ , ಕಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುವ ವೇಳೆ 2028 ರ ವರೆಗೆ ರಾಜ್ಯದಲ್ಲಿ ನಾವು ಇರ್ತೀವಿ. https://ainlivenews.com/loan-from-central-government-for-business-people-get-rs-10-lakh-easily/  ರಾಜ್ಯದಲ್ಲಿ 2028 ರ ವರೆಗೆ ಕಾಂಗ್ರೆಸ್ ಸರಕಾರ ಇರುತ್ತೆ ಅಂತಾ ಹೇಳ್ತೀನಿ ಅಷ್ಟು ಮಾತ್ರ ಗೊತ್ತು ಎನ್ನುವ ಮೂಲಕ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭವಿಷ್ಯ ನುಡದ್ರಾ ಎನ್ನುವ ಚರ್ಚೆ ಪ್ರಾರಂಭವಾಗಿದೆ. ಒಂದೆಡೆ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದು, ಮಾಜಿ ಸಚಿವರಾದ ಜನಾರ್ಧನ ರೆಡ್ಡಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಯಂಥ ನಾಕರು…

Read More

ಬೆಂಗಳೂರು: ಪಕ್ಷ ಏನೇ ಜವಾಬ್ದಾರಿ ಕೊಟ್ರೂ ಸಮರ್ಪಕವಾಗಿ ಕೆಲಸ ಮಾಡುತ್ತೇನೆ. ಹಿಂದೆಯೂ ಕೆಲಸ ಮಾಡಿದ್ದೇನೆ ಎಂದು ಶಾಸಕ ಡಿ.ಟಿ ರಾಜೇಗೌಡ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಇದೆ. ಸರ್ಕಾರಕ್ಕೆ ಉತ್ತಮ‌ ಹೆಸರು ಬರುವಂತೆ ಮಾಡಬೇಕು, ಆದ್ದರಿಂದ ಹೆಚ್ಚು ಒತ್ತು ನೀಡಿ ಸಿಎಂ ಸಿದ್ದರಾಮಯ್ಯ ಅವರಿಗೆ, ಜಾರ್ಜ್ ಹಾಗೂ ಡಿಕೆಶಿ ಅವರಿಗೆ ಗೌರವ ನೀಡುವ ಕೆಲಸ ಮಾಡುತ್ತೇನೆ ಎಂದರು. ಇನ್ನೂ  ರಾಜ್ಯದಲ್ಲಿ ಬರದ ಚಾಯೆ ಇದೆ. ಇರೋ ಡ್ಯಾಮಲ್ಲಿ ನೀರಿಲ್ಲ. ಭೂ ಕುಸಿತದಿಂದ ಶಿಲ್ಟಿಂಗ್ ಆಗ್ತಿದೆ. ಇತ್ತೀಚೆಗೆ ನೀರಿನ ಶೇಕರಣೆ ಕಡಿಮೆ‌ ಆಗ್ತಿದೆ. ರಿನೀವಬಲ್ ಎನರ್ಜಿ, ಸೋಲಾರ್ ವ್ಯವಸ್ಥೆ ಮಾಡಿಕೊಳ್ಳಬೇಕು. ಇಲ್ಲದಿದ್ರೆ ಮುಂದೆ ಸಮಸ್ಯೆ ಆಗಲಿದೆ. https://ainlivenews.com/loan-from-central-government-for-business-people-get-rs-10-lakh-easily/ ಅದಲ್ಲದೆ ಡಿಕೆಶಿ ಅವರು ಹಿಂದೆ ಇಂಧನ ಸಚಿವರಾಗಿದ್ದಾಗ ವಿದ್ಯುತ್ ಸಮಸ್ಯೆಯನ್ನೂ ನೀಗಿಸಿದ್ರು. ಇನ್ನೂ ಎರಡು ವರ್ಷಕ್ಕೆ ಸೀಮಿತ ಮಾಡಿರೋ ವಿಚಾರಕ್ಕೆ ಪ್ರತಿಕ್ರಿಯೇ ನೀಡಿದ ಅವರು, ನಮ್ಮದು ಹೈಕಮಾಂಡ್ ಪಕ್ಷ. ಅಂಬೇಡ್ಕರ್ ಸಂವಿಧಾನಕ್ಕೆ ಪೂರಕವಾಗಿ ಕೆಲಸ ಮಾಡಲಿದೆ.…

Read More

ಬೆಂಗಳೂರು: ನಿಗಮ ಮಂಡಳಿ ಅಧಿಕಾರವಧಿಯನ್ನು ಎರಡು ವರ್ಷ ಮೀಸಲಿಗೆ ಕೆಲ ಶಾಸಕರ ವಿರೋಧ ವಿಚಾರಕ್ಕೆ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಪಕ್ಷದ ಎಲ್ಲರಿಗೂ ಅವಕಾಶ ದೊರೆಯಬೇಕು. ಇತರರಿಗೂ ಅಧಿಕಾರ ಹಂಚಬೇಕು. ಆದ ಕಾರಣ 2 ವರ್ಷ ಮಾತ್ರ ಅಧಿಕಾರವಧಿ ಎಂದು ಹೇಳಿದ್ದೇವೆ ಎಂದರು. ಹೈಕಮಾಂಡ್ ಕೊಟ್ಟಿರುವ ಸೂತ್ರವನ್ನು ನಾವು ಜಾರಿಗೆ ತಂದಿದ್ದೇವೆ. ಇಲ್ಲಿ ಸಿದ್ದರಾಮಯ್ಯ ಅವರದ್ದು ಏನೂ ಇಲ್ಲ, ನನ್ನದೂ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಕಾರ್ಯಕರ್ತರು ದುಡಿದಿದ್ದಾರೆ. ಆದ ಕಾರಣ ಎಲ್ಲರಿಗೂ ಅವಕಾಶ ನೀಡಬೇಕು. ಈ ನಿಟ್ಟಿನಲ್ಲಿ ಹೈಕಮಾಂಡ್ ಹೇಳಿದ ಹಾಗೆ ಎರಡು ವರ್ಷಕ್ಕೆ ಅಧಿಕಾರ ಸೀಮಿತ ಮಾಡಿದ್ದೇವೆ ಅಂತ ಸಮರ್ಥನೆ ನೀಡಿದರು. ಇನ್ನೂ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, https://ainlivenews.com/loan-from-central-government-for-business-people-get-rs-10-lakh-easily/ ಕರ್ನಾಟಕದಲ್ಲಿ 224 ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿತ್ತು. ಆದರೆ ಏನಾಯಿತು? 136 ಸ್ಥಾನ ನಮಗೆ ಬಂತು. 28…

Read More

ಬೆಂಗಳೂರು: ಅವ್ರಿನ್ನೂ ಮೀಸೆ ಚಿಗುರದ ಹುಡುಗ್ರು..ಸಿನಿಮಾಗಳನ್ನ ನೋಡಿ ಏರಿಯಾದಲ್ಲಿ ಹವಾ ಮೈಂಟೇನ್ ಮಾಡೋಕೆ ಮುಂದಾಗಿದ್ರು..ರೀಲ್ಸ್ ನಲ್ಲಿ ಮಚ್ಚಿಡಿದು ಪೋಸ್ ಕೊಡ್ತಿದ್ದ ಹುಡುಗ್ರಿಗೆ ಅದೇ ಏರಿಯಾದ ರೌಡಿ ಸಾರ್ವಜನಿಕವಾಗಿ ಸಿಕ್ಕಾಗೆಲ್ಲಾ ನಿಂದಿಸ್ತಿದ್ದ..ಇದೇ ಕಾರಣಕ್ಕೆ ಸ್ಕೆಚ್ ಹಾಕಿದ್ದೋರು ಮನೆಗೆ ನುಗ್ಗಿ ರೌಡಿಗೆ ಚೆಟ್ಟ ಕಟ್ಟಿದ್ರು..ಈ ಕುರಿತ ಇಂಟ್ರಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ.. ಹೀಗೆ ಮುಖಕ್ಕೆ ಮಾಸ್ಕ್ ಹಾಕಿ ಕರೆದೊಯ್ತಿರೋ ಈ ಯುವಕರನ್ನೊಮ್ಮೆ ನೋಡಿ.ಹೆಸ್ರು ಸುನಿಲ್, ಪ್ರಶಾಂತ್, ಧನುಷ್, ಕ್ಲಾಮೆಂಟ್ ..ಇವ್ರಿಗಿನ್ನೂ ಸರಿಯಾಗಿ ಮೀಸೆ ಚಿಗುರಿಲ್ಲ.. ಸಿನಿಮಾಗಳಲ್ಲಿ ಪ್ರೇರೇಪಿತರಾಗಿ ಏರಿಯಾದಲ್ಲಿ ಹವಾ ಮೈಂಟೇನ್ ಮಾಡ್ತಿದ್ರು..ಅದ್ಕೆ ಮಾರಾಕಸ್ತ್ರಗಳನ್ನ ಹಿಡಿದು ರೀಲ್ಸ್ ಮಾಡಿ ಬಿಲ್ಡಪ್ ತೆಗೆದುಕೊಳ್ತಿದ್ರು.. ಹೀಗಿರುವಾಗ ವಿವೇಕನಗರದ ರೌಡಿಶೀಟರ್ ಮಿಲ್ಟ್ರಿ ಸತೀಶ, ಇವ್ರುಗೆ ಸಿಕ್ಕಾಗೆಲ್ಲಾ ಬೈಯೋದು, ಎಲ್ಲರ ಬಳಿ ನಿಂದಿಸೋದು ಮಾಡ್ತಿದ್ನಂತೆ..ಮೂರನೇ ಆರೋಪಿ ಧನುಷ್ ಎಂಬಾತನಿಗೆ ಬಟ್ಟೆ ಬಿಚ್ಚಿ ಅವಮಾನ ಕೂಡಾ ಮಾಡಿದ್ನಂತೆ..ಅದಕ್ಕಾಗಿ ಸತೀಶನ ಹತ್ಯೆ ಮಾಡಿದ್ರೆ ಏರಿಯಾದಲ್ಲಿ ಹವಾ ಮೈಂಟೇನ್ ಮಾಡ್ಬೋದು ಅಂತ ಸ್ಕೆಚ್ ಹಾಕಿದ್ರು.. https://ainlivenews.com/loan-from-central-government-for-business-people-get-rs-10-lakh-easily/ ಹೌದು, ವಿವೇಕನಗರದ ಮಾಯಾಬಜಾರ್ ನಲ್ಲಿ ನಡೆದ ಸತೀಶ್…

Read More

ಬೆಂಗಳೂರು: ಲೋಕ ಸಮರಕ್ಕೆ ಪ್ರತಿಪಕ್ಷ ಬಿಜೆಪಿ ಭರ್ಜರಿ ತಾಲೀಮು ಶುರು ಮಾಡಿದೆ.ಬೆಂಗಳೂರಿನ ಅರಮನೆ ಮೈದಾನದಲ್ಲಿಇಂದು  ರಾಜ್ಯ ಕಾರ್ಯಕರಣಿ ಸಭೆ ನಡೆಸುವ ಮೂಲಕ ಬಿಜೆಪಿ ಕಲಿಗಳು ಲೋಕ ಅಖಾಡಕ್ಕೆ ಅಧಿಕೃತವಾಗಿ ಧುಮುಕಿದ್ದಾರೆ.28ಕ್ಕೆ 28 ಕ್ಷೇತ್ರಗಳನ್ನ ಗೆಲ್ಲಲು,ಕಾರ್ಯಕರಣಿ ಸಭೆಯಲ್ಲಿ ನಿರ್ಣಯ ತೆಗದುಕೊಳ್ಳಲಾಗಿದೆ. ಯೆಸ್,ಪ್ರತಿಪಕ್ಷ ಬಿಜೆಪಿ ಲೋಕ ಅಖಾಡಕ್ಕೆ ಅಧಿಕೃತವಾಗಿ ಇಂದು ಧುಮಕಿದೆ.ಲೋಕ ಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಕಾರ್ಯಕರಣಿ ಸಭೆ ನಡೆಸಿದ್ರು. ಸಭೆಯಲ್ಲಿ ಬಿಜೆಪಿ ಕಲಿಗಳು ಶಕ್ತಿ ಪ್ರದರ್ಶನ ನಡೆಸಿದ್ರು.ಸಭೆಯಲ್ಲಿ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್,ಪ್ರಹ್ಲಾದ್ ಜೋಶಿ,ಮಾಜಿ ಸಿಎಂ ಬಿಎಸ್ವೈ,ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಶಾಸಕರು,ಸಂಸದರು,ಮಾಜಿ ಶಾಸಕರು,ಪದಾಧಿಕಾರಿಗಳು ಭಾಗಿಯಾಗಿದ್ದರು.ಈ ವೇಳೆ ಮಾತನಾಡಿದ ಬಿಎಸ್ವೈ,ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಕ್ ಪ್ರಹಾರ ನಡೆಸಿದ್ರು.ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಇದ್ದು,ಇದ್ರ ವಿರುದ್ಧ ನಾವೆಲ್ಲರೂ ಹೋರಾಟ ಮಾಡಬೇಕು.28ಕ್ಕೆ 28 ಕ್ಷೇತ್ರಗಳನ್ನ ಗೆಲ್ಲಬೇಕೆಂದು ಕರೆ ನೀಡಿದ್ರು. ಇನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು.ರಾಜ್ಯದಲ್ಲಿ ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಯೋಜನೆ ವಿಫಲವಾಗಿದೆ.ನಮ್ಮ ಗ್ಯಾರಂಟಿ…

Read More

ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಯೇನೋ ರಿಲೀಸ್ ಆಯ್ತು.ಅಧ್ಯಕ್ಷಗಿರಿ ಸಿಕ್ಕವರು  ಖುಷಿಯಾದ್ರೆ,,ಸಿಗದವರು ನಾಯಕರ ವಿರುದ್ಧ ಬೇಸರಗೊಂಡಿದ್ದಾರೆ.ಕೆಲಸ ಮಾಡಿದವ್ರನ್ನ ಬಿಟ್ಟು ಆಪ್ತರಿಗೆ ಮಣೆಹಾಕಿದ್ದಾರೆ ಅಂತ ಗುರ್ ಅಂದಿದ್ದಾರೆ..ಇವ್ರ ಜೊತೆ ಕಾರ್ಯಕರ್ತರು ಪಟ್ಟಿ ಬಿಡುಗಡೆಯಾಗದಿದ್ದಕ್ಕೆ ಆಕ್ರೋಶ ಗೊಂಡಿದ್ದಾರೆ..ಶಾಸಕರ ಜೊತೆಯೇ ನಮ್ಮ ಪಟ್ಟಿಯನ್ನೂ ಬಿಡುಗಡೆ ಮಾಡಿದ್ರೆ ಏನಾಗ್ತಿತ್ತು ಅಂತ ಪ್ರಶ್ನಿಸಿದ್ದಾರೆ. ಯೆಸ್,ಏಳು ತಿಂಗಳ ನಂತ್ರ ನಿಗಮ ಮಂಡಳಿ ಅಧ್ಯಕ್ಷರ ನೇಮಕವಾಗಿದೆ..ಮೊದಲ ಹಂತದಲ್ಲಿ ೩೪ ಶಾಸಕರಿಗೆ ಗೂಟದ ಕಾರಿನ ಭಾಗ್ಯ ಲಭಿಸಿದೆ.. ಯಾರ್ಯಾರಿಗೆ ಅವಕಾಶ ಸಿಕ್ಕಿದೆ ಬಹಳ ಖುಷಿಯಾಗಿದ್ದಾರೆ..ತಮ್ಮ ನಾಯಕರನ್ನ ಭೇಟಿ ಮಾಡಿ ಅಭಿನಂದಿಸ್ತಿದ್ದಾರೆ..ಆದ್ರೆ ಸಿಗದ ಕೆಲವು ಶಾಸಕರು ನಾಯಕರ ವಿರುದ್ಧ ಆಕ್ರೋಶ ಗೊಂಡಿದ್ದಾರೆ..ನಮಗೂ ಮೊದಲ ಹಂತದಲ್ಲೇ ಸಿಗುತ್ತೆ ಅನ್ಬೋ ನಿರೀಕ್ಷೆ ಹುಸಿಯಾಗಿದೆ ಅಂತ ಬೇಸರಗೊಂಡಿದ್ದಾರೆ.. ಬಹಿರಂಗವಾಗಿ ಅಸಮಾಧಾನ ಹೊರಹಾಕದಿದ್ರೂ ತಮ್ಮ ಆಪ್ತರ ಮೂಲಕ ನೋವು ತೋಡಿಕೊಂಡಿದ್ದಾರೆ..ಹೊನ್ನಾಳಿ ಶಾಸಕ ಶಾಂತನಗೌಡ,ತಿಪಟೂರ್ ಶಾಸಕ ಷಡಕ್ಷರಿ ,ಕುಣಿಗಲ್ ಶಾಸಕ ರಂಗನಾಥ್ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.. ಇನ್ನು ತಮಗೆ ಕೊಟ್ಟ ನಿಗಮಗಳ ಬಗ್ಗೆ ಕೆಲವು ಶಾಸಕರು ಸಮಾಧಾನಗೊಂಡು ನಾಯಕರನ್ನ ಭೇಟಿಮಾಡಿ ಸಂತೋಷ…

Read More

ನಟ ಸೂರ್ಯ ಮತ್ತು ನಟಿ ಜ್ಯೋತಿಕಾ ಡಿವೋರ್ಸ್ ಪಡೆಯುತ್ತಿದ್ದಾರೆ ಎನ್ನುವ ಸುದ್ದಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿತ್ತು. ಪ್ರೀತಿ ಮದುವೆಯಾದ ಜೋಡಿಯಿದೆ. ಅತ್ಯುತ್ತಮ ಸಿನಿಮಾಗಳನ್ನು ಜೊತೆಯಾಗಿ ನೀಡಿದ್ದಾರೆ. ಸೂರ್ಯ ಅವರ ಚಿತ್ರಗಳಿಗೆ ಜ್ಯೋತಿಕಾ ನಿರ್ಮಾಣ ಮಾಡಿದ್ದಾರೆ. ಆದರೂ, ಈ ಜೋಡಿ ಬೇರೆ ಆಗುತ್ತಿದೆ ಎನ್ನುವ ಸುದ್ದಿ ಆಗಿತ್ತು. ಈ ಸುದ್ದಿಗೆ ಪೂರಕ ಎನ್ನುವಂತೆ ಜ್ಯೋತಿಕಾ ಅವರು ಮುಂಬೈನಲ್ಲಿ ವಾಸವಿದ್ದಾರೆ. ಅಲ್ಲಿಯೇ ಮನೆಯೊಂದನ್ನು ಖರೀದಿಸಿ, ಮಕ್ಕಳೊಂದಿಗೆ ಬದುಕುತ್ತಿದ್ದಾರೆ ಎನ್ನುವ ಮಾಹಿತಿಯೂ ಇತ್ತು. ಈ ಮಾಹಿತಿ ನಿಜವೂ ಆಗಿತ್ತು. ಸೂರ್ಯ ಚೆನ್ನೈನಲ್ಲಿದ್ದರೆ, ಜ್ಯೋತಿಕಾ ಮುಂಬೈನಲ್ಲಿದ್ದಾರೆ. ಹಾಗಾಗಿ ಸುದ್ದಿ ನಿಜ ಎಂದು ಹೇಳಲಾಗಿತ್ತು. ಈ ಎಲ್ಲ ಸುದ್ದಿಗಳಿಗೆ ಜ್ಯೋತಿಕಾ ಸ್ಪಷ್ಟನೆ ನೀಡಿದ್ದಾರೆ. https://ainlivenews.com/loan-from-central-government-for-business-people-get-rs-10-lakh-easily/ ತಾವು ಮುಂಬೈನಲ್ಲಿ ಇರುವುದು ನಿಜ. ಆದರೆ, ಅದು ಡಿವೋರ್ಸ್ ಕಾರಣಕ್ಕೆ ಅಲ್ಲ. ಮುಂಬೈನಲ್ಲಿ ಕೆಲವು ಪ್ರಾಜೆಕ್ಟ್ ಮಾಡುತ್ತಿದ್ದಾರಂತೆ. ಓಡಾಟ ಕಷ್ಟ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತದೆ ಎನ್ನುವ ಕಾರಣಕ್ಕಾಗಿ ಮನೆ ಮಾಡಿರುವುದಾಗಿ ಹೇಳಿದ್ದಾರೆ. ಜ್ಯೋತಿಕಾ ಮತ್ತು ಸೂರ್ಯ ಮಾದರಿಯ ದಂಪತಿಗಳು.…

Read More

ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಅವರು ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಆರ್‌ಜೆಡಿ-ಜೆಡಿಯು ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದೆ. ಭಾನುವಾರ ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್‌ ಕುಮಾರ್‌, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ (RJD) ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ. ಎಲ್ಲಾ ಪಕ್ಷಗಳು ನಿರ್ಣಾಯಕ ಸಭೆಯ ನಂತರ ನಿತೀಶ್‌, ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ ಜೊತೆ ನಿತೀಶ್ ಕುಮಾರ್ (Nitish Kumar) ಸರ್ಕಾರ ರಚನೆ ಬಹುತೇಕ ಫಿಕ್ಸ್ ಆಗಿದ್ದು, ಇಂದು ಸಂಜೆ ಅಥವಾ ಸೋಮವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. https://ainlivenews.com/loan-from-central-government-for-business-people-get-rs-10-lakh-easily/ ಇನ್ನೊಂದೆಡೆ ಬಿಹಾರದಲ್ಲಿ (Bihar) ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವೀಕ್ಷಕರನ್ನ ನೇಮಕ ಮಾಡಿದೆ. ಭೂಪೇಶ್ ಬಘೇಲ್ ಅವರನ್ನು ವೀಕ್ಷಕನನ್ನಾಗಿ ನೇಮಸಿದೆ. ಮಗದೊಂದು ಕಡೆ ಜೆಡಿಯುನ 10 ಶಾಸಕರನ್ನು ಸೆಳೆಯಲು ಲಾಲೂ ಪ್ರಸಾದ್ ಯತ್ನ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Read More

ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್‌ ನಟಿಸಿರುವ ‘ಫಾರ್‌ ರಿಜಿಸ್ಟ್ರೇಷನ್‌’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇಂದು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಚಿತ್ರತಂಡ ಸುದ್ದಿ ಗೋಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದೆ.‌ ಫೆಬ್ರವರಿ 23ಕ್ಕೆ ಸಿನಿಮಾವನ್ನು ತೆರೆಗೆ ತರೋದಾಗಿ ಚಿತ್ರತಂಡ ತಿಳಿಸಿದೆ. ನಿರ್ದೇಶಕ ನವೀನ್ ದ್ವಾರಕನಾಥ್ ಮಾತನಾಡಿ, ನಮಗೆ ಇದೊಂದು ರೀತಿ ಚಾಲೆಂಜಿಂಗ್ ಟೈಮ್. ತಡವಾಗಿದೆ. ನಾನು ಅದನ್ನು ಒಪ್ಪಿಕೊಳ್ಳುತ್ತೇನೆ. ನಾನೇ ಹೊಣೆ ತೆಗೆದುಕೊಳ್ಳುತ್ತೇನೆ. ತುಂಬಾ ಕಾರಣಗಳಿಂದ ಸಿನಿಮಾ ತಡವಾಯ್ತು. ಒಳ್ಳೆ ಔಟ್ ಪುಟ್ ಕೊಡಲು ಸಮಯ ಹಿಡಿಯಿತು. ಕ್ವಾಲಿಟಿ ಹಾಗೂ ಟೆಕ್ನಿಕಲ್ ದೃಷ್ಟಿಯಿಂದ ಟೈಮ್ ತೆಗೆದುಕೊಳ್ತು. ಮಿಲನಾ ಹಾಗೂ ಪೃಥ್ವಿ ಪಾತ್ರಕ್ಕೆ ತುಂಬಾ ಸಪೋರ್ಟ್ ಮಾಡಿದ್ದಾರೆ. ಕಂಪ್ಲೀಟ್ ಕಾಮಿಡಿ ಎಂಟರ್ ಟೈನರ್. ಪ್ಯಾಕೇಜ್ ಆಫ್ ಎಮೋಷನ್ ಹಾಗೂ ಡ್ರಾಮಾ ಚಿತ್ರದಲ್ಲಿದೆ. ಸೆನ್ಸಾರ್ ಆಗಿದ್ದು, ಫೆಬ್ರವರಿ 23ಕ್ಕೆ ಚಿತ್ರ ತೆರೆಗೆ ಬರ್ತಿದೆ ಎಂದು ತಿಳಿಸಿದರು. ನಟ ಪೃಥ್ವಿ ಅಂಬರ್ ಮಾತನಾಡಿ, ದಿಯಾಗೂ ಮೊದಲು ಸಹಿ ಮಾಡಿದ ಚಿತ್ರವಿದು. ನನ್ನ ತುಳು ಚಿತ್ರ ರಿಲೀಸ್…

Read More