ಕಲಬುರಗಿ: ನಿತೀಶ್ ಕುಮಾರ್ ರಾಜ್ಯಪಾಲರ ಭೇಟಿ ಬಗ್ಗೆ ನನಗೆ ಮಾಹಿತಿ ಇಲ್ಲ ಊಹಾಪೋಹ ಬಗ್ಗೆ ನಾನು ಯಾವತ್ತೂ ಮಾತಾಡೋದೇ ಇಲ್ಲ ಅಂತ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ಖರ್ಗೆ ನಮ್ಮ ಒಕ್ಕೂಟ ಮುರಿಬಾರ್ದು ಅಂತಾ ಎಲ್ಲ ನಾಯಕರಿಗೂ ಮಾತಾಡ್ತೇನೆ..ಒಂದು ಕಡೆ ಇದ್ರೆ ಮಾತ್ರ ಒಳ್ಳೆಯ ಫೈಟ್ ಕೊಟ್ಟು ಯಶಸ್ವಿ ಆಗಬಹುದು ಅಂತ ಹೇಳಿದ್ರು.ಒಟ್ಟಾರೆ ಪ್ರಜಾಪ್ರಭುತ್ವ ಉಳಿಸಬೇಕು ಅನ್ನೋರು ಯಾರೂ ಆತುರದ ನಿರ್ಧಾರ ಮಾಡಲ್ಲ ಅಂದ್ರು..
Author: AIN Author
ಕಲಬುರಗಿ: ಪರಿಸರ ಕಾಯಿದೆ ಉಲ್ಲಂಘನೆ ಮಾಡಿದ ಯಾವ ಕಾರ್ಖಾನೆ ಇದ್ರೂ ಕ್ರಮ ತಪ್ಪಿದ್ದಲ್ಲ ಅದರಂತೆ ಶಾಸಕ ಯತ್ನಾಳ್ ಮಾಲೀಕತ್ವದ ಕಾರ್ಖಾನೆ ಸಹ ಸೇರಿದೆ ಅಂತ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ಖಂಡ್ರೆ ಚಿಂಚೋಳಿಯ ಯತ್ನಾಳ್ ಸಕ್ಕರೆ ಕಾರ್ಖಾನೆ ನಿಯಮ ಉಲ್ಲಂಘಿಸಿ ಕಬ್ಬು ಅರೆದಿದೆ ಮಾತ್ರವಲ್ಲ ಇನ್ನೂ ಹಲವು ನಿಯಮಗಳನ್ನ ಗಾಳಿಗೆ ತೂರಿದೆ.ಈಗಾಗಲೇ ಕಳೆದ ವರ್ಷ ಕೇಂದ್ರ ಪರಿಸರ ಮಂಡಳಿ ಒಂದೂವರೆ ಕೋಟಿ ದಂಡ ವಸೂಲಿ ಮಾಡಿದೆ ಆದ್ರೂ ಮತ್ತೆ ನಿಯಮ ಉಲ್ಲಂಘನೆ ಆಗಿದೆ..ಹೀಗಾಗಿ ಇಲಾಖೆ ಕ್ರಮ ಕೈಗೊಂಡಿದೆ ಒಟ್ಟಾರೆ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಅಂತ ಹೇಳಿದ್ರು..
ಬೆಂಗಳೂರು: ನಿಗಮಮಂಡಳಿಯಲ್ಲಿ ನೇಮಕಗೊಂಡಿರೋ ಕೆಲ ಶಾಸಕರ ಅಸಮಾಧಾನ ವಿಚಾರ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆ ಬೆಳವಣಿಗೆ ಎಲ್ಲಾ ನನಗೆ ಗೊತ್ತಿಲ್ಲ ಹೈಕಮಾಂಡ್ ಅನುಮತಿ ತೆಗೆದುಕೊಂಡು,ಚರ್ಚೆ ಮಾಡಿ ಸಿಎಂ ಡಿಸಿಎಂ ಮಾಡಿದ್ದಾರೆ ಯಾರು ಒಪ್ಪುತ್ತಾರೋ ಒಪ್ಪೋದಿಲ್ಲವೋ ಗೊತ್ತಿಲ್ಲ ಅಧಿಕೃತವಾಗಿ ಈಗ ಪ್ರಕಟಣೆ ಮಾಡಿದ್ದಾರೆ ಎಂದು ಹೇಳಿದರು. https://ainlivenews.com/the-list-of-appointment-of-corporation-boards-has-been-released-by-the-congress-government-of-the-state/ ಬೆಳಗ್ಗೆ ಡಿಸಿಎಂ ಮೀಟ್ ಆದ ಬಗ್ಗೆನೂ ಪ್ರಸ್ತಾಪ ಮಾಡಿದಾಗ ತುಮಕೂರನಲ್ಲಿ 29 ಕ್ಕೆ ಸರ್ಕಾರಿ ಕಾರ್ಯಕ್ರಮ ಇದೆ ಡಿಸಿಎಂ ಬರಬೇಕು ಅಂತ ಹೇಳಿದ್ದೆನೆ ನಿಗಮಂಡಳಿ ಅಭಿಪ್ರಾಯ ವಿಚಾರ ಮೊದಲೇ ಹೇಳಿದ್ದೆನೆ ಈ ವಿಚಾರ ಇಂದು ಮಾತಾಡಿಲ್ಲ ಎಂದರು. ನಿಗಮ ಮಂಡಳಿ ವಿಚಾರವಾಗಿ ಪರಿಷತ್ ಸದಸ್ಯರ ಅಸಮಾಧಾನ ವಿಚಾರ ಬಗ್ಗೆಯೂ ಮಾತನಾಡಿ ಇದೆಲ್ಲವೂ ಸಿಎಂ ಅಂಗಳದಲ್ಲಿದೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದರು. ಹೆಗಡೆಯವರು ಸರ್ಕಾರಕ್ಕೆ ವಾರದಲ್ಲಿ ಸಲ್ಲಿಸುತ್ತೆನೆ ಅಂದಿದ್ದಾರೆ ಅದನ್ನ ಸರ್ಕಾರ ಸ್ವೀಕರಿಸಿ, ಪಬ್ಲಿಕ್ ಡೊಮೈನ್ ಗೆ ತರಬೇಕು 160 ಕೋಟಿ ಖರ್ಚು…
ಬೆಂಗಳೂರು: ರಾಜ್ಯದಲ್ಲಿ 3,456 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, 52 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದು ಯಾವುದೇ ಸಾವು ನೋವು ವರದಿಯಾಗಿಲ್ಲ. ಒಟ್ಟಾರೆಯಾಗಿ ರಾಜ್ಯದಲ್ಲಿ 341 ಸಕ್ರಿಯ ಪ್ರಕರಣಗಳಿವೆ. ಇನ್ನುಳಿದಂತೆ ಇಂದು ಕೋವಿಡ್ನಿಂದ ಗುಣಮುಖರಾಗಿ 60 ಜನರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಪಾಸಿಟಿವಿಟಿ ದರ ಶೇ. 1.50 ಇದೆ. ಬೆಂಗಳೂರಿನಲ್ಲಿ ಇಂದು 12 ಪಾಸಿಟಿವ್ ಕೇಸ್ಗಳು ವರದಿಯಾಗಿದೆ. ಮೈಸೂರಿನಲ್ಲಿ 5, ಮಂಡ್ಯದಲ್ಲಿ 7, ತುಮಕೂರಿನಲ್ಲಿ 3, ದಕ್ಷಿಣ ಕನ್ನಡದಲ್ಲಿ 1 ಪ್ರಕರಣಗಳು ದಾಖಲಾಗಿದೆ. ಅದೇ ರೀತಿ ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾವೇರಿ, ಉಡುಪಿ, ವಿಜಯಪುರ, ಯಾದಗಿರಿ, ರಾಮನಗರ, ಕೊಪ್ಪಳ, ಚಾಮರಾಜನಗರ, ಬೀದರ್, ಬಳ್ಳಾರಿಯಲ್ಲಿ ಇಂದು ಯಾವುದೇ ಕೊರೊನಾ ಪ್ರಕರಣ ದಾಖಲಾಗಿಲ್ಲ.
ಬಾಗಲಕೋಟೆ: ಅಪ್ಪನ ಕೊಲೆ ಮಾಡಲು ಮಗನೇ ಮೂರು ಲಕ್ಷ ಸುಪಾರಿ ಕೊಟ್ಟ ಪ್ರಕರಣವೊಂದು ಬಾಗಲಕೋಟೆಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಚೆನ್ನಪ್ಪ (66) ಕೊಲೆಯಾದ ತಂದೆ. ವಿಕಲಚೇತನನಾಗಿರುವ ಮಗ ಚೆನ್ನಬಸಪ್ಪ ವಿಜಯಪುರ (Vijayapur) ಜಿಲ್ಲೆ ನಿಡಗುಂದಿ ಮೂಲದ ಮಾಂತೇಶ್ಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆ. ಆಸ್ತಿಗಾಗಿ ಕೊಲೆ: 32 ಎಕರೆ ಆಸ್ತಿ ಅದರಲ್ಲಿ ವಿಭಾಗ ಮಾಡುವ ವಿಚಾರಕ್ಕೆ ಪದೇ ಪದೇ ಕಲಹ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಅಪ್ಪನನ್ನು ಕೊಲೆ ಮಾಡಲು ಮಗ ಪ್ಲಾನ್ ಮಾಡಿದ್ದಾನೆ. ಅಂತೆಯೇ ಚೆನ್ನಬಸಪ್ಪ, ಸೊಸೆ ಶಿವಬಸವ್ವ ಹಾಗೂ ಮಗನ ಆಪ್ತ ರಮೇಶ್ ಮನಗೂಳಿ ಸೇರಿ ಕೊಲೆಗೆ ಪ್ಲಾನ್ ಮಾಡಿದ್ದಾರೆ. ಬಳಿಕ ಮಾಂತೇಶ್ ಮರಡಿಮಠ ಎಂಬಾತನಿಗೆ 3 ಲಕ್ಷ ಹಣ ನೀಡಿದ್ದಾರೆ. ಅಂತೆಯೇ ಚೆನ್ನಪ್ಪನನ್ನು ರಾಂಪುರ ಗ್ರಾಮದ ಬಳಿ ಮಚ್ಚಿನಿಂದ ಕೊಚ್ಚಿ ಕಲ್ಲಿನಿಂದ ತಲೆ ಜಜ್ಜಿ ಕೊಲೆ ಮಾಡಲಾಗಿದೆ
ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಸ್ವಾಗತಿಸಿದ ಮಾಜಿ ಸಿಎಂ ಯಡಿಯೂರಪ್ಪ ಶಾಮನೂರು ಅವರು ನಮ್ಮ ಸಮಾಜದ ಹಿರಿಯ ಮುಖಂಡರು ಅವರಂಥ ಹಿರಿಯರು ಆಶೀರ್ವಾದ ಮಾಡಿರೋದು ಸಂತೋಷ ಎಂದು ಹೇಳಿದರು. ಶಿವಮೊಗ್ಗದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಘವೇಂದ್ರರನ್ನು ಗೆಲ್ಲಿಸಲು ಶ್ಯಾಮನೂರು ಕರೆ ನೀಡಿದ್ದರು ಈ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ಯಡಿಯೂರಪ್ಪನವರು ಮಾತನಾಡಿ, ರಾಘವೇಂದ್ರ ಮಾಡಿರುವ ಕೆಲಸ ಮೆಚ್ಚಿ ಅವರನ್ನು ಪುನರಾಯ್ಕೆ ಮಾಡಬೇಕೆಂದು ಹೇಳಿರೋದು ನಮ್ಮ ಸಮಾಜದ ಬಂಧುಗಳಿಗೆ, ಕಾರ್ಯಕರ್ತರಿಗೆ ಸಂತೋಷ ತಂದಿದೆ ಶಾಮನೂರು ಅವರಂಥ ಹಿರಿಯರು ಆಶೀರ್ವಾದ ಮಾಡಿರೋದು ಸಂತೋಷ ಅದಕ್ಕಾಗಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದರು. 2024ರ ಈ ವರ್ಷದಲ್ಲಿ ಜವಾಬ್ದಾರಿ ವಹಿಸಿಕೊಂಡ ನಂತರ ನಡೆಯುತ್ತಿರೋ ಮೊದಲ ಕಾರ್ಯಕಾರಿಣಿ. ನಿಮ್ಮೆಲ್ಲರಿಗೂ ಸ್ವಾಗತ, ಅಭಿನಂದನೆ. ಭಾರತೀಯರ 500 ವರ್ಷಗಳ ಕನಸು ರಾಜಮಂದಿರ ನಿರ್ಮಾಣ ಆಗಿದೆ. ಕರ್ನಾಟಕಕ್ಕೂ, ಅಯೋಧ್ಯೆಗೂ ಅವಿನಾಭಾವ ಸಂಬಂಧ ಇದೆ. ಅಯೋದ್ಯೆಯಲ್ಲಿ ನಿರ್ಮಾಣ ಆದ ಬಾಲರಾಮ ಎಲ್ಲರಿಗೂ ಹೆಮ್ಮೆ. ಮೋದಿ ಅವರ ನೇತೃತ್ವದಲ್ಲಿ, ಭಾರತ ಹತ್ತು ವರ್ಷಗಳಲ್ಲಿ ಅನೇಕ ಅಭಿವೃದ್ಧಿ…
ಬೆಂಗಳೂರು: ಇನ್ಮುಂದೆ ಬೆಂಗಳೂರಿನ ಹೋಟೆಲ್ & ರೆಸ್ಟೋರೆಂಟ್ಗಳಲ್ಲಿಅನವಶ್ಯಕ ಕಾಲಹರಣ ಮಾಡುವ ಕೆಲ ಗ್ರಾಹಕರಿಂದ ಹೋಟೆಲ್ ಮಾಲೀಕರು ಕಿರಿಕಿರಿ ಅನುಭವಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದೆ. ಕೋಟ್ಯಂತರ ಮಂದಿಗೆ ಜೀವನ ನೀಡಿರುವ ಬೆಂಗಳೂರಿನಲ್ಲಿ ಹೋಟೆಲ್ ಊಟವನ್ನು ನಂಬಿಕೊಂಡವರ ಸಂಖ್ಯೆಯೂ ಹೆಚ್ಚಾಗಿಯೇ ಇದೆ. ಅದೇ ಗ್ರಾಹಕರ ಬೇಡಿಕೆಗಳಿಗೆ ತಕ್ಕಂತೆ ಹೋಟೆಲ್ಗಳೂ ತಲೆ ಎತ್ತಿದ್ದು, ಕಾಫಿ, ತಿಂಡಿ, ಊಟ ಸೇರಿದಂತೆ ಹಲವು ರೀತಿಯ ಆಹಾರ ಪದಾರ್ಥಗಳನ್ನು ಪೂರೈಸುತ್ತಿವೆ. ಆದರೆ, ಕೆಲ ಗ್ರಾಹಕರು ಹೋಟೆಲ್ಗಳಲ್ಲಿ ಸುಖಾಸುಮ್ಮನೆ ಕಾಲಹರಣ ಮಾಡುತ್ತಿರುವುದು ಸಮಸ್ಯೆಯಾಗಿದೆ. ಇಂತಹ ಪ್ರಸಂಗಗಳಿಗೆ ಕಡಿವಾಣ ಹಾಕಲು ಹೋಟೆಲ್ ಮಾಲೀಕರ ನಿರ್ಧಾರ ಮಾಡಿದೆ. ಒಂದಷ್ಟು ಬೋರ್ಡ್ಗಳನ್ನು ಅಳವಡಿಕೆ ಮಾಡುವುದು, ಅನವಶ್ಯಕ ಮಾತುಕತೆಗಳು ಬೇಡ ಎಂದು ಅರಿವು ಮೂಡಿಸಲು ಸಂಘವು ಮುಂದಾಗಲಿದೆ. ಒಟ್ಟಾರೆ ಇದಕ್ಕೆ ಗ್ರಾಹಕರು ಯಾವ ರೀತಿ ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ ಎಂಬುವುದನ್ನು ಕಾದುನೋಡಬೇಕಿದೆ.
ನೂರಾರು ಸಿನಿಮಾ ಮಾಡಿರೋ ಕಾಮಿಡಿ ಸ್ಟಾರ್ ಚಿಕ್ಕಣ್ಣ, ಉಪಾಧ್ಯಕ್ಷನಾಗಿ ಬಿಗ್ಸ್ಕ್ರೀನ್ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಹೀರೋ ಆಗಿ ಬಂದ ಚಿಕ್ಕಣ್ಣನನ್ನ ಎಲ್ಲಾ ಹೀರೋಗಳ ಫ್ಯಾನ್ಸ್ ತಲೆಮೇಲೆ ಹೊತ್ತು ಮೆರೆಸುತ್ತಿದ್ದಾರೆ. ಇಷ್ಟಕ್ಕೂ ಬಡ್ತಿ ಪಡೆದಿರೋ ಚಿಕ್ಕು ಹೊಸ ವರಸೆ ಹೇಗಿದೆ..? ಪ್ರೇಕ್ಷಕ ಪ್ರಭುಗಳು ಏನಂದ್ರು..? ಡಿಬಾಸ್ರ ಗಜಪಡೆ ಹೇಳಿದ್ದೇನು..? ಎಂಬುವುದರ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಗೆಜ್ಜೆಪುರದ ಶಿವ ರುದ್ರೇಗೌಡ ಹಾಗೂ ಚಿ.ತು. ಸಂಘದ ಉಪಾಧ್ಯಕ್ಷ ನಾರಾಯಣ ನಡುವೆ ನಡೆಯೋ ಜಿದ್ದಾಜಿದ್ದಿನ ಅಂಶಗಳೇ ಉಪಾಧ್ಯಕ್ಷ ಚಿತ್ರದ ಕಥಾಹಂದರ. ಇಡೀ ಊರನ್ನ ತನ್ನ ಅಧಿಕಾರ ಹಾಗೂ ಹಣದಿಂದ ಕಾಲಡಿ ಮಾಡಿಕೊಳ್ಳೋ ಗೌಡರ ವಿರುದ್ದ ಚಿಂತೆ ಇಲ್ಲದ ತುಂಡ್ ಹೈಕ್ಳ ಸಂಘದ ಉಪಾಧ್ಯಕ್ಷ ಹಾಗೂ ಸದಸ್ಯರು ಸಮರ ಸಾರುತ್ತಾರೆ. ಅಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಪರಸ್ಪರ ಕೆಸರೆರಚಾಟದಲ್ಲಿ ಕೊನೆಗೆ ಲಾಕ್ ಆಗೋದು ಮಾತ್ರ ಉಪಾಧ್ಯಕ್ಷ. ಹೌದು.. ತಂದೆ ಮಾಡಿದ ಸಾಲ ತೀರಿಸೋಕೆ ಅಂತ ಗೌಡರ ಮನೆಯಲ್ಲಿ ಆರು ತಿಂಗಳ ಕೆಲಸ ಬರೋ ಉಪಾಧ್ಯಕ್ಷ, ಗೌಡ್ರ ಮಗಳ ಪ್ರೀತಿಯ…
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಹಾಗು ಪವಿತ್ರಾ ಗೌಡ ನಡುವೆ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಕಿತ್ತಾಟ ಶುರುವಾಗಿದ್ದು, ಪವಿತ್ರಾ ಗೌಡ ಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಾರ್ನಿಂಗ್ ನೀಡಿದ್ದಾರೆ. ಅದಕ್ಕೆ ಪ್ರತಿಯಾನಿ ಪವಿತ್ರಗೌಡ ನನ್ನ ಬಗ್ಗೆ ನಿಮಗೂ ಗೊತ್ತು ಆದ್ರೂ ಹೀಗೆ ಮಾತನಾಡೋದು ಸರಿ ಅಲ್ಲ ನನಗೂ ಗೊತ್ತು ಏನು ಮಾಡಬೇಕು ಎಂದು ವಾಪಸ್ ತಿರುಗೇಟು ಕೂಡ ನಡೆಸಿದ್ದಾರೆ. ಪವಿತ್ರ ಗೌಡ ಹಾಗು ನಟ ದರ್ಶನ್ ನಡುವಿನ ಸ್ನೇಹ ಹತ್ತು ವರ್ಷಗಳು ತುಂಬಿದ ಸಂದರ್ಭದಲ್ಲಿ ದರ್ಶನ್ ಜೊತೆಗೆ ತೆಗೆಸಿಕೊಂಡಿದ್ದ ಫೋಟೋಗಳನ್ನು ಪವಿತ್ರ ಗೌಡ ತಮ್ಮ ಇನ್ಸ್ಟಾಗ್ರಾಂನಲ್ಲಿ ಒಂದು ಮಳೆಬಿಲ್ಲು ಹಾಡೊಂದನ್ನು ಹಾಕಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪತ್ರಿಯಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಜಿ ದರ್ಶನ್ ಎಂಬ ಇನ್ಸ್ಟಾಗ್ರಾಂ ಖಾತೆಯ ಮೂಲಕ ಪವಿತ್ರ ಗೌಡ ಅವರಿಗೆ ಸಂಬಂಧಿಸಿದ ಫೋಟೋಗಳನ್ನು ದರ್ಶನ್ ಪತ್ನಿ ಪೋಸ್ಟ್ ಮಾಡುವ ಮೂಲಕ ಲೀಗಲ್ ಆ್ಯಕ್ಷನ್ ತೆಗೆಕೊಳ್ಳುವ ಎಚ್ಚರಿಕೆಯನ್ನು ಪವಿತ್ರಗೌಡಗೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ಪರ್ಸನಲ್ ವಾರ್…
ಕಿರುತೆರೆ ಜನಪ್ರಿಯ ‘ಜೋಡಿಹಕ್ಕಿ’ (Jodihakki) ನಟಿ ಮಧುಶ್ರೀ ಅಯ್ಯರ್ (Madhushree Iyer) ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಎರಡನೇ ಮಗುವಿನ (Second Baby) ನಿರೀಕ್ಷೆಯಲ್ಲಿದ್ದಾರೆ. ಸದ್ಯ ಬೇಬಿ ಬಂಪ್ ಫೋಟೋ ನಟಿ ಶೇರ್ ಮಾಡಿದ್ದಾರೆ. ಮಧುಶ್ರೀ ಅಯ್ಯರ್ ಈಗ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಆದರೆ, ಈ ವಿಚಾರವನ್ನು ಎಲ್ಲೂ ಬಹಿರಂಗಪಡಿಸಿಲ್ಲ. ಇತ್ತೀಚೆಗಷ್ಟೇ ಕುಟುಂಬದ ಜೊತೆಗೆ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿರುವ ಸಂದರ್ಭದಲ್ಲಿ ತೆಗೆದ ಫೋಟೋವೊಂದು ವೈರಲ್ ಆಗಿದೆ. ಈ ಫೋಟೋದಲ್ಲಿ ಮಧುಶ್ರೀ ಅಯ್ಯರ್ ಗರ್ಭಿಣಿಯಾಗಿದ್ದು, ಪತಿ ಯಶ್ ಹಾಗೂ ಮೊದಲ ಮಗು ಸ್ವರ ಜೊತೆಗೆ ಫೋಟೊ ತೆಗೆಸಿಕೊಂಡಿದ್ದಾರೆ. 2018ರಲ್ಲಿ ವಿವಾಹವಾದ ನಟಿ ಮಧು 2020ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದೆ ಮಧುಶ್ರೀ ಕುಟುಂಬ. ಜೋಡಿಹಕ್ಕಿ, ರಾಧಾ ರಮಣ, ಅವಳು ಸೀರಿಯಲ್ಗಳಲ್ಲಿ ಮಧುಶ್ರೀ ನಟಿಸಿದ್ದಾರೆ. ಪೋಷಕ ಪಾತ್ರಗಳ ಮೂಲಕ ನಟಿ ಗುರುತಿಸಿಕೊಂಡಿದ್ದಾರೆ. ಮದುವೆಯ ಬಳಿಕ ಬಣ್ಣದ ಲೋಕದಿಂದ ನಟಿ ಬ್ರೇಕ್ ಪಡೆದರು.