ಪೀಣ್ಯ ದಾಸರಹಳ್ಳಿ:’ ಕ್ಷೇತ್ರದಲ್ಲೆಡೆ ಸಾಕಷ್ಟು ಮೂಲಭೂತ ಸಮಸ್ಯೆಗಳಿವೆ. ಆದರೆ ಅನುದಾನದ ಕೊರತೆಯಿಂದಾಗಿ ಬಗೆಹರಿಸಲು ಸಾಧ್ಯವಾಗುತ್ತಿಲ್ಲ’ ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಬೇಕು ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು. ಬಾಗಲಗುಂಟೆ ವಾರ್ಡ್ ನೆನೆಗುದಿಗೆ ಬಿದ್ದಿದ್ದ ಚಿಮ್ನಿ ಹಿಲ್ಸ್ ರಸ್ತೆಗೆ ಡಾಂಬರೀಕರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ಷೇತ್ರದ ಎಲ್ಲಾ ಕಡೆ ನೀರು, ರಸ್ತೆ, ಚರಂಡಿ ಇನ್ನು ಅನೇಕ ಮೂಲಭೂತ ಸಮಸ್ಯೆಗಳಿವೆ. ಜನರು ಎಲ್ಲಿ ಹೋದರು ರಸ್ತೆ ಸರಿಪಡಿಸಲು ಮನವಿ ಮಾಡುತ್ತಿದ್ದಾರೆ ಆದರೆ ಅನುದಾನದ ಕೊರತೆಯಿಂದಾಗಿ ಸಾಧ್ಯವಾಗುತ್ತಿಲ್ಲ!’ ಎಂದರು. ನನ್ನ ಕ್ಷೇತ್ರದ ಮತದಾರರು ನನಗೆ ಆಶೀರ್ವಾದ ಮಾಡಿದ್ದಾರೆ. ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ನಾನು ಚಿರ ಋಣಿ, ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ ಸರ್ಕಾರದ ಮೇಲೆ ಒತ್ತಡ ತಂದು ಅನುದಾನ ತರುವ ಮೂಲಕ ಕೆಲಸ ಮಾಡಲು ಪ್ರಯತ್ನಿಸುತ್ತೇನೆ’ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರಘು ಸೂರ್ಯ, ಚಿಕ್ಕಲಕ್ಕಣ್ಣ, ಜೈ ಶ್ರೀ ರಾಮ್ ವಿಜಯಲಕ್ಷ್ಮಿ, ತುಂಗಭದ್ರಾ, ಪದ್ಮ ಮುಂತಾದವರಿದ್ದರು.
Author: AIN Author
ಬೆಂಗಳೂರು:- ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿ ಬಿಟ್ ಕಾಯಿನ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಸಂತೋಷ್ನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದು, ಸಾಕ್ಷ್ಯ ನಾಶ ಮಾಡಿದ ಹಿನ್ನೆಲೆ ಈ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಐವರನ್ನು ವಶಕ್ಕೆ ಪಡೆದಿದ್ದರು. ಬಂಧಿತರಲ್ಲಿ ಪ್ರಶಾಂತ್ ಬಾಬು ಸೈಬರ್ ಇನ್ಸ್ಪೆಕ್ಟರ್ ಆಗಿದ್ದು, ಸಂತೋಷ್ ಸೈಬರ್ ಸೆಂಟರ್ ವ್ಯಕ್ತಿ ಆಗಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಶ್ರೀಕಿಯನ್ನು 90 ದಿನ ಪೊಲೀಸ್ ಕಸ್ಟಡಿಯಲ್ಲಿ ಇರಿಸಿಕೊಂಡಿದ್ದರು. ಸಿಸಿಬಿ ಬಂಧನದಲ್ಲಿದ್ದಾಗ ಬಿಟ್ ಕಾಯಿನ್ ಅಕ್ರಮ ಆಗಿರೋದು ಸಾಬೀತಾಗಿದೆ. ಅಕ್ರಮ ಸಾಬೀತಾದ ಹಿನ್ನೆಲೆ ಬಂಧಿಸಲಾಗಿದೆ. ಇಂದು ಮೂವರು ಡಿವೈಎಸ್ಪಿಗಳನ್ನು ಎಸ್ಐಟಿ ವಿಚಾರಣೆಗೆ ಕರೆದಿದೆ. ಸಿಸಿಬಿಯಲ್ಲಿ ಅಧಿಕಾರಿಗಳು ಶ್ರೀಕಿಯನ್ನು ತನಿಖೆ ನಡೆಸಿದ್ದು, ಇಂದು ವಿಚಾರಣೆಗೆ ಹಾಜರಾಗಲಿದ್ದಾನೆ. ಪ್ರಕರಣದ ಕುರಿತು ಅರೆಸ್ಟ್ ಪರ್ವ ಇಂದೂ ಸಹ ಮುಂದುವರಿಯಲಿದ್ದು, ಅಕ್ರಮ ಸಾಬೀತಾದ ಹಿನ್ನೆಲೆ ತನಿಖೆಯನ್ನು ಚುರುಕುಗೊಳಿಸಲಾಗಿದೆ
ಬೆಂಗಳೂರು:- ಜನವರಿ 22ರಂದು ದೇಶದೆಲ್ಲೆಡೆ ರಾಮೋತ್ಸವ ನಡೆದಿದ್ದು, ಅರುಣ್ ಯೋಗಿರಾಜ್ ಕೆತ್ತನೆ ಮಾಡಿರುವ ನಗುಮುಗದ ಬಾಲ ರಾಮನ ಮೂರ್ತಿ ಎಲ್ಲರ ಗಮನ ಸೆಳೆದಿದೆ. ಇನ್ನು ಶಿಲ್ಪಿ ಅರುಣ್ ಯೋಗಿರಾಜ್, ರಾಮಮಂದಿರಕ್ಕೆ ವಿಗ್ರಹ ನೀಡಿ ಇದೀಗ ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ರಾಮ ಭಕ್ತು ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿ ಆರತಿ ಬೆಳಗಿ, ಹೂಗುಚ್ಛ ನೀಡಿ ಭವ್ಯ ಸ್ವಾಗತಕೋರಿದ್ದಾರೆ. ಅಯೋಧ್ಯೆಯಿಂದ ನೇರವಾಗಿ ಅರುಣ್ ಯೋಗಿರಾಜ್ ಅವರು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಅವರನ್ನು ತಾಯಿ ಮತ್ತು ಪತ್ನಿ ಅಪ್ಪಿಕೊಂಡು ಸ್ವಾಗತಿಸಿದರು. ಅಲ್ಲದೇ ಮಗನನ್ನ ಕಂಡು ತಾಯಿ ಮುದ್ದಾಡಿ ಭಾವುಕಾರಾಗಿ ಆನಂದ ಬಾಷ್ಪ ಸುರಿಸಿದ ಪ್ರಸಂಗ ಜರುಗಿತು. ಬಳಿಕ ಅರುಣ್ ಯೋಗಿರಾಜ್ ತನ್ನಿಬ್ಬರು ಮಕ್ಕಳನ್ನು ಎತ್ತಿಕೊಂಡು ಮುದ್ದಾಡಿದರು. ಕೆಐಎಬಿ ಟರ್ಮಿನಲ್-2ರ ಮುಂದೆ ಸಾಲಾಗಿ ನಿಂತು ಅರುಣ್ಗೆ ಭವ್ಯ ಸ್ವಾಗತಕೋರಿದರು. ಯೋಗಿರಾಜ್ ಬಂದಿಳಿಯುತ್ತಿದ್ದಂತೆಯೇ ರಾಮಭಕ್ತರು, ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಲು ನುಗ್ಗಿದರು. ಇದರಿಂದ ವಿಮಾನ ನಿಲ್ದಾಣದ ಟರ್ಮಿನಲ್ ಬಳಿ ನೂಕುನುಗ್ಗಲು ಉಂಟಾಯಿತು. ಇದೇ ವೇಳೆ…
ಬೆಂಗಳೂರು:- 75ನೇ ಗಣರಾಜ್ಯೋತ್ಸವ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಾಳೆ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ. ಗೌರವಾನ್ವಿತ ರಾಜ್ಯಪಾಲರಿಗೆ ಮುಖ್ಯ ಕಾರ್ಯದರ್ಶಿಯಾದ ಶ್ರೀ ರಜನೀಶ್ ಗೋಯಲ್ ಅವರು ಆಮಂತ್ರಣ ಮಾಡಿದ್ದಾರೆ. ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರಿಂದ ಆಮಂತ್ರಣ ನೀಡಲಾಗಿದೆ. ನಗರ ಜಿಲ್ಲೆಯ ಜಿಲ್ಲಾಧಿಕಾರಿಯಾದ ದಯಾನಂದ್ ಕೂಡ ಸಾಥ್ ಕೊಟ್ಟಿದ್ದಾರೆ.
ಚಂಡೀಗಢ: ಹನುಮ ವೇಷಧಾರಿಯೊಬ್ಬರು ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಹರಿಯಾಣದ ಭಿವಾನಿಯಲ್ಲಿ ನಡೆದಿದೆ. ಮೃತರನ್ನು ಹರೀಶ್ ಮೆಹ್ತಾ ಎಂದು ಗುರುತಿಸಲಾಗಿದ್ದು, ಇವರು ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಲೀಲಾ ಸ್ಕಿಟ್ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹರೀಶ್ ಮೆಹ್ತಾ ಅವರು ಹನುಮಂತನ ಪಾತ್ರವನ್ನು ನಿರ್ವಹಿಸುತ್ತಿದ್ದರು. ಸ್ಕಿಟ್ ಮಾಡ್ತಿದ್ದಂತೆಯೇ ಹರೀಶ್ ಮೆಹ್ತಾ ಏಕಾಏಕಿ ಕುಸಿದು ಬಿದ್ದರು. ಆದರೆ ಪ್ರೇಕ್ಷಕರು ಮಾತ್ರ ಇದು ಸ್ಕಿಟ್ ಭಾಗವೆಂದು ಭಾವಿಸಿ ಕೂಡಲೇ ಯಾರೂ ರಕ್ಷಣೆಗೆ ಬರಲಿಲ್ಲ. ಆದರೆ ಕೆಲಹೊತ್ತಾದರೂ ಮೆಹ್ತಾ ಅವರು ಎದ್ದೇಳಲೇ ಇಲ್ಲ. ಇದರಿಂದ ಆತಂಕಗೊಂಡ ಜನ ತಕ್ಷಣವೇ ಕಾರ್ಯಪ್ರವೃತ್ತರಾದರು. https://twitter.com/TheSamacharlive/status/1749484617000714458?ref_src=twsrc%5Etfw%7Ctwcamp%5Etweetembed%7Ctwterm%5E1749484617000714458%7Ctwgr%5E30fee0905f98d6448e5e9f0be1bdbb287426677d%7Ctwcon%5Es1_&ref_url=https%3A%2F%2Fkannadadunia.com%2Flive-news%2Fhanumans-protagonist-died-of-a-heart-attack-during-the-performance-of-the-play-shocking-video-viral-video%2F ಕೂಡಲೇ ಸ್ಥಳೀಯರು ಮೆಹ್ತಾ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಅಲ್ಲದೇ ಅವರಿಗೆ ಹೃದಯಾಘಾತವಾಗಿರುವುದಾಗಿ ವೈದರು ಹೇಳಿದ್ದಾರೆ. ಹರೀಶ್ ಮೆಹ್ತಾ ಅವರು, ಕಳೆದ 25 ವರ್ಷಗಳಿಂದ ಹಲವಾರು ರಾಮಲೀಲಾ ಸ್ಕಿಟ್ಗಳಲ್ಲಿ ಹನುಮಂತನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
ಮಾಂಗ್ಟೆ ಚುಂಗ್ನೈಜಾಂಗ್ ಮೇರಿ ಕೋಮ್ ಬಾಕ್ಸಿಂಗ್ಗೆ ನಿವೃತ್ತಿ ಘೋಷಿಸಿದ್ದಾರೆ. 40 ವರ್ಷ ವಯಸ್ಸಿನವರೆಗೆ ಮಾತ್ರ ಪುರುಷ ಮತ್ತು ಮಹಿಳಾ ಬಾಕ್ಸರ್ಗಳಿಗೆ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ. ಆದರೆ ಇದೀಗ ಮೇರಿಯವರಿಗೆ 41 ವರ್ಷ ವಯಸ್ಸಾಗಿದ್ದರಿಂದ ಬುಧವಾರ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಬಾಕ್ಸಿಂಗ್ ನಲ್ಲಿ ಹೋರಾಡುವ ಹಸಿವು ನನಗೆ ಇನ್ನೂ ಇದೆ. ದುರದೃಷ್ಟವಶಾತ್ ವಯಸ್ಸಿನ ಮಿತಿ ಮುಗಿದಿರುವುದರಿಂದ ನಾನು ಯಾವುದೇ ಸ್ಪರ್ಧೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ಹೀಗಾಗಿ ಇಂದು ನಾನು ಬಲವಂತವಾಗಿ ತೊರೆಯುತ್ತಿದ್ದೇನೆ ನಾನು ನಿವೃತ್ತಿ ಹೊಂದುತ್ತಿದ್ದೇನೆ. ನನ್ನ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ತುಂಬಾ ದುಃಖದಿಂದ ಇಂದು ನನ್ನ ಬಾಕ್ಸಿಂಗ್ ಗ್ಲೌಸ್ ಅನ್ನು ಬಿಚ್ಚಿಡುತ್ತಿದ್ದೇನೆ ಎಂದು ಹೇಳಿದರು ಬಾಕ್ಸಿಂಗ್ ಇತಿಹಾಸದಲ್ಲಿ ಆರು ವಿಶ್ವ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಜೊತೆಗೆ ಐದು ಬಾರಿ ಏಷ್ಯನ್ ಚಾಂಪಿಯನ್ ಆಗಿರುವ ಅವರು 2014 ರ ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕವನ್ನು ಪಡೆದ ಭಾರತದ ಮೊದಲ ಮಹಿಳಾ ಬಾಕ್ಸರ್ ಎನಿಸಿಕೊಂಡಿದ್ದಾರೆ.
ಹೊಸಪೇಟೆ: ತುಂಗಭದ್ರಾ ವಿಜಯನಗರ ಕಾಲುವೆಗೆ ಶಾಸಕ ಎಚ್.ಆರ್.ಗವಿಯಪ್ಪ ಬುಧವಾರ ನೀರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸತತ ಪ್ರಯತ್ನದ ಫಲವಾಗಿ ಕಾಡಾ ಅಧ್ಯಕ್ಷರು ಸಹಕಾರದೊಂದಿಗೆ ವಿಜಯನಗರ ಕಾಲುವೆಗೆ ಪ್ರತಿ ದಿನ ನೀರು ಬಿಡಲಾಗುವುದು ಎಂದರು. ಇಂದಿನಿಂದ ಮೇ 30 ರವರೆಗೆ ನೀರನ್ನು ಕಾಲುವೆಗೆ ಬಿಡುಗಡೆ ಮಾಡಲಾಗುತ್ತದೆ. ಇದರಿಂದ 12 ಸಾವಿರ ಎಕರೆ ಕಬ್ಬು ರೈತರು ಹಾಗೂ 4 ರಿಂದ 5 ಎಕರೆ ಬಾಳೆ ರೈತರು ತಮ್ಮ ಹೊಲಗಳಿಗೆ ನೀರು ಹರಿಸಲು ಅನುಕೂಲವಾಗಲಿದೆ ಎಂದರು.
ಬಾದಾಮಿ ದೇಹದಲ್ಲಿ ತುಂಬಾ ಪ್ರಯೋಜನಕಾರಿಯಾಗಿ ಕೆಲಸ ಮಾಡುತ್ತದೆ. ಆದರೆ ಬಾದಾಮಿಯನ್ನು ನೆನೆಸಿ ತಿಂದರೆ ಪ್ರಯೋಜನಗಳು ವರ್ಧಿಸುತ್ತವೆ. ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಏನೆಲ್ಲಾ ಪ್ರಯೋಜವಾಗುತ್ತದೆ ಎನ್ನುವುದನ್ನು ತಿಳಿಯೋಣ ಬನ್ನಿ ತೀಕ್ಷ್ಣ ಮನಸ್ಸಿಗೆ ಆರೋಗ್ಯಕರ ಹೃದಯ:- ಬಾದಾಮಿಯಲ್ಲಿ ಆಂಟಿ ಆಕ್ಸಿಡೆಂಟ್ಗಳ ಜೊತೆಗೆ ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು ಕಂಡುಬರುತ್ತವೆ, ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ. ಜೀರ್ಣಕ್ರಿಯೆ ನೆನೆಸಿದ ಬಾದಾಮಿ ಫೈಬರ್ ಮತ್ತು ವಿಟಮಿನ್ E ಯ ಉತ್ತಮ ಮೂಲವೆಂದು ಪರಿಗಣಿಸಲಾಗಿದೆ. ಮಲಬದ್ಧತೆಯೊಂದಿಗೆ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳ ವಿರುದ್ಧ ಹೋರಾಡಲು, ನೆನೆಸಿದ ಬಾದಾಮಿ ಸೇವಿಸುವುದು ಒಳ್ಳೆಯದು. ಸಕ್ಕರೆ ಮಟ್ಟ ನೆನೆಸಿದ ಬಾದಾಮಿಯಲ್ಲಿ ಮೆಗ್ನೀಸಿಯಮ್ ಇದ್ದು, ಇದರ ಸೇವನೆಯು ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಮಧುಮೇಹ ರೋಗಿಗಳು ದಿನಕ್ಕೆ 6 ರಿಂದ 8 ಬಾದಾಮಿಗಳನ್ನು ತಿನ್ನುವುದರಿಂದ ಮಧುಮೇಹವನ್ನು ಕಡಿಮೆ ಮಾಡಬಹುದು. ಕೂದಲು ಮತ್ತು ಚರ್ಮಕ್ಕಾಗಿ ನೆನೆಸಿದ ಬಾದಾಮಿಯಲ್ಲಿ ವಿಟಮಿನ್ E ಇರುವುದರಿಂದ ಚರ್ಮವನ್ನು ಹೊಳೆಯುವಂತೆ…
ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜನವರಿ 25ರಂದು ಆರಂಭವಾಗಲಿದೆ. ಈ ಬಗ್ಗೆ ಮಾತನಾಡಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್, ಹೈದರಾಬಾದ್ ಟೆಸ್ಟ್ನಲ್ಲಿ ಬೆನ್ ಸ್ಟೋಕ್ಸ್ ಸಾರಥ್ಯದ ಇಂಗ್ಲೆಂಡ್ ತಂಡ ತನ್ನ ಆಕ್ರಮಣಕಾರಿ ರಣನೀತಿ ‘ಬ್ಯಾಝ್ಬಾಲ್ ಕ್ರಿಕೆಟ್’ ಮೂಲಕ ಆತಿಥೇಯ ಟೀಮ್ ಇಂಡಿಯಾಗೆ ಆಘಾತ ನೀಡಲಿದೆ ಎಂದು ಭವಿಷ್ಯ ನುಡಿದಿದ್ದಾರೆ. “ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಟೆಸ್ಟ್ ಸರಣಿಯನ್ನು ಬಹಳ ಕಾತುರದಿಂದ ಎದುರು ನೋಡುತ್ತಿದ್ದೇನೆ. ಈ ಸರಣಿಯಲ್ಲಿ ಟ್ರೋಫಿ ಗೆಲ್ಲುವ ಫೇವರಿಟ್ ಟೀಮ್ ಇಂಡಿಯಾ ಎಂಬುದು ಸಹಜ. ಆದರೆ, ಇಂಗ್ಲೆಂಡ್ ತಂಡ ಒಂದೆರಡು ಪಂದ್ಯಗಳನ್ನು ಗೆದ್ದು ಶಾಕ್ ಕೊಡುವ ಸಾಧ್ಯತೆ ಹೆಚ್ಚಿದೆ. ಅದು ಹೈದರಾಬಾದ್ನಲ್ಲೇ ಆಗಬಹುದು. ಆಕ್ರಮಣಕಾರಿ ರಣನೀತಿ ಮೈಗೂಡಿಸಿಕೊಂಡಿರುವ ಈ ಇಂಗ್ಲೆಂಡ್ ತಂಡದ ಎದುರು ಆಡುವುದು ಅಷ್ಟು ಸುಲಭದ ಮಾತಲ್ಲ,” ಎಂದು ಮೈಕಲ್ ತಮ್ಮ ಟ್ವಿಟರ್ ಗೋಡೆಯ ಮೇಲೆ ಬರೆದುಕೊಂಡಿದ್ದಾರೆ. ಕ್ಯಾಪ್ಟನ್ ಬೆನ್ ಸ್ಟೋಕ್ಸ್ ಮತ್ತು ಕೋಚ್ ಬ್ರೆಂಡನ್ ಮೆಕಲಮ್ ಮಾರ್ಗದರ್ಶನದ ಅಡಿಯಲ್ಲಿ ಇಂಗ್ಲೆಂಡ್…
ಕಲಬುರಗಿ :- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಿರ್ಮಿಸಿರುವ ಸಿಟಿ ಬಸ್ ನಿಲ್ದಾಣವನ್ನ ಸಚಿವ ರಾಮಲಿಂಗಾರೆಡ್ಡಿ ಇವತ್ತು ಉದ್ಘಾಟನೆ ಮಾಡಲಿದ್ದಾರೆ. ಥೇಟ್ ಕೋಟೆ ತರ ಕಾಣುವ ಈ ಬಸ್ ನಿಲ್ದಾಣವನ್ನ 20 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.. ಎರಡು ಅಂತಸ್ತಿನ ಈ ಬಸ್ ನಿಲ್ದಾಣದ ವಿಸ್ತೀರ್ಣ4,455 ಚ.ಮೀ ಇದೆ. ಏಕಕಾಲದಲ್ಲಿ 12 ಬಸ್ ನಿಲುಗಡೆ ಮಾಡಬಹುದಾಗಿದ್ದು ಒಟ್ಟಾರೆ 9 ಅಂಕಣಗಳಿವೆ. ಇದಲ್ಲದೆ ವಾಣಿಜ್ಯ ಸಂಕೀರ್ಣ ಶುದ್ಧ ಕುಡಿಯುವ ನೀರಿನ ಘಟಕ ಉದ್ಯಾನವನ ಸಹ ಒಳಗೊಂಡಿದೆ.ಈ ಬಸ್ ನಿಲ್ದಾಣದಿಂದ ಪ್ರತಿನಿತ್ಯ 450 ಬಸ್ ಟ್ರಿಪ್ ಮಾಡಬಹುದಾಗಿದೆ ಅಂತ ಸಾರಿಗೆ ಇಲಾಖೆ ತಿಳಿಸಿದೆ..