Author: AIN Author

ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು ಇಂದಿನಿಂದ ಎರಡು ದಿನ ಮೈಸೂರು, ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 10 ಗಂಟೆಗೆ HAL ನಿಂದ ಮೈಸೂರಿಗೆ ತೆರಳಲಿದ್ದಾರೆ. ಜಲಸಂಪನ್ಮೂಲ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತ ಮತ್ತು 150 ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನೆ ಸಭೆ ಮಾಡಲಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತಿನಮುಳುಸೋಗೆ ಗ್ರಾಮದ ಹತ್ತಿರ ಕಾವೇರಿ ನದಿನಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆಗಳು ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಮತ್ತು ಸಾರ್ವಜನಿಕ ಸಭೆ ಮುಗಿಸಿ ಇಂದು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ ಜ. 25 ರಂದು ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದು, ಕೊಡಗಿನಲ್ಲಿ ಕಾನೂನು ಸಲಹೆಗಾರ/ಶಾಸಕ ಎ.ಎಸ್ ಪೊನ್ನಣ್ಣ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.

Read More

 ಸ್ವಪ್ನ ಶಾಸ್ತ್ರದಲ್ಲಿ ಕನಸುಗಳ ಬಗೆಗಳು ಮತ್ತು ಅವುಗಳಿಗೆ ಶಾಸ್ತ್ರವು ತಿಳಿಸುವ ಅರ್ಥವನ್ನು ಉಲ್ಲೇಖಿಸಲಾ ಗಿರುತ್ತದೆ. ಕೆಲವು ಕನಸು ಬಿದ್ದರೆ ಧನಲಾಭವಾಗುತ್ತದೆ ಎಂದು ಹೇಳಲಾಗುತ್ತದೆ. ಹಾಗಾಗಿ ಯಾವ ರೀತಿಯ ಕನಸು ಬಿದ್ದರೆ ಹಣ ಸಿಗುತ್ತದೆ ಅಥವಾ ಲಕ್ಷ್ಮೀದೇವಿಯ ಕೃಪೆ ಲಭಿಸುತ್ತದೆ ಎಂಬುದನ್ನು ತಿಳಿದುಕೊಳ್ಳೋಣ… ಸ್ವಪ್ನ ಶಾಸ್ತ್ರದ ಪ್ರಕಾರ ಈ ಕನಸುಗಳು ಧನ ಲಾಭವಾಗುವ ಸಂಕೇತಗಳು  ಮನೆಯಲ್ಲಿ ಕಸವಿದ್ದಂತೆ ಕನಸು ಬಂದರೆ ಮನೆಯಲ್ಲಿ ಕಸ ಬಿದ್ದಿರುವ ದೃಶ್ಯವನ್ನು ಕನಸಿನಲ್ಲಿ ನೋಡಿದರೆ ಅದು ಧನಲಾಭವಾಗುವ ಸಂಕೇತವೆಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ ಯಾರಾದರೂ ಹೊರಗಿನಿಂದ ಮನೆಗೆ ಕಸವನ್ನು ತರುತ್ತಿರುವಂತೆ ಕಂಡರೆ ಅದು ಸಹ ಹಣ ಸಿಗುವ ಸಂಕೇತವನ್ನು ಸೂಚಿಸುತ್ತದೆ. ಈ ರೀತಿಯ ಕನಸುಗಳು ಬಿದ್ದರೆ ಅವು ಧನ ಲಾಭವಾಗುವ ಸೂಚನೆ ಎಂದು ಹೇಳಲಾಗುತ್ತದೆ. ಹಾಲು- ಮೊಸರು ಕಂಡರೆ ಕನಸಿನಲ್ಲಿ ಹಾಲು ಅಥವಾ ಮೊಸರನ್ನು ಇಟ್ಟಂತೆ ಕಂಡರೆ ಅದು ಧನಲಾಭವನ್ನು ಸೂಚಿಸುತ್ತದೆ. ಇಲ್ಲವೇ ಹಾಲು ಅಥವಾ ಮೊಸರನ್ನು ತಿನ್ನುತ್ತಿರುವಂತೆ ಕನಸು ಬಿದ್ದರೆ ಅದರ ಅರ್ಥವು ಸಹ ಧನ-ಧಾನ್ಯಗಳಿಂದ ಮನೆಯು…

Read More

ಗೂಗಲ್ ಮ್ಯಾಪ್‌ನಲ್ಲಿ ಯಾವುದೇ ಸ್ಥಳ ತಲುಪಲು ಮ್ಯಾಪ್ ಹಾಕಿದ ಬಳಿಕ ಗೂಗಲ್ ಮ್ಯಾಪ್ ಫಾಸ್ಟೆಸ್ಟ್ ಮಾರ್ಗ ತೋರಿಸುತ್ತದೆ. ಹೊಸ ಫೀಚರ್‌ನಿಂದಾಗಿ ನಿಮಗೆ ಎರಡು ಮಾರ್ಗಗಳನ್ನು ತೋರಿಸಲಿದೆ. ಒಂದು ಫಾಸ್ಟೆಸ್ಟ್ ರೂಟ್ ಮತ್ತೊಂದು ಇಕೋ ಫ್ರೆಂಡ್ಲಿ ರೂಟ್. ಇಕೋ ಫ್ಲೆಂಡ್ಲಿ ರೂಟ್, ಮಾರ್ಗ ಮಧ್ಯದಲ್ಲಿ ಸಿಗವು ಟ್ರಾಫಿಕ್ ಜಾಮ್, ಗುಂಡಿ ಬಿದ್ದ ರಸ್ತೆಗಳ ಬದಲು ಬೇರೆ ರಸ್ತೆಗಳ ಮೂಲಕ ಹೆಚ್ಚು ಇಂಧನ ಖರ್ಚಾಗದಂತೆ ನಿಗದಿತ ಸ್ಥಳ ತಲುಪಿಸುವ ಮಾರ್ಗವನ್ನು ತೋರಿಸಲಿದೆ. ನಿಮ್ಮ ವಾಹನ ಪೆಟ್ರೋಲ್, ಡೀಸೆಲ್, ಹೈಬ್ರಿಡ್, ಎಲೆಕ್ಟ್ರಿಕ್ ಮಾದರಿಯನ್ನು ಆಧರಿಸಿ ಇಕೋ ಫ್ರೆಂಡ್ಲಿ ಮಾರ್ಗದ ಇಂಧನ ದಕ್ಷತೆ ಅಂದಾಜನ್ನು ಗೂಗಲ್ ಮ್ಯಾಪ್ ತೋರಿಸುತ್ತದೆ. ಗೂಗಲ್ ಮ್ಯಾಪ್‌ನಲ್ಲಿ ನೀವು ಇಕೋ ಫ್ಲೆಂಡ್ಲಿ ಆಯ್ಕೆ ಟರ್ನ್ ಆನ್ ಮಾಡಬೇಕು. ಹೀಗಾದಲ್ಲಿ ಮಾತ್ರ ಎರಡು ಮಾರ್ಗಗಳನ್ನು ತೋರಿಸುತ್ತದೆ. ಇಕೋ ಫ್ಲೆಂಡ್ಲಿ ಟರ್ನ್ ಆನ್ ಮಾಡಿದರೆ, ಈ ಮಾರ್ಗದಲ್ಲಿ ಸಾಗುವಾಗ ನಿಮ್ಮ ವಾಹನ ಇಂಧನ ಆಧರಿಸಿ ಇಂಧನ ದಕ್ಷತೆ ಅಂದಾಜು ಲೆಕ್ಕವನ್ನು ಗೂಗಲ್ ಮ್ಯಾಪ್ ತೋರಿಸಲಿದೆ. ಗೂಗಲ್…

Read More

ಸೂರ್ಯೋದಯ: 06:53, ಸೂರ್ಯಾಸ್ತ : 06:02 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪುಷ್ಯ ಮಾಸ , ಶುಕ್ಲ ಪಕ್ಷ, ಉತ್ತರಾಯಣಂ, ಹೇಮಂತ ಋತು, ರಾಹು ಕಾಲ: 12:00 ನಿಂದ 01:30 ತನಕ ಯಮಗಂಡ: 07:30 ನಿಂದ 09:00 ತನಕ ಗುಳಿಕ ಕಾಲ: 10:30 ನಿಂದ 12:00 ತನಕ ಮೇಷ ರಾಶಿ: ಇವರಿಗೆ ಹಣಕಾಸಿನ ಸಾಕಷ್ಟು ಮುಗ್ಗಟ್ಟು ಎದುರಿಸುವಿರಿ, ಕೆಲಸದಲ್ಲಿ ಅಧಿಕಾರಿಗಳಿಂದ ತೊಂದರೆ, ದೇವ ದರ್ಶನಕ್ಕಾಗಿ ಪ್ರವಾಸ, ಶತ್ರು ಕಾಟದಿಂದ ತೊಂದರೆ,ನಂಬಿದ ಸಹೋದ್ಯೋಗಿಯಿಂದ ನೌಕರದಾರರಿಗೆ ಮುಂಬಡ್ತಿಯಿಂದ ವಿಳಂಬ,”ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು” ಎಂಬ ನಾಣ್ನುಡಿಯಂತೆ ಯುವಕರು ಕೃಷಿಕ್ಷೇತ್ರ ಅಳವಡಿಸಿಕೊಂಡರೆ ಉತ್ತಮ. ಹೈನುಗಾರಿಕೆ ಉದ್ಯಮ ಪ್ರಗತಿ.ಆಸ್ತಿ ಮಾರಾಟ ವಿಳಂಬ. ಸಾಲ ತೀರಿಸಲು ಕೂಡಿಟ್ಟಿರುವ ಹಣ ಹಠಾತ್ ಖರ್ಚಾಗುವ ಸಂಭವ. ಸಾಲದ ಋಣಭಾರದಿಂದ ಚಿಂತೆಯಾಗಬಹುದು. ಆಸ್ತಿ ಕಳೆದುಕೊಳ್ಳುವ ಭೀತಿ. ವ್ಯಾಪಾರ ವಹಿವಾಟಿನಲ್ಲಿ ಚೇತರಿಕೆ ಆತಂಕಬೇಡ. ಹಿತೈಷಿಗಳಿಂದ ಹಣಕಾಸಿನಲ್ಲಿ ನಷ್ಟವಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಾನದ ಸಿಹಿ ಸುದ್ದಿ ಕೇಳಿ ಸಂತೋಷ. ಮಂಗಳ…

Read More

ಹುಬ್ಬಳ್ಳಿ:- ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಂದೆ-ತಾಯಿಗೆ ತೊಂದರೆ ಮಾಡಿದ್ದಾರೆ ಎಂದು ಹೇಳಿ ಮಿನಿ ವಿಧಾನಸೌಧದಲ್ಲಿ ಇಬ್ಬರು ವ್ಯಕ್ತಿಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಜರುಗಿದೆ. ಹನಮಂತಪ್ಪ ಹಾಗೂ ಮಹೇಶ್ ಗೌಡ ನಡುವೆ ಹೊಡೆದಾಟ ಮಾಡಲಾಗಿದೆ. ನಮ್ಮ ತಂದೆ ತಾಯಿಗೆ ತೊಂದರೆ ಮಾಡಿದ್ದಾರೆ ಅದಕ್ಕೆ ಹೊಡೆದಿದ್ದೇನೆ ಎಂದು ಮಹೇಶ್ ಗೌಡ ಹೇಳಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಹನಮಂತಪ್ಪ ಉಪನಗರ ಪೊಲೀಸ್ ಠಾಣೆಗೆ ಓಡಿಹೋಗಿದ್ದಾರೆ. ಬಳಿಕ ಉಪನಗರ ಪೊಲೀಸರು ಜಗಳವನ್ನು ಬಿಡಿಸಿದ್ದಾರೆ.

Read More

ಬೆಂಗಳೂರು:- ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಅವರು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ, ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು. ನೀವು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದರೂ ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿಲ್ಲ. ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ, ಶಿವಕುಮಾರ ಹೆಸರಲ್ಲಿ ಶಿವ ಹಾಗೂ ಷಣ್ಮುಗ ಇದ್ದಾರೆ. ಹರಿಪ್ರಸಾದ್ ಅವರ ಹೆಸರಲ್ಲಿ ಹರಿ ಇದ್ದಾನೆ. ಕೃಷ್ಣ ಭೈರೇಗೌಡರ ಹೆಸರಲ್ಲಿ ಕೃಷ್ಣ ಇದ್ದಾನೆ. ಹಿಂದೂ ಧರ್ಮ ನಿಮ್ಮ ಮನೆ ಆಸ್ತಿಯೇ? ಧರ್ಮ ಯಾವುದಾದರೂ ತತ್ವವೊಂದೆ. ನಾಮ ನೂರಾದರೂ ದೈವವೊಂದೆ. ಪೂಜೆ ನೂರಾದರೂ ಭಕ್ತಿವೊಂದೆ. ಕರ್ಮ ಹಲವಾದರೂ ನಿಷ್ಠೆವೊಂದೆ. ದೇವನೊಬ್ಬ ನಾಮ ಹಲವು. ನಾವು ಕಲ್ಲು, ನೀರು, ಮರ, ಗಾಳಿಯಲ್ಲಿ ದೇವರನ್ನು ಕಾಣುತ್ತೇವೆ. ನಮ್ಮ ಸರ್ಕಾರದಲ್ಲಿ ಧಾರ್ಮಿಕ…

Read More

ದೆಹಲಿ:-ಹಿಂದುಳಿದ ವರ್ಗಗಳ ಹೋರಾಟಕ್ಕಾಗಿ ಹೆಸರುವಾಸಿಯಾಗಿರುವ ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್​​ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಲಭಿಸಿದೆ. ಕರ್ಪೂರಿ ಎರಡು ಬಾರಿ ಬಿಹಾರದ ಉಪಮುಖ್ಯಮಂತ್ರಿ, ಎರಡು ಬಾರಿ ಮುಖ್ಯಮಂತ್ರಿ ಮತ್ತು ದಶಕಗಳ ಕಾಲ ವಿರೋಧ ಪಕ್ಷದ ಶಾಸಕ ಮತ್ತು ನಾಯಕರಾಗಿದ್ದರು. 1952 ರಲ್ಲಿ ಮೊದಲ ವಿಧಾನಸಭೆಯಲ್ಲಿ ಚುನಾವಣೆಯಲ್ಲಿ ಗೆದ್ದ ನಂತರ ಅವರು ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸೋತಿಲ್ಲ. ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ರಾಷ್ಟ್ರಪತಿಗಳು ಸಂತಸ ವ್ಯಕ್ತಪಡಿಸಿದ್ದಾರೆ” ಎಂದು ರಾಷ್ಟ್ರಪತಿ ಭವನದ ಪ್ರಕಟಣೆಯು ಠಾಕೂರ್ ಅವರ 100 ನೇ ಜನ್ಮ ವಾರ್ಷಿಕೋತ್ಸವದ ಒಂದು ದಿನ ಮೊದಲು ಹೇಳಿದೆ. ಕರ್ಪೂರಿ ಠಾಕೂರ್ ಡಿಸೆಂಬರ್ 1970 ಮತ್ತು ಜೂನ್ 1971 ರ ನಡುವೆ ಹಾಗೂ ಡಿಸೆಂಬರ್ 1977 -ಏಪ್ರಿಲ್ 1979 ರವರೆಗೆ ಬಿಹಾರದ ಮುಖ್ಯಮಂತ್ರಿಯಾಗಿದ್ದರು. ಠಾಕೂರ್ ಅವರ ಪುತ್ರ ರಾಮ್ ನಾಥ್ ಠಾಕೂರ್ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನಿಂದ ರಾಜ್ಯಸಭಾ ಸಂಸದರಾಗಿದ್ದಾರೆ. ಮುಖ್ಯಮಂತ್ರಿಯಾಗಿ, ಠಾಕೂರ್ ಅವರು ಮುಂಗೇರಿ ಲಾಲ್…

Read More

ಬೆಂಗಳೂರು:- ಬಿವೈ ವಿಜಯೇಂದ್ರ ನೇತೃತ್ವದ ಮೊದಲ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ಫಿಕ್ಸ್​ ಆಗಿದೆ. ಅರಮನೆ ಮೈದಾನದಲ್ಲಿ ನಡೆಯಲಿದೆ. ಜನವರಿ 19ಕ್ಕೆ ನಿಗದಿಯಾಗಿ ಮುಂದೂಡಲಾಗಿತ್ತು. ಇದೀಗ ಹೊಸ ದಿನಾಂಕ ನಿಗದಿಯಾಗಿದ್ದು, ಈ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಭಾಗಿಯಾಗಲಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಕಾರ್ಯಕಾರಣಿ ಸಭೆಯ ಮಾಹಿತಿ ನೀಡಿದರು. ಜನವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನು ಈ ಸಭೆಗೆ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಆಗಮಿಸಲಿದ್ದಾರೆ ಎಂದು ವಿವರಿಸಿದರು.

Read More

ಇತ್ತೀಚೆಗಿನ ದಿನಗಳಲ್ಲಿ ಕೊಹ್ಲಿ ಪದೇ ಪದೇ ಕೌಟುಂಬಿಕ ಕಾರಣ ನೀಡಿ ದಿಡೀರ್ ಆಟದಿಂದ ಹೊರಗುಳಿಯುತ್ತಿರುವುದು ಪ್ರಶ್ನಾರ್ಥಕವಾಗಿದೆ. ಮೂಲಗಳ ಪ್ರಕಾರ ಅವರ ಪತ್ನಿ ಗರ್ಭಿಣಿಯಾಗಿದ್ದು ಇದೇ ಕಾರಣಕ್ಕೆ ಕುಟುಂಬ ಮತ್ತು ವೃತ್ತಿ ಜೀವನದ ನಡುವೆ ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಕೊಹ್ಲಿ ಪದೇ ಪದೇ ಗೈರಾಗುತ್ತಿರುವುದರ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ, ಮಾಧ‍್ಯಮಗಳಲ್ಲಿ ನಾನಾ ರೀತಿಯ ಸುದ್ದಿಗಳು ಹರಿದಾಡಲು ಕಾರಣವಾಗಿದೆ. ಹೀಗಾಗಿ ಬಿಸಿಸಿಐ ಈಗ ಕೊಹ್ಲಿ ಸಹಾಯಕ್ಕೆ ಧಾವಿಸಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಬಿಸಿಸಿಐ, ದಯವಿಟ್ಟು ಯಾರೂ ಕೊಹ್ಲಿಯ ವೈಯಕ್ತಿಕ ಜೀವನದಲ್ಲಿ ಮೂಗು ತೂರಿಸಲು ಪ್ರಯತ್ನಿಸಬೇಡಿ. ಅವರ ವೈಯಕ್ತಿಕ ಜೀವನವನ್ನು ಗೌರವಿಸಿ. ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ಮಾಧ್ಯಮ ಮತ್ತು ನೆಟ್ಟಿಗರಿಗೆ ಮನವಿ ಮಾಡಿದೆ.

Read More

ಒಬ್ಬ ವ್ಯಕ್ತಿಯ ಆರೋಗ್ಯವು ಚೆನ್ನಾಗಿ ಇರಬೇಕಾದರೆ ದಿನಕ್ಕೆ ಇಂತಿಷ್ಟು ಗಂಟೆಗಳ ನಿದ್ರಿಸಬೇಕು. ರಾತ್ರಿ ವೇಳೆ ಕಣ್ಣು ಮುಚ್ಚಿ ಮಲಗಿದರೂ ನಿದ್ದೆ ಬಾರದೆ ಒದ್ದಾಡುತ್ತಿದ್ದರೆ, ಈ ಮನೆ ಮದ್ದನ್ನು ಟ್ರೈ ಮಾಡಿದರೆ ಆರಾಮಾದಾಯಕವಾಗಿ ನಿದ್ರಿಸಬಹುದು. ರಾತ್ರಿ ಕಣ್ಣು ಮುಚ್ಚಿದರೆ ಯಾರೂ ಆ ತಕ್ಷಣವೇ ನಿದ್ರೆಗೆ ಜಾರುತ್ತರೋ ಅವರಿಗಿಂತ ಸುಖಿಗಳು ಮತ್ತೊಬ್ಬರಿಲ್ಲ. ಆದರೆ ಕಣ್ಣು ಮುಚ್ಚಿದರೆ ಸಾವಿರ ಟೆನ್ಶನ್ ಗಳು, ನಾನಾ ರೀತಿಯ ಯೋಚನೆಗಳು ಬಂದರಂತೂ ನಿದ್ದೆಯೆನ್ನುವುದು ಹತ್ತಿರ ಸುಳಿಯುವುದೇ ಇಲ್ಲ. ಮನುಷ್ಯ ದಿನಕ್ಕೆ ಕನಿಷ್ಠ 8 ರಿಂದ 10 ಗಂಟೆಯಾದರೂ ನಿದ್ರಿಸಿದರೆ ಮಾತ್ರ ಆತನ ಆರೋಗ್ಯವು ಉತ್ತಮವಾಗಿರುತ್ತದೆ. ಆದರೆ ಕೆಲವರಿಗೆ ಎಷ್ಟೇ ಕಣ್ಣು ಮುಚ್ಚಿ ನಿದ್ದೆ ಮಾಡಲು ಯತ್ನಿಸಿದರೂ ನಿದ್ದೆ ಬರುವುದೇ ಇಲ್ಲ. ಕಣ್ಣು ಮುಚ್ಚಿದರೆ ನಿದ್ದೆ ಬರಬೇಕು ಎನ್ನುವವರು ಮನೆಯಲ್ಲೇ ಈ ಮನೆ ಮದ್ದನ್ನು ಮಾಡಿಕೊಳ್ಳಬಹುದು. ನಿದ್ದೆ ಬಾರದಿದ್ದರೆ ಈ ಮನೆ ಮದ್ದನ್ನು ಒಮ್ಮೆ ಟ್ರೈ ಮಾಡಿ * ಮಕ್ಕಳಿಗೆ ನಿದ್ದೆ ಬಾರದಿದ್ದರೆ ಬಿಸಿನೀರಲ್ಲಿ ಜಾಯಿಕಾಯಿ ಅಥವಾ ಬಜೆಯನ್ನು ತೇದು ಕೊಟ್ಟರೆ…

Read More