ಬೆಳಗಾವಿ:- ರಾಮನ ಶಾಪದಿಂದ ದೇಶದಲ್ಲಿ ಕಾಂಗ್ರೆಸ್ ಧೂಳೀಪಟವಾಗಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ನವರಿಗೆ ಅಧಿಕಾರ ಹಾಗೂ ಮುಸ್ಲಿಮರ ತುಷ್ಟೀಕರಣ ಬೇಕಿದೆ. ಮುಸ್ಲಿಮರಿಂದ ಗೆದ್ದಿದ್ದೇವೆ ಅನ್ನುವ ಸೊಕ್ಕು ರಜೆ ಕೊಡದಿರಲು ಕಾರಣ. ಈಗಾಗಲೇ ರಾಮನ ಶಾಪದಿಂದ ದೇಶದಲ್ಲಿ ಕಾಂಗ್ರೆಸ್ ಧೂಳೀಪಟವಾಗಿದೆ ಎಂದು ಕಿಡಿಕಾರಿದ್ದಾರೆ. ಅಯೋಧ್ಯೆಯಲ್ಲಿನ ಸಂಭ್ರಮ ಇಡೀ ದೇಶದಲ್ಲಿ ನಿರ್ಮಾಣವಾಗಿದೆ. ದೇಶ ಒಂದಾಗಿದೆ ಎನ್ನುವ ಸಂದೇಶ ರವಾನೆ ಆಗಿದೆ. ಇತಿಹಾಸದಲ್ಲಿ ಸುವರ್ಣ ಅಕ್ಷರದಲ್ಲಿ ಬರೆದಿಡುವ ಶ್ರೇಷ್ಠ ದಿನ ಇದು. 500 ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿದೆ. ರಾಮನ ಮೂರ್ತಿ ಪುನಃ ಪ್ರತಿಷ್ಠಾಪನೆ ಆಗಿದೆ. ಕಟ್ಟಿದೆವು ಕಟ್ಟಿದೇವು ರಾಮ ಮಂದಿರ ಕಟ್ಟಿದೇವು ಎನ್ನುವ ಘೋಷಣೆ ಪ್ರಾರಂಭವಾಗಿದೆ. ಇಡಿ ದೇಶದಲ್ಲಿ ಆನಂದದ ಸುನಾಮಿ ಹರಿಯುತ್ತಿದೆ ಎಂದಿದ್ದಾರೆ. ಜಾತಿ, ಪಕ್ಷ, ಬೇಧ ಬಿಟ್ಟು ಜೈ ಶ್ರೀ ರಾಮ ಘೋಷಣೆ ಮೊಳಗುತ್ತಿದೆ. ರಾಮ ನಮ್ಮನ್ನ ಎಲ್ಲರನ್ನ ಒಟ್ಟೂಗೂಡಿಸಿ ಬೇಧ ದೂರ ಮಾಡಿದ್ದಾನೆ ಎಂದು ಹೇಳಿದ್ದಾರೆ.
Author: AIN Author
ಟೆಸ್ಟ್ ಕ್ರಿಕೆಟ್ನ ಪರಿಣತ ಬ್ಯಾಟರ್ ಆಗಿರುವ ಚೇತೇಶ್ವರ್ ಪೂಜಾರ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. ಕಳಪೆ ಲಯ ಕಾರಣ ಅವರನ್ನು ಟೀಮ್ ಇಂಡಿಯಾದ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. ಆದರೂ ತಂಡಕ್ಕೆ ಕಮ್ಬ್ಯಾಕ್ ಮಾಡುವ ಪಣ ತೊಟ್ಟಿರುವ 36 ವರ್ಷದ ಅನುಭವಿ ಬಲಗೈ ಬ್ಯಾಟರ್ ದೇಶಿ ಕ್ರಿಕೆಟ್ ಆಡಲು ಮುಂದಾಗಿದ್ದು, 2022-24ರ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ ಸೌರಾಷ್ಟ್ರ ತಂಡದ ಪರ ಬ್ಯಾಟ್ ಬೀಸುತ್ತಿದ್ದಾರೆ. ಅದರಲ್ಲೂ ವಿದರ್ಭ ಎದುರು ಭಾನುವಾರ ಮುಕ್ತಾಯಗೊಂಡ ಪಂದ್ಯದಲ್ಲಿ ಪೂಜಾರ ವಿಶೇಷ ದಾಖಲೆ ಒಂದನ್ನು ಬರೆದಿದ್ದಾರೆ. ವಿದರ್ಭ ಎದುರು ಮೊದಲ ಇನಿಂಗ್ಸ್ನಲ್ಲಿ 43 ಮತ್ತು ಎರಡನೇ ಇನಿಂಗ್ಸ್ನಲ್ಲಿ 66 ರನ್ ಬಾರಿಸಿದ ಪೂಜಾರ ಇದೇ ವೇಳೆ ಪ್ರಥಮದರ್ಜೆ ಕ್ರಿಕೆಟ್ 20 ಸಾವಿರ ರನ್ಗಳ ಗಡಿ ದಾಟಿದ್ದಾರೆ. ಈ ಮೂಲಕ ದಿಗ್ಗಜರಿರುವ ದಾಖಲೆ ಪಟ್ಟಿ ಸೇರುವ ಮೂಲಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೂ ಮೊದಲು ಈ ಮೂಲುಗಲ್ಲು ಮುಟ್ಟಿದ ಸಾಧನೆ ಮೆರೆದಿದ್ದಾರೆ. ನಾಗ್ಪುರದಲ್ಲಿರುವ ವಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ…
ಬೆಂಗಳೂರು:- ರಾಜಧಾನಿ ಬೆಂಗಳೂರಿನ ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಟ್ಯೂಷನ್ಗೆ ತೆರಳಿದ್ದ 12 ವರ್ಷದ ಬಾಲಕ ನಿಗೂಢವಾಗಿ ನಾಪತ್ತೆ ಆಗಿರುವಂತಹ ಘಟನೆ ಜರುಗಿದೆ. ಪರಿನವ್ ನಾಪತ್ತೆ ಆದ ಬಾಲಕ ಎನ್ನಲಾಗಿದೆ. ಗುಂಜೂರಿನ ಡೆನ್ ಅಕಾಡೆಮಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಪರಿನವ್, ಭಾನುವಾರ ಮಧ್ಯಾಹ್ನ 12.15ರ ಸುಮಾರಿಗೆ ನಾಪತ್ತೆ ಆಗಿದ್ದಾನೆ. ವೈಟ್ಫೀಲ್ಡ್ನ ಅಲೆನ್ ಟೂಷನ್ ಸೆಂಟರ್ಗೆ ತಂದೆ ಡ್ರಾಪ್ ಮಾಡಿದ್ದಾರೆ. ಮಧ್ಯಾಹ್ನ ಕರೆತರಲು ಹೋಗುವುದು ತಡವಾಗಿದ್ದರಿಂದ ನಾಪತ್ತೆ ಆಗಿದ್ದಾನೆ. ಟ್ಯೂಷನ್ ಸೆಂಟರ್ನಿಂದ ಮಾರತ್ತಹಳ್ಳಿವರೆಗೆ ಬಾಲಕ ನಡೆದುಬಂದಿದ್ದು, ನಂತರ ಬಿಎಂಟಿಸಿ ಬಸ್ ಹತ್ತಿರುವ ಸಿಸಿಕ್ಯಾಮರಾ ದೃಶ್ಯ ಲಭ್ಯವಾಗಿದೆ. ಆನಂತರ ಬಾಲಕ ಪರಿನವ್ ಎಲ್ಲಿ ಹೋದನೆಂದು ಈವರೆಗೂ ಪತ್ತೆಯಾಗಿಲ್ಲ. ಬಾಲಕ ನಾಪತ್ತೆ ಬಗ್ಗೆ ವೈಟ್ಫೀಲ್ಡ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದ್ದು, ನಾಪತ್ತೆಯಾದ ಪರಿನವ್ಗಾಗಿ ವೈಟ್ಫೀಲ್ಡ್ ಠಾಣೆ ಪೊಲೀಸರು ಶೋಧ ಆರಂಭಿಸಿದ್ದಾರೆ.
ಈಗ ಮೊಬೈಲ್ ಫೋನ್ಗಳಲ್ಲಿ ಬಯೋಮೆಟ್ರಿಕ್ ದೃಢೀಕರಣ ಕೂಡಾ ಸ್ವಲ್ಪ ಸಮಯದಿಂದಲೇ ಇದೆ. ಹಳೆಯ ಶೈಲಿಯ ಅಥವಾ ಪಿನ್ ಹಾಗೂ ಪಾಸ್ವರ್ಡ್ ಅನ್ಲಾಕ್ಗಳ ಜಾಗಕ್ಕೆ ಈಗ ಫಿಂಗರ್ಪ್ರಿಂಟ್ ಮತ್ತು ಫೇಸ್ ಅನ್ಲಾಕಿಂಗ್ ವೈಶಿಷ್ಟ್ಯಗಳು ಬಂದಿವೆ. ಹಾಗೆ ಇನ್ ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸರ್ ಹೊಂದಿರುವ ಕೆಲ 5ಜಿ ಸ್ಮಾರ್ಟ್ಫೋನ್ಗಳ ಬಗ್ಗೆ ಇಲ್ಲಿ ನೋಡೋಣ. ಒಪ್ಪೊ ಎಫ್21 ಎಸ್ ಪ್ರೊ 5ಜಿ ನವೀಕರಣಗೊಂಡ ಒಪ್ಪೊ ಎಫ್21 ಎಸ್ ಪ್ರೊ 5ಜಿ ಬೆಲೆ 19,700 ರೂಪಾಯಿ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸರ್ನೊಂದಿಗೆ ಬರುತ್ತದೆ. ಇದು 8ಜಿಬಿ RAM, 128 ಜಿಬಿ ಸ್ಟೋರೇಜ್ ಅನ್ನು ಹೊಂದಿದೆ. ಟೆಕ್ನೋ ಕ್ಯಾಮನ್ 20 ಪ್ರೊ 5ಜಿ ಟೆಕ್ನೋ ಕ್ಯಾಮನ್ 20 ಪ್ರೊ 5ಜಿ ಈ ಸ್ಮಾರ್ಟ್ಫೋನ್ನ ಬೆಲೆ 19,999 ರೂಪಾಯಿ. ಇದು ಮೀಡಿಯಾಟೆಕ್ ಡಿಮೆನ್ಸಿಟಿ 8050 ಪ್ರೊಸೆಸರ್ನಿಂದ ಚಾಲಿತವಾಗಿದ್ದು, ಈ ಫೋನ್ ಕೂಡಾ ಇನ್ ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸರ್ನೊಂದಿಗೆ ಬರುತ್ತದೆ. ಲಾವಾ ಅಗ್ನಿ 2 5ಜಿ ಈ ಸ್ಮಾರ್ಟ್…
ಬೆಂಗಳೂರು:- ಇಂದು ಬೆಂಗಳೂರಿನ ಒಟ್ಟು 117 ಕೇಂದ್ರಗಳಲ್ಲಿ ಪಿಎಸ್ಐ ನೇಮಕಾತಿ ಮರು ಪರೀಕ್ಷೆಯು ನಡೆಯಲಿದೆ ಈ ಹಿನ್ನೆಲ್ಲಿ ಈ ಬಾರಿ ಯಾವುದೇ ಅಕ್ರಮಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ 117 ಕೇಂದ್ರಗಳಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡಲು ಆದೇಶದಲ್ಲಿ ಸೂಚಿಸಿದ್ದಾರೆ. ಈ ಹಿಂದೆ ನಡೆದ ಘಟನೆಗಳು ಮರುಕಳಿಸಬಾರದೆಂದು ಈ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈಗಾಗಲೇ ಸೂಚಿಸಿರುವಂತೆ ಅಭ್ಯರ್ಥಿಗಳು ವಸ್ತ್ರಸಂಹಿತೆಯನ್ನು ಪಾಲಿಸಬೇಕೆಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 117 ಕೇಂದ್ರಗಳಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡಲು ಆದೇಶದಲ್ಲಿ ಸೂಚಿಸಿದ್ದಾರೆ. ಈ ಹಿಂದೆ ನಡೆದ ಘಟನೆಗಳು…
ಬೆಂಗಳೂರು:- ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಾಗೂ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ನಿನ್ನೆ ಕರ್ನಾಟಕದೆಲ್ಲೆಡೆ ಸಂಭ್ರಮ ಮನೆ ಮಾಡಿತ್ತು ಕರ್ನಾಟಕದಲ್ಲಿ ಪ್ರತಿ ಹಿಂದೂವಿನ ಮನೆಮನೆಗಳಲ್ಲೂ ದೀಪಗಳನ್ನು ಬೆಳಗಿಸಲಾಗುತ್ತಿದೆ. ಸಾರ್ವಜನಿಕ ಸ್ಥಳ, ರಸ್ತೆ ಬದಿ, ದೇವಸ್ಥಾನ, ಮಠ, ಮಂದಿರಗಳಲ್ಲೂ ದೀಪಗಳನ್ನು ಬೆಳಗಿಸಲಾಗಿದೆ. ರಾಯಚೂರಿನ ಮಂತ್ರಾಲಯದ ರಾಯರ ಮಠದಲ್ಲಿ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ದೀಪೋತ್ಸವ ಆಚರಿಸಲಾಯಿತು. ಮಠದ ಪ್ರಾಂಗಣದಲ್ಲಿ ಶ್ರೀಗಳು ದೀಪ ಬೆಳಗಿಸಿದರು. ಮಂತ್ರಾಲಯದ ದೀಪೋತ್ಸವದಲ್ಲಿ ನೂರಾರು ಭಕ್ತರು ಭಾಗಿಯಾಗಿ ಸಂಭ್ರಮಿಸಿದರು. ಅಲ್ಲದೆ, ರಾಯಚೂರಿನ ಶ್ರೀರಾಮನಗರದ ಕೋದಂಡರಾಮ ದೇವಾಲಯದಲ್ಲೂ ದೀಪೋತ್ಸವ ಆಚರಿಸಲಾಯಿತು. ಐದು ಸಾವಿರಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸಿ ರಾಮೋತ್ಸವ ಆಚರಣೆ ಮಾಡಲಾಯಿತು. ಇದೇ ವೇಳೆ ದೇವಸ್ಥಾನದ ಆಡಳಿತ ಮಂಡಳಿಯಿಂದ ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಯಿತು. ಕೋದಂಡರಾಮ ದೇಗುಲದಲ್ಲಿ ನೂರಾರು ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ರಾಮನ ಬಂಟ ಹನುಮನ ಜನ್ಮಸ್ಥಳದಲ್ಲೂ ದಿಪೋತ್ಸವ ಆಚರಿಸಲಾಯಿತು. ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಅರುಣಾ ಲಕ್ಷ್ಮಿ ನೇತೃತ್ವದಲ್ಲಿ ಕೊಪ್ಪಳ ಜಿಲ್ಲೆಯಲ್ಲಿರುವ ಅಂಜನಾದ್ರಿ…
ಬೆಂಗಳೂರು:- ಕರ್ನಾಟಕದಲ್ಲಿ ಗೆದ್ದ ಮಾತ್ರಕ್ಕೆ ಇಡೀ ದೇಶವನ್ನೇ ಗೆಲ್ಲುತ್ತೇವೆಂಬ ಭ್ರಮೆ ಬೇಡ ಎಂದು ಹೇಳುವ ಮೂಲಕ ಸಿಎಂಗೆ ಸಚಿವ ಜೋಶಿ ಟಾಂಗ್ ಕೊಟ್ಟಿದ್ದಾರೆ. ಈ ಸಂಬಂಧ x ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯನವರೇ, ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲೆಂದು ರಾಹುಲ್ ಗಾಂಧಿಯಂತಹ ಅಪ್ರಬುದ್ಧ ನಾಯಕನಿಗೆ ಉಧೋ..ಉಧೋ ಎನ್ನುವ ನಿಮಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಿಜವಾದ ರಾಮ ಭಕ್ತರಾಗಿದ್ದರೆ ಅಯೋಧ್ಯೆ ರಾಮ ಮಂದಿರದಲ್ಲಿ ನಿಂತು ಪ್ರಮಾಣ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ಗೆ ಪ್ರಲ್ಹಾದ್ ಜೋಶಿ 34000 ಚದರ ಕಿಲೋಮೀಟರ್ ಭಾರತದ ಅಕ್ಸಾಯ್ ಚಿನ್ ಅನ್ನು ಚೈನಾ ತೆಕ್ಕೆಗೆ ಹಾಕಿದ್ದು ಜವಹಾರ್ ಲಾಲ್ ನೆಹರೂ ಅವರು ಪ್ರಧಾನಿಯಾಗಿದ್ದಾಗ ಮರೆತಿಲ್ಲ ತಾನೆ? ಟಿಬೆಟ್ ಪ್ರಾಂತ್ಯ ಚೈನಾದ ಕೈವಶವಾಗುವಂತೆ ಮಾಡಿದ್ದು, ಇಂದು ಚೈನಾವನ್ನು ನಮ್ಮ ನೆರೆ ರಾಷ್ಟ್ರವನ್ನಾಗಿ ಮಾಡಿದ್ದು ನಿಮ್ಮ ಕಾಂಗ್ರೆಸ್ನ ಘನ…
ಶಿವಮೊಗ್ಗ :- ಜೈ ಶ್ರೀರಾಮ್ ಬಿಜೆಪಿ ಆಸ್ತಿ ಅಲ್ಲ, ಪ್ರಪಂಚದ ಹಿಂದೂಗಳ ಆಸ್ತಿ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಜೈ ಶ್ರೀರಾಮ್ ಎಂದ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾತನಾಡಿದ ಅವರು, ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೀರೋ ಆಗಿದ್ದಾರೆ. ಕರ್ನಾಟಕದ ಜನರ ಮುಂದೆ ಸಿದ್ದರಾಮಯ್ಯ ವಿಲನ್ ಆಗಿದ್ದಾರೆ ಎಂದರು. ಮೋದಿ ನಾಯಕರಾಗಿದ್ದಾರೆ, ಸಿದ್ದರಾಮಯ್ಯ ಖಳನಾಯಕರಾಗಿದ್ದಾರೆ. ಎಲ್ಲಾ ಮುಗಿದ ಮೇಲೆ ಈಗ ಜೈ ಶ್ರೀರಾಮ್ ಅಂತಾ ಕೂಗಿದ್ದಾರೆ. ಕೊನೆಗೂ ಅವರಿಗೆ ರಾಮ ಬುದ್ಧಿ ಕೊಟ್ನಲ್ಲ ಅಂತಾ ಸಂತಸವಾಗಿದೆ. ಜೈ ಶ್ರೀರಾಮ್ ಬಿಜೆಪಿ ಆಸ್ತಿ ಅಲ್ಲ, ಪ್ರಪಂಚದ ಹಿಂದೂಗಳ ಆಸ್ತಿ. ಬರೀ ಮುಸಲ್ಮಾನರನ್ನೇ ಇಟ್ಟುಕೊಂಡರೆ ಬದುಕುವುದಕ್ಕೆ ಆಗಲ್ಲ. ಹಿಂದೂಗಳು ಕೂಡ ಬೇಕು ಅಂತಾ ಕೊನೆಗೂ ಸಿದ್ದರಾಮಯ್ಯಗೆ ಬುದ್ಧಿ ಬಂದಿದೆ. ದೇವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಒಳ್ಳೆಯದು ಮಾಡಲಿ ಎಂದರು. ಶಿವಮೊಗ್ಗ ನಗರ ಬಿಜೆಪಿ ಶಾಸಕ ಚನ್ನಬಸಪ್ಪ ಮಾತನಾಡಿ, ಪರಿವರ್ತನೆ ಜಗದ ನಿಯ. ಶ್ರೀರಾಮಚಂದ್ರ ಎಲ್ಲರ ಮನಸ್ಸನ್ನ ಗೆಲ್ಲತ್ತಾನೆ. 500 ವರ್ಷಗಳ ಕಾಲ ಸಹನೆಯಿಂದ ಇದ್ದ.…
ಜಿಯೋ ತನ್ನ ಗಣರಾಜ್ಯೋತ್ಸವದ ಕೊಡುಗೆಯ ಭಾಗವಾಗಿ ವಾರ್ಷಿಕ ಪ್ರಿಪೇಯ್ಡ್ ಯೋಜನೆಯಲ್ಲಿ ಹೆಚ್ಚುವರಿ ಪ್ರಯೋಜನಗಳ ಪಟ್ಟಿಯನ್ನು ಪ್ರಕಟಿಸಿದೆ. ರೀಚಾರ್ಜ್ ಮಾಡಿದ ಮೇಲೆ ರೂ. 2,999, ಗ್ರಾಹಕರು ಜನಪ್ರಿಯ ಇ-ಕಾಮರ್ಸ್ ಸೈಟ್ಗಳು, ಆನ್ಲೈನ್ ಫ್ಯಾಷನ್ ಚಿಲ್ಲರೆ ವ್ಯಾಪಾರಿಗಳು ಮತ್ತು ಆಹಾರ ವಿತರಣಾ ಅಪ್ಲಿಕೇಶನ್ಗಳಿಗೆ ರಿಯಾಯಿತಿ ಕೂಪನ್ಗಳನ್ನು ಪಡೆಯಬಹುದು. ಗಮನಾರ್ಹವಾಗಿ, ಇದು ಟೆಲಿಕಾಂ ಆಪರೇಟರ್ ಪರಿಚಯಿಸಿದ ಹೊಸ ಯೋಜನೆ ಅಲ್ಲ. ವಿಸ್ತರಿಸಿದ ಕೊಡುಗೆಗಳು ಸೀಮಿತ ಅವಧಿಗೆ ಅನ್ವಯಿಸುತ್ತವೆ. ಅಸ್ತಿತ್ವದಲ್ಲಿರುವ ಪ್ರಿಪೇಯ್ಡ್ ಪ್ಲಾನ್ನ ಎಲ್ಲಾ ಸಾಮಾನ್ಯ ಪ್ರಯೋಜನಗಳಾದ ಕರೆ ಅಥವಾ ಡೇಟಾ ಶುಲ್ಕಗಳು ಅಡೆತಡೆಯಿಲ್ಲದೆ ಮುಂದುವರಿಯುತ್ತವೆ. ನೆಟ್ವರ್ಕ್ ಸೇವಾ ಪೂರೈಕೆದಾರರು ರೂ. ಜೊತೆಗೆ ವಿಸ್ತರಿಸಲಾಗುತ್ತಿರುವ ಹೆಚ್ಚುವರಿ ಪ್ರಯೋಜನಗಳನ್ನು ವಿವರಿಸಿದ್ದಾರೆ. ಅದರ ವೆಬ್ಸೈಟ್ನಲ್ಲಿ 2,999 ರೀಚಾರ್ಜ್ ಯೋಜನೆ. ಗ್ರಾಹಕರು Ajio, Tira ಮತ್ತು Ixigo ನಂತಹ ಸೈಟ್ಗಳಲ್ಲಿ ಹಲವಾರು ಕೂಪನ್ಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಕನಿಷ್ಠ ಖರೀದಿಯ ಮೇಲೆ ರೂ. Ajio ನಲ್ಲಿ 2,499, ಗ್ರಾಹಕರು ರೂ. ಯೋಜನೆಯೊಂದಿಗೆ ಒದಗಿಸಲಾದ ಕೂಪನ್ ಸಹಾಯದಿಂದ 500 ರಿಯಾಯಿತಿ. ಅದೇ ರೀತಿ, ತೀರಾ…
ಬೆಂಗಳೂರು: ಇದೇ ಜನವರಿ 23ರಂದು ಪಿಎಸ್ಐ ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹಾಲ್ಟಿಕೆಟ್, ಗುರುತಿನ ಚೀಟಿ ಹೊರತುಪಡಿಸಿ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರಗಳನ್ನು ತರುವಂತಿಲ್ಲ ಎಂದು ಸೂಚನೆಯಲ್ಲಿ ತಿಳಿಸಿದೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು (Guidelines) ಹೊರಡಿಸಲಾಗಿದೆ ಪುರುಷ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಏನು? * ಪೂರ್ಣ ತೋಳಿನ ಅಂಗಿಗಳನ್ನ ಧರಿಸುವಂತಿಲ್ಲ * ಕಾಲರ್ ರಹಿತ ಶರ್ಟ್ ಹಾಗೂ ಜೇಬುಗಳು ಕಮ್ಮಿ ಇರುವ ಪ್ಯಾಂಟ್ ಧರಿಸಿರಬೇಕು * ಕುರ್ತಾ ಪೈಜಾಮು, ಜೀನ್ಸ್ ಪ್ಯಾಂಟ್ಗಳಿಗೆ ಅನುಮತಿ ಇಲ್ಲ * ಶರ್ಟ್ ಅಥವಾ ಪ್ಯಾಂಟ್ಗಳಿಗೆ ಜಿಪ್ ಪ್ಯಾಕೆಟ್ಗಳು, ದೊಡ್ಡ ದೊಡ್ಡ ಗುಂಡಿಗಳು, ಹೆಚ್ಚುವರಿ ಡಿಸೈನ್ ಇರಬಾರದು * ಪರೀಕ್ಷಾ ಹಾಲ್ಗೆ ಶೂಗಳು ಕಟ್ಟು ನಿಟ್ಟಾಗಿ ನಿಷೇಧ * ಸ್ಯಾಂಡಲ್ ಅಥವಾ ತೆಳುವಾದ ಚಪ್ಪಲಿ ಬಳಕೆಗೆ ಸೂಚನೆ * ಚೈನ್, ಕಿವಿಯೋಲೆ, ಉಂಗುರ, ಕೈ…