Author: AIN Author

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಅದರಂತೆ ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 3336 ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ 89 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಬ್ಬ ಸೋಂಕಿತ ಮೃತಪಟ್ಟಿದ್ದು, 74 ಸೋಂಕಿತರು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 16 ಮಂದಿಗೆ ಕೋವಿಡ್ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬ ಸೋಂಕಿತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.66 ರಷ್ಟಿದೆ. ಒಟ್ಟು 497 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Read More

ತುಮಕೂರು, ಜನವರಿ 21: ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಿದ್ದಗಂಗಾ ಮಠ ಕ್ಯಾತ್ಸಂದ್ರ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು. ಒಟ್ಟು ನಮ್ಮ ಸರ್ಕಾರದಿಂದ ಕ್ವಿಂಟಾಲಿಗೆ 1500 ರೂ.ಗಳನ್ನು ಒದಗಿಸಲಾಗುವುದು. 3000 ರೂ.ಗಳಿಗೆ ಬೇಡಿಕೆ ಇದ್ದರೂ ಸರ್ಕಾರದ ತನ್ನ ಶಕ್ತ್ಯಾನುಸಾರ ಬೆಂಬಲ ಬೆಲೆ ನೀಡುತ್ತಿದ್ದು, ಎಂ.ಎಸ್.ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದರು. ಕೇಂದ್ರ ಸರ್ಕಾರ ನಿಗದಿ ಮಾಡಿರುವುದಕ್ಕಿಂತ ರಾಜ್ಯ ಸರ್ಕಾರ ಕೊಬ್ಬರಿ ಬೆಳೆಗಾರರಿಗೆ 1500 ಹೆಚ್ಚಾಗಿ ನೀಡಲಿದೆ ಎಂದರು. ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ರಜೆ ಇಲ್ಲ;- ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ನಾಳೆ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಚಾರ ಮಾಡಲಾಗುವುದು:- ಹಿಂದಿನ ಸರ್ಕಾರ ಜನವರಿ 21 ನ್ನು ದಾಸೋಹ ದಿನ ಎಂದು ಆಚರಿಸಲು ಘೋಷಣೆ ಮಾಡಿದ್ದರ…

Read More

ಬೆಂಗಳೂರು:- ರಸ್ತೆ ಅಪಘಾತದಲ್ಲಿ ರಾಜ್ಯ ಮಟ್ಟದ ಫುಟ್ ಬಾಲ್‌ ಆಟಗಾರ ಸಾವನ್ನಪ್ಪಿದ ಘಟನೆ ಕೆ ಆರ್ ಪುರಂ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. 27 ವರ್ಷದ ಮೊನೀಶ್ ಕೆ ಸಾವನ್ನಪ್ಪಿದ ಆಟಗಾರ. ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ ಮೊನೀಶ್ ಬೈಕ್ ನಲ್ಲಿ ಹೋಗ್ತಿದ್ದ. ಈ ವೇಳೆ ಆತನ ಬೈಕ್ ಗೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೊನೀಶ್ ತೀವ್ರ ಗಾಯಗೊಂಡಿದ್ದ. ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮೊನೀಶ್ ಸಾವನ್ನಪ್ಪಿದ್ದಾನೆ. ಪರಿಕ್ರಮ ಎಫ್ ಸಿ, ಡೆಕ್ಕನ್ ಎಫ್ ಸಿ, ಯಂಗ್ ಚಾಲೆಂಜರ್ಸ್ ಸೇರಿ ವಿವಿಧ ಕ್ಲಬ್ ಗಳ ಪರ ಮೊನೀಶ್ ಆಡಿದ್ದ. ಸದ್ಯ ಬೆಂಗಳೂರು ಈಗಲ್ಸ್ ಎಫ್ ಸಿ ಪರ ಆಡ್ತಿದ್ದ. ಮಂಗಳವಾರ ಟೂರ್ನಿಯೊಂದರಲ್ಲಿ ಭಾಗಿಯಾಗಬೇಕಿತ್ತು. ಆದ್ರೆ ಮೊನೀಶ್ ನಿಧನದ ಹಿನ್ನೆಲೆ. ಪಂದ್ಯವನ್ನ ಬೆಂಗಳೂರು ಈಗಲ್ಸ್ ಎಫ್ ಸಿ ಮುಂದೂಡಿದೆ.

Read More

ನವದೆಹಲಿ:- ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದ್ದು, ನಾಳೆ 50 ತಂಡಗಳಿಂದ ಮಂಗಳ ವಾದ್ಯ ಮೊಳಗಲಿದೆ. ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆ ಅಯೋಧ್ಯೆಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಬೆಳಿಗ್ಗೆ 10 ರಿಂದ ಮಂಗಳ ವಾದ್ಯ ಮೊಳಗಲಿದೆ. ಉತ್ತರ ಪ್ರದೇಶದ ಆದಿವಾಸಿ ಜನಾಂಗದವರ ಜಾನಪದ ವಾದ್ಯಮೇಳ, ಬುಡಕಟ್ಟು ಜನಾಂಗದವರು ಭಾರಿಸುವ ವಾದ್ಯ ಸೇರಿದಂತೆ ವಿವಿಧ ರಾಜ್ಯಗಳ 50ಕ್ಕೂ ಹೆಚ್ಚು ಮನಮೋಹಕ ಸಂಗೀತ ವಾದ್ಯ ತಂಡಗಳು ಭಾಗಿಯಾಗಲಿದ್ದು, ಸುಮಾರು ಎರಡು ಗಂಟೆಗಳ ಕಾಲ ಮಂಗಳ ವಾದ್ಯ ಮೊಳಗಲಿದೆ. ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯ ಬಳಿಕ ರಾಮ ​​ಜ್ಯೋತಿ ಬೆಳಗುವ ಮೂಲಕ ದೀಪಾವಳಿ ಆಚರಣೆ ಮಾಡಲಾಗುತ್ತದೆ. ಸಂಜೆ 10 ಲಕ್ಷ ದೀಪಗಳಿಂದ ಅಯೋಧ್ಯೆ ಕಂಗೊಳಿಸಲಿದೆ. ಅಯೋಧ್ಯೆಯ ಮನೆಗಳು, ಅಂಗಡಿಗಳು ಮತ್ತು ಪೌರಾಣಿಕ ಸ್ಥಳಗಳಲ್ಲಿ ‘ರಾಮ ಜ್ಯೋತಿ’ ಬೆಳಗಿಸಲಾಗುತ್ತದೆ. ಮಣ್ಣಿನಿಂದ ಮಾಡಿದ ದೀಪಗಳಿಂದ ಅಯೋಧ್ಯೆಯು ಬೆಳಗಲಿದ್ದು, ಸರಯೂ ನದಿಯ ದಡದ ರಾಮ್ ಕಿ ಪಾಡಿಯಲ್ಲಿ ದೀಪ ಬೆಳಗಲಾಗುತ್ತದೆ. ಕನಕ್ ಭವನ, ಹನುಮಾನ್ ಗಡಿ,…

Read More

ಬೆಂಗಳೂರು:- ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು ಕುಟುಂಬ ಸಮೇತರಾಗಿ ಅಯೋಧ್ಯೆಗೆ ತೆರಳಿದ್ದಾರೆ. ದೇವೇಗೌಡರಿಗೆ ವಯಸ್ಸಾಗಿರುವ ಹಿನ್ನೆಲೆಯಲ್ಲಿ ಅವರು ಅಯೋಧ್ಯೆಗೆ ಹೋಗಬೇಕೋ ಬೇಡ್ವಾ ಎನ್ನುವ ಯೋಚನೆಯಲ್ಲಿದ್ದರು. ಆದರೂ ಸಹ ಅಯೋಧ್ಯೆಗೆ ಹೋಗಲು ಪ್ರಯತ್ನಿಸುತ್ತೇನೆ ಎಂದಿದ್ದರು. ಅದರಂತೆ ಇಂದು ತಮ್ಮ ಆರೋಗ್ಯವನ್ನು ಲೆಕ್ಕಿಸಿದೇ ಅಯೋಧ್ಯೆಗೆ ಹೊರಟ್ಟಿದ್ದಾರೆ. ಇನ್ನು ದೇವೇಗೌಡ್ರಿಗೆ ಪತ್ನಿ, ಪುತ್ರ ಹಾಗೂ ಮೊಮ್ಮಗ ಸಾಥ್ ನೀಡಿದ್ದಾರೆ. ಇಂದು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಪ್ರೈವೆಟ್​ ಜೆಟ್​ನಲ್ಲಿ ದೇವೇಗೌಡ ಜೊತೆ ಪತ್ನಿ ಚನ್ನಮ್ಮ, ಪುತ್ರ ಎಚ್.ಡಿ. ಕುಮಾರಸ್ವಾಮಿ ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಜೊತೆ ತೆರಳಿದರು.

Read More

ದಾವಣಗೆರೆ:- ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆ ನೀಡಲು ದಾವಣಗೆರೆಯಲ್ಲಿ ನಾಣ್ಯಗಳಲ್ಲಿ ಅಯೋಧ್ಯೆ ರಾಮ ಮಂದಿರ ಸಿದ್ಧಪಡಿಸಲಾಗಿದೆ. ಹರಿಹರ ನಗರದ ಆಕಾರ-ಆಧಾರ ಸಂಸ್ಥೆಯ ರಾಮು ಎಂ ಹಾಗೂ ಮಕ್ಕಳು ಸೇರಿಕೊಂಡು ಒಂದು, ಎರಡು, ಐದು, 10, 20 ರೂಪಾಯಿ ಮೌಲ್ಯದ ಒಟ್ಟು 12 ಸಾವಿರ ನಾಣ್ಯ ಬಳಸಿ ಶ್ರೀರಾಮ ಮಂದಿರ ನಿರ್ಮಾಣ ಮಾಡಿದ್ದಾರೆ. ಒಟ್ಟು 31,500 ರೂಪಾಯಿ ವೆಚ್ಚದಲ್ಲಿ 30 ದಿನಗಳಲ್ಲಿ ಈ ಮಂದಿರವನ್ನು ಸಿದ್ಧಪಡಿಸಲಾಗಿದೆ. ನಾಳೆ ರಾಮ ಮಂದಿರದ ಉದ್ಘಾಟನೆ ಹಿನ್ನೆಲೆ ನಾಣ್ಯಗಳಿಂದ ಸಿದ್ಧವಾದ ಮಂದಿರವನ್ನು ಹುಬ್ಬಳ್ಳಿಯಲ್ಲಿ ಪ್ರದರ್ಶನ‌ಕ್ಕಿಡಲಾಗುತ್ತಿದೆ.

Read More

ವಿಜಯನಗರ:- ಹರಪನಹಳ್ಳಿ ತಾಲೂಕಿನ ಒಡೆಯರಹಳ್ಳಿ ಗ್ರಾಮದಲ್ಲಿ ಬೀದಿ ದೀಪ ಸರಿ‌ಪಡಿಸಲು ಹೋಗಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತಪಟ್ಟಿರುವ ಘಟನೆ ಜರುಗಿದೆ. 37 ವರ್ಷದ ರೇಣುಕಪ್ಪ ಮೃತದುರ್ದೈವಿ ಎನ್ನಲಾಗಿದೆ. ಗ್ರಾಮ ಪಂಚಯಾತಿ ಸಿಬ್ಬಂದಿ ಸೂಚನೆ ಮೇರೆಗೆ ರೇಣುಕಪ್ಪ ವಿದ್ಯುತ್​ ಕಂಬ ಹತ್ತಿ ದೀಪ ಸರಿಪಡಿಸುತ್ತಿದ್ದರು. ಈ ವೇಳೆ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ರೇಣುಕಪ್ಪ ಗ್ರಾಮದಲ್ಲಿ ವಿದ್ಯುತ್ ಪಂಪ್ ಸೆಟ್ ಹಾಗೂ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ‌ಕೆಲಸ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ರೇಣಕಪ್ಪ ಅವರಿಗೆ ಬೀದಿ ದೀಪ ಸರಿಪಡಿಸುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ

Read More

ತುಮಕೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ತುಮಕೂರಿ​ನ ಸಿದ್ದಗಂಗಾ ಮಠದ ಬಳಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂಪಾಯಿ ನೀಡುವುದಾಗಿ ಹೇಳಿದ್ದಾರೆ. ಕುಣಿಗಲ್‌ನಲ್ಲಿ ಸ್ಟಡ್ ಫಾರಂನ ಟೌನ್‌ಶಿಪ್‌ ಮಾಡುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ ಮಾಡಲು ಸಲಹೆ ನೀಡಿದ್ದೇನೆ ಎಂದರು. ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು 300 ರೂಪಾಯಿ ಹೆಚ್ಚಿಸಿ ಡಿಸೆಂಬರ್ ತಿಂಗಳಾಂತ್ಯದಲ್ಲಿ ಆದೇಶಿಸಿತ್ತು. ಅಲ್ಲದೆ, ಉಂಡೆ ಕೊಬ್ಬರಿಗೆ 250 ರೂ. ಹೆಚ್ಚಿಸಿತ್ತು. ಆ ಮೂಲಕ ಬೆಲೆ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿತ್ತು. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ಕೊಬ್ಬರಿಗೆ ಬೆಂಬಲ ಬೆಲ ಘೋಷಿಸುವಂತೆ ಮನವಿ ಮಾಡಿದ್ದರು.…

Read More

ಹಾಸನಾಂಬ ಫಿಲ್ಮ್ಸ್ ಸಂಸ್ಥೆಯು ನಿರ್ಮಾಣದ ಕಿರುಚಿತ್ರಗಳ ಸಿನಿಮಾಗಳಿಗೆ ಆಸಕ್ತ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲು ಆಡಿಷನ್ ನಡೆಸಲಾಗುತ್ತಿದೆ. ಈ ಅವಕಾಶವನ್ನು ಜಿಲ್ಲೆಯ ಆಸಕ್ತ ಕಲಾವಿದರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಾಸನಾಂಬ ಫಿಲ್ಮ್ಸ್‌ನ ದಿಲೀಪ್ ಗೌಡ ಹೇಳಿದರು. ನಗರದ ವಾಸವಿ ಇಂಗ್ಲೀಷ್ ಶಾಲೆಯಲ್ಲಿ ಹಾಸನಾಂಬ ಫಿಲ್ಮ್ಸ್ ಸಂಸ್ಥೆಯ ಕಿರುಚಿತ್ರಗಳ ನಿರ್ಮಾಣಕ್ಕೆ ಕಲಾವಿದರ ಆಡಿಷನ್ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ನಮ್ಮ ಸಂಸ್ಥೆ ಅನೇಕ ಕಿರುಚಿತ್ರಗಳನ್ನು ನಿರ್ಮಾಣ ಮಾಡಿ ಜನಮನ್ನಣೆ ಗಳಿಸಿದೆ. ಜನರಿಗೆ ಅನೇಕ ಉತ್ತಮ ಸಂದೇಶಗಳನ್ನು ನೀಡುವ ನಿಟ್ಟಿನಲ್ಲಿ ಕಿರುಚಿತ್ರಗಳನ್ನು ಮಾಡಲಾಗುತ್ತಿದೆ. ಆಸಕ್ತ ಕಲಾವಿದರು, ಸಿನಿಮಾಗಳಲ್ಲಿ ನmನೆ ಮಾಡಲು ಆಸಕ್ತಿ ಹೊಂದಿದವರು, ವೇದಿಕೆಗಳಿಂದ ವಂಚಿತರಾದವರು, ನಮ್ಮ ಬ್ಯಾನರ್ ಅಡಿ ನಿರ್ಮಾಣ ಮಾಡಲಾಗುತ್ತಿರುವ ಕಿರು ಸಿನಿಮಾಗಳಲ್ಲಿ ಅವಕಾಶ ಕಲ್ಪಿಸಲಾಗುವುದು. ಈ ಅವಕಾಶವನ್ನು ಜಿಲ್ಲೆಯ ಆಸಕ್ತ ಕಲಾವಿದರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಹಾಸನಾಂಬ ಫಿಲ್ಮ್ಸ್ ಸಂಸ್ಥೆಯ ಸೂರ್ಯ ಅವರು ಮಾತನಾಡಿ, ನಮ್ಮ ಕಿರುಸಿನಿಮಾಗಳಲ್ಲಿ ನಟನೆ ಮಾಡಲು ಚಿಕ್ಕಮಗಳೂರು, ಹಾಸನ, ಬೆಂಗಳೂರು, ತಿಪಟೂರು ಸೇರಿದಂತೆ ವಿವಿಧೆಡೆಯಿಂದ ಅನೇಕ…

Read More

ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಿರುವ ಹಿನ್ನೆಲೆ ಅಯೋಧ್ಯೆಯ ಪ್ರಮುಖ ರಸ್ತೆಗಳು ಹೂವುಗಳು, ಶಿಲ್ಪಕಲೆ, ವಿದ್ಯುತ್‌ ದೀಪಗಳಿಂದ ಅಲಂಕೃತಗೊಂಡಿವೆ. ಅಯೋಧ್ಯೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ಪುನರ್‌ನಿರ್ಮಾಣ ಕಾರ್ಯಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಬಣ್ಣ ಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕೃತಗೊಂಡಿರುವ ಅಯೋಧ್ಯೆಯ ಧಾಮ್ ಜಂಕ್ಷನ್. ಜನವರಿ 22 ರಾಮ ಮಂದಿರ ಉದ್ಘಾಟನೆಗೆ ಕೂಡಾ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಅಯೋಧ್ಯೆಯ ಸರಯೂ ನದಿಯ ದಡದಲ್ಲಿ ದೀಪಗಳ ಬೆಳಕಿನಲ್ಲಿ ಹೊಳೆಯುತ್ತಿರುವ ನೀರು. ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡುವವರು ಹನುಮಂತನ ಚಿತ್ರವಿರುವ ಕೇಸರಿ ಧ್ವಜಗಳನ್ನು ಮಾರಾಟಕ್ಕೆ ಇಟ್ಟಿದ್ದು ರಸ್ತೆ ಪೂರ್ತಿ ಕೇಸರಿಮಯವಾಗಿ ಕಾಣುತ್ತಿತ್ತು. ಪ್ರಧಾನಿ ಮೋದಿ ಆಗಮಿಸುವ ರಸ್ತೆಯಲ್ಲಿ ಕೇಸರಿ ಬಣ್ಣದ ಚೆಂಡು ಹೂಗಳಿಂದ ವಿನ್ಯಾಸ ಮಾಡಿದ ಕಳಶವನ್ನು ಅಲಂಕಾರ ಮಾಡಲಾಗಿತ್ತು. ಈ ರಸ್ತೆಗೆ ರಾಮ್‌ ಪಥ್‌ ಎಂದು ನಾಮಕರಣ ಮಾಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಹೂವಿನ ಅಲಂಕಾರದ ಜವಾಬ್ಧಾರಿಯನ್ನು ಲಲಿತ್ ಕುಮಾರ್ ಸಿಂಗ್ ಎಂಬುವವರು ವಹಿಸಿಕೊಂಡಿದ್ದು,…

Read More