‘ದಿಯಾ’ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯದ ‘ಕೆಟಿಎಂ’ ಸಿನಿಮಾ ಟೀಸರ್ ನಿಂದಲೇ ಭಾರೀ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೆಲೋಡಿ ಹಾಡು ಅನಾವರಣಗೊಂಡಿದೆ. ಸೋಜಿಗ ಎಂಬ ಸಾಂಗ್ ಗೆ ಅರಸು ಅಂತಾರೆ ಸಾಹಿತ್ಯ ಬರೆದಿದ್ದು, ಸಂಚಿತ್ ಹೆಗ್ಡೆ ಧ್ವನಿಯಾಗಿದ್ದು, ಚೇತನ್ ರಾವ್ ಮ್ಯೂಸಿಕ್ ಶ್ರಮ ಹಾಡಿಗಿದೆ. ದೀಕ್ಷಿತ್ ಹಾಗೂ ಕಾಜಲ್ ಕುಂದರ್ ಸೋಜಿಗ ಸಿಂಗಿಂಗ್ ಧಮಾಕದಲ್ಲಿ ಮಿಂಚಿದ್ದಾರೆ. ‘ಅಥರ್ವ’ ಸಿನಿಮಾ ಖ್ಯಾತಿಯ ಅರುಣ್, ಈ ‘ಕೆಟಿಎಂ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಅರುಣ್ ಆಕ್ಷನ್ ಕಟ್ ಹೇಳಿರುವ ಎರಡನೇ ಸಿನಿಮಾ. ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ನಿರತವಾಗಿರುವ ಚಿತ್ರತಂಡ ಸಿನಿಮಾದ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಮೊದಲ ಹಂತವಾಗಿ ಇಂಟ್ರಸ್ಟಿಂಗ್ ಟೀಸರ್ ಬಿಡುಗಡೆ ಮಾಡಿತ್ತು. ಸ್ಯಾಂಡಲ್ವುಡ್ನ 50 ಮಂದಿ ಸೆಲೆಬ್ರಿಟಿಗಳು ‘ಕೆಟಿಎಂ’ ಟೀಸರ್ ರಿಲೀಸ್ ಮಾಡಿ ಶುಭ ಕೋರಿದ್ದರು. ನವಿರಾದ ಪ್ರೇಮ್ ಕಹಾನಿ ಒಳಗೊಂಡಿರುವ ‘ಕೆಟಿಎಂ’ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ದೀಕ್ಷಿತ್, ನಾಲ್ಕು ಶೇಡ್ನಲ್ಲಿ ತೆರೆ…
Author: AIN Author
ನವದೆಹಲಿ: ವ್ಯಕ್ತಿಯೊಬ್ಬ ಹೆಲಿಕಾಪ್ಟರ್ ಮೂಲಕ ಬಂದು ಕಸದ ಬುಟ್ಟಿಗೆ ಕಸ ಎಸೆದು ಮರಳಿದ್ದಾನೆ. ಈ ವಿಡಿಯೋ ಭಾರಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ದೇವರೇ ನನ್ನನ್ನು ಇಷ್ಟು ಶ್ರೀಮಂತನಾಗಿ ಮಾಡಿಬಿಡು, ನಾನು ಹೆಲಿಕಾಪ್ಟರ್ ಮೂಲಕ ಕಸ ಎಸೆಯುವಂತಾಗಲಿ ಎಂದು ಹಲವರು ಬೇಡಿಕೊಂಡಿದ್ದಾರೆ. ಹೆಲಿಕಾಪ್ಟರ್ ಪೈಲೆಟ್ ಬಳಿ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದಾನೆ. ನೆಲದ ಮೇಲೆ ಸಾಮಾನ್ಯ ಕಸದ ಬುಟ್ಟಿಯನ್ನು ಇಡಲಾಗಿತ್ತು. ಈ ಬುಟ್ಟಿಗೆ ಕಸ ಎಸೆಯಲು ಹೆಲಿಕಾಪ್ಟರ್ ಮೂಲಕ ಆಗಮಿಸಿದ ಕಪ್ಪು ಬಣ್ಣದ ಪ್ಲಾಸ್ಟಿಕ್ ಕವರ್ನಲ್ಲಿದ್ದ ಕಸವನ್ನು ಬುಟ್ಟಿಗೆ ಎಸೆದಿದ್ದಾನೆ. ಕಸದ ಬುಟ್ಟಿಗೆ ಕೆಲ ಎತ್ತರದಲ್ಲೇ ಹೆಲಿಕಾಪ್ಟರ್ನಲ್ಲಿ ಆಗಸದಲ್ಲೇ ಹಾರಾಡಿಸಿ ಕಸ ಎಸೆಯಲಾಗಿದೆ. ಬಳಿಕ ಮರಳಿದ್ದಾನೆ. https://twitter.com/raajcar/status/1745838051216281977?ref_src=twsrc%5Etfw ಕೆಲವರು ಈತನ ಪೈಲೆಟ್ ಸ್ಕಿಲ್ ಕುರಿತು ಮಾತನಾಡಿದ್ದಾರೆ. ಉತ್ತಮ ಪೈಲೆಟ್ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಕಸ ಎಸೆಯಲು ಹೆಲಿಕಾಪ್ಟರ್ ಬಳಸಿದ ಈ ಶ್ರೀಮಂತ ಯಾರು ಎಂದು ಹಲವರು ಪ್ರಶ್ನಿಸಿದ್ದಾರೆ. ಈ ವಿಡಿಯೋ ಶೂಟ್ ಆಗಿರುವ ಸ್ಥಳ ಹಾಗೂ ಇತರ…
ನವದೆಹಲಿ: ‘ಶ್ರೀರಾಮ ಮಂದಿರ ಅಯೋಧ್ಯೆ ಪ್ರಸಾದ’ ಹೆಸರಿನಲ್ಲಿ ಸ್ವೀಟ್ಸ್ ಮಾರಾಟ ಮಾಡುತ್ತಿರುವ ಆರೋಪದ ಮೇಲೆ ಆನ್ಲೈನ್ ಶಾಪಿಂಗ್ ಸಂಸ್ಥೆಯೊಂದಕ್ಕೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ. ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಇನ್ನೂ ಆಗಿಲ್ಲ. ಈ ಹೊತ್ತಿನಲ್ಲಿ ರಾಮಮಂದಿರದ ಪ್ರಸಾದ ಎಂದು ಹೇಳಿಕೊಂಡು ಸ್ವೀಟ್ಸ್ ಮಾರಾಟ ಮಾಡುವ ಮೂಲಕ ಗ್ರಾಹಕರ ದಾರಿ ತಪ್ಪಿಸಲಾಗುತ್ತಿದೆ ಎಂದು ಆನ್ಲೈನ್ ಶಾಪಿಂಗ್ ಸಂಸ್ಥೆಯೊಂದರ ವಿರುದ್ಧ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ದೂರು ನೀಡಿತ್ತು. ಈ ಸಂಬಂಧ ಸಂಸ್ಥೆಗೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ. ಇಂತಹ ಕ್ರಮಗಳು ಗ್ರಾಹಕರನ್ನು ತಪ್ಪುದಾರಿಗೆಳೆಯುತ್ತವೆ. https://ainlivenews.com/see-how-many-health-benefits-drinking-buttermilk-has/ ಗ್ರಾಹಕರ ಖರೀದಿ ನಿರ್ಧಾರಗಳ ಮೇಲೂ ಪ್ರಭಾವ ಬೀರುತ್ತವೆ ಎಂದು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಎಚ್ಚರಿಸಿದೆ.ಆನ್ಲೈನ್ ಶಾಪಿಂಗ್ ಸಂಸ್ಥೆಗೆ ಸಿಸಿಪಿಎ ನೋಟಿಸ್ ನೀಡಿದ್ದು, 7 ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದೆ. ಇಲ್ಲದಿದ್ದರೆ, ಗ್ರಾಹಕ ಸಂರಕ್ಷಣಾ ಕಾಯ್ದೆ,-2019 ರ ನಿಬಂಧನೆಗಳ ಅಡಿಯಲ್ಲಿ ಕಂಪನಿಯ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದೆ.
ಬಿಗ್ ಬಾಸ್ ಮನೆಯಲ್ಲಿ ಇರೋದು ಏಳು ಜನ. ಈಗಾಗಲೇ ಸಂಗೀತಾ ಶೃಂಗೇರಿ ಡೈರೆಕ್ಟ್ ಆಗಿ ಫಿನಾಲೆಗೆ ಆಯ್ಕೆಯಾಗಿದ್ದಾರೆ. ತುಕಾಲಿ ಸಂತು ಅವರು ನಾಮಿನೇಷನ್ ತೂಗುಕತ್ತಿಯಿಂದ ತಪ್ಪಿಸಿಕೊಂಡಿದ್ದಾರೆ. ಹಾಗಾಗಿ ವರ್ತೂರು ಸಂತೋಷ, ವಿನಯ್, ಕಾರ್ತಿಕ್, ಡ್ರೋನ್ ಪ್ರತಾಪ್ (Drone Pratap) ಮತ್ತು ನಮ್ರತಾ ಸೆಣೆಸಾಡೋದು ಅನಿವಾರ್ಯವಾಗಿದೆ. ಮಿಡ್ ವೀಕ್ ಎಲಿಮಿನೇಷನ್ (Elimination) ಅಂತ ಈಗಾಗಲೇ ತನಿಷಾ ಕುಪ್ಪಂಡ ಅವರನ್ನು ಮನೆಯಿಂದ ಕಳುಹಿಸಲಾಗಿದೆ. ಫಿನಾಲೆ ವೇದಿಕೆಯ ಮೇಲೆ ಐದೇ ಐದು ಜನರು ಇರುವ ಕಾರಣದಿಂದಾಗಿ ಇನ್ನೂ ಇಬ್ಬರನ್ನೂ ಮನೆಯಿಂದ ಹೊರ ಕಳುಹಿಸಬೇಕಿದೆ. ಹಾಗಾಗಿ ಈ ವಾರ ಮತ್ತ್ಯಾರು ಮನೆಯಿಂದ ಹೊರ ಬರುತ್ತಾರೆ ಎನ್ನುವ ಕುತೂಹಲ ಶುರುವಾಗಿದೆ. ಕಳೆದ ಸುದೀಪ್ ಅವರು ವರ್ತೂರು ಸಂತೋಷ್ ಅಥವಾ ತುಕಾಲಿ ಸಂತು ಇಬ್ಬರಲ್ಲಿ ಒಬ್ಬರು ಮನೆಯಿಂದ ಆಚೆ ಹೋಗಲು ರೆಡಿಯಾಗಿ ಎಂದು ಹೇಳುವ ಮೂಲಕ ಶಾಕ್ ನೀಡಿದ್ದರು. ಈ ಬಾರಿ ತುಕಾಲಿ ಬಚಾವ್ ಆಗಿದ್ದಾರೆ. ಸದ್ಯ ನಾಮಿನೇಟ್ ಆಗಿರುವ ಕಂಟೆಸ್ಟೆಂಟ್ ಗಳ ಪೈಕಿ ವಿನಯ್, ಕಾರ್ತಿಕ್ ಹಾಗೂ ಡ್ರೋನ್…
ನಮ್ಮ ಮನೆಯ ಸುತ್ತ ಇಟ್ಟಿರುವ ವಸ್ತುಗಳನ್ನು ಸರಿಯಾದ ನಿರ್ದೇಶನ ಮತ್ತು ನಿಯಮಗಳ ಪ್ರಕಾರ ಇಡದಿದ್ದರೆ, ಅವು ಮನೆಯನ್ನು ಸಂಕಷ್ಟಕ್ಕೆ ದೂಡಬಹುದು. ಇವುಗಳಲ್ಲಿ ನಿಮ್ಮ ಮನೆಯ ಪೊರಕೆ ಮತ್ತು ಮಾಪ್ ಕೂಡ ಸೇರಿವೆ. ವಾಸ್ತವವಾಗಿ, ನಾವು ಈ ವಸ್ತುಗಳಿಂದ ಮನೆಯನ್ನು ಸ್ವಚ್ಛಗೊಳಿಸಬಹುದು, ಆದರೆ ಈ ವಸ್ತುಗಳಿಗೆ ವಾಸ್ತು ನಿಯಮಗಳನ್ನು ಅನುಸರಿಸಲು ನಮಗೆ ಸಾಧ್ಯವಾಗುವುದಿಲ್ಲ. ಈ ವಸ್ತುಗಳನ್ನು ಸರಿಯಾಗಿ ಇಡದಿದ್ದರೆ ಮನೆಯಲ್ಲಿ ನೆಗೆಟಿವ್ ಎನರ್ಜಿ ಬರಬಹುದು. ವಾಸ್ತು ಪ್ರಕಾರ ನೀವು ಯಾವ ಸ್ಥಳದಲ್ಲಿ ಪೊರಕೆ ಮತ್ತು ಮಾಪ್ ಇಡಬೇಕು, ಇದರಿಂದ ಸಂತೋಷ ಮತ್ತು ಸಮೃದ್ಧಿ ಉಳಿಯುತ್ತದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಈ ಸ್ಥಳಗಳಲ್ಲಿ ಪೊರಕೆ ಮತ್ತು ಮಾಪ್ ಇಡಬೇಡಿ ವಾಸ್ತುವನ್ನು ನಂಬುವುದಾದರೆ, ಮನೆಯ ಕೆಲವು ದಿಕ್ಕುಗಳಲ್ಲಿ ಮರತೂ ಕೂಡ ನೀವು ಪೊರಕೆ ಮತ್ತು ಮಾಪ್ ಅನ್ನು ಇಡಬಾರದು. ಆ ಸ್ಥಳಗಳಲ್ಲಿ ವಿಶೇಷವಾಗಿ ನಿಮ್ಮ ಪೂಜಾ ಕೊಠಡಿ, ಅಡುಗೆ ಕೋಣೆ ಮತ್ತು ಮಲಗುವ ಕೋಣೆ ಸೇರಿವೆ. ಈ ಯಾವುದೇ ಸ್ಥಳಗಳಲ್ಲಿ ನೀವು ಎಂದಿಗೂ ಬ್ರೂಮ್ ಅಥವಾ ಮಾಪ್…
ಹೈದರಾಬಾದ್: ಇಲ್ಲಿನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಖಾಸಗಿ ಸಂಸ್ಥೆಯೊಂದರ ಬೆಳ್ಳಿಹಬ್ಬದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಅವಘಡದಲ್ಲಿ ಖಾಸಗಿ ಸಂಸ್ಥೆಯೊಂದರ ಸಿಇಒ ಸಾವನ್ನಪ್ಪಿದ್ದು, ಮತ್ತೊಬ್ಬ ಅಧಿಕಾರಿ ಗಂಭೀರ ಗಾಯಗೊಂಡಿದ್ದಾರೆ. ಗುರುವಾರ ಸಂಜೆ ಸಂಭ್ರಮಾಚರಣೆ ವೇಳೆ ವಿಸ್ಟೆಕ್ಸ್ ಸಿಇಒ (Vistex CEO) ಸಂಜಯ್ ಷಾ ಮತ್ತು ಅವರ ಸಹೋದ್ಯೋಗಿ ಇಬ್ಬರನ್ನೂ ಐರನ್ ಕೇಜ್ನಲ್ಲಿ ಇರಿಸಲಾಗಿತ್ತು. ಅದನ್ನು ವೇದಿಕೆಯಲ್ಲಿ ಎತ್ತರದಿಂದ ಕೆಳಕ್ಕೆ ಇಳಿಸಬೇಕಾಗಿತ್ತು. ಇಳಿಸುವಾಗ ಇಬ್ಬರೂ ಸಂಭ್ರಮದಲ್ಲಿ ನೃತ್ಯ ಮಾಡುತ್ತಿದ್ದರು. ಈ ವೇಳೆ ಅಚಾನಕ್ ಐರನ್ ಕೇಜ್ ಮಗುಚಿದೆ. ಇಬ್ಬರೂ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಸಿಇಒ ಸಂಜಯ್ ಷಾ ಚಿಕಿತ್ಸೆಯಲ್ಲಿ ಸಾವನ್ನಪ್ಪಿದ್ದಾರೆ. https://ainlivenews.com/see-how-many-health-benefits-drinking-buttermilk-has/ ಅವರ ಸಹೋದ್ಯೋಗಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಂಪನಿಯ ಮತ್ತೊಬ್ಬ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಫಿಲ್ಮ್ ಸಿಟಿ ಈವೆಂಟ್ ಮ್ಯಾನೇಜ್ಮೆಂಟ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉತ್ತರ ಭಾರತದಲ್ಲಿ ಹವಾಮಾನ ವೈಪರಿತ್ಯ ಉಂಟಾಗಿದೆ. ಅದರ ಪರಿಣಾಮವಾಗಿ ಅನೇಕ ವಿಮಾನಗಳ ಹಾರಾಟದ ಸಮಯದಲ್ಲಿ ವ್ಯತ್ಯಾಸ ಉಂಟಾಗಿದೆ. ಇಂಡಿಗೋ ವಿಮಾನದ ಪೈಲಟ್ ಮೇಲೆ ಹಲ್ಲೆ ಮಾಡಿ ಸುದ್ದಿಯಾಗಿರುವ ಆರೋಪಿ ಸಾಹಿಲ್ ಕಟಾರಿಯಾನ ತನಿಖೆಯನ್ನು ದೆಹಲಿ ಪೊಲೀಸ್ ಮಾಡುತ್ತಿದೆ. ತನಿಖೆಯ ಆರಂಭಿಕ ಹಂತದಲ್ಲಿ ತಾನು ಐದು ತಿಂಗಳ ಹಿಂದೆ ವಿವಾಹವಾಗಿದ್ದಾಗಿ ತಿಳಿಸಿರುವ ಆತ, ಗೋವಾಗೆ ಹನಿಮೂನ್ಗೆ ಹೋಗುತ್ತಿದ್ದೆ ಎಂದು ತಿಳಿಸಿದ್ದಾರೆ. ಆದರೆ, ನಿರಂತರವಾಗಿ ಆಗುತ್ತಿದ್ದ ವಿಳಂಬ ನನ್ನ ಎಲ್ಲಾ ಯೋಜನೆಗಳ ಮೇಲೆ ಪರಿಣಾಮವನ್ನು ಬೀರಿತು. ಆ ಕಾರಣಕ್ಕಾಗಿ ನಾನು ಸಿಟ್ಟಿನಿಂದ ಈ ಕೃತ್ಯ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ವಿಮಾನ ವಿಳಂಬದ ಕುರಿತು ಪೈಲೈಟ್ ಪ್ರಕರರಣ ನೀಡುತ್ತಿದ್ದ ವೇಳೆ, ಪೈಲಟ್ ಬಳಿ ಓಡಿ ಬಂದಿದ್ದ ಸಾಹಿಲ್ ಕಟಾರಿಯಾ ಆತನ ಕೆನ್ನೆಗೆ ಬಾರಿಸಿದ್ದರು. ತಕ್ಷಣವೇ ಆತನನ್ನು ವಿಮಾನದಿಂದ ಕೆಳಗಿಳಿಸಿದ್ದು ಮಾತ್ರವಲ್ಲದೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ಹಸ್ತಾಂತರ ಮಾಡಲಾಗಿತ್ತು. https://twitter.com/SurajBala/status/1746623940993437909?ref_src=twsrc%5Etfw%7Ctwcamp%5Etweetembed%7Ctwterm%5E1746623940993437909%7Ctwgr%5E3de6fb5240e3bcd9751f558c753e7b3a6eff0bf1%7Ctwcon%5Es1_&ref_url=https%3A%2F%2Ftv9kannada.com%2Fnational%2Fpassenger-hits-indigo-pilot-announcing-flight-delay-video-viral-nyr-761342.html ನಿಗದಿಯಂತೆ ವಿಮಾನ ನವದೆಹಲಿಯಿಂದ ಸಂಜೆ 6 ಗಂಟೆಗೆ ಟೇಕ್ಆಫ್ ಆಗಬೇಕಿತ್ತು. ಆದರೆ, ತೀವ್ರ ಮಂಜಿನ ಕಾರಣದಿಂದಾಗಿ…
ಕಾರವಾರ: ಪ್ರಜಾಪ್ರಭುತ್ವಕ್ಕೆ ವಿರೋಧ ಪಕ್ಷ ಬೇಕೇ ಹೊರತು ದೇಶದ್ರೋಹಿಗಳ ವಿರೋಧ ಪಕ್ಷವಲ್ಲ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Anant Kumar Hegade) ಕಾಂಗ್ರೆಸ್ (Congress) ವಿರುದ್ಧ ಕಿಡಿಕಾರಿದ್ದಾರೆ. ಸಿದ್ದಾಪುರ ತಾಲೂಕಿನ ಕಾನಸೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಭಗವಂತನ ಇಚ್ಛೆ. ಇವತ್ತು ದೇಶದಲ್ಲಿ ಏನು ನಡೆಯುತ್ತಿದೆಯೋ ಅವೆಲ್ಲವೂ ಭಗವಂತನ ಇಚ್ಛೆ. ನಾವು ತೀರ್ಮಾನ ಮಾಡಿದ್ದೇನೂ ಇಲ್ಲ, ಜಗತ್ತಿಗೆ ಈ ಭಾರತ ಬೇಕು. ದೇಶಕ್ಕೆ ಬಿಜೆಪಿ (BJP) ಬೇಕು ಎಂದರು. ಒಮ್ಮೆ ಗೆದ್ದರೆ ಸಾಕಾಗೋದಿಲ್ಲ ಅಂತಿಮದ ತನಕ ನಾವೇ ಗೆಲ್ಲುತ್ತಿರಬೇಕು. ಏನದು ಅಂತಿಮ ಗೆಲುವು ಎಂದರೆ ನಮ್ಮ ಗೆಲುವು, ನಮ್ಮ ಗುರಿ ಹಿಂದೂರಾಷ್ಟ್ರ ಎಂದ ಅವರು ಮುಂದೆ ಎಲ್ಲವೂ ಸರಿಹೋಗುತ್ತದೆ. ಜಾತಿ ಧರ್ಮ ಅದು ಇದು, ವ್ಯವಸ್ಥೆ ಸಹ ಸರಿ ಹೋಗುತ್ತೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. https://ainlivenews.com/see-how-many-health-benefits-drinking-buttermilk-has/ ಪ್ರಜಾಪ್ರಭುತ್ವಕ್ಕೆ ವಿರೋಧ ಪಕ್ಷ ಬೇಕು, ದೇಶದ್ರೋಹಿಗಳ ವಿರೋಧ ಪಕ್ಷವಲ್ಲ. ಲಾಲ್ ಬಹದ್ದೂರ್ ಶಾಸ್ತ್ರಿ ಕೊಲೆ ನಂತರ 15 ದಿವಸದ ನಂತರ ಜಹಂಗೀರ್…
ಬೆಂಗಳೂರು: ವಸ್ತುವಿನ ಗುಣಮಟ್ಟ ಹೆಚ್ಚಿಸುವ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆಯಲ್ಲಿ ತೊಡಗಿ ಲಾಭದಾಯಕವಾಗಿ ಪ್ರಗತಿ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕರ್ನಾಟಕ ಮತ್ತು ಮಾರ್ಜಕ ನಿಯಮಿತದ 21ನೂತನ ವೈವಿದ್ಯಮಯ ಉತ್ಪನ್ನಗಳನ್ನು ಲೋಕಾರ್ಪಣೆ ಗೊಳಿಸಿದರು. ಸ್ಪರ್ಧಾತ್ಮಕ ಯುಗದಲ್ಲಿ ಖಾಸಗಿ ಸಂಸ್ಥೆಗಳ ಜತೆ ಪೈಪೋಟಿ ಮಾಡುವಂತಹ ಗುಣಮಟ್ಟವನ್ನು ನಾವು ಕಾಪಾಡಿ ಕೊಳ್ಳಬೇಕು. ಇದರಲ್ಲಿ KSDL ಯಶಸ್ಸು ಗಳಿಸಿದೆ. ಸಚಿವ ಎಂ.ಬಿ.ಪಾಟೀಲ್ ಅವರು KSDL ನ ಘನತೆ ಹೆಚ್ಚಿಸಿ ಲಾಭದಾಯಕ ಪ್ರಗತಿ ಕಾಣಿಸಿದ್ದಾರೆ ಎಂದು ಸಿ.ಎಂ ಮೆಚ್ಚುಗೆ ಸೂಚಿಸಿದರು. https://ainlivenews.com/see-how-many-health-benefits-drinking-buttermilk-has/ ಸರ್ಕಾರಿ ಸಂಸ್ಥೆ ಮತ್ತು ಸರ್ಕಾರಿ ಕಾರ್ಖಾನೆ ಎಂದರೆ ಯಾರೂ ಮೂಗು ಮುರಿಯದಂತಹ ರೀತಿಯಲ್ಲಿ ಪ್ರಗತಿ ಕಾಣಿಸಿ ಮಾದರಿಯಾಗಿ KSDL ಬೆಳವಣಿಗೆ ಕಂಡಿರುವುದಕ್ಕೆ ಎಲ್ಲರಿಗೂ ಮುಖ್ಯಮಂತ್ರಿಗಳು ಅಭಿನಂದಿ ಸಿದರು. KSDL ಸಂಸ್ಥೆಯ ಉತ್ಪನ್ನಗಳನ್ನು ನಕಲು ಮಾಡುವವರ ಮೇಲೆ ತೀವ್ರ ನಿಗಾ ವಹಿಸುವಂತೆ ಇದೇ ಸಂದರ್ಭದಲ್ಲಿ ಸಿಎಂ ಸೂಚಿಸಿದರು. ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, KSDL ನ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಪ್ರಶಾಂತ್, KSDL…
ನವದೆಹಲಿ: ಯಾರಿಗೆ ಅಯೋಧ್ಯೆಯ ರಾಮಮಂದಿರದ ಬಾಲರಾಮನ ಪ್ರಾಣಪ್ರತಿಷ್ಠಾಪನಾ (Pran Pratishtha) ಸಮಾರಂಭಕ್ಕೆ ಹೋಗಲು ಇಷ್ಟ ಇಲ್ಲವೋ ಅವರು ಹೋಗುವುದು ಬೇಡ. ನಾನು ಈ ಸಮಾರಂಭದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಹರ್ಭಜನ್ ಸಿಂಗ್ (Harbhajan Singh) ಹೇಳಿದ್ದಾರೆ. ಸುದ್ದಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾನು ಜೀವನದಲ್ಲಿ ಈ ಮಟ್ಟಕ್ಕೆ ಬೆಳೆಯಲು ದೇವರೇ ಕಾರಣ. ನನಗೆ ದೇವರ ಮೇಲೆ ನಂಬಿಕೆ ಇದೆ. ಯಾರಿಗೆ ನಂಬಿಕೆ ಇಲ್ಲವೋ ಅವರು ಹೋಗುವುದು ಬೇಡ. ಕಾಂಗ್ರೆಸ್ ಹೋಗದಿರಲು ನಿರ್ಧರಿಸಿದ್ದು, ಅದು ಅವರ ತೀರ್ಮಾನ. ಒಟ್ಟಿನಲ್ಲಿ ಯಾರು ಏನು ಬೇಕಾದ್ರೂ ಹೇಳಿಕೊಳ್ಳಲಿ ನಾನು ಅಯೋಧ್ಯೆಗೆ ಹೋಗುವುದು ಪಕ್ಕಾ ಎಂದು ಅವರು ಹೇಳಿದ್ದಾರೆ. https://ainlivenews.com/see-how-many-health-benefits-drinking-buttermilk-has/ ಮಹಾಮಂದಿರದದಲ್ಲಿ ರಾಮನ ಪ್ರಾಣ-ಪ್ರತಿಷ್ಠಾ ಸಮಾರಂಭವೂ ಒಂದು ಐತಿಹಾಸಿಕ ದಿನವಾಗಿದೆ. ಈ ಬಗ್ಗೆ ಕಾಂಗ್ರೆಸ್, ಬಿಜೆಪಿಯ ವಿರುದ್ಧ ರಾಜಕೀಯ ಉದ್ದೇಶದ ಆರೋಪ ಮಾಡಿದೆ. ಪ್ರಾಣಪ್ರತಿಷ್ಠಾಪನೆ ನಡೆಯುತ್ತಿರುವುದು ಖುಷಿಯ ವಿಚಾರ ಮತ್ತು ಸರಿಯಾದ ನಡೆಯಾಗಿದೆ. ನಾನು ಈ ಸಮಾರಂಭದಲ್ಲಿ ಖಂಡಿತ…