Author: AIN Author

ಅಯೋಧ್ಯೆ (ರಾಮಮಂದಿರ): ರಾಮಮಂದಿರದಲ್ಲಿ (Ram Mandir) ಪ್ರಾಣ ಪ್ರತಿಷ್ಠೆಗಾಗಿ ಅಯೋಧ್ಯೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇಶ-ವಿದೇಶಗಳಿಂದ ಅಯೋಧ್ಯೆಗೆ ಉಡುಗೊರೆ, ಪ್ರಸಾದದ ಮಹಾಪೂರವೇ ಹರಿದುಬರುತ್ತಿದೆ. ಭಕ್ತರೊಬ್ಬರು ತಯಾರಿಸಿದ್ದ 1265 ಕೆಜಿ ತೂಕದ ಪ್ರಸಾದದ ಲಡ್ಡು (Laddoo Prasad) ಕೂಡ ಅಯೋಧ್ಯೆ (Ayodhya) ತಲುಪಿದೆ. ಈ ಬೃಹತ್‌ ಪ್ರಮಾಣದ ಲಡ್ಡನ್ನು ಹೊತ್ತು ಹೈದರಾಬಾದ್‌ನಿಂದ ಹೊರಟಿದ್ದ ವಾಹನವು ಅಯೋಧ್ಯೆಯ ಕರಸೇವಕಪುರ ತಲುಪಿದೆ. ಈ ಲಡ್ಡನ್ನು ತಯಾರಿಸಿದ್ದು ಶ್ರೀರಾಮ ಕ್ಯಾಟರಿಂಗ್ ಸರ್ವಿಸಸ್‌. ಶ್ರೀರಾಮ ಕ್ಯಾಟರಿಂಗ್ ಸರ್ವಿಸಸ್‌ ಮಾಲೀಕ ಎನ್.ನಾಗಭೂಷಣ ರೆಡ್ಡಿ ಮಾತನಾಡಿ, ದೇವರು ನನ್ನ ವ್ಯಾಪಾರ ಮತ್ತು ನನ್ನ ಕುಟುಂಬವನ್ನು ಆಶೀರ್ವದಿಸಿದ್ದಾನೆ. ನಾನು ಬದುಕಿರುವವರೆಗೆ ಪ್ರತಿದಿನ ರಾಮಮಂದಿರಕ್ಕಾಗಿ 1 ಕೆಜಿ ಲಡ್ಡು ತಯಾರಿಸುತ್ತೇನೆ ಎಂದು ವಾಗ್ದಾನ ಮಾಡಿದ್ದೇನೆ. ಅಯೋಧ್ಯೆಗೆ ಆಹಾರ ಪ್ರಮಾಣ ಪತ್ರವನ್ನೂ ತಂದಿದ್ದೇನೆ. ಈ ಲಡ್ಡುಗಳು ಒಂದು ತಿಂಗಳು ಬಾಳಿಕೆ ಬರುತ್ತವೆ. 25 ಮಂದಿ 3 ದಿನಗಳವರೆಗೆ ಲಡ್ಡುಗಳನ್ನು ತಯಾರಿಸಿದ್ದಾರೆ ಎಂದು ತಿಳಿಸಿದ್ದಾರೆ.

Read More

ಬೀದರ್:‌ ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸ್ಚಚ್ಛ ಮಂದಿರ ಅಭಿಯಾನದನ್ವಯ ಮಾಜಿ ಸಚಿವ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಕಮಲನಗರ ತಾಲ್ಲೂಕಿನ ಸಂಗಮ ಗ್ರಾಮದ ಸುಕ್ಷೇತ್ರ ಸಂಗಮೇಶ್ವರ ದೇವಸ್ಥಾನವನ್ನು ಸ್ವಚ್ಛಗೊಳಿಸಿದರು. ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯಕ್ಕೆ ಇಳಿದ ಶಾಸಕರು ನೀರಿನಿಂದ ಗರ್ಭಗುಡಿ ಸೇರಿದಂತೆ ದೇವಸ್ಥಾನದ ಆವರಣವೆಲ್ಲಾ ಸ್ವಚ್ಛಗೊಳಿಸಿದರು. ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಸಾಥ್ ನೀಡಿದರು. ದೇವಸ್ಥಾನದಲ್ಲಿ “ಜೈ ಶ್ರೀರಾಮ” ಎಂಬ ಜಯಘೋಷಗಳು ಕೇಳಿಸಿದವು. ಬಳಿಕ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಶಾಸಕರು, ಅಯೋಧ್ಯೆಯಲ್ಲಿ ರಾಮ ಮಂದಿರ‌ ನಿರ್ಮಾಣವಾಗಬೇಕೆಂಬುದು 500 ವರ್ಷಗಳ ಬೇಡಿಕೆಯಾಗಿತ್ತು. ಇದಕ್ಕಾಗಿ ಅನೇಕ ಹೋರಾಟಗಳಾಗಿವೆ. ಇಷ್ಟು ದಿನ ಕೇವಲ‌ ಭರವಸೆ ಮತ್ತು ಆಶ್ವಾಸನೆಗಳು ಮಾತ್ರ ಸಿಗುತ್ತಿದ್ದವು. ಮಂದಿರ ಮಾತ್ರ ನಿರ್ಮಾಣವಾಗಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಇಚ್ಛಾಶಕ್ತಿಯಿಂದಾಗಿ ಇದು ಸಾಕಾರಗೊಂಡಿದೆ. ಅಯೋಧ್ಯೆಯಲ್ಲಿ ಸುಂದರ ಮತ್ತು ಭವ್ಯವಾದ ಮಂದಿರ ನಿರ್ಮಾಣಗೊಂಡಿದೆ. ಜನವರಿ 22ರಂದು ಪ್ರಧಾನಿಯವರ ಅಮೃತ ಹಸ್ತದಿಂದ ಉದ್ಘಾಟನೆ ನೆರವೇರಲಿದೆ ಎಂದರು……

Read More

ದಿಸ್ಪುರ್: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅಸ್ಸಾಂನ (Assam) ತೇಜ್‍ಪುರ್‌ನ ಐತಿಹಾಸಿಕ ಮಹಾಭೈರಬ್ ದೇವಾಲಯಕ್ಕೆ (Mahabhairab Temple) ಭೇಟಿ ನೀಡಿ ಅವರಣದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಈಶಾನ್ಯ ರಾಜ್ಯಗಳಾದ ಮೇಘಾಲಯ ಮತ್ತು ಅಸ್ಸಾಂಗೆ ಮೂರು ದಿನಗಳ ಪ್ರವಾಸದಲ್ಲಿರುವ ಅಮಿತ್ ಶಾ ಅವರು ಶಿಲ್ಲಾಂಗ್‍ನಿಂದ ಸಂಜೆ ಇಲ್ಲಿಗೆ ಆಗಮಿಸಿದರು. ಈ ವೇಳೆ ಅವರಿಗೆ `ಗಯಾನ್ ಮತ್ತು ಬಯಾನ್’ (ಡೋಲು ಮತ್ತು ಸಿಂಬಲ್‍ಗಳೊಂದಿಗೆ ಧಾರ್ಮಿಕ ನೃತ್ಯ ಪ್ರದರ್ಶನ) ಸಾಂಪ್ರದಾಯಿಕ ಸ್ವಾಗತವನ್ನು ನೀಡಲಾಯಿತು. ಬಳಿಕ ಅವರು ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ನಂತರ ದೇವಾಲಯದ ಆವರಣದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಅಮಿತ್ ಶಾ ಅವರು ದೇವಾಲಯದ ಅಂಗಳದಲ್ಲಿ ಬಕೆಟ್‍ನಿಂದ ನೀರು ಸುರಿದು ಬಳಿಕ ಒರೆಸಿ ಸ್ವಚ್ಛಗೊಳಿಸಿದ್ದಾರೆ. ಅವರೊಂದಿಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಹ ಭಾಗಿಯಾಗಿದ್ದರು. ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ. ತೇಜ್‍ಪುರ ವಿಶ್ವವಿದ್ಯಾಲಯಕ್ಕೆ ದೇವಸ್ಥಾನದ ಆವರಣದಿಂದ ಹೊರಡುವ ಮೊದಲು ದೇವಾಲಯದ ಬಳಿ ಸೇರಿದ್ದ ಜನರಿಗೆ ಕೈ ಬೀಸಿ…

Read More

ಇಸ್ಲಾಮಾಬಾದ್‌: 2023ರ ಏಕದಿನ ಏಷ್ಯಾಕಪ್‌ (ODI WorldCup) ಹಾಗೂ 2023ರ ಏಕದಿನ ವಿಶ್ವಕಪ್‌ ಟೂರ್ನಿಯ ಬಳಿಕವೂ ಪಾಕ್‌ ತಂಡದ ಕಳಪೆ ಪ್ರದರ್ಶನದಿಂದ ಬೇಸತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ (PCB) ಅಧ್ಯಕ್ಷ ಝಾಕಾ ಅಶ್ರಫ್ (Zaka Ashraf) ರಾಜೀನಾಮೆ ನೀಡಿದ್ದಾರೆ. ಇದರಿಂದ ಪಾಕ್‌ ಕ್ರಿಕೆಟ್‌ ತಂಡಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಲಾಹೋರ್‌ನಲ್ಲಿ (Lahore) ನಡೆದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅಶ್ರಫ್‌, ಇದೇ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಕಳೆದ ವರ್ಷ ಜೂನ್‌ ತಿಂಗಳಲ್ಲಿ ಅಧ್ಯಕ್ಷರಾಗಿ ನೇಮಕವಾದ ಝಾಕಾ ಅಶ್ರಫ್‌ ಸೇವೆ ಸ್ಮರಿಸಿ ಸಮಿತಿ ಸದಸ್ಯರು ಹಾಗೂ ಪೋಷಕ ಉಸ್ತುವಾರಿ ಪ್ರಧಾನ ಮಂತ್ರಿ ಅನ್ವರ್-ಉಲ್-ಹಕ್ ಕಾಕರ್ ಧನ್ಯವಾದ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜೀನಾಮೆಗೆ ಕಾರಣವನ್ನೂ ಬಹಿರಂಗಪಡಿಸಿದರು. ನಾನು ಕ್ರಿಕೆಟ್‌ನ ಸುಧಾರಣೆಗಾಗಿ ಕೆಲಸ ಮಾಡುತ್ತಿದ್ದೆ. ಆದ್ರೆ ಈ ರೀತಿ ಕೆಲಸ ಮಾಡಲು ನನಗೆ ಸಾಧ್ಯವಿಲ್ಲ. ಈಗ ಕ್ರಿಕೆಟ್‌ ಮಂಡಳಿ ಮುಖ್ಯಸ್ಥರನ್ನು ಆಯ್ಕೆ ಮಾಡುವ ವಿಚಾರ ಪ್ರಧಾನಿಗಳಿಗೆ ಬಿಟ್ಟದ್ದು, ಅವರು…

Read More

ಚೆನ್ನೈ:   ತಮಿಳುನಾಡಿನ ಶ್ರೀರಂಗನಾಥ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದು ರಾಮನಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. https://twitter.com/DDNewslive/status/1748595507365392801?t=hBaa1F7slRYGLjQ0i5Dnjg&s=19 ಶ್ರೀರಂಗನಾಥನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ತಿರುಚಿರಾಪಳ್ಳಿಯ ಶ್ರೀರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ರಾಮನಿಗೆ ಸಂಬಂಧಿಸಿದ ದೇವಸ್ಥಾನಗಳಿಗೆ ಭೇಟಿ ನೀಡ್ತಿರುವ ಮೋದಿ ದಕ್ಷಿಣ ಭಾರತದ ಪ್ರಮುಖ ಶ್ರೀರಾಮನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.

Read More

ವಾಷಿಂಗ್ಟನ್: ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ರಾಮೋತ್ಸವ(Ayodhya Ram Mandir) ಆಚರಣೆಗೆ ಸಿದ್ಧತೆಗಳು ನಡೆದಿವೆ. ಅಮೆರಿಕ ಒಂದರಲ್ಲೇ 20ಕ್ಕೂ ಹೆಚ್ಚು ಕಡೆ ರಾಮೋತ್ಸವ ನಡೆಯಲಿದೆ. ಈಗಾಗಲೇ ವಾಷಿಂಗ್ಟನ್ (Washington) ಡಿಸಿ ಸೇರಿ ವಿವಿಧೆಡೆ ಕಾರ್ ರ್‍ಯಾಲಿಗಳನ್ನು ನಿರ್ವಹಿಸಲಾಗಿದೆ. ಜನವರಿ 22ರಂದು ನ್ಯೂಯಾರ್ಕ್‍ನ ಟೈಮ್ಸ್ ಸ್ಕ್ವೇರ್ ನಲ್ಲಿ ರಾಮೋತ್ಸವ ವೈಭವ ಕಂಡುಬರಲಿದೆ. ಫ್ರಾನ್ಸ್ ರಾಜಧಾನಿ ಪ್ಯಾರೀಸ್‍ನಲ್ಲಿ ರಾಮರಥ ಯಾತ್ರೆ ನಿರ್ವಹಿಸಲಾಗುತ್ತದೆ. ಐಫೆಲ್ ಟವರ್ ಬಳಿ ಸಾಂಸ್ಕೃತಿಕ ಕಾರ್ಯಕ್ರಮ, ಭಕ್ತಿಗೀತೆಗಳ ಗಾಯ, ಪ್ರಸಾದ ವಿತರಣೆಗೆ ತಯಾರಿ ನಡೆದಿವೆ. ಆಸ್ಟ್ರೇಲಿಯಾದ ಮೆಲ್ಬೋರ್ನ್, ಸಿಡ್ನಿಯಲ್ಲಿಯೂ ದೊಡ್ಡಮಟ್ಟದಲ್ಲೇ ಕಾರ್ಯಕ್ರಮ ನಿರ್ವಹಿಸಲು ಹಿಂದೂ ಸಮುದಾಯ ಸಜ್ಜಾಗಿದೆ. ಆಫ್ರಿಕಾದ ಕೀನ್ಯಾ, ಉಗಾಂಡ, ಟಾಂಜೇನಿಯಾ, ಘಾನ, ನೈಜೀರಿಯಾ, ಮೊಜಾಂಬಿಕ್ ಮತ್ತಿತರ ದೇಶಗಳಲ್ಲಿಯೂ ರಾಮೋತ್ಸವ ನಡೆಯಲಿದೆ. ಆದರೆ ಪಾಕಿಸ್ತಾನದ ಸೋಷಿಯಲ್ ಮೀಡಿಯಾಗಳಲ್ಲಿ ಮಾತ್ರ ರಾಮಮಂದಿರ ವಿರೋಧಿ ಪೋಸ್ಟ್ ಗಳು ಕಂಡುಬರುತ್ತಿವೆ ಇದೇ ಹೊತ್ತಲ್ಲಿ ಪಾಕ್ ಮಾಜಿ ಕ್ರಿಕೆಟಿಗ, ಹಿಂದೂ ಧರ್ಮೀಯ ದಾನೇಶ್ ಕನ್ಹೇರಿಯಾ ರಾಮ ಮಂದಿರ ಬೆಂಬಲಿಸಿ ಸರಣಿ ಟ್ವೀಟ್ ಮಾಡುತ್ತಿದ್ದಾರೆ. ಜೈ ಶ್ರೀರಾಮ್ ಎಂದು ಎದೆ…

Read More

ಹಾಂಗ್ ಕಾಂಗ್: 11 ತಿಂಗಳ ಮಗುವಿಗೆ ತಾಯಿ ಹಾಲುಣಿಸುತ್ತಿದ್ದಾಗ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಚೀನಾದ ಹಾಂಗ್ ಕಾಂಗ್‌ನಲ್ಲಿ ನಡೆದಿದೆ. 25 ವರ್ಷದ ಮಹಿಳೆ ತನ್ನ 11 ತಿಂಗಳ ಮಗುವಿಗೆ ಮನೆಯಲ್ಲಿ ಹಾಲುಣಿಸುತ್ತಿದ್ದ ವೇಳೆ ಮಗು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದೆ. ಇದರ ಪರಿಣಾಮ ತಾಯಿ ಗಾಬರಿಗೊಂಡು ಮಗುವಿನ ಬೆನ್ನನ್ನು ತಟ್ಟಿದ್ದಾಳೆ. ಆದರೆ ಮಗು ಯಾವುದೇ ಪ್ರತಿಕ್ರಿಯೆ ನೀಡದ ಪರಿಣಾಮ ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಳೆ. ಮಗು ಕಳೆದ ಎರಡು ದಿನಗಳಿಂದ ಜ್ವರ ಮತ್ತು ಶೀತದಿಂದ ಅನಾರ‍್ಯೋಗ್ಯಕ್ಕೆ ತುತ್ತಾಗಿತ್ತು. ಪುಟ್ಟ ಮಗುವಿಗೆ ನುಂಗುವ ಅಭಿವೃದ್ಧಿವರ್ತನಗಳು ಸಂಪೂರ್ಣವಾಗಿ ಸಮನ್ವಯಗೊಂಡಿರಲಿಲ್ಲ. ಹಾಲು ಕುಡಿಯುವಾಗ ವೇಗವಾಗಿ ನುಂಗುವ ಸಾಮರ್ಥ್ಯ ಮಗುವಿಗೆ ಇರಲಿಲ್ಲ. ಇದರಿಂದ ಮಗು ಉಸಿರುಗಟ್ಟಿ ಸಾವನ್ನಪ್ಪಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

Read More

ಕೆಲದಿನಗಳಿಂದ ವಿಜಯ್ ದೇವರಕೊಂಡ (Vijay Devarakonda) ಮತ್ತು ರಶ್ಮಿಕಾ ಮಂದಣ್ಣ ಮತ್ತೆ ಸುದ್ದಿಯಾಗಿದ್ದಾರೆ. ಬರುವ ಫೆಬ್ರವರಿ ತಿಂಗಳಲ್ಲಿ ಇವರಿಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆದರೆ ಈ ಕುರಿತು ಇಬ್ಬರೂ ತುಟಿಬಿಚ್ಚಿರಲಿಲ್ಲ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ (Rashmika Mandanna) ಒಟ್ಟಿಗೆ ವಾಸಿಸುತ್ತಿದ್ದಾರೆ. ನಿಶ್ಚಿತಾರ್ಥವಾದ ಬಳಿಕ ತಮ್ಮ ಸಂಬಂಧವನ್ನು ಬಹಿರಂಗಪಡಿಲಿದ್ದಾರೆ ಎಂಬುದಾಗಿಯೂ ಸುದ್ದಿಯಾಗಿತ್ತು. ಆದರೆ ಇಬ್ಬರು ಹಲವಾರು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರೂ, ತಮ್ಮ ಸಂಬಂಧದ ಬಗ್ಗೆ ಇನ್ನೂ ಸಾರ್ವಜನಿಕವಾಗಿ ಬಹಿರಂಗಪಡಿಸಿಲ್ಲ. ಆದರೆ ಇದೀಗ ನಟ ವಿಜಯ್ ದೇವರಕೊಂಡ ಅವರೇ ಮೌನ ಮುರಿದಿದ್ದಾರೆ. ಇತ್ತೀಚೆಗೆ ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡುತ್ತಿದ್ದಾಗ ರಶ್ಮಿಕಾ ಮಂದಣ್ಣ ಅವರೊಂದಿಗಿನ ನಿಶ್ಚಿತಾರ್ಥದ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿದರು. ನಾನು ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಅಥವಾ ಮದುವೆಯಾಗುವುದಿಲ್ಲ. ಮೀಡಿಯಾದವರು ನನ್ನನ್ನು ಎರಡು ವರ್ಷಗಳಿಗೊಮ್ಮೆ ಮದುವೆಯಾಗಲು ಬಯಸುತ್ತಾರೆ ಎಂದನಿಸುತ್ತದೆ . ಪ್ರತಿ ವರ್ಷ ನಾನು ಈ ವದಂತಿಯನ್ನು ಕೇಳುತ್ತಲೇ ಬಂದಿದ್ದೇನೆ. ನನ್ನ ಮದುವೆಗೋಸ್ಕರ ಅವರು ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ

Read More

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಂದಿಸಿದ ಆರೋಪದ ಹಿನ್ನೆಲೆ ನಮೋ ಬಿಗ್ರೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಕಲಬುರಗಿ ಕಮೀಷನರ್ ಆರ್.ಚೇತನ್ ಅವರಿಗೆ ಕಲಬುರಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್ ದೂರು ನೀಡಿದ್ದಾರೆ. ಖರ್ಗೆ ಅವರನ್ನ ಚಕ್ರವರ್ತಿ ಸೂಲಿಬೆಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಹೀಗಾಗಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ರಾಯಚೂರಿನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಖರ್ಗೆ ಬಗ್ಗೆ ಸೂಲಿಬೆಲೆ ಅವಹೇಳನಕಾರಿಯಾಗಿ ನಿಂದಿಸಿದ್ದರು. ಈ ಹಿನ್ನೆಲೆ ಕಲಬುರಗಿ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್​ ದೂರು ದಾಖಲಿಸಿದ್ದಾರೆ.

Read More

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿ  (Rishabh Shetty)ಅವರನ್ನೂ ಆಹ್ವಾನಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತು ಅವರು ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿರಲಿಲ್ಲ. ಇದೀಗ ರಿಷಬ್ ಶೆಟ್ಟಿ ಅವರೇ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಅವಕಾಶಕ್ಕಾಗಿ ಧನ್ಯವಾದ ಎಂದು ಬರೆದುಕೊಂಡಿದ್ದಾರೆ. ರಿಷಬ್ ಶೆಟ್ಟಿ ಜೊತೆ ಕನ್ನಡದ ಇನ್ನೂ ಅನೇಕ ನಟರಿಗೂ ಆಹ್ವಾನ ನೀಡಲಾಗಿದೆ.  ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ (Nikhil Kumar) ಅವರಿಗೆ ರಾಮಮಂದಿರ ಉದ್ಘಾಟನೆಗೆ ಬರುವಂತೆ ಆಹ್ವಾನ ನೀಡಲಾಗಿದೆ. ಉದ್ಘಾಟನೆಗೆ ಕುಟುಂಬ ಸಮೇತ ಬರುವಂತೆ, ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ನೀಡಲಾಗಿದೆ. ಯಶ್ ಅವರಿಗೂ ಬರುವಂತೆ ಆಹ್ವಾನ ನೀಡಲಾಗಿದೆಯಂತೆ. ಕನ್ನಡ ಸಿನಿಮಾ ರಂಗದ ಬೆರಳೆಣಿಕೆಯ ಕಲಾವಿದರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ. ಒಂದು ಕಡೆ ಉದ್ಘಾಟನೆಗೆ ಆಹ್ವಾನ ಸಿಗುತ್ತಿದ್ದರೆ ಮತ್ತೊಂದು ಕಡೆ ಸಿನಿಮಾ ಸೆಲೆಬ್ರಿಟಿಗಳು ಕೂಡ ದೇಣಿಗೆ ನೀಡುತ್ತಿದ್ದಾರೆ. ಬಹುಭಾಷಾ ನಟಿ ಪ್ರಣೀತಾ ಸುಭಾಷ್(Pranitha Subhash), ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ.…

Read More