ರಜನಿಕಾಂತ್ ಹೊಸ ಸಿನಿಮಾದ ಟೈಟಲ್ ಫಿಕ್ಸ್ ಆಗಿದೆ. ಇವರ 170ನೇ ಚಿತ್ರಕ್ಕೆ ‘ವೇಟ್ಟೈಯನ್’ (Vettaiyan) ಎಂದು ಹೆಸರಿಡಲಾಗಿದ್ದು, ರಜನಿ ಸಖತ್ ಮಾಸ್ ಫೀಲ್ ಕೊಡುವಂತಹ ಪಾತ್ರ ಮಾಡಲಿದ್ದಾರೆ ಎನ್ನುವ ಸುಳಿವು ಸಿಕ್ಕಿದೆ. ಟೈಟಲ್ ಜೊತೆಗೆ ಒಂದು ಸಣ್ಣ ವಿಡಿಯೋ ತುಣುಕೊಂದನ್ನೂ ರಿಲೀಸ್ ಮಾಡಲಾಗಿದೆ. ನಾನಾ ಕಾರಣಗಳಿಂದ ಈ ಚಿತ್ರ ಕುತೂಹಲ ಮೂಡಿಸಿದೆ. ಈ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ನಟಿಸಲಿದ್ದಾರೆ. ಹಲವು ವರ್ಷಗಳ ಬಳಿಕ ಭಾರತೀಯ ಸಿನಿಮಾ ರಂಗದ ಇಬ್ಬರು ದಿಗ್ಗಜರು ಒಂದಾಗಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಇದು ನಿಜನಾ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಅದು ನಿಜವಾಗಿದೆ. ಮೂರು ದಶಕದ ಬಳಿಕ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಒಟ್ಟಾಗಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಚಿತ್ರರಂಗದ ದಂತಕಥೆ ಎಂದರೆ ಒಬ್ಬರು ರಜನಿಕಾಂತ್(Rajanikanth), ಮತ್ತೊಬ್ಬರು ಅಮಿತಾಭ್ ಬಚ್ಚನ್. ಈ ಜೋಡಿ ಒಟ್ಟಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.ಬಳಿಕ ತಲೈವಾ- ಬಿಗ್ ಬಿ ಜೋಡಿ ತೆರೆಯ ಮೇಲೆ ಕಾಣಿಸಿಕೊಳ್ಳಲೇಯಿಲ್ಲ. ಈ ಸ್ಟಾರ್ ಕಿಲಾಡಿ ಜೋಡಿ,…
Author: AIN Author
ಬಿಗ್ ಬಾಸ್ ಸೀಸನ್ 10 ಕಳೆದ ಎಲ್ಲಾ ಸೀಸನ್ ಗಳಿಗಿಂತ ಇದು ತುಂಬಾ ಜನಪ್ರಿಯತೆ ಪಡೆದುಕೊಂಡಿದೆ. ಈ ಬಾರಿ ಜಗಳದಿಂದಲೇ ಹೆಚ್ಚು ಫೇಮಸ್ ಆಗಿರುವ ಬಿಗ್ ಬಾಸ್ ಮನೆಯಲ್ಲೀಗ ಗೆಲ್ಲುವ ಸ್ಪರ್ಧಿಯೇ ವಾರದ ಮಧ್ಯೆಯೇ ಎಲಿಮಿನೇಟ್ ಆಗಿದ್ದಾರೆ. ಹೌದು, ಬಿಗ್ ಬಾಸ್ ಮನೆಯಲ್ಲಿ ಕಳೆದ ವಾರ ಯಾವುದೇ ಎಲಿಮಿನೇಷನ್ ನಡೆದಿರಲಿಲ್ಲ. ಹೀಗಾಗಿ, ಈ ವಾರ ಡಬಲ್ ಎಲಿಮಿನೇಷನ್, ಮುಂದಿನ ವಾರದ ಮಧ್ಯದಲ್ಲಿ ಒಂದು ಎಲಿಮಿನೇಷನ್ ನಡೆಯಬಹುದ ಎಂದು ಎಲ್ಲರೂ ಭಾವಿಸಿದ್ದರು. ಈಗ ಬಿಗ್ ಬಾಸ್ ಟ್ವಿಸ್ಟ್ ನೀಡಿದ್ದಾರೆ. ಈ ವಾರದ ಮಧ್ಯವೇ ಒಂದು ಎಲಿಮಿನೇಷನ್ ನಡೆದಿದೆ. ಪ್ರಮುಖ ಸ್ಪರ್ಧಿಯೇ ಎಲಿಮಿನೇಟ್ ಆಗಿದ್ದಾರೆ. ಈ ವಾರ ತನಿಷಾ ಕುಪ್ಪಂಡ, ವರ್ತೂರು ಸಂತೋಷ್, ಕಾರ್ತಿಕ್, ಪ್ರತಾಪ್, ವಿನಯ್, ನಮ್ರತಾ ನಾಮಿನೇಟ್ ಆಗಿದ್ದರು. ಸಂಗೀತಾ ಹಾಗೂ ತುಕಾಲಿ ಸಂತೋಷ್ ನಾಮಿನೇಷನ್ನಿಂದ ಬಚಾವ್ ಆಗಿದ್ದರು. ಈ ಪೈಕಿ ತನಿಷಾ ವಾರದ ಮಧ್ಯೆ ಔಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಈ ಎಪಿಸೋಡ್ ಪ್ರಸಾರ ಕಾಣುವ ಸಾಧ್ಯತೆ…
ತಾಯ್ತನ ಎನ್ನುವುದು ಮಹಿಳೆಗೆ ಸಿಗುವ ಒಂದು ಅತ್ಯಮೂಲ್ಯ ಬದುದಕು ಆದರೆ ಮೊದಲು ನಾವು ಮಾನಸಿಕ, ದೈಹಿಕ ಮತ್ತು ಆರ್ಥಿಕ ಸಿದ್ಧತೆ ಅಗತ್ಯವಿರುತ್ತದೆ. ಆದರೆ ಈ ದೊಡ್ಡ ಹೆಜ್ಜೆಗೆ ತಯಾರಾಗಲು ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬಹುದಾದ ಮತ್ತು ಹೂಡಿಕೆ ಮಾಡಬಹುದಾದ ವಿಷಯಗಳನ್ನು ನಾವಿಲ್ಲಿ ತಿಳಿಯೋಣ! ಗರ್ಭಾವಸ್ಥೆಯನ್ನು ಯೋಜಿಸುವಾಗ ನೆನಪಿನಲ್ಲಿಟ್ಟುಕೊಳ್ಳಬೇಕಾದ ಅಗತ್ಯತೆಗಳು ಕುಟುಂಬ ಯೋಜನೆ ಮಾಡುವಾಗ ನೆನಪಿನಲ್ಲಿಟ್ಟುಕೊಳ್ಳಬೇಕಾದದ್ದು ಇಲ್ಲಿದೆ! 1. ನಿಮ್ಮ ಆರೋಗ್ಯದಲ್ಲಿ ಹೂಡಿಕೆ ಮಾಡುವ ಮೂಲಕ ಪ್ರಾರಂಭಿಸಿ. ಈಜು, ವಾಕಿಂಗ್ ಅಥವಾ ಯಾವುದೇ ರೀತಿಯ ವ್ಯಾಯಾಮವನ್ನು ತೆಗೆದುಕೊಳ್ಳಲು ಈಗ ಅತ್ಯುತ್ತಮ ಸಮಯ. ಸಮಯಕ್ಕಿಂತ ಮುಂಚಿತವಾಗಿ ಆಕಾರವನ್ನು ಪಡೆದುಕೊಳ್ಳಿ, ಗರ್ಭಿಣಿಯಾಗಲು ಅಗತ್ಯವಾದ ಆರೋಗ್ಯಕರ ತೂಕವನ್ನು ಸಾಧಿಸಿ ಮತ್ತು ಆರಾಮದಾಯಕವಾದ ಗರ್ಭಧಾರಣೆ ಮತ್ತು ಹೆರಿಗೆಯನ್ನು ಹೊಂದುವ ಸಾಧ್ಯತೆಗಳನ್ನು ಹೆಚ್ಚಿಸಿ. ನೀವು ಆನಂದಿಸುವ ವ್ಯಾಯಾಮವನ್ನು ಆರಿಸಿ ಮತ್ತು ನೀವು ನಿಧಾನವಾಗಿ ಹೇಗೆ ಶಕ್ತಿಯುತ ಮತ್ತು ಫಿಟ್ ಆಗಲು ಪ್ರಾರಂಭಿಸುತ್ತೀರಿ ಎಂಬುದನ್ನು ವೀಕ್ಷಿಸಿ! ನೀವು ಸ್ಥಿರತೆಯೊಂದಿಗೆ ಹೋರಾಡುತ್ತಿದ್ದರೆ, ವರ್ಗಕ್ಕೆ ಸೇರಿಕೊಳ್ಳಿ! ನೀವು ಹಣವನ್ನು ಖರ್ಚು ಮಾಡಿದಾಗ, ನಿಮ್ಮ ಅಲಾರಾಂನಲ್ಲಿ ಸ್ನೂಜ್…
ಹಲವಾರು ಕಡೆ ಸಲಾರ್ ಸಿನಿಮಾ ಥಿಯೇಟರ್ ನಲ್ಲಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಬಂದಿದೆ. ನೆಟ್ ಫ್ಲಿಕ್ಸ್ (OTT) ಸಲಾರ್ ಸಿನಿಮಾವನ್ನು ಖರೀದಿಸಿದ್ದು ಫೆಬ್ರವರಿ ಮೊದಲ ವಾರದಿಂದ ಸ್ಟ್ರೀಮಿಂಗ್ ಆರಂಭಿಸಲಿದೆ ಎಂದು ಹೇಳಲಾಗುತ್ತಿದೆ. ಅಧಿಕೃತವಾಗಿ ಸಂಸ್ಥೆ ಹೇಳಿಕೊಳ್ಳದೇ ಇದ್ದರೂ, ಫೆಬ್ರವರಿ ಗ್ಯಾರಂಟಿ ಎನ್ನುವ ಮಾಹಿತಿ ಹೊರ ಬಿದ್ದಿದೆ. ಇದರ ಜೊತೆ ಜೊತೆಗೆ ಸಲಾರ್ ಸಿನಿಮಾ ಸ್ಪ್ಯಾನಿಷ್ (Spanish) ಭಾಷೆಯಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಸ್ಪ್ಯಾನಿಷ್ ಭಾಷೆಗೆ ಚಿತ್ರವನ್ನು ಡಬ್ ಮಾಡಲಾಗುತ್ತಿದ್ದು, ಮಾರ್ಚ್ 7 ರಂದು ಈ ಚಿತ್ರವನ್ನು ರಿಲೀಸ್ ಮಾಡುವುದಾಗಿ ಸಂಸ್ಥೆ ತಿಳಿಸಿದೆ. ಸಲಾರ್ ಸಿನಿಮಾ ಬಾಕ್ಸಾಫೀಸಿನಲ್ಲಿ ಈವರೆಗೂ 627 ಕೋಟಿ ರೂಪಾಯಿಗೂ ಅಧಿಕ ಗಳಿಸಿ, ಇನ್ನೂ ಮುನ್ನುಗ್ಗುತ್ತಿದೆ. ಈ ನಡುವೆ ಸಲಾರ್ 2 ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳು ಹೊರ ಬಿದ್ದಿವೆ. ಆಂಗ್ಲ ವೆಬ್ ಸೈಟ್ ಜೊತೆ ನಿರ್ಮಾಪಕ ವಿಜಯ ಕಿರಗಂದೂರು (Vijaya Kirgandur) ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದು, ಅದರ ಪ್ರಕಾರ ಸಲಾರ್ 2…
ಬೆಂಗಳೂರು:- ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ಮುಂದುವರಿದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಚಳಿ ಇದ್ದು, ಒಣಹವೆ ಇರಲಿದೆ. ಹೊನ್ನಾವರದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಳಗಾವಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ…
ಟೀಮ್ ಇಂಡಿಯಾದ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟೆಸ್ಟ್ ಪಂದ್ಯದಲ್ಲಿ ಆಂಗ್ಲ ಪಡೆಯು ವೇಗದ ಬೌಲಿಂಗ್ ವಿಭಾಗದಲ್ಲಿ ಬಹುತೇಕ ಹೊಸ ಮುಖಗಳನ್ನೇ ಹೊಂದಿದ್ದು ಅವರಿಗೆ ಸೂಕ್ತ ಮಾರ್ಗದರ್ಶನ ನೀಡುತ್ತೇನೆ ಎಂದು ಜೇಮ್ಸ್ ಅಂಡರ್ಸನ್ ಹೇಳಿದ್ದಾರೆ. ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂಗವಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನುಭವಿ ವೇಗಿ ಜೇಮ್ಸ್ ಅಂಡರ್ಸನ್, ಭಾರತ ಪಿಚ್ ಗಳಲ್ಲಿ ಬೌಲ್ ಮಾಡುವುದು ಕಠಿಣ ಸಂಗತಿ ಎಂದು ಹೇಳಿದ್ದಾರೆ. “ನಾನು ಜನರಿಗೆ ಉತ್ತಮ ಸಂದೇಶ ರವಾನಿಸುವ ಕೆಲಸ ಮಾಡಬೇಕಾಗಿದೆ. ನಮ್ಮ ತಂಡದಲ್ಲಿ ಭಾರತದ ಪಿಚ್ ಗಳಲ್ಲಿ ಇದೇ ಮೊದಲ ಬಾರಿ ಆಡುತ್ತಿರುವ ಬೌಲರ್ ಗಳೇ ಹೆಚ್ಚಾಗಿದ್ದಾರೆ. ಆದ್ದರಿಂದ ಅವರಿಗೆ ಇದೊಂದು ಕಠಿಣ ಸವಾಲಾಗಿದೆ. ನನ್ನ ಕೈಲಾದಷ್ಟು ಸಲಹೆ ಅವರಿಗೆ ನೀಡಲು ಬಯಸುತ್ತೇನೆ” ಎಂದು ಇಂಗ್ಲೆಂಡ್ ಅನುಭವಿ ವೇಗಿ ಹೇಳಿದ್ದಾರೆ. “ನಮ್ಮ ತಂಡದಲ್ಲಿ ಕೇವಲ 4 ಮಂದಿ ವೇಗದ ಬೌಲರ್ ಗಳು ಸ್ಥಾನ ಪಡೆದಿದ್ದಾರೆ. ಆದ್ದರಿಂದ ಅವರಿಂದ ಹೆಚ್ಚಿನ ಫಲಿತಾಂಶವನ್ನು ನಿರೀಕ್ಷಿಸಲು ಸಾಧ್ಯವಿಲ್ಲ.…
ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಫ್ಘಾನಿಸ್ಥಾನದ ವಿರುದ್ಧ ಭಾರತ ರೋಚಕ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ದಾಖಲೆಯ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಕೇವಲ 69 ಎಸೆತಗಳನ್ನು ಎದುರಿಸಿದ ರೋಹಿತ್ 11 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ 121 ರನ್ ಕಲೆಹಾಕಿದರು. ಈ ಮೂಲಕ ಅನೇಕ ದಾಖಲೆಗಳನ್ನು ರೋಹಿತ್ ಸೃಷ್ಟಿಸಿದರು ವಾಸ್ತವವಾಗಿ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಖಾತೆಯನ್ನೂ ತೆರೆಯದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದರು. ಈ ಮೂಲಕ ರೋಹಿತ್ ಶರ್ಮಾ, ಈ ಚುಟುಕು ಮಾದರಿಯಲ್ಲಿ ಕಿಂಗ್ ಕೊಹ್ಲಿಯ ದಾಖಲೆಯನ್ನೂ ಮುರಿದರು. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ನಾಯಕನಾಗಿ ಅಧಿಕ ರನ್ ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಇದುವರೆಗೆ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರು. ಇದೀಗ 54ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ, 44 ರನ್ ಕಲೆಹಾಕುತ್ತಿದ್ದಂತೆ ಅಧಿಕ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದರು.
ಫಸ್ಟ್ ಲುಕ್ ನಿಂದಾಗಿ ಸಖತ್ ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿರುವ ತಂಗಲಾನ್ (Tangalan) ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇದೇ ಏಪ್ರಿಲ್ ನಲ್ಲಿ ತಮ್ಮ ಚಿತ್ರವನ್ನು ವಿಶ್ವದಾದ್ಯಂತ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಚಿಯಾನ್ ವಿಕ್ರಮ್ (Vikram) ಹಾಗೂ ಪ.ರಂಜಿತ್ (Pa. Ranjith)ಕಾಂಬಿನೇಷನ್ ಚಿತ್ರವಿದು. ರಜನಿಕಾಂತ್ ಅಭಿನಯದ ಕಬಾಲಿ, ಕಾಲ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಪ. ರಂಜಿತ್ ಈ ಬಾರಿ ಕೋಲಾರ ಗೋಲ್ಡ್ ಫೀಲ್ಡ್ ಹಿನ್ನೆಲೆಯ ಕಥೆಯನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ವಿಕ್ರಮ್ ಜೊತೆಗೆ ಪಾರ್ವತಿ, ಮಾಳವಿಕಾ ಮೋಹನನ್, ಪಶುಪತಿ, ಹರಿಕೃಷ್ಣನ್, ಅನ್ಬುದುರೈ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಇದೆ. ಈ ಚಿತ್ರಕ್ಕೆ ಎ. ಕಿಶೋರ್ ಛಾಯಾಗ್ರಹಣ ಮಾಡುತ್ತಿದ್ದು, ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ಸಂಯೋಜಿಸುತ್ತಿದ್ದಾರೆ. ಪ. ರಂಜಿತ್ ಅವರೇ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದು ಅವರಿಗೆ ಬರವಣಿಗೆಯಲ್ಲಿ ತಮಿಳ್ ಪ್ರಭಾ ಸಹಾಯ ಮಾಡಿದ್ದಾರೆ. ಎಸ್.ಎಸ್. ಮೂರ್ತಿ ಕಲಾನಿರ್ದೇಶನ ಮತ್ತು ಆರ್.ಕೆ. ಸೆಲ್ವಾ ಅವರ ಸಂಕಲನವಿದೆ.
ಅಮೆರಿಕ: ಭಾರತೀಯ-ಅಮೆರಿಕನ್ ವಾಣಿಜ್ಯೋದ್ಯಮಿ ವಿವೇಕ್ ರಾಮಸ್ವಾಮಿ ಅವರು ಯುಎಸ್ ಅಧ್ಯಕ್ಷೀಯ (US Presidential Election) ರೇಸ್ನಿಂದ ಹೊರಗುಳಿದಿದ್ದಾರೆ. ಇದೇ ವರ್ಷ ಯುಎಸ್ ಅಧ್ಯಕ್ಷೀಯ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಅಯೋವಾ ರಿಪಬ್ಲಿಕನ್ ಸಭೆ ನಂತರ ಡೊನಾಲ್ಡ್ ಟ್ರಂಪ್ಗೆ (Donald Trump) ತಮ್ಮ ಬೆಂಬಲ ಘೋಷಿಸಿದ್ದಾರೆ. ರಾಮಸ್ವಾಮಿ ಅವರು ಫೆಬ್ರವರಿ 2023 ರಲ್ಲಿ ಯುಎಸ್ ಅಧ್ಯಕ್ಷೀಯ ಸ್ಥಾನಕ್ಕೆ ಸ್ಪರ್ಧಿ ಎನ್ನುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು. ತಮ್ಮ ನಿಲುವುಗಳ ಮೂಲಕ ರಿಪಬ್ಲಿಕನ್ ಮತದಾರರು ಮತ್ತು ಬೆಂಬಲಿಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಅವರ ಪ್ರಚಾರ ಕಾರ್ಯತಂತ್ರವು ಮಾಜಿ ಅಧ್ಯಕ್ಷ ಟ್ರಂಪ್ ಅವರ ನೀತಿಯನ್ನು ನಿಕಟವಾಗಿ ಪ್ರತಿಬಿಂಬಿಸುತ್ತದೆ. ಹಿಂದಿನ ಚುನಾವಣೆಗಳಲ್ಲಿ ಟ್ರಂಪ್ ಅವರನ್ನು ಯಶಸ್ಸಿನತ್ತ ಮುನ್ನಡೆಸಿದ್ದ ಸಂಪ್ರದಾಯವಾದಿ ವಲಯದ ಗಮನ ಸೆಳೆಯಲು ರಾಮಸ್ವಾಮಿ ಪ್ರಯತ್ನಿಸಿದ್ದರು. ಓಹಿಯೋ ಮೂಲದ ರಾಮಸ್ವಾಮಿ, ಕೇರಳದಿಂದ ವಲಸೆ ಹೋಗಿದ್ದ ಕುಟುಂಬವೊಂದರ ಪುತ್ರ. ಟ್ರಂಪ್ ಅವರ ಖ್ಯಾತಿಯಿಂದ ಹೆಚ್ಚು ಪ್ರಾಬಲ್ಯ ಹೊಂದಿರುವ ರಿಪಬ್ಲಿಕನ್ ಕ್ಷೇತ್ರದಲ್ಲಿ ಅನಿರೀಕ್ಷಿತ ಸ್ಪರ್ಧಿಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದರು. ಅಯೋವಾದಲ್ಲಿ ರಾಮಸ್ವಾಮಿ ಅವರ…
ಮೈಕ್ರೋಸಾಫ್ಟ್ ತನ್ನ ಕೃತಕ ಬುದ್ಧಿಮತ್ತೆ ಸಹಾಯಕವನ್ನು ಗ್ರಾಹಕರಿಗೆ ತೋರಿಸಲು ಮತ್ತೆ ಮುಂದಾಗಿದ್ದು ಹಾಗೆ ಹೊಸ ಸೇವೆಗಳಿಗೆ ಪಾವತಿಸುವ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವಾಗ ಸಣ್ಣ ಕಂಪನಿಗಳಿಗೆ ಕಾರ್ಪೊರೇಟ್ ಆವೃತ್ತಿಯನ್ನು ಲಭ್ಯವಾಗುವಂತೆ ಮಾಡುತ್ತಿದೆ. ಮೈಕ್ರೋಸಾಫ್ಟ್ ತಿಂಗಳಿಗೆ $20 (ಸುಮಾರು ರೂ. 1,659) Copilot ನ ಗ್ರಾಹಕ ಆವೃತ್ತಿಯನ್ನು ಮಾರಾಟ ಮಾಡುತ್ತಿದೆ, OpenAI ನ ಇತ್ತೀಚಿನ ChatGPT ತಂತ್ರಜ್ಞಾನ ಮತ್ತು ಇಮೇಜ್-ಸೃಷ್ಟಿ ವೈಶಿಷ್ಟ್ಯಗಳಿಗೆ ಪ್ರವೇಶವನ್ನು ಹೊಂದಿದೆ ಎಂದು Redmond, ವಾಷಿಂಗ್ಟನ್ ಮೂಲದ ಸಾಫ್ಟ್ವೇರ್ ದೈತ್ಯ ಹೇಳಿಕೆಯಲ್ಲಿ ತಿಳಿಸಿದೆ. ಆಫೀಸ್ಗೆ ಕ್ಲೌಡ್ ಚಂದಾದಾರಿಕೆ ಹೊಂದಿರುವ ಗ್ರಾಹಕರು ಪ್ರಶ್ನೆಗಳಿಗೆ ಉತ್ತರಿಸಲು, ಡೇಟಾವನ್ನು ಸಾರಾಂಶಗೊಳಿಸಲು ಮತ್ತು Word, Outlook, Excel ಮತ್ತು PowerPoint ನಲ್ಲಿ ವಿಷಯವನ್ನು ರಚಿಸಲು Copilot ಅನ್ನು ಬಳಸಲು ಸಾಧ್ಯವಾಗುತ್ತದೆ. ಪ್ರತಿ ಬಳಕೆದಾರರಿಗೆ $30 (ಸುಮಾರು ರೂ. 2,489) ಮಾಸಿಕ ಶುಲ್ಕಕ್ಕೆ ದೊಡ್ಡ ವ್ಯವಹಾರಗಳಿಗೆ ಇದೇ ರೀತಿಯ ಉತ್ಪನ್ನವನ್ನು ಮಾರಾಟ ಮಾಡುತ್ತಿರುವ ಕಂಪನಿಯು ತನ್ನ ಎಂಟರ್ಪ್ರೈಸ್ ಸೇವೆಗಾಗಿ ಕನಿಷ್ಠ 300-ಚಂದಾದಾರಿಕೆಯನ್ನು ತೊಡೆದುಹಾಕುತ್ತದೆ. OpenAI ಯಿಂದ ತಂತ್ರಜ್ಞಾನವನ್ನು…