Author: AIN Author

ಗದಗ: ಅಯೋಧ್ಯಾ ಶ್ರೀ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ದೇವಸ್ಥಾನಗಳ ಆವರಣಗಳನ್ನು ಸ್ವಚ್ಚಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಹಿನ್ನೆಲೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ 17 ನೇ ವಾರ್ಡಿನ ಹೆಸರೂರ ರಸ್ತೆಯ, ಆಶ್ರಯ ಕೊಲೋನಿಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣವನ್ನು ಬಿಜೆಪಿ ಮುಖಂಡರಾದ ಕರಬಸಪ್ಪ ಹಂಚಿನಾಳ ಅವರ ನೇತೃತ್ವದಲ್ಲಿ ಸ್ವಚ್ಛಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ಜನವರಿ 21 ರ ವರೆಗೆ ಎಲ್ಲೆಡೆ ದೇವಾಲಯಗಳನ್ನು ಸ್ವಚ್ಛಗೊಳಿಸಿ 22 ರಂದು ಪ್ರತಿ ಮನೆಗಳಲ್ಲಿ ರಾಮಜ್ಯೋತಿ ಬೆಳಗುವ ಮೂಲಕ ಶ್ರೀರಾಮನನ್ನು ಸ್ವಾಗತಿಸುವಂತೆ ಕರೆ ನೀಡಲಾಯಿತು. ಸ್ವಚ್ಚತಾ ಕಾರ್ಯದಲ್ಲಿ ಹಿಂದೂಪರ ಸಂಘಟನೆ ಹಾಗೂ ಬಿಜೆಪಿ ಮುಖಂಡರು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು

Read More

ಅಯೋಧ್ಯೆ: ಜನವರಿ 22ರಂದು ಭಗವಾನ್ ರಾಮ ನಮಗೆಲ್ಲರಿಗೂ ದರ್ಶನವನ್ನು ನೀಡಲಿದ್ದಾನೆ. ಅಯೋಧ್ಯೆಯ ರಾಮ ಮಂದಿರದ (Ayodhya RamMandir) ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ (Pran Prathistha Ceremony)  ನನ್ನನ್ನು ಆಹ್ವಾನಿಸಿರುವುದು ನನ್ನ ಅದೃಷ್ಟ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ (PM-JANMAN) ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (PMAY-G) ಫಲಾನುಭವಿಗಳನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಮೋದಿಯವರು ಮಾತನಾಡುತ್ತಾ ಈ ರೀತಿಯಾಗಿ ಹೇಳಿದ್ದಾರೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಇನ್ನೇನು ಕೆಲವು ದಿನಗಳ ನಂತರ ಅಂದರೆ ಜನವರಿ 22 ರಂದು ಭಗವಾನ್ ರಾಮನು ತನ್ನ ಭವ್ಯವಾದ ದೇವಾಲಯದಲ್ಲಿ ನಮಗೆ ದರ್ಶನವನ್ನು ನೀಡುತ್ತಾನೆ. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಮುಂಚಿತವಾಗಿ ನಾನು 11 ದಿನಗಳ ವಿಶೇಷ ಅನುಷ್ಠಾನವನ್ನು ಪ್ರಾರಂಭಿಸಿದ್ದೇನೆ. ಮಾತಾ ಶಬರಿ ಇಲ್ಲದೆ ಭಗವಾನ್ ರಾಮನ ಕಥೆ ಅಪೂರ್ಣ ಎಂದು ಪ್ರಧಾನಿ ತಿಳಿಸಿದರು.

Read More

ಬೆಂಗಳೂರು : ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ 3 ಪಂದ್ಯಗಳ ಟಿ-20 ಸರಣಿಯ ಅಂತಿಮ ಪಂದ್ಯ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲೆರಡು ಪಂದ್ಯಗಳನ್ನು ಗೆದ್ದು ಬೀಗಿರುವ ಭಾರತ ಮೂರನೇ ಪಂದ್ಯವನ್ನು ಗೆದ್ದು ಸರಣಿ ಕ್ಲೀನ್ ಸ್ವೀಪ್​ ಮಾಡುವ ನಿರೀಕ್ಷೆಯಲ್ಲಿದೆ. ಮತ್ತೊಂದೆಡೆ, ಅಫ್ಘಾನಿಸ್ತಾನ ಭಾರತದ ವಿರುದ್ಧ ಚೊಚ್ಚಲ ಟಿ-20 ಪಂದ್ಯ ಗೆಲ್ಲುವ ಕನಸು ಕಾಣುತ್ತಿದೆ. ಭಾರತ ತಂಡದ ಆಟಗಾರರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದರು. ಈ ವೇಳೆ, ಅಪಘಾತದಿಂದ ಒಂದು ವರ್ಷದಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದ ರಿಷಬ್ ಪಂತ್ ಕಾಣಿಸಿಕೊಂಡರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಂತ್ ಕೆಲವು ತಿಂಗಳುಗಳಿಂದ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಭಾರತ ತಂಡ ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಶಿವಂ ದುಬೆ, ಜಿತೇಶ್ ಶರ್ಮಾ (ವಿ.ಕೀ.), ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್,…

Read More

ಬೆಂಗಳೂರು ಗ್ರಾಮಾಂತರ:   ಇತ್ತೀಚಿಗೆ ಬೇರೆ ಮಕ್ಕಳನ್ನ ತಂದು ಭಿಕ್ಷಾಟನೆ ಮಾಡುವ ಬಗ್ಗೆ ಸಾಕಷ್ಟು ದೂರ ಕೇಳಿ ಬಂದಿತ್ತು ಅದಲ್ಲದೆ ತಮ್ಮದಲ್ಲದ ಮಕ್ಕಳನ್ನು ಕರೆತಂದು ಭಿಕ್ಷಾಟನೆ ಮಾಡುತ್ತಿದ್ದು ಈ ಬಗ್ಗೆ ಸಾರ್ವಜನಿಕರು ಪೊಲೀಸರಾಗಲಿ ಮಹಿಳಾ ಮತ್ತು ಮಕ್ಕಳ ಇಲಾಖೆಗೆ ದೂರು ನೀಡುವಂತೆ ಇನ್ಸ್ ಪೆಕ್ಟರ್ ಚಂದ್ರಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.. ಹೌದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೀದಿಬದಿ ಮತ್ತು ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ರಕ್ಷಣ ಕಾರ್ಯಾಚರಣೆ ವಿಚಾರವಾಗಿ ಆನೇಕಲ್ ತಾಲೂಕಿನ ಸಂತೆ ಬೀದಿಯಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಇನ್ನು ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಇಲಾಖೆ ಪೊಲೀಸ್ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಇನ್ಸ್ ಪೆಕ್ಟರ್ ಚಂದ್ರಪ್ಪ ರಸ್ತೆಯಲ್ಲಿ ಭಿಕ್ಷೆಯನ್ನು ಬೇಡುವ ಮಕ್ಕಳು ಸಾಮಾನ್ಯವಾಗಿ ಅವರದ್ದಲ್ಲ ಯಾರದೋ ಮಕ್ಕಳನ್ನು ತಂದು ಸಂತೆಗಳಲ್ಲಿ ಬೀದಿಗಳಲ್ಲಿ ಭಿಕ್ಷಾಟನೆಯನ್ನು ಮಾಡುತ್ತಿದ್ದಾರೆ ಹಾಗಾಗಿ ಸಾರ್ವಜನಿಕರು ಈ ಬಗ್ಗೆ ಗಮನಕ್ಕೆ ಬಂದರೆ ಪೊಲೀಸ್ ಇಲಾಖೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ…

Read More

ಬೆಳಗಾವಿ: ಕಾಂಗ್ರೆಸ್​​ನವರು ಬಿಜೆಪಿಯಿಂದ ಸಭ್ಯತೆ ಕಲಿಯುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಹೆಚ್​ ಎಂ ರೇವಣ್ಣ ಹೇಳಿದ್ದಾರೆ. ಕಾಂಗ್ರೆಸ್​​ನವರು ಸಭ್ಯತೆ ಕಲಿಯಲಿ ಎಂಬ ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ವಿಚಾರಕ್ಕೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘‘ಇದೇನು ಮೊದಲಲ್ಲ. ಈ ರಾಷ್ಟ್ರದಲ್ಲಿ ಅಂಬೇಡ್ಕರ್ ಅವರ ಸಂವಿಧಾನವನ್ನು ನಾವೆಲ್ಲರೂ ಅಪ್ಪಿ, ಒಪ್ಪಿ ಬಾಳುತ್ತಿದ್ದೇವೆ. ಆದರೆ, ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೇಳಿದ್ದ ಆ ವ್ಯಕ್ತಿ ಸಂಸ್ಕಾರವಂತರಾಗಿ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯವರು ಎಷ್ಟು ಜಾಣರು ಎಂದರೆ ಒಳ್ಳೆಯ ಮಗು ಹುಟ್ಟಿದರೆ ನಮ್ಮದು, ಕೆಟ್ಟ ಮುಗು ಹುಟ್ಟಿದರೆ ಬೀದಿಯದ್ದು ಎನ್ನುತ್ತಾರೆ‘‘ ಎಂದು ಲೇವಡಿ ಮಾಡಿದರು. ಟೀಕೆ ಮಾಡಲು ಇವರಿಗೆ ಒಳ್ಳೆಯ ಪದಗಳೇ ಸಿಗುವುದಿಲ್ಲ. ಹಿಂದೆ ಜೆ ಎಚ್‌ ಪಟೇಲರು ಸೇರಿ ಅನೇಕ ರಾಜಕಾರಣಿಗಳು ಬಹಳ ತೀಕ್ಷ್ಣವಾಗಿ ಟೀಕೆ ಮಾಡುತ್ತಿದ್ದರು. ಆದರೆ, ಬಿಜೆಪಿಯವರಿಗೆ ಪದಗಳು ಸಿಗುವುದಿಲ್ಲವೇ? ಈ ರೀತಿ ಮಾತಾಡುವುದು ಸಾರ್ವಜನಿಕವಾಗಿ ಒಳ್ಳೆಯದಲ್ಲ. ಬಿಜೆಪಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್​ ಎಂದು ಹೇಳುತ್ತಾರೆ. ಹಾಗಾದರೆ…

Read More

ಯಶ್ ಅವರ ಹುಟ್ಟು ಹಬ್ಬಕ್ಕಾಗಿ ರಾತ್ರಿ ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಅವಘಡದಲ್ಲಿ ಪ್ರಾಣ ಬಿಟ್ಟಿರುವ ಅಭಿಮಾನಿಗಳ ಮನೆಗೆ ಯಶ್ ತಂಡದವರು ಭೇಟಿ ಕೊಟ್ಟು ಪರಿಹಾರ ಧನ ನೀಡಲಿದ್ದಾರೆ. ಇಂದು ಬೆಳಗ್ಗೆ ಯಶ್ ಟೀಮ್ ಆಯಾ ಕುಟುಂಬಗಳಿಗೆ ಭೇಟಿ ಮಾಡಿ, ಪರಿಹಾರದ ಧನವನ್ನು ಹಸ್ತಾಂತರ ಮಾಡಲಿದ್ದಾರೆ. ಒಂದು ಕಡೆ ಯಶ್‍ ಪರಿಹಾರವನ್ನು ನೀಡುತ್ತಿದ್ದರೆ ಮತ್ತೊಂದು ಕಡೆ ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಸರ್ಕಾರಕ್ಕೆ ಒತ್ತಾಯವೊಂದನ್ನು ಮಾಡಿದ್ದಾರೆ. ಸರ್ಕಾರ ಘೋಷಿಸಿದ 2 ಲಕ್ಷ ರೂಪಾಯಿ ಪರಿಹಾರ ಸಾಕಾಗಲ್ಲ. ಹೀಗಾಗಿ ಮೂವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡುವಂತೆ ಲಕ್ಷ್ಮೇಶ್ವರ ಸೂರಣಗಿ (Suranagi Village) ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ. ಇಷ್ಟು ಮಾತ್ರವಲ್ಲದೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು. ಮುಂದೆ ಇಂತಹ ಅವಘಡಗಳು ಸಂಭವಿಸಬಾರದು. ಅಲ್ಲದೆ ಈ ಮೂವರ ಪುತ್ಥಳಿ ಮುಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂದು ಸೂರಣಗಿ ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.…

Read More

ತುಮಕೂರು :- ಬಳಿಯ ಹೀರೆಹಳ್ಳಿ ಸಮೀಪ ರಾಯರಪಾಳ್ಯ ಗ್ರಾಮದ ನಿವಾಸಿ ಪ್ರತಾಪ್ ಅವರ ಇಟ್ಟಿಗೆ ಗೂಡಿನ ಒಳಗೆ‌ ಅಡಗಿದ್ದ ಸುಮಾರು 8 ಅಡಿ ಉದ್ದದ ಹೆಬ್ಬಾವನ್ನು  ವಾರ್ಕೊ ಸಂಸ್ಥೆಯವರು ರಕ್ಷಣೆ ಮಾಡಿರುವುದು ನಡೆದಿದೆ. ಬೃಹತ್ ಗಾತ್ರದ ಹೆಬ್ಬಾವುನ್ನು ಕಂಡು ಭಯಭೀತರಾಗಿದ್ದ ಕೆಲಸದವರು ಮಾಲಿಕರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಪ್ರತಾಪ್ ರವರು ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯವರಿಗೆ (ವಾರ್ಕೊ) ಕರೆಮಾಡಿ ತಿಳಿಸಿದ್ದು ಸಂಸ್ಥೆಯ ಉರಗ ತಜ್ಞರಾದ ಮನು ಅಗ್ನಿವಂಶಿ, ಚೇತನ್ ಮತ್ತು ಸ್ಯಾಮ್ಯುಯೆಲ್ ರವರು ಸ್ಥಳಕ್ಕೆ ಆಗಮಿಸಿ ಬೃಹತ್ ಗಾತ್ರದ ಹೆಬ್ಬಾವನ್ನು  ಸುರಕ್ಷಿತವಾಗಿ ರಕ್ಷಿಸಿ ವಲಯ ಅರಣ್ಯಾಧಿಕಾರಿ ಮಾರ್ಗದರ್ಶನದಂತೆ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಹಾವುಗಳ ರಕ್ಷಣೆ ಮಾಡಲು ವಾರ್ಕೊ ಸಂಸ್ಥೆಯ ಸಹಾಯವಾಣಿಗೆ ಕರೆಮಾಡಬಹುದು ಎಂದು ಉರಗ ತಜ್ಞ ಮನು  ತಿಳಿಸಿದರು.

Read More

ಶ್ರೀ ರಾಮನ ಜಪಕ್ಕೆ ಕರೆ ಕೊಟ್ಟಿದ್ದ ಖ್ಯಾತ ಗಾಯಕಿ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ. ಜ.22ರಂದು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ರಾಮ ನಾಮ ಭಜನೆ ಮಾಡಿ ಎಂದು ವಿಡಿಯೋ ಸಂದೇಶ ನೀಡಿದ್ದ ಖ್ಯಾತ ಹಿನ್ನೆಲೆ ಗಾಯಕಿ, ರಾಷ್ಟ್ರ ಪ್ರಶಸ್ತಿ ವಿಜೇತರು ಕೆ.ಎಸ್. ಚಿತ್ರಾ ಅವರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಪರ ಮತ್ತು ವಿರೋಧದ ಚರ್ಚೆ ಶುರುವಾಗಿದೆ. ಗಾಯಕಿ ಚಿತ್ರಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪುಟ್ಟದೊಂದು ವಿಡಿಯೋ ಅಪ್‌ಡೇಟ್ ಮಾಡಿದ್ದರು. ಅಯೋಧ್ಯೆಯ ಶ್ರೀರಾಮ ಮಂದಿರದ ಗರ್ಭ ಗೃಹದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಆಗುವ ಹೊತ್ತಲ್ಲಿ ಎಲ್ಲರೂ ರಾಮ ನಾಮ ಭಜಿಸಿ ಧ್ಯಾನ ಮಾಡುವ ಮೂಲಕ ಭಗವಂತನ ಕೃಪೆಗೆ ಪಾತ್ರರಾಗುವಂತೆ ಕೋರಿದ್ದರು. ಜೊತೆಗೆ 5 ದೀಪಗಳನ್ನು ಹಚ್ಚಿಡಬೇಕು ಎಂದು ಗಾಯಕಿ ಚಿತ್ರಾ ಅವರು ಕರೆ ನೀಡಿದ್ದರು. ಈ ವಿಡಿಯೋ ಇದೀಗ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿದೆ. ಈ ವಿಡಿಯೋ ಅಪ್‌ಲೋಡ್ ಆದ ಕೆಲವೇ ಗಂಟೆಗಳಲ್ಲಿ…

Read More

ಹುಬ್ಬಳ್ಳಿ: ವಿದ್ಯಾರ್ಥಿಗಳು ವಿದ್ಯಾರ್ಥಿ ದಸೆಯಿಂದಲೇ ಸಂಚಾರ ನಿಯಮಗಳನ್ನು ಪಾಲಿಸಬೇಕು. ಸಂಚಾರ ನಿಯಮ ಪಾಲನೆಯಿಂದ ಬದುಕಿಗೆ ಒಳಿತು ಎಂದು ರೋಟರಿಯನ್ ಪ್ರವೀಣ ಬನ್ಸಾಲಿ ಸಲಹೆ ನೀಡಿದರು. ನಗರದ ಅಂತಾರಾಷ್ಟ್ರೀಯ ರೋಟರಿ ರೋಟರಿ ಸರಸ್ವತಿ ಶಾಲೆಯಲ್ಲಿ ರೋಟರಿ ಇಂಟರಾಕ್ಟ್ ಕ್ಲಬ್ ರೋಟರಿ ಕ್ಲಬ್ ಆಫ್ ಮಿಡ್ ಟೌನ್, ಯುವ ಭಾರತ ಸಂಘಟನೆ ಸಹಯೋಗದೊಂದಿಗೆ ಮಂಗಳವಾರ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ವಿದ್ಯಾರ್ಥಿಗಳಿಗೆ ಸಂಚಾರ ನಿಯಮ ಕುರಿತು ಜಾಗೃತಿ ಶಿಬಿರದಲ್ಲಿ ಅವರು ಮಾತನಾಡಿದರು. ಶಾಲೆಯ ಅಧ್ಯಕ್ಷ ಹಾಗೂ ರೋಟರಿಯನ್ ಲಿಂಗರಾಜ ಪಾಟೀಲ್, ರೋಟರಿಯನ್ ಶಿವಪ್ರಸಾದ್ ಲಕಮನಹಳ್ಳಿ,ಎನ್. ಡಾ. ಶಿವಾನಂದ್, ಡಾ. ಮುದುಕನಗೌಡ, ಡಾ.ವಸಂತಪಾಟೀಲ್,ಪ್ರಾಂಶುಪಾಲರಾದ ಶ್ರೀಮತಿ. ಕೀರ್ತಿ ದೇಶಪಾಂಡೆ , ಇಂಟರ್ ಯಾಕ್ಟ್ ಕ್ಲಬ್ ಅಧ್ಯಕ್ಷೆ ಸಮಿತಾ ರೇವಣಕರ ಮತ್ತು ಅನುಕ್ಸಾ ರಾವ್, ಭರತ ಪ್ರದೀಪ್, ರೋಹನ್ ಹೆಬಸೂರು ಮುಂತಾದವರು ಉಪಸ್ಥಿತರಿದ್ದರು

Read More

ಬೆಂಗಳೂರು:- ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ಮಧ್ಯರಾತ್ರಿಯಿಂದಲೇ ಲಾರಿ ಸಂಘಟನೆಗಳು ಮುಷ್ಕರ ಕೈಗೊಳ್ಳಲಿದ್ದಾರೆ. ಮುಷ್ಕರ ಹಿನ್ನೆಲೆ 2 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ.ಕರ್ನಾಟಕ ಲಾರಿ ಮಾಲೀಕರ ಸಂಘದಿಂದಲೂ ಮಷ್ಕರಕ್ಕೆ ಬೆಂಬಲ ಸಿಕ್ಕಿದೆ. ಇತ್ತ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಇನ್ನು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಹಿಟ್ ಅ್ಯಂಡ್ ರನ್ ಪ್ರಕರಣಗಳಿಗೆ ಕಠಿಣ ಕಾನೂನುಗಳ ವಿರುದ್ಧ ಪ್ರತಿಭಟಿಸಲು ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೊಸ ಕಾನೂನು ಪ್ರಕಾರ, ರಸ್ತೆಯಲ್ಲಿ ಚಲಿಸುವಾಗ ಲಾರಿಗಳಿಗೆ ಯಾರಾದರೂ ಬಂದು ಅಕಸ್ಮಾತಾಗಿ ಡಿಕ್ಕಿ ಹೊಡೆದರೆ, ಹಾಗೂ ನಮ್ಮ ಚಾಲಕರು ವಾಹನದಲ್ಲಿ ಏನಾದರೂ ತೊಂದರೆ ಉಂಟಾಗಿ ಎದುರಿನ ವಾಹನಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ ಪ್ರಯಾಣಿಕರು ಮೃತಪಟ್ಟರೆ ಲಾರಿ ಚಾಲಕರಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ.ವರೆಗೆ ದಂಡ ಪಾವತಿಸಬೇಕಾದ ಹಿನ್ನೆಲೆ, ಕಾನೂನು…

Read More