Author: AIN Author

ಬೆಂಗಳೂರು:- ಮಹಿಳಾ‌ ಟ್ರಾಫಿಕ್ ಪೊಲೀಸ್ ಪೇದೆಗೆ ವ್ಯಕ್ತಿಯೋರ್ವ ರಸ್ತೆಯಲ್ಲಿಯೇ ಅವಾಜ್ ಹಾಕಿರುವ ಘಟನೆ ಹುಳಿಮಾವು ಬಳಿಯ ಸಾಯಿ ಗಾರ್ಮೆಂಟ್ಸ್ ಬಳಿಯಲ್ಲಿ ಜರುಗಿದೆ. https://ainlivenews.com/do-you-know-how-many-times-a-day-you-should-charge-your-phone-you-should-know/ ನಿನ್ನೆ ಮದ್ಯಾಹ್ನ ಈ ಘಟನೆ ನಡೆದಿದ್ದು, ತಡರಾತ್ರಿ ಬೆಳಕಿಗೆ ಬಂದಿದೆ. ಸಿಗ್ನಲ್ ಜಂಪ್ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ರಸ್ತೆಯಲ್ಲಿಯೇ ಕಾರು ನಿಲ್ಲಿಸಿ ಅವಾಜ್ ಹಾಕಿದ್ದಾನೆ. ಅವಾಜ್ ಹಾಕಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಾಗಿದ್ದು, ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. KA 51 MW 2390 ಕಾರಿನಲ್ಲಿ ವ್ಯಕ್ತಿ ಪ್ರಯಾಣಿಸುತ್ತಿದ್ದ. ಆಗ ಸಿಗ್ನಲ್ ಜಂಪ್ ಮಾಡಿದಕ್ಕೆ ಮಹಿಳಾ ಟ್ರಾಫಿಕ್ ಪೇದೆ ಪ್ರಶ್ನೆ ಮಾಡಿದ್ದಾಳೆ ಇದಕ್ಕೆ ವ್ಯಕ್ತಿ ಆವಾಜ್ ಹಾಕಿದ್ದಾನೆ.

Read More

ಸ್ಮಾರ್ಟ್‌ಫೋನ್‌ಗೆ ಅದರ ಬ್ಯಾಟರಿಯೇ ಜೀವಾಳ. ಅತ್ಯುತ್ತಮ ಬ್ಯಾಟರಿ ಬಾಳಿಕೆ ಇದ್ದರೇ ಸ್ಮಾರ್ಟ್‌ಫೋನ್ ಹೆಚ್ಚು ಸಮಯ ಬಳಕೆ ಬರುತ್ತದೆ. ಈ ನಿಟ್ಟಿನಲ್ಲಿ ಮೊಬೈಲ್ ಕಂಪನಿಗಳು ಅಧಿಕ ಬ್ಯಾಟರಿ ಲೈಫ್ ಸಾಮರ್ಥ್ಯದಲ್ಲಿ ಸ್ಮಾರ್ಟ್‌ಫೋನ್‌ಗಳು ಪರಿಚಯಿಸುತ್ತಿವೆ. ಈಗಂತು ಮಾರ್ಕೆಟ್ ನಲ್ಲಿ 4000mAh ಯಿಂದ ಹಿಡಿದು 7000mAh ವರೆಗಿನ ಸಾಮರ್ಥ್ಯದ ಬ್ಯಾಟರಿ ಫೋನುಗಳು ಚಾಲ್ತಿಯಲ್ಲಿವೆ. ಹಾಗೆಯೇ ಬ್ಯಾಟರಿ ವೇಗವಾಗ ಭರ್ತಿಯಾಗಲಿ ಅಂತಾ ಫಾಸ್ಟ್‌ ಚಾರ್ಜರ್‌ ಸೌಲಭ್ಯವನ್ನು ನೀಡುತ್ತಿವೆ. https://ainlivenews.com/renukaswamys-murdered-sons-naming-do-you-know-the-name/ ಜನರು ಸಾಮಾನ್ಯವಾಗಿ ಕಡಿಮೆ ಬ್ಯಾಟರಿ ಇದ್ದಾಗ ಫೋನ್ ಅನ್ನು ಚಾರ್ಜ್ ಮಾಡಲು ಮುಂದಾಗುತ್ತಾರೆ. ಹಾಗಾದರೆ ಫೋನ್ ಅನ್ನು ದಿನಕ್ಕೆ ಎಷ್ಟು ಬಾರಿ ಚಾರ್ಜ್ ಮಾಡಬೇಕು?. ಚಾರ್ಜಿಂಗ್ ವಿಷಯಕ್ಕೆ ಬಂದರೆ, ತಮ್ಮ ಫೋನ್​ನಲ್ಲಿ ಬ್ಯಾಟರಿ ಸ್ವಲ್ಪ ಖಾಲಿಯಾದ ತಕ್ಷಣ ಅದನ್ನು ಚಾರ್ಜಿಂಗ್‌ಗೆ ಹಾಕುವುದನ್ನು ನಾವು ನಮ್ಮ ಸುತ್ತಲೂ ನೋಡುತ್ತೇವೆ. ಅಲ್ಲದೆ, ಫೋನ್ ಅನ್ನು ಚಾರ್ಜಿಂಗ್ ಮಾಡಿದ ಸ್ವಲ್ಪ ಸಮಯದ ನಂತರ ಮತ್ತೆ ಹೊರತೆಗೆಯುವವರೂ ಅನೇಕರಿದ್ದಾರೆ. ನಿಮಗೂ ಈ ಅಭ್ಯಾಸವಿದ್ದರೆ ನಿಮ್ಮ ಫೋನ್ ಬೇಗ ಕೆಟ್ಟು ಹೋಗಬಹುದು. ಫೋನ್ ಅನ್ನು…

Read More

ಬೆಂಗಳೂರು:- ಕರ್ನಾಟಕದಲ್ಲಿ ಕೊಬ್ಬರಿ ಎಣ್ಣೆ ದರ ದಿಢೀರ್ ಏರಿಕೆ ಆಗಿದ್ದು, ಜನಸಾಮಾನ್ಯರು ಕಂಗಾಲಾಗಿದ್ದಾರೆ. https://ainlivenews.com/are-you-also-eating-beetroot-be-careful-it-wont-harm-this-organ/ ಕೊಬ್ಬರಿ ಎಣ್ಣೆ ದರ ಲೀಟರ್‌ಗೆ 300 ರೂ. ಗಡಿ ದಾಟಿದೆ. ಎಳನೀರು ಯಥೇಚ್ಛವಾಗಿ ಮಾರಾಟವಾಗುತ್ತಿರುವ ಕಾರಣ ಕೊಬ್ಬರಿ ಬೇಡಿಕೆ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಇದರ ನೇರ ಪರಿಣಾಮ ತೆಂಗಿನ ಎಣ್ಣೆಯ ಮೇಲೆ ಬಿದ್ದಿದೆ. 15 ಕೆಜಿ ಟಿನ್ ಕೊಬ್ಬರಿ ಎಣ್ಣೆ ದರ 4,600 ರೂಪಾಯಿ ಆಗಿದೆ. ಸಾಧಾರಣವಾಗಿ ಮಾರ್ಚ್‌ ಮಧ್ಯಭಾಗದಿಂದ ರಾಜ್ಯದಲ್ಲಿ ಬಿಸಿಲು ಹೆಚ್ಚಾಗುತ್ತದೆ. ಆದರೆ ಈ ಬಾರಿ ಫೆಬ್ರವರಿ ಕೊನೆಯಿಂದಲೇ ಉಷ್ಣಾಂಶ ಏರಿಕೆಯಾಗುತ್ತಿದ್ದು ಎಳೆನೀರಿಗೆ ಹೆಚ್ಚು ಬಳಕೆಯಾಗುತ್ತಿವೆ. ಇದರ ಜೊತೆ ಕೊಬ್ಬರಿಯ ದರವೂ ಏರಿಕೆಯಾಗಿದೆ. ಇನ್ನು ಸನ್ ಫ್ಲವರ್, ಪಾಮ್ ಆಯಿಲ್, ಕಡಲೇಕಾಯಿ ಎಣ್ಣೆ, ಅರಳೆಎಣ್ಣೆ ಹಾಗೂ ಸಾಸಿವೆ ಎಣ್ಣೆ ಕೂಡ 10-20 ರೂ. ರೂ. ಹೆಚ್ಚಾಗಿದೆ.

Read More

ಆರೋಗ್ಯವಾಗಿರಲು ಎಲ್ಲ ರೀತಿಯ ತರಕಾರಿಗಳನ್ನು ಸೇವಿಸಬೇಕು.. ಆದರೆ ಕೆಲವು ಕಾಯಿಲೆಗಳನ್ನು ಹೊಂದಿರುವವರು ತಮ್ಮ ಆಹಾದಲ್ಲಿಯೇ ಸುಧಾರಣೆ ಮಾಡಿಕೊಳ್ಳಬೇಕಾಗುತ್ತದೆ.. ಅಂತಹವರಿಗೆ ಕೆಲ ತರಕಾರಿ ಹಾಗೂ ಹಣ್ಣುಗಳು ದೇಹದ ಮೇಲೆ ಪರಿಣಾಮ ಬೀರುತ್ತವೆ.. ಅದರಲ್ಲಿ ಬೀಟ್ರೂಟ್‌ ಕೂಡ ಒಂದು.. https://ainlivenews.com/eat-this-fruit-to-keep-your-blood-sugar-normal-results-guaranteed/ ಬೀಟ್ರೂಟ್ ಆರೋಗ್ಯಕ್ಕೆ ಒಳ್ಳೆಯದು. ಅನೇಕ ಜನರು ಇದನ್ನು ಜ್ಯೂಸ್ ಆಗಿ ಅಥವಾ ಸಲಾಡ್‌ಗಳಲ್ಲಿ ಸೇವಿಸುತ್ತಾರೆ. ಕೆಲವು ಜನರಿಗೆ, ಬೀಟ್ರೂಟ್ ವಿಷದಂತೆ ವರ್ತಿಸುತ್ತದೆ. ಹೀಗಾಗಿ ಅಂತವರು ಹೆಚ್ಚು ಬೀಟ್ರೂಟ್ ಸೇವಿಸಿದರೆ, ಅವರ ಈ ಒಂದು ಅಂಗಕ್ಕೆ ಹಾನಿಯಾಗುವ ಸಾಧ್ಯತೆಯಿದೆ. ಚಳಿ ಕಡಿಮೆಯಾಗಿ ಬಿಸಿಲಿನ ಪ್ರಮಾಣ ಹೆಚ್ಚಾದಂತೆ, ಆಹಾರ ಮತ್ತು ಪಾನೀಯಗಳ ಬಗ್ಗೆ ಜನರ ಮನಸ್ಸಿನಲ್ಲಿ ಹಲವು ಪ್ರಶ್ನೆಗಳು ಉದ್ಭವಿಸುತ್ತಿವೆ. ಆರೋಗ್ಯವಾಗಿರಲು ಯಾವ ಆಹಾರವನ್ನು ಯಾವ ಪ್ರಮಾಣದಲ್ಲಿ ಸೇವಿಸಬೇಕು ಎಂಬುದು ಕಾಡುತ್ತದೆ. ಬೀಟ್ರೂಟ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವು ಪೋಷಕಾಂಶಗಳಿವೆ. ಅದಕ್ಕಾಗಿಯೇ ಅನೇಕ ಜನರು ಬೆಳಿಗ್ಗೆ ಬೀಟ್ರೂಟ್ ರಸವನ್ನು ಕುಡಿಯುತ್ತಾರೆ. ಬೀಟ್‌ರೂಟ್‌ನಲ್ಲಿ ಫೈಬರ್, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ವಿಟಮಿನ್ ಬಿ6 ನಂತಹ ಅನೇಕ ಪೋಷಕಾಂಶಗಳು…

Read More

ಮನುಷ್ಯನನ್ನು ಹೆಚ್ಚು ಬಾಧಿಸುವ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹವನ್ನು ಸಕ್ಕರೆ ಕಾಯಿಲೆ ಎಂದು ಕರೆಯಲಾಗುತ್ತದೆ. ಒಮ್ಮೆ ಈ ಕಾಯಿಲೆ ಆರಂಭವಾದರೆ ಜೀವನಪರ್ಯಂತ ಔಷಧ ತೆಗೆದುಕೊಳ್ಳಲೇಬೇಕೆಂದು ಹೇಳಲಾಗುತ್ತದೆ. ಇರಿಸಲು ಔಷಧ ಸೇವನೆ ಇಲ್ಲದೇ ಮಧುಮೇಹವನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ. https://ainlivenews.com/champions-trophy-2025-india-bowl-after-losing-the-toss-pakistan-bat-after-winning-the-toss/ ಹಲವಾರು ಜನರಲ್ಲಿ ಕಾಡುವ ಪ್ರಶ್ನೆಯೆಂದರೇ ಮಧುಮೇಹ ರೋಗಿಗಳು ಕಿತ್ತಳೆ ಹಣ್ಣನ್ನು ತಿನ್ನಬೇಕು ಅಥವಾ ತಿನ್ನಬಾರದು? ಆದರೆ ಅದರಲ್ಲಿ ಎರಡು ವಿಧಗಳಿವೆ. ಒಂದು ಹುಳಿ ಕಿತ್ತಳೆ ಮತ್ತು ಇನ್ನೊಂದು ಸಿಹಿ ಕಿತ್ತಳೆ. ಹುಳಿ ಕಿತ್ತಳೆಯಲ್ಲಿ ನೀರು ಅಧಿಕವಾಗಿರುತ್ತದೆ. ಮಳೆಗಾಲದಲ್ಲಿ ಇವು ಕಡಿಮೆ ಲಭ್ಯ.. ಸಿಹಿ ಕಿತ್ತಳೆಗಳು ಬೇಸಿಗೆಯಲ್ಲಿ ಬರುತ್ತವೆ. ಇವುಗಳಲ್ಲಿ ನೀರಿನಂಶ ಕಡಿಮೆ.. ಇದು ದೇಹಕ್ಕೆ ಒಳ್ಳೆಯದು. ನಿಂಬೆ, ನಿಂಬೆ ಮತ್ತು ಕಿತ್ತಳೆ ಒಂದೇ ಜಾತಿಯ ಹಣ್ಣುಗಳು. ಅವುಗಳ ಗುಣಲಕ್ಷಣಗಳು ಬಹುತೇಕ ಒಂದೇ ಆಗಿರುತ್ತವೆ. ಆದರೆ ಇದೀಗ ಮಧುಮೇಹಿಗಳಿಗೆ ಕಿತ್ತಳೆ ಹಣ್ಣು ಎಷ್ಟು ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳೋಣ.. ವೈದ್ಯಕೀಯ ತಜ್ಞರ ಪ್ರಕಾರ, ಕಿತ್ತಳೆ ಕಡಿಮೆ ಗ್ಲೈಸೆಮಿಕ್…

Read More

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚಾಂಪಿಯನ್ ಟ್ರೋಫಿಯಲ್ಲಿ ಇಂದು ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿ ಆಗಿದ್ದಾವೆ. https://ainlivenews.com/indo-pak-high-voltage-match-special-puja-for-indias-victory/ ಮೊದಲಿಗೆ ಟಾಸ್‌ ಗೆದ್ದ ಮೊಹಮ್ಮದ್‌ ರಿಜ್ವಾನ್‌ ನಾಯಕತ್ವದ ಪಾಕ್‌ ತಂಡ ಬ್ಯಾಟಿಂಗ್‌ ಆಯ್ದುಕೊಂಡಿದೆ. ಇನ್ನೂ ಸತತ 12ನೇ ಬಾರಿಗೆ ಟಾಸ್‌ ಸೋತ ಭಾರತ ಫೀಲ್ಡಿಂಗ್‌ಗೆ ಇಳಿಯಲು ಮುಂದಾಗಿದೆ. ಭಾರತ ಮತ್ತು ಪಾಕಿಸ್ತಾನ್ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 135 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ ಗೆದ್ದಿರುವುದಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಪಾಕಿಸ್ತಾನ್ ತಂಡವೇ ಗೆದ್ದಿದೆ. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲೂ ಭಾರತದ ವಿರುದ್ಧ ಪಾಕ್ ಪಡೆ ಹೆಚ್ಚಿನ ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಅಂದರೆ 135 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಕೇವಲ 57 ಮ್ಯಾಚ್​ಗಳಲ್ಲಿ ಮಾತ್ರ ಗೆದ್ದರೆ, ಅತ್ತ ಪಾಕಿಸ್ತಾನ್ 73 ಪಂದ್ಯಗಳಲ್ಲಿ ಭಾರತ ತಂಡಕ್ಕೆ ಸೋಲುಣಿಸಿದೆ. ಇನ್ನು ಐದು ಪಂದ್ಯಗಳು ಫಲಿತಾಂಶರಹಿತವಾಗಿತ್ತು. ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಕೊನೆಯ ಐದು ಏಕದಿನ ಪಂದ್ಯಗಳ ಫಲಿತಾಂಶವನ್ನು ಮಾತ್ರ ಗಣನೆಗೆ ತೆಗೆದುಕೊಂಡರೆ ಟೀಮ್ ಇಂಡಿಯಾವೇ…

Read More

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainlivenews.com/take-a-digital-kumbh-mela-bath-for-rs-1100-this-is-all-you-need-to-do/ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಗರಿಷ್ಠ ತಾಪಮಾನ ಕರಾವಳಿಯಲ್ಲಿ 33-35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬೀದರ್, ವಿಜಯಪುರ, ಧಾರವಾಡ, ಕೊಪ್ಪಳ, ರಾಯಚೂರು, ಹಾವೇರಿಯಲ್ಲಿ 33-35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಲಬುರಗಿ, ಬಾಗಲಕೋಟೆ ಮತ್ತು ಗದಗದಲ್ಲಿ 36-38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನವು ಕರಾವಳಿಯಲ್ಲಿ 25-26 ಡಿಗ್ರಿ ಸೆಲ್ಸಿಯಸ್​ನಷ್ಟಿದೆ, ಬೀದರ್, ಧಾರವಾಡದಲ್ಲಿ 17-19 ಡಿಗ್ರಿ ಸೆಲ್ಸಿಯಸ್, ವಿಜಯಪುರ, ಬೆಳಗಾವಿ, ಗದಗ, ಬಾಗಲಕೋಟೆ, ಚಿಂತಾಮಣಿ, ಹಾವೇರಿ, ಕೊಪ್ಪಳ, ಮಂಡ್ಯ, ಚಿತ್ರದುರ್ಗ, ಹಾಸನ, ಮಡಿಕೇರಿ, ಶಿವಮೊಗ್ಗದಲ್ಲಿ 17-20 ಡಿಗ್ರಿ ಸೆಲ್ಸಿಯಸ್​ನಷ್ಟಿದೆ.…

Read More

ಪ್ರಯಾಗ್‌ರಾಜ್: ವಿಶ್ವದ ಉದ್ದಗಲಕ್ಕೂ ಇರುವ ಆಸ್ತಿಕ ಶ್ರದ್ದಾಳುಗಳು, ಹಿಂದೂಗಳು, ಪ್ರವಾಸಿಗರು, ಕುತೂಹಲಿಗಳು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡುತ್ತಿದ್ದಾರೆ. ಈ ನಡುವೆ, ಇನ್ನೂ ಅನೇಕರಿಗೆ ಮಹಾಕುಂಭ ಮೇಳಕ್ಕೆ ನಾನಾ ಕಾರಣಗಳಿಂದಾಗಿ ಹೋಗುವುದು ಸಾಧ್ಯವಾಗಿಲ್ಲ, ಸಾಧ್ಯವಾಗುವುದಿಲ್ಲ. ನಿತ್ಯವೂ ಕೋಟ್ಯಂತರ ಜನರು ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ಪವಿತ್ರ ಸ್ನಾನ ಮಾಡುತ್ತಿದ್ದು, ವಿಮಾನ, ರೈಲು, ಬಸ್‌ ಪ್ರಯಾಣ ದುಬಾರಿಯಾಗಿದೆ. ಜನದಟ್ಟಣೆಯೂ ಹೆಚ್ಚಾಗಿದೆ. https://ainlivenews.com/blackmailing-government-officials-fake-lok-adhikari-arrested/ ಇನ್ನೂ ಮಹಾ ಕುಂಭಮೇಳದಲ್ಲಿ 60 ಕೋಟಿಗೂ ಹೆಚ್ಚು ಜನ ಪುಣ್ಯ ಸ್ನಾನ ಮಾಡಿದ್ದಾರೆ. ಆದರೆ ಹಲವರು ಕುಂಭ ಸ್ನಾನದಿಂದ ವಂಚಿತರಾಗಿದ್ದು, ಅಂಥವರಿಗಾಗಿ ವ್ಯಕ್ತಿಯೊಬ್ಬ ಡಿಜಿಟಲ್ ಸ್ನಾನ ಎನ್ನುವ ಹೊಸ ಐಡಿಯಾ ಪರಿಚಯಿಸಿದ್ದಾರೆ. ನೀವು ₹1100 ಕೊಟ್ಟು ವಾಟ್ಸಾಪ್ ಮೂಲಕ ಫೋಟೊ ಕಳುಹಿಸಿದರೆ ಈ ವ್ಯಕ್ತಿ ಅದರ ಪ್ರಿಂಟ್ ತೆಗೆದು ತ್ರಿವೇಣಿ ಸಂಗಮದಲ್ಲಿ ಭಾವಚಿತ್ರವನ್ನು ಮುಳುಗಿಸಿ ಪವಿತ್ರ ಸ್ನಾನ ಮಾಡಿಸುತ್ತಾನಂತೆ. ಪ್ರಯಾಗ್ ಎಂಟರ್‌ಪ್ರೈಸೆಸ್‌ ಹೆಸರಿನ ಇದು ತನ್ನ ಹೊಸ ಸ್ಟಾರ್ಟಪ್ ಅಂತ ಕೂಡ ಹೇಳಿಕೊಂಡಿದ್ದಾನೆ. ಕುಂಭಮೇಳದಲ್ಲಿ ವ್ಯಕ್ತಿಯೊಬ್ಬರು ‘ಡಿಜಿಟಲ್ ಫೋಟೋ…

Read More

ಬೆಂಗಳೂರು:- ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ನಕಲಿ ಲೋಕಾ ಅಧಿಕಾರಿಯನ್ನು ಅರೆಸ್ಟ್ ಮಾಡಲಾಗಿದೆ. https://ainlivenews.com/mela-of-fruits-in-koppala-the-worlds-most-expensive-grape-caught-the-attention/ ಮುರುಗಪ್ಪ ಬಂಧಿತ ಆರೋಪಿ. ಮುರುಗೆಪ್ಪ ವಿರುದ್ಧ ರಾಜ್ಯದ ವಿವಿಧ ಠಾಣೆಯಲ್ಲಿ 60ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಆರೋಪಿ ಮುರುಗಪ್ಪ ಲೋಕಾಯುಕ್ತ ಹೆಸರಿನಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್​ಮೇಲ್​ ಮಾಡಿ ಹಣ ಸುಲಿಗೆ ಮಾಡುತ್ತಿದ್ದನು. ಲೋಕಾಯುಕ್ತ ಡಿವೈಎಸ್​ಪಿ ಬಸವರಾಜು ಆರ್. ಮಗದಮ್ ನೀಡಿದ ದೂರಿನ ಆಧಾರದ ಮೇಲೆ ವಿಧಾನಸೌಧ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಆರೋಪಿ ಮುರುಗಪ್ಪ ಅಪರಿಚಿತ ನಂಬರ್​ನಿಂದ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ, ಲೋಕಾಯುಕ್ತ ಡಿವೈಎಸ್​ಪಿ ಅಂತ ಪರಿಚಯ ಮಾಡಿಕೊಳ್ಳುತ್ತಿದ್ದನು. ನಿಮ್ಮ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ ಹಾಕಲಾಗುತ್ತಿದೆ ಅಂತ ಬೆದರಿಕೆ ಹಾಕುತ್ತಿದ್ದನು. ನಿಮ್ಮ ವಿರುದ್ಧ ಪ್ರಕರಣ ದಾಖಲಿಸಬಾರದು ಎಂದರೇ ಹಣ ನೀಡಿ ಅಂತ ಡಿಮ್ಯಾಂಡ್ ಮಾಡುತ್ತಿದ್ದನು. ಇದೇ ರೀತಿ ಮುರುಗಪ್ಪ ಹಲವು ಸರ್ಕಾರಿ ಅಧಿಕಾರಿಗಳ ಬೆದರಿಸಿ‌ ಹಣ ವಸೂಲಿ ಮಾಡಿದ್ದನು. ಇನ್ನು, ಬ್ಲ್ಯಾಕ್​ಮೇಲ್ ಆರೋಪದ ಮೇಲೆ ಮುರುಗಪ್ಪ ಹಲವು ಬಾರಿ ಜೈಲು ಸೇರಿದ್ದನು. ಬಿಡುಗಡೆಯಾದ ಬಳಿಕ…

Read More

ಟೀಂ ಇಂಡಿಯಾದ ಸ್ಪಿನ್ನರ್ ಯುಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ವರ್ಮಾ ಅವರ ನಾಲ್ಕು ವರ್ಷಗಳ ದಾಂಪತ್ಯ ಜೀವನ ಮುರಿದು ಬಿದ್ದಿದ್ದು, ಬಾಂದ್ರಾ ಕೌಟುಂಬಿಕ ನ್ಯಾಯಾಲಯದಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ಇಬ್ಬರೂ ಮುಂಬೈನ ಕೌಟುಂಬಿಕ ನ್ಯಾಯಾಲಯದಲ್ಲಿ ಅಂತಿಮ ವಿಚ್ಛೇದನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ. ಯುಜುವೇಂದ್ರ ಚಹಲ್ ಮತ್ತು ಪತ್ನಿ ಧನಶ್ರೀ ವರ್ಮಾ ವಿಚ್ಛೇದನದ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಮಾತು ಕೇಳಿ ಬರುತ್ತಿದ್ದವು. ಇಬ್ಬರ ನಡುವೆ ಸಂಬಂಧ ಸರಿಯಿಲ್ಲ ಎನ್ನುವ ಬಗ್ಗೆ ವದಂತಿಗಳು ಹರಿದಾಡುತ್ತಿರುವಾಗಲೇ, ಯಜುವೇಂದ್ರ ಮತ್ತು ಧನಶ್ರೀ ವಿಚ್ಚೇದನ ಪಡೆದಿದ್ದಾರೆ. https://ainlivenews.com/protest-on-the-karnataka-maharashtra-border-kolhapur-bus-stop/ ಯುಜ್ವೇಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ ಅವರ ವಿಚ್ಛೇದನದ ಅಂತಿಮ ವಿಚಾರಣೆಯ ಮೊದಲು, ನ್ಯಾಯಾಧೀಶರು ಇಬ್ಬರನ್ನೂ ಸಲಹೆಗಾರರ ​​ಬಳಿಗೆ ಕಳುಹಿಸಿದ್ದರು. ಈ ಸಮಾಲೋಚನೆಯು ಸುಮಾರು 45 ನಿಮಿಷಗಳ ಕಾಲ ನಡೆಯಿತು. ನ್ಯಾಯಾಧೀಶರು ಧನಶ್ರೀ ಮತ್ತು ಯುಜ್ವೇಂದ್ರ ಅವರಿಗೆ ಪ್ರಶ್ನೆಗಳನ್ನು ಕೇಳಿದಾಗ, ಇಬ್ಬರೂ ಪರಸ್ಪರ…

Read More