ಪ್ಯಾಟೆ ಮಂದಿ ಕಾಡಿಗ್ ಬಂದ್ರು, ರಾಧಾ ರಮಣ (Radha Ramana) ಮೂಲಕ ಕಿರುತೆರೆಯಲ್ಲಿ ಮೋಡಿ ಮಾಡಿದ್ದ ನಟಿ ಕಾವ್ಯಾ ಗೌಡ (Kavya Gowda) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಸೀಮಂತ ಶಾಸ್ತ್ರದ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿದೆ. ಕಾವ್ಯಾ ಗೌಡ ಸೀಮಂತ ಕಾರ್ಯಕ್ರಮ ಬೆಂಗಳೂರಿನಲ್ಲಿ ಗ್ರ್ಯಾಂಡ್ ಆಗಿ ನಡೆದಿದೆ. ಕಾರ್ಯಕ್ರಮದಲ್ಲಿ ಲೈಟ್ ಬಣ್ಣದ ಸೀರೆಯಲ್ಲಿ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಆಪ್ತರು, ಕುಟುಂಬಸ್ಥರ ಸಮ್ಮುಖದಲ್ಲಿ ಸೀಮಂತ ಕಾರ್ಯಕ್ರಮ ನಡೆದಿದೆ. 2021ರಲ್ಲಿ ಉದ್ಯಮಿ ಸೋಮಶೇಖರ್ ಜೊತೆ ಕಾವ್ಯಾ ಮದುವೆಯಾಗಿದ್ದಾರೆ. ಗುರುಹಿರಿಯರು ಸಮ್ಮತಿಸಿದ ಮದುವೆಗೆ ಕಾವ್ಯಾ ಗ್ರೀನ್ ಸಿಗ್ನಲ್ ನೀಡಿದ್ದರು ಕಳೆದ ವರ್ಷ ಹೊಸ ಮನೆ ಕಟ್ಟಿ ಗೃಹಪ್ರವೇಶ ಕೂಡ ಅದ್ದೂರಿಯಾಗಿ ಮಾಡಿದ್ದರು. ಹೊಸ ಮನೆಗೆ ಕಾಲಿಟ್ಟ ಸಂಭ್ರಮದ ಬೆನ್ನಲ್ಲೇ ಈಗ ಹೊಸ ಅತಿಥಿ ಆಗಮನವಾಗುತ್ತಿರೋ ಖುಷಿಯಲ್ಲಿದ್ದಾರೆ.
Author: AIN Author
ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಿಂದ ಒದ್ದಾಡುತ್ತಿರುವ ನೆರೆಯ ರಾಷ್ಟ್ರ ಪಾಕಿಸ್ತಾನ (Pakistan) ತನ್ನ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಹೆಣಗಾಡುತ್ತಿದೆ. ನಡುವೆ ಮಾರುಕಟ್ಟೆಯಲ್ಲಿ ಅಗತ್ಯವಸ್ತುಗಳ ಬೆಲೆ ದುಪ್ಪಟ್ಟಾಗಿದ್ದು, ಜನರನ್ನು ಮತ್ತಷ್ಟು ಸಂಕಷ್ಟಕ್ಕೀಡುಮಾಡಿವೆ. ಸರ್ಕಾರ ದರ ನಿಗದಿಮಾಡಿದ್ದರೂ ಕ್ಯಾರೆ ಎನ್ನದ ವ್ಯಾಪಾರಿಗಳು ತಮ್ಮಿಷ್ಟದ ದರಗಳಿಗೆ ವಸ್ತುಗಳನ್ನ ಮಾರಾಟ ಮಾಡುತ್ತಿದ್ದಾರೆ. ಇಲ್ಲಿನ ಪಂಜಾಬ್ ಪ್ರಾಂತೀಯ ರಾಜಧಾನಿ ಲಾಹೋರ್ನ ಮಾರುಕಟ್ಟೆಗಳಲ್ಲಿ (Lahore Market) ಮೊಟ್ಟೆಯ ಬೆಲೆ ಪ್ರತಿ ಡಜನ್ಗೆ 400 ಪಾಕಿಸ್ತಾನಿ ರೂಪಾಯಿಗಳಿಗೆ (Pak Rupees) ಏರಿಕೆಯಾಗಿದೆ. ಒಂದು ಮೊಟ್ಟೆಯ ಬೆಲೆ 33 ರೂ.ಗಳಿಗೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಸರ್ಕಾರ ಜನರ ಮೇಲಿನ ಆರ್ಥಿಕ ದರ ಇಳಿಸಲು ಕೆಲ ವಸ್ತುಗಳಿಗೆ ನಿಗದಿತ ದರ ಸೂಚಿಸಿದೆ. ಉದಾಹರಣೆಗೆ ಪ್ರತಿ ಕೆ.ಜಿ ಈರುಳ್ಳಿಗೆ ಸರ್ಕಾರ 175 ರೂ. ನಿಗದಿಪಡಿಸಿದ್ದರೆ, ವ್ಯಾಪಾರಿಗಳು 200 ರಿಂದ 250 ರೂ. ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಒಂದು ಡಜನ್ ಮೊಟ್ಟೆಯ ಬೆಲೆ 400 ರೂ. ತಲುಪಿದ್ದರೆ, ಒಂದು ಕೆಜಿ ಚಿಕನ್ ಬೆಲೆ 615 ರೂ.ಗಳಿಗೆ ಏರಿಕೆಯಾಗಿದೆ. ಇದರಿಂದ…
ಬೆಂಗಳೂರು: ಏಷ್ಯನ್ ಗೇಮ್ಸ್ ನಲ್ಲಿ ಟೀಮ್ ಇಂಡಿಯಾದ ಪರ ಆಯ್ಕೆ ಆಗದಿದ್ದಕ್ಕೆ ಶಿಖರ್ ಧವನ್ ಬೇಸರ ಹೊರಹಾಕಿದ್ದಾರೆ. ಟೀಮ್ ಇಂಡಿಯಾದ ಸ್ಫೋಟಕ ಆಟಗಾರರಾದ ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್ ನಿವೃತ್ತಿ ನಂತರ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರನಾಗಿ ಗಮನ ಸೆಳೆದಿದ್ದ ಗಬ್ಬರ್ ಖ್ಯಾತಿಯ ಶಿಖರ್ ಧವನ್, ಯುವ ಆಟಗಾರ ಶುಭಮನ್ ಗಿಲ್ ಆಗಮನದ ನಂತರ ಆರಂಭಿಕ ಸ್ಥಾನವನ್ನು ಕಳೆದುಕೊಂಡರು. ಅಲ್ಲದೆ 2022ರ ಡಿಸೆಂಬರ್ ನಲ್ಲಿ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ನಂತರ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಧವನ್ ವಿಫಲರಾಗಿದ್ದಾರೆ. ಬಿಸಿಸಿಐ ಆಯ್ಕೆಗಾರರ ನಿರ್ಧಾರವನ್ನು ನಾನು ಗೌರವಿಸುತ್ತೇನೆ, ಆದರೆ ನನ್ನ ಮುಂದಿನ ಭವಿಷ್ಯದ ಬಗ್ಗೆ ಚರ್ಚಿಸಲು ಯಾವುದೇ ಸದಸ್ಯರು ಸಂಪರ್ಕ ಮಾಡದಿರುವುದು ನನಗೆ ಬೇಸರ ಮೂಡಿಸಿದೆ ಎಂದು ಶಿಖರ್ ಧವನ್ ಹೇಳಿದ್ದಾರೆ. “ಟೀಮ್ ಇಂಡಿಯಾದ ಪರ 2018ರಲ್ಲಿ ಕೊನೆಯ ಬಾರಿ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಂಡಿದ್ದೆ. ಆ ನಂತರ ನಾನು ಸಂಪೂರ್ಣವಾಗಿ ವೈಟ್ ಬಾಲ್ (ಏಕದಿನ, ಟ್ವೆಂಟಿ-20) ಕಡೆ ನನ್ನ ಗಮನವನ್ನು ಕೇಂದ್ರೀಕರಿಸಿದೆ.…
ಅಮೋಘ ಅಭಿನಯ ಹಾಗೂ ಕಂಚಿನ ಕಂಠದ ಮೂಲಕ ಕನ್ನಡಿಗರ ಮನಗೆದ್ದಿರುವ ನಟ ವಸಿಷ್ಠ ಸಿಂಹ (Vasishtha Simha) ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರಕ್ಕೆ ‘ವಿಐಪಿ’ (VIP) ಎಂದು ಹೆಸರಿಡಲಾಗಿದೆ. ಮಕರ ಸಂಕ್ರಾಂತಿಯ ಪರ್ವಕಾಲದಲ್ಲಿ ಈ ನೂತನ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಕಲಾ ಸೃಷ್ಟಿ ಪ್ರೊಡಕ್ಷನ್ಸ್ ನಿರ್ಮಾಣದ, ಬ್ರಹ್ಮ ನಿರ್ದೇಶನದ ಈ ಚಿತ್ರ ವಿಭಿನ್ನ ಕಥಾಹಂದರ ಹೊಂದಿದೆ. ಮತ್ತೊಂದು ವಿಶೇಷವೆಂದರೆ ವಿಐಪಿ ಅಭಿಮಾನಿಗಳು ವಸಿಷ್ಠ ಸಿಂಹ ಅವರಿಗೆ ರಾಯಲ್ ಸ್ಟಾರ್ ಎಂಬ ಬಿರುದು ನೀಡಿದ್ದಾರೆ. ವಸಿಷ್ಠ ಸಿಂಹ ಈ ಚಿತ್ರದಿಂದ ರಾಯಲ್ ಸ್ಟಾರ್ ವಸಿಷ್ಠ ಸಿಂಹ ಆಗಿ ಮಿಂಚಲಿದ್ದಾರೆ. ಬೆಂಗಳೂರಿನ ಸುತ್ತಮುತ್ತಾ ವಿಐಪಿ ಚಿತ್ರದ ಚಿತ್ರೀಕರಣ ಅದ್ದೂರಿಯಾಗಿ ಬಿರುಸಿನಿಂದ ಸಾಗಿದೆ. ಕೊಡಗು, ಸಕಲೇಶಪುರದಲ್ಲೂ ಚಿತ್ರೀಕರಣ ನಡೆಯಲಿದೆ. ಕಲಾಸೃಷ್ಠಿ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಈ ಚಿತ್ರಕ್ಕೆ ಅಫ್ಜಲ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಗಿಣಿ ಅಭಿನಯದ ಸಾರಿ ಕರ್ಮ ರಿಟರ್ನ್ಸ್ ಚಿತ್ರದ ನಿರ್ದೇಶಕ ಬ್ರಹ್ಮ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಲಂಡನ್:- ಬ್ರಿಟನ್ ತನ್ನ ದೇಶದಲ್ಲಿನ ಹೊಲಸುಗಳಿಂದ ತೊಂದರೆಗೀಡಾಗಿದೆ. ಇದರಿಂದಾಗಿ ಇಲ್ಲಿ ಇಲಿಗಳ ಕಾಟ ಜಾಸ್ತಿಯಾಗಿದೆ. ಈ ಇಲಿಗಳು ಸಾಮಾನ್ಯ ಇಲಿಗಳಂತಿಲ್ಲ, ಬದಲಾಗಿ ಗಾತ್ರದಲ್ಲಿ ಅವುಗಳು ದೊಡ್ಡದಾಗಿವೆ. ಏಕಾಏಕಿ ಇಲಿಗಳ ಕಾಟ ಹೆಚ್ಚಾದ ಕಾರಣ ಬ್ರಿಟಿಷರು ಕಂಗಾಲಾಗಿದ್ದಾರೆ. ಇಲ್ಲಿನ ಜನರ ಸಂಖ್ಯೆಗಿಂತ ಇಲಿಗಳ ಸಂಖ್ಯೆ 25 ಕೋಟಿಗೆ ತಲುಪಿದೆ. ಏಕಾಏಕಿ ಇಷ್ಟೊಂದು ಇಲಿಗಳು ಬಂದಿರುವುದು ಜನರಲ್ಲಿ ಆತಂಕ ಮೂಡಿಸಿದೆ ಸಮಯಕ್ಕೆ ಸರಿಯಾಗಿ ಕಸದ ತೊಟ್ಟಿಗಳ ಸಂಗ್ರಹ ವಿಳಂಬವೇ ಇಲಿಗಳ ಸಂಖ್ಯೆ ಏಕಾಏಕಿ ಹೆಚ್ಚಾಗಲು ಕಾರಣ ಎಂದು ಹೇಳಲಾಗುತ್ತಿದೆ. ಸ್ವಚ್ಛತೆಯ ಕೊರತೆಯಿಂದ ಇಲಿಗಳ ಸಂಖ್ಯೆ ಹೆಚ್ಚುತ್ತಿದೆ. ಈ ಇಲಿಗಳು ಈಗ ಬ್ರಿಟನ್ನ ಮನೆಗಳ ಮೇಲೆ ದಾಳಿ ಮಾಡುತ್ತಿವೆ. ಬ್ರಿಟಿಷ್ ಪೆಸ್ಟ್ ಕಂಟ್ರೋಲ್ ಅಸೋಸಿಯೇಷನ್ ಪ್ರಕಾರ, ಕಳೆದ 90 ದಿನಗಳಲ್ಲಿ ಈ ಸಮಸ್ಯೆಗಳನ್ನು ಎದುರಿಸಲು ಸಹಾಯ ಪಡೆಯುವವರ ಸಂಖ್ಯೆಯು ಹೆಚ್ಚಾಗಿದೆ. ಬ್ರಿಟನ್ನಲ್ಲಿ ಸುಮಾರು 25 ಕೋಟಿ ಇಲಿಗಳು ವಾಸಿಸುತ್ತವೆ ಎಂದು ನಂಬಲಾಗಿದೆ. ಇದೀಗ ಚಳಿಯಿಂದಾಗಿ ಇಲಿಗಳು ಮನೆಗಳ ಒಳಗೆ ನುಗ್ಗಲು ಆರಂಭಿಸಿರುವುದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ…
ರಾಜ್ಯ ಸರ್ಕಾರವು ಮಹತ್ವದ ಅಪ್ಡೇಟ್ಸ್ ನೀಡಿದೆ. ಸಿರಿಧಾನ್ಯ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಕರ್ನಾಟಕದ ಹಲವು ಭಾಗದಲ್ಲಿ ಮಳೆ ಆಗ್ತಿದೆ ಕರ್ನಾಟಕದ ಎಲ್ಲ ರೈತರು ಹೆಚ್ಚಾಗಿ ಸಿರಿಧಾನ್ಯ ಬೆಳೆಯಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಕಡಿಮೆ ಖರ್ಚು, ಕಡಿಮೆ ಸಮಯದಲ್ಲಿ ಸಿರಿಧಾನ್ಯ ಬೆಳೆದು ಆರ್ಥಿಕ ಸ್ವಾವಲಂಬನೆ ಸಾಧಿಸಬಹುದು. ಪ್ರಸ್ತುತ ಹೆಕ್ಟೇರ್ಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಇದನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಈಚೆಗೆ ಆಯೋಜಿಸಿದ್ದ ಸಿರಿಧಾನ್ಯ ಮೇಳಕ್ಕೆ ಜನರು ಹಾಗೂ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೃಷಿ ಇಲಾಖೆಯು ಜನವರಿ ಐದರಿಂದ ಏಳರ ವರೆಗೆ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಆಯೋಜಿಸಿತ್ತು. ಇದಕ್ಕೆ • ಕೀನ್ಯ • ಕುವೈತ್ •ಯುಎಇ • ಆಸ್ಟ್ರೇಲಿಯಾ • ಯುರೋಪ್ ಒಕ್ಕೂಟ ರಾಷ್ಟ್ರಗಳಿಂದಲೂ ಜನ ಹಾಗೂ ಪ್ರತಿನಿಧಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು. ಅಲ್ಲದೇ ಇದರಲ್ಲಿ ದೇಶದ 16 ರಾಜ್ಯಗಳಿಂದ ಜನ ಬಂದಿದ್ದರು 190 ಸಂಸ್ಥೆಗಳು…
ಚಿಕ್ಕಮಗಳೂರು:- ಕಾಲಿಗೆ ಗುಂಡೇಟು ಬಿದ್ದರೂ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ಕೊಲೆ ಆರೋಪಿ ಅರೆಸ್ಟ್ ಮಾಡಲಾಗಿದೆ. ಪೂರ್ಣೇಶ್ ಬಂಧಿತ ಆರೋಪಿಯಾಗಿದ್ದಾನೆ. ಈತ ಕಳೆದ ಶನಿವಾರ ಜಿಲ್ಲಾಸ್ಪತ್ರೆಯಿಂದ ನಾಪತ್ತೆಯಾಗಿದ್ದ. ಇಂದು ಮಾಗಲು ಗ್ರಾಮದ ಬಸ್ ನಿಲ್ದಾಣದ ಬಳಿ ಇದ್ದಾಗ ಬಾಳೆಹೊನ್ನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ. ಆರೋಪಿಯ ಮೇಲೆ 2012 ರಿಂದ 8 ಪ್ರಕರಣಗಳು ದಾಖಲಾಗಿದ್ದವು. 4 ಹಲ್ಲೆ ಹಾಗೂ ಕೊಲೆ ಯತ್ನ, 3 ಹಲ್ಲೆ ಪ್ರಕರಣ ಮತ್ತೊಂದು ಪೊಲೀಸರ ಮೇಲೆ ಹಲ್ಲೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಕೋರ್ಟಿನಿಂದ ಸಮನ್ಸ್ ಕೂಡ ಜಾರಿಯಾಗಿತ್ತು. ಆರೋಪಿ ಕೋರ್ಟಿಗೆ ಹಾಜರಾಗದೆ, ಮನೆಯಲ್ಲೂ ವಾಸವಾಗಿರದೆ, ರಾತ್ರಿ ವೇಳೆ ಕಾಡು, ಕಾಫಿ ತೋಟದ ಕಾಡಿನ ದೊಡ್ಡ-ದೊಡ್ಡ ಮರಗಳ ಮೇಲೆ ಮಲಗಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ. 2023ರ ಅಕ್ಟೋಬರ್ 30ರಂದು ಆತ ಮಾಗಲು ಗ್ರಾಮದ ತನ್ನ ಮನೆಯಲ್ಲಿ ಇರುವ ಖಚಿತ ಮಾಹಿತಿ ಮೇರೆಗೆ ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಮಚ್ಚು ಬೀಸಿದ್ದ. ಈ ವೇಳೆ ಪಿಎಸ್ಐ ದಿಲೀಪ್ ಕುಮಾರ್…
ಇದು ಡಿಜಿಟಲ್ ಯುಗ, ಜನರು ಮೂರು ಹೊತ್ತೂ ಲ್ಯಾಪ್ಟಾಪ್ ಅಥವಾ ಮೊಬೈಲ್ ಅನ್ನು ನೋಡುತ್ತಲೇ ಇರುತ್ತಾರೆ. ಲ್ಯಾಪ್ಟಾಪ್ ಅನ್ನು ಹೆಚ್ಚೆಚ್ಚು ನೋಡುವುದರಿಂದ ನಮ್ಮ ಕಣ್ಣು ಮತ್ತು ಚರ್ಮಕ್ಕೆ ತುಂಬಾ ಅಪಾಯಕಾರಿ ಉಂಟಾಗುತ್ತಿದೆ. ಹಾಗಾದ್ರೆ ಏನೆಲ್ಲಾ ತೊಂದರೆಗಳು ಆಗುತ್ತೆ ಇಲ್ಲಿದೆ ನೋಡಿ! ಚರ್ಮದ ಮೇಲೆ ನೀಲಿ ಬೆಳಕಿನ ಮೂಲಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದು ಹೈಪರ್ಪಿಗ್ಮೆಂಟೇಶನ್ ಮತ್ತು ಅಕಾಲಿಕ ವಯಸ್ಸಾದಿಕೆಯನ್ನು ಉಂಟುಮಾಡಬಹುದು, ಆದರೆ ಉಳಿದವು – ಇದು ಯಾವ ಡೋಸ್ ತೊಂದರೆ ಉಂಟುಮಾಡುತ್ತದೆ. ನೇರಳಾತೀತ ಬೆಳಕು( Ultraviolet light) ಜೀವಕೋಶಗಳ ಡಿಎನ್ಎಯನ್ನು ನೇರವಾಗಿ ಹಾನಿಗೊಳಿಸಿದರೆ, ನೀಲಿ ಬೆಳಕು ಆಕ್ಸಿಡೇಟಿವ್ ಒತ್ತಡದ ಮೂಲಕ ಕಾಲಜನ್ ಅನ್ನು ನಾಶಪಡಿಸುತ್ತದೆ. ಚರ್ಮದಲ್ಲಿರುವ ಫ್ಲಾವಿನ್ ಎಂಬ ರಾಸಾಯನಿಕವು ನೀಲಿ ಬೆಳಕನ್ನು ಹೀರಿಕೊಳ್ಳುತ್ತದೆ. ಆ ಹೀರಿಕೊಳ್ಳುವಿಕೆಯ ಸಮಯದಲ್ಲಿ ನಡೆಯುವ ಪ್ರತಿಕ್ರಿಯೆಯು ಚರ್ಮವನ್ನು ಹಾನಿ ಮಾಡುವ ಅಸ್ಥಿರ ಆಮ್ಲಜನಕದ ಅಣುಗಳನ್ನು (ಫ್ರೀ ರಾಡಿಕಲ್) ಉತ್ಪಾದಿಸುತ್ತದೆ. ನಾವು ಮೊದಲೇ ಹೇಳಿದಂತೆ, ಸ್ಮಾರ್ಟ್ಫೋನ್ಗಳು, ಟ್ಯಾಬ್ಲೆಟ್ಗಳು ಅಥವಾ ಕಂಪ್ಯೂಟರ್ಗಳಿಂದ ಹೊರಸೂಸುವ ನೀಲಿ ಬೆಳಕು ಟೆಕ್ ನೆಕ್ಗೆ ಕಾರಣವಾಗಿದೆ.…
ಚೀನಾದಲ್ಲಿ Lenovo ಒಡೆತನದ ಸ್ಮಾರ್ಟ್ಫೋನ್ ಬ್ರಾಂಡ್ನಿಂದ ಇತ್ತೀಚಿನ 5G ಸ್ಮಾರ್ಟ್ಫೋನ್ ಆಗಿ ಬಿಡುಗಡೆ ಮಾಡಲಾಗಿದೆ. ಹೊಸ ಮೋಟೋ ಜಿ-ಸರಣಿಯ ಫೋನ್ ಕಳೆದ ವರ್ಷದಿಂದ ಮೋಟೋ ಜಿ 32 ಅನ್ನು ಯಶಸ್ವಿಗೊಳಿಸುತ್ತದೆ ಮತ್ತು ಸೆಲ್ಫಿ ಕ್ಯಾಮೆರಾವನ್ನು ಹೊಂದಿರುವ ಹೋಲ್ ಪಂಚ್ ಡಿಸ್ಪ್ಲೇ ಕಟೌಟ್ ಅನ್ನು ಹೊಂದಿದೆ. Moto G34 5G 8GB RAM ಮತ್ತು 128GB ಆನ್ಬೋರ್ಡ್ ಸಂಗ್ರಹಣೆಯೊಂದಿಗೆ ಸ್ನಾಪ್ಡ್ರಾಗನ್ 695 SoC ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು 50-ಮೆಗಾಪಿಕ್ಸೆಲ್ ಮುಖ್ಯ ಸಂವೇದಕದಿಂದ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ತೋರಿಸುತ್ತದೆ. Moto G34 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ, ಇದು ಒಂದೇ ಚಾರ್ಜ್ನಲ್ಲಿ 24 ಗಂಟೆಗಳ ಟಾಕ್ ಟೈಮ್ ಅನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. Moto G34 5G ಬೆಲೆ ಏಕೈಕ 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ Moto G34 5G ಬೆಲೆಯನ್ನು CNY 999 (ಸುಮಾರು ರೂ. 11,600) ನಲ್ಲಿ ನಿಗದಿಪಡಿಸಲಾಗಿದೆ. ಫೋನ್ ಸೀ ಬ್ಲೂ ಮತ್ತು ಸ್ಟಾರ್ ಬ್ಲ್ಯಾಕ್…
ಡ್ರೈಫ್ರೂಟ್ಸ್ ಗಳು ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಕಬ್ಬಿಣ ಸೇರಿದಂತೆ ದೇಹಕ್ಕೆ ಅಗತ್ಯವಾದ ಎಲ್ಲಾ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಆಯುರ್ವೇದದಲ್ಲಿ ಕೂಡ ಒಣ ಹಣ್ಣುಗಳನ್ನು ಶಕ್ತಿಯುತ ಮತ್ತು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದರೆ, ಇದನ್ನು ಅತಿಯಾಗಿ ಸೇವಿಸುವುದು ಒಳ್ಳೆಯದಲ್ಲ, ಇದು ಕೆಲವು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಬಾದಾಮಿ, ವಾಲ್ನಟ್ಸ್, ಗೋಡಂಬಿ, ಹ್ಯಾಝೆಲ್ನಟ್ಸ್, ಪಿಸ್ತಾಗಳಂತಹ ಬೀಜಗಳು ಅವುಗಳ ಪ್ರಯೋಜನಕಾರಿ ಕೊಬ್ಬು ಮತ್ತು ಪ್ರೋಟೀನ್ ಅಂಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಕೆಲವು ಬೀಜಗಳೊಂದಿಗಿನ ಸಾಮಾನ್ಯ ಲಕ್ಷಣಗಳು ಉಬ್ಬುವುದು ಮತ್ತು ಅನಿಲ. ಅಂತಹ ಬೀಜಗಳು ಫೈಟೇಟ್ಗಳು ಮತ್ತು ಟ್ಯಾನಿನ್ಗಳಂತಹ ಸಂಯುಕ್ತಗಳನ್ನು ಹೊಂದಿರುತ್ತವೆ. ಇವುಗಳನ್ನು ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ. ಬೀಜಗಳ ಕೊಬ್ಬಿನಂಶವು ಕೆಲವು ಸಂದರ್ಭಗಳಲ್ಲಿ ಅತಿಸಾರಕ್ಕೆ ಕಾರಣವಾಗಬಹುದು. ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಫೈಬರ್ ಮತ್ತು ಪ್ರೋಟೀನ್ ಅಂಶದಿಂದಾಗಿ ಅತಿಯಾಗಿ ತಿನ್ನದಿರಲು ಇದು ನಿಮಗೆ ಸಹಾಯ ಮಾಡುತ್ತದೆ. ತೂಕ ನಷ್ಟಕ್ಕೆ ಎರಡೂ ಅವಶ್ಯಕ. ಆದರೆ ಈ ತಿಂಡಿಗಳನ್ನು ಹೆಚ್ಚು ತಿನ್ನುವುದರಿಂದ ಹೆಚ್ಚಿನ ಕ್ಯಾಲೋರಿ ಪರಿಣಾಮದಿಂದಾಗಿ ತೂಕ ಹೆಚ್ಚಾಗಬಹುದು ಎಂಬುದನ್ನು ನೀವು ನೆನಪಿಟ್ಟುಕೊಳ್ಳಬೇಕು.…