Author: AIN Author

ಮೊಟ್ಟೆಯನ್ನು ಚಳಿಗಾಲದಲ್ಲಿ ಸೇವಿಸಬಹುದೇ? ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದೇ? ಮೊಟ್ಟೆ ಸೇವಿಸಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ. ಕೆಟ್ಟ ಕೊಲೆಸ್ಟ್ರಾಲ್ ಹೃದ್ರೋಗ ಮತ್ತು ಪಾರ್ಶ್ವವಾಯು ಸಮಸ್ಯೆಗೆ ಕಾರಣವಾಗುತ್ತದೆ. ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗಿರುತ್ತದೆ. ಆದರೆ ಅದು ಉತ್ತಮ ಕೊಲೆಸ್ಟ್ರಾಲ್ ಆಗಿದೆ. ಇದು ಹೃದಯದ ರಕ್ತನಾಳಗಳನ್ನು ರಕ್ಷಿಸುತ್ತದೆ. ಆದರೆ ಮೊಟ್ಟೆಯಲ್ಲಿ ಕ್ಯಾಲೋರಿ ಪ್ರಮಾಣ ಹೆಚ್ಚಾಗಿದೆ. ಇದು ತೂಕ ಹೆಚ್ಚಳ ಸಮಸ್ಯೆಗೆ ಕಾರಣವಾಗುತ್ತದೆ. ಇದರಿಂದ ನಿಮಗೆ ಹೃದ್ರೋಗ ಸಮಸ್ಯೆ ಕಾಡಬಹುದು. ಹಾಗಾಗಿ ಹೃದ್ರೋಗಿಗಳು ವಾರದಲ್ಲಿ 2-3 ಮೊಟ್ಟೆಗಳನ್ನು ಸೇವಿಸಿದರೆ ಒಳ್ಳೆಯದು. ಅಲ್ಲದೇ ಮಧುಮೇಹಗಳು ಕೂಡ ದಿನಕ್ಕೆ 1 ಮೊಟ್ಟೆಯನ್ನು ಸೇವುಸುವುದು ಉತ್ತಮ ಎನ್ನಲಾಗುತ್ತದೆ.

Read More

ಬೆಂಗಳೂರು: ಇಂದು ನಾಡಿನೆಲ್ಲೆಡೆ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇಂದು ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯ ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಿದೆ ಗವಿಗಂಗಾಧರೇಶ್ವರನಿಗೆ ಸೂರ್ಯದೇವ  ಸ್ಪರ್ಶಿಸಿದ ಈ ವಿದ್ಯಾಮಾನ ಕಣ್ತುಂಬಿಕೊಳ್ಳಲು ಭಕ್ತಗಣ ಸಾಕ್ಷಿಯಾಯಿತು. ಮೊದಲು ದೇವರ ಅಭಿಷೇಕಕ್ಕೆ ಪೂರ್ಣಕುಂಭ ಕಳಸದೊಂದಿಗೆ ದೇವಸ್ಥಾನಕ್ಕೆ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಆಗಮಿಸಿದರು. ಸೂರ್ಯ ರಶ್ಮಿ ಸ್ಪರ್ಶ ವೇಳೆ ಗವಿಗಂಗಾದರೇಶ್ವರನಿಗೆ ಪೂರ್ಣಕುಂಭ ಅಭಿಷೇಕ ಮಾಡಲಾಯಿತು. ಇದೇ ಸಂದರ್ಭದಲ್ಲಿ ದೇವಾಲಯ ಪ್ರವೇಶ ಮಾಡಿದ ಸೂರ್ಯ ರಶ್ಮಿ ನಂದಿಯನ್ನ ಸ್ಪರ್ಶಿಸಿದ. ದಕ್ಷಿಣಯಾನದಿಂದ ಉತ್ತರಯಾನ ಪಥ ಬದಲಾವಣೆ ಮಾಡಲಿರೋ ಸೂರ್ಯ ಗರ್ಭ ಗುಡಿಯ ಮುಂಭಾಗದಲ್ಲಿರೋ ಸ್ಪಟಿಕ ಲಿಂಗಕ್ಕೆ ಸ್ಪರ್ಶಿಸಿ ಶಿವಲಿಂಗ ಪೀಠದ ಸ್ಪರ್ಶ ಮಾಡಿದ. ಬಳಿಕ ಸೂರ್ಯದೇವ ಈಶ್ವರನ ಪಾದ ಸ್ಪರ್ಶ ಮಾಡಿದನು. ಸೂರ್ಯ ರಶ್ಮಿ ಕೌತುಕವನ್ನು ಭಕ್ತರು ಕಣ್ತುಂಬಿಕೊಂಡರು. ಲಿಂಗಭಾಗದಲ್ಲಿ 18 ಸೆಕೆಂಡ್‌ ಸೂರ್ಯರಶ್ಮಿ ಬಿದ್ದಿದೆ. ಇದರ ಮೇಲೆ ಹೊಸ ವರ್ಷದ ಭವಿಷ್ಯ ಇರಲಿದೆ ಅನ್ನೋದು ನಂಬಿಕೆ.

Read More

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಅನಂತ್ ಕುಮಾರ್ ಹೆಗ್ಡೆ ಅವನೊಬ್ಬ ಹುಚ್ಚ ಎಂದು ಏರು ಧ್ವನಿಯಲ್ಲಿ ಮಾಜಿ ಸಚಿವ ಹೆಚ್ ಆಂಜನೇಯ ಕಿಡಿಕಾರಿದ್ದಾರೆ. ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇತ್ತೀಚೆಗಷ್ಟೇ ಸಿಎಂ ಬಗ್ಗೆ ಹಗುರವಾಗಿ ಹೇಳಿಕೆ ನೀಡಿದ್ದ ಅನಂತಕುಮಾರ್ ಹೆಗಡೆ ಬಗ್ಗೆ ಮಾತಾಡಿದರು. ಅನಂತ ಕುಮಾರ್‌ ಒಬ್ಬ ಹುಚ್ಚ. ಹುಚ್ಚರ ಬಗ್ಗೆ ಯಾರಾದರೂ ಮಾತಾಡ್ತಾರಾ?. ಅವನ ಬಗ್ಗೆ ಮಾತಾಡಲ್ಲ. ಅವನ ಬಗ್ಗೆ ಮಾತಾಡಿ ದೊಡ್ಡವನನ್ನಾಗಿಸಿದಂತೆ ಆಗುತ್ತದೆ’ ಎಂದು  ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ರಾಮರಾಜ್ಯದ ಕನಸು ಅನಾವರಣ ಮಾಡಿ ಕಾರ್ಯರೂಪಕ್ಕೆ ತಂದವರು. ಜನ ಮೆಚ್ಚಿದ ಸಿದ್ಧರಾಮಯ್ಯ ಬಗ್ಗೆ ಹಗುರವಾಗಿ ಮಾತಾಡ್ತಾನಲ್ಲ, ಅವನು ಮನುಷ್ಯನಾ ಎಂದು ಅನಂತ ಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿದರು. ಮುನಿಸ್ವಾಮಿ ವಿರುದ್ದವೂ ಕಿಡಿ: ಕಾಂಗ್ರೆಸ್ ಸರ್ಕಾರ ಹಿಂಧೂ ಧರ್ಮ, ಶ್ರೀರಾಮನ ವಿರೋಧಿ ಎಂಬ ಬಿಜೆಪಿ ಸಂಸದ ಮುನಿಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಹಳಷ್ಟು ಜನ ಹಿಂದೂಗಳಿರುವುದೇ ಕಾಂಗ್ರೆಸ್ ಪಕ್ಷದಲ್ಲಿ.…

Read More

ದಾವಣಗೆರೆ: ದೇವಾಲಯಗಳ ಸ್ವಚ್ಛತಾ ಕಾರ್ಯ ನಡೆಸುವಂತೆ ಪ್ರಧಾನಿ ಮೋದಿ ಕರೆ ಹಿನ್ನಲೆಯಲ್ಲಿ ಇಂದು  ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ದೇಗುಲಗಳ ಸ್ವಚ್ಛತೆಗಿಳಿದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಪಾಂಡುರಂಗ ವಿಠ್ಠಲ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ್ದು  ನೀರು ಹಾಕಿ ಸ್ವಚ್ಛಗೊಳಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು. ರೇಣುಕಾಚಾರ್ಯ ಸ್ವಚ್ಛತಾ ಕಾರ್ಯಕ್ಕೆ ಹೊನ್ನಾಳಿ ತಾಲೂಕು ಬಿಜೆಪಿ ಅಧ್ಯಕ್ಷ ಸೇರಿದಂತೆ ಕಾರ್ಯಕರ್ತರ ಸಾಥ್.  ಅಯೋಧ್ಯೆಯಲ್ಲಿ ಜ.22 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆ ಮನೆಮನೆಗೆ ಮಂತ್ರಾಕ್ಷತೆ ಹಾಗೂ ಶ್ರೀರಾಮನ ಭಾವಚಿತ್ರ ಮತ್ತು ಕರ ಪತ್ರ ವಿತರಣೆ.ಮಂತ್ರಾಕ್ಷತೆ ನೀಡಿ ಪೂಜೆ ಸಲ್ಲಿಸುವಂತೆ ಜನರಲ್ಲಿ ಬಿಜೆಪಿ ಕಾರ್ಯಕರ್ತರ ಮನವಿ. ಹೊನ್ನಾಳಿ ತಾಲೂಕಿನ ಕೊಡತಾಳ್ ತಾಂಡ, ಮಾಚಗೊಂಡನಹಳ್ಳಿ ಹಾಗೂ ಮಾಚಗೊಂಡನಹಳ್ಳಿ ತಾಂಡದಲ್ಲಿ ಮಂತ್ರಾಕ್ಷತೆ ವಿತರಣೆ.

Read More

ಬೆಂಗಳೂರು: ಸಂಸದ ಅನಂತ್ ಕುಮಾರ್ ಹೆಗಡೆ ಕೊಟ್ಟಿರೋ ವಿವಾದಾತ್ಮಕ ಹೇಳಿಕೆಯ ಕಾವು ದಿನದಿಂದ ದಿನಕ್ಕೆ ಜೋರಾಗ್ತಿದೆ. ಹೆಗಡೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಇಬ್ಬರು ಟಾಂಗ್ ಕೊಟ್ಟಿದ್ದಾರೆ, ಇತ್ತ ಸ್ವಕ್ಷದ ನಾಯಕರೇ ಹೆಗಡೆ ವಿರುದ್ಧ ತಿರುಗಿಬಿದ್ದಿದ್ದು ಅವರ ಹೇಳಿಕೆಗು ಪಕ್ಷಕ್ಕು ಯಾವುದೆ ಸಂಬಂಧ ಇಲ್ಲ ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ‌ರೇ ಕೆಂಡಕಾರಿದ್ದಾರೆ. ಈ ಮಧ್ಯೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷ್ ಹೆಗಡೆ ಪರ ನಿಂತಿರೋದು ಕುತೂಹಲ ಕೆರಳಿಸ್ತಿದೆ…. ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ರನ್ನ ಏಕವಚನದಲ್ಲಿ ಬೈದು ನಿಂದಿಸಿದ ವಿಚಾರ ಇದೀಗ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡಿತಿದೆ. ಕಳೆದ 2 ದಿನಗಳಿಂದ ಕಾಂಗ್ರೆಸ್ ನ ಎಲ್ಲಾ ನಾಯಕರು ಹೆಗಡೆ ವಿರುದ್ಧ ಕೆಂಡಕಾರ್ತ ಆಕ್ರೋಶ ಹೊರಹಾಕ್ತಿದ್ರು. ಈಶ್ವರಪ್ಪ ಬಿಟ್ರೆ ಬೇರ್ಯಾವ ಬಿಜೆಪಿ ನಾಯಕರು ಹೆಗಡೆ ಬೆಂಬಲಕ್ಕೆ ನಿಂತಿರಲಿಲ್ಲ. ಇದೀಗ ಹೆಗಡೆ ವಿರುದ್ದ ಕಾಂಗ್ರೆಸ್ ನವರು ಸೇರಿದಂತೆ ಸ್ವಪಕ್ಷದ ನಾಯಕರೇ ತಿರುಗಿಬಿದ್ದಿದ್ದು ಆಕ್ರೋಶ ಹೊರಹಾಕ್ತಿದ್ದಾರೆ.  ಈ ಮಧ್ಯೆ ಕೇಂದ್ ಸಚಿವ ಪ್ರಹ್ಲಾದ್…

Read More

ಹಾವೇರಿ: ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ  ಪ್ರಯತ್ನ ಮಾಡುವುದಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಸಾಮೂಹಿಕ ಅತ್ಯಾಚಾರ ಪ್ರಕರಣ: ಅರ್ಜಿ ಪರಿಗಣಿಸಲಾಗುವುದು ಘಟನೆ ನಡೆದು ಒಂದು ತಿಂಗಳು ಆದರೂ ಸರ್ಕಾರದ ಪರವಾಗಿ ಯಾರೂ ಸಾಂತ್ವನ ಹೇಳಿಲ್ಲ ಏನೆಂಬ ಪ್ರಶ್ನೆಗೆ ಉತ್ತರಿಗೆ  ಈಗ ತಾನೇ ಅರ್ಜಿ ಕೊಟ್ಟಿದ್ದಾರೆ ಅದನ್ನು ಪರಿಗಣಿಸಲಾಗುವುದು ಎಂದರು. ಸಾಮೂಹಿಕ ಅತ್ಯಾಚಾರ  ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು  ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಗಳು  ತಿಳಿಸಿದರು. ಉಳಿದಂತೆ ನೈತಿಕ ಪೊಲೀಸ್ ಗಿರಿ ಬಗ್ಗೆ ಮಾತನಾಡುತ್ತಾರೆ ಅತ್ಯಾಚಾರ ಪ್ರಕರಣದ  ಬಗ್ಗೆ ಮಾತನಾಡಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಮಾತನಾಡಿದರೆ ಮಾತ್ರ ಕ್ರಮ ಇಲ್ಲದಿದ್ದರೆ ಇಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಮಾತನಾಡದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲವೇ ಎಂದರು.…

Read More

ಕೋಲಾರ : ಜನವರಿ 15 ಬಂತಂದ್ರೆ ಸಾಕು, ಇಡೀ ದೇಶಕ್ಕೆ ದೇಶವೇ ಸಂಕ್ರಾಂತಿ ಸಂಭ್ರಮದಲ್ಲಿ ತೇಲುತ್ತೆ. ಆದರೆ, ಚಿನ್ನದ ನಾಡು ಕೋಲಾರ ಜಿಲ್ಲೆಯ ಆ ಹಳ್ಳಿಯೊಂದರಲ್ಲಿ ಮಾತ್ರ ಸಂಕ್ರಾಂತಿ ಆಚರಣೆ ಮಾಡಲ್ಲ. ಸಂಕ್ರಾಂತಿ ಅಂದ್ರೆ ಸಾಕು ಊರಿಗೇ ಊರೇ ಶಾಕ್ ಆಗುತ್ತೆ. ಇದು ಕೋಲಾರ ತಾಲೂಕಿನ ಅರಾಭಿಕೊತ್ತನೂರು ಎಂಬ ಗ್ರಾಮ. ಹೆಚ್ಚುಕಮ್ಮಿ ಜಿಲ್ಲಾಕೇಂದ್ರಕ್ಕೆ ಸಮೀಪವೇ ಇದೆ. ಈ ಊರಲ್ಲಿ ಹತ್ತತ್ತಿರ ಒಂದು ಸಾವಿರ ಮಂದಿ ವಾಸವಿದ್ದಾರೆ. ವಿದ್ಯಾವಂತರೂ ಇದ್ದಾರೆ, ನೌಕರಿಯಲ್ಲಿರೋರು ಇದ್ದಾರೆ. ಆದರೆ, ಅದ್ಯಾಕೋ ಈ ಊರಲ್ಲಿ ನಂಬಿಕೆನೋ ಮೂಢನಂಬಿಕೆನೋ ಗೊತ್ತಿಲ್ಲ. ಸಂಕ್ರಾಂತಿ ಮಾತ್ರ ನಿಷಿದ್ಧ. 500 ವರ್ಷಗಳ ಹಿಂದೆ ಈ ಊರಲ್ಲಿ ಅದ್ದೂರಿ ಸಂಕ್ರಾಂತಿ ಮಾಡಲಾಗಿತ್ತು. ಅದೊಂದು ವರ್ಷ ಊರಿಂದಾಚೆ ಹಾಕಿದ್ದ ಕಿಚ್ಚು ದಾಟಿಕೊಂಡು ಬರಬೇಕಿದ್ದ ಹಸುಗಳು ನಾಪತ್ತೆಯಾಗಿದ್ವು. ಅದರ ಮುಂದಿನ ವರ್ಷ ಸಂಕ್ರಾಂತಿ ಆಚರಿಸಿದಾಗ ದನ-ಕರುಗಳು ಕಾಯಿಲೆಯಿಂದ ಜೀವ ಬಿಟ್ಟಿದ್ವಂತೆ. ಊರವರು ಇನ್ಮುಂದೆ ಸಂಕ್ರಾಂತಿ ಬದಲು ಬಸವಜಯಂತಿ ದಿನ ದನಗಳ ಹಬ್ಬ ಮಾಡ್ತೀವಿ ಅಂತ ಹರಕೆ ಹೊತ್ತರಂತೆ. ಆಗ…

Read More

ಅಯೋಧ್ಯೆ: ಜನವರಿ 22ರಂದು ಭಗವಾನ್ ರಾಮ ನಮಗೆಲ್ಲರಿಗೂ ದರ್ಶನವನ್ನು ನೀಡಲಿದ್ದಾನೆ. ಅಯೋಧ್ಯೆಯ ರಾಮ ಮಂದಿರದ (Ayodhya RamMandir) ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ (Pran Prathistha Ceremony)  ನನ್ನನ್ನು ಆಹ್ವಾನಿಸಿರುವುದು ನನ್ನ ಅದೃಷ್ಟ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ (PM-JANMAN) ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (PMAY-G) ಫಲಾನುಭವಿಗಳನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಮೋದಿಯವರು ಇಂದು ಮಾತನಾಡುತ್ತಾ ಈ ರೀತಿಯಾಗಿ ಹೇಳಿದ್ದಾರೆ. ಇನ್ನೇನು ಕೆಲವು ದಿನಗಳ ನಂತರ ಅಂದರೆ ಜನವರಿ 22 ರಂದು ಭಗವಾನ್ ರಾಮನು ತನ್ನ ಭವ್ಯವಾದ ದೇವಾಲಯದಲ್ಲಿ ನಮಗೆ ದರ್ಶನವನ್ನು ನೀಡುತ್ತಾನೆ. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಮುಂಚಿತವಾಗಿ ನಾನು 11 ದಿನಗಳ ವಿಶೇಷ ಅನುಷ್ಠಾನವನ್ನು ಪ್ರಾರಂಭಿಸಿದ್ದೇನೆ. ಮಾತಾ ಶಬರಿ ಇಲ್ಲದೆ ಭಗವಾನ್ ರಾಮನ ಕಥೆ ಅಪೂರ್ಣ ಎಂದು ಪ್ರಧಾನಿ ತಿಳಿಸಿದರು. ಕಳೆದ ವಾರವಷ್ಟೇ ಮೋದಿಯವರು ಆಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದು, ರಾಮಮಂದಿರ ಉದ್ಘಾಟನೆಗೆ…

Read More

ಬಾಲಿವುಡ್ (Bollywood) ಖ್ಯಾತ ನಟ ಅಮಿತಾಭ್ ಬಚ್ಚನ್ (Amitabh Bachchan) ಅಯೋಧ್ಯೆಯಲ್ಲಿ (Ayodhya) ಮನೆ ಹೊಂದಲು ನಿರ್ಧರಿಸಿದ್ದಾರೆ. ಹಾಗಾಗಿಯೇ ಅವರು ಅಯೋಧ್ಯೆಯಲ್ಲಿ ನಿವೇಶನ ಖರೀದಿ ಮಾಡಿದ್ದಾರೆ. ಮುಂಬೈ ಮೂಲದ ಡೆವಲಪರ್‍ ಕಂಪೆನಿಯಿಂದ ಈ ನಿವೇಶನ ಖರೀದಿ ಮಾಡಿದ್ದು, ನಿವೇಶನದ ಮೌಲ್ಯ 14.5 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಮೊನ್ನೆಯಷ್ಟೇ ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಪಡೆದ್ದ ಅಮಿತಾಭ್, ಇದೀಗ ರಾಮನೂರಿನಲ್ಲೇ ಮನೆ ಮಾಡಲು ನಿರ್ಧಾರ ಮಾಡಿದ್ದು, ಸಹಜವಾಗಿಯೇ ಅಭಿಮಾನಿಗಳಿಗೆ ಸಂಭ್ರಮ ತಂದಿದೆ. ರಾಮ ನಿಮ್ಮನ್ನು ಕಾಪಾಡಲಿ ಎಂದು ಶುಭ ಕೋರಿದ್ದಾರೆ. ಅಂದಹಾಗೆ ಈ ನಿವೇಶನವು ಹತ್ತು ಸಾವಿರ ಚದರ ಅಡಿ ಅಳತೆಯನ್ನು ಹೊಂದಿದ್ದು, ವಿಮಾನ ನಿಲ್ದಾಣದಿಂದ 30 ನಿಮಿಷ ದೂರವಿದೆಯಂತೆ. ಈ ಕುರಿತಂತೆ ಅಮಿತಾಭ್ ಪ್ರತಿಕ್ರಿಯೆ ಕೂಡ ಮಾಡಿದ್ದಾರೆ.

Read More

ಬೆಂಗಳೂರು: ಸಂಸದ ಅನಂತ್ ಕುಮಾರ್ ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಚಾಟಿ ಬೀಸಿದರು. ಮುಖ್ಯಮಂತ್ರಿ ಹುದ್ದೆಯಲ್ಲಿರುವ ವ್ಯಕ್ತಿಗೆ ಏಕವಚನದಲ್ಲಿ ಮಾತನಾಡುವುದನ್ನು ಸಮರ್ಥಿಸಿಕೊಂಡಿದ್ದಾರೆ. ಸಂಸದರಾಗಿ, ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ..? ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ..? ಸಂಸ್ಕೃತಿ ಎಂದರೆ ಮನುಷ್ಯತ್ವ, ಮೊದಲು ಮನುಷ್ಯತ್ವ ಇರಬೇಕು ಎಂದು ಛೇಡಿಸಿದರು.

Read More