ಬೆಂಗಳೂರು: ಟ್ರಾಫಿಕ್ ರೂಲ್ಸ್ ಪಾಲಿಸದ ವಾಹನ ಚಾಲಕರು ಹಾಗೂ ಸವಾರರಿಗಾಗಿ ಯಮ ಹಾಗೂ ಚಿತ್ರಗುಪ್ತ ಭೂಲೋಕಕ್ಕೆ ಬಂದು ಪಾಠ ಹೇಳಿರುವುದು ನಗರದ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ನಡೆದಿದೆ. ಹೌದು! ಯಮಲೋಕದಿಂದ ಭೂಲೋಕಕ್ಕೆ ಇಳಿದ ಯಮ ಧರ್ಮರಾಯ ನಿಯಮ ಪಾಲಿಸದ ಸವಾರರ ಮೇಲೆ ಹರಿಹಾಯ್ದಿದ್ದಾನೆ. ಹೆಲ್ಮೆಟ್ ಹಾಕದ ಈ ಸವಾರ ಎಷ್ಟು ಬಾರಿ ನಿಯಮ ಉಲ್ಲಂಘಿಸಿದ್ದಾನೆ ಎಂಬ ಯಮನ ಪ್ರಶ್ನೆಗೆ ಪುಸ್ತಕ ನೋಡಿ ಚಿತ್ರಗುಪ್ತ ಇಪ್ಪತ್ತು ಬಾರಿ ಎಂದು ಉತ್ತರಿಸಿದ್ದಾನೆ. ಈ ವೇಳೆ ಯಮ ಅಂತಹ ಸವಾರರನ್ನು ತರಾಟೆಗೆ ತೆಗೆದುಕೊಂಡಿದ್ದಾನೆ. ನಿಮ್ಮ ಕುಟುಂಬ ನಿಮಗಾಗಿ ಕಾಯುತ್ತಿಲ್ಲವೇ? ಎಂದು ಎಚ್ಚರಿಸಿದ್ದಾನೆ. ಇದೇ ವೇಳೆ ಫೋನ್ನಲ್ಲಿ ಮಾತಾಡುತ್ತಿದ್ದ ಸವಾರನಿಗೆ ಕ್ಲಾಸ್ ತೆಗೆದುಕೊಂಡ ಯಮ, https://ainlivenews.com/mukesh-ambani-property-once-again-joins-the-100-billion-club/ ವಾಹನ ಚಲಾಯಿಸುವಾಗ ನೀನು ಕರೆ ಮಾಡಿದ್ರೆ ಯಮಲೋಕಕ್ಕೆ ಕನೆಕ್ಟ್ ಆಗುತ್ತೆ ಎಂದು ಎಚ್ಚರಿಕೆ ನೀಡಿ ಕಳಿಸಿದ್ದಾನೆ! ಉಪ್ಪಾರಪೇಟೆ ಸಂಚಾರ ಠಾಣೆ ಪೊಲೀಸರು (Upparpet Traffic Police) ಈ ವಿನೂತನ ಪ್ರಯತ್ನ ಮಾಡಿ ವಾಹನ ಸವಾರರಿಗೆ ಜಾಗೃತಿ ಮೂಡಿಸಿದ್ದಾರೆ. ಸಂಚಾರ ನಿಯಮ ಪಾಲಿಸದ…
Author: AIN Author
ಬೆಂಗಳೂರು: ಮೇಕೆದಾಟು ಯೋಜನೆಗೆ ಕೂಡಲೇ ಅನುಮತಿ ಕೊಡುವಂತೆ ಮನವಿ ಮಾಡಿದ್ದೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಕೂಡಲೇ ಅನುಮತಿ ಕೊಡುವಂತೆ ಮನವಿ ಮಾಡಿದ್ದೇವೆ. ಮೇಕೆದಾಟು ಕುಡಿಯುವ ನೀರಿನ ಯೋಜನೆ. ಹೀಗಾಗಿ ಕೂಡಲೇ ಮೇಕೆದಾಟು ಯೋಜನೆಗೆ ಅನುಮತಿ ಕೊಡುವಂತೆ ಮನವಿ ಮಾಡಿದ್ದೇವೆ ಎಂದರು. https://ainlivenews.com/mukesh-ambani-property-once-again-joins-the-100-billion-club/ ಇನ್ನೂ ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ. ಕಾವೇರಿ ನೀರಾವರಿ ಬೋರ್ಡ್ನ ತೀರ್ಪು ರಾಜ್ಯಕ್ಕೆ ಮರಣ ಶಾಸನ. ನಿನ್ನೆ ಕೇಂದ್ರ ಜಲಶಕ್ತಿ ಸಚಿವಾಲಯದ ಜಲ ಸಂಪನ್ಮೂಲ ಸ್ಥಾಯಿ ಸಮಿತಿ ಸಭೆ ಇತ್ತು. ಆ ಸಭೆಯಲ್ಲಿ ಈ ಎಲ್ಲಾ ಸಮಸ್ಯೆ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು
ಕಾರವಾರ: ಬಾಬರಿ ಮಸೀದಿ (Babri Masjid) ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಅದರ ಸಾಲಿಗೆ ಸೇರಲಿದೆ. ಇದನ್ನು ಬೆದರಿಕೆ ಅಂತ ಬೇಕಾದ್ರೆ ತಿಳಿಯಿರಿ, ಬಾಬರಿ ಮಸೀದಿಯಂತೆ ಭಟ್ಕಳದ ಮಸೀದಿಯನ್ನೂ ನಿರ್ನಾಮ ಮಾಡುವುದು ಗ್ಯಾರಂಟಿ ಎಂದು ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಕುಮಟಾದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಸದರು, ಬಾಬರಿ ಮಸೀದಿಯಂತೆ ಭಟ್ಕಳದ ಮಸೀದಿಯನ್ನೂ (Mosque) ನಿರ್ನಾಮ ಮಾಡುವುದು ಗ್ಯಾರಂಟಿ. ಇದು ಅನಂತಕುಮಾರ ಹೆಗಡೆ ತೀರ್ಮಾನವಲ್ಲ, ಹಿಂದೂ ಸಮಾಜದ ತೀರ್ಮಾನ ಎಂದು ಹೇಳಿದ್ದಾರೆ. ಶಿರಸಿಯ ಸಿಪಿ ಬಜಾರ್ನಲ್ಲಿರುವ ಮಸೀದಿ, ಅದು ವಿಜಯ ವಿಠ್ಠಲ ದೇವಸ್ಥಾನ, ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಕೂಡು ಮಾರುತಿ ದೇವಸ್ಥಾನ. https://ainlivenews.com/mukesh-ambani-property-once-again-joins-the-100-billion-club/ ಇದೇ ರೀತಿ ದೇಶದ ಹಳ್ಳಿಯ ಮೂಲೆ-ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ, ಅದನ್ನು ಕಿತ್ತುಹಾಕುವ ತನಕ ಹಿಂದೂ ಸಮಾಜ ಸುಮ್ಮನೆ ಕೂರಲ್ಲ. ಈಗ ರಣಭೈರವ ಎದ್ದಾಗಿದೆ. ಮತ್ತೆ ಕೂರುವ ಪ್ರಶ್ನೆಯೇ ಇಲ್ಲ. ಹಿಂದೂ ಧರ್ಮ ಯಾರ ಋಣವನ್ನು ಇಟ್ಟುಕೊಳ್ಳುವ ಧರ್ಮವಲ್ಲ, ಸಾವಿರ…
ರಾಯಚೂರು: ಪ್ರತಾಪ್ ಸಿಂಹ ಏನಾದ್ರೂ ಹೇಳಲಿ. ಅವನಿಗೆ ಹೆದರಿಕೆ ಶುರುವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅನ್ನೋ ಭಯ ಶುರುವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ರಾಯಚೂರು ಜಿಲ್ಲೆಯ ತಿಂಥಿಣಿಗೆ ಭೇಟಿ ನೀಡಿದ ವೇಳೆ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಯತೀಂದ್ರಗೆ , ನೀಡುವ ವಿಚಾರ ಸಂಬಂಧ ಪ್ರತಾಪ್ ಸಿಂಹ ಹೇಳಿಕೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಟಿಕೆಟ್ ವಿಚಾರ ಯತೀಂದ್ರ ಎಲ್ಲೂ ಮಾತಾಡಿಲ್ಲ. ನಾನೂ ಕೂಡ ಹೇಳಿಲ್ಲ. ಬೈರತಿ ಸುರೇಶ್ ಅಲ್ಲಿ ಅಬ್ಸರ್ವರ್ ಆಗಿ ಹೋಗಿದ್ರು. ಅವರ ವರದಿ ಆಧಾರದಲ್ಲಿ ತೀರ್ಮಾನ ತೆಗೆದುಕೊಳ್ತೇವೆ ಎಂದರು. https://ainlivenews.com/mukesh-ambani-property-once-again-joins-the-100-billion-club/ ಇನ್ನು ರಾಮಮಂದಿರ ಉದ್ಘಾಟನೆಗೆ ಹೋಗುವ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಸಿಎಂ, ನಾನು ಅಯೋಧ್ಯೆಗೆ ಹೋಗಲ್ಲ ಅಂತಾ ಎಲ್ಲೂ ಹೇಳಿಲ್ಲ. ಈ ವಿಷಯದಲ್ಲಿ ಬಿಜೆಪಿ ಅವ್ರು ರಾಜಕೀಯ ಮಾಡ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಗೆ ನಮ್ಮ ಅಭ್ಯಂತರವಿಲ್ಲ. ಆದ್ರೆ ಬಿಜೆಪಿಯವರು ಅದನ್ನ ರಾಜಕೀಯವಾಗಿ ಬಳಸಿಕೊಳ್ತಿರೋದ್ರಿಂದ ನಮ್ಮ ವಿರೋಧವಿದೆ. ನಾನು ಹೋಗಲ್ಲ ಅಂದಿಲ್ಲ, ಹೋಗ್ತಿನಿ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ಮಣಿಪುರಕ್ಕೆ ತೆರಳಿದ್ದಾರೆ. ಹೆಚ್ ಎಎಲ್ ನಿಂದ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿರುವ ಮುಖ್ಯಮಂತ್ರಿಗಳು ಇಂದು ಮಣಿಪುರದಲ್ಲಿ (Manipura) ನಡೆಯಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆ (Bharat Jodo Nyay Yatre) ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ಅವರಿಗೆ ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಸಾಥ್ ನೀಡಿದ್ದಾರೆ. ಇಂದಿನಿಂದ ಭಾರತ್ ನ್ಯಾಯ್ ಯಾತ್ರೆ ಎಂಬ ಹೆಸರಿನಲ್ಲಿ ಮಣಿಪುರದಿಂದ ಮಹಾರಾಷ್ಟ್ರದ ಕಡೆಗೆ ರಾಹುಲ್ ಗಾಂಧಿ (Rahul Gandhi) ಯಾತ್ರೆ ಮಾಡಲಿದ್ದಾರೆ. ಮಣಿಪುರದಿಂದ ಮುಂಬೈಗೆ 67 ದಿನಗಳ ಅವಧಿಯಲ್ಲಿ ಪಾದಯಾತ್ರೆ ಮಾಡಲಿದ್ದಾರೆ. ಇಂದಿನಿಂದ ಮಾರ್ಚ್ 20 ರವರೆಗೆ ಇಂಫಾಲ್ನಿಂದ ಮುಂಬೈಗೆ ಯಾತ್ರೆ ಪ್ರಯಾಣಿಸಲಿದೆ. https://ainlivenews.com/mukesh-ambani-property-once-again-joins-the-100-billion-club/ ಭಾರತ್ ಜೋಡೋ ನ್ಯಾಯ್ ಯಾತ್ರೆಯು 66 ದಿನಗಳಲ್ಲಿ ಬಸ್ಸುಗಳು ಮತ್ತು ಕಾಲ್ನಡಿಗೆಯಲ್ಲಿ 6,713 ಕಿ.ಮೀಗಳನ್ನು ಕ್ರಮಿಸುವ ಗುರಿ ಹೊಂದಿದೆ. ಈ ಪಯಣದುದ್ದಕ್ಕೂ 14 ರಾಜ್ಯಗಳು, 110 ಜಿಲ್ಲೆಗಳು, 100 ಲೋಕಸಭಾ ಸ್ಥಾನಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ದಾಟಿ, ಮಾರ್ಚ್ 20…
ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಹಾನಗಲ್ ಪ್ರಕರಣವನ್ನು ಅಲ್ಲಿಯ ಪೊಲೀಸರು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದರು, ಅದು ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿ ದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದ ಅವರು, ದುಡ್ಡು ಕೊಟ್ಟು ಆಮಿಷವೊಡ್ಡಿ ಪ್ರಕರಣ ಹಿಂಪಡೆಯಲು ಮಾಡಿದ ಪ್ರಯತ್ನ ಮಾಡಿದ್ರುಲೋಕಲ್ ಪೊಲೀಸರು ಕೇಸನ್ನ ಮುಚ್ಚಿ ಹಾಕ್ತಾರೆ, ಅದನ್ನ ಎಸ್ಐಟಿಗೆ ಒಪ್ಪಿಸಿ ಅಂತ ಹೇಳಿದ್ದೇನೆ ನಾಳೆ ಹಾವೇರಿಗೆ ಬರಲಿರುವ ಸಿಎಂ ಪ್ರಕರಣ ಎಸ್ಐಟಿಗೆ ಒಪ್ಪಿಸುವ ಘೋಷಣೆ ಮಾಡ್ತಾರೆ ಅಂತಾ ನಿರೀಕ್ಷಿಸುತ್ತೇನೆ ಎಂದರು. ಎಸ್ಐಟಿ ರಚಿಸಲು ಆಗ್ರಹ: ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ನಿಗದಿತ ಕಾಲಾವಧಿಯಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಹಾಕಿ…
ಗದಗ: ಕೆರೆ ಏರಿ ತಡೆಗೋಡೆಗೆ ಢಿಕ್ಕಿಯಾಗಿ ಕಾರ್ ಪಲ್ಟಿಯಾಗಿ ಭಾರೀ ಅನಾಹುತ ತಪ್ಪಿರುವ ಘಟನೆ ಗದಗ ತಾಲೂಕಿನ ಹೊಂಬಳ ಗ್ರಾಮದಲ್ಲಿ ನಡೆದಿದೆ. ಹೊಂಬಳ ಗ್ರಾಮದ ಕಲ್ಲುಕೆರೆ ಕೆರೆ ಏರಿ ಮೇಲೆ ಚಳ್ಳಕೆರೆ ಅರಭಾವಿ ರಾಜ್ಯ ಹೆದ್ದಾರಿಯಲ್ಲಿ ಸಾಗ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಸ್ವಲ್ಪದರಲ್ಲೇ ಕೆರೆಯಲ್ಲಿ ಮುಳುಗೋದ್ರಿಂದ ಕಾರ್ ಬಚಾವ್ ಆಗಿದೆ. ಸ್ವಲ್ಪದರಲ್ಲೆ ಕಾರಿನಲ್ಲಿದ್ದ ಪ್ರಯಾಣಿಕರು ಬಚಾವಾಗಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಾಮರಾಜನಗರ: ಬಂಡೀಪುರ ಹುಲಿ ಯೋಜನೆಯ ಸಫಾರಿಯಲ್ಲಿ ಕಳೆದೊಂದು ವರ್ಷದಲ್ಲಿ ಪ್ರವಾಸಿಗರ ಏರಿಕೆ ಗಣನೀಯವಾಗಿ ಏರಿಕೆ ಕಂಡಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡೀಪುರ ಹುಲಿ ಯೋಜನೆಯಲ್ಲಿರುವ ಸಫಾರಿ ಪಾಯಿಂಟ್ ಒಂದೇ ವರ್ಷದಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆಕಂಡು ಆಶ್ಚರ್ಯ ಮೂಡಿಸಿದೆ. ಜನವರಿ 1 ರಿಂದ ಡಿಸೆಂಬರ್31 ವರಗೆ ಬಂಡೀಪುರ ಸಫಾರಿಗೆ 146500 ಜನರು ಭೇಟಿ. ಒಂದೇ ವರ್ಷಕ್ಕೆ 1 ಲಕ್ಷ 47 ಸಾವಿರ ಪ್ರವಾಸಿಗರಿಂದ ಬಂಡೀಪುರ ವೀಕ್ಷಣೆಯಾಗಿ ಆದಾಯ ಹೆಚ್ಚಿಸಿದೆ. ನರೇಂದ್ರ ಮೋದಿ ಎಫೆಕ್ಟ್ ನಿಂದಾಗಿ ಬಂಡೀಪುರದಲ್ಲಿ ಸಫಾರಿಗೆ ಮುಗಿಬಿದ್ದ ಹೊರ ರಾಜ್ಯದ ಪ್ರವಾಸಿಗರು ದಿನೇದಿನೇ ಹೆಚ್ಚಾಗ್ತಾ ಇದಾರೆ. ಅದರಲ್ಲೂ ರಜಾ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗ್ತಾ ಇದೆ. ಒಂದೇ ವರ್ಷದಲ್ಲಿ 10 ,ಕೋಟಿ 50 ಲಕ್ಷ ರೂಪಾಯಿ ಆದಾಯ ಗಳಿಕೆಯಾಗಿದ್ದು ಹಿಂದಿನ ವರ್ಷಕ್ಕೆ ಹೊಲಿಸಿದರೆ ಪ್ರವಾಸಿಗರ ಸಂಖ್ಯೆ ಹೆಚ್ಚಳವಾದಂತಾಗಿದೆ ಎಂದು ಬಂಡೀಪುರ ಸಿ.ಎಫ್.ಡಾ.ರಮೇಶ್ ಕುಮಾರ ಮಾಹಿತಿ ನೀಡಿದ್ದಾರೆ ದೇಶದ ಪ್ರತಿಷ್ಠಿತ ಸಂರಕ್ಷಿತಾರಣ್ಯ.50 ವರ್ಷದ ಸಂಭ್ರಮಾಚರಣೆ ಹಿನ್ನಲೆ ದೇಶದ ಪ್ರಧಾನಿ…
ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಅವರನ್ನು ಇಂಡಿಯಾ ಮೈತ್ರಿಕೂಟದ (I.N.D.I.A Alliance) ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಂಡಿಯಾ ಮೈತ್ರಿಕೂಟ ಈ ಬಗ್ಗೆ ಅಧಿಕೃತ ಘೋಷಣೆ ಮಾಡಬೇಕಿದೆ. ಬಿಹಾರದ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್ (Nitish Kumar) ಅವರನ್ನು ಮೈತ್ರಿಕೂಟದ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಗಿದೆ. ಆದರೆ ಅವರು ಸಂಚಾಲಕ ಸ್ಥಾನದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಇಂದಿನ ಸಭೆಗೆ ಗೈರಾಗಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. https://ainlivenews.com/mukesh-ambani-property-once-again-joins-the-100-billion-club/ ನಡೆದ ಸಭೆಯಲ್ಲಿ ಖರ್ಗೆ, ಎನ್ಸಿಪಿ ಅಧ್ಯಕ್ಷ ಶರದ್ ಪವಾರ್, ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಎಎಪಿ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಮೈತ್ರಿಕೂಟದ ಸಮನ್ವಯ ಸಮಿತಿಯ ಸದಸ್ಯರಾಗಿರುವ ಪಕ್ಷಗಳ ಮುಖ್ಯಸ್ಥರು…
ಸಹಜವಾಗಿಯೇ ಅಭಿಮಾನಿಗಳಿಗೆ ಆಘಾತ ಆಗಿದೆ. ಬಿಗ್ ಬಾಸ್ ಮನೆಯ ಸ್ಟ್ರಾಂಗ್ ಕಂಟೆಸ್ಟೆಂಟ್ ಆಗಿದ್ದ ವರ್ತೂರು ಸಂತೋಷ್ (Varthur Santhosh) ಬಿಗ್ ಬಾಸ್ (Bigg Boss) ಮನೆಯಿಂದ ಹೊರ ಬಂದಿದ್ದಾರೆ. ಫಿನಾಲೆವರೆಗೂ ದೊಡ್ಮನೆಯಲ್ಲಿ ಇರ್ತಾರೆ ಎಂದು ಹೇಳಲಾಗಿತ್ತು. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಿಗೆ ಆಘಾತ ಆಗಿದೆ. ಬಿಗ್ ಬಾಸ್ ಮನೆಯಲ್ಲಿ ಸಂತು ಪಂತು ಎಂದೇ ಗುರುತಿಸಿಕೊಂಡಿದ್ದ, ಅಭಿಮಾನಿಗಳಿಗೆ ಮೆಚ್ಚಿನ ಆಟಗಾರ ಆಗಿದ್ದ ಸಂತು, ಈಗ ಮನೆಯಿಂದ ಔಟ್ ಆಗಿದ್ದಾರೆ. ಹಾಗಾಗಿ ಮನೆಯಲ್ಲಿ ನೂರಾರು ಪ್ರಶ್ನೆಗಳು ಮೂಡಿವೆ. ಅವರು ಎಲಿಮಿನೇಷನ್ ಆಗಿದ್ದಕ್ಕೆ ಅವರ ಅಭಿಮಾನಿಗಳು ಕಾರಣ ಕೇಳೋದು ತಪ್ಪಿಲ್ಲ ಅನಿಸುತ್ತಿದೆ. https://ainlivenews.com/mukesh-ambani-property-once-again-joins-the-100-billion-club/ ಬಿಗ್ ಬಾಸ್ ಕಾರಣದಿಂದಾಗಿಯೇ ವರ್ತೂರು, ಖಾಸಗಿ ಬದುಕನ್ನು ಹರಾಜಿಗೆ ಇಟ್ಟಿದ್ದರು. ಜೈಲಿಗೂ ಹೋಗಿ ಬಂದಿದ್ದರು. ಮನೆಯಲ್ಲಿ ಸಖತ್ ಮನರಂಜನೆ ನೀಡುತ್ತಿದ್ದರು. ಈ ಎಲ್ಲ ಕಾರಣದಿಂದಾಗಿ ಕೊನೆಯವರೆಗೂ ಮನೆಯಲ್ಲಿ ಉಳಿತಾರೆ ಎಂದು ಹೇಳಲಾಗಿತ್ತು. ಅದು ಸುಳ್ಳಾಗಿದೆ. ವರ್ತೂರು ಮನೆಯಿಂದ ಹೊರ ಬಂದಿದ್ದಾರೆ. ಸಹಜವಾಗಿ ಅಭಿಮಾನಿಗಳಿಗೆ ಬೇಸರವಾಗಿದೆ. ಈ ಸಲ ಎಲಿಮಿನೇಷನ್ (Elimination) ಕುರಿತು ಟಫ್…