ಬೆಂಗಳೂರು:- ರಸ್ತೆಯಲ್ಲಿ ದೇವಸ್ಥಾನ ನಿರ್ಮಿಸಿದರೆ ಜನರು ಏನು ಮಾಡಬೇಕು? ಎಂದು ಹೈಕೋರ್ಟ್ ಅಸಮಾಧಾನ ಹೊರ ಹಾಕಿದೆ. ಸುಂಕದಕಟ್ಟೆ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ದೇವಸ್ಥಾನ ನಿರ್ಮಾಣ ಮಾಡಿರುವ ಸಂಬಂಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಸಾರ್ವಜನಿಕ ರಸ್ತೆಯಲ್ಲಿ ಧಾರ್ಮಿಕ ಕೇಂದ್ರ ನಿರ್ಮಾಣ ಮಾಡಿದರೆ ಜನ ಏನು ಮಾಡಬೇಕು? ಎಂದು ಮೌಖಿಕವಾಗಿ ಪ್ರಶ್ನಿಸಿದೆ. ರಸ್ತೆ ಒತ್ತುವರಿ ಮಾಡಿ ಸಲ್ಲಾಪುರದಮ್ಮ ದೇವಾಲಯ ಟ್ರಸ್ಟ್ ಸದಸ್ಯರು ದೇವಸ್ಥಾನ ನಿರ್ಮಿಸುತ್ತಿರುವುದಕ್ಕೆ ಆಕ್ಷೇಪಿಸಿ ಸುಂಕದಕಟ್ಟೆಯ ನಿವಾಸಿ ಸಿ.ಹೊನ್ನಯ್ಯ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಸ್ವಾತಂತ್ರ ಪ್ರಾಧಿಕಾರರಿಂದ ಸ್ಪಷ್ಟವಾದ ವರದಿ ಪಡೆಯುವುದು ಸೂಕ್ತ ಎಂದೆನಿಸಿದೆ. ಸಂಬಂಧಿತ ಎಲ್ಲರಿಗೂ ನೋಟಿಸ್ ಜಾರಿ ಮಾಡಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ನೇಮಿಸಿದ ಭೂ ದಾಖಲೆಗಳ ಉಪ ನಿರ್ದೇಶಕರು(ಡಿಡಿಎಲ್ಆರ್) ತಾಂತ್ರಿಕ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ವಾಸ್ತವಿಕ ವರದಿಯನ್ನು ಮೂರು ವಾರಗಳಲ್ಲಿ ಸಲ್ಲಿಸಬೇಕು. ನೋಟಿಸ್ ಪಡೆದ ಸಂಬಂಧಿತರು ಸೂಕ್ತ ದಾಖಲೆಗಳನ್ನು ಡಿಡಿಎಲ್ಆರ್ ಅವರಿಗೆ ನೀಡಬೇಕು. ಡಿಡಿಎಲ್ಆರ್ ಅವರು…
Author: AIN Author
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಕಾಟೇರ ಚಿತ್ರವು ಡಿಸೆಂಬರ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ ವಾರದ ದಿನಗಳಲ್ಲೂ ಚಿತ್ರ ಉತ್ತಮ ಗಳಿಕೆ ಕಂಡಿದ್ದು, ಬಿಡುಗಡೆಯಾದ ಒಂದೇ ವಾರದಲ್ಲಿ ಚಿತ್ರ 100 ಕೋಟಿ ರೂಪಾಯಿ ಗಳಿಕೆ ಮಾಡಿ ವಿಶೇಷ ದಾಖಲೆಗೆ ಪಾತ್ರವಾಗಿತ್ತು. ಚಿತ್ರತಂಡದವರು ಹೇಳಿರುವ ಪ್ರಕಾರ ಸಿನಿಮಾ ಎರಡನೇ ವಾರಕ್ಕೆ 157.42 ಕೋಟಿ ಕಮಾಯಿ ಮಾಡಿದೆ ಎಂದು ತಿಳಿದು ಬಂದಿದೆ. ಮೊದಲ ವಾರದಲ್ಲಿ 406 ಚಿತ್ರಮಂದಿರಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ ಬಿಡುಗಡೆ ಯಾಗಿತ್ತು. 2 ನೇ ವಾರದಲ್ಲಿ462 ಥೇಟರ್ ಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ ತನ್ನ ಯಶಸ್ವಿ ಪ್ರದರ್ಶನ ಮುಂದುವರೆಸಿತ್ತು. ಇದೀಗ ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಒಟ್ಟು 416 ಥೇಟರ್ ಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ ತನ್ನ ಯಶಸ್ವಿ ಪ್ರದರ್ಶನ ಮುಂದುವರೆಸಿದೆ
ಬೆಂಗಳೂರು: ನಗರದಲ್ಲಿ ನಿಯಂತ್ರಿಸಲು ಬೆಂಗಳೂರು ಹೊರವಲಯದ ಸುತ್ತಲೂ ಸುಮಾರು 287 ಕಿಮೀ ಉದ್ದದ ರಿಂಗ್ ರೈಲು ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರ ಅಧ್ಯಯನಕ್ಕಾಗಿ ಈಗಾಗಲೆ 7 ಕೋಟಿ ರೂ. ಮಂಜಾರಾಗಿತ್ತು. ಇದೀಗ ಯೋಜನೆಗಾಗಿ ರೈಲ್ವೆ ಇಲಾಖೆಯಿಂದ ಅಂತಿಮ ಹಂತದ ಲೊಕೇಶನ್ ಸರ್ವೆ ಕಾರ್ಯ ನಡೆಯುತ್ತಿದೆ. ಈ ಲೊಕೆಶನ್ ಸರ್ವೆಯಲ್ಲಿ ರೈಲ್ವೆ ಇಲಾಖೆ ಹಲವು ಮಾಹಿತಿ ಸಂಗ್ರಹಿಸಿದೆ. ಅಲೈನ್ ಮೆಂಟ್, ನಿಲ್ದಾಣಗಳ ಸಂಖ್ಯೆ ಮತ್ತು ಮ್ಯಾಪಿಂಗ್, ಸಿವಿಲ್ ಸ್ಟ್ರಕ್ಚರ್-ಬ್ರಿಡ್ಜ್ ಗಳು ಯೋಜನೆಗೆ ಬೇಕಾಗುವ ಲ್ಯಾಂಡ್ ಬಗ್ಗೆ ಮಾಹಿತಿ ಸಂಗ್ರಹಿಸಿದೆ. ಈ ರಿಂಗ್ ರೈಲ್ ಏಳು ಪ್ರಮುಖ ನಿಲ್ದಾಣಗಳನ್ನು ಹೊಂದಿರಲಿದೆ. ನೀಡವಂದ, ದೊಡ್ಡಬಳ್ಳಾಪುರ, ದೇವನಹಳ್ಳಿ, ಮಾಲೂರು, ಹೀಲಲಿಗೆ, ಹೆಜ್ಜಾಲ, ಸೋಲುರು ಪ್ರಮುಖ ನಿಲ್ದಾಣಗಳಾಗಿವೆ. ಬೆಂಗಳೂರು ಉಪನಗರ ರೈಲ್ವೇ ಯೋಜನೆ, ನಮ್ಮ ಮೆಟ್ರೋ ರೈಲಿಗೆ ಪೂರಕವಾಗಿ ನಗರದ ಸುತ್ತ ವೃತ್ತಾಕಾರವಾಗಿ ರಿಂಗ್ ರೈಲು ಯೋಜನೆ ನಿರ್ಮಾಣಗೊಳ್ಳಲಿದೆ. ನಗರದಲ್ಲಿ ಮುಂದಿನ 20-30 ವರ್ಷಗಳ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಯಲ್ಲಿ ರಿಂಗ್ ರೈಲ್ ಪ್ರಮುಖ ಪಾತ್ರ ವಹಿಸಲಿದೆ.…
ಅಯೋಧ್ಯೆಯಲ್ಲಿ ಕನ್ನಡದ ಹಾಡು ಮೊಳಗಲಿದ್ದು, ಹಾಡು ರಚನಾಕಾರರಿಗೆ ಇದು ಹೆಮ್ಮೆಯ ವಿಷಯವಾಗಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ದೇಶ, ವಿದೇಶಗಳಿಂದ ಕಾಣಿಕೆಗಳು ಹರಿದುಬರುತ್ತಿದೆ. ಬಾಲ ರಾಮನನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಹಿಂದೂಗಳು ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಕರ್ನಾಟಕದ ಜನತೆ ಖುಷಿಪಡುವ ಸುದ್ದಿಯೊಂದು ಹೊರಬಿದ್ದಿದೆ. ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಅಯೋಧ್ಯೆಯಲ್ಲಿ ಕನ್ನಡದ ಹಾಡು ಮೊಳಗಲಿದೆ. ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹ ಲೋಕಾರ್ಪಣೆ ವೇಳೆ ಕನ್ನಡದ ಹಾಡು ಮೊಳಗಲಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಗೀತೆ ರಚನೆಗಾರ ಡಾ.ಗಜಾನನ ಶರ್ಮಾ ರಚಿಸಿರುವ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಎಂಬ ಗೀತೆ ಜ.22 ರಂದು ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಪ್ರಸಾರವಾಗಲಿದೆ. ಈ ಕುರಿತು ಅಯೋಧ್ಯೆ ಟ್ರಸ್ಟ್ ಎಕ್ಸ್ನಲ್ಲಿ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದೆ. ಈ ಕುರಿತು ಡಾ.ಗಜಾನನ ಶರ್ಮಾ ಸ್ಪಷ್ಟಪಡಿಸಿದ್ದು, ನಾನು ರಚಿಸಿದ ಹಾಡನ್ನು ರಾಮಮಂದಿರ ಟ್ರಸ್ಟ್ನವರು ತೆಗೆದುಕೊಂಡಿದ್ದಕ್ಕೆ ಖುಷಿಯಾಗಿದೆ…
ಶಿವಮೊಗ್ಗ:- ಹೆಚ್ಚುವರಿ ಡಿಸಿಎಂ ನೇಮಕದ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಈ ಬಗ್ಗೆ ನಾನು ಮಾತನಾಡುವುದಿಲ್ಲ. ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಏನು ಹೇಳಬೇಕೋ ಅದನ್ನು ಹೇಳಿದ್ದಾರೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆಗೆ ಹೇಗೆ ಸಹಕಾರಿಯಾಗಲಿವೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, “ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬುವ ಉದ್ದೇಶದೊಂದಿಗೆ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಆದರೆ, ನಾವು ಈ ವಿಚಾರದಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ. ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರ ಅಭಿವೃದ್ಧಿ ಮಾಡಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು ಮತಬ್ಯಾಂಕ್ ಗಾಗಿ ಜಾರಿ ಮಾಡಿಲ್ಲ” ಎಂದು ಹೇಳಿದರು.
ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಗ್ಯಾರಂಟಿ ಯೋಜನೆ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಜಾರಿಯಾಗುತ್ತಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಶಿವಮೊಗ್ಗದ ಫ್ರೀಡಂ ಪಾರ್ಕ್ ಆವರಣದಲ್ಲಿ ಆಯೋಜಿಸಲಾಗಿದ್ದ ಯುವ ನಿಧಿ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯದ ಯುವ ಸಮುದಾಯಕ್ಕೆ ಬೆನ್ನಲುಬಾಗಿ ನಿಂತು ಅವರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಅದರಲ್ಲೂ ಈ ಯುವನಿಧಿ ಯೋಜನೆಯೂ ಹೋರಾಟದ ನೆಲ, ಸರ್ವಜನಾಂಗದ ಶಾಂತಿಯ ತೋಟ ಎಂದು ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಜಿಲ್ಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದಂದು ಮಲೆನಾಡಿನಿಂದ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಜಾರಿಯಾಗುತ್ತಿದೆ. ಇದು ರಾಜ್ಯದ ಜನತೆಗೆ ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಇದರ ಉಪಯೋಗವನ್ನು ರಾಜ್ಯದ ಯುವ ಸಮುದಾಯ…
ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ (Ayodhya Ram Mandir) ನಡೆಯುವ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನವನ್ನು ನಿರಾಕರಿಸಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಗಿರಿರಾಜ್ ಸಿಂಗ್ (Giriraj Singh) ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಜನರು ಅವಕಾಶವಾದಿ ಹಿಂದೂಗಳಾಗಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಮತ ಪಡೆಯಲು ಮೃದು ಹಿಂದೂಗಳಾಗಲು ಪ್ರಯತ್ನಿಸುತ್ತಾರೆ. ಜವಾಹರಲಾಲ್ ನೆಹರೂ ನಂತರ ಕಾಂಗ್ರೆಸ್ಸಿನ ಯಾರೊಬ್ಬರೂ ಅಯೋಧ್ಯೆಗೆ ಹೋಗಿಲ್ಲ ಎಂದು ಕಿಡಿಕಾರಿದರು. https://ainlivenews.com/if-you-have-a-gmail-account-and-are-not-using-it-you-must-read-this-story/ ನ್ಯಾಯಾಲಯದಲ್ಲಿ ಪ್ರಕರಣವನ್ನು ಇತ್ಯರ್ಥಗೊಳಿಸುವ ಕೆಲಸವನ್ನು ಸ್ವತಃ ಕಾಂಗ್ರೆಸ್ (Congress) ಪಕ್ಷವೇ ಮಾಡಿದೆ. ಆದರೆ ಅವರಿಗೆ ಅಯೋಧ್ಯೆಗೆ ಹೋಗಲು ನೈತಿಕ ಶಕ್ತಿ ಇಲ್ಲ ಎಂದು ಸಚಿವರು ತಿಳಿಸಿದರು. ಅಯೋಧ್ಯೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸೋನಿಯಾ ಗಾಂಧಿ (Sonia Gandhi) ಮತ್ತು ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ಬಂದಿತ್ತು. ಆದರೆ ಗೌರವ ಪೂರ್ವಕವಾಗಿ ಕಾಂಗ್ರೆಸ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗದಿರಲು ನಿರ್ಧರಿಸಿದೆ ಎಂದು…
ನೆಲಮಂಗಲ:- ಬೆಂಗಳೂರು ಗ್ರಾ. ಜಿಲ್ಲೆ ನೆಲಮಂಗಲದ ಸುಭಾಷ್ ನಗರದಲ್ಲಿ ತಾನು ಪ್ರೀತಿಸಿದ ಹುಡುಗಿ ಬೇರೊಬ್ಬರ ಜೊತೆ ಮದುವೆಯಾದಳು ಎಂಬ ಕಾರಣಕ್ಕೆ ಮನನೊಂದ ಯುವಕ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನನ್ನು ಕಳೆದುಕೊಂಡ ಇಡೀ ಕುಟುಂಬ ಕಣ್ನೀರಲ್ಲಿ ಕೈತೊಳೆಯುತ್ತಿದೆ. ಮೃತ ಪ್ರವೀಣ್ ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಯುವತಿ ಜೊತೆ ಲವ್ ಬ್ರೇಕಪ್ ಆಗಿತ್ತು. ಅಲ್ಲದೆ ತಾನು ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬರ ಜೋತೆ ವಿವಾಹವಾದಳು. ಇದರಿಂದ ನೊಂದಿದ್ದ ಯುವಕ ಕಳೆದ 6 ತಿಂಗಳಿಂದ ಯುವತಿಯ ನೆನಪಲ್ಲೇ ಕಣ್ಣೀರು ಹಾಕಿದ್ದ. ಆದರೆ ನಿನ್ನೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ರೂಂನ ಫ್ಯಾನಿಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವು ಸಾಮಾನ್ಯ ಕೇಬಲ್ ಮತ್ತು ಲೈವ್ ಆಗಿ ನೋಡಲು ಸಾಧ್ಯವಾಗದ ಟಿವಿ ಕಾರ್ಯಕ್ರಮಗಳ ಬೆಂಬಲಿಗರಲ್ಲದಿದ್ದರೆ, ಬಹಳಷ್ಟು ಹೊಸ ವಿಷಯಗಳು ಇಂಟರ್ನೆಟ್ ಅನ್ನು ಅವಲಂಬಿಸಿರುವುದನ್ನು ಗಮನಿಸಿರಬಹುದು. ನಿಮ್ಮ ನಿಯಮಿತ ಸೆಟ್-ಟಾಪ್ ಬಾಕ್ಸ್ ಮೂಲಕ ನೀವು ವಿವಿಧ ರೀತಿಯ ಪ್ರೋಗ್ರಾಮಿಂಗ್ಗೆ ಪ್ರವೇಶವನ್ನು ಹೊಂದಿದ್ದರೂ, ನೀವು ಸ್ಟ್ರೀಮಿಂಗ್ ಕ್ರಾಂತಿಯನ್ನು ಪಡೆಯದಿದ್ದರೆ ನೀವು ತಪ್ಪಿಸಿಕೊಳ್ಳುತ್ತೀರಿ. ಅನೇಕ ಅತ್ಯುತ್ತಮ ಟಿವಿ ಶೋಗಳು ಮತ್ತು ಚಲನಚಿತ್ರಗಳು ಈಗ ಆನ್ಲೈನ್ನಲ್ಲಿ ಕಂಡುಬರುತ್ತವೆ ಮತ್ತು ನೆಟ್ಫ್ಲಿಕ್ಸ್, ಹಾಟ್ಸ್ಟಾರ್ ಮತ್ತು ಅಮೆಜಾನ್ ಪ್ರೈಮ್ ವೀಡಿಯೊದಂತಹ ಸ್ಟ್ರೀಮಿಂಗ್ ಸೇವೆಗಳ ಮೂಲಕ ಸಾಮಾನ್ಯವಾಗಿ ಲಭ್ಯವಿವೆ. ನೀವು ಪರಿಕಲ್ಪನೆಯಲ್ಲಿ ಮಾರಾಟವಾಗಿದ್ದರೂ ಸಹ, ಸಮಸ್ಯೆಯು ಈಗ ನಿಮ್ಮ ಪರದೆಯೊಂದಿಗೆ ಉದ್ಭವಿಸುತ್ತದೆ. ಖಚಿತವಾಗಿ, ನಿಮ್ಮ ಸ್ಮಾರ್ಟ್ಫೋನ್ ಜನಪ್ರಿಯ ಸ್ಟ್ರೀಮಿಂಗ್ ಸೇವೆಗಳನ್ನು ಬೆಂಬಲಿಸುತ್ತದೆ ಮತ್ತು ಮೊಬೈಲ್ ಡೇಟಾದ ವೆಚ್ಚವನ್ನು ಕಡಿಮೆ ಮಾಡುವುದು ಎಂದರೆ ಅದರ ಕೈಗೆಟುಕುವ ದರವೂ ಆಗಿದೆ. ಆದರೆ ನಿಮ್ಮ ವೀಡಿಯೊ ವಿಷಯವನ್ನು ಸಣ್ಣ ಪರದೆಯಲ್ಲಿ ವೀಕ್ಷಿಸಲು ನೀವು ಬಯಸದಿದ್ದರೆ ಏನು ಮಾಡಬೇಕು? ನಿಮ್ಮ ಟಿವಿಯನ್ನು ನೀವು ಬಳಸಬಹುದಾದರೆ ಏನು? ನೀವು…
ಬೆಂಗಳೂರು:- ನಗರದ ಟರ್ಫ್ಕ್ಲಬ್ ಮೇಲೆ ಸಿಸಿಬಿ ದಾಳಿ ನಡೆದಿದ್ದು, ೩ ಕೋಟಿಗೂ ಹೆಚ್ಚು ನಗದು ಜಪ್ತಿ ಮಾಡಲಾಗಿದೆ. ಜಿಎಸ್ಟಿ ಕಟ್ಟದೆ ವಂಚನೆ ಹಾಗೂ ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಮಾಡಿರುವ ಆರೋಪದಡಿ ಸಿಸಿಬಿ ಪೊಲೀಸರು ಶುಕ್ರವಾರ ದಾಳಿ ನಡೆಸಿದ್ದಾರೆ, ಬೆಂಗಳೂರು ಟರ್ಫ್ಕ್ಲಬ್ಗೆ ಬರುವವರಿಂದ ಹೆಚ್ಚು ಹಣ ಪಡೆದು ಕಡಿಮೆ ಮೊತ್ತಕ್ಕೆೆ ಟಿಕೆಟ್ ಮಾರಾಟ, ಸೂಕ್ತ ರೀತಿಯಲ್ಲಿ ಜಿಎಸ್ಟಿ ಕಟ್ಟದೆ ವಂಚನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಕೌಂಟರ್ನಲ್ಲಿನ ಸಿಬ್ಬಂದಿ ಹೊರ ಹೋಗದಂತೆ ಲಾಕ್ ಮಾಡಿ ಪರಿಶೀಲನೆ ನಡೆಸಿದ್ದಾರೆ. ವಿಕ್ರಾಂತ್ ಎಂಟರ್ ಪ್ರೈಸಸ್, ನಿರ್ಮಲ್ ಅಂಡ್ ಕೋ, ಶ್ರೀರಾಮ ಎಂಟರ್ ಪ್ರೈಸಸ್, ಚಾಮುಂಡೇಶ್ವರಿ ಎಂಟರ್ ಪ್ರೈಸಸ್, ಆರ್.ಆರ್ ಎಂಟರ್ ಪ್ರೈಸಸ್, ರಾಯಲ್ ಇಎನ್ ಟಿಪಿ, ಆರ್.ಕೆ.ಎಂಟರ್ ಪ್ರೈಸಸ್, ಎಎ ಅಸೋಸಿಯೇಟ್ಸ್, ಸಾಮ್ರಾಟ್ ಅಂಡ್ ಕೋ. ನೀಲಕಂಠ, ಮೆಟ್ರೊ ಅಸೋಸಿಯೇಟ್ಸ್, ಪರಸ್ ಅಂಡ್ ಕೋ, ಕಾರ್ತಿಕ್ ಆಯಂಡ್ ಕಂಪನಿ, ಅಮೃತಾಯ ಕೌಂಟರ್ ಸೇರಿದಂತೆ ಹಲವು ಕೌಂಟರ್ಗಳಲ್ಲಿ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.