Author: AIN Author

ಟಿ20 ವಿಶ್ವಕಪ್ ನಲ್ಲಿ ಭಾರತದ ವಿಕೆಟ್ ಕೀಪರ್ ಯಾರಾಗಬಹುದು? ಎಂಬ ಕುತೂಹಲ ಸಾಮಾನ್ಯವಾಗಿ ಮೂಡಿದೆ. ಭಾರತ ತಂಡದ ಬೆಂಚ್​ ಗಾತ್ರ ದೊಡ್ಡದಿದೆ. ಅದರಲ್ಲಿ ವಿಕೆಟ್​ ಕೀಪರ್​ಗಳೂ ಹಲವರಿದ್ದಾರೆ. ಹೀಗಾಗಿ ಚುಟುಕು ಮಾದರಿಯ ಕ್ರಿಕೆಟ್​ನಲ್ಲಿ ಯಾರು ವಿಕೆಟ್​ಗಳ ಹಿಂದಿನ ಜವಾಬ್ದಾರಿ ವಹಿಸಿಕೊಳ್ಳಬಹುದು ಎಂಬ ಚರ್ಚೆಗಳು ಆರಂಭಗೊಂಡಿವೆ. ಭಾರತ ತಂಡದಲ್ಲಿರುವ ವಿಕೆಟ್​​ಕೀಪರ್​ಗಳು ಒಬ್ಬರಿಗಿಂತ ಒಬ್ಬರು ಬಲಶಾಲಿಗಳಾಗಿರುವ ಕಾರಣ ಯಾರಿಗೆ ಆಯ್ಕೆ ಮಂಡಳಿ ಮಣೆ ಹಾಕಬಹುದು ಎಂಬುದೇ ಕುತೂಹಲದ ಸಂಗತಿ. ಹಾಗಾದರೆ ಟಿ20 ತಂಡಕ್ಕೆ ಆಯ್ಕೆಯಾಗಬಹುದಾದ ವಿಕೆಟ್​ಕೀಪರ್​ಗಳು ಹಾಗೂ ಅವರ ಸಾಮರ್ಥ್ಯಗಳ ಬಗ್ಗೆ ನೋಡೋಣ. ಕೇರಳದ ಸ್ಪೋಟಕ ಬ್ಯಾಟ್ಸ್ಮನ್ ಟಿ20 ಐ ತಂಡದ ಉದ್ದೇಶಿತ ಆಟಗಾರ. ಅವರು ಆಗಾಗ ತಮ್ಮ ಪ್ರತಿಭೆ ಪ್ರದರ್ಶಿಸುತ್ತಾರೆ. ಆದರೆ ಅವರ ಬ್ಯಾಟಿಂಗ್​ನಲ್ಲಿ ಸ್ಥಿರತೆಯ ಕೊರತೆಯಿದೆ. ಏಕದಿನ ಪಂದ್ಯಗಳಲ್ಲಿ ಅವರ ಚೊಚ್ಚಲ ಅಂತರರಾಷ್ಟ್ರೀಯ ಶತಕದ ಹಿನ್ನೆಲೆಯಲ್ಲಿ ವಿಶ್ವ ಕಪ್​ಗೆ ಮುಂಚಿತವಾಗಿ ನಡೆದ ಅಫಘಾನಿಸ್ತಾನ ವಿರುದ್ಧದ ಟಿ20ಐ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ವಿರುದ್ಧದ ತಂಡದಲ್ಲಿ ಅವರ…

Read More

ರಾಜ್ಯ ಸರ್ಕಾರವು 5151 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ರಾಜ್ಯ ಸರ್ಕಾರದ ನಾನಾ ಇಲಾಖೆಗಳಲ್ಲಿ (Government Job) ಬಾಕಿ ಇರುವ ಹುದ್ದೆಗಳಿಗೆ ಅರ್ಜಿ ಕರೆದಿದೆ. ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ. , ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ಸೋಪ್ಸ್ ಆಯಂಡ್​ ಡಿಟರ್ಜೆಂಟ್ಸ್ ಲಿಮಿಟೆಡ್​ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜನವರಿ 10 2024ರಂದು ಪ್ರಕಟಣೆ ಹೊರಡಿಸಿದೆ. ಆದರೆ ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ, ವೃಂದವಾರು ವರ್ಗೀಕರಣ, ಅರ್ಜಿ ಸಲ್ಲಿಕೆಯ ಕೊನೇ ದಿನಾಂಕ ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಮಾಹಿತಿಯನ್ನು ಅಧಿಸೂಚನೆ ಪ್ರಕಟಿಸುವ ವೇಳೆ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಉದ್ಯೋಗ ವಿವರ ಇಲ್ಲಿದೆ ಶೈಕ್ಷಣಿಕ ಅರ್ಹತೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮಗಳ ಪ್ರಕಾರ ನಿಗದಿಯಾಗಲಿದೆ. ಮುಂದೆ ಪ್ರಕಟಗೊಳ್ಳಲಿದೆ. ವಯೋಮಿತಿ: ಕರ್ನಾಟಕ…

Read More

ಶಿವಮೊಗ್ಗ:- ನಾನು ಅಯೋಧ್ಯೆಗೆ ಹೋಗುತ್ತೇನೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸಿದ್ದರಾಮಯ್ಯ, ನಾನು ಕೂಡ ಶ್ರೀರಾಮನ ಭಕ್ತ. ಆದರೆ, ಬಿಜೆಪಿಯವರು ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡಲು ಹೋಗುತ್ತಿದ್ದಾರೆ. ಅದರ ವಿರುದ್ಧ ನಮ್ಮ ಹೋರಾಟವೇ ಹೊರತು ಶ್ರೀರಾಮನ ವಿರೋಧ ಮಾಡುತ್ತಿಲ್ಲ. ನಾನು ಕೂಡ ಅಯೋಧ್ಯೆಗೆ ಹೋಗುತ್ತೇನೆ ಎಂದು ಸ್ಪಷ್ಟಪಡಿಸಿದರು. ಅಯೋಧ್ಯೆ ರಾಮಜನ್ಮಭೂಮಿಯ (Ram Janmabhoomi) ರಾಮ ಮಂದಿರದಲ್ಲಿ (Ram Mandir) ಜನವರಿ 22ರಂದು ರಾಜ್ಯದಲ್ಲಿ ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ. ಬಿಜೆಪಿಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ? ಶ್ರೀರಾಮಚಂದ್ರ ಇಲ್ಲಿ ಇಲ್ಲವೇ? ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ರಾಜ್ಯದಲ್ಲಿಯೂ ಪೂಜೆ ನಡೆಯಲಿದೆ ಎಂದು ಹೇಳಿದ್ದಾರೆ.

Read More

ಬೆಂಗಳೂರು:- ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಸದ್ಯದ ಮಟ್ಟಿಗೆ ಮಳೆ ಮುನ್ನೆಚ್ಚರಿಕೆಯಾಗಲಿ, ತಾಪಮಾನದ ಮುನ್ಸೂಚನೆ ಇಲ್ಲ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಇರಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನು ಗಳಿಗೆಗೊಂದು ವಾತಾವರಣವು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ವಾರದ ಹಿಂದೆ ಮಳೆಯು ಅಬ್ಬರಿಸುತ್ತಿತ್ತು. ಇದೀಗ ಏಕಾಏಕಿ ಬಿಸಿಲು, ಗಾಳಿ ಎರಡು ಒಟ್ಟೊಟ್ಟಿಗೆ ದಾಳಿ ಮಾಡುತ್ತಿದೆ. ಸದ್ಯ ದಿಢೀರ್‌ ಹವಾಮಾನ ವೈಪರಿತ್ಯದಿಂದಾಗಿ ಕೆಮ್ಮು, ನೆಗಡಿ, ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ಜ.13ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಲ್ಲಿ ಶುಷ್ಕ ವಾತಾವರಣವೇ ಮೇಲುಗೈ ಸಾಧಿಸಲಿದೆ. ಜತೆಗೆ ಗಾಳಿ ವೇಗವು ಜೋರಾಗಿರಲಿದ್ದು, ಸಂಜೆ ಥಂಡಿ ಗಾಳಿ ಬೀಸಲಿದೆ.

Read More

ರಾಯಚೂರು:- ನರೇಂದ್ರ ಮೋದಿ ಅವರನ್ನು 3ನೇ ಬಾರಿ ಪ್ರಧಾನ ಮಂತ್ರಿ ಆಗದಂತೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯ ಪರವಾಗಿ ಅಲೆಯಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಆತಂಕದಲ್ಲಿದ್ದಾರೆ. ರಾಮಮಂದಿರ ಹಾಗೂ ಅಲ್ಪಸಂಖ್ಯಾತರ ತುಷ್ಟೀಕರಣ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ನಡವಳಿಕೆಯನ್ನು ಮತದಾರರು ಗಮನಿಸುತ್ತಿದ್ದಾರೆ. ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟ ತಕ್ಷಣ ಗ್ಯಾರಂಟಿಗಳು ಜನರಿಗೆ ತಲುಪಿದೆ ಅಂತಲ್ಲ. ಮುಂದೆ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡುತ್ತಾರೆ ಎಂದರು. ಒಂದೆಡೆ ಮೂವರನ್ನು ಉಪ ಮುಖ್ಯಮಂತ್ರಿ ಮಾಡಬೇಕು ಅಂತ ಅವರ ಪಕ್ಷದ ನಾಯಕರೇ ಧ್ವನಿ ಎತ್ತಿದ್ದಾರೆ. ರಾಜ್ಯದಲ್ಲಿ ಈ ಸರ್ಕಾರ ಬಂದಮೇಲೆ ಒಂದು ಅಭಿವೃದ್ಧಿ ಕೆಲಸವೂ ಆಗಿಲ್ಲ ಎಂದು ಜನರು ಶಾಪ ಹಾಕುತ್ತಿದ್ದಾರೆ. ಆದರೆ, ಬರಗಾಲದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ. 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರಗಾಲದಲ್ಲಿ ತ್ರಿಪೇಸ್ ವಿದ್ಯುತ್ ಕೊಡಲು ಸರ್ಕಾರಕ್ಕೆ ಆಗಿಲ್ಲ. ಇದು ಜನ ವಿರೋಧಿ, ಬಡವರ ವಿರೋಧಿ, ರೈತ…

Read More

ಶಿವಮೊಗ್ಗ:- ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರು ಇಡುವುದಾಗಿ CM ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಆಶಯದಂತೆ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು (Allama Prabhu) ಅವರ ಹೆಸರನ್ನು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ. ಹೀಗಾಗಿ ಫ್ರೀಡಂ ಪಾರ್ಕ್‌ಗೆ (Freedom Park) ಅಲ್ಲಮ ಪ್ರಭು (Allama Prabhu) ಎಂದು ನಾಮಕರಣ ಮಾಡಲು ನಾನು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದರು. ಅಲ್ಲಮ ಪ್ರಭು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ಅವರ ಕೊಡುಗೆ ಅಸಾಮಾನ್ಯವಾಗಿದೆ. ಹೀಗಾಗಿ ಮಧು ಬಂಗಾರಪ್ಪ ಅವರು ಸೂಚಿಸಿದಂತೆ ಅವರ ಹೆಸರನ್ನು ಇಡುವುದು ಸೂಕ್ತ ಎಂದು ಭಾವಿಸಿದ್ದೇನೆ…

Read More

ತಡರಾತ್ರಿ ಪಾರ್ಟಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟರಾದ ದರ್ಶನ್ (Darshan), ಚಿಕ್ಕಣ್ಣ, ಡಾಲಿ ಧನಂಜಯ್ಯ,  ನೀನಾಸಂ ಸತೀಶ್, ಅಭಿಷೇಕ್ ಅಂಬರೀಶ್, ನಿರ್ದೇಶಕ ತರುಣ್ ಸುಧೀರ್ ಹಾಗು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಸುಬ್ರಮಣ್ಯ ನಗರ ಪೊಲೀಸ್ (Police) ಠಾಣೆಗೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ ಮಾಲೀಕರು ಹಾಗೂ ಮ್ಯಾನೇಜರ್ ಮೇಲೆ ಎಫ್.ಐ. ಆರ್ ದಾಖಲಾಗಿತ್ತು. ಪಾರ್ಟಿ ಮಾಡಿದ ನಟರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು ಪೊಲೀಸರು. ಇಂದು ಎಲ್ಲರೂ ಒಟ್ಟಾಗಿ ಸುಬ್ರಮಣ್ಯ ನಗರ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

Read More

ಪೀಣ್ಯ ದಾಸರಹಳ್ಳಿ‌ : ಬೆಂಗಳೂರು ಉತ್ತರ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಪುಷ್ಪಲತಾ ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಪದ್ಮಾವತಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ. ಡಾ.ಬಿ ಆರ್ ರವಿಕುಮಾರ್ ಸಹಾಯಕ ನಿರ್ದೇಶಕರು ಪಶುಪಾಲನಾ ಇಲಾಖೆ ಘೋಷಣೆ ಮಾಡಿದರು. ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಸಿಎಂ ಎ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಪುಷ್ಪಲತಾ ಮಂಜುನಾಥ ಅವಿರೋಧ ಆಯ್ಕೆಯಾದರೆ ಉಪಾಧ್ಯಕ್ಷ ಸ್ಥಾನಕ್ಕೆ ಸುನಿತಾ ಮತ್ತು ಪದ್ಮಾವತಿ ನಾಮಪತ್ರ ಸಲ್ಲಿಸಿದ್ದರು. ಸಾಮಾನ್ಯ ಸಭೆ ಕರೆದು ನಾಮಪತ್ರ ಪರಿಶೀಲನೆ ಮಾಡಲಾಯಿತು. ಆಲೂರು ಗ್ರಾಮ ಪಂಚಾಯಿತಿಯ 27 ಸದಸ್ಯರು ಸಭೆಗೆ ಹಾಜರಿದ್ದರು. ಯಾರೂ ನಾಮಪತ್ರ ವಾಪಸ್‌ ಪಡೆಯದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಇದ್ದುದರಿಂದ ಪುಷ್ಪಲತಾ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಎರಡು ನಾಮಪತ್ರ ಸಲ್ಲಿಸಿದ್ದರಿಂದ ಗುಪ್ತ ಮತದಾನ ನಡೆಸಲಾಯಿತು. ಗುಪ್ತ ಮತದಾನದಲ್ಲಿ ಪದ್ಮಾವತಿ16 ಮತಗಳು ಪ್ರತಿ ಸ್ಪರ್ಧಿ 11 ಮತ ಪಡೆದರು. ಹೆಚ್ಚು ಮತ ಪಡೆದ ಪದ್ಮಾವತಿ ಅವರನ್ನು ಉಪಾಧ್ಯಕ್ಷರು ಎಂದು…

Read More

ಬೆಂಗಳೂರು : ಕಾಂಗ್ರೆಸ್‌ʼನವರು  ಜಾಹೀರಾತು‌ ನೀಡುತ್ತಿರುವುದರಿಂದ ಮಾಧ್ಯಮಗಳ ಸಹಕಾರ ಸಿಗುತ್ತಿದೆ ಎಂದು ತಿಳಿದುಕೊಂಡಿದ್ದಾರೆ ಹಾಗಾಗಿ  ಭ್ರಷ್ಟಾಚಾರದಲ್ಲಿ ‌ನಾವೇ ನಂಬರ್‌ 1 ಅಂತ‌ ಜಾಹೀರಾತು ಕೊಡಿ ಎಂದು ಕಾಂಗ್ರೆಸ್​ ನಾಯಕರಿಗೆ ಸಿ.ಟಿ. ರವಿ ಕುಟುಕಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಾಹೀರಾತು‌ ನೀಡುತ್ತಿರುವುದರಿಂದ ಮಾಧ್ಯಮಗಳ ಸಹಕಾರ ಸಿಗುತ್ತಿದೆ. ಐದನೇ‌ ಗ್ಯಾರಂಟಿ ಯುವನಿಧಿ‌ ಕೊಡುತ್ತಿದ್ದೀರಿ ಅಷ್ಟೇ ಎಂದು ಹೇಳಿದ್ದಾರೆ. ಯುವನಿಧಿ ಎಲ್ಲಾ ನಿರುದ್ಯೋಗಿಗಳಿಗಲ್ಲ. ನುಡಿದಂತೆ‌ ನಡೆದಿದ್ದೇವೆ ಅನ್ನೋದು‌ ಈಡೇರಿಲ್ಲ. ಸ್ಟಾಂಪ್‌ ಡ್ಯೂಟಿ,‌ ಅಬಕಾರಿ ತೆರಿಗೆ,‌ ಪೆಟ್ರೋಲ್‌, ಡೀಸೆಲ್‌ ಮೇಲೆ ಏರಿಕೆಯಾಗಿದೆ. ಇನ್ನು ವಿದ್ಯುತ್ ಬಿಲ್‌ ಏರಿಕೆ‌ ಮಾಡಿದ್ದು 7ನೇ ಗ್ಯಾರಂಟಿ ಎಂದು ಚಾಟಿ ಬೀಸಿದ್ದಾರೆ. ನೀವು‌ ಜಾತಿ ಜಾತಿ‌ಗಳ ನಡುವೆ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದೀರಿ. ‌ಇದು 9ನೇ‌ ಗ್ಯಾರಂಟಿಯಾಗಿದೆ. ಮಾಲೂರು ಶಾಸಕ‌ ಹರಾಜು‌ ಹಾಕಿ‌ 30 ಲಕ್ಷಕ್ಕೆ ಹುದ್ದೆ ಮಾರಿದ್ದಾರೆ‌, ಇದು 10ನೇ ಗ್ಯಾರಂಟಿ. ವರ್ಗಾವಣೆ ಭಾಗ್ಯ 11ನೇ ಗ್ಯಾರಂಟಿ ಎಂದು ಸಿ.ಟಿ. ರವಿ ಲೇವಡಿ ಮಾಡಿದ್ದಾರೆ.

Read More

ನವದೆಹಲಿ:- ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಡಿ ರೂಪ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಿತು. ಈ ವೇಳೆ, ಡಿ ರೂಪಾ ಅವರು ಕ್ಷಮೆ ಕೇಳಲೇಬೇಕು ಎಂದು ರೋಹಿಣಿ ಸಿಂಧೂರಿ ಅವರು ಪಟ್ಟು ಹಿಡಿದರು. ಸೋಷಿಯಲ್ ಮೀಡಿಯಾಗಳಲ್ಲಿ ತಮ್ಮ ವಿರುದ್ಧ ಮಾಡಲಾಗಿರುವ ಎಲ್ಲ ಅವಹೇಳನಕಾರಿ ಪೋಸ್ಟ್‌ಗಳನ್ನು ತೆಗೆದು ಹಾಕಬೇಕು. ಇದರಿಂದ ನನ್ನ ಕುಟುಂಬಕ್ಕೆ ಘಾಸಿಯಾಗಿದೆ. ಹಾಗಾಗಿ, ಡಿ ರೂಪಾ ಅವರು ಕ್ಷಮೆಯಾಚಿಸಬೇಕು ಎಂದು ರೋಹಿಣಿ ಸಿಂಧೂರಿ ಪರ ವಕೀಲರು ವಾದ ಮಂಡಿಸಿದ್ದಾರೆ ರೋಹಿಣಿ ಅವರ ವಾದವನ್ನು ತಿರಸ್ಕರಿಸಿದ ಡಿ. ರೂಪಾ ಪರ ವಕೀಲರು, ರೋಹಿಣಿ ಸಿಂಧೂರಿ ಅವರು ರೂಪಾ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ನ್ಯಾಯಾಲಯದ ಗಮನಕ್ಕೆ ತಂದರು. ಡಿ. ರೂಪಾ ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರೋಹಿಣಿ ಪರ ವಕೀಲರು, ಹೌದು, ಬುದ್ಧಿ ಭ್ರಮಣೆಯಾದವರು ಈ ರೀತಿ ಪೋಸ್ಟ್ ಮಾಡುತ್ತಾರೆಂದು ಹೇಳಿದ್ದೇನೆ. ಹೊರತು ಅವರಿಗೆ ಬುದ್ಧಿ…

Read More