ಬೆಂಗಳೂರು:-ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಯುವನಿಧಿ ಯೋಜನೆಯೂ ಒಂದಾಗಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೊಳಿಸಿದೆ. ಇದೀಗ ಐದನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸಲಿದೆ. ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು ಭತ್ಯೆ ಸಿಗಲಿದೆ. ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ ನೀಡಿದರೆ, ಡಿಪ್ಲೊಮಾ ಪದವೀಧರರಿಗೆ 1500 ರೂಪಾಯಿ ನೀಡಲಾಗುತ್ತದೆ. ಪದವೀಧರರಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ನೀಡಲಾಗುತ್ತದೆ. ಷರತ್ತುಗಳು ಏನು? ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ. ಅರ್ಜಿ ಸಲ್ಲಿಸುವವರು ಕರ್ನಾಟಕದ ನಿವಾಸಿಯಾಗಿರಬೇಕು. 2023ರಲ್ಲಿ ಪದವಿ/ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2 ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ. ಅರ್ಜಿ ಸಲ್ಲಿಸಲು ಯಾವ ದಾಖಲೆ ಬೇಕು? ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಎಸ್ಎಸ್ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ,…
Author: AIN Author
ಕಲಬುರಗಿ:- ರಾಜ್ಯ ಕಾಂಗ್ರೇಸ್ ಸರ್ಕಾರ ಸ್ಲಿಪಿಂಗ್ ಸರ್ಕಾರ ಎಂದು ಬಿಜೆಪಿ ಟ್ವಿಟ್ ಮಾಡಿರೋ ವಿಚಾರಕ್ಕೆ ಸಿಎಂ ಸಲಹೆಗಾರ ಶಾಸಕ ಬಿಆರ್ ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ಪಾಟೀಲ್ ಬಿಜೆಪಿಯವರು ಯಾವುದೋ ನಶೆಯಲ್ಲಿದ್ದಾರೆ.. ಶಿಮೂಗ್ಗದಲ್ಲಿ ಇಂದು ಯುವನಿಧಿ ಯೋಜನೆಗೆ ಚಾಲನೆ ಸಿಕ್ಕಿದೆ ಇದು ಸ್ಲಿಪಿಂಗ್ ಸರ್ಕಾರನಾ..!? ಅನ್ನಭಾಗ್ಯ,ಗೃಹಜ್ಯೋತಿ,ಗೃಹಲಕ್ಷ್ಮಿ ನೀಡುತ್ತಿದ್ದೆವೆ ಇದು ಸ್ಲಿಪ್ಂಗ್ ಸರ್ಕಾರನಾ..? ಸುಮ್ಮನೆ ಏನೋ ಮಾತಾಡಬೇಕು ಅಂತಾ ಸೋಲಿನ ಹತಾಶೆಯಲ್ಲಿ ಮಾತಾಡುತ್ತಿದ್ದಾರೆ.. ದಕ್ಷಿಣ ಭಾರತದಲ್ಲಿ ಈ ಬಾರಿ ಬಿಜೆಪಿಗೆ ಅವಕಾಶ ಇಲ್ಲ ಅಂತ ಹೇಳಿದ್ರು. ಇದೇವೇಳೆ ನನಗೆ ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕು ಅನ್ನೋ ಆಸೆಯಿದೆ. ಹೀಗಾಗಿ ಹೈಕಮಾಂಡ್ ಗೆ ಹೇಳಿದ್ದೇನೆ ಬೀದರ್ ಕ್ಷೇತ್ರದಿಂದ ಟಿಕೆಟ್ ಕೊಟ್ರೆ ನಿಲ್ಲೋಕೆ ನಾನು ರೆಡಿ ಅಂದ್ರು..
ದರ್ಶನ್ ನಟನೆಯ ಕಾಟೇರ ಸಿನಿಮಾ ರಿಲೀಸ್ ಆದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಈ ಕುರಿತಂತೆ ದರ್ಶನ್ (Darshan) ಅಭಿಮಾನಿಗಳು ಪೋಸ್ಟ್ ಮಾಡಿದ್ದರು. ‘ನಮ್ಮ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾದ, ಮತ್ತು ಕರುನಾಡೆ ಮೆಚ್ಚಿದ ನಮ್ಮ ಕಾಟೇರ ಕೇವಲ ಒಂದು ವಾರದಲ್ಲಿ, 52 ಲಕ್ಷಕ್ಕೂ ಅಧಿಕ ಟಿಕೆಟ್ಸ್ ಸೋಲ್ಡ್ ಔಟ್ ಆಗಿ, 104 ಕೋಟಿಗೂ ಅಧಿಕ ಹಣವನ್ನುಗಳಿಸಿ ಎಲ್ಲಾ ದಾಖಲೆಗಳನ್ನು ಮುರಿದು. ಹೊಸ ದಾಖಲೆಯನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ. ಇದೀಗ ಅದೇ ಅಭಿಮಾನಿಗಳು ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದು, ರಿಲೀಸ್ ಆಗಿ ಎರಡೇ ವಾರಕ್ಕೆ ಕಾಟೇರ ಸಿನಿಮಾ ಮತ್ತಷ್ಟು ಬಾಕ್ಸ್ ಆಫೀಸ್ ತುಂಬಿಸಿದೆ. ಬರೋಬ್ಬರಿ 157.42 ಕೋಟಿ ರೂಪಾಯಿ ಸಂಪಾದನೆ ಮಾಡಿದೆ. ಕಾಟೇರ ಚಿತ್ರ ಮೊದಲ ವಾರದಲ್ಲಿ 406 ಚಿತ್ರಮಂದಿರಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ ಬಿಡುಗಡೆ ಯಾಗಿತ್ತು. 2 ನೇ ವಾರದಲ್ಲಿ462 ಥೇಟರ್ ಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ ತನ್ನ ಯಶಸ್ವಿ…
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮುಖ್ಯ ಶಿಕ್ಷಕರ ʻಬಡ್ತಿʼ ಪ್ರಕ್ರಿಯೆ ಆರಂಭಕ್ಕೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಕುರಿತು ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳುವುದರ ಜತೆಗೆ ಬಡ್ತಿ ಪ್ರಕ್ರಿಯೆ ಚಾಲನೆ ನೀಡುವಂತೆ ಶಾಲಾ ಶಿಕ್ಷಣ ಸೂಚನೆ ನೀಡಿದೆ ಬಡ್ತಿ ಪ್ರಕ್ರಿಯೆ ಕೌನ್ಸೆಲಿಂಗ್ ಕೈಗೊಳ್ಳುವಾಗ ಕೆಲವು ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸೂಚಿಸಿದೆ. ಇದರ ಜತೆಗೆ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಬಡ್ತಿ ಪೂರಕವಾದ ವೇಳಾಪಟ್ಟಿಯನ್ನು ರೂಪಿಸಿದೆ. ಜ.12ರಂದು ಬಡ್ತಿಗೆ ಅರ್ಹರಿರುವ ಶಿಕ್ಷಕರ ತಾತ್ಕಾಲಿಕ ಅಂತಿಮ ಅದ್ಯತಾ ಪಟ್ಟಿ ಪ್ರಕಟಣೆ ಮಾಡಲಿದೆ. ಜ.30ರಂದು ‘ಬಿ’ ವಲಯದಿಂದ ‘ಎ’ ವಲಯಕ್ಕೆ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರಿಗೆ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ. ಸಂಪೂರ್ಣ…
ಶಿವಮೊಗ್ಗ:- ನಮ್ಮ ಗ್ಯಾರಂಟಿ ಜಾರಿಯಿಂದ ಬಿಜೆಪಿಗೆ ಹೊಟ್ಟೆ ಉರಿ ಶುರುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗ ಏರ್ಪೋರ್ಟ್ ನಲ್ಲಿ ಮಾತನಾಡಿದ ಅವರು, ಐದನೇ ಗ್ಯಾರಂಟಿ ಯುವನಿಧಿ ಇವತ್ತು ಚಾಲನೆ ನೀಡಲಾಗಿದೆ. ನಿರುದ್ಯೋಗ ಯುವಕರಿಗೆ ಹಾಗೂ ಪದವೀಧರ ಯುವಕರಿಗೆ 3 ಸಾವಿರ ಹಣ ಕೊಡ್ತೀವಿ. ಎರಡು ವರ್ಷದವರೆಗೂ ಹಣ ಕೊಡ್ತೀವಿ. ಯುವಕರಿಗೆ ಉದ್ಯೋಗ ತರಬೇತಿ ಕೂಡ ನೀಡ್ತೀವಿ. ಗ್ಯಾರಂಟಿ ಕೊಡುತ್ತಿರುವುದು ಅವರಿಗೆ ಹೊಟ್ಟೆ ಉರಿ ಆಗ್ತೀದೆ. ಹಾಗಾಗಿ ಬಿಜೆಪಿ ಯವರಿಗೆ ಹೊಟ್ಟೆ ಉರಿ ಶುರುವಾಗಿದೆ ಎಂದರು. ಇನ್ನೂ ಶಕ್ತಿ ಯೋಜನೆಯಲ್ಲಿ 130 ಕೋಟಿ ಮಹಿಳೆಯರು ಉಚಿತವಾಗಿ ಸಂಚಾರ ಮಾಡಿದ್ದಾರೆ. ಪ್ರೀ ಆಗಿ ವಿದ್ಯುತ್ ಕೊಡ್ತಾ ಇದ್ದೀವಿ. 1 ಕೋಟಿ 58 ಲಕ್ಷ ಜನರಿಗೆ ಪ್ರೀ ಆಗಿ ವಿದ್ಯುತ್ ಕೊಡ್ತಾ ಇದ್ದೀವಿ. ನಾವು ಗ್ಯಾರಂಟಿ ಯೋಜನೆ ಗಳು ಚುನಾವಣೆಗಾಗಿ ಮಾಡಿಲ್ಲ. ಇದು ಜನರಿಗಾಗಿ ಮಾಡಿರುವುದು. ಒಂದು ಕುಟುಂಬಕ್ಕೆ ನಾಲ್ಕರಿಂದ ಐದು ಸಾವಿರ ಹಣ ಸಿಗ್ತಾ ಇದೆ. ಕುಮಾರಸ್ವಾಮಿ ಅಂದ್ರೆ ಸುಳ್ಳು .…
ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, 28 ಕ್ಷೇತ್ರಗಳಲ್ಲಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣೆಗೆ ಸಂಬಂಧಿಸಿದ ಕಾರ್ಯತಂತ್ರ ರೂಪಿಸುತ್ತಿದೆ. ಇದರ ಮುಂದುವರೆದ ಭಾಗವಾಗಿ ಜನವರಿ 21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಿದೆ. ಇದರೊಂದಿಗೆ ಲೋಕಸಭಾ ಚುನಾವಣೆಗೆ ಅಧಿಕೃತವಾಗಿ ರಣಕಹಳೆ ಮೊಳಗಿಸಲು ಕಾಂಗ್ರೆಸ್ ಸಜ್ಜಾಗಿದೆ. ಜನವರಿ 21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗಿಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಈ ರಾಜ್ಯ ಮಟ್ಟದ ಸಮಾವೇಶದಲ್ಲಿ ಸಚಿವರು, ಕಾಂಗ್ರೆಸ್ ಶಾಸಕರು, ಸಂಸದರು, ಡಿಸಿಸಿ ಅಧ್ಯಕ್ಷರು, KPCC ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸದಸ್ಯರು ಭಾಗಿಯಾಗಲಿದ್ದಾರೆ.
ಶಿವಮೊಗ್ಗ:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಮಹತ್ವಾಕಾಂಕ್ಷೆ 5ನೇ ಗ್ಯಾರೆಂಟಿ ಯೋಜನೆಯಾಗಿರುವ “ಯುವನಿಧಿ”ಗೆ ಇಂದು ಚಾಲನೆ ನೀಡಿದರು ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಮಾಡಿದರು. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಗ್ಯಾರೆಂಟಿಗಳ ಪೈಕಿ ಇದು ಕೊನೆಯ ಗ್ಯಾರೆಂಟಿ ಯೋಜನೆ. ಯುವನಿಧಿ ಜಾರಿಯೊಂದಿಗೆ ಕಾಂಗ್ರೆಸ್ ಪಕ್ಷ ನೀಡಿದ ಎಲ್ಲ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದಂತೆ ಆಗಿದೆ. ಯುವನಿಧಿ ಯೋಜನೆಗೆ 5.29 ಲಕ್ಷ ನೋಂದಣಿ ಗುರಿ ಇರಿಸಿಕೊಂಡಿದ್ದು, ಈಗಾಗಲೇ 61 ಸಾವಿರಕ್ಕೂ ಹೆಚ್ಚು ನೋಂದಣಿ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೂ ಮೊದಲು, ನಾಡಿನ ಹೆಸರಾಂತ ಸಂಗೀತಗಾರರು ನಡೆಸಿಕೊಟ್ಟ ತತ್ವಪದ,ಜನಪ್ರಿಯ ಚಿತ್ರಗೀತೆಗಳಿಗೆ ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಯುವಕ-ಯುವತಿಯರು ಲಯಬದ್ಧವಾಗಿ ಹೆಜ್ಜೆ ಹಾಕಿದ್ದು ಕಾರ್ಯಕ್ರಮದ ಸಂತಸ,ಸಂಭ್ರಮಗಳನ್ನು ನೂರ್ಮಡಿಗೊಳಿಸಿತು. ಸಂತ ಶಿಶುನಾಳ ಶರೀಫರ ‘ಕೋಡಗನ್ನ ಕೋಳಿ ನುಂಗಿತ್ತ’ ,”ತರವಲ್ಲ ತಗೀ ನಿನ್ನ ತಂಬೂರಿ ಸ್ವರ” ತತ್ವಪದಗಳು ಅಜಯ್ ವಾರಿಯರ್ ಮತ್ತು…
ಗದಗ:- ಕಾಂಗ್ರೆಸ್ ಸ್ಲೀಪಿಂಗ್ ಸರ್ಕಾರ ಎಂಬ ಬಿಜೆಪಿ ಎಕ್ಸ್ ಪೋಸ್ಟ್ ವಿಚಾರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಗದಗನಲ್ಲಿ ಮಾತನಾಡಿದ ಅವರು, ಮಲಗಿ ನಿದ್ದೆ ಹತ್ತಿದಾಗ ಟ್ವೀಟ್ ಮಾಡಿದ್ದಾರಾ.. ಮೊಟ್ಟ ಮೊದಲ ಬಾರಿಗೆ ಒಂದು ಕೋಟಿ ಕುಟುಂಬವನ್ನ ಬಡತನ ರೇಖೆಯಿಂದ ಮೇಲೆತ್ತುತ್ತಿದ್ದೇವೆ.. ನಾಲ್ಕುವರೆ ಕೋಟಿ ಜನರನ್ನ ಬಡತನ ಮುಕ್ತರನ್ನಾಗಿಸುತ್ತಿದ್ದೇವೆ.. ಇದು ಕ್ರಾಂತಿಕಾರಕ ಅಂತಾ ಅನ್ಸಲ್ವಾ..? ಇದು ಏನೂ ಅಲ್ವಾ.. ಕೇಳುವವರು ಯಾರು..? ಸ್ವಾತಂತ್ರ್ಯ ನಂತರ ಅರ್ಹಫಲಾನುಭವಿಗಳಿಗೆ 95 ರಿಂದ 99 ಪ್ರತಿಶತ ಸಿಗಬೇಕಾದ ಸವಲತ್ತು ಸಿಕಿತ್ತಾ..? ಕ್ರಾಂತಿಕಾರಕ ಬೆಳವಣಿಗೆ ತಂದ ಆಡಳಿತಕ್ಕೆ ಮಲಗಿದ್ದಾರೆ ಅಂತಾರೆ ಅಂದ್ರೆ ಇವರಿಗೆ ಏನ್ ಹೇಳ್ಬೇಕು. ಅವರು ಏಳಲಿ.. ಕನಸಿನಿಂದ ನಿದ್ದೆಯಿಂದ ಏಳಲಿ, ಸರ್ಕಾರದ ಕೆಲಸ ಅರ್ಥ ಮಾಡಿಕೊಳ್ಳಲಿ.. ಸಿದ್ದರಾಮಯ್ಯ ಹೋದಲ್ಲೆಲ್ಲ ಮಹಿಳೆಯರು ಯಾಕೆ ಆದರದಿಂದ ಗೌರವಿಸುತ್ತಾರೆ. ನೀವು ಸರ್ಕಾರದ ಕಾರ್ಯವೈಖರಿ ನೋಡಿದ್ದೀರಿ.. ಎಲ್ಲ ಜಿಲ್ಲೆಯಲ್ಲಿ ಜನ ಸ್ಪಂದನ ಕಾರ್ಯಕ್ರಮ ನಡೀತಿದೆ. ವೀಡಿಯೋ, ಫೋಟೋಕ್ಕಾಗಿ ಜನತಾ ದರ್ಶನ ಮಾಡಿಲ್ಲ. ಅರ್ಜಿಗಳನ್ನ…
ಹುಬ್ಬಳ್ಳಿ: ಸರ್ಕಾರದ ಶಕ್ತಿ ಯೋಜನೆ ಮಹಿಳೆಯರಿಗೆ ಅನುಕೂಲ ಅಗಿದೆಯೋ ಇಲ್ಲವೋ ಗೊತ್ತಿಲ್ಲ. ವಿದ್ಯಾರ್ಥಿಗಳಿಗೆ ಹಾಗೂ ದೈನಂದಿನ ಕೆಲಸ ಕಾರ್ಯಗಳಿಗೆ ಬಸ್ಸನ್ನು ನಂಬಿಕೊಂಡವರಿಗೆ ದೊಡ್ಡ ಸಮಸ್ಯೆಯಂತೂ ಆಗಿದೆ. ಶಕ್ತಿ ಯೋಜನೆ ಜಾರಿಯಾದ ಮೇಲೆ ಬಸ್ ಸಂಖ್ಯೆ ಹಾಗೂ ಮ್ಯಾನ್ ಪವರ್ ಜಾಸ್ತಿ ಮಾಡಬೇಕಿದ್ದ ಸರ್ಕಾರ ಹಾಗೂ ಸಾರಿಗೆ ಸಂಸ್ಥೆ ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ. ಹೌದು.. ಧಾರವಾಡ ಜಿಲ್ಲೆಯಲ್ಲಿ ಮಾತ್ರವಲ್ಲದೆ ಉತ್ತರ ಕರ್ನಾಟಕ ಭಾಗದಲ್ಲಿ ಬಸ್ಸಿಗಾಗಿ ಜನರು ಸಾಕಷ್ಟು ಸರ್ಕಸ್ ಮಾಡುವಂತಾಗಿದೆ. ಅಲ್ಲದೇ ಸಂಜೆ ಅವಧಿ ಹಾಗೂ ಬೆಳಗಿನ ಕಚೇರಿಗಳ ಸಮಯದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಾಕಷ್ಟು ಸಮಸ್ಯೆಗಳಂತೂ ಅನುಭವಿಸುತ್ತಲೇ ಸಾಗಿದ್ದಾರೆ. ಬಸ್ಸಿನಲ್ಲಿ ಸೀಟ್ ಹಿಡಿಯುವುದು ಇರಲಿ ಬಸ್ಸಿನ ಫುಟ್ ರೆಸ್ಟ್ ಮೇಲೆ ಜಾಗೆ ಸಿಕ್ಕರೂ ಸೌಭಾಗ್ಯ ಎನ್ನುವಂತಾಗಿದೆ. ಈಗಾಗಲೇ ಬಸ್ಸಿನ ಪ್ರಮಾಣ ಹೆಚ್ಚಿಗೆ ಮಾಡಬೇಕಿದ್ದ ಸಾರುವೆ ಸಾರಿಗೆ ಸಂಸ್ಥೆ ಇರುವ ಮ್ಯಾನ್ ಪವರ್ ನಲ್ಲಿಯೇ ಹೆಚ್ಚಿನ ಸೆಡ್ಯೂಲ್ ಮಾಡುತ್ತೇವೆ ಅಂತಾರೇ.. ಇನ್ನೂ ಪ್ರಯಾಣಿಕರ ಸಂಖ್ಯೆ ತಿಂಗಳಿಗೆ 20 ಲಕ್ಷ ದಾಟಿದೆ. ದಿನದಿಂದ ದಿನಕ್ಕೆ…
ಬೆಂಗಳೂರು : ನಗರ ಪೊಲೀಸ್ ಇಲಾಖೆಯ ಈಶಾನ್ಯ ವಿಭಾಗದ ಪೊಲೀಸರು ಇಂದು ಯಲಹಂಕದಲ್ಲಿ ಡ್ರಗ್ಸ್ ಜಾಗೃತಿ ವಾಕಥಾನ್ ನಡೆಸಿದರು.. ನಗರ ಪೊಲೀಸ್ ಅಯುಕ್ತ ಬಿ.ದಯಾನಂದ, ಹೆಚ್ಚುವರಿ ಪೊಲೀಸ್ ಆಯುಕ್ತ ರಮಣಗುಪ್ತ, ಚಿತ್ರನಟಿ ಅನುಪ್ರಭಾಕರ್- ರಘುಮುಖರ್ಜಿ ಡ್ರಗ್ಸ್ ಜಾಗೃತಿ ವಾಕಥಾನ್ ಗೆ ಹಸಿರುದ್ವಜ ಹಾರಿಸುವ ಮೂಲಕ ಚಾಲನೆ ನೀಡಿದರು.. ಇಂದಿನ ಯುವಜನಾಂಗ ಕಾಲೇಜು ವಿದ್ಯಾರ್ಥಿಗಳು ಮೋಜು ಮಸ್ತಿ ಹೆಸರಲ್ಲಿ ದೂಮಪಾನ ಮದ್ಯಪಾನ ಚಟಗಳಿಗೆ ದಾಸರಾಗ್ತಿದ್ದಾರೆ.. ಜೊತೆಗೆ ಸಿಗರೇಟ್, ಗಾಂಜಾ, ಡ್ರಗ್ಸ್ ಸ್ನೇಹಿತರು, ಪಾರ್ಟಿಗಳ ಹೆಸರಲ್ಲಿ ದಿಕ್ಕು ತಪ್ಪುತ್ತಿದ್ದಾರೆ.. ಸಹವಾಸದೋಷ ಹೆಸರಲ್ಲಿ ಯುವ ಸಮುದಾಯ ನಾಶವಾಗ್ತಿದೆ. ಆದ್ದರಿಂದ ಯುವ ಸಮುದಾಯ ಡ್ರಗ್ಸ್ ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನ ನಾಶಮಾಡಿಕೊಳ್ಳಬೇಡಿ ಎಂದು ಪೊಲೀಸರು ಜಾಗೃತಿಮೂಡಿಸಿದರು.. ವೀರಸನ್ಯಾಸಿ ವಿವೇಕಾನಂದರ ಹುಟ್ಟು ಹಬ್ಬವನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯುವ ದಿನಾಚರಣೆಯನ್ನಾಗಿ ಆಚರಿಸುತ್ತಿದೆ.. ಇದರ ಅಂಗವಾಗಿ ಈಶಾನ್ಯ ವಿಭಾಗದ ಯಲಹಂಕ ಉಪನಗರ ಪೊಲೀಸ್ ಠಾಣೆ ಸಮೀಪದ ಅಕ್ಷಯ್ ಗಿರೀಶ್ ಸರ್ಕಲ್ ನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯ್ತು. ಇದೇ ವೇಳೆ…