Author: AIN Author

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾದರಿ ರಸ್ತೆಯನ್ನಾಗಿ ರೂಪಿಸಿದ ಟೆಂಡರ್‌ ಶ್ಯೂರ್‌ ರಸ್ತೆ ಈಗ ಯಾರಿಗೂ ಬೇಡವಾಗಿದೆಯೇ ಅನ್ನೋ ಅನುಮಾನಗಳು ಕಾಡತೊಡಗಿವೆ. ನಗರದಲ್ಲಿ ಮಾದರಿ ರಸ್ತೆ ರೂಪಿಸುವ ಸದುದ್ದೇಶದಿಂದ ಹುಬ್ಬಳ್ಳಿ ವಿದ್ಯಾನಗರದ ಶಿರೂರು ಪಾರ್ಕ್ ನಿಂದ ತೋಳನ ಕೆರೆವರೆಗೆ 42 ಕೋಟಿ ರೂ. ವೆಚ್ಚದಲ್ಲಿ ಟೆಂಡರ್‌ ಶ್ಯೂರ್‌ ರಸ್ತೆ ನಿರ್ಮಿಸಲಾಗಿದ್ದು, ಇದು ಅತ್ಯಂತ ವಿಶೇಷತೆ ಹೊಂದಿರುವ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆದರೀಗ ಈ ರಸ್ತೆ ನಿರ್ವಹಣೆ ಇಲ್ಲದೇ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ. ವಾಕಿಂಗ್ ಪಾತ್ ಮೇಲೆಯೇ ಸಾವಿರಾರು ರೂಪಾಯಿ ಕರ್ಚು ಮಾಡಿ ಡಸ್ಟ್ ಬಿನ್ ಗಳನ್ನ ಇರಿಸಿದ್ದು, ಈ ಕಸದ ಡಬ್ಬಿಗಳೇ ಈಗ ಸಾರ್ವಜನಿಕರ ಕಿರಿಕಿರಿಗೆ ಕಾರಣವಾಗಿದ್ದು, ವಿಶಿಷ್ಠ ರಸ್ತೆ ಎಂಬ ಹೆಗ್ಗಳಿಕೆ ಪಡೆದಿದ್ದ ರಸ್ತೆಗೆ ಕಪ್ಪು ಚುಕ್ಕೆಯಾಗಿ ಮಾರ್ಪಟ್ಟಿದೆ. ಅಕ್ಕಪಕ್ಕದ ಮನೆಯವರು ಸೇರಿ ಹೊಟೇಲ್ ಹಾಗೂ ಚಾಟ್ ಸೆಂಟರ್, https://ainlivenews.com/cancellation-of-dog-meat-consumption-bill-passed-in-the-south-korean-parliament/ ಟೀ ಅಂಗಡಿಯವರು ಕಸವನ್ನ ಬೇಕಾಬಿಟ್ಟಿ ಎಸೆದು ಹೋಗುತ್ತಿದ್ದರೂ ಅದರನ್ನ ಸಮರ್ಪಕವಾಗಿ ವಿಲೇವಾರಿ ಮಾಡಲಾಗುತ್ತಿಲ್ಲ. ಹೀಗಾಗಿ ರಸ್ತೆಯ ಅಕ್ಕಪಕ್ಕದಲ್ಲಿ ಬೀಡಾಡಿ…

Read More

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ವಸತಿ ಗೃಹದಲ್ಲಿದ್ದ ಜೋಡಿಯ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್ ಗಿರಿ ನಡೆಸಿರುವುದು ಖಂಡನೀಯ. ಅಮಾಯಕರ ಮೇಲೆ ನೈತಿಕ ಪೋಲಿಸ್ ಗಿರಿ ನಡೆಸಿರುವ ಎಲ್ಲ ಗೂಂಡಾಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಮಾಜಿ ಸಿಎಂ ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ. https://x.com/BSBommai/status/1745361901419430255?t=PmeIGBw5-xv739jmZK4nrg&s=08 ಯುವತಿಯ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ತೆರಳಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪವೂ ಕೇಳಿ ಬರುತ್ತಿದೆ. ಈ ರೀತಿ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿ ಪುಂಡರು ರಾಜಾರೋಷವಾಗಿ ನೈತಿಕ ಪೊಲೀಸ್ ಗಿರಿ ಮಾಡಲು ಬಿಟ್ಟಿರುವುದನ್ನು ನೋಡಿದರೆ, ರಾಜ್ಯದಲ್ಲಿ ಸರ್ಕಾರ ಜೀವಂತ ಇದೀಯಾ ಇಲ್ಲವೋ ಎನ್ನುವಂತಾಗಿದೆ. ನೈತಿಕ ಪೊಲಿಸ್ ಗಿರಿ ಬಗ್ಗೆ ಪುಂಖಾನುಪುಂಕವಾಗಿ ಮಾತನಾಡುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹ ಹೀನ ಕೃತ್ಯ ನಡೆದರೂ ಮೌನ ವಹಿಸಿರುವುದೇಕೆ. ದೌರ್ಜನ್ಯ ಮಾಡಿರುವ ಕಿರಾತಕರು ಅಲ್ಪ ಸಂಖ್ಯಾತರು ಅನ್ನುವ ಕಾರಣಕ್ಕೆ ದಿವ್ಯ ಮೌನ ವಹಿಸಿದ್ದಾರಾ ? ಈ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಬೇಕು.

Read More

ಜೈಲರ್’ ಅಭೂತಪೂರ್ವ ಯಶಸ್ಸಿನ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ಲಾಲ್ ಸಲಾಂ’ (Laal Salaam) . ಈ ಚಿತ್ರವನ್ನು ರಜನಿ ಪುತ್ರಿ ಐಶ್ವರ್ಯ ರಜನಿಕಾಂತ್ (Aishwarya Rajinikanth) ನಿರ್ದೇಶಿಸುತ್ತಿದ್ದಾರೆ. ಸಂಕ್ರಾಂತಿ ಹಬ್ಬದಂದು ಚಿತ್ರ ತೆರೆ ತರುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಆದ್ರೀಗ ಲಾಲ್ ಸಲಾಂ ಬಿಡುಗಡೆ ಪೋಸ್ಟ್ ಪೋನ್ ಆಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಂಕ್ರಾಂತಿ ಹಬ್ಬಕ್ಕೆ ತಲೈವಾ ಸಿನಿಮಾ ಎಂಟ್ರಿ ಕೊಡಬೇಕಿತ್ತು. ಆದ್ರೀಗ ಫೆಬ್ರವರಿ 9ರಂದು ಲಾಲ್ ಸಲಾಂ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಸ್ಪೋರ್ಟ್ ಡ್ರಾಮಾ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ವಿಷ್ಣು ವಿಶಾಲ್, ವಿಕ್ರಾಂತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ವಿಘ್ನೇಶ್, ಲಿವಿಂಗ್ಸ್ಟನ್, ಸೆಂಥಿಲ್, ಜೀವಿತಾ, ಕೆ.ಎಸ್. ರವಿಕುಮಾರ್ ಮತ್ತು ತಂಬಿ ರಾಮಯ್ಯ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ರಜನಿಕಾಂತ್ ಅವರು ಮೊಯ್ದೀನ್ ಭಾಯ್ ಎಂಬ ಪವರ್‌ಫುಲ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಕೂಡ ಲಾಲ್ ಸಲಾಂ ಸಿನಿಮಾದ ಭಾಗವಾಗಿದ್ದಾರೆ. 2022…

Read More

ಮುಂಬೈ: ಏಕನಾಥ್‌ ಶಿಂಧೆ (Eknath Shinde) ಬಣ ನಿಜವಾದ ಶಿವಸೇನೆ. ಏಕನಾಥ್ ಶಿಂಧೆ ನಾಯಕತ್ವ ಸಾಂವಿಧಾನಿಕವಾಗಿದೆ ಎಂದು ಮಹಾರಾಷ್ಟ್ರ‌ (Maharashtra) ವಿಧಾನಸಭಾ ಸ್ಪೀಕರ್‌ ರಾಹುಲ್ ನಾರ್ವೇಕರ್ (Rahul Narwekar) ತಿಳಿಸಿದ್ದಾರೆ. ಶಿವಸೇನೆ ಅನರ್ಹತೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಆದೇಶ ಪ್ರಕಟಿಸಿದ್ದಾರೆ. ಉದ್ಧವ್ ಠಾಕ್ರೆಗೆ ಏಕನಾಥ್ ಶಿಂಧೆಯನ್ನು ಅನರ್ಹ ಮಾಡುವ ಅಧಿಕಾರ ಇಲ್ಲ. https://ainlivenews.com/cancellation-of-dog-meat-consumption-bill-passed-in-the-south-korean-parliament/  ಉದ್ಧವ್ ಠಾಕ್ರೆ ನಾಯಕತ್ವ ಅವರ ಪಕ್ಷದ ಇಚ್ಛೆಯಂತೆ ಇಲ್ಲ. ಹೀಗಾಗಿ ಅವರ ಆದೇಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 1999 ಶಿವಸೇನೆ ಪಕ್ಷದ ಸಂವಿಧಾನವೇ ಅಧಿಕೃತ. ಉದ್ಧವ್ ಠಾಕ್ರೆಗೆ ಶಾಸಕರ ಬೆಂಬಲ ಇಲ್ಲ. 2018 ರ ಪಕ್ಷದ ಹೊಸ ಸಂವಿಧಾನ ಚುನಾವಣಾ ಆಯೋಗದಲ್ಲಿಲ್ಲ. ಹೀಗಾಗಿ ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ 1999 ಸಂವಿಧಾನ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು ನಮ್ಮ ಮೆಟ್ರೋಗೆ ನೂತನ ಸಾರಥಿ ನೇಮಕ ಮಾಡಲಾಗಿದ್ದು  BBMRCL ನೂತನ ಎಂಡಿ ಆಗಿ ಮಹೇಶ್ವರ್ ನೇಮಕ ಮಾಡಿ ಎಂದು ಕೇಂದ್ರ ಸರ್ಕಾರ ಆದೇಶ ನೀಡಿದ್ದು  ಅಂಜುಂ ಪರ್ವೇಜ್ ಅವರ ಸ್ಥಾನದಿಂದ ತೆರವುಗೊಳಿಸಲಾಗಿದೆ. ಸಂಸದ ತೇಜಸ್ವಿ ಸೂರ್ಯ ಸುದ್ದಿಗೋಷ್ಠಿ ಬೆನ್ನಲ್ಲೆ BMRCL ಎಂಡಿ ವರ್ಗಾವಣೆಯಾಗಿದ್ದು  ನಮ್ಮ ಮೆಟ್ರೋಗೆ ಪೂರ್ಣಾವಧಿ ಎಂಡಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಸಂಸದ ತೇಜಸ್ವಿ ಸೂರ್ಯ ಈ ಸಂಬಂಧ ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪೂರಿ ಯವರನ್ನ ಭೇಟಿ ಮಾಡಿದ್ದ ತೇಜಸ್ವಿ ಸೂರ್ಯ ನಮ್ಮ ಮೆಟ್ರೋದ ಫೇಸ್- 2 ಕಾಮಗಾರಿ ತುಂಬಾ ವಿಳಂಬ ಆಗ್ತಿದೆ ಇದರಿಂದ ಸಾರ್ವಜನಿಕರಿಗೆ ತೊಂದರೆ ಆಗ್ತಿದೆ ಇದೆಕ್ಕೆಲ್ಲಾ ಕಾರಣ ಬಿಎಂಆರ್ ಸಿಎಲ್ ನಲ್ಲಿ ಪೂರ್ಣಾವದಿ ಎಂಡಿ ಇಲ್ಲ ಎಂದು ಆರೋಪ ರಾಜ್ಯ ಸರ್ಕಾರದ ಸೂಕ್ತ ವ್ಯಕ್ತಿಯನ್ನ ಶಿಫಾರಸ್ಸು ಕೇಳಿದ್ದ ಸಂಸದ ಕೇಂದ್ರದಿಂದ ನಾನು ಅನುಮತಿ ಕೊಡಿಸೋದಾಗಿ ಹೇಳಿದ್ದ ತೇಜಸ್ವಿ ಸೂರ್ಯ ಹೀಗಾಗಿ ಸುದ್ದಿಗೋಷ್ಠಿ ಮೂಲಕ ಪೂರ್ಣಾವಧಿ ಮೆಟ್ರೋ ಎಂಡಿ ನೇಮಕಕ್ಕೆ ಆಗ್ರಹ ಮಾಡಿದ್ದರು…

Read More

ಬಿಗ್ ಬಾಸ್ (Bigg Boss Kannada) ಮನೆ ಅಚ್ಚರಿಗೆ ಕಾರಣವಾಗಿದೆ. ಫಿನಾಲೆಗೆ ಹೋಗೋಕೆ ಯಾರು ಅರ್ಹರು ಎನ್ನುವ ಟಾಸ್ಕ್ ವಿಚಾರವಾಗಿ ಡ್ರೋನ್ ಪ್ರತಾಪ್ (Drone Pratap) ಮತ್ತು ವಿನಯ್ (Vinay) ನಡುವೆ ಕೋಲಾಹಲವೇ ನಡೆದಿತ್ತು. ಬಿಗ್ ಬಾಸ್ ಮನೆಯಲ್ಲಿ ಜಗಳ ಕಾಮನ್ ಆಗಿದ್ದರೂ, ಈ ಬಾರಿಯ ಜಗಳ ನೋಡುಗರಿಗೂ ಅಸಹ್ಯ ಮೂಡಿಸಿತ್ತು. ಡ್ರೋನ್ ಪ್ರತಾಪ್ ಅವರಿಗೆ ವಿನಯ್ ಕೊಳಕು ಭಾಷೆಯಲ್ಲಿ ಬೈದಿದ್ದರು. ಆಡಬಾರದ ಮಾತುಗಳನ್ನು ಆಡಿದ್ದರು. ಹಾಗಾಗಿ ಮನೆಮಂದಿಯಲ್ಲ ವಿನಯ್ ಮೇಲೆ ಬೇಸರಿಸಿಕೊಂಡಿದ್ದರು. ಈವರೆಗೂ ಎಲಿಮಿನೇಟ್ ಆದವರಲ್ಲಿ ವಿನಯ್ ಗುಂಪಿನವರೇ ಹೆಚ್ಚಿದ್ದಾರೆ. ಇದನ್ನು ನೋಟಿಸ್ ಮಾಡಿದ್ದ ಪ್ರತಾಪ್, ‘ವಿನಯ್ ಅವರು ತಮ್ಮ ಸ್ನೇಹಿತರ ತಪ್ಪನ್ನು ತಿದ್ದಲು ಹೋಗಲಿಲ್ಲ. ಈ ಕಾರಣದಿಂದಾಗಿಯೇ ಅವರು ಮನೆಯಿಂದ ಆಚೆ ಹೋಗಬೇಕಾಯಿತು’ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಈ ಮಾತು ವಿನಯ್ ಅವರಿಗೆ ಸಾಕಷ್ಟು ಕೋಪ ತರಿಸಿತ್ತು. ಆ ಕೋಪ ಹೇಗಿತ್ತು ಅಂದರೆ, ತಮ್ಮ ಮುಂದೆ ಮೂವರು ಹುಡುಗಿಯರು ಇದ್ದಾರೆ, ಈ ಶೋ ಅನ್ನು ಕೋಟ್ಯಂತರ ಜನರು ವೀಕ್ಷಿಸ್ತಾರೆ…

Read More

ಕೋಲ್ಕತ್ತಾ: ರಾಮಮಂದಿರ ಉದ್ಘಾಟನೆ ವಿಚಾರವಾಗಿ ಬಿಜೆಪಿ ನಡೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಕಿಡಿಕಾರಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಗಿಮಿಕ್‌ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ದಕ್ಷಿಣ 24 ಪರಗಣ ಜಿಲ್ಲೆಯ ಜಾಯ್‌ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಮಮಂದಿರದ ಬಗ್ಗೆ ನನಗೆ ಪ್ರಶ್ನೆ ಕೇಳಲಾಗಿತ್ತು. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ, ಎಲ್ಲರ ಬಗ್ಗೆ ಮಾತನಾಡುವ ಹಬ್ಬದಲ್ಲಿ ನನಗೆ ನಂಬಿಕೆ ಇದೆ ಎಂದು ಬಿಜೆಪಿ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ. https://ainlivenews.com/cancellation-of-dog-meat-consumption-bill-passed-in-the-south-korean-parliament/ ಇತರ ಸಮುದಾಯಗಳ ಜನರನ್ನು ಕಡೆಗಣಿಸುತ್ತಿದ್ದೀರಿ. ಏನು ಬೇಕಾದರೂ ಮಾಡಿಕೊಳ್ಳಿ, ಚುನಾವಣೆಗೂ ಮುನ್ನ ಗಿಮಿಕ್ ಮಾಡುತ್ತಿದ್ದೀರಿ. ಮಾಡಿ, ನನಗೇನೂ ತೊಂದರೆ ಇಲ್ಲ. ಆದರೆ ಬೇರೆ ಸಮುದಾಯದವರನ್ನು ಕಡೆಗಣಿಸುವುದು ಸರಿಯಲ್ಲ ಎಂದು ಹರಿಹಾಯ್ದಿದ್ದಾರೆ. ನಾನು ಬದುಕಿರುವವರೆಗೂ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ತಾರತಮ್ಯವನ್ನು ಎಂದಿಗೂ ಅನುಮತಿಸುವುದಿಲ್ಲ. ಜನರನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸುವುದನ್ನು ನಾನು ನಂಬುವುದಿಲ್ಲ ಎಂದು ತಿಳಿಸಿದ್ದಾರೆ.   

Read More

ಬೆಂಗಳೂರು: ಗಣರಾಜ್ಯೋತ್ಸವಕ್ಕೆ ಕರ್ನಾಟಕ ಸ್ತಬ್ಧಚಿತ್ರ ಆಯ್ಕೆ ಆಗದಿರುವುದನ್ನೇ ಮುಂದಿಟ್ಟುಕೊಂಡು ಕೀಳುಮಟ್ಟದ ರಾಜಕಾರಣ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಕಿವಿಮಾತು ಹೇಳಿದ್ದಾರೆ. ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧಚಿತ್ರವನ್ನುಆಯ್ಕೆ ಮಾಡದೆ ಕರುನಾಡಿಗೆ ಕೇಂದ್ರ ಸರ್ಕಾರ (Central Govt) ಅವಮಾನ ಮಾಡಿದೆ ಎಂಬ ಸಿದ್ದರಾಮಯ್ಯ ಟೀಕೆಗೆ ಜೋಶಿ ಅವರು ಎಕ್ಸ್‌ ಮೂಲಕ ಪ್ರತ್ಯುತ್ತರ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರೇ ರಾಜಕೀಯ ಮಾಡಬೇಕು ನಿಜ. ಆದರೆ ಎಲ್ಲದರಲ್ಲೂ ರಾಜಕೀಯ ಮಾಡುವುದು, ಸುಳ್ಳು ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿಸುವುದು ನಿಮಗಾಗಲಿ, ನಿಮ್ಮ ಸ್ಥಾನಕ್ಕಾಗಲಿ ಶೋಭೆ ತರದು ಎಂದು ಹೇಳಿದ್ದಾರೆ

Read More

ಬೆಂಗಳೂರು: ರಾಮ ಮಂದಿರ ಉದ್ಘಾಟನೆಗೆ ಹೋಗದಿರಲು AICC ನಿರ್ಧಾರ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದು , ಸಿಎಂ ಸಿದ್ದರಾಮಯ್ಯ ಸಮಾಜ ಒಡೆಯೋದ್ರಲ್ಲಿ ಎಕ್ಸ್‌ಪರ್ಟ್‌ ಆಗಿದ್ದಾರೆ ಎಂದು  ಸಿಟಿ ರವಿ  ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ರಾಮ ಹಿಂದೂಗಳನ್ನು ಜೋಡಿಸ್ತಾನೆ. ಹಿಂದೂಗಳನ್ನು ಒಡೆಯುವವರು ಸಿದ್ದರಾಮಯ್ಯ ಥರ ಹೇಳಿಕೆ‌ ಕೊಡ್ತಾರೆ. ಅವರು ಒಡೆಯುವುದರಲ್ಲಿ ಎಕ್ಸ್‌ಪರ್ಟ್ ಆಗಿದ್ದಾರೆ. ವೀರಶೈವ ಲಿಂಗಾಯತ ಸಮಾಜ ಒಡೆಯಲು‌ ಹೋಗಿದ್ದ ಸಿದ್ದರಾಮಯ್ಯ, ಸಮಾಜ‌ ಒಡೆಯುವುದರಲ್ಲಿ ಪ್ರೊಡ್ಯೂಸರ್ ಆಗಿದ್ದಾರೆ. ಅವರ ಅಜೆಂಡಾ ಸ್ಪಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರು ಅಯೋಧ್ಯೆಯಲ್ಲಿ ಇದೇ ಜನವರಿ 22ರಂದು ನಡೆಯಲಿರುವ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ. ಶ್ರದ್ಧಾಭಕ್ತಿಯಿಂದ ನಡೆಯಬೇಕಾದ ಧಾರ್ಮಿಕ ಕಾರ್ಯಕ್ರಮವನ್ನು ಬಿಜೆಪಿ ತನ್ನ ರಾಜಕೀಯ ಲಾಭಕ್ಕೆ ಪಡೆದುಕೊಳ್ಳುತ್ತಿದೆ ಎಂದು ಆರೋಪಿಸಿ ಈ ಕಾರ್ಯಕ್ರಮದಿಂದ ಹಿಂದೆ ಸರಿದಿದ್ದರು. ಇದೀಗ ಸಿದ್ದರಾಮಯ್ಯ…

Read More

ಬೆಂಗಳೂರು: ಲಕ್ಷ ಲಕ್ಷ ದುಡೀತಿದ್ದ ಟೆಕ್ಕಿ ಪಿಂಪ್ ಆಗಿದ್ದು ಹೇಗೇ ಗೊತ್ತಾ ಹೈಟೆಕ್ ವೇಶ್ಯಾವಾಟಿಕೆಯ ಕಿಂಗ್ ಪಿನ್ ,ರಷ್ಯನ್ ಮಹಿಳೆ ಭಾರತದಲ್ಲಿರಲು ಕಾರಣವೇನು ಗೊತ್ತಾ ಇಲ್ಲಿದೆ ನೋಡಿ ಒಂದು ಭಯಾನಕ ಬೆಚ್ಚಿಬೀಳಿಸುವ ಸ್ಟೋರಿ ಒಂದೂವರೆ ಲಕ್ಷ ಸಂಬಳದ ಕೆಲಸದಲ್ಲಿದ್ದ ಟೆಕ್ಕಿ ಹಣದ ದಾಹಕ್ಕೆ ಬಿದ್ದು ಸ್ಟಾಕ್ ಮಾರ್ಕೆಟ್​ನಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡು ಲಕ್ಷಲಕ್ಷ ಸಾಲವನ್ನು ಮಾಡಿದನು .  ತಂತ್ರಜ್ಞಾನದಲ್ಲಿ ಹೆಚ್ಚಿನ ಜ್ಞಾನ ಹೊಂದಿದ್ದ ಈತ ಕೆಲಸಕ್ಕೆ ಗುಡ್​ಬೈ ಹೇಳಿ ಮ್ಯಾಟ್ರಿಮೋನಿ  ಮಾದರಿಯ ಆ್ಯಪ್ ಅಭಿವೃದ್ಧಿ ಮಾಡಿ ಹಣ ಸಂಪಾದಿಸುತ್ತಿದ್ದನು ಆದರೆ ಇವನಿಗೆ ಕಂಟಕವಾಯ್ತು  ಆತನೇ ಸೃಷ್ಟಿಸಿದ ಆ್ಯಪ್ ಬಿಇ ಪದವೀಧರ  ಈಗ ಹೈಟೆಕ್ ವೇಶ್ಯಾವಾಟಿಕೆಯಲ್ಲಿ ಅಂದರ್  ಆಗಿದ್ದು ಟೆಕ್ಕಿ ಗೋವಿಂದರಾಜು ಸದ್ಯ ಹೈಟೆಕ್ ಪಿಂಪ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದವನು ಶೇರ್ ಮಾರ್ಕೆಟ್ ಚಟಕ್ಕೆ ಬಿದ್ದಿದ್ದ ತಾನು ದುಡಿದ ಅಷ್ಟೂ ಹಣವನ್ನ ಶೇರ್ಸ್ ಗಳಿಗೆ ಸುರೀತಿದ್ದ ಕೊನೆಗೆ ಎಷ್ಟೆ ದುಡಿದರೂ ಕೂಡ ಕೈಗೆ ಬರುತ್ತಿರಲಿಲ್ಲ ಸಾಲ ಕೂಡ ಮಾಡಿಕೊಂಡಿದ್ದ ಹಿನ್ನಲೆ ತಿಂಗಳ…

Read More