ಬೆಂಗಳೂರು:- ಮಹಿಳೆಯರೇ ತುಂಡು ತುಂಡು ಬಟ್ಟೆ ಹಾಕೊಂಡು ದೇವರ ದರ್ಶನಕ್ಕೆ ಹೋಗುತ್ತಿದ್ದರೆ ಈ ಸುದ್ದಿ ಪೂರ್ತಿಯಾಗಿ ಓದಿ. ರಾಜ್ಯದ ದೇವಾಲಯಗಳಲ್ಲಿ ಡ್ರೆಸ್ ಕೋಡ್ ಜಾರಿಗೆ ಚಿಂತನೆ ನಡೆಸಲಾಗಿದ್ದು, ತುಂಡು ಬಟ್ಟೆ ಧರಿಸುವವರಿಗೆ ಇನ್ಮುಂದೆ ದೇವಸ್ಥಾನದ ಪ್ರವೇಶ ಇರುವುದಿಲ್ಲ. ಈ ಬಗ್ಗೆ ದತ್ತಿ ಇಲಾಖೆ ಅಧೀನದಲ್ಲಿರುವ ದೇವಸ್ಥಾನಗಳಲ್ಲೂ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ರಾಜ್ಯ ಹಿಂದೂ ಧಾರ್ಮಿಕ ದತ್ತಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಲು ಮಹಾಸಂಘ ನಿರ್ಧರಿಸಿದೆ. ಬೆಂಗಳೂರಿನ 50 ದೇವಸ್ಥಾನಗಳು ಸೇರಿದಂತೆ ರಾಜ್ಯದಾದ್ಯಂತ 500ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಡ್ರೆಸ್ ಕೋಡ್ ಜಾರಿಗೆ ತರಲು ಚಿಂತನೆ ನಡೆಸಿದೆ. ಈ ಕುರಿತು ಪ್ರಕಟಣೆ ನೀಡಿರುವ ‘ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ’ದ ಸಂಚಾಲಕ ಮೋಹನ್ ಗೌಡ ಅವರು, ‘ಇಂದು ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಿದರೆ ಕೆಲ ಪ್ರಗತಿಪರರು, ವಿಚಾರವಾದಿಗಳು, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರತಿಪಾದಕರು ವಿರೋಧ ವ್ಯಕ್ತಪಡಿಸುತ್ತಾರೆ. ಆದರೆ ಅವರು ಬಿಳಿ ಟ್ರೌಸರ್ ನಿಲುವಂಗಿ ಧರಿಸುವ ಕ್ರಿಶ್ಚಿಯನ್ ಪಾದ್ರಿಗಳ,…
Author: AIN Author
ಬೆಂಗಳೂರು:- ಕಾಂತರಾಜು ಆಯೋಗ ವರದಿಯನ್ನು ರಾಜ್ಯ ಸರಕಾರ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಬೆಂಗಳೂರು ವಿಶ್ವ ವಿದ್ಯಾಲಯ ಬಂದ್ ಮಾಡಿ ಬೃಹತ್ ಹೋರಾಟ ನಡೆಸಲಾಯಿತು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿ ಆವರಣದಲ್ಲಿ ಬೆಂಗಳೂರು ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿ ಒಕ್ಕೂಟ ಕರೆ ನೀಡಿದ್ದ ವಿಶ್ವವಿದ್ಯಾಲಯ ಬಂದ್ ಹೋರಾಟಕ್ಕೆ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಎಲ್ಲ ಮಾದರಿಯ ಬೋಧನಾ ಚಟುವಟಿಕೆಗಳನ್ನು ಜ್ಞಾನ ಭಾರತಿ ಆವರಣದಲ್ಲಿ ನಿಲ್ಲಿಸದ್ದರಿಂದ ಕೊಠಡಿಗಳು ಖಾಲಿಯಾಗಿದ್ದವು. ಮುಖ್ಯ ಕಚೇರಿ ಎದುರು ಸೇರಿದ್ದ ಪ್ರತಿಭಟನಾಕಾರರು ರಾಜ್ಯ ¸ಸರಕಾರ ಕಾಂತರಾಜು ಆಯೋಗ ವರದಿಯನ್ನು ಬಹಿರಂಗಪಡಿಸುವಂತೆ ಘೋಷಣೆ ಕೂಗಿದರು. ಆನಂತರ, ಬೆಂಗಳೂರು ವಿವಿ ಕುಲಸಚಿವರಿಗೆ ಮನವಿ ಪತ್ರ ಸಲ್ಲಿಕೆ ಮಾಡಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿದ್ಯಾರ್ಥಿ ನಾಯಕ ಲೋಕೇಶ್ ರಾಮ್, ಹಿಂದುಳಿದ ವರ್ಗಗಳ ಆಯೋಗದ ಮೂಲಕ ವಿಶ್ವಾಸಾರ್ಹ ದತ್ತಾಂಶ ಆಧಾರಿತ ಮಾಹಿತಿಯನ್ನು ಮೂರು ಹಂತದ ಪರಿಶೀಲನೆಗೆ ಒಳಪಡಿಸಿ ಪ್ರತ್ಯೇಕ ರಾಜಕೀಯ ಮೀಸಲಾತಿ ರೂಪಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ 2010ರಲ್ಲಿ ರಾಜ್ಯಗಳಿಗೆ ಆದೇಶ ನೀಡಿದೆ. ಹಾಗಾಗಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಸ್ಯಾಂಡಲ್ವುಡ್ನಲ್ಲಿ ಈಗಾಗಲೇ ಗೆದ್ದಾಗಿದೆ. ಹಾಕಿದ್ದ 60 ಕೋಟಿ ಬಂಡವಾಳವನ್ನ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಬಾಚಿಕೊಂಡಿದ್ದಾರೆ. ಈಗ ಕಾಟೇರನ ಸಕ್ಸಸ್ ಯಾತ್ರೆ ಗಾಲ್ಫ್ ಜಗತ್ತಿಗೆ ಹೋಗಿದೆ. ದುಬೈನಲ್ಲಿ ಕಾಟೇರ ಸಿನಿಮಾ ರಿಲೀಸ್ ಆಗಿದ್ದು ಬಿಗ್ ಒಪನಿಂಗ್ ಪಡೆದುಕೊಂಡಿದೆ. ಕಾಟೇರ ಸಿನಿಮಾ ಗಾಲ್ಫ್ ದೇಶಗಳಲ್ಲಿ ರಿಲೀಸ್ ಆಗಿದೆ. ಈ ಸಿನಿಮಾವನ್ನ ದುಬೈ ಕನ್ನಡಿಗರು ಅದ್ಧೂರಿಗಾಗೆ ವೆಲ್ ಕಮ್ ಮಾಡಿದ್ದಾರೆ. ದುಬೈನ ಹಲವು ಚಿತ್ರಂದಿರಗಳು ಹೌಸ್ ಫುಲ್ ಆಗಿ ರನ್ ಆಗ್ತಿವೆ. ದುಬೈನ ಚಿತ್ರಮಂದಿರದಲ್ಲಿ ಕಾಟೇರ ಚಿತ್ರತಂಡ ಪ್ರೇಕ್ಷಕರನ್ನ ನೇರಾ ನೇರಾ ಭೇಟಿಯಾಗಿದ್ದಾರೆ. ಇಡೀ ಕಾಟೇರ ಚಿತ್ರತಂಡಕ್ಕೆ ದುಬೈ ಕನ್ನಡಿಗರು ಸನ್ಮಾನ ಮಾಡಿದ್ದಾರೆ. ಕಾಟೇರ ಸಿನಿಮಾ ಗೆದ್ದಿದ್ದಕ್ಕೆ ನಟ ದರ್ಶನ್ಗೆ ದುಬೈ ಕನ್ನಡಿಗರು ಸನ್ಮಾನ ಮಾಡಿದ್ದಾರೆ. ಅಷ್ಟೆ ಅಲ್ಲ ದರ್ಶನ್ಗೆ ಕರುನಾಡ ಅಧಿಪತಿ ಅಂತ ಬಿರುದ್ಧು ಕೊಟ್ಟಿದ್ದಾರೆ. ಈ ಮೂಲಕ ದರ್ಶನ್ ನಟನೆಯ ಕಾಟೇರ ಸಿನಿಮಾ ಹೊರ ದೇಶದಲ್ಲೂ ಸದ್ದು ಮಾಡುತ್ತಿದೆ.
ಬಾದಾಮಿ ದೇಹದಲ್ಲಿ ತುಂಬಾ ಪ್ರಯೋಜನಕಾರಿಯಾಗಿ ಕೆಲಸ ಮಾಡುತ್ತದೆ. ಆದರೆ ಬಾದಾಮಿಯನ್ನು ನೆನೆಸಿ ತಿಂದರೆ ಪ್ರಯೋಜನಗಳು ವರ್ಧಿಸುತ್ತವೆ. ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಏನೆಲ್ಲಾ ಪ್ರಯೋಜವಾಗುತ್ತದೆ ಎನ್ನುವುದನ್ನು ತಿಳಿಯೋಣ ಬನ್ನಿ * ಆರೋಗ್ಯಕರ ಹೃದಯ * ಜೀರ್ಣಕ್ರಿಯೆ * ಸಕ್ಕರೆ ಮಟ್ಟ * ಕೂದಲು ಮತ್ತು ಚರ್ಮಕ್ಕಾಗಿ * ತೀಕ್ಷ್ಣ ಮನಸ್ಸಿಗೆ ಆರೋಗ್ಯಕರ ಹೃದಯ:- ಬಾದಾಮಿಯಲ್ಲಿ ಆಂಟಿ ಆಕ್ಸಿಡೆಂಟ್ಗಳ ಜೊತೆಗೆ ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು ಕಂಡುಬರುತ್ತವೆ, ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ. * ಜೀರ್ಣಕ್ರಿಯೆ ನೆನೆಸಿದ ಬಾದಾಮಿ ಫೈಬರ್ ಮತ್ತು ವಿಟಮಿನ್ E ಯ ಉತ್ತಮ ಮೂಲವೆಂದು ಪರಿಗಣಿಸಲಾಗಿದೆ. ಮಲಬದ್ಧತೆಯೊಂದಿಗೆ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳ ವಿರುದ್ಧ ಹೋರಾಡಲು, ನೆನೆಸಿದ ಬಾದಾಮಿ ಸೇವಿಸುವುದು ಒಳ್ಳೆಯದು. * ಸಕ್ಕರೆ ಮಟ್ಟ ನೆನೆಸಿದ ಬಾದಾಮಿಯಲ್ಲಿ ಮೆಗ್ನೀಸಿಯಮ್ ಇದ್ದು, ಇದರ ಸೇವನೆಯು ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಮಧುಮೇಹ ರೋಗಿಗಳು ದಿನಕ್ಕೆ 6 ರಿಂದ 8…
ಅಫ್ಘಾನಿಸ್ತಾನ ನಡುವಿನ ಟಿ-20 ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದು, ಕಾರಣಾಂತರಗಳಿಂದ ವಿರಾಟ್ ಕೊಹ್ಲಿ ತಂಡದಿಂದ ಅಲಭ್ಯರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರವನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ. ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದು, ಕಾರಣಾಂತರಗಳಿಂದ ವಿರಾಟ್ ಕೊಹ್ಲಿ ತಂಡದಿಂದ ಅಲಭ್ಯರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರವನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಕೋಚ್ ರಾಹುಲ್ ದ್ರಾವಿಡ್ ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಆದರೆ, ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳಿಗೆ ಲಭ್ಯರಾಗಲಿದ್ದಾರೆ. ವಾಸ್ತವವಾಗಿ ತಂಡದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಶುಭ್ಮನ್ ಗಿಲ್ ರೂಪದಲ್ಲಿ ಇಬ್ಬರು ಆರಂಭಿಕ ಆಟಗಾರರು ಇದ್ದಾರೆ. ಆದರೆ, ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಜೊತೆ ಯಶಸ್ವಿ ಓಪನಿಂಗ್ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಎಲ್ಲರಿಗೂ ಗೊತ್ತಿರುವ ಹಾಗೆ ಎಳ್ಳು ಬರುವ ದಿನವನ್ನು ಎಳ್ಳಮಾವಾಸ್ಯೆ ಎಂದು ಆಚರಿಸುತ್ತಾರೆ.ಭಾರತದಲ್ಲಿ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ರೈತರು ಈ ದಿನವನ್ನು ಆಚರಿಸುತ್ತಾರೆ. ಈ ದಿನ ಕರ್ನಾಟಕದಲ್ಲಿ ಮಲೆನಾಡು, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕನ್ನಡ ಪ್ರದೇಶದಲ್ಲಿ ವಿಭಿನ್ನ ರೀತಿಯಲ್ಲಿ ಆಚರಿಸುತ್ತಾರೆ ನಮ್ಮ ಸನಾತನ ಧರ್ಮ ಧರ್ಮದಲ್ಲಿ ಅಮಾವಾಸ್ಯೆಗೊಂದು ವಿಶೇಷ ಮಹತ್ವವಿದೆ, ಅಮಾವಾಸ್ಯೆಯಲ್ಲಿ ನಾವು ಆಚರಿಸುವ ಪ್ರತಿಯೊಂದು ಪುಣ್ಯಕಾರ್ಯಗಳು ದ್ವಿಗುಣ ಫಲಗಳನ್ನು ನೀಡುತ್ತದೆ. ಆದಿನ ನಾವು ಪಾರ್ವತಿ ಪರಮೇಶ್ವರರ, ಲಕ್ಷ್ಮೀನಾರಾಯಣರ ಆರಾಧನೆಯನ್ನು ಮಾಡುವುದರಿಂದ ಮಹಾಲಕ್ಷ್ಮಿಯ ಕೃಪೆಯುಂಟಾಗುತ್ತದೆ. ಪಿತೃದೇವತೆಗಳ ಆರಾಧನೆಯನ್ನು 2ಮಾಡುವುದರಿಂದ ಪಿತೃದೇವರ ಕೃಪೆಗೆ ಪಾತ್ರರಾಗುತ್ತೀರ. ಅಮಾವಾಸ್ಯೆಯ ದಿನ ಮಾಡುವ ಪ್ರತಿಯೊಂದು ಶ್ರಾದ್ಧ ಕಾರ್ಯಗಳಿಂದ ಜಾತಕದಲ್ಲಿ ಉಂಟಾಗಿರುವ ಪಿತೃದೋಷಗಳು ಪರಿಹಾರವಾಗುತ್ತದೆ. ಎಳ್ಳಮಾವಾಸ್ಯೆಯ ದಿನ ನಾವು ಏನನ್ನು ಮಾಡಬೇಕು ಪವಿತ್ರ ನದಿಗಳಲ್ಲಿ ಸ್ನಾನ ಅಭ್ಯಂಜನ ಸ್ನಾನ ಗೋಪೂಜೆ ಅನ್ನದಾನಾದಿಗಳು ಯಜ್ಞಪೂಜಾದಿಗಳು ದಾನ ಧರ್ಮಾದಿಗಳು ಪ್ರಾಣಿ ಪಕ್ಷಿಗಳಿಗೆ ಆಹಾರಗಳನ್ನು ನೀಡುವುದು ನೀಡುವುದು ಕುಲದೇವರ ಆರಾಧನೆ ದೀಪಾರಾಧನೆ ಎಳ್ಳು ಪದಾರ್ಥಗಳನ್ನು ದಾನ ಮಾಡುವುದರಿಂದ ಶನಿ ದೇವರ ಅನುಗ್ರಹ ಸಿಗುತ್ತದೆ.…
ಬೆಂಗಳೂರು:- ಅವೈಜ್ಞಾನಿಕ ಆಸ್ತಿ ತೆರಿಗೆ ಪರಿಷ್ಕರಣೆ ವಾಪಸ್ ಪಡೆಯಿರಿ ಎಂದು DCM ಗೆ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದಾರೆ. ಬಿಬಿಎಂಪಿ ವ್ಯಾಪ್ತಿಯ ಸ್ವತ್ತುಗಳ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಿ ಕಳೆದ 2016-17ನೆ ಸಾಲಿನಿಂದಲೇ ಪರಿಷ್ಕೃತ ದರವನ್ನು ಪಾವತಿಸುವಂತೆ ಆಸ್ತಿ ಮಾಲಕರಿಗೆ ನೀಡಿರುವ ನೋಟಿಸ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಚಿವ ರಾಮಲಿಂಗಾರೆಡ್ಡಿ, ಈ ಕೂಡಲೇ ಅವೈಜ್ಞಾನಿಕ ಆಸ್ತಿ ತೆರಿಗೆ ಪರಿಷ್ಕರಣೆಯನ್ನು ವಾಪಸ್ ಪಡೆಯುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಸ್ವತ್ತುಗಳ ಆಸ್ತಿ ತೆರಿಗೆಯನ್ನು ಪರಿಷ್ಕರಿಸಿ 2016-17ನೆ ಸಾಲಿನಿಂದ ಆಸ್ತಿ ತೆರಿಗೆ ಮೊತ್ತವನ್ನು ಪಾವತಿಸುವಂತೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ನೋಟಿಸ್ ನೀಡುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಅಲ್ಲದೆ, ಬಿಬಿಎಂಪಿ ಆಸ್ತಿ ತೆರಿಗೆ ಪರಿಷ್ಕರಣೆಯನ್ನು ಯಾವುದೇ ಮಾರ್ಗಸೂಚಿಗಳನ್ನು ಅನುಸರಿಸದೆ 2016-17 ಸಾಲಿನಿಂದ 7 ವರ್ಷಗಳಿಗೆ ಪರಿಷ್ಕರಣೆ ನೋಟಿಸ್ ಜಾರಿ ಮಾಡಿರುವುದು ಕಂಡುಬಂದಿದೆ. ಈ ರೀತಿ ಸಾರ್ವಜನಿಕರ ಮೇಲೆ ಒತ್ತಡ ತರುತ್ತಿರುವುದು ಉತ್ತಮವಲ್ಲ. ಕರ್ನಾಟಕ ಮುನ್ಸಿಪಾಲಿಟಿ ಕಾಯ್ದೆ-1976 ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ…
ಬೆಂಗಳೂರು:- ರಾಜ್ಯದಲ್ಲಿ ಇಂದು 201 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದಾಗಿ ಒಬ್ಬ ಮೃತಪಟ್ಟಿದ್ದಾನೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 6557 ಹಾಗೂ RAT ಮೂಲಕ 758 ಸೇರಿದಂತೆ 7315 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ ಅಂತ ತಿಳಿಸಿದೆ.
ಬೆಂಗಳೂರು :- ಹೆಚ್ಚುವರಿ ಡಿಸಿಎಂ ಹುದ್ದೆ ಊಹಾಪೋಹದ ಸುದ್ದಿ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಚಾರವೆಲ್ಲ ಊಹಾಪೋಹದ ಸುದ್ದಿಯಾಗಿದೆ ಎಂದರು. ನಮ್ಮ ಯೋಜನೆಗಳು ಎಲ್ಲ ಜನರನ್ನು ತಲುಪಬೇಕು ಮತ್ತು ಪ್ರತಿಯೊಂದು ಕ್ಷೇತ್ರಗಳಲ್ಲಿ ಆಸ್ಪತ್ರೆ, ರಸ್ತೆ, ಬಸ್ ನಿಲ್ದಾಣ ಸೇರಿದಂತೆ ಮೂಲಸೌಕರ್ಯಗಳಿಗೆ ಒತ್ತು ನೀಡುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು. ಲೋಕಸಭೆ ಚುನಾವಣೆ ನಿಟ್ಟಿನಲ್ಲಿ ಕ್ರಿಯಾ ಯೋಜನೆ ಬಗ್ಗೆ ಚರ್ಚೆ ನಡೆದಿದೆ. ತಳ ಮಟ್ಟದಲ್ಲಿ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುವುದು. ಕಾಂಗ್ರೆಸ್ ಗ್ಯಾರಂಟಿಯನ್ನು ಎಲ್ಲರಿಗೂ ತಲುಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಗ್ರ ರೂಪುರೇಷೆಯನ್ನು ಘೋಷಣೆ ಮಾಡಿದ್ದಾರೆ. ಎಲ್ಲರೂ ಅದಕ್ಕೆ ಅನುಮೋದನೆ ನೀಡಿದ್ದಾರೆ ಎಂದರು.
ಒಂದು ಪೈಸೆಯ ವೆಚ್ಚವಿಲ್ಲದೆ ನಮ್ಮ ಮನೆಯಲ್ಲಿ ಕೆಲವು ನೈಸರ್ಗಿಕ ಪದಾರ್ಥಗಳೊಂದಿಗೆ, ಯಾವುದೇ ಕಪ್ಪು ಕಲೆಗಳು ಮತ್ತು ಮೊಡವೆಗಳಿಲ್ಲದೆ ಮುಖವನ್ನು ಬಿಳಿ ಮತ್ತು ಪ್ರಕಾಶಮಾನವಾಗಿ ಹೊಳೆಯುವಂತೆ ನಾವು ಸುಲಭವಾಗಿ ಮಾಡಬಹುದು. ಒಂದು ಸಣ್ಣ ಟೊಮೆಟೊವನ್ನು ತೆಗೆದುಕೊಂಡು ಅದನ್ನು ಸ್ವಚ್ಛವಾಗಿ ತೊಳೆದು ಸಣ್ಣ ತುಂಡುಗಳಾಗಿ ಕತ್ತರಿಸಿ ಪಕ್ಕಕ್ಕೆ ಇರಿಸಿ. ನಂತರ ಬ್ಲೆಂಡರ್ ತೆಗೆದುಕೊಂಡು ಅದರಲ್ಲಿ ಟೊಮೆಟೊ ತುಂಡುಗಳು ಮತ್ತು ಒಂದು ಕಪ್ ಪಪ್ಪಾಯಿ ತುಂಡುಗಳನ್ನು ಸೇರಿಸಿ ಮೃದುವಾದ ಪೇಸ್ಟ್ ಆಗಿ ರುಬ್ಬಿಕೊಳ್ಳಿ. ಈ ಪೇಸ್ಟ್ ಅನ್ನು ಒಂದು ಬಟ್ಟಲಿನಲ್ಲಿ ತೆಗೆದುಕೊಂಡು ಒಂದು ಚಮಚ ನಿಂಬೆ ರಸ, ಅರ್ಧ ಟೀಸ್ಪೂನ್ ಅರಿಶಿನ, ಎರಡು ಚಮಚ ಕಿತ್ತಳೆ ಸಿಪ್ಪೆಯ ಪುಡಿ, ಒಂದು ಚಮಚ ಮೊಸರು, ಸೇರಿಸಿ ಎಲ್ಲಾ ಪದಾರ್ಥಗಳೊಂದಿಗೆ ಚೆನ್ನಾಗಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿ 15 ನಿಮಿಷದ ನಂತರ ತಣ್ಣೀರಿನಿಂದ ತೊಳೆಯಿರಿ. ನೀವು ವಾರಕ್ಕೆ ಎರಡು ಬಾರಿ ಇದನ್ನು ಮಾಡಿದರೆ, ನೀವು ಉತ್ತಮ ಫಲಿತಾಂಶವನ್ನು ಪಡೆಯಬಹುದು. ಸ್ವಲ್ಪ ತಾಳ್ಮೆಯಿಂದ ನಾವು ನಮ್ಮ ಮನೆಯಲ್ಲಿ…