ಶಿಡ್ಲಘಟ್ಟ: ಪ್ರಧಾನಿ ನರೇಂದ್ರ ಮೋದಿ ಬಡವರ ಉನ್ನತಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದು, ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರೂ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಶೀಕಲ್ ಆನಂದ ಗೌಡ ತಿಳಿಸಿದರು. ತಾಲ್ಲೂಕಿನ ಪಲ್ಲಿಚೆರ್ಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ರಥ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ದೇಶದ ಎರಡು ಲಕ್ಷಕ್ಕೂ ಅಧಿಕ ಗ್ರಾಮ ಪಂಚಾಯತಿಗಳಿಗೆ ರಥವು ತಲುಪಲಿದ್ದು, ಅದಕ್ಕಾಗಿ ಸುಮಾರು ಹತ್ತು ಸಾವಿರ ರಥಗಳನ್ನು ಸಿದ್ದಪಡಿಸಲಾಗಿದೆ ಎಂದರು. ಗ್ರಾಮೀಣ ಪ್ರದೇಶದ ಪ್ರತಿ ಕಟ್ಟಕಡೆಯ ನಾಗರೀಕರಿಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ತಲುಪಿಸು ಉದ್ದೇಶದಿಂದ ರಥ ಯಾತ್ರೆ ಪ್ರಾರಂಭಿಸಿಲಾಗಿದೆ ಎಂದರು. ಜಲಜೀವನ್ ಮಿಶನ್ ಅಡಿಯಲ್ಲಿ ಹರ್ ಘರ್ ಜಲ್ ಕಾರ್ಯಕ್ರಮ ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಹತ್ತು ಸಾವಿರ ರೂ. ನೇರ ಸಾಲ, ಆರೋಗ್ಯ ವಿಮೆ, ಕೃಷಿ ವಿಮೆ, ಮಹಿಳೆಯರಿಗೆ ಕೌಶಲ್ಯ ತರಬೇತಿ ಹಾಗು ಉದ್ದಿಮೆ ಸ್ಥಾಪನೆಗೆ ಸಾಲ, ಹೀಗೆ ಹತ್ತು ಹಲವು ಯೋಜನೆಗಳನ್ನು ರೂಪಿಸಿದ್ದು, ಗ್ರಾಮೀಣ…
Author: AIN Author
ಬಿಗ್ ಬಾಸ್ ಸೀಸನ್ 9ರ ಸ್ಪರ್ಧಿ ಸಾನ್ಯ ಅಯ್ಯರ್ (Saanya Iyer) ಅವರು ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸುದ್ದಿಯಲ್ಲಿರುತ್ತಾರೆ. ಇದೀಗ ಸ್ಟೈಲೀಶ್ ಆಗಿ ಸಾನ್ಯ ಕಂಗೊಳಿಸಿದ್ದಾರೆ. ಹೊಸ ಲುಕ್ನಲ್ಲಿ ನಟಿ ಮಿಂಚಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಹಸಿರು ಬಣ್ಣದ ಗೌನ್ನಲ್ಲಿ ಸಾನ್ಯ ಅಯ್ಯರ್ ಮಿಂಚಿದ್ದಾರೆ. ಫಿಶ್ ಕಟ್ನಂತಿರೋ ಡ್ರೆಸ್ ಧರಿಸಿ ಸಾನ್ಯ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಸಾನ್ಯ ಡ್ರೆಸ್ ಅದಕ್ಕೆ ತಕ್ಕಂತಹ ಮೇಕಪ್ ಇವೆಲ್ಲವೂ ಅಭಿಮಾನಿಗಳಿಗೆ ಇಷ್ಟವಾಗಿದೆ. ಸಾನ್ಯರ ನ್ಯೂ ಲುಕ್ ನೋಡಿ ಕನ್ನಡ ಚಿತ್ರರಂಗದಲ್ಲಿ ಮುಂದೆ ಮೆರೆಯುವ ನಟಿ ಎಂದು ಫ್ಯಾನ್ಸ್ ಹಾಡಿ ಹೊಗಳಿದ್ದಾರೆ. ಕಳೆದ ವರ್ಷ ಸಾನ್ಯ, ಬಿಗ್ ಬಾಸ್ ಒಟಿಟಿ ಸೀಸನ್ 1 ಮತ್ತು ಟಿವಿ ಬಿಗ್ ಬಾಸ್ನಲ್ಲಿ (Bigg Boss Kannada 9) ಕಾಣಿಸಿಕೊಳ್ಳುವ ಮೂಲಕ ಜನಪ್ರಿಯತೆ ಗಳಿಸಿದ್ದರು. ಸಿನಿಮಾ ನಾಯಕಿಯಾಗಬೇಕು ಎಂದು ಕನಸು ಕಂಡಿದ್ದ ನಟಿ ಇದೀಗ ಅದೇ ಹಾದಿಯಲ್ಲಿ ಹೆಜ್ಜೆ ಇಡ್ತಿದ್ದಾರೆ.
ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ಹೊಸದಿಲ್ಲಿಯಲ್ಲಿ ಜನವರಿ 26ರಂದು ನಡೆಯಲಿರುವ ಪಥ ಸಂಚಲನದಲ್ಲಿ ಭಾಗವಹಿಸಲು ಕರುನಾಡಿನ ಸ್ತಬ್ಧ ಚಿತ್ರಕ್ಕೆ ಅನುಮತಿ ನಿರಾಕರಿಸುವುದಕ್ಕೆ ಸಿಎಂ ಸಿದ್ದರಾಮಯ್ಯ ಕೇಂದ್ರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. https://ainlivenews.com/good-news-from-the-state-government-for-the-ram-devotees-of-the-state-going-to-ayodhya/ ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ಅನ್ಯಾಯ, ಅಪಮಾನವಿದು ಈ ಹಿಂದೆಯೂ ಇದೆ ರೀತಿ ಮಾಡಿದ್ದರು ಈಗಾಗಲೇ ಪತ್ರ ಬರೆದಿದ್ದೇನೆ ಮತ್ತೊಮ್ಮೆ ಪತ್ರ ಬರೆಯುತ್ತೇನೆ ಎಂದು ಹೇಳಿದರು. ಕೇಂದ್ರ ಸರ್ಕಾರ ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಕಳೆದ ವರ್ಷವೂ ಸ್ತಬ್ದಚಿತ್ರಕ್ಕೆ ಅವಕಾಶ ನೀಡಿರಲಿಲ್ಲ.ವಿವಾದ ಸ್ವರೂಪ ಪಡೆದುಕೊಂಡ ಮೇಲೆ ಅನುಮತಿ ನೀಡಿತ್ತು. ಮತ್ತೆ ಕನ್ನಡಿಗರನ್ನ ಅಪಮಾನಿಸುವ ಚಾಳಿ ಮುಂದುವರೆಸಿದೆ ಎಂದರು. ಪ್ರತಿ ವರ್ಷ ಗಣ ರಾಜ್ಯೋತ್ಸವದ ದಿನ ಹೊಸದಿಲ್ಲಿಯ ರಾಜಪಥ್ನಲ್ಲಿ(ಕರ್ತವ್ಯ ಪಥ) ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯುತ್ತದೆ. ಸತತ 14 ವರ್ಷಗಳಿಂದ ಗಣರಾಜೋತ್ಸವ ಪರೇಡ್ನಲ್ಲಿ ತನ್ನ ಸ್ತಬ್ಧ ಚಿತ್ರ ಪ್ರದರ್ಶಿಸುತ್ತಾ ಬಂದಿರುವ ಕರ್ನಾಟಕವು 15ನೇ ಬಾರಿಗೆ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಸಜ್ಜಾಗಿತ್ತು. ಆದರೆ, ರಕ್ಷಣಾ ಸಚಿವಾಲಯದ ಉಸ್ತುವಾರಿಯ ಕೇಂದ್ರ ಆಯ್ಕೆ ಸಮಿತಿಯು…
ಬೆಂಗಳೂರು: ಸಿಇಓ (CEO) ಸುಚನಾ ಸೇಠ್ ಮಗುವಿನ ಹತ್ಯೆ ಪ್ರಕರಣವನ್ನು ಗೋವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುಚನಾ ಸೇಟ್ ರಿಂದ (Suchana Seth) ಕೊಲೆಯಾದ 4-ವರ್ಷದ ಮಗುವಿನ ಅಂತಿಮ ವಿಧಿವಿಧಾನಗಳನ್ನು (final rites) ಪೂರೈಸಿ ರಿಶ್ಚಂದ್ರ ಘಾಟ್ ನಲ್ಲಿ ಆಪ್ತರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೇರವೆರಿಸಿದ ತಂದೆ ವೆಂಕಟರಮಣ ಮೃತ ಮಗುವಿನ ಅಂತ್ಯಸಂಸ್ಕಾರದ ಬಳಿಕ ವೆಂಕಟರಮಣ ಅವರನ್ನು ಗೋವಾ ಪೊಲೀಸರು (Goa Police) ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅವರ ಬಳಿ ಸುಚನಾ ಹಾಗೂ ಪುತ್ರ ಚಿನ್ಮಯ್ ಬಗ್ಗೆ ಪೊಲೀಸರು ಮಾಹಿತಿ ಪಡೆಯುವ ಸಾಧ್ಯತೆ ಇದೆ. ಮಗುವಿನ ಹತ್ಯೆಗೂ ಮುನ್ನ ವೀಡಿಯೋ ಕಾಲ್ ಮಾಡಿದ್ದ ವೆಂಕಟರಮಣ ಅವರು ಮಗುವಿನೊಂದಿಗೆ ಮಾತಾಡಿದ್ದರು ಎಂದು ತಿಳಿದು ಬಂದಿದೆ. ಸುಚನಾ ಹಾಗೂ ವೆಂಕಟರಮಣ ವಿಚ್ಛೇದನ ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ವಾರಕ್ಕೊಮ್ಮೆ ತಂದೆ ಬಳಿ ಮಗನ ಭೇಟಿಗೆ ಕೋರ್ಟ್ ಸೂಚಿಸಿತ್ತು. ಕೋರ್ಟ್ ಸೂಚನೆಯಂತೆ ಕಳೆದ ಭಾನುವಾರ ವೀಡಿಯೋ ಕಾಲ್ನಲ್ಲಿ ಮಗನ ಜೊತೆ ವೆಂಕಟರಮಣ ಅವರು…
ಬೆಂಗಳೂರು: ಅಯೋಧ್ಯೆಗೆ ತೆರಳುವ ರಾಜ್ಯದ ರಾಮಭಕ್ತರಿಗೆ ಸರ್ಕಾರದ ಶುಭಸುದ್ದಿ. ರಾಮನ ಮಂದಿರಕ್ಕಾಗಿ ಇನ್ನೇನು ಕೆಲವೇ ದಿನಗಳು ಬಾಕಿ ಈ ಸಂದರ್ಭದಲ್ಲಿ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಜನರಿಗೆ ಗುಡ್ ನ್ಯೂಸ್ ಒಂದನ್ನು ಕೊಡಲು ಮುಂದಾಗಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಕರ್ನಾಟಕ ಯಾತ್ರಿ ನಿವಾಸ ರಾಜ್ಯದ ಭಕ್ತರ ಅನುಕೂಲಕ್ಕಾಗಿ ಅತಿಥಿಗೃಹ ನಿರ್ಮಾಣ ಕೋರಿ ಅರ್ಜಿ ಉತ್ತರಪ್ರದೇಶ ಸರ್ಕಾರಕ್ಕೆ ರಾಜ್ಯ ಮುಜರಾಯಿ ಇಲಾಖೆಯಿಂದ ಪತ್ರ ಯಾತ್ರಿಗಳ ವಾಸ್ತವ್ಯ, ಊಟದ ವ್ಯವಸ್ಥೆಗಾಗಿ ಅತಿಥಿಗೃಹ ನಿರ್ಮಾಣ 10 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಅತಿಥಿ ಗೃಹ ನಿರ್ಮಾಣಕ್ಕೆ ಮನವಿ ಸರಯೂ ನದಿ ಬಳಿ ಅತಿಥಿ ಗೃಹ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮನವಿ ಮಾಡಲಾಗಿದೆ. ಈಗಾಗಲೇ ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರದಿರುವ ರಾಜ್ಯಸರ್ಕಾರ ಸರಯೂ ನದಿ (Sarayu River) ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ 2023ರ ಆಗಸ್ಟ್ ತಿಂಗಳಲ್ಲಿ ಉತ್ತರ ಪ್ರದೇಶ (Uttar Pradesh) ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಸಹ ಪತ್ರವನ್ನ ಬರೆದು ಮನವಿ ಮಾಡಿದ್ರು. 2020ರಲ್ಲಿ…
ಚಿಕ್ಕಮಗಳೂರು: ಮೂಡಿಗೆರೆ ಬಸ್ ಸ್ಟ್ಯಾಂಡ್ ಬಳಿ ನೈತಿಕ ಪೊಲೀಸ್ಗಿರಿ ಪ್ರಕರಣ ದಾಖಲಾಗಿದ್ದು ಯುವತಿ ಗೆ ಡೈರಿ ಮಿಲ್ಕ್ ಚಾಕಲೇಟ್ ನೀಡಿರುವ ಆರೋಪ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಕಾರ್ ನಲ್ಲಿ ಬಂದ ಯುವಕರಿಂದ ಹಲ್ಲೆ ಮಾಡಲಾಗಿದ್ದು ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವಕರನ್ನ ವಶಕ್ಕೆ ಪಡೆದಿದ್ದಾರೆ. ತಪ್ಪಿಸಿಕೊಂಡ ಯುವಕನಿಗಾಗಿ ಶೋಧ ನಡೆಯುತ್ತಿದೆ. ಈ ಸಂಬಂಧ ಮೂಡಿಗೆರೆಯಲ್ಲಿ ನೈತಿಕ ಪೊಲೀಸ್ಗಿರಿ ಪ್ರಕರಣ ದಾಖಲಾಗಿದ್ದು ಘಟನೆ ಸಂಬಂಧ ಮೂಡಿಗೆರೆ ಠಾಣೆಯಲ್ಲಿ 2 ಪ್ರತ್ಯೇಕ ಕೇಸ್ ದಾಖಲು ನಿನ್ನೆ ಸಂಜೆ ಮೂಡಿಗೆರೆ KSRTC ಬಸ್ ನಿಲ್ದಾಣದಲ್ಲಿ ನಡೆದ ಘಟನೆಐಪಿಸಿ 143, 144, 148, 323, 324, 504, 506, 149ರಡಿ ಪ್ರಕರಣದಾಖಲಾಗಿದೆ. ಯುವತಿಗೆ ಚಾಕಲೇಟ್ ಕೊಟ್ಟಿದ್ದಕ್ಕೆ 2 ಗುಂಪುಗಳ ನಡುವೆ ಗಲಾಟೆ ಶುರುವಾಗಿದ್ದು ಇಬ್ಬರು ಯುವಕರನ್ನು ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದ ಗುಂಪು ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ ಪೊಲೀಸರು
ಹುಬ್ಬಳ್ಳಿ : ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮೂಲಕ ರೋಗಿಗಳಿಗೆ ಗುಣಮಟ್ಟ ಚಿಕಿತ್ಸೆ ನೀಡುತ್ತಿರುವ ಅಪೊಲೋ ಆಸ್ಪತ್ರೆಯು, ಮೂತ್ರಶಾಸದ ಆರೈಕೆಯಲ್ಲಿ (ಯುರೋಲೊಜಿಕೇರ್) ದೇಶದಲ್ಲಿ ಮೊದಲ ಬಾರಿಗೆ ಮೋಸೆಸ್ 2.0 ತಂತ್ರಜ್ಞಾನವನ್ನು ಪ್ರಾರಂಭಿಸಿದೆ. ಪ್ರಾಯೋಗಿಕವಾಗಿ ಶೇಷಾದ್ರಿಪುರಂನ ಅಪೊಲೋ ಆಸ್ಪತ್ರೆಯಲ್ಲಿ ಈ ಸೇವೆ ಪರಿಚಯಿಸಲಾಗಿದೆ ಎಂದು ಡಾ.ಟಿ.ಮನೋಹರ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,ಮಧುಮೇಹ, ಅಧಿಕರಕ್ತದೊತ್ತಡ, ಹೃದಯ ತೊಂದರೆ ಹಾಗೂ ಮೂತ್ರಪಿಂಡದಲ್ಲಿ ಕಲ್ಲು ಸೇರಿ ಇತರೆ ಸಮಸ್ಯೆಗಳಿಗೆ ಸುಧಾರಿತ ಲೇಸರ್ ತಂತ್ರ ಜ್ಞಾನ ಮೂಲಕ ಚಿಕಿತ್ಸೆ ನೀಡಲು ಇದು ಸಹಾಯವಾಗುತ್ತದೆ. ಸಂಪೂರ್ಣವಾಗಿ ರಕ್ತರ ಹಿತ ಮತ್ತು ನೋವು ರಹಿತ ಶಸ್ತ್ರ ಚಿಕಿತ್ಸೆಯೂ ಸಿಗಲಿದೆ. ಕೇವಲ ಒಂದು ಗಂಟೆಯಲ್ಲಿ ಮೂತ್ರಪಿಂಡದಲ್ಲಿರುವ ಕಲ್ಲು ಮತ್ತು ಪ್ರಾಸ್ಟೇಟ್ ಅನ್ನು ಅತ್ಯಂತ ನಿಖರತೆಯಿಂದ ತೆಗೆದು ಹಾಕಲು ತಂತ್ರಜ್ಞಾನ ನೆರವು ಆಗಲಿದೆ. ಹೆಚ್ಚುದಿನಗಳ ಕಾಲ ಆಸ್ಪತ್ರೆಯಲ್ಲಿ ಉಳಿದುಕೊಳ್ಳುವುದನ್ನು ತಪ್ಪಿಸಲು ಹಾಗೂ ಶಸ್ತ್ರ ಚಿಕಿತ್ಸೆ ಬಳಿಕ ವೇಗವಾಗಿ ಚೇತರಿಸಿಕೊಳ್ಳಲು ಅನುಕೂಲವಾಗಲಿದೆ ಈ ಮೂಲಕ ತಂತ್ರಜ್ಞಾನವನ್ನು ಅಳವಡಿಸಿಕೊಂಡ ಸಾಲಿನಲ್ಲಿ ವಿಶ್ವದಲ್ಲೇ 3 ನೇರಾಷ್ಟ…
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ರೈತರಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು ನೂರಾರು ಮಹಿಳಾ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ, ತ್ರಿಬಲ್ ರೈಡಿಂಗ್ ವಾಹನ ಸವಾರರಿಗೆ ಪೋಲೀಸರು ಫೈನ್ ಹಾಕ್ತಾರೆ ರಾಷ್ಟ್ರೀಯ ಹೆದ್ದಾರಿಯಲ್ಲಿ 50 -60 ಟನ್ ತೂಕದ ಕಲ್ಲು ಎಂ.ಸ್ಯಾಂಡ್ ಹಾಕೊಂಡು ಹೋಗೋ ಲಾರಿಗೆ ದಂಡ ಹಾಕಲ್ಲ ಎಂದು ರೈತರ ಆರೋಪ ಕಾರಣ ಕೇಳಿದ್ರೆ ಪೋಲೀಸರು ಹಾಗೂ ಆರ್.ಟಿ.ಓ. ಅಧಿಕಾರಿಗಳಿಗೆ ಲಂಚ ಕೇಳ್ತಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಚ ಹೊನ್ನೂರು ಪ್ರಕಾಶ್ ಗಂಭೀರ ಆರೋಪ ಮಾಡಿದ್ದು ಹಾಗಾಗಿ ಬೇಗೂರು ಗ್ರಾಮದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಮಾನಸ ಸರಪಳಿ ನಿರ್ಮಿಸಿ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ಸರ್ಕಾ ಅಧಿಕಾರಿಗಳಿಂದ ರೈತರಿಗೆ ನಿರಂತರ ಕಿರುಕುಳ ಎಲ್ಲಾ ಇಲಾಖೆಗಳಲ್ಲೂ ರೈತರಿಗೆ ಬಡವರಿಗೆ ಅನ್ಯಾಯ ಬರಗಾಲದಲ್ಲಿ ಬ್ಯಾಂಕುಗಳಲ್ಲಿ ಸಾಲ ಕಟ್ಟುವಂತೆ ರೈತರಿಗೆ ಕಿರುಕುಳ ನೋಟಿಸ್ ಮೂಲಕ ಬ್ಯಾಂಕ್ ಅಧಿಕಾರಿಗಳ ಬೆದರಿಕೆ ತಂತ್ರ ಹೊನ್ನೂರು ಪ್ರಕಾಶ್ ಆರೋಪ ಹಾಗೆ ರೈತರ…
ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಗೆ ಇನ್ನೇನು ಕ್ಷಣಗಣನೆ ಪ್ರಾರಂಭವಾಗಿದೆ ಕಾಂಗ್ರೇಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿ ವರ್ಸಸ್ ಕಾಂಗ್ರೆಸ್ ಅಭ್ಯರ್ಥಿ ಮಧ್ಯೆ ಫೈಟ್ ನಡೆಯುತ್ತಿದೆ, ಕಾಂಗ್ರೇಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿ 15ಕ್ಕೂ ಹೆಚ್ಚು ಸದಸ್ಯರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡಿದ್ದಾನೆ ಹೀಗಾಗಿ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿ ಸೋಲು ಖಚಿತವಾಗಿದೆ, ಒಟ್ಟು 39 ಸದಸ್ಯರ ಪೈಕಿ 21 ಕಾಂಗ್ರೆಸ್, 13 ಬಿಜೆಪಿ ಮತ್ತು 5 ಪಕ್ಷೇತರ(ಕಾಂಗ್ರೇಸ್ ಬೆಂಬಲಿತ) ಸದಸ್ಯರಿದ್ದಾರೆ, ಪಕ್ಷೇತರ ಅಭ್ಯರ್ಥಿ ವಿ.ಶ್ರೀನಿವಾಸ(ಮಿಂಚು) ಪರ ಶಾಸಕ ಭರತ್ ರೆಡ್ಡಿ ಬ್ಯಾಟಿಂಗ್, ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಶ್ವೇತ ಸೋಮು ಪರ ಸಚಿವ ನಾಗೇಂದ್ರ ಇದ್ದಾರೆ, ಬಿಜೆಪಿಯಿಂದ ಗುಡಿಗಂಟಿ ಹನುಮಂತ ಸ್ಪರ್ಧೇಯಲ್ಲಿದಾರೆ, ನವೆಂಬರ್ 28ರಂದು ನಡೆಯ ಬೇಕಿದ್ದ ಚುನಾವಣೆ ನಾಮಪತ್ರ ಸಲ್ಲಿಕೆ ಬಳಿಕ ಕ್ಷುಲ್ಲಕ ಕಾರಣ ನೀಡಿ ಮುಂದೂಡಲಾಗಿತ್ತು, ಹೀಗೆ ವಿವಿಧ ಕಾರಣ ನೀಡಿ ಎರಡು ಬಾರಿ ಚುನಾವಣೆಯನ್ನು ಮುಂದೂಡಲಾಗಿತ್ತು, ಈ ಕಾರಣದಿಂದ ಪಾಲಿಕೆ ಚುನಾವಣೆ ನಿರ್ವಹಿಸಲು ರಾಜ್ಯ ನಾಯಕರಿಗೆ ಉಸ್ತುವಾರಿ ಕಾಂಗ್ರೇಸ್ ಪಕ್ಷದ…
ದೆಹಲಿ: ಧೈರ್ಯವೊಂದಿದ್ದರೆ ಎಂತಹ ಕಠಿಣ ಗುರಿಗಳನ್ನು ಸಹ ಸುಲಭವಾಗಿ ತಲುಪಬಹುದು ಎಂಬ ಮಾತಿದೆ. ಇದನ್ನು 2023ರ ಅರ್ಜನ ಪ್ರಶಸ್ತಿ ಪಡೆದ ಶೀತಲ್ ದೇವಿ (Sheetal Devi) ಸಾಬೀತುಪಡಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪುಟ್ಟ ಹಳ್ಳಿಯಲ್ಲಿ ಹುಟ್ಟಿ ಬೆಳೆದಿರುವ ಶೀತಲ್ ಕೈಗಳಿಲ್ಲದಿದ್ದರೂ ಪ್ಯಾರಾ ಏಷ್ಯನ್ ಗೇಮ್ಸ್ನಲ್ಲಿ (Para Asian Games) ಪದಕ ಗೆಲ್ಲುವ ಮೂಲಕ ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ. ತನ್ನ ಪಾದಗಳಿಂದ ಬಿಲ್ಲುಗಾರಿಕೆ ಮಾಡಿ ಕಳೆದ ವರ್ಷ ಪ್ಯಾರಾ ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರ ಈ ಅದ್ಭುತ ಸಾಧನೆಯನ್ನು ಗುರುತಿಸಿ ಶೀತಲ್ ದೇವಿ ಅವರಿಗೆ 2023ರ ಅರ್ಜುನ ಪ್ರಶಸ್ತಿಯನ್ನು (Arjuna Award) ನೀಡಿ ಗೌರವಿಸಲಾಗಿದೆ. ಶೀತಲ್ ದೇವಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಕ್ರೀಡಾ ಗೌರವವನ್ನು ಸ್ವೀಕರಿಸಿದ ನಂತರ ಶೀತಲ್ ದೇವಿ ಅವರು ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಿರುವ ವಿಡಿಯೋವನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ, ಈ ದಿನ…