Author: AIN Author

ಧಾರವಾಡ: ಸಿದ್ದರಾಮಯ್ಯನವರ ಸರ್ಕಾರವನ್ನು ಐಸಿಸ್ ಗೆ ಹೋಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಡೆ ಖಂಡಿಸಿ ಹಾಗೂ ರಾಜೀನಾಮೆ ಅಗ್ರಹಿಸಿ, ಧಾರವಾಡದಲ್ಲಿ ಕಾಂಗ್ತೆಸ್ ನಾಯಕರು ಸೇರಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ಜೋಶಿಯವರ ವಿರುದ್ಧ ಆಕ್ರೋಶ ಹೊರಹಾಕಿದರು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಹಾಗೂ ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ, ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದ ಕೈ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರ ಸೇರಿದಂತೆ ಕೇಂದ್ರ ಸಚಿವ ಒ್ರಹ್ಲಾದ್ ಜೋಶಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‌ ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ ಸಂತೋಷ್ ಲಾಡ್, ಜೋಶಿ ಅವರ ವಿರುದ್ಧ ಇಂದಿನಿಂದ ಪ್ರತಿಭಟನೆಗಳು ನಡೆಯಲಿವೆ. ಧಾರವಾಡ ಕ್ಷೇತ್ರ ಬುದ್ಧಿಜೀವಿಗಳ, ಪ್ರಗತಿಪರರ ಕ್ಷೇತ್ರ. ಇಂತಹ ಕ್ಷೇತ್ರವನ್ನು ಜೋಶಿ ಪ್ರತಿನಿಧಿಸುತ್ತಿದ್ದಾರೆ. ಜೋಶಿ ಅವರ ಬಗ್ಗೆ ವೈಯಕ್ತಿಕವಾಗಿ ನನಗೆ ಗೌರವವಿದೆ. ಆದರೆ, ಅವರು ಸಿದ್ದರಾಮಯ್ಯನವರ ಸರ್ಕಾರವನ್ನು ಐಸಿಸ್‌ ಆಡಳಿತಕ್ಕೆ…

Read More

ಧಾರವಾಡ:- ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದರೂ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಜೊತೆಗೆ ಕಾಂಗ್ರೆಸ್‌ ಸೇರ್ಪಡೆ ಕುರಿತು ನಾನು ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟ‌ರ್ ಸ್ಪಷ್ಟಪಡಿಸಿದರು. ವೈ-1 ಧಾರವಾಡದಲ್ಲಿ ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನಾಗಿಯೇ ಯಾರನ್ನೂ ಕಾಂಗ್ರೆಸ್‌ ಪಕ್ಷಕ್ಕೆ ಬನ್ನಿ ಎಂದು ಕರೆಯುತ್ತಿಲ್ಲ. ಪ್ರೇರಣೆಯಿಂದ ಅನೇಕರು ಬಂದಿದ್ದಾರೆ. ಹಾಗೆಯೇ ಅನೇಕರು ಬರುತ್ತಾರೆ. ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ನೀಡುವ ಕುರಿತು ಸಹ ಚರ್ಚೆ ನಡೆದಿಲ್ಲ. ಇನ್ನೂ ಧಾರವಾಡದ ನೌಕರರ ಭವನದಲ್ಲಿ ಲೋಕಸಭೆ ಚುನಾವಣೆ ತಯಾರಿ ಸಭೆ ಜರುಗಿದ್ದು, ಜನವರಿ 10ರಂದು ಬೆಂಗಳೂರಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿ ಸೇರಿ ಇತರರು ಸಭೆ ನಡೆಸಿ ಸಮಗ್ರ ಚರ್ಚೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆ ಟಿಕೆಟ್‌ ಆಕಾಂಕ್ಷಿಗಳು, ಅಭ್ಯರ್ಥಿಗಳ ಬಗ್ಗೆ ಬೆಂಗಳೂರು ಸಭೆಯಲ್ಲಿ ಸಮಗ್ರ ಚರ್ಚೆ ಆಗಲಿದೆ ಎಂದು ತಿಳಿಸಿದರು.

Read More

ಬೆಂಗಳೂರು:-ಕರ್ನಾಟಕದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ಈ ಹಿನ್ನೆಲೆ CM ಸಿದ್ದರಾಮಯ್ಯ ಅವರು ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ X ಮಾಡಿರುವ ಸಿದ್ದರಾಮಯ್ಯ, ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ. ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್…

Read More

ಬೆಂಗಳೂರು:- ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆ 711 ಡಿ.ಎಲ್‌ ಅಮಾನತು ಮಾಡಲಾಗಿದೆ. ನಗರದಲ್ಲಿ ಕಳೆದ ವರ್ಷ 2,974 ಡಿ.ಎಲ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿತ್ತು. ಬೆಂಗಳೂರು ನಗರ, ರಾಜ್ಯದ ಇತರೆ ಜಿಲ್ಲೆ ಹಾಗೂ ಹೊರ ರಾಜ್ಯದ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಡಿ.ಎಲ್‌ ಅಮಾನತು ಮಾಡುವಂತೆ ಕಳುಹಿಸಲಾಗಿತ್ತು. ಅದರಂತೆ ಸಾರಿಗೆ ಇಲಾಖೆ ಅಧಿಕಾರಿಗಳು, ಡಿ.ಎಲ್‌ ಅಮಾನತು ಮಾಡಿದ್ದಾರೆ. ಉಳಿದ, 2,263 ಡಿ.ಎಲ್‌ಗಳನ್ನು ಅಮಾನತು ಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ

Read More

ಬೆಂಗಳೂರು:- ಜನವರಿ 22ರಂದು ಅಯೋಧ್ಯ ರಾಮ ಮಂದಿರದಲ್ಲಿ ವಿಜೃಂಭಣೆಯಿಂದ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಜನವರಿ 22ರ ದಿನವನ್ನು ಸ್ಮರಣೀಯವಾಗಿಸಲು ಹಲವು ಪ್ರಯತ್ನ ಮಾಡುತ್ತಿದ್ದಾರೆ. ಮತ್ತೊಂದೆಡೆ ಆ ದಿನವೇ ತಮ್ಮ ಮಕ್ಕಳು ಜನಿಸಬೇಕು ಎಂದು ಗರ್ಭಿಣಿಯರು ಆಶಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಅನೇಕ ಆಸ್ಪತ್ರೆಯ ವೈದ್ಯರಿಗೆ ಗರ್ಭಿಣಿಯರು ದುಂಬಾಲು ಬಿದ್ದಿರುವುದು ಬೆಳಕಿಗೆ ಬಂದಿದೆ. ಹೌದು, ಗರ್ಭಿಣಿಯರು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಜನವರಿ 22 ರಂದೇ ಡೆಲಿವೆರಿ ಮಾಡಿಸಿಕೊಳ್ಳುವಂತೆ ವೈದ್ಯರಿಗೆ ಮನವಿ ಮಾಡುತ್ತಿದ್ದಾರೆ. ಆದ್ರೆ ವೈದ್ಯರು, ಎಲ್ಲರಿಗೂ ಅವತ್ತೆ ಡೆಲಿವರಿ ಮಾಡುವುದಕ್ಕೆ ಕಷ್ಟ ಸಾಧ್ಯ ಎನ್ನುತ್ತಿದ್ದಾರೆ. ಡೆಲಿವರಿ ನಿಗಧಿಯಾದ ದಿನಾಂಕಕ್ಕಿಂತ ಒಂದು ವಾರ ಹಿಂದೆ ಮುಂದೆ ಅಂತರ ಇದ್ರೆ ಮಾತ್ರ ಈ ರೀತಿ ಡೆಲಿವರಿ ಮಾಡಿಸಿಕೊಳ್ಳಬಹುದು. ಅತಂವರಿಗೆ ಮಾತ್ರ ಅವಕಾಶ ನೀಡುತ್ತಿದ್ದೇವೆ ಎಂದಿದ್ದಾರೆ ವೈದ್ಯರು. ಮಂದಿರ ಉದ್ಘಾಟನೆ ದಿನ ಹೆರಿಗೆ ಮಾಡಿಸಿಕೊಳ್ಳಲು ತಾಯಂದಿರ ಬೇಡಿಕೆ ಹೆಚ್ಚಾಗಿದ್ದು, ನಮಗೆ ರಾಮನಂಥಾ ಮಗು ಹುಟ್ಟಲಿ ಎಂದು ಬಯಸಿ ಉತ್ತರ…

Read More

ಇತ್ತೀಚಿನ ವರ್ಷಗಳಲ್ಲಿ, ಕೋವಿಡ್-19 ಸಾಂಕ್ರಾಮಿಕದ ನಂತರ, ನೆಟ್‌ಫ್ಲಿಕ್ಸ್‌ನಂತಹ OTT ಪ್ಲಾಟ್‌ಫಾರ್ಮ್‌ಗಳ ಕ್ರೇಜ್ ಪ್ರಪಂಚದಾದ್ಯಂತ ಗಮನಾರ್ಹವಾಗಿ ಬೆಳೆದಿದೆ. ಇದರಿಂದಾಗಿ ಸಾಕಷ್ಟು ಜನರು ತಮ್ಮ ಬಿಡುವಿನ ಸಮಯದಲ್ಲಿ ಟಿವಿ ಪರದೆಯ ಮುಂದೆಯೇ ಸಮಯ ಕಳೆಯುತ್ತಾರೆ. ಸಂಶೋಧನೆಯೊಂದರ ಪ್ರಕಾರ, ಟಿವಿ ನೋಡುತ್ತಾ ಮಲಗುವ ಅಭ್ಯಾಸವನ್ನು ಹೊಂದಿರುವ ಜನರಲ್ಲಿ ಇನ್ಸುಲಿನ್ ಮಟ್ಟದಲ್ಲಿ ತೊಂದರೆಯುಂಟಾಗುತ್ತದೆ. ಈ ಕಾರಣದಿಂದಾಗಿ, ದೇಹದಲ್ಲಿನ ಸಕ್ಕರೆಯ ಪ್ರಮಾಣವು ಹೆಚ್ಚಾಗಬಹುದು. ಈ ನಿದ್ರೆಯ ಮಾದರಿಯು ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಅಪಾಯವನ್ನು ಹೆಚ್ಚಿಸುತ್ತದೆ. ಬಿಪಿ, ಶುಗರ್ ಮತ್ತು ತೂಕ ಹೆಚ್ಚಾಗುವುದರಿಂದ ಹೃದ್ರೋಗಗಳ ಅಪಾಯವು ಗಮನಾರ್ಹವಾಗಿ ಹೆಚ್ಚಾಗುತ್ತದೆ ಎಂದು ತಿಳಿದುಬಂದಿದೆ. ಚಿಕಾಗೋದ ನಾರ್ತ್‌ವೆಸ್ಟರ್ನ್ ಯೂನಿವರ್ಸಿಟಿ ಸ್ಕೂಲ್ ಆಫ್ ಮೆಡಿಸಿನ್‌ನಲ್ಲಿ 2022ರಲ್ಲಿ ನಡೆಸಿದ ಸಂಶೋಧನೆಯೊಂದರ ಫಲಿತಾಂಶ ಇದೀಗಾ ಬಹಿರಂಗಗೊಂಡಿದೆ. ಈ ಸಂಶೋಧನೆಯಲ್ಲಿ ಟಿವಿ ನೋಡುತ್ತಾ ಮಲಗುವ ಅಭ್ಯಾಸ ಹೊಂದಿರುವ ಸುಮಾರು 550 ಜನರನ್ನು ಒಳಪಡಿಸಲಾಗಿತ್ತು. ಅಧ್ಯಯನದ ಫಲಿತಾಂಶದ ಪ್ರಕಾರ, ಈ ರೀತಿಯ ಅಭ್ಯಾಸವು ತೂಕ ಹೆಚ್ಚಾಗುವುದು, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಅಪಾಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಇದಲ್ಲದೇ ಸ್ನಾಯು…

Read More

ದಾವಣಗೆರೆ: ಭದ್ರಾ ನೀರನ್ನು ಸಮರ್ಪಕವಾಗಿ ಹರಿಸದ ಐಸಿಸಿ ನಿರ್ಣಯ ಖಂಡಿಸಿ ಜ.10ರಂದು ಜಿಲ್ಲಾ ರೈತ ಒಕ್ಕೂಟವು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಹಳ್ಳಿ ಹಳ್ಳಿಗಳಿಗೆ ತೆರಳಿ ದಾವಣಗೆರೆ ಲೋಕಸಭೆಯ ಬಿಜೆಪಿ ಟಿಕೆಟ್ ಆಕಾಂಕ್ಷಿ ಕೆ. ಬಿ. ಕೊಟ್ರೇಶ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಜನರಲ್ಲಿ ಮನವಿ ಮಾಡಿದರು. ಜ.10ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆಯ ಪಿ. ಬಿ.ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಜಮಾವಣೆಗೊಳ್ಳಬೇಕು. ರೈತರು, ಭದ್ರಾ ನೀರು ಬಳಕೆ ಮಾಡುವವರು ಈ ಪ್ರತಿಭಟನೆಗೆ ಬನ್ನಿ. ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸೋಣ. ಐಸಿಸಿ ಸಭೆ ನಿರ್ಣಯ ಬದಲಾಯಿಸುವವರೆಗೆ ಹೋರಾಟ ಮಾಡೋಣ ಎಂದು ಕೆ. ಬಿ. ಕೊಟ್ರೇಶ್ ಮನವಿ ಮಾಡುತ್ತಿದ್ದಾರೆ. ಜಿಲ್ಲೆಯ 28 ಹಳ್ಳಿಗಳಿಗೆ ತೆರಳಿ ಪ್ರತಿಭಟನೆಯಲ್ಲಿ ರೈತರು ಭಾಗವಹಿಸುವಂತೆ ಮನವಿ ಮಾಡಿದರು. ಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶ ಇರುವುದು ದಾವಣಗೆರೆ ಜಿಲ್ಲೆಯಲ್ಲಿ. ಎಲ್ಲಾ ರೈತರು ಸಂಘಟಿತರಾಗಿ, ಒಗ್ಗಟ್ಟಾಗಿ ಹೋರಾಟ ಮಾಡಿದರೆ ಸರ್ಕಾರದ ಗಮನ ಸೆಳೆಯಬಹುದು. ಹಾಗಾಗಿ, ರೈತರು ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಕೋರಿದರು.…

Read More

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಹುಬ್ಬಳ್ಳಿ ಧಾರವಾಡ ಪೊಲೀಸ್‌ ಕಮೀಷನರೇಟ್ ಅಧಿಕಾರಿಗಳ ಸಭೆಯನ್ನು ಹುಬ್ಬಳ್ಳಿ ಸರ್ಕ್ಯೂಟ್‌ ಹೌಸ್‌ನಲ್ಲಿ ನಡೆಸಲಾಯಿತು. ಹೌದು.. ಅವಳಿನಗರದ ಹಾಗೂ ಧಾರವಾಡ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಜಿಲ್ಲಾಡಳಿತ ಹಾಗೂ ಪಾಲಿಕೆ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಚಿವ ಪ್ರಹ್ಲಾದ ಜೋಶಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ಇನ್ನೂ ಸಭೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಶಾಸಕ ಅರವಿಂದ ಬೆಲ್ಲದ, ಶಾಸಕ ಎಂ.ಆರ್.ಪಾಟೀಲ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Read More

ಬೆಂಗಳೂರು:- ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೂ ಸಹ ಕೋರೋನಾ ಸೋಂಕು ತಗುಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದು, ಕೊರೊನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ https://twitter.com/CMofKarnataka/status/1744704841996484643?t=kGpN9ONkCpZiXNjx8SKZdA&s=19 ಅದರಂತೆ ವಿಪಕ್ಷ ನಾಯಕ ಆರ್ ಅಶೋಕ್ ಟ್ವೀಟ್ ಮಾಡಿ, ಸನ್ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್-19 ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ಕಾರ್ಯೋನ್ಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ. https://x.com/RAshokaBJP/status/1744704668314587460?t=164kAghK11Ep6N8isbC66w&s=08

Read More

ಆನೇಕಲ್:- ಹಿಟ್ ಅಂಡ್ ರನ್ ಗೆ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಆನೇಕಲ್ ತಾಲ್ಲೂಕಿನ ತೆಲಗರಹಳ್ಳಿ ಬಳಿ ಜರುಗಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ತೆಲಗರಹಳ್ಳಿಯಲ್ಲಿ ಪಲ್ಸರ್ ಬೈಕ್ ನಲ್ಲಿ ತೆರಳುತ್ತಿದ್ದ ಬೈಕ್ ಸವಾರರಿಗೆ ಅಪರಿಚಿತ ವಾಹನ ಡಿಕ್ಕಿಯೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಬೈಕ್ ಸವಾರರು ಪ್ರಾಣ ಬಿಟ್ಟಿದ್ದಾರೆ. ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Read More