Author: AIN Author

ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ,ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಣಾತರು. ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಶ್ರೀ ಸಿದ್ಧೇಶ್ವರ ಸ್ವಾಮಿಗಳು ಇವರು ಸಂತರಷ್ಟೇ ಅಲ್ಲ ಜ್ಞಾನೋಪಾಸಕರು ಕೂಡ. ಸಂತರು ನಾಡಿನಲ್ಲಿ ಬಹಳ ಜನ ಇದ್ದರು, ಈಗಲೂ ಇದ್ದಾರೆ. ಆದರೆ ಜ್ಞಾನಯೋಗಿಗಳು ಬಹಳ ಅಪರೂಪ. ಅಂಥವರಲ್ಲೊಬ್ಬರು ಶ್ರೀ ಸಿದ್ಧೇಶ್ವರ ಸ್ವಾಮಿಗಳು. ವಿಜಯಪುರದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರ. ಗದುಗಿನ ಶಿವಾನಂದ ಶ್ರೀಗಳ ಪರಂಪರೆಯಲ್ಲಿ ಬಂದ ಈ ಆಶ್ರಮ ಇವರ ಗುರುಗಳಾದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳ ಕಾಲದಲ್ಲಿ ಅತ್ಯಂತ ಪ್ರವರ್ಧಮಾನಕ್ಕೆ ಬಂತು. ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳವಾಗಿ ಮಹತ್ವ ಪಡೆಯಿತು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಹೋಸೋರ ನಗರದಲ್ಲಿ ನಿರಂತರ ಜ್ಞಾನಯೋಗಿ ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳವರ ದೇವ ಸದೃಶ…

Read More

ಬಳ್ಳಾರಿ: ಅನಂತ್‌ ಕುಮಾರ್‌ ಹೆಗಡೆ ಅವರು ದೇವರಕೊಳ್ಳದ ನಾಗಸಾಧು ಶ್ರೀ ದಿಗಂಬರ ರಾಜ ಭಾರತಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.  ನಾಗಸಾಧು ಶ್ರೀ ದಿಗಂಬರ ರಾಜ ಭಾರತಿ ಅವರ ಜತೆ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು  ಹೇಳಲಾಗುತ್ತಿದೆ. ಜಿಲ್ಲೆಯ ಸಂಡೂರು ತಾಲೂಕಿನ ದೇವರ ಕೊಳ್ಳದ ನಾಗಸಾಧು ಭಾರೀ ಪ್ರಭಾವಿಯಾಗಿದ್ದಾರೆ.  ಗುಡ್ಡದ ಮೇಲಿರೋ ಮರವೊಂದರ ಮೇಲೆ ನಾಗಸಾಧು ಶ್ರೀ ದಿಗಂಬರ ರಾಜ ಭಾರತಿ ಅವರು ವಾಸ ಮಾಡುತ್ತಾರೆ. ನಾಗಸಾಧು ಅವರು ಆರು ತಿಂಗಳು ಮಾತನಾಡ್ತಾರೆ ಇನ್ನಾರು ತಿಂಗಳು ಮೌನವೃತದಲ್ಲಿ ರುತ್ತಾರೆ. ಇಲ್ಲಿಗೆ ಬಂದು ಆಶೀರ್ವಾದ ಪಡೆದ್ರೇ ಗೆಲ್ತಾರೆ ಅನ್ನೋ ನಂಬಿಕೆ ಇದೆ. ಈ ಹಿನ್ನಲೆಯಲ್ಲಿ ಚುನಾವಣೆಗೆ ಮುನ್ನ ಹಲವು ನಾಯಕರು ಬರುತ್ತಾರೆ. 

Read More

ಬಳ್ಳಾರಿ:  ಬೊಲೋರೋ ವಾಹನ ಪಲ್ಟಿಯಾಗಿ 25 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಬಳ್ಳಾರಿಯ ಸಿರುಗುಪ್ಪ ತಾಲೂಕಿನ ಹಚ್ಚೋಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಐವರ ಮಹಿಳೆಯರ ಸ್ಥಿತಿ ಗಂಭೀರವಾಗಿದ್ದು, ಮಹಿಳಾ ಕಾರ್ಮಿಕರನ್ನು ಕೂಲಿ ಕೆಸಲಕ್ಕೆ ಕರೆದುಕೊಂಡು ಹೊಗುತ್ತಿದ್ದ ವೇಳೆ ಬೊಲೊರೋ ವಾಹನ ಪಲ್ಟಿಯಾಗಿದೆ. ಸದ್ಯ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು: 2023-24ನೇ ಸಾಲಿನ 5,8,9 ನೇ ತರಗತಿಗಳ ಪಬ್ಲಿಕ್ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕಳೆದ ವರ್ಷದಿಂದ 5 ನೇ ತರಗತಿಗೆ ಹಾಗೂ ಈ ವರ್ಷದಿಂದ 8 ಮತ್ತು 9 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನ ಶಿಕ್ಷಣ ಇಲಾಖೆ ನಡೆಸುತ್ತಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ವೇಳಾಪಟ್ಟಿ ಪ್ರಕಟಗೊಂಡಿದ್ದು, 5 ನೇ ತರಗತಿಗೆ ಮಾರ್ಚ್ 11 ರಿಂದ ಮಾರ್ಚ್ 14 ಪರೀಕ್ಷೆ ನಡೆಯಲಿದೆ. 8ನೇ ತರಗತಿ ಮತ್ತು 9ನೇ ತರಗತಿಗೆ ಮಾರ್ಚ್‌ 11 ರಿಂದ ಮಾರ್ಚ್ 18ರವರೆಗೆ ಪರೀಕ್ಷೆ ನಡೆಯಲಿದೆ. 5ನೇ ತರಗತಿ ವೇಳಾಪಟ್ಟಿ: ಮಾರ್ಚ್ 11- ಪ್ರಥಮ ಭಾಷೆ ಮಾರ್ಚ್ 12- ದ್ವೀತಿಯ ಭಾಷೆ ಮಾರ್ಚ್ 13- ಪರಿಸರ ಅಧ್ಯಯನ ಮಾರ್ಚ್‌ -14- ಗಣಿತ 8 ಮತ್ತು 9 ನೇ ತರಗತಿ ವೇಳಾಪಟ್ಟಿ: ಮಾರ್ಚ್ 11- ಪ್ರಥಮ ಭಾಷೆ ಮಾರ್ಚ್ 12- ದ್ವೀತಿಯ ಭಾಷೆ ಮಾರ್ಚ್ 13- ತೃತೀಯ ಭಾಷೆ ಮಾರ್ಚ್ 14- ಗಣಿತ ಮಾರ್ಚ್…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯನವರೇ ನಿಮಗೆ ನಾಚಿಗೆ ಆಗಲ್ವಾ? ನಮ್ಮ ಸರ್ಕಾರದಂತೆ ನೀವು ಹಣ ಕೊಡಿ, ಇಲ್ಲವಾದಲ್ಲಿ ನೀವು ರಾಜೀನಾಮೆ ಕೊಡಿ ಎಂದು ವಿಪಕ್ಷ ನಾಯಕ ಆರ್​​. ಅಶೋಕ್​ ಕಿಡಿಕಾರಿದ್ದಾರೆ. https://ainlivenews.com/it-is-up-to-the-high-command-to-do-dcm-we-can-advise-g-parameshwar/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಬಂದರೂ ರೈತರಿಗೆ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಯಾವುದೇ ರೈತರಿಗೆ ಬರ ಪರಿಹಾರದ ಹಣ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಬೇಜವಾಬ್ದಾರಿ ಸರ್ಕಾರದ ವಿರುದ್ಧ ಗವರ್ನರ್​ ಥಾವರ್​ ಚಂದ್​​ ಗೆಹ್ಲೋಟ್​​​ ಅವರಿಗೆ ದೂರು ಕೊಟ್ಟಿದ್ದೇವೆ. ರಾಜ್ಯದಲ್ಲಿ 200 ರಿಂದ 700 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕಡೆ ಸರ್ಕಾರ ತಿರುಗಿಯೂ ನೋಡುತ್ತಿಲ್ಲ. ಸರ್ಕಾರದ ಖಜಾನೆ ಖಾಲಿ ಆಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

Read More

ಬಳ್ಳಾರಿ: ಸಾಂಬಾರ್ ಪದಾರ್ಥಗಳ ಮಾರಾಟ ಮತ್ತು ಖರೀದಿಗಾರರ ಸಮಾವೇಶವನ್ನೂ  ಬಳ್ಳಾರಿಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಸಮಾವೇಶವನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಉದ್ಘಾಟಿಸಿದರು. ದೀಪಾ ಬೆಳಗಿಸುವ ಮುಖೇನ ಸಮಾವೇಶಕ್ಕೆ ಚಾಲನೆ ನೀಡಿದರು. ಸಮಾವೇಶದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿದ್ದು, ಜಿಲ್ಲೆಯಲ್ಲಿ ಹೆಚ್ಚಾಗಿ ಮೆಣಸಿಕಾಯಿ ಬೆಳೆಯಲಾಗುತ್ತದೆ. ಬಳ್ಳಾರಿಯಲ್ಲೇ ಮೆಣಿಸಿನಕಾಯಿ ಮಾರ್ಕೇಟ್ ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೆಣಸಿನಕಾಯಿ ಮಾರ್ಕೇಟ್ ನಿರ್ಮಾಣ ಮಾಡಲಾಗುತ್ತಿದೆ. ಗಣಿಜಿಲ್ಲೆಯಲದಲಿ ಹೆಚ್ಚಿನ ಒಣ ಮೆಣಸಿಕಾಯಿ ಬೆಳೆಯುತ್ತಿದ್ದು, ಬೆರೆ ಕಡೆ ಮಾರಾಟ ಮಾಡಲು ರೈತರಿಗೆ ತೊಂದರೆಯಾಗ್ತಿದೆ. ಆದ್ದರಿಂದ ಇದನ್ನು ಗಮನದಲ್ಲಿಟ್ಟುಕೊಂಡು ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರ್ಕೇಟ್ ನಿರ್ಮಾಣ ಮಾಡಲು ಜಿಲ್ಲಾಡಳಿದ ಈಗಾಗಲೇ ಸಿದ್ಧತೆ ನಡೆಸಿದೆ ಎಂದು ಹೇಳಿದರು.

Read More

ಬಳ್ಳಾರಿ:  ಶ್ರೀರಾಮುಲು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.  ಈಗಾಗಲೇ ದೇವಸ್ಥಾನಗಳ ದರ್ಶನ ಮಾಡೋದ್ರ ಜೊತೆಗೆ, ಸ್ವಾಮೀಜಿಗಳ ಭೇಟಿಯಾಗಿ ಆಶೀರ್ವಾದ ಪಡೆದಿದ್ರು.  ಇದರ ಜೊತೆಗೆ ಶ್ರೀರಾಮುಲು ಇದೀಗ ದೇವರಕೊಳ್ಳದ ನಾಗಸಾಧು ಶ್ರೀ ದಿಗಂಬರ ರಾಜ ಭಾರತಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿರೋದು ಸಾಕಷ್ಟು ಕುತೂಹಲ ಮೂಡಿಸಿದೆ. ಯಾಕೆಂದರೆ ಇಲ್ಲಿಗೆ ಬಂದು ಆಶೀರ್ವಾದ ಪಡೆದವರು ಯಾರು ಸೋತಿಲ್ಲ ಎನ್ನುವ ಪ್ರತೀತಿ ಇದೆ. ಇನ್ನೂ ಸಂಡೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ದೇವರ ಕೊಳ್ಳದ ನಾಗಸಾಧು ಭಾರಿ ಪ್ರಭಾವಿಯಾಗಿದ್ದಾರೆ. ಗುಡ್ಡದ ಮೇಲಿರೋ ಮರದವೊಂದರ ಮೇಲೆ ವಾಸ ಮಾಡ್ತಿರೋ ನಾಗಸಾಧು. https://ainlivenews.com/another-road-rage-in-silicon-city-young-woman-stunned-by-youth/ ಆರು ತಿಂಗಳು ಮಾತನಾಡ್ತಾರೆ ಇನ್ನಾರು ತಿಂಗಳು ಮೌನವೃತದಲ್ಲಿರುತ್ತಾರೆ. ಭಕ್ತರು ತಮಗೆ ಅರ್ಪಿಸಿದ ಹಣದಿಂದ ಹೊಸಪೇಟೆಯಲ್ಲಿ ಶಾಲೆಯೊಂದನ್ನು ಇವರು ನಡೆಸುತ್ತಾರೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಸಾಮಾನ್ಯರಂತೆ ಇರುವ ನಾಗಸಾಧು ಆಶೀರ್ವಾದ ಪಡೆಯಲು ರಾಜಕೀಯ ಮುಖಂಡರು ಹೆಚ್ಚು ಹೆಚ್ಚು ಬರುತ್ತಾರೆ

Read More

ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಿದ್ರೆ ಲೋಕಸಭಾ ಚುನಾವಣೆಗೆ ಅನುಕೂಲ ಆಗಲಿದೆ ಅಂತ ಸುರ್ಜೇವಾಲ (Randeep Surjewala) ಬಳಿ ಹಲವು ಸಚಿವರು ಮನವಿ ಮಾಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಸಚಿವರಿಂದ ಸುರ್ಜೇವಾಲ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆ ಸಭೆಯಲ್ಲಿ ಹಲವು ಸಚಿವರು ಡಿಸಿಎಂ ಹುದ್ದೆ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ. ಮಂತ್ರಿಗಳನ್ನು ಸುರ್ಜೇವಾಲ ಕರೆದಿದ್ದರು. ಲೋಕಸಭಾ ಚುನಾವಣೆ ಬರುತ್ತಿದೆ. ನೀವು ಹಿರಿಯರು ಇದ್ದೀರಾ ಸಿರಿಯಸ್ ಆಗಿ ತಗೋಬೇಕು ಅಂತ ಚರ್ಚೆ ಮಾಡೋಕೆ ಕರೆದಿದ್ದರು. ಈ ವೇಳೆ ಕೆಲವರು ಡಿಸಿಎಂ ಮಾಡಿದರೆ ಅನುಕೂಲ ಆಗುತ್ತೆ ಅಂತ ಕೆಲ ಸಚಿವರು ಹೇಳಿದ್ರು. ಆದರೆ ಡಿಸಿಎಂ ಹುದ್ದೆ ವಿಷಯವಾಗಿಯೇ ಸಭೆ ಕರೆದಿರಲಿಲ್ಲ. ಡಿಸಿಎಂ ಮಾಡೋದು ಹೈಕಮಾಂಡ್‍ಗೆ ಬಿಟ್ಟ ವಿಚಾರ. ನಾವು ಸಲಹೆ ಮಾಡಬಹುದು. ಕೆಲವರು ಸಲಹೆ ಮಾಡಿದ್ದಾರೆ. ಸಲಹೆ ತೆಗೆದುಕೊಳ್ಳೋದು ಬಿಡೋದು ಹೈಕಮಾಂಡ್ ಬಿಟ್ಟ ವಿಚಾರ ಹೈಕಮಾಂಡ್ ಸಾಧಕ-ಬಾಧಕ ನೋಡಿ ಡಿಸಿಎಂ ಬಗ್ಗೆ ತೀರ್ಮಾನ ಮಾಡ್ತಾರೆ ಅಂತ…

Read More

ಬೆಂಗಳೂರು: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ದಿನ ಹತ್ತಿರ ಬರುತ್ತಿದ್ದಂತೆ ರಾಮಮಂದಿರ ಆಮಂತ್ರಣ ಮತ್ತು ಮಂತ್ರಾಕ್ಷತೆ ವಿಚಾರದಲ್ಲಿ ಪಾಲಿಟಿಕ್ಸ್  ಜೋರಾಗಿದೆ. ನಾವು ರಾಮಭಕ್ತರು ಎನ್ನುವುದಕ್ಕೆ ಕಾಂಗ್ರೆಸ್ (Congress) ಸಮರ್ಥನೆ ನೀಡಲು ಆರಂಭಿಸಿದೆ. ನಾವು ಕೂಡ ರಾಮಭಕ್ತರೇ ರಾಮಮಂದಿರಕ್ಕೆ ನಮ್ಮದೂ ಕೊಡುಗೆ ಇದೆ. ರಾಮಮಂದಿರ ಬಾಗಿಲು ತೆಗೆಸಿದ್ದೇ ನಾವು. ಪೂಜೆ ಮಾಡಲು ಅವಕಾಶ ಕೊಟ್ಟಿದ್ದೆ ನಾವು ಎಂದು ಹೇಳಿದೆ. ಮಹಾತ್ಮ ಗಾಂಧೀಜಿಗಿಂತ (Mahatma Gandhi) ದೊಡ್ಡ ರಾಮಭಕ್ತ ಇದ್ದಾರಾ? ಜನವರಿ 22 ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಅದೇಶಿಸಿರುವುದು ಕಾಂಗ್ರೆಸ್. ಹೀಗೆ ಕಾಂಗ್ರೆಸ್ ಕ್ರೆಡಿಟ್ ಕ್ಲೈಮ್ ವಾರ್ ಶುರು ಮಾಡಿಕೊಂಡಿದೆ. ಈ ಸಂಬಂಧ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್‌ ಹಾಕಿ ರಾಮ ಮಂದಿರಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆಯ ಪಟ್ಟಿಯನ್ನು ವಿವರಿಸಿದೆ. ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ ಎಂದು ಪರಮೇಶ್ವರ್‌ (Parameshwar) ಹೇಳಿದರೆ ಮುಚ್ಚಿಹೋಗಿದ್ದ ರಾಮಮಂದಿರದ ಗರ್ಭಗುಡಿ ತೆರೆಸಿದ್ದು ರಾಜೀವ್ ಗಾಂಧಿ ಎಂದು ಡಾ.ಎಂ.ಸಿ ಸುಧಾಕರ್ ತಿಳಿಸಿದ್ದಾರೆ.

Read More

ಕಲಬುರಗಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕಾರ್ಯತಂತ್ರ ರೂಪಿಸಲಾಗಿದೆ ಅಂತ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ..ಕಲಬುರಗಿಯಲ್ಲಿಂದು ಮಾತನಾಡಿದ ಖರ್ಗೆ, ಈಗಾಗಲೇ ಕ್ಷೇತ್ರವಾರು ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಇದೇ ವಿಷಯವಾಗಿ ನಾಳೆ ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ಸಭೆ ಕರೆಯಲಾಗಿದೆ. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತು ಪ್ರಮುಖವಾಗಿ ಚರ್ಚೆ ಆಗಲಿದೆ ಎಂದರು

Read More