Author: AIN Author

ಭೋಪಾಲ್: ಮಧ್ಯಪ್ರದೇಶದ (Madhya Pradesh) ಭೋಪಾಲ್‌ನಲ್ಲಿ (Bhopal) ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ ಮನೆಯಿಂದ 26 ಬಾಲಕಿಯರು ನಾಪತ್ತೆಯಾಗಿರುವ ಅಘಾತಕಾರಿ ಘಟನೆ ನಡೆದಿದೆ. ಗುಜರಾತ್, ಜಾರ್ಖಂಡ್, ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 26 ಬಾಲಕಿಯರು ಭೋಪಾಲ್‌ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ ಮನೆಯಲ್ಲಿದ್ದರು. ಅನುಮತಿಯಿಲ್ಲದೆ ಬಾಲಕಿಯರ ಮನೆ ನಡೆಸುತ್ತಿರುವ ಖಾಸಗಿ ಎನ್‌ಜಿಒ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.  ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (NCPCR) ಅಧ್ಯಕ್ಷ ಪ್ರಿಯಾಂಕ್ ಕನುಂಗೋ ಅವರು ಭೋಪಾಲ್‌ನ ಹೊರವಲಯದಲ್ಲಿರುವ ಪರ್ವಾಲಿಯಾ ಪ್ರದೇಶದ ಆಂಚಲ್ ಬಾಲಕಿಯರ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. https://ainlivenews.com/use-this-home-remedy-for-swollen-feet-in-winter/ ಅವರು ರಿಜಿಸ್ಟರ್ ಪರಿಶೀಲಿಸಿದಾಗ ಅದರಲ್ಲಿ 68 ಹುಡುಗಿಯರ ನಮೂದುಗಳು ಇದ್ದವು. ಆದರೆ ಅವರಲ್ಲಿ 26 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಬಾಲಕಿಯರ ಕುರಿತು ಮಕ್ಕಳ ನಿಲಯದ ನಿರ್ದೇಶಕ ಅನಿಲ್ ಮ್ಯಾಥ್ಯೂ ಅವರನ್ನು ಪ್ರಶ್ನಿಸಿದಾಗ ಅನುಮಾನ ವ್ಯಕ್ತವಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪರ್ವಲಿಯಾ ಪೊಲೀಸರು ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. 

Read More

ಬೆಂಗಳೂರು/ ಚಿತ್ರದುರ್ಗ: ಸ್ವಂತ ಮಗುವನ್ನೇ ಹತ್ಯೆಗೈದು ಸೂಟ್‌ಕೇಸ್‌ನಲ್ಲಿ ಶವವಿಟ್ಟುಕೊಂಡು ತೆರಳುತ್ತಿದ್ದ‌ ಮಹಿಳೆಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಠಾಣೆ ಪೊಲೀಸರು (Chitradurga Police Station) ಬಂಧಿಸಿರುವ ಘಟನೆ ನಡೆದಿದೆ. ಗೋವಾದಿಂದ ಬೆಂಗಳೂರಿಗೆ (Goa To Bengaluru) ತೆರಳುತ್ತಿದ್ದ ಸ್ಟಾರ್ಟ್‌ಅಪ್ ಫೌಂಡರ್ ಮತ್ತು ಸಿಇಓ ಸುಚನಾ ಸೇಠ್ (Suchana Seth) ವಿರುದ್ಧ ಗೋವಾದ ಹೋಟೆಲ್‌ನಲ್ಲಿ ಮಗುವನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿತ್ತು. ಸುಚನಾ ಸೇಠ್ ಅವರು ಶನಿವಾರ ತನ್ನ ಮಗನೊಂದಿಗೆ ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆಗೆ ಭೇಟಿ ನೀಡಿದ್ದರು. ಸೋಮವಾರ ಹೋಟೆಲ್ ತೊರೆಯುವಾಗ ಒಬ್ಬಂಟಿಯಾಗಿದ್ದರು. ತಾನು ಬೆಂಗಳೂರಿಗೆ ಟ್ಯಾಕ್ಸಿ ಕಾಯ್ದಿರಿಸುವಂತೆ ಹೋಟೆಲ್ ಸಿಬ್ಬಂದಿಯನ್ನ ಕೇಳಿದ್ದಾಳೆ. ಅವರು ವಿಮಾನ ಸೌಲಭ್ಯ ಇರುವ ಸಲಹೆ ನೀಡಿದರೂ ಟ್ಯಾಕ್ಸಿ (Taxi) ತೆಗೆದುಕೊಳ್ಳುವಂತೆ ಆಕೆ ಒತ್ತಾಯಿಸಿದ್ದಾಳೆ ಎಂದು ಸಿಬ್ಬಂದಿ ತಿಳಿಸಿದ್ದಾರೆ. ಆಕೆ ಹೋಟೆಲ್‌ನಿಂದ (Hotel) ಹೊರಗೆ ಹೋದ ಬಳಿಕ ಮಗು ಇಲ್ಲದಿದ್ದನ್ನು ಸಿಬ್ಬಂದಿ ಗಮನಿಸಿದ್ದಾರೆ. ಅಲ್ಲದೇ ಆಕೆ ತಂಗಿದ್ದ ಹೋಟೆಲ್ ಶುಚಿಗೊಳಿಸಲು ಹೋದಾಗ ರಕ್ತದ…

Read More

ಫೈವ್‌ ಸ್ಟಾರ್‌, ದೊಡ್ಡ ದೊಡ್ಡ ರೆಸ್ಟೊರೆಂಟ್‌, ಚೈನೀಸ್‌, ಇಟಾಲಿಯನ್‌ ಆಹಾರ ಸವಿಯುವವರೂ ಸಹ ಮಿಲಿಟರಿ ಹೋಟೆಲ್‌ನಲ್ಲಿ ಒಮ್ಮೆಯಾದರೂ ಆ ಬಿಸಿಯಾದ, ರುಚಿಯಾದ ಮಾಂಸದ ಆಹಾರ ಸವಿಯಲು ಕಾಯುತ್ತಿರುತ್ತಾರೆ. ಹೌದು ಬಹುತೇಕರಿಗೆ ಮಿಲಿಟ್ರಿ ಹೋಟೆಲ್‌ನಲ್ಲಿ ಊಟ ಮಾಡೋದಂದ್ರೆ ತುಂಬಾನೇ ಇಷ್ಟವಾಗುತ್ತದೆ. ಬೆಂಗಳೂರಿನಲ್ಲಿರುವ ಮಿಲಿಟರಿ ಹೋಟೆಲ್‌ಗೆ ದೊಡ್ಡ ಚರಿತ್ರೆಯೇ ಇದೆ. ಮರಾಠ ಯೋಧರಿಗೆ ಮಾಂಸಾಹಾರವನ್ನು ತಯಾರಿಸಿ ಬಡಿಸುತ್ತಿದ್ದ ಗೋವಿಂದ ರಾವ್ ಎನ್ನುವವರು ಈ ಮಿಲಿಟರಿ ಹೋಟೆಲ್‌ನ್ನು ಪ್ರಾರಂಭಿಸಿದರು. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪಕ್ಕಾ ನಾಟಿ ಸ್ಟೈಲ್‌ ಊಟವನ್ನು ಸವಿಯಬೇಕೆಂದರೆ ನೀವು ಮಿಲಿಟರಿ ಹೋಟೆಲ್‌ಗಳಿಗೆ ಭೇಟಿ ನೀಡಬೇಕು. ಕೆಲವರು ಮನೆಯಲ್ಲಿ ಮಾಡುವುದಕ್ಕಿಂತ ಹೊರಗೆ ತಿನ್ನಲು ಇಷ್ಟಪಡುತ್ತಾರೆ. ನೀವು ಬೆಂಗಳೂರಿನವರಾದರೆ ನಿಮಗೆ ಒಳ್ಳೆ ಮಾಂಸ ಪ್ರಿಯರಾಗಿದ್ದಾರೆ ಈ ಮಿಲಿಟರಿ ಹೋಟೆಲ್‌ʼಗಳಿಗೆ ಭೇಟಿ ನೀಡಬೇಕು. ಇಲ್ಲಿದೆ ನೋಡಿ ಲೀಸ್ಟ್‌..!? ಗೌಡ್ರು ಹೋಟೆಲ್ ಒಳ್ಳೆ ಮಾಂಸ ಪ್ರಿಯರಾಗಿದ್ದಾರೆ ಈ ಮಿಲಿಟರಿ ಹೋಟೆಲ್‌ʼಗಳಿಗೆ ಭೇಟಿ ನೀಡಬೇಕು. ಮಟನ್ ಕರಿ ಮತ್ತು ರಾಗಿ ಮುದ್ದೆ ಇಲ್ಲಿ ಬಹಳ ಫೇಮಸ್​. ನಂತರ ಭೇಜಾ ಫ್ರೈ…

Read More

ನಟ ಯಶ್ (Yash) ಅವರ ಹುಟ್ಟುಹಬ್ಬದಂದು (ಜ.8) ಕಟೌಟ್ ನಿಲ್ಲಿಸಲು ಹೋಗಿ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ನಿಧನರಾಗಿದ್ದಾರೆ. ತಡರಾತ್ರಿ ಸಂಭವಿಸಿದ ದುರ್ಘಟನೆ ವೇಳೆ ಯಶ್ ಎಲ್ಲಿದ್ದರು, ಏನ್ಮಾಡ್ತಿದ್ದರು? ಎಂಬುದರ ಮಾಹಿತಿ ಇಲ್ಲಿದೆ. ಕೆಲಸದ ನಿಮಿತ್ತ ವಿದೇಶಕ್ಕೆ ತೆರಳಿ ಬಳಿಕ ಗೋವಾದಲ್ಲಿದ್ರು ಯಶ್. ದುರ್ಘಟನೆ ಸುದ್ದಿ ತಿಳಿದ ಕೂಡಲೇ ಯಶ್ ಹುಟ್ಟುಹಬ್ಬದ ಖುಷಿಗೆ ಬ್ರೇಕ್ ಹಾಕಿ ಗೋವಾದಿಂದ ಹುಬ್ಬಳ್ಳಿಗೆ ವಿಮಾನ ಮೂಲಕ ಹುಬ್ಬಳ್ಳಿ ಬಂದು ಅಲ್ಲಿಂದ ರಸ್ತೆ ಮಾರ್ಗವಾಗಿ ಗದಗದ ಸೊರಣಗಿ ಗ್ರಾಮಕ್ಕೆ ತೆರಳಿ ಮೃತರಾಗಿರೋ ಮೂವರು ಅಭಿಮಾನಿಗಳ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ತಿಳಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾಗಾಗಿ ಮಲೇಷಿಯಾ, ಶ್ರೀಲಂಕಾ ಸೇರಿದಂತೆ ಕೆಲವೊಂದು ಸ್ಥಳಗಳನ್ನ ಯಶ್ ಫೈನಲ್ ಮಾಡಲು ಹೋಗಿದ್ದರು. 2025ರ ಏಪ್ರಿಲ್‌ನಲ್ಲಿ ‘ಟಾಕ್ಸಿಕ್’ ಸಿನಿಮಾ ಬರೋದಾಗಿ ಯಶ್ ಅನೌನ್ಸ್ ಮಾಡಿರೋದ್ರಿಂದ ಅದಕ್ಕಾಗಿ ಸಕಲ ತಯಾರಿ ಕೂಡ ಮಾಡ್ತಿದ್ದಾರೆ. ಇದರ ನಡುವೆ ದುರಂತ ಸುದ್ದಿ ಕೇಳಿದ ಕೂಡಲೇ ಮೃತಪಟ್ಟಿರೋ ಮೂವರ ಅಭಿಮಾನಿಗಳ ಕುಟುಂಬಕ್ಕೆ ಭೇಟಿ ನೀಡಿ, ಅವರ ಆಕ್ರಂದನಕ್ಕೆ ಯಶ್‌…

Read More

ರಾಕಿಂಗ್ ಸ್ಟಾರ್ ಯಶ್ (Yash) ಅವರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರೋ ಮೂವರು ಅಭಿಮಾನಿಗಳ ಕುಟುಂಬಕ್ಕೆ ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಇದೇ ವೇಳೆ, ಇನ್ಮುಂದೆ ನನ್ನ ಬ್ಯಾನರ್ ಎಲ್ಲೂ ಕಟ್ಟಬೇಡಿ, ಎಲ್ಲಿಯೂ ಕಟೌಟ್ ಹಾಕಬೇಡಿ ಎಂದು ಫ್ಯಾನ್ಸ್‌ಗೆ ಯಶ್ ಮನವಿ ಮಾಡಿದ್ದಾರೆ. ಗದಗದ ಸೊರಣಗಿ ಗ್ರಾಮದಲ್ಲಿ ಮೃತರಾಗಿರೋ ಮುರಳಿ, ನವೀನ್, ಹನುಮಂತ ಮೂವರ ಕುಟುಂಬಕ್ಕೂ ಯಶ್ ತೆರಳಿ ಭೇಟಿ ನೀಡಿ ಸಾಂತ್ವನ ಹೇಳಿದ್ದಲ್ಲದೇ ಅವರ ಜೊತೆ ಇರೋದಾಗಿ ಯಶ್ ಭರವಸೆ ನೀಡಿದ್ದಾರೆ. ಅವರ ಕುಟುಂಬಕ್ಕೆ ಏನು ಸಹಾಯ ಬೇಕೋ ಅದನ್ನು ಮಾಡುತ್ತೇನೆ ಎಂದು ಯಶ್ ಮಾತನಾಡಿದ್ದಾರೆ. ನಿಮ್ಮೊಂದಿಗೆ ನಾನು ಇದ್ದೇನೆ. ಯಾವುದೇ ಕಾರಣಕ್ಕೂ ಆತಂಕ ಬೇಡ ಎಂದಿದ್ದಾರೆ. ಈ ದುರ್ಘಟನೆ ಆಗಬಾರದಿದ್ದು, ನನಗೂ ತುಂಬಾ ದುಃಖ ಆಗಿದೆ ಎಂದು ಯಶ್ ಹೇಳಿದ್ದಾರೆ. ಇನ್ಮುಂದೆ ನನ್ನ ಬ್ಯಾನರ್ ಕಟ್ಟ ಬೇಡಿ, ಎಲ್ಲಿಯೂ ಕಟೌಟ್‌ಗಳನ್ನು ಹಾಕಬೇಡಿ ಎಂದು ಯಶ್ ಕೋರಿಕೆಯೊಂದನ್ನ ಮುಂದಿಟ್ಟಿದ್ದಾರೆ.

Read More

ಸಂಕ್ರಾತಿಗೆ ಸಾಲು ಸಾಲು ರಜೆ ಹಿನ್ನೆಲೆ ಖಾಸಗಿ ಬಸ್ ಮಾಲೀಕರಿಂದ ಮತ್ತೆ ಸುಲಿಗೆ ಶುರುವಾಗಿದ್ದು  ರಜೆ ಹಿನ್ನೆಲೆ ತಮ್ಮೂರಿಗೆ ತೆರಳಲು ಬಸ್ ಬುಕ್ ಮಾಡಲು ಮುಂದಾದವರಿಗೆ ಬಿಗ್  ಶಾಕ್‌ ಉಂಟಾಗಿದೆ. ವಾರದ ಮುಂಚೆಯೇ ಎರಡ್ಮೂರು ಪಟ್ಟು ದರ ಏರಿಸಿದ ಖಾಸಗಿ ಬಸ್ ಮಾಲೀಕರು ಅಲ್ಲದೆ ಗಣರಾಜ್ಯೋತ್ಸವದ ಹಿಂದಿನ ದಿನವೂ ಬಸ್ ಟಿಕೆಟ್ ದರ ಏರಿಕೆ 15 ದಿನ ಮುಂಚಿವಾಗಿಯೇ 25 ತಾರೀಕಿನ ಟಿಕೆಟ್ ದರ ದುಪ್ಪಟ್ಟುಮಾಡಿದ್ದಲ್ಲದೇ ವಿಮಾನಯಾನಕ್ಕಿಂತಲೂ ದುಬಾರಿಯಾದ ಖಾಸಗಿ ಎಸಿ ಬಸ್ ಗಳಲ್ಲಿನ ಪ್ರಯಾಣ ಪ್ರತಿ ಬಾರಿ ಹಬ್ಬ ಹಾಗೂ ಸಾಲು ಸಾಲು ರಜೆ ಬಂದರೆ ಹಗಲು ದರೋಡೆ ಶುರು ಈ ವರ್ಷದ ಮೊದಲ ಹಬ್ಬ ಸಂಕ್ರಾತಿಗೆ ಸುಲಿಗೆಗೆ ಇಳಿದ ಖಾಸಗಿ ಬಸ್ ಗಳು ಈ ವರ್ಷದ 15ರ ದಿನಾಂಕದಂದು ಬಂದಿರುವ ಸಂಕ್ರಾತಿ ಹಬ್ಬ ದಿನಾಂಕ 13 ಎರಡನೇ ಶನಿವಾರ, 14 ಭಾನುವಾರ‌ ಹೀಗಾಗಿ ಸಾಲು ಸಾಲು ರಜೆ ಸಾಲು ಸಾಲು ರಜೆ ಹಿನ್ನೆಲೆ ಊರಿಗೆ ತೆರಳಲು ಈಗಾಗಲೇ ಟಿಕೆಟ್…

Read More

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಬೆಟ್ಟಿಂಗ್‌ ಹಾವಳಿ ಜೋರಾಗಿದ್ದು  ದಾಖಲೆಯಿಲ್ಲದ ಹಣ ಸೀಜ್ ಮಾಡಿದ ಸಿಸಿಬಿ ಅಧಿಕಾರಿಗಳು ಬರೋಬ್ಬರಿ 85 ಲಕ್ಷ ರೂ. ಕಂತೆ ಕಂತೆ ದುಡ್ಡಿನ ಕಂತು ಪತ್ತೆಯಾಗಿದೆ. ಜೆಜೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಿರ್ಸಿ ಪಾರ್ಕ್ ಅಪಾರ್ಟ್ ಮೆಂಟ್ ನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್ ಬಾಹರ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು  ಜೂಜಾಟದ ಸ್ಥಳದಲ್ಲಿದ್ದ ದಾಖಲೆಯಿಲ್ಲದ ಎರಡು ಹಣದ ಬ್ಯಾಗ್ ಗಳು ಪತ್ತೆಯಾಗಿದೆ. ದಾಖಲೆಯಿಲ್ಲದ 85 ಲಕ್ಷ ಹಣ ಸೀಜ್ ಮಾಡಿದ ಸಿಸಿಬಿ ಅಧಿಕಾರಿಗಳು ಅಲ್ಲದೆ ಜೂಜಾಟದ ಟೇಬಲ್ ಮೇಲಿದ್ದ 1.50 ಲಕ್ಷ ಹಣವನ್ನು ಕೂ ಸೀಜ್‌ ಮಾಡಿದ್ದಾರೆ. ಜೆಜೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಿರ್ಸಿ ಪಾರ್ಕ್ ಅಪಾರ್ಟ್ ಮೆಂಟ್ ನಲ್ಲಿ ಅಕ್ರಮವಾಗಿ ನಡೀತಿದ್ದ ಜೂಜಾಟ ಪ್ರಕರಣ ಸಂಬಂಧ ಆರು ಮಂದಿ ಆರೋಪಿಗಳು ಅರೆಸ್ಟ್ ಮಾಡಿದ್ದು  ಹಣದ ಬ್ಯಾಗ್ ಗಳಿದ್ದ ಮನೆ ಮಾಲೀಕ ಎಸ್ಕೇಪ್ ಆಗಿದ್ದು ಒಟ್ಟಾರೆಯಾಗಿ 86,87,800 ಹಣ ಸೀಜ್ ಮಾಡಿದ ಸಿಸಿಬಿ ಟೀಂ.

Read More

ಮಾಲ್ಡೀವ್ಸ್: ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿ ಕುರಿತು ಮಾಲ್ಡೀವ್ಸ್​ ಸರ್ಕಾರದ ಮೂವರು ಸಚಿವರು ಲೇವಡಿ ಮಾಡಿದ್ದರು. ಲಕ್ಷದ್ವೀಪವನ್ನು ಮಾಲ್ಡೀವ್ಸ್​ನಂತೆ ಮಾಡುತ್ತೀರಿ ಎಂಬುದು ನಿಮ್ಮ ಭ್ರಮೆ, ನಿಮ್ಮಲ್ಲಿ ಮಾಲ್ಡೀವ್ಸ್​ನಲ್ಲಿರುವ ಮೂಲಸೌಕರ್ಯಗಳಿಲ್ಲ ಎಂದೆಲ್ಲಾ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾಲ್ಡೀವ್ಸ್​ ಸರ್ಕಾರ ಈ ಸಚಿವರ ಹೇಳಿಕೆಗೂ ಸರ್ಕಾರಕ್ಕೂ ಏನು ಸಂಬಂಧವಿಲ್ಲ ಎಂದು ಹೇಳಿ, ಮರ್ಯಾಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜೀದ್ ಅವರನ್ನು ನಂತರ ಅಮಾನತುಗೊಳಿಸಿದೆ. ಇದೀಗ ಇದೇ ವಿಚಾರ ಕುರಿತು ಮಾಲ್ಡೀವ್ಸ್​ ಸಂಸದೆ ಈವಾ ಅಬ್ದುಲ್ಲಾ ಮಾತನಾಡಿದ್ದಾರೆ, ಭಾರತೀಯರ ಕೋಪ ನ್ಯಾಯಯುತವಾಗಿದೆ, ಯಾರೂ ಕೂಡ ಇಂಥಾ ಹೇಳಿಕೆಯನ್ನು ಸಹಿಸುವುದಿಲ್ಲ, ಈ ಹೇಳಿಕೆಗಾಗಿ ನಾನು ಭಾರತೀಯರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ. ಸಚಿವರ ಹೇಳಿಕೆ ಹೊರಬಿದ್ದ ತಕ್ಷಣವೇ ಭಾರತದಲ್ಲಿ #BoycottMaldives ಅಭಿಯಾನ ಶುರುವಾಗಿತ್ತು, ಸಾಕಷ್ಟು ಸೆಲೆಬ್ರಿಟಿಗಳು, ಕ್ರಿಕೆಟಿಗರು ಸೇರಿ ಸಾರ್ವಜನಿಕರು ಕೂಡ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದಾರೆ. ಎಷ್ಟೋ ಮಂದಿ ಮಾಲ್ಡೀವ್ಸ್​ಗೆ ಬುಕ್​ ಮಾಡಿದ್ದ ವಿಮಾನ ಟಿಕೆಟ್​ ಅನ್ನು ರದ್ದುಪಡಿಸಿದ್ದಾರೆ. https://twitter.com/ANI/status/1744007223142154334?ref_src=twsrc%5Etfw%7Ctwcamp%5Etweetembed%7Ctwterm%5E1744007223142154334%7Ctwgr%5Efba5cac85a178d8196c2dbfe483f3150cf65d0ba%7Ctwcon%5Es1_&ref_url=https%3A%2F%2Ftv9kannada.com%2Fworld%2Fmaldives-mp-iva-apologises-over-ministers-remarks-against-pm-modi-and-says-indians-rightfully-angry-nyr-756709.html ಅಷ್ಟೇ…

Read More

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ ಅನ್ನಭಾಗ್ಯದ ಅಕ್ಕಿ ಮಂತ್ರಾಕ್ಷತೆ ವಿಚಾರ ರಾಜಕೀಯವಾಗಿ ಭಾರೀ ಆಕ್ರೊಶಕ್ಕೆ ಕಾರಣವಾಗ್ತಿದೆ. ಡಿಕೆಶಿ ಹೇಳಿಕೆಗೆ ಕೆರಳಿ ಕೆಂಡವಾಗಿರುವ ಕೇಸರಿ ನಾಯಕರು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಸಹ ಡಿಕೆ ವಿರುದ್ದ ತಿರುಗಿಬಿದ್ದಿದ್ದು ಡಿಸಿಎಂ ರಾಮಭಕ್ತಿಯನ್ನೇ ಪ್ರಶ್ನಿಸಿದ್ದಾರೆ. ಈ ಮಧ್ಯೆ ಸರ್ಕಾರ ರಾಜ್ಯಾದ್ಯಂತ 22 ರಂದು ಎಲ್ಲಾ ದೇವಸ್ಥಾನಗಳಲ್ಲಿ ಪೂಜಾಕೈಂಕರ್ಯಕ್ಕೆ ಆದೇಶ ಹೊರಡಿಸಿರೋದು ಕೆಲ ಕೈ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ… ರಾಮಮಂದಿರದ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ ಬಿಜೆಪಿ ನಾಯಕರು ರಾಜ್ಯಾದ್ಯಂತ ಅಯೋಧ್ಯೆಯಿಂದ ಬಂದಿರುವ ಫಲಮಂತ್ರಾಕ್ಷತೆಯನ್ನು ಮನೆ ಮನೆಗೆ ತೆರಳಿ ಹಂಚುತ್ತಿದ್ದಾರೆ. ಇದೇ ವಿಚಾರಕ್ಕೆ ನೆನ್ನೆ ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ನಾಯಕರು ಫಲಮಂತ್ರಾಕ್ಷತೆಗೆ ಬಳಸಿರೋದು ನಾವು ಕೊಟ್ಟ ಅನ್ನಭಾಗ್ಯ ಅಕ್ಕಿಯನ್ನೇ ಅನ್ನೊ ಹೇಳಿಕೆ ಇದೀಗ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗಿದೆ. ಬಿಜೆಪಿ- ಜೆಡಿಎಸ್ ನಾಯಕರು ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದಿದ್ದು ಡಿಕೆಶಿ ಹೇಳಿಕೆಗೆ ಟಾಂಗ್ ಕೊಡ್ತಿದ್ದಾರೆ. ಡಿಕೆಶಿ ಹೇಳಿಕೆಯನ್ನ ಖಂಡಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್…

Read More

ಬೆಂಗಳೂರು:- ತಂದೆ-ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸಿದವರ ವಿರುದ್ದ ಕ್ರಿಮಿನಲ್ ಕೇಸ್ ಹಾಕೋದಕ್ಕೆ ಪೊಲೀಸ್ ಅಧಿಕಾರಿಗಳು ರೆಡಿಯಾಗಿದ್ದಾರೆ. ಈಗಾಗಲೇ ಈ ಸಂಬಂಧ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸುವವರ ವಿರುದ್ಧ ಮುಲಾಜಿಲ್ಲದೇ ಕ್ರಿಮಿನಲ್ ಪ್ರಕರಣ ದಾಖಲು ಮಾಡುವಂತೆ ಹೇಳಿದ್ದಾರೆ. ಅಲ್ಲದೇ ತಂದೆ-ತಾಯಿಯನ್ನು ಸರಿಯಾಗಿ ನೋಡಿಕೊಳ್ಳದ ಮಕ್ಕಳ ಮೇಲೆ ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಪ್ರಕರಣ ದಾಖಲಿಸುವಂತೆ ಪೊಲೀಸ್ ಕಮೀಷನರ್ ಬಿ. ದಯಾನಂದ್ ಸೂಚಿಸಿದ್ದಾರೆ. ಅದಲ್ಲದೆ ವಯಸ್ಸಾದ ತಂದೆ-ತಾಯಿ ನೋಡಿಕೊಳ್ಳುವುದು ಮಕ್ಕಳ ಜವಬ್ದಾರಿ ಎಂದು ಹೈಕೋರ್ಟ್ ಹೇಳಿದೆ. ಜೀವನದ ಸಂಧ್ಯಾಕಾಲದಲ್ಲಿರುವ ಪೋಷಕರನ್ನು ಆರೈಕೆ ಮಾಡುವ ಜವಾಬ್ದಾರಿಯನ್ನು ಕಾನೂನು, ಧರ್ಮ ಮತ್ತು ನೈತಿಕತೆಯು ಮಕ್ಕಳ ಮೇಲೆ ಹೇರುತ್ತದೆ. ಪೋಷಕರ ಆಸ್ತಿಯನ್ನು ಮಕ್ಕಳು ಉಡುಗೊರೆಯಾಗಿ ಪಡೆದಾಗ ಈ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. https://ainlivenews.com/use-this-home-remedy-for-swollen-feet-in-winter/ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿದೆ. ತಂದೆಯಿಂದ ಆಸ್ತಿಯನ್ನು ಗಿಫ್ಟ್‌…

Read More