ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹೌದು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಪ್ರಾಜೆಕ್ಟ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆನ್ಲೈನ್ ಮೂಲಕ ಅಪ್ಲೈ ಮಾಡಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಶೈಕ್ಷಣಿಕ ಅರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೋಷಿಯಲ್ ವರ್ಕ್/…
Author: AIN Author
ಫುಟ್ಬಾಲ್ ದಿಗ್ಗಜ ಆಟಗಾರ ಜರ್ಮನಿಯ ಫ್ರಾಂಜ್ ಬೆಕೆನ್ಬಾರ್ (78) ಅವರು ನಿಧನರಾಗಿದ್ದಾರೆ. ಫ್ರಾಂಜ್ ಕುಟುಂಬದ ಮೂಲಗಳು ಅವರ ನಿಧನದ ಸುದ್ದಿಯನ್ನು ಖಚಿತಪಡಿಸಿವೆ ಎಂದು ವರದಿಯಾಗಿದೆ. ಈ ದಿಗ್ಗಜ ಕೇವಲ ಆಟಗಾರನಾಗಿ, ಅಲ್ಲದೇ ಕೋಚ್ ಆಗಿ ಜರ್ಮನಿ ದೇಶಕ್ಕೆ ಎರಡು ಫಿಫಾ ವಿಶ್ವಕಪ್ ಗೆದ್ದು ಕೊಟ್ಟಿದ್ದಾರೆ. ಫ್ರಾಂಜ್ ಬೆಕೆನ್ಬಾರ್ ಆಟಗಾರರಾಗಿ 1974ರಲ್ಲಿ ಜರ್ಮನಿಯು ಫಿಫಾ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನು, 1990ರಲ್ಲಿ ಇವರ ಮಾರ್ಗದರ್ಶನ(ಕೋಚ್)ದಲ್ಲಿ ಜರ್ಮನಿ ಮತ್ತೊಮ್ಮೆ ಫಿಫಾ ವಿಶ್ವಕಪ್ ಗೆದ್ದು ಬೀಗಿತ್ತು.
ಅಸ್ಸಾಂ: ಮುಸ್ಲಿಮ್ ಹುಡುಗಿಯರು, ಯುವತಿಯರಿಕೆ ಖಡಕ್ ಸಂದೇಶ ರವಾನಿಸುವ ಮೂಲಕ AIUDF ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಮತ್ತೆ ಸುದ್ದಿಯಾಗಿದ್ದಾರೆ. ಅಸ್ಸಾಂನ ಬಾರ್ಪೇಟ್ನಲ್ಲಿ ಅಜ್ಮಲ್ ಸೂಪರ್ 40 ಫೌಂಡೇಶನ್ ಮುಸ್ಲಿಮ್ ಸಮುದಾಯಕ್ಕೆ ಕಾರ್ಯಕ್ರಮ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಬದ್ರುದ್ದೀನ್ ಅಜ್ಮಲ್ ಗರಂ ಆಗಿದ್ದಾರೆ. ಮುಸ್ಲಿಮ್ ಹುಡುಗಿಯರು ಲಿಪ್ಸ್ಟಿಕ್, ಮೇಕ್ಅಪ್ ಮಾಡಿಕೊಂಡು ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಇಲ್ಲಿ ಯಾವುದೇ ಹೀರೋ ಬರುತ್ತಿಲ್ಲ. ಇದು ಶೈಕ್ಷಣಿಕೆ ಕಾರ್ಯಕ್ರಮ ಎಂದು ಎಚ್ಚರಿಸಿದ್ದಾರೆ. https://ainlivenews.com/use-this-home-remedy-for-swollen-feet-in-winter/ ಧುರ್ಬಿ ಕ್ಷೇತ್ರದ ಸಂಸದರಾಗಿರುವ ಬದ್ರುದ್ದೀನ್ ಅಜ್ಮಲ್, ಮುಸ್ಲಿಂ ಹುಡುಗಿಯರು ಇತರ ವಿಷಗಳತ್ತ ಆಕರ್ಷಿತರಾಗುತ್ತಿದ್ದಾರೆ. ಇದು ತಪ್ಪು, ಲಿಪ್ಸ್ಟಿಕ್, ಮೇಕ್ಅಪ್ನಲ್ಲಿ ಕಾಲಕಳೆಯುವುದಲ್ಲ. ಇಲ್ಲಿಗೆ ಯಾರೆಲ್ಲಾ ಲಿಪ್ ಸ್ಟಿಕ್, ಮೇಕ್ಅಪ್ ಮಾಡಿಕೊಂಡು ಬಂದಿದ್ದಾರೋ ಅವರಿಗೆಲ್ಲಾ ಮದುವೆ ಪ್ರಸ್ತಾಪ ಕಳುಹಿಸುತ್ತೇನೆ. ಪೋಷಕರೇ ನೀವು ಈ ಕುರಿತು ಎಚ್ಚರವಹಿಸಬೇಕು ಎಂದು ಅಜ್ಮಲ್ ಹೇಳಿದ್ದಾರೆ. ಇದೇ ವೇಳೆ ಹಿಜಾಬ್ ಧರಿಸಿದ ಆಗಮಿಸಿದ ಹಲವು ಮುಸ್ಲಿಮ್ ಯುವತಿಯರಿಗೆ ಹಾಗೂ ಅವರ ಪೋಷಕರಿಗೆ ಬದ್ರುದ್ದೀನ್ ಅಜ್ಮಲ್ ನೋಟಿಸ್ ನೀಡಿದ್ದಾರೆ.
ಬೆಂಗಳೂರು: ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಪೊಲೀಸರ ವಶಕ್ಕೆ ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಮತ್ತೆ ವಶಕ್ಕೆ ಪೊಲೀಸರು ಪಡೆದಿದ್ದಾರೆ. ಸಾರ್ವಜನಿಕ ಅಸ್ತಿಪಾಸ್ತಿ ಹಾನಿ ಮಾಡಿದ್ದಕ್ಕೆ ನಾರಾಯಣಗೌಡ ವಶಕ್ಕೆ ಕುಮಾರಸ್ವಾಮಿಲೇಔಟ್ ಪೊಲೀಸರಿಂದ ನಾರಾಯಣಗೌಡ ಬಂಧನ ಪರಪ್ಪನ ಅಗ್ರಹಾರ ಜೈಲಿನ ಎದುರಲ್ಲೇ ಮತ್ತೆ ಪೊಲೀಸರು ಬಂಧಿಸಿದ್ದಾರೆ. ಶನಿವಾರ ಜಾಮೀನು (Bail) ಸಿಕ್ಕಿದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ (Parappana Agrahara) ನಾರಾಯಣ ಗೌಡ ಬಿಡುಗಡೆಯಾಗಿದ್ದರು. ಬಿಡುಗಡೆ ಆಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರು ನಾರಾಯಣ ಗೌಡರನ್ನು ಜೈಲಿನ ಮೊದಲ ಗೇಟ್ನಲ್ಲೇ ವಶಕ್ಕೆ ಪಡೆದಿದ್ದಾರೆ. 2017ರ ಪ್ರಕರಣ ಸಂಬಂಧ ಬಂಧಿಸಿ ಠಾಣೆಗೆ ಕರೆದೊಯ್ದ ಪೊಲೀಸರು ಕನ್ನಡ ನಾಮಫಲಕ ಹೋರಾಟ ಕೇಸಲ್ಲಿ ಜೈಲು ಸೇರಿದ್ದ ನಾರಾಯಣಗೌಡ ಜೈಲಿನಿಂದ ರಿಲೀಸ್ ಬೆನ್ನಲ್ಲೇ ಮತ್ತೆ ವಶಕ್ಕೆ ಪಡೆದ ಪೊಲೀಸರು ನಾರಾಯಣಗೌಡ ವಶಕ್ಕೆ ಪಡೆದ ಕುಮಾರಸ್ವಾಮಿ ಲೇಔಟ್ ಪೊಲೀಸರು ಅಧಿಕಾರಿಗಳಿಗೆ ಅಡ್ಡಿ ಪ್ರಕರಣದಲ್ಲಿ ಮತ್ತೆ ನಾರಾಯಣಗೌಡ ಬಂಧನ
ಲಕ್ನೋ: ರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (NCP) ಶರದ್ ಪವಾರ್ ಬಣದ ನಾಯಕ ಜಿತೇಂದ್ರ ಅವ್ಹಾದ್ (Jitendra Awhad) ವಿರುದ್ಧ ಅಯೋಧ್ಯೆಯ (Ayodhya) ಅರ್ಚಕ ಪರಮಹಂಸ ಆಚಾರ್ಯ (Paramhansa Acharya) ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ಇನ್ನೊಂದು ಧರ್ಮದ ಬಗ್ಗೆ ಇಂತಹ ಹೇಳಿಕೆ ನೀಡಿದ್ದರೆ ಬಹುಶಃ ಅವರು ಇಲ್ಲಿಯವರೆಗೆ ಬದುಕಿರುತ್ತಿರಲಿಲ್ಲ. ರಾಮನನ್ನು ಅವಮಾನಿಸುವುದನ್ನು ಸಹಿಸುವುದಿಲ್ಲ. ಶ್ರೀರಾಮನ ಟೀಕೆಗೆ ಕಿವಿಗೊಡದ ಭಾರತ ಇದು ಎಂದು ನಮ್ಮ ಧರ್ಮಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. ಎನ್ಸಿಪಿ ನಾಯಕನ ವಿರುದ್ಧ ಮಹಾರಾಷ್ಟ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಜಿತೇಂದ್ರ ಅವ್ಹಾದ್ ರನ್ನು ನಾನೇ ಹತ್ಯೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. https://ainlivenews.com/use-this-home-remedy-for-swollen-feet-in-winter/ ಜಿತೇಂದ್ರ ಅವ್ಹಾದ್ ಅವರು ನೀಡಿದ ಹೇಳಿಕೆಯು ಅವಹೇಳನಕಾರಿಯಾಗಿದೆ. ಇದು ರಾಮ ಭಕ್ತರ ಭಾವನೆಗೆ ನೋವುಂಟುಮಾಡುತ್ತದೆ. ರಾಮನ ಬಗ್ಗೆ ಕೆಟ್ಟದಾಗಿ ಮಾತನಾಡುವ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾನು ಮಹಾರಾಷ್ಟ್ರ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಆಚಾರ್ಯರು ತಿಳಿಸಿದ್ದಾರೆ.
ಕಲಘಟಗಿ:- ವಕೀಲನಿಂದ ಕಕ್ಷಿದಾರ ಹಾಗೂ ತಾಯಿ ಮೇಲೆ ನಡೆದ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರಿಂದ ತನಿಖೆ ಮುಂದುವರಿದಿದೆ. ನ್ಯಾಯಾಲಯದಲ್ಲಿನ ಉಚಿತ ತಾಲೂಕ ಕಾನೂನು ಸಮೀತಿ ಹಾಗೂ ವಕೀಲರ ಸಂಘದ ಕಚೇರಿಯಲ್ಲಿ ಆರೋಪಿತನಾದ ಕಲ್ಲಪ್ಪ ಗುಡಿಹಾಳ, ವಕೀಲರು ಜೆ.ಎಮ್.ಎಫ್.ಸಿ ನ್ಯಾಯಾಲಯ ಕಲಘಟಗಿ ಇವರು ಕಕ್ಷಿದಾರರಿಗೆ ಗೌರವಾನ್ವಿತ ನ್ಯಾಯಾಧೀಶರು ನಿಮ್ಮ ವಕೀಲರಿಗೆ ಕರೆದುಕೊಂಡು ಬರುವಂತೆ ಹೇಳಿರುತ್ತಾರೆ ಅಂತಾ ಕರೆಯಲು ಹೋದಾಗ ಕೆಟ್ಟ ಬೈಗುಳ ದಿಂದ ಬೈದಾಡಿ ನೆಲಕ್ಕೆ ಕೆಡವಿ ಹೊಡೆ ಬಡೆ ಮಾಡಿದ್ದಲ್ಲದೇ ನಿನಗೆ ಹೊಡೆದ ವಿಷಯವನ್ನು ನ್ಯಾಯಾಧೀಶರ ಮುಂದೆ ಹೇಳುತ್ತಿಯಾ ಮಗನೇ ಅಂತಾ ಅಂದು ಕಕ್ಷಿದಾರನ ಅಂಗಿಯ ಕೊರಳ ಪಟ್ಟಿ ಹಿಡಿದು ಎಳೆದುಕೊಂಡು ವಕೀಲರ ಸಂಘದ ಕಚೇರಿ ಒಳಗೆ ಕರೆದುಕೊಂಡು ಹೋಗಿ ಕಕ್ಷಿದಾರನಿಗೆ ಜಾತಿ ಎತ್ತಿ ಕೆಟ್ಟ ಬೈಗುಳ ದಿಂದ ಬೈಯಾಡಿ, ಒದ್ದು ನೆಲಕ್ಕೆ ಕೆಳಗೆ ಕೆಡವಿ ಬಿಡಿಸಲು ಹೋದ ಕಕ್ಷೀದಾರನ ತಾಯಿಗೆ ಸಾರ್ವಜನೀಕವಾಗಿ ತಲೆ ಕೂದಲು ಹಿಡಿದು ಒದ್ದು ಜಗ್ಗಿ ನೆಲಕ್ಕೆ ಕೆಡವಿ ಹೊಡಿ ಬಡಿ ಮಾಡಿ ಜೀವಧ ಬೆದರಿಕೆ…
ಬೆಂಗಳೂರು: ಮೂರು ಡಿಸಿಎಂ ವಿಚಾರವಾಗಿ ಯಾವುದೇ ಸಭೆಯನ್ನು ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೂರು ಡಿಸಿಎಂ ವಿಚಾರವಾಗಿ ಯಾವುದೇ ಸಭೆಯನ್ನು ಮಾಡಿಲ್ಲ ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಿದಾಗ ಅಭಿಪ್ರಾಯ ಹೇಳಿದ್ದಾರೆ. ಮೂರು ಡಿಸಿಎಂ ಮಾಡಿದ್ರೆ ಒಳ್ಳೆಯದು ಎಂದು ಕೆಲವರ ಅಭಿಪ್ರಾಯ ತಿಳಿಸಿದ್ದಾರೆ ಎಂದು ಹೇಳಿದರು. https://ainlivenews.com/actor-yashs-escort-vehicle-collided-with-a-fans-bike-death-of-a-fan/ ಮೂರು ಡಿಸಿಎಂ ಮಾಡೋದು ಬಿಡೋದು ಹೈಕಮಾಂಡಿಗೆ ಬಿಟ್ಟಿದ್ದು ಎಲ್ಲಾ ಸಚಿವರು ದೆಹಲಿಗೆ ಬರುವಂತೆ ವರಿಷ್ಠರು ಸೂಚನೆ ನೀಡಿದ್ದಾರೆ ಸಚಿವರಿಗೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಉಸ್ತುವಾರಿ ನೀಡಿದ್ದಾರೆ. ಕ್ಷೇತ್ರದ ಸ್ಥಿತಿಗತಿ ಮತ್ತು ಅಕಾಂಕ್ಷಿಗಳ ಬಗ್ಗೆ ಮಾಹಿತಿ ನೀಡುತ್ತೇವೆ ಹಾಗೆ ಆದಷ್ಟು ಬೇಗ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತೇವೆ ಅಭ್ಯರ್ಥಿಗಳಿಂದ ಕೆಲಸ ಮಾಡಿಸಬಹುದು, ಕ್ಷೇತ್ರದಲ್ಲಿ ಸುತ್ತಾಡಿಸಬಹುದು ಎಂದು ನಗರದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಹುಬ್ಬಳ್ಳಿ: ಕೊನೆಯ ದಿನ ಪಂಜಾಬ್ ತಂಡಕ್ಕೆ ಇನಿಂಗ್ಸ್ ಸೋಲು ತಪ್ಪಿಸಿಕೊಂಡಿದ್ದೊಂದೇ ಸಮಾಧಾನ ವಾಯಿತು. ಕರ್ನಾಟಕ ತಂಡ ರಣಜಿ ಟ್ರೋಫಿ ಪ್ರಸಕ್ತ ಋತುವಿನ ಮೊದಲ ಪಂದ್ಯವನ್ನು ಪಂಜಾಬ್ ವಿರುದ್ಧ ಏಳು ವಿಕೆಟ್ಗಳಿಂದ ಗೆದ್ದುಕೊಂಡು ಶುಭಾರಂಭ ಮಾಡಿತು. ಇಲ್ಲಿನ ರಾಜನಗರದ ಕೆಎಸ್ಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ನಾಲ್ಕನೇ ದಿನವಾದ ಸೋಮವಾರ ಪಂಜಾಬ್ ತಂಡ ಲಂಚ್ ನಂತರ ಎರಡನೇ ಇನಿಂಗ್ಸ್ನಲ್ಲಿ 413 ರನ್ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್ನಲ್ಲಿ 362 ರನ್ಗಳ ಭಾರಿ ಮುನ್ನಡೆ ಪಡೆದಿದ್ದ ಮಯಂಕ್ ಬಳಗ ಗೆಲುವಿಗೆ ಬೇಕಾಗಿದ್ದ 52 ರನ್ಗಳ ಅಲ್ಪ ಗುರಿಯನ್ನು 3 ವಿಕೆಟ್ ಕಳೆದುಕೊಂಡು ಮುಟ್ಟಿತು. ಕರ್ನಾಟಕ ಮುಂದಿನ ಪಂದ್ಯವನ್ನು ಗುಜರಾತ್ ವಿರುದ್ಧ ಅಹಮದಾಬಾದಿನಲ್ಲಿ ಜನವರಿ 12 ರಿಂದ ಆಡಲಿದೆ. ನಾಯಕ ಮಯಂಕ್ ಅಗರ್ವಾಲ್ (0) ಎರಡನೇ ಇನಿಂಗ್ಸ್ನಲ್ಲಿಯೂ ಖಾತೆ ತೆರೆಯಲಿಲ್ಲ. ಉಪನಾಯಕ ನಿಕಿನ್ ಜೋಸ್ ಕೂಡ ಮತ್ತೊಮ್ಮೆ ವಿಫಲರಾಗಿ ಎಡಗೈ ಸ್ಪಿನ್ನರ್ ಪ್ರೇರಿತ್ ದತ್ತಾ ಬೌಲಿಂಗ್ನಲ್ಲಿ ನಿರ್ಗಮಿಸಿದರು. ಈ ಹಂತದಲ್ಲಿ ಆರ್.ಸಮರ್ಥ್ (21) ಮತ್ತು ಎಸ್.ಶರತ್ (ಔಟಾಗದೇ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru), ಮಂಡ್ಯ, ರಾಮನಗರ, ಬಳ್ಳಾರಿ ಸೇರಿದಂತೆ ರಾಜ್ಯದ ಸುಮಾರು 30 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದಾರೆ. ಬೆಂಗಳೂರು ನಗರದಲ್ಲಿ 10 ಕಡೆ, ಬಳ್ಳಾರಿಯಲ್ಲಿ 7 ಕಡೆ ಸೇರಿದಂತೆ ರಾಜ್ಯಾದ್ಯಂತ ಏಕಕಾಲಕ್ಕೆ 30 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳು (BBMP Officials) ಸೇರಿದಂತೆ ಇತರ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ. ಒಟ್ಟು 30 ಕಡೆಗಳಲ್ಲಿ ಲೋಕಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕುಂದನ ಗ್ರಾಮ ಪಂಚಾಯತಿ ಪಿಡಿಓ ಪದ್ಮನಾಭ್ ಮನೆ, ಫಾರ್ಮ್ ಹೌಸ್ ಮೇಲೆ ದಾಳಿಯಾಗಿದೆ. ಮಲ್ಲೇಶ್ವರಂನಲ್ಲಿರುವ ಸಪ್ತಗಿರಿ ಲೇಔಟ್ 4 ಅಂತಸ್ತಿನ ಮನೆ ಮೇಲೆ ರೇಡ್ ಮಾಡಿದ್ದಾರೆ. ಅನುಪನಹಳ್ಳಿಯಲ್ಲಿ ಐದು ಎಕರೆ ಸಾಗುವಳಿ ಭೂಮಿ ಮತ್ತು ಫರ್ಮ್ ಹೌಸ್ಗೆ ಎಂಟ್ರಿ ನೀಡಿ ಶೋಧಕಾರ್ಯ ನಡೆಸ್ತಿದ್ದಾರೆ. ಜೊತೆಗೆ ತುಮಕುರಿನಲ್ಲಿ ಕಮರ್ಷಿಯಲ್ ಕಾಂಪ್ಲೆಕ್ಸ್, ದಾಬಸ್ ಪೇಟೆಯ ಇಂಡಸ್ಟ್ರೀಲ್ ಏರಿಯಾದಲ್ಲಿ ಗೋಡಾನ್ ಇರೋದು ಪತ್ತೆಯಾಗಿದೆ. ಮತ್ತೊಂದು ಕಡೆ ಬೆಸ್ಕಾಂ ಚೀಫ್…
ಗದಗ: ಮೂವರು ಅಭಿಮಾನಿಗಳ ಸಾವಿನ್ನಪ್ಪಿದ ದುರ್ಘಟನೆ ಮಾಸುವ ಮುನ್ನವೇ ರಾಕಿಂಗ್ ಸ್ಟಾರ್ ಯಶ್ ಮತ್ತೋರ್ವ ಅಭಿಮಾನಿ ಇಂದು ಮೃತಪಟ್ಟಿದ್ದಾರೆ. ಮೃತನನ್ನು ನಿಖಿಲ್ ಗೌಡ (22) ಎಂದು ಗುರುತಿಸಲಾಗಿದ್ದು, ಈತ ಗದಗದ ಬಿಂಕದಕಟ್ಟಿ ನಿವಾಸಿ. ಈತ ಲಕ್ಷ್ಮೇಶ್ವರ ಅಗಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿ. ಗದಗ ಜಿಲ್ಲೆ ಸೊರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬದ ಅಂಗವಾಗಿ ತಡರಾತ್ರಿ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಮುರಳಿ, ನವೀನ್, ಹನುಮಂತ ಎಂಬ ಮೂವರು ನಿಧನರಾಗಿದ್ದು, ಉಳಿದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೀಗಾಗಿ ಮೃತ ಅಭಿಮಾನಿಗಳ ಮನೆಗೆ ಭೇಟಿ ಕೊಟ್ಟ ಯಶ್, https://ainlivenews.com/use-this-home-remedy-for-swollen-feet-in-winter/ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಭಿಮಾನಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲು ತೆರಳಿದ್ದರು. ಈ ವೇಳೆ ಯಶ್ ನೋಡಲು ನಿಖಿಲ್ ಗದಗಕ್ಕೆ ಬಂದಿದ್ದ. ಬಳಿಕ ಯಶ್ ಹುಬ್ಬಳ್ಳಿಗೆ ವಾಪಸ್ಸಾಗುವಾಗ ತನ್ನ ಬೈಕಿನಲ್ಲಿ ಯಶ್ ವಾಹನ ಫಾಲೋ ಮಾಡಲು ಮುಂದಾಗಿದ್ದ. ಈ ವೇಳೆ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿತ್ತು.…