Author: AIN Author

ಬೆಂಗಳೂರು:  ನಗರದ ಹಲವು ಕಡೆಯಲ್ಲಿ ಮಳೆಯ ಸಿಂಚನ ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್ ಸುತ್ತಮುತ್ತ ಹನಿ ಮಳೆ ಬೆಂಗಳೂರು ನಗರಾದ್ಯಂತ ಮೋಡ ಮುಸುಕಿದ ವಾತಾವರಣ ಲಾವೆಲ್ಲೆ ರಸ್ತೆ, ಎಂ.ಜಿ.ರಸ್ತೆ, ಮೆಜೆಸ್ಟಿಕ್ ಸುತ್ತ ತಂಪು ಗಾಳಿ ಸಿಲಿಕಾನ್ ಸಿಟಿಯಾದ್ಯಂತ ಮುಂದುವರಿದ ಸಾಧಾರಣ ಮಳೆಯಾಗಿದೆ. ಈ ಮಳೆಯಿಂದಾಗಿ ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್‌ ಜಾಂ ಕೂಡ ಆಗಿದೆ. https://ainlivenews.com/row-after-row-disaster-case-from-our-metro-big-plan-from-bmrcl/ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಕೆಲವೆಡೆ ಹಗುರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Read More

ನವದೆಹಲಿ: ಅಯೋಧ್ಯೆ ರಾಮಮಂದಿರ (Ayodhya Ram Mandir) ಉದ್ಘಾಟನೆ ಸಂದರ್ಭದಲ್ಲಿ ರೈಲಿನಲ್ಲಿ ಪ್ರಯಾಣಿಸಬೇಡಿ. ಎಲ್ಲರೂ ಮನೆಯಲ್ಲೇ ಇರಿ ಎಂದು ಮುಸ್ಲಿಮರಿಗೆ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಅಧ್ಯಕ್ಷ ಬದ್ರುದ್ದೀನ್ ಅಜ್ಮಲ್ (Badruddin Ajmal) ಕರೆ ನೀಡಿದ್ದಾರೆ.  ದಾರುಲ್ ಉಲೂನ್ ದಿಯೋಬಂದ್‌ನ ಹಳೆಯ ವಿದ್ಯಾರ್ಥಿಯೂ ಆಗಿರುವ ಅಜ್ಮಲ್ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ದೇಶದಾದ್ಯಂತ ಕರಸೇವಕರ (ಸ್ವಯಂಸೇವಕರ) ದೊಡ್ಡ ಚಳುವಳಿ ಇರುತ್ತದೆ. ಬಾಬ್ರಿ ಮಸೀದಿ ಧ್ವಂಸದ ನಂತರ ನಡೆದ ಘಟನೆಗಳು ಪುನರಾವರ್ತನೆಯಾಗುವುದನ್ನು ನಾವು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ. ಮುಸ್ಲಿಂ ಸಹೋದರರ ಹಿತಾಸಕ್ತಿ ಮತ್ತು ದೇಶದ ಶಾಂತಿಗಾಗಿ ಮುಸ್ಲಿಮರು ರೈಲಿನಲ್ಲಿ ಪ್ರಯಾಣಿಸುವುದನ್ನು ತಪ್ಪಿಸಿ ಮತ್ತು ಈ ಅವಧಿಯಲ್ಲಿ ಮನೆಯಲ್ಲೇ ಇರುವುದು ಸೂಕ್ತ ಎಂದು ಹೇಳಿದ್ದಾರೆ. https://ainlivenews.com/there-is-no-better-savings-than-this-save-50-rupees-a-day-and-make-30-lakhs-yours/ ಭಾರತದಾದ್ಯಂತ ಸ್ವಯಂಸೇವಕರು ರೈಲು ಮತ್ತು ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ಯುವಕರಿರುವ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಒಂದೆರಡು ಮುಸ್ಲಿಮರು ಸಿಕ್ಕಿಹಾಕಿಕೊಂಡರೆ ಸಮಸ್ಯೆಯಾಗಬಹುದು. ಇದು ಕೋಮುವಾದ ಎಂದು ಕೆಲವರು ಭಾವಿಸಿದರೆ ಅದು ತಪ್ಪು. ಯಾವುದೇ ರೀತಿಯ ಘರ್ಷಣೆಯಾಗದಂತೆ ಜನರನ್ನು ರಕ್ಷಿಸಲು ಈ ಕ್ರಮ…

Read More

ಬೆಂಗಳೂರು:  ಮೊಬೈಲ್ ತೆಗೆಯಲು ಟ್ರ್ಯಾಕ್ ಗೆ ಜಿಗಿತ, ಯುವಕನಿಂದ ಆತ್ಮಹತ್ಯೆಗೆ ಯತ್ನ ಹೀಗೆ ಮೆಟ್ರೋದಿಂದ  ಸಾಲು ಸಾಲು ಪ್ರಕರಣ ವರದಿಯ ಬೆನ್ನಲ್ಲೇ ಬಿಎಂಆರ್.ಸಿಎಲ್ ಈಗ ಎಚ್ಚೆತ್ತುಕೊಂಡಿದ್ದು ಮೆಟ್ರೋ ಟ್ರ್ಯಾಕ್ ಗಳಿಂದ ಪ್ರಯಾಣಿಕರ ದೂರವಿಸಲು ಹೊಸ ಮಾಸ್ಟರ್ ಪ್ಲಾನ್ ನಡೆದಿದೆ. ಅದು ಏನಂತೀರಾ ಯಾಕಂತೀರಾ ಇಲ್ಲಿದೆ ನೋಡಿ! ಸಾಲು ಸಾಲು ಅನಾಹುತ ತಪ್ಪಿಸಲು ಎಲ್ಲಾ ಮೆಟ್ರೋ ಸ್ಟೇಷನ್ ಗಳಿಗೂ ಪಿಎಸ್ಡಿ ಅಳವಡಿಸಲು ಪ್ಲಾನ್ ಮಾಡಲಾಗಿದ್ದು  PSD-ಫ್ಲಾಟ್ ಫಾರಂ ಸ್ಕ್ರೀನ್ ಡೋರ್(ಫ್ಲಾಟ್ ಫಾರಂ ನಿಂದ ಟ್ರ್ಯಾಕ್ ನಡುವೆ ತಡೆಗೋಡೆ ರೀತಿ ಕೆಲಸ ಮಾಡುತ್ತೆ) ಎಲೆಕ್ಟ್ರಾನಿಕ್ ಸಿಟಿ ಬಳಿಯ ಕೋನಪ್ಪನ ಅಗ್ರಹಾರ ಬಳಿ ಸದ್ಯ ಪಿಎಸ್ ಡಿ ಅಳವಡಿಕೆ‌ಗೆ ನಿರ್ಧಾರ ಮಾಡಲಾಗಿದೆ. ಕೋನಪ್ಪನ ಅಗ್ರಹಾರ ಬಳಿ ಇನ್ಫೋಸಿಸ್ ಫೌಂಡೇಶನ್ ನಿಂದ ಅಳವಡಿಸಿರುವ PSD ಮೆಟ್ರೋದಲ್ಲಿ ಕಳೆದ ಎರಡು ತಿಂಗಳಿನಲ್ಲಿ ಸಾಲು ಸಾಲು ಸಮಸ್ಯೆಯಿಂದ ರಾಜಾಜಿನಗರ ಮೆಟ್ರೋ ಸ್ಟೇಷನ್ ನಲ್ಲಿ ಪಕ್ಕದ ಟ್ರ್ಯಾಕ್ ಗೆ ಮೆಟ್ರೋ ಹತ್ತಲು ಟ್ರ್ಯಾಕ್ ಗೆ ಇಳಿದ ವ್ಯಕ್ತಿ ಕಳೆದ ತಿಂಗಳು ಮೊಬೈಲ್…

Read More

ಧಾರವಾಡ: ಧಾರವಾಡದ ನಗರ ಸಾರಿಗೆ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೋಮವಾರ ಶಂಕು ಸ್ಥಾಪನೆ ನೆರವೇರಿಸಿದರು. 13 ಕೋಟಿ ರೂಪಾಯಿ ವೆಚ್ಚದಲ್ಲಿ ಧಾರವಾಡದ ಸಿಬಿಟಿ ನವೀಕರಣಗೊಳ್ಳಲಿದೆ. ಈ ನವೀಕರಣ ಕಾಮಗಾರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭೂಮಿಪೂಜೆ ನೆರವೇರಿಸಿದ್ದು, ಇವರಿಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕೂಡ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಧಾರವಾಡ ಸಿಬಿಟಿ ಬಹಳ ಹಳೆಯದಾದ ಕಟ್ಟಡಗಳನ್ನು ಹೊಂದಿದೆ. ಈಗ ಈ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಒಂದು ವರ್ಷದ ಅವಧಿಯಲ್ಲಿ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ಕೊಟ್ಟಿದ್ದೇನೆ ಎಂದರು. https://ainlivenews.com/there-is-no-better-savings-than-this-save-50-rupees-a-day-and-make-30-lakhs-yours/ ನಗರ ಸಾರಿಗೆ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಹೆಚ್ಚುವರಿ ಬಸ್‌ಗಳ ಖರೀದಿ ಮಾಡಲಾಗುತ್ತಿದ್ದು, ಇದರಿಂದ ಬಸ್‌ಗಳ ಕೊರತೆ ನೀಗಲಿದೆ. ಅಂದಾಜು 50 ವರ್ಷಗಳ ಹಳೆಯದಾದ ಧಾರವಾಡದ ಸಿಬಿಟಿಯನ್ನು ಇದೀಗ ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಶಾಸಕ ಎನ್.ಎಚ್.ಕೋನರಡ್ಡಿ, ಸಾರಿಗೆ…

Read More

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಯೋಜನಾ ಸಭೆ ನಡೆಯಿತು. ನಗರದ ಹೋಟೆಲ್ ರಮಾಡದಲ್ಲಿ ಬಿಜೆಪಿ ಲೋಕಸಭಾ ಚುನಾವಣೆ ಯೋಜನಾ ಸಭೆ ನಡೆಸಲಾಯಿತು. ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಬಿ.ಎಸ್.‌ ಯಡಿಯೂರಪ್ಪ ಅವರು,  ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚರ್ಚೆ ನಡೆಸ್ತಿದ್ದೇವೆ ಸಂಘಟನೆ ಬಲ ಪಡಿಸಲು ಪ್ರಮುಖರನ್ನು ಸಭೆಗೆ ಕರೆದಿದ್ದೇವೆ ಅನೇಕ‌ ಸಂಗತಿಗಳು ಚರ್ಚೆ ಆಗಲಿವೆ ಲೋಕಸಭೆ ಸಿದ್ಧತೆ ಸೇರಿದಂತೆ ಎಲ್ಲದರ ಬಗ್ಗೆ ಚರ್ಚೆ ಆಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. https://ainlivenews.com/kai-kamala-nayaks-dharma-dangal-in-ram-mandir-issue/ ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ, ವಿರೋಧ ಪಕ್ಷದ ನಾಯಕ ಆರ್.…

Read More

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಲೋಕಾರ್ಪಣೆಗೆ ಕೆಲವೇ ದಿನಗಳಿದ್ದು, ಈ ಹಿನ್ನೆಲೆಯಲ್ಲಿ ಸದ್ಯ ರಾಮಜನ್ಮಭೂಮಿಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿದೆ. ರಾಮನ ವಿಗ್ರಹವು 51 ಇಂಚು ಎತ್ತರ ಇರಲಿದ್ದು, ಬರೋಬ್ಬರಿ 1.5 ಟನ್‌ ತೂಕ ಹೊಂದಿದೆ ಎಂದು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ 4 ದಿನ ಮುನ್ನ ಅಂದರೆ ಜ.18 ರಂದೇ ಗರ್ಭಗುಡಿಗೆ ಶ್ರೀರಾಮನ ಪ್ರವೇಶ ಆಗಲಿದೆ. ಅಲ್ಲದೆ ರಾಮನ ಕಪ್ಪು ಬಣ್ಣದ ವಿಗ್ರಹವು 51 ಇಂಚು ಎತ್ತರ, 1.5 ಟನ್ ತೂಕ ಹೊಂದಿದೆ. ಮುಖ 5 ವರ್ಷದ ಮಗುವಿನಷ್ಟೇ ಮುಗ್ಧತೆಯನ್ನು ಹೊಂದಿದೆ. ಪ್ರತಿ ವರ್ಷ ರಾಮ ನವಮಿಯಂದು ಚೈತ್ರ ಮಾಸದ ಶುಕ್ಲ ಪಕ್ಷದ 9ನೇ ತಾರೀಖಿನಂದು ಮಧ್ಯಾಹ್ನ 12 ಗಂಟೆಗೆ ಸೂರ್ಯ ಸ್ವತಃ ತನ್ನ ಕಿರಣಗಳ ಮೂಲಕ ಶ್ರೀರಾಮನ ಹಣೆಯನ್ನು ಸ್ಪರ್ಶಿಸಲಿದ್ದಾನೆ ಎಂದು ಅವರು ವಿವರಿಸಿದರು. https://ainlivenews.com/there-is-no-better-savings-than-this-save-50-rupees-a-day-and-make-30-lakhs-yours/ ಜ.16 ರಿಂದ ಪ್ರತಿಷ್ಠಾಪನೆಯ ಪೂಜಾ ವಿಧಿವಿಧಾನಗಳು…

Read More

ಬೆಂಗಳೂರು: ಅದು ಸೆಲೆಬ್ರಿಟಿಗಳಿಗಾಗಿ ನಡೆದಿದ್ದ ಪಾರ್ಟಿ.. ರಾತ್ರಿ ಶುರುವಾದ ಪಾರ್ಟಿ ಬೆಳಗ್ಗೆ 5.30 ಆದ್ರೂ ನಿಂತಿರ್ಲಿಲ್ಲ. ಏನ್ ನಡೀತಿದೆ, ಸಂಬಂಧ ಪಟ್ಟು ಅಧಿಕಾರಿಗಳು ನಿರ್ಲಕ್ಷ ಕಾರಣ ನಾ ರೂಲ್ಸ್ ರೆಗ್ಯೂಲೆಶನ್ಸ್ ಏನು ಇಲ್ವಾ ಅಂತ ನೋಡೋ ಅಷ್ಟರಲ್ಲೇ ಪೊಲೀಸರು ರೇಡ್ ಮಾಡಿ, ಪಾರ್ಟಿ ಆಯೋಜಿಸಿದ್ದ ಪಬ್ ಓನರ್ ವಿರುದ್ಧ ಪ್ರಕರಣ ದಾಖಲಿಸಿದಾರೆ ಹಾಗೆ ಜೆಟ್ ಲಾಗ್ ಪಬ್​ನಲ್ಲಿ ಮುಂಜಾನೆವರೆಗೂ ಸೆಲೆಬ್ರಿಟಿಗಳ ಪಾರ್ಟಿ ಮಾಡಿರುವ ವಿಚಾರವಾಗಿ ನೋಟೀಸ್ ನೀಡಲು ಸುಬ್ರಮಣ್ಯನಗರ ಪೊಲೀಸರು ಮುಂದಾಗಿದ್ದಾರೆ. ದರ್ಶನ್, ರಾಕ್ ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಶ್, ಚಿಕ್ಕಣ್ಣ, ಪ್ರಜ್ವಲ್ ದೇವರಾಜ್​ ಸೇರಿದಂತೆ ಕೆಲ ಸೆಲೆಬ್ರಿಟಿಗಳಿಗೆ ನೋಟೀಸ್ ನೀಡುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಪಬ್, ರೆಸ್ಟೋರೆಂಟ್ಗಳಿಗೆ ಮೂಗುದಾರ ಇಲ್ಲದಂಗಾಗಿದೆ. ಪೊಲೀಸರ ಭಯವೇ ಇಲ್ಲದೇ ಇಷ್ಟಬಂದಂತೆ ರೂಲ್ಸ್ ಮೀರಿ ವರ್ತಿಸುತ್ತಿವೆ. ಇಂತದ್ದೆ ವಿವಾದಕ್ಕೆ ರಾಜಾಜಿನಗರದ ಜೆಟ್ಲ್ಯಾಗ್ ರೆಸ್ಟೋಬಾರ್ ಸಿಲುಕಿದೆ. ಕಳೆದ 2 ದಿನಗಳ ಹಿಂದೆ ರೂಲ್ಸ್ ಬ್ರೇಕ್ ಮಾಡಿ ರಾತ್ರಿಯೆಲ್ಲ ಪಾರ್ಟಿ ಮಾಡಿಸಿದ್ದ ಜೆಟ್ಲ್ಯಾಗ್ ಪಬ್ ಓನರ್ ಶಶಿರೇಖಾ…

Read More

ಕಲಬುರಗಿ: ಕಲಬುರಗಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರೆದಿದ್ದು ಇದೀಗ 5 ವರ್ಷದ ಬಾಲಕನ ಮೇಲೆ ನಾಯಿಗಳು ಅಟ್ಯಾಕ್ ಮಾಡಿವೆ..ಬಿಸ್ಬಾ ನಗರದಲ್ಲಿ ಘಟನೆ ನಡೆದಿದ್ದು ರಶೀದ್ ಎಂಬಾತ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.. ಹಾಲು ತರಲು ಅಂಗಡಿಗೆ ಹೋದಾಗ ನಾಯಿಗಳ ಹಿಂಡು ದಾಳಿ ಮಾಡಿದ್ದು, ನಾಯಿಗಳ ಹಾವಳಿಗೆ ಬ್ರೇಕ್ ಹಾಕದ ಪಾಲಿಕೆ ವಿರುದ್ದ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ..

Read More

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ನಗರದಲ್ಲಿ ಹೆಸ್ಕಾಂ ನಗರ ಘಟಕ ವತಿಯಿಂದ ಸಾರ್ವಜನಿಕರಿಗೆ ಹುಬ್ಬಳ್ಳಿ ವಿದ್ಯುತ ಸರಬರಾಜು ಕಂಪನಿ ನಿಯಮಿತ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯುತ್ ಸುರಕ್ಷತಾ ಮಾಸಾಚರಣೆ ಹಾಗೂ ಸುರಕ್ಷತಾ ಅಭಿಯಾನ ಕಾರ್ಯಕ್ರಮ ನಡೆಯಿತು. ಯಾವಾಗಲೂ ಸಾರ್ವಜನಿಕರಿಗೆ ತಿಳಿಸುವುದೇನೆಂದರೆ ಐ ಎಸ್ ಐ ಅಧಿಕೃತ ಗುಣಮಟ್ಟದ ಸಾಮಗ್ರಿಗಳನ್ನ ಉಪಯೋಗಿಸಿ. ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯನ್ನು ಮುಟ್ಟಬೇಡಿ ಹಾಗೂ ಈ ವಿಷಯವನ್ನು ಕೂಡಲೇ ನಿಗಮದ ಅಧಿಕಾರಿಗಳಿಗೆ 1912 ಕರೆ ಮಾಡಿ ತಿಳಿಸಿ. ವಿದ್ಯುತ್ ಕಂಬಗಳಿಗೆ ಪ್ರಾಣಿಗಳನ್ನು ಕಟ್ಟಬೇಡಿ ವಿದ್ಯುತ್ ಕಂಬದ ತಂತಿಗಳ ಮೇಲೆ ಬಟ್ಟೆಗಳನ್ನು ಒಣಗಿಸಲು ಹಾಕಬಾರದು. ತಂತಿ ಬೇಲಿಗಳಿಗೆ ಅಕ್ರಮವಾಗಿ ವಿದ್ಯುತ್ ಹಾಯ್ಸಬಾರದು ಸಾರ್ವಜನಿಕರು ವಿದ್ಯುತ್ ಕಂಬಗಳನ್ನು ಹತ್ತಬಾರದು ಭೂಸಂಪರ್ಕ ವ್ಯವಸ್ಥೆ ಇಲ್ಲದೆ ವಿದ್ಯುತ್ ಉಪಕರಣಗಳನ್ನು ಬಳಸಬಾರದು. ವಿದ್ಯುತ್ ಮಾರ್ಗಗಳ ಕಡೆಗೆ ಬಾಲ್ಕನಿಗಳನ್ನು ಕಿಟಕಿಗಳನ್ನು ನಿರ್ಮಿಸಬಾರದು ಎಂದು ರಬಕವಿ ನಗರದ ಹೆಸ್ಕಾಂ ಅಧಿಕಾರಿ ಬ್ರಹ್ಮಾನಂದ ಮಾಸ್ತಿ ಹೇಳಿದರು. ವಿದ್ಯುತ್ ಎಂದರೆ ಅಪಾಯಕಾರಿ ದಯವಿಟ್ಟು ಸಾರ್ವಜನಿಕರು ಎಚ್ಚರವಹಿಸಿ ಎಂದು…

Read More

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಶಬರಿಮಲೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಸಂಚರಿಸುತ್ತಿದ್ದ ಬಸ್ ಪಲ್ಟಿಯಾಗಿ 15 ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಗುಡ್ಡೆತೋಟದ ಬಳಿ ನಡೆದಿದೆ. ಮೈಸೂರು ಮೂಲದ ಬಸ್ಸಿನಲ್ಲಿ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಮಾಡಿ ಬಂದಿದ್ದ ಮಾಲಾಧಾರಿಗಳು, ಶೃಂಗೇರಿ‌ ಶಾರದಾಂಬೆ ದರ್ಶನ ಪಡೆದು ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಹೊರಟಿದ್ದರು. ಬಸ್ ಜಯಪುರದಿಂದ ಗುಡ್ಡೆತೋಟದ ಮೂಲಕ ಹೊರನಾಡಿಗೆ ಹೋಗುವಾಗ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿಯೋ ಅಥವಾ ಸ್ಟೇರಿಂಗ್ ಕಟ್ ಆಗಿ ಅಪಘಾತವಾಗಿಯೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ, ತಿರುವಿನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ. ಬಸ್ಸಿನಲ್ಲಿ 34 ಜನ ಮಾಲಾಧಾರಿಗಳು ಪ್ರಯಾಣ ಮಾಡುತ್ತಿದ್ದರು. ಅವರಲ್ಲಿ 15 ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ‌. https://ainlivenews.com/there-is-no-better-savings-than-this-save-50-rupees-a-day-and-make-30-lakhs-yours/ ತಿರುವಿನಲ್ಲಿ ಬಸ್ ಪಲ್ಟಿಯಾದ ಕಾರಣ ಕೆಲ ಹೊತ್ತು ಟ್ರಾಫಿಕ್ ಜಾಮ್ ಕೂಡ ಆಗಿತ್ತು. ಸ್ಥಳೀಯರು ಹಗ್ಗ ಕಟ್ಟಿ ಬಿದ್ದಿದ್ದ ಬಸ್ಸನ್ನ ಎಳೆಯಲು ಪ್ರಯತ್ನಿಸಿದರು.‌ ಆದರೆ, ಅದು…

Read More