ಬೆಂಗಳೂರು: ಕರವೇ ಅಧ್ಯಕ್ಷ ನಾರಾಯಣಗೌಡರಿಗೆ (Karave Narayana Gowda) ಮತ್ತೊಂದು ಸಂಕಷ್ಟ ಎದುರಾದಂತಿದೆ. ಕರವೇ ರಾಜ್ಯಾಧ್ಯಕ್ಷರನ್ನು ಮತ್ತೊಮ್ಮೆ ಬಂಧಿಸಲು ಬೆಂಗಳೂರು ಪೊಲೀಸರು ತಯಾರಿ ನಡೆಸಿದ್ದಾರೆ. ಹಳೇ ಕೇಸ್ಗಳನ್ನು ಕೆದಕಿರೋ ಕುಮಾರಸ್ವಾಮಿ ಲೇಔಟ್ (Kumaraswamy Lay Out) ಮತ್ತು ಹಲಸೂರು ಗೇಟ್ ಪೊಲೀಸರು ಬಾಡಿ ವಾರೆಂಟ್ ಮೇಲೆ ಕಸ್ಟಡಿ ಪಡೆಯಲು ಸಿದ್ಧತೆ ನಡೆಸಿದ್ದಾರೆ. ಹಲಸೂರು ಗೇಟ್ನಲ್ಲಿ 2017ರಲ್ಲಿ ದಾಖಲಾಗಿದ್ದ ಎನ್ಡಿಎಂಎ ಆಕ್ಟ್ ನಡಿ ದಾಖಲಾಗಿದ್ದ ಪ್ರಕರಣ ಹಾಗೂ ಕುಮಾರಸ್ವಾಮಿ ಲೇಔಟ್ ನಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಎನ್ಆರ್ ಡಬ್ಲೂ ಜಾರಿಯಾಗಿತ್ತು. ಈ ಹಿನ್ನಲೆ ಈ ಎರಡು ಠಾಣೆಗಳಿಂದ ಕಸ್ಟಡಿ ಪಡೆಯಲು ಸಿದ್ಧತೆ ನಡೆದಿದೆ. https://ainlivenews.com/elon-musk-offered-1-billion-dollars-to-change-the-name-on-wikipedia/ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ನಾರಾಯಣಗೌಡ ವಿರುದ್ಧಧ ಹಳೇ ಕೇಸ್ಗಳನ್ನು ಪೊಲೀಸರು ಕೆದಕುತ್ತಿದ್ದಾರೆ. ಬೆಂಗಳೂರು ನಗರದ ಎಲ್ಲಾ ಠಾಣೆಗಳ ಕೇಸ್ ರೀ ಓಪನ್ ಮಾಡಿ ಕಸ್ಟಡಿಗೆ ಪಡೆಯಲು ಚಿಂತನೆ ನಡೆಸಿದ್ದಾರಂತೆ. ಅನ್ಯ ಭಾಷೆಯ ನಾಮಫಲಕಗಳನ್ನು ಧ್ವಂಸಗೊಳಿಸಿ ಪ್ರತಿಭಟನೆ ಮಾಡಿದ ಪ್ರಕರಣದಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ ಅನೇಕರನ್ನು ಬಂಧಿಸಲಾಗಿತ್ತು. ಇದನ್ನು…
Author: AIN Author
ಬೆಂಗಳೂರು: ಬೆಂಗಳೂರಿನ ನಾಗಸಂದ್ರದ ಕೈಗಾರಿಕೋದ್ಯಮಿಯೊಬ್ಬರು ನಿರ್ಮಿಸಿರುವ ಬೃಹದಾಕಾರದ ಅಳಿಲು ಪುತ್ಥಳಿ ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯ ನವ ನಿರ್ಮಾಣದ ವೇದಿಕೆಯಲ್ಲಿ ಶಾಶ್ವತವಾಗಿ ವಿರಾಜಮಾನವಾಗಲಿದೆ. ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಪ್ರಸಿದ್ಧಿ ಇಂಜಿನಿಯರ್ಸ್ ಕಂಪೆನಿಯ ಮಾಲೀಕರಾದ ಸಿ ಪ್ರಕಾಶ್ ಅವರು ಎರಡೂವರೆ ಟನ್ ಕಾರ್ಟನ್ ಸ್ಟೀಲ್ ಬಳಸಿ, 15 ಅಡಿ ಎತ್ತರ ಹಾಗೂ 7.5 ಅಡಿ ಅಗಲ ವಿಸ್ತೀರ್ಣದಲ್ಲಿ ಶ್ರೀರಾಮನ ಸೇವೆ ಎಂದು ನಿರ್ಮಿಸಿರುವ ಬೃಹದಾಕಾರದ ಅಳಿಲು ಪುತ್ಥಳಿ ಅಯೋಧ್ಯೆಯ ರೈಲ್ವೆ ನಿಲ್ದಾಣ ಆವರಣದ ಮಧ್ಯ ಭಾಗದಲ್ಲಿ ಅನಾವರಣಗೊಳ್ಳಲಿದೆ. https://ainlivenews.com/elon-musk-offered-1-billion-dollars-to-change-the-name-on-wikipedia/ ಬೃಹದಾಕಾರದ ಅಳಿಲು ಪುತ್ಥಳಿ ಹೊತ್ತ ಟ್ರಕ್ ರಸ್ತೆ ಮಾರ್ಗವಾಗಿ ಅಯೋಧ್ಯೆಯತ್ತ ತೆರಳಿತು.ಇದೇ 11 ನೇ ತಾರೀಖು ಅಯೋಧ್ಯೆಗೆ ತಲುಪಲಿದ್ದು, 12 ನೇ ತಾರೀಖು ಅಯೋಧ್ಯೆ ರೈಲ್ವೆ ನಿಲ್ದಾಣ ಆವರಣದಲ್ಲಿ ಅಳಿಲು ಪ್ರತಿಷ್ಠಾಪನೆಗೊಳ್ಳಲಿದೆ.
ಹುಬ್ಬಳ್ಳಿ: ರಾಮಭಕ್ತ ಶ್ರೀಕಾಂತ್ ಪೂಜಾರಿ ಬಿಡುಗಡೆಯಾಗಿರುವುದು ನ್ಯಾಯಕ್ಕೆ ಸಿಕ್ಕ ಜಯವಾಗಿದೆ. ನಾವು ಹಿಂದೆಯೇ ಹೇಳಿರುವ ಹಾಗೇ ಏನೇ ಕಾನೂನು ಹೋರಾಟ ಇದ್ದರೂ ನಾವು ಬದ್ಧ ಎಂದು ಹೇಳಿದ್ದೇವು. ಈ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ನಮ್ಮ ವಕೀಲರು ಉತ್ತಮ ಕೆಲಸ ಮಾಡಿ ಬಿಡುಗಡೆ ಮಾಡಿಸುವ ಕಾರ್ಯವನ್ನು ಮಾಡಿದ್ದಾರೆ. ನ್ಯಾಯಾಲಯಕ್ಕೆ ಹಾಗೂ ವಕೀಲರಿಗೆ ಅಭಿನಂದನೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಶ್ರೀಕಾಂತ್ ಪೂಜಾರಿ ಬಿಡುಗಡೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಇಂದು ಜಯ ಸಿಕ್ಕದೆ. ರಾಜ್ಯ ಸರ್ಕಾರ ಎಷ್ಟೇ ಸಮಸ್ಯೆ ತಂದೊಡ್ಡಿದರೂ ಕೂಡ ನಮ್ಮ ಹೋರಾಟಕ್ಕೆ ಜಯಸಿಕ್ಕಿದೆ. ಈ ನಿಟ್ಟಿನಲ್ಲಿ ನಮಗೆ ಸಂತೋಷವಾಗಿದೆ ಎಂದರು. https://ainlivenews.com/are-you-using-phone-pay-if-you-missed-this-story-then-go/ ರಾಜ್ಯದ ಜನರ ಮನಸ್ಸಿನಲ್ಲಿ ಕೋಮುವಾದದ ಜೊತೆಗೆ ಅಶಾಂತಿಯನ್ನು ಹುಟ್ಟು ಹಾಕಿ ಶ್ರೀಕಾಂತ್ ಪೂಜಾರಿ ಕ್ರಿಮಿನಲ್ ಎಂದು ಬಿಂಬಿಸಿದ್ದ ಸಿಎಂ ಸಿದ್ಧರಾಮಯ್ಯನವರು ಹಾಗೂ ಗೃಹ ಸಚಿವರು ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೆ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಿದ್ದಾರೆ. ಬಳಿಕ ಮಾತನಾಡಿ ಸಿಎಂ, ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ, ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡರು. ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು. https://ainlivenews.com/elon-musk-offered-1-billion-dollars-to-change-the-name-on-wikipedia/ ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ.…
ಪಾಟ್ನಾ: ಸಾರ್ವಜನಿಕರ ಮುಂದೆಯೇ ಪೊಲೀಸರು (Police) ದಲಿತ ಮಹಿಳೆಯೊಬ್ಬರನ್ನು ಥಳಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗುತ್ತಿದ್ದು, ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆ ಬಿಹಾರದ ಸೀತಾಮರ್ಹಿಯಲ್ಲಿ ನಡೆದಿದೆ. ಸಮವಸ್ತ್ರದಲ್ಲಿಯೇ ಪೋಲೀಸರು ಹೊಡೆಯುತ್ತಿರುವುದನ್ನು ಅಲ್ಲೇ ಇದ್ದ ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಈ ವೀಡಿಯೋವನ್ನು ವೀಕ್ಷಿಸಿದ ನೆಟ್ಟಿಗರು, ಪೊಲೀಸರ ವರ್ತನೆಯ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿ ಕಳವಳ ವ್ಯಕ್ತಪಡಿಸಿದ್ದಾರೆ. ಮಹಿಳೆಯನ್ನು ಥಳಿಸಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. https://twitter.com/tyagiih5/status/1741718419651588303?ref_src=twsrc%5Etfw%7Ctwcamp%5Etweetembed%7Ctwterm%5E1741718419651588303%7Ctwgr%5Eee09351a6b3b3c58fe841c0484ce26325b8a4f1e%7Ctwcon%5Es1_&ref_url=https%3A%2F%2Fwww.prabhasakshi.com%2Fnational%2Fdalit-woman-thrashed-by-cop-in-bihar-police-probe-after-video-goes-viral ಇತ್ತ ಪ್ರಕರಣ ವಿವಾದದ ಕಿಡಿ ಹೊತ್ತಿಕೊಳ್ಳುತ್ತಿದ್ದಂತೆಯೇ ಪೊಲೀಸರು ಸಮಜಾಯಿಷಿ ನೀಡಿದ್ದಾರೆ. ಅಪಹರಣ ಪ್ರಕರಣದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸುತ್ತಿದ್ದರು ಎಂದಿದ್ದಾರೆ. ಏನಿದು ಘಟನೆ..?: ಸುರಸಂದ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜ್ಕಿಶೋರ್ ಸಿಂಗ್ ಮಹಿಳೆಯನ್ನು ರಸ್ತೆಯಲ್ಲಿಯೇ ದೊಣ್ಣೆಯಿಂದ ಥಳಿಸಿದ್ದಾರೆ. ಸುರಸಂದ್ ಮಾರುಕಟ್ಟೆಯಲ್ಲಿ ನಡೆದ ಗಲಾಟೆಯಿಂದ ಕೋಪಗೊಂಡ ಪೊಲೀಸ್ ಅಧಿಕಾರಿ, ಮಹಿಳೆಯನ್ನು ಅನೇಕ ಬಾರಿ…
ಬೆಂಗಳೂರು: ಎಲ್ಲಾ ಸಮುದಾಯಗಳಿಗೂ ಅವಕಾಶ ಸಿಗಬೇಕೆಂಬ ನಿಟ್ಟಿನಲ್ಲಿ 3 ಡಿಸಿಎಂ ಹುದ್ದೆ ಕೇಳಿದರೆ ತಪ್ಪಿಲ್ಲ ಎಂದು ಡಾ. ಎಚ್ಸಿ ಮಹದೇವಪ್ಪ ಹೇಳಿದರು. ಲೋಕಸಭಾ ಚುನಾವಣೆಗೂ ಮುನ್ನ ಹೆಚ್ಚುವರಿ ಡಿಸಿಎಂ ಹುದ್ದೆಗೆ ಕೆ.ಎನ್.ರಾಜಣ್ಣ ಒತ್ತಾಯ ವಿಚಾರವಾಗಿ ಮಾತನಾಡಿದ ಅವರು, ಈ ರೀತಿಯಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕೆ.ಎನ್ ರಾಜಣ್ಣ ಹಿರಿಯ ನಾಯಕರು. ಅವರು ರಾಜಕೀಯ ವಿಶ್ಲೇಷಣೆ ಮಾಡಿ ಈ ರೀತಿಯಾಗಿ ಹೇಳಿದ್ದಾರೆ. ಆದರೆ, ಈ ಬಗ್ಗೆ ತೀರ್ಮಾನ ಕೈಗೊಳ್ಳುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದರು. https://ainlivenews.com/elon-musk-offered-1-billion-dollars-to-change-the-name-on-wikipedia/ ಲೋಕಸಭೆ ಚುನಾವಣೆಯಲ್ಲಿ ಸಚಿವರನ್ನು ಕಣಕ್ಕಿಳಿಸುವ ಬಗ್ಗೆ ಸದ್ಯಕ್ಕೆ ಏನು ಚರ್ಚೆ ಆಗಿಲ್ಲ. ಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ನೋಡಬೇಕು ಎಂದರು. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜನವರಿ 10 ಕ್ಕೆ ಎಐಸಿಸಿಯಿಂದ ವೀಕ್ಷಕರು ಬರ್ತಾರೆ ಅವತ್ತು ಚರ್ಚೆ ಮಾಡ್ತಾರೆ ಎಂದು ಇದೇ ಸಂದರ್ಭದಲ್ಲಿ ಡಾ. ಎಚ್ ಸಿ ಮಹದೇಪ್ಪ ಹೇಳಿದರು.
ಹಾವೇರಿ: ಮುಂದಿನ ಡಿಸೆಂಬರ್ ಅಂತ್ಯದ ವೇಳೆಗೆ ಶಿಗ್ಗಾವಿ ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ನಲ್ಲಿ (ನಳದ) ನೀರು ಕೊಡುವ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾವಿ ತಾಲೂಕಿನ ತಡಸ್ ಗಾಮದಲ್ಲಿ ಗಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ 2022-23 ನೇ ಸಾಲಿನ ಜಲ ಜೀವನ ಮಿಷನ್ ಅಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆ ಅಡಿ ನಲ್ಲಿ ನೀರು ಸರಬರಾಜು ಯೋಜನೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಕುಡಿಯುವ ನೀರು ಒದಗಿಸಲು ಅನೇಕ ಸಮಸ್ಯೆಗಳು ನೈಸರ್ಗಿಕ ಕಾರಣದಿಂದ ಇವೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಎರಡು ಬಾರಿ ಪ್ರಸ್ತಾಪ ಮಾಡಿದ್ದರೂ, ಜಾರಿಗೆ ತರಲು ಸಾಧ್ಯವಾಗಲಿಲ್ಲ. ಆ ಸಂದರ್ಭದಲ್ಲಿ ನಮಗೆ ವರವಾಗಿ ಬಂದಿರುವಂಥದ್ದು. ಪ್ರಧಾನಿ ನರೇಂದ್ರ ಮೋದಿಯವರ ಜಲ ಜೀವನ್ ಮಿಷನ್ ಯೋಜನೆ. ಈ ಯೋಜನೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಎರಡೂ ಹಣ ನೀಡುತ್ತವೆ. https://ainlivenews.com/elon-musk-offered-1-billion-dollars-to-change-the-name-on-wikipedia/…
ಸ್ಯಾಂಡಲ್ ವುಡ್ ಭರ್ಜರಿ ಹುಡ್ಗ ಧ್ರುವ ಸರ್ಜಾ ಆಂಜನೇಯನ ಭಕ್ತ ಎನ್ನುವುದು ಎಲ್ಲರಿಗೂ ಗೊತ್ತಿದೆ. ಸದಾ ಹನುಮಾನ್ ಭಕ್ತಿ ಮೆರೆಯುವ ಆಕ್ಷನ್ ಪ್ರಿನ್ಸ್ ಅವರನ್ನು ಹನುಮಾನ್ ಸಿನಿಮಾದ ನಾಯಕ ತೇಜ ಸಜ್ಜಾ ಭೇಟಿಯಾಗಿದ್ದಾರೆ. ತಮ್ಮ ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ತೇಜ, ಈ ವೇಳೆ ಆಂಜನೇಯನ ಪರಮಭಕ್ತ ಧ್ರುವರನ್ನು ಭೇಟಿಯಾಗಿ ಕೆಲಕಾಲ ಸಿನಿಮಾಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಾರ್ಟಿನ್ ಕೆಡಿಗೆ ತೇಜ ವಿಷ್ ತೇಜ ಸಜ್ಜಾ ನಟಿಸಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆ ತಮ್ಮ ಚಿತ್ರ ನೋಡುವಂತೆ ಧ್ರುವ ಸರ್ಜಾ ಅವರಿಗೆ ತೇಜ ಮನವಿ ಮಾಡಿದ್ದಾರೆ. ಈ ವೇಳೆ ಹನುಮಾನ್ ಟ್ರೇಲರ್ ಅದ್ಭುತವಾಗಿದ್ದು, ತಾವು ಸಿನಿಮಾ ನೋಡುವುದಾಗಿ ಆಕ್ಷನ್ ಪ್ರಿನ್ಸ್ ತಿಳಿಸಿದ್ದಾರೆ. ಧ್ರುವ ಅಪ್ ಕಮ್ಮಿಂಗ್ ಚಿತ್ರಗಳಾದ ಕೆಡಿ, ಮಾರ್ಟಿನ್ ಸಿನಿಮಾಗೆ ತೇಜ ಸಜ್ಜಾ ಶುಭಾಶಯ ಕೋರಿದ್ದು, ನಿಮ್ಮ ಪೊಗರು ಸಿನಿಮಾ ತೆಲುಗು ರಂಗದಲ್ಲಿ ಸದ್ದು ಮಾಡಿತ್ತು. ನೀವು ಅದ್ಭುತವಾಗಿ ಆಕ್ಷನ್ ಮಾಡುತ್ತೀರಾ…
ಇತ್ತೀಚಿಗಷ್ಟೇ ಪ್ರತಾಪ್ (Prathap) ಆಸ್ಪತ್ರೆಗೆ ದಾಖಲಾಗಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹಬ್ಬಿತ್ತು. ಪೊಲೀಸರು ಕೂಡ ಡ್ರೋನ್ ಪ್ರತಾಪ್ ದಾಖಲಾಗಿದ್ದ ಆಸ್ಪತ್ರೆಗೆ ಮತ್ತು ಬಿಗ್ ಬಾಸ್ (Bigg Boss Kannada 10) ಸೆಟ್ಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದರು. ಪ್ರತಾಪ್ (Drone Prathap) ಆತ್ಮಹತ್ಯೆಗೆ ಯತ್ನಿಸಿಲ್ಲ. ಇದೊಂದು ಸುಳ್ಳು ಸುದ್ದಿ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ ಎಂದು ಚಿಕಿತ್ಸೆ ನೀಡಿದ ವೈದ್ಯರು ಸ್ಪಷ್ಟನೆ ನೀಡಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಡ್ರೋನ್ ಪ್ರತಾಪ್ ಇದೀಗ ಬಿಗ್ ಬಾಸ್ ಮನೆಗೆ (Bigg Boss) ವಾಪಸ್ ಆಗಿದ್ದಾರೆ. ಬಿಗ್ ಬಾಸ್ ಸ್ಪರ್ಧಿಗಳಿಗೆ, ವೀಕ್ಷಕರಿಗೆ ಪ್ರತಾಪ್ ಕಡೆಯಿಂದಲೇ ಸ್ಪಷ್ಟನೆ ಸಿಕ್ಕಿದೆ. ತಮಗೆ ಏನಾಗಿತ್ತು ಎಂಬುದನ್ನ ಪ್ರತಾಪ್ ಅವರೇ ವಿವರಿಸಿದ್ದಾರೆ. ನ್ಯೂ ಇಯರ್ ಕಳೆದ ಬಳಿಕ ನಾನು ಒಂದು ಹೊತ್ತೂ ಊಟ ಮಾಡಿರಲಿಲ್ಲ. ಹೀಗಾಗಿ, ಫುಡ್ ಪಾಯ್ಸನ್ ಆಗಿತ್ತು. ಬೇರೇನೂ ತಪ್ಪು ತಿಳುವಳಿಕೆ ಮಾಡಿಕೊಳ್ಳಬೇಡಿ ಎಂದು ಸ್ಪರ್ಧಿಗಳ ಮುಂದೆ ಡ್ರೋನ್ ಪ್ರತಾಪ್ ಹೇಳಿದ್ದಾರೆ.…
ಅಯೋಧ್ಯೆ: ವನವಾಸದಲ್ಲಿ ಶ್ರೀರಾಮ ಮಾಂಸಹಾರ ಸೇವಿಸುತ್ತಿದ್ದ ಎಂಬ ವಿಚಾರ ಸಂಪೂರ್ಣ ಸತ್ಯಕ್ಕೆ ದೂರವಾದದ್ದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ಹೇಳಿದ್ದಾರೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (Nationalist Congress Party) ನಾಯಕ ಜಿತೇಂದ್ರ ಅವ್ಹಾದ್ (Jitendra Awhad) ಅವರು ಭಗವಾನ್ ರಾಮನ ಕುರಿತು ನೀಡಿದ್ದ ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಜಿತೇಂದ್ರ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಆಚಾರ್ಯರು, https://ainlivenews.com/elon-musk-offered-1-billion-dollars-to-change-the-name-on-wikipedia/ ಅವರ ಮಾತನಾಡುತ್ತಿರುವುದು ಸಂಪೂರ್ಣ ಸುಳ್ಳು, ಭಗವಾನ್ ರಾಮನು ವನವಾಸದ ಸಮಯದಲ್ಲಿ ಮಾಂಸಾಹಾರಿ ಆಹಾರವನ್ನು ಸೇವಿಸಿದ್ದಾನೆ ಎಂದು ನಮ್ಮ ಧರ್ಮಗ್ರಂಥಗಳಲ್ಲಿ ಎಲ್ಲಿಯೂ ಬರೆದಿಲ್ಲ. ಅವರು ಹಣ್ಣುಗಳನ್ನು ಸ್ವೀಕರಿಸುತ್ತಿದ್ದರು ಎಂದಿದ್ದಾರೆ. ನಮ್ಮ ದೇವರು ಯಾವಾಗಲೂ ಸಸ್ಯಾಹಾರಿ. ಅವರು ನಮ್ಮ ಭಗವಾನ್ ರಾಮನನ್ನು ಅವಮಾನಿಸಲು ಕೀಳುಮಟ್ಟದ ಮಾತನಾಡುತ್ತಿದ್ದಾರೆ ಎಂದು ಆಚಾರ್ಯರು ಹೇಳಿದ್ದಾರೆ.