Author: AIN Author

ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳಿಗೆ ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ ಎಂದು ಬಿ.ಕೆ.ಹರಿಪ್ರಸಾದ್‌ ಟೀಕೆ ಮಾಡಿದ್ದಾರೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರೌಡಿ ಶೀಟರ್ ಆಗಿರುವ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಬೆ ನಡೆಸುವ ಫತ್ವಾ ಬಂದಿದೆ ಎಂದು ಸ್ವತಃ ತಾನೇ ಸೃಷ್ಟಿಸಿರುವ “ರಾಷ್ಟ್ರ ರಕ್ಷಣಾ ಪಡೆ” ಎಂಬ ವಾಟ್ಸಪ್ ಗ್ರೂಪಿನಲ್ಲಿ ಹೇಳಿಕೊಂಡಿದ್ದಾನೆ.ಕೋಮು ಗಲಭೆ ನಡೆಸಿ 2024ಕ್ಕೆ “ವಿಶ್ವಗುರುವನ್ನ” ಮತ್ತೆ ಪ್ರಧಾನಿಯಾಗಬೇಕೆಂದು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ. ರಾಜ್ಯದಲ್ಲಿ ಎಲ್ಲಿ?ಯಾವಾಗಾ?ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಇಂತಹ ಸಮಾಜಘಾತುಕರಿಗೆ ಇಡಿ ಬಿಜೆಪಿಯೇ ಬೆಂಬಲಕ್ಕೆ ನಿಂತಿರುವುದು ಜಗಜ್ಜಾಹೀರು. ಕೂಡಲೇ ಸರ್ಕಾರ ಇಂತಹ ಭಯೋತ್ಪಾದಕ ಶಕ್ತಿಗಳನ್ನ ಮಟ್ಟ ಹಾಕಬೇಕು. ರಾಜ್ಯದ ಆಂತರಿಕ ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿರುವವರ ಮೇಲೆ ರಾಷ್ಟ್ರದ್ರೋಹದ ಅಡಿಯಲ್ಲಿ ಕೇಸ್ ದಾಖಲಿಸಿ ತನಿಖೆ…

Read More

ಕಲಬುರಗಿ: ಇತ್ತೀಚಿಗೆ ಸಿಎಂ ಸಲಹೆಗಾರರಾಗಿ ನೇಮಕವಾದ ಅಳಂದ ಶಾಸಕ BR ಪಾಟೀಲರಿಗೆ ಇವತ್ತು ಕಲಬುರಗಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಘಟಕ ಕಾರ್ಯಕ್ರಮ ಏರ್ಪಡಿಸಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಗೆರವ ಸನ್ಮಾನ ಮಾಡಿ ಪಾಟೀಲರನ್ನ ಅಭಿನಂದಿಸಿದರು..ಹಾಲಿ ಮಾಜಿ ಸೇರಿದಂತೆ ಹಲವಾರು ಕೈ ನಾಯಕರು ಸಮಾರಂಭದಲ್ಲಿ ಹಾಜರಿದ್ದರು..ಸಿಎಂ ಸಲಹೆಗಾರರಾಗಿ ಇದೇ ಮೊದಲ ಬಾರಿಗೆ ಕಲಬುರಗಿಗೆ ಆಗಮಿಸಿದ ಹಿನ್ನಲೆ ಸನ್ಮಾನ ಸಮಾರಂಭ ವಿಶೇಷವಾಗಿತ್ತು.

Read More

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಇಂದು ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಭಾರತದ ಚೊಚ್ಚಲ ಬಾಹ್ಯಾಕಾಶ ಆಧಾರಿತ ಸೌರ ಮಿಷನ್, ಆದಿತ್ಯ ಎಲ್‌1 ನೌಕೆಯು ಇಂದು ಅಂತಿಮ ಕಕ್ಷೆಯನ್ನು ಸೇರಿದೆ. ಸಂಜೆ 4 ಗಂಟೆ ಗೆ ಬಾಹ್ಯಾಕಾಶ ನೌಕೆಯು ಸೂರ್ಯನ ಲ್ಯಾಗ್ರೇಂಜ್‌ ಪಾಯಿಂಟ್‌ ಸೇರಿದ್ದು, ಅಂತಿಮ ಹಂತದ ಕಕ್ಷೆ ಬದಲಾವಣೆಯಾದ ಹಿನ್ನೆಲೆಯಲ್ಲಿ ಇಸ್ರೋ ಮಹತ್ವದ ಮೈಲುಗಲ್ಲು ಮುಟ್ಟಿದೆ. ಸೂರ್ಯನ ವಿವರವಾದ ಅಧ್ಯಯನಕ್ಕಾಗಿ ಆದಿತ್ಯ ಎಲ್ -1 ಏಳು ವಿಭಿನ್ನ ಪೇಲೋಡ್‌ಗಳನ್ನು ಹೊಂದಿದೆ. ಅವುಗಳ ಪೈಕಿ ನಾಲ್ಕು ಸೂರ್ಯನ ಬೆಳಕನ್ನು ಪರಿಶೀಲಿಸಿದೆ  ಮತ್ತು ಇತರ ಮೂರು ಪ್ಲಾಸ್ಮಾ ಮತ್ತು ಕಾಂತೀಯ ಕ್ಷೇತ್ರಗಳ ಇನ್-ಸಿಟು ನಿಯತಾಂಕಗಳನ್ನು ಅಳೆಯಲಿದೆ ಈ ಉಪಕರಣಗಳು ಸೌರ ಜ್ವಾಲೆಗಳು ಮತ್ತು ಕರೋನಲ್ ಮಾಸ್ ಎಜೆಕ್ಷನ್‌ಗಳಂತಹ ಸೌರ ಚಟುವಟಿಕೆಗಳ ಡೇಟಾವನ್ನು ಒದಗಿಸಲಿದೆ

Read More

ಬೆಂಗಳೂರು ಗ್ರಾಮಾಂತರ: ವ್ಯಕ್ತಿಯೊಬ್ಬನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ  ಘಟನೆ ರಾಜ್ಯ ಗಡಿಭಾಗ ತಮಿಳುನಾಡಿನ ಸಿಪ್ಕಾಟ್ ಬಳಿಯ ಬೇಗಿಪಲ್ಲಿಯಲ್ಲಿ  ರಾಜ್ಯ ಗಡಿಭಾಗ ತಮಿಳುನಾಡಿನ ಸಿಪ್ಕಾಟ್ ಬಳಿಯ ಬೇಗಿಪಲ್ಲಿಯಲ್ಲಿ ನಡೆದಿದೆ. https://ainlivenews.com/cm-siddaramaiah-approves-increase-in-honorarium-for-guest-lecturers/ ಬೇಗಿಪಲ್ಲಿಯ ನಿವಾಸಿ ತಿಮ್ಮರಾಜು (36) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಆತನನ್ನು ಮೂವರು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋದ ವೇಳೆ ತಪ್ಪಿಸಿಕೊಳ್ಳಲು ಹೋಟೆಲ್ ಒಂದರ ಒಳಗೆ ಹೋಗಿದ್ದಾನೆ. ದುಷ್ಕರ್ಮಿಗಳು ಆದರೂ ಆತನನ್ನು ಬೆನ್ನಟ್ಟಿ ಮಾರಕಾಸ್ತ್ರಗಳಿಂದ 25 ಬಾರಿ ಚುಚ್ಚಿದ್ದಾರೆ. ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತಿಮ್ಮರಾಜು ಹತ್ಯೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸ್ಥಳಕ್ಕೆ ಸಿಪ್ಕಾಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೆ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಿದ್ದಾರೆ. https://ainlivenews.com/dcm-shouts-loudly-again-in-the-congress-the-fight-is-getting-blasted-before-the-sankranti-festival/ ಅವರು ಇಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಅವರ ಬೇಡಿಕೆಗಳ ಕುರಿತು ಚರ್ಚಿಸಿದರು. ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು. ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5…

Read More

ಬೆಂಗಳೂರು: ಕಾಂಗ್ರೆಸ್‌ನಲ್ಲಿ (Congress) ಡಿಸಿಎಂ (DCM) ಕೂಗು ಜೋರಾಗಿದ್ದು, ಆಕಾಂಕ್ಷಿಗಳೆಲ್ಲ ಒಟ್ಟಾಗಿ ದೆಹಲಿ ಅಂಗಳದಲ್ಲಿ ರಾಜಕೀಯ ಪಟ್ಟು ಹಿಡಿಯಲು ತೀರ್ಮಾನ ಮಾಡಿದ್ದಾರೆ. ರಾಮ ಮಂದಿರ (Ram Mandir) ನಿರ್ಮಾಣದ ಎಫೆಕ್ಟ್ ತಡೆಯಲು ಡಿಸಿಎಂ ಹುದ್ದೆ ರಾಜ್ಯದಲ್ಲಿ ಅನಿವಾರ್ಯ ಎಂಬ ವಾದ ಮಂಡಿಸಲು ಕೈ ನಾಯಕರು ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಕಾಂಗ್ರೆಸ್‌ನಲ್ಲಿ ಡಿಸಿಎಂ ಕೂಗು ಹಿಂದೆ ಜೋರಾಗಿ ತಣ್ಣಗೆ ಆಗಿತ್ತು. ಆದರೆ ಈ ಬಾರಿ ಮತ್ತಷ್ಟು ಜೋರಾಗುವ ಸಾಧ್ಯತೆ ಇದ್ದು ಸಂಕ್ರಾಂತಿಗೆ ಮೊದಲೇ ದೆಹಲಿಗೆ ಡಿಸಿಎಂ ದಾಳ ಉರುಳಿಸಿಲು ಪ್ರತ್ಯೇಕ ನಿಯೋಗ ಕೊಂಡೊಯ್ಯುವ ಲೆಕ್ಕಾಚಾರವನ್ನು ಕೈ ನಾಯಕರು ಹಾಕಿಕೊಂಡಿದ್ದಾರೆ.‌ ಹೆಚ್ಚುವರಿ ಡಿಸಿಎಂ ಹುದ್ದೆಯನ್ನು ಹೈ ಕಮಾಂಡ್ ಬಳಿಯೆ ನೇರವಾಗಿ ಕ್ಲೈಮ್ ಮಾಡಲು ಸಚಿವರ ಗುಂಪು ಸಿದ್ಧವಾಗಿದೆ. ಅದರ ಪೂರ್ವ ತಯಾರಿಯ ಭಾಗವಾಗಿ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಚಿವರ ಸಭೆ ನಡೆದಿದೆ ಎನ್ನಲಾಗುತ್ತಿದೆ. ರಾಮ ಮಂದಿರ ನಿರ್ಮಾಣದ ಎಫೆಕ್ಟ್ ತಡೆಯಲು ಡಿಸಿಎಂ ಹುದ್ದೆ ರಾಜ್ಯದಲ್ಲಿ ಅನಿವಾರ್ಯ ಎಂಬ ವಾದವನ್ನು ಹೈಕಮಾಂಡ್‌ ನಾಯಕರ…

Read More

ಜರ್ಮನ್ (GERMAN) ಮೂಲದ ಖ್ಯಾತ ಹಾಲಿವುಡ್ ನಟ ಕ್ರಿಶ್ಚಿಯನ್ ಆಲಿವರ್ (CHRISTIAN OLIVER) ವಿಮಾನ ದುರ್ಘಟನೆಯಲ್ಲಿ ನಿಧನರಾಗಿದ್ದಾರೆ. ಆಲಿವರ್ ಮತ್ತು ಅವರ ಇಬ್ಬರು ಪುತ್ರಿಯರು ಪ್ರವಾಸಕ್ಕೆಂದು ಸಣ್ಣ ವಿಮಾನವೊಂದರಲ್ಲಿ ಪ್ರಯಾಣಿಸುತ್ತಿದ್ದರು. ಅದು ಅಪಘಾತಕ್ಕೀಡಾಗಿ ಕೆರಿಬಿಯನ್ ಸಮುದ್ರಕ್ಕೆ ಬಿದ್ದಿತ್ತು ಶುಕ್ರವಾರ ಕೆರಿಬಿಯನ್ ಸಮುದ್ರದ ಮಧ್ಯ ಇಂಥದ್ದೊಂದು ಘಟನೆ ನಡೆದಿದ್ದು, 51 ವರ್ಷದ ಕ್ರಿಶ್ಚಿಯನ್ ಆಲಿವರ್ ಹಾಗೂ ಹತ್ತು ವರ್ಷದ ಮತ್ತು ಹನ್ನೆರಡು ವರ್ಷದ ಇಬ್ಬರು ಪುತ್ರಿಯರು ನಿಧನರಾಗಿದ್ದಾರೆ. ಜೊತೆಗೆ ವಿಮಾನ ಪೈಲೆಟ್ ರಾಬರ್ಟ್ ಕೂಡ ಸಾವನ್ನಪ್ಪಿದ್ದಾರೆ ಮೂಲಗಳ ಪ್ರಕಾರ ನಟ ಪ್ರಯಾಣಿಸುತ್ತಿದ್ದ ಲಘು ವಿಮಾನ ಸೇಂಟ್ ವಿನ್ಸೆಂಟ್ ಮತ್ತು ಕೆರಿಬಿಯನ್ ಗ್ರೆನಡೈನ್ಸ್ ದ್ವೀಪಗಳ ಭಾಗದ ಪ್ಯಾಗೆಟ್ ಫಾರ್ಮ್ ನಿಂದ ನಿರ್ಗಮಿಸಿದ್ದರು. ಈ ವಿಮಾನವು ದ್ವೀಪ ಸೆಂಟ್ ಲೂಸಿಯಾದಲ್ಲಿ ಲ್ಯಾಂಡ್ ಆಗಬೇಕಿತ್ತು. ವಿಮಾನ ಟೇಕಾಫ್ ಆಗುತ್ತಿದ್ದಂತೆಯೇ ಸಮಸ್ಯೆ ಕಾಣಿಸಿಕೊಂಡಿದೆ. ವಿಮಾನ ನಿಯಂತ್ರಣಕ್ಕೆ ಬಾರದೇ ಪತನವಾಗಿದೆ.

Read More

ಬೆಂಗಳೂರು: ಗ್ಯಾರಂಟಿ (Congress Guarantee) ಗಿಫ್ಟ್ ಕೊಟ್ಟ ಸರ್ಕಾರದಿಂದ ನಯಾ ಪ್ಲ್ಯಾನ್‌ ಸಿದ್ದವಾಗಿದೆ. ಮಹಿಳೆಯರಿಗೆ ಗೃಹಲಕ್ಷ್ಮಿ (Gruhalakshmi) ಗಿಫ್ಟ್ ಕೊಟ್ಟ ಸರ್ಕಾರ ಅದೇ ದುಡ್ಡನ್ನು ಮಹಿಳೆಯರು ಚಿಟ್‌ಫಂಡ್‌ನಲ್ಲಿ (Chit Fund) ಹೂಡಿಕೆ ಮಾಡುವ ಬೊಂಬಾಟ್ ಸ್ಕೀಮ್‌ನ್ನು ತರಲು ರೆಡಿ ಮಾಡಿದೆ. ಹೌದು. ಕೇರಳ ಮಾದರಿಯ ನಯಾ ಚಿಟ್‌ಫಂಡ್‌ನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಎಂಎಸ್‌ಐಎಲ್‌ನಿಂದ ಏಪ್ರಿಲ್‌ನಲ್ಲಿ ಈ ನಯಾ ಸ್ವರೂಪದ ಚಿಟ್‌ಫಂಡ್ ರಾಜ್ಯದ್ಯಾಂತ ಜಾರಿಯಾಗಲಿದೆ. ಪ್ರಮುಖವಾಗಿ ಮಹಿಳೆಯರನ್ನು ಈ ಚಿಟ್‌ಫಂಡ್‌ನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ https://ainlivenews.com/not-open-for-now-yellow-line-metro-big-disappointment-for-techies/ ಹೇಗಿರಲಿದೆ ಚಿಟ್‌ ಫಂಡ್‌? ಮಹಿಳೆಯರಿಗೆ ಗೃಹಲಕ್ಷ್ಮಿಯ ಯೋಜನೆಯಿಂದ ಹಣ ಬರುತ್ತಿರುವುದರಿಂದ ಸರ್ಕಾರಿ ಸ್ವಾಮ್ಯದ ಎಂಎಸ್‌ಐಎಲ್ ಚಿಟ್‌ಫಂಡ್ ಉನ್ನತೀಕರಣಕ್ಕೆ ಪ್ಲ್ಯಾನ್‌ ಮಾಡಲಾಗಿದೆ. ಕೇರಳದಲ್ಲಿ 40 ಸಾವಿರ ಕೋಟಿ ರೂ. ವಹಿವಾಟು ನಡೆಯುತ್ತಿದ್ದು ಕರ್ನಾಟಕದಲ್ಲಿ ಸದ್ಯ ಚಿಟ್‌ಫಂಡ್ ಉದ್ಯಮ 300 ಕೋಟಿ ರೂ, ಮಾತ್ರವಿದೆ. 10 ಸಾವಿರ ಕೋಟಿ ರೂ. ಲಾಭದಾಯಕವಾಗಿ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ.  ಗ್ರಾಮೀಣ ಭಾಗದಲ್ಲಿರುವ ಸ್ವಸಹಾಯ ಸಂಘಗಳ ಮೂಲಕ ಚಿಟ್‌ಫಂಡ್ ಉದ್ಯಮ…

Read More

ತುಮಕೂರು: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ದೇಶದ ಗಣ್ಯರಿಗೆ ಶ್ರೀ ರಾಮತೀರ್ಥ ಟ್ರಸ್ಟ್ ಆಹ್ವಾನ ನೀಡುತ್ತಿದೆ. ಈ ಮಧ್ಯೆ ಬೆಳ್ಳಾವಿ ಕಾರದ ಮಠದ ಸ್ವಾಮೀಜಿ ಶ್ರೀ ವೀರಬಸವ ಕಾರದ ಮಹಾಸ್ವಾಮೀಜಿಗಳಿಗೆ ಕೂಡ ಆಹ್ವಾನ ನೀಡಲಾಗಿದೆ. ಉದ್ಘಾಟನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುವಂತೆ ಆಹ್ವಾನ ನೀಡಿದ್ದು  ಮಠಕ್ಕೆ ಆಹ್ವಾನ‌ ಕಳುಹಿಸಿದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಹೆಸರಿನಲ್ಲಿ ಬಂದ ಆಹ್ವಾನ. ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪತ್ರದಲ್ಲಿ ಉಲ್ಲೇಖವಾಗಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆ ಕಾರ್ಯಕ್ರಮಕ್ಕೆ ತೆರಳಲಿರುವ ಶ್ರೀಗಳು.

Read More

ಕೊಪ್ಪಳ ತಾಲೂಕು ಹುಲಗಿ ಗ್ರಾಮ ಪಂಚಾಯತ್ದಲ್ಲಿ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿ ಸಭೆ ಮಾಡಲಾಯಿತು.ಸಭೆಯಲ್ಲಿ ಚರ್ಚಿಸಿದ ವಿಷಯಗಳನ್ನು ನಾವು ನೋಡೋಣ ಹಾಗೆ  ಹಿಂದಿನ ಸಭೆಯ ನಡುವಳಿಯನ್ನು ಕೂಡ ಸಭೆಯಲ್ಲಿ ಮಂಡಿಸಲಾಯಿತು. 1) ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ 18 ವರ್ಷದೊಳಗಿನ ಮಕ್ಕಳ ಅಂಕಿ ಸಂಖ್ಯೆಯ ಬಗ್ಗೆ. 2)ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಮರಳಿ ಬರಲು ಸಭೆಯಲ್ಲಿ ಕಮಿಟಿ ಸದಸ್ಯರು ಮನೆ ಬೇಟಿ ಮಾಡಲು ದಿನಾಂಕವನ್ನು ನಿಗದಿಪಡಿಸಿ ಸದಸ್ಯರು ಮನೆ ಬೇಟಿ ಮಾಡಲು ತೀರ್ಮಾನಿಸಲಾಯಿತು. ಮತ್ತು ಬಾಲ್ಯ ವಿವಾಹ ವಾದರೆ ಮಕ್ಕಳ್ ಸಹಾಯ ವಾಣಿ 1098/112 ಗೆ ಕರೆಮಾಡಲು ತೀರ್ಮಾನಿಸಲಾಯಿತು. 3)ಹುಲಗಿ ದೇವಸ್ಥಾನ ದಲ್ಲಿ ಮಂಗಳವಾರ ಮತ್ತು ಶುಕ್ರವಾರ, ಹುಣ್ಣಿಮೆ ದಿನಗಳಲ್ಲಿ. 1)ಜನೆವರಿ -9 & 25 – 2024 ರಂದು. 2) ಫೆಬ್ರವರಿ –6 & 16 -2024 ರಂದು. 3) ಮಾರ್ಚ್ -5-2024 ರಂದು, ಬಾಲಕಾರ್ಮಿಕವನ್ನು ತಡೆಗಟ್ಟಲು ಬಾಲಕಾರ್ಮಿಕರ ಅಧಿಕಾರಿಗಳಿಗೆ ಮತ್ತು ಕಾವಲು ಸಮಿತಿಯ ಸದಸ್ಯರು ರೇಡ್ ಮಾಡಲು…

Read More