ಚಿಕ್ಕಬಳ್ಳಾಪುರ: ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಜನವರಿ 13 ರಂದು ಬೃಹತ್ ಉದ್ಯೋಗ ಮತ್ತು ಸಾಲ ಮೇಳ ಆಯೋಜಿಸಲಾಗಿದ್ದು, 70 ಕ್ಕೂ ಅಧಿಕ ಕಂಪೆನಿಗಳು ಪಾಲ್ಗೊಳ್ಳಲಿರುವ ಈ ಮೇಳ ಯುವ ಜನಾಂಗದ ಸ್ವಾವಲಂಬಿ ಬದುಕಿಗೆ ಭದ್ರ ಬುನಾದಿಯಾಗಲಿದೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಹೇಳಿದ್ದಾರೆ. ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೃಹತ್ ಉದ್ಯೋಗ ಮೇಳದ ಜೊತೆಗೆ ಶೈಕ್ಷಣಿಕ ಸಾಲ, ನವೋದ್ಯಮಗಳಿಗೆ ಸಾಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾಯಕ ಸಂಸ್ಕೃತಿಗೆ ಒತ್ತು ನೀಡಿದ್ದು, ದುಡಿಯುವ ಕೈಗಳಿಗೆ ಕೆಲಸ ನೀಡಬೇಕು ಎಂಬ ಆಶಯ ಹೊಂದಿದ್ದು, ಇದನ್ನು ಸಾಕಾರಗೊಳಿಸಲು ಪ್ರಯತ್ನಿಸಲಾಗುವುದು ಎಂದರು.ಕಳೆದ 2019 ರ ಅಂಕಿ ಅಂಶಗಳಂತೆ ದೇಶದಲ್ಲಿ ನಿರುದ್ಯೋಗ ಪ್ರಮಾಣ 7.7% ಕ್ಕೆ ಏರಿಕೆಯಾಗಿದ್ದು, 45 ವರ್ಷಗಳಲ್ಲೇ ಇದು ಅತ್ಯಧಿಕವಾಗಿತ್ತು. ದುರಂತವೆಂದರೆ 2023 ರ ನವೆಂಬರ್ ನಲ್ಲಿ ಈ ಪ್ರಮಾಣ 10.05% ಕ್ಕೆ ಏರಿಕೆಯಾಗಿದೆ. ಗ್ರಾಮೀಣ ಉದ್ಯೋಗ ದರ 6.2% ರಿಂದ…
Author: AIN Author
ವಿಜಯಪುರ : ವಿಜಯಪುರ ಮೂಲದ ಕನ್ನಡಿಗ ನವೀನ್ ಹಾವಣ್ಣನವರ ಅಮೇರಿಕಾದಲ್ಲಿ ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದಾರೆ. ಅಮೇರಿಕಾದ ನ್ಯೂಯಾರ್ಕ್ ರಾಜ್ಯದ ರೋಚೆಸ್ಟರ್ ಜಿಲ್ಲೆಯ ಪೀಟ್ಸ್ ಫೋರ್ಡ್ ಪ್ರದೇಶದ ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದಾರೆ. ನವೀನ್ ಅವರು ಪೀಟ್ಸ್ ಫೋರ್ಡ್ ಪ್ರದೇಶದ ಕೌನ್ಸಿಲರ್ ಆಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. https://ainlivenews.com/congress-workers-are-innocent-siddaramaiah-is-trying-to-divert-them-eshwarappa/ ಕೌನ್ಸಿಲರ್ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದಿಂದ ನವೀನ್ ಸ್ಪರ್ಧೆ ಮಾಡಿದ್ದರು. ನವೀನ್ ಅವರು ರಿಪಬ್ಲಿಕನ್ ಪಾರ್ಟಿ ಅಭ್ಯರ್ಥಿ ಎದುರು 33 ಮತಗಳ ಅಂತರಿಂದ ಗೆಲುವು ಕಂಡಿದ್ದಾರೆ. ನಾಲ್ಕು ವರ್ಷಗಳ ಅವಧಿಗೆ ಅವರು ಆಯ್ಕೆಯಾಗಿದ್ದಾರೆ. ನವೀನ್ ಹಾವಣ್ಣವರ ಅವರು 2009-10ರಲ್ಲಿ ಅಮೇರಿಕಾಕ್ಕೆ ತೆರಳಿದ್ದರು. ಕಳೆದ 14 ವರ್ಷಗಳಿಂದ ಅಮೇರಿಕಾದಲ್ಲಿಯೇ ವಾಸವಾಗಿದ್ದಾರೆ. ಪತ್ನಿ ಕ್ಯಾಥರಿನ್ ಹಾಗೂ ಇಬ್ಬರು ಮಕ್ಕಳೊಂದಿಗೆ ಅಮೇರಿಕಾದಲ್ಲಿ ನವೀನ್ ವಾಸವಿದ್ದಾರೆ.
ಶಿವಮೊಗ್ಗ : ಕಾಂಗ್ರೆಸ್ ಕಾರ್ಯಕರ್ತರು ಮುಗ್ದರು. ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕುಟುಕಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರಿಗೆ, ರಾಮ ಭಕ್ತರಿಗೆ ಕಿರುಕುಳ ನೀಡಲು ಹೀಗೆ ಮಾಡಿದ್ದಾರೆ. ಸ್ವಾಭಿಮಾನದ ಭಾರತ ಕಟ್ಟುವ ಕನಸೇ ಕಾಂಗ್ರೆಸ್ಗೆ ಇರಲಿಲ್ಲ. ಸ್ವಾಭಿಮಾನದ ಭಾರತ ಕಟ್ಟುವಲ್ಲಿ 70 ವರ್ಷ ಆಳಿದ ಕಾಂಗ್ರೆಸ್ ವಿಫಲ ಆಯ್ತು ಎಂದು ಛೇಡಿಸಿದರು. https://ainlivenews.com/end-of-congress-party-cm-siddaramaiah-rejects-hdds-statement/ ಕಾಂಗ್ರೆಸ್ನಿಂದ ಪೋಸ್ಟರ್ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಸಂತೋಷ್ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ ಅಂತ ಬಂದಿದೆ. ಕೋರ್ಟ್ ಬಗ್ಗೆ ಇವರಿಗೆ ಗೌರವ ಇಲ್ಲ. ನನ್ನ ಬಳಿ ಬರಲಿ ನಾನು ತೋರಿಸುತ್ತೇನೆ. ಕೋರ್ಟ್ ಆದೇಶವನ್ನೇ ಮೀರಿ ಸಿಎಂ ಸಿದ್ದರಾಮಯ್ಯ ಹಿಜಾಬ್ ಬಗ್ಗೆ ಮಾತನಾಡಿದರು ಎಂದು ತಿರುಗೇಟು ನೀಡಿದರು. ರಾಮಮಂದಿರ ಉದ್ಘಾಟನೆಗೆ ನಮಗೆ ಆಹ್ವಾನ ಬಂದಿಲ್ಲ ಎಂಬ ವಿಚಾರದ ಬಗ್ಗೆ ಮಾತನಾಡಿ, ಕೋಟ್ಯಂತರ ಜನ ದೇಣಿಗೆ ಕೊಟ್ಟಿದ್ದಾರೆ. ಇವರಿಬ್ಬರೇ ಏನು ಕೊಟ್ಟಿಲ್ಲ. ಆವಾಗ ಬಿಜೆಪಿಯಲ್ಲಿದ್ದರು…
ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ವಿಚಾರವನ್ನು ಬಿಜೆಪಿ ನಾಯಕರು ವಿನಾಕಾರಣ ದೊಡ್ಡದನ್ನಾಗಿ ಮಾಡಿ ಲೋಕಸಭಾ ಚುನಾವಣೆ ಹತ್ತಿರವಾಗಿರುವ ಹಿನ್ನೆಲೆಯಲ್ಲಿ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಹಳೆಯ ಮತ್ತು ಬಿಟ್ಟುಹೋಗಿದ್ದ ಪ್ರಕರಣಗಳ ಆಧಾರದಲ್ಲಿ ಶ್ರೀಕಾಂತ್ ಹಾಗೂ ಇತರರನ್ನು ಬಂಧಿಸಲಾಗಿದ್ದು ಅದರಲ್ಲಿ 32 ವರ್ಷಗಳ ಹಿಂದಿನ ಕರಸೇವೆಯ ಪ್ರಕರಣ ಸಹ ಸೇರಿದೆ. ಬಂಧಿತ 36 ಜನರಲ್ಲಿ ಬೇರೆಯವರೂ ಕೂಡ ಹಿಂದೂಗಳಿದ್ದಾರೆ, ಅವರ ಬಗ್ಗೆ ಬಿಜೆಪಿ ಯಾಕೆ ಪ್ರತಿಭಟನೆ ನಡೆಸುತ್ತಿಲ್ಲ? ಅವರ ಪೈಕಿ 10 ಮುಸಲ್ಮಾನರಿದ್ದು ಬಂಧಿಸಿದ್ದು ಒಬ್ಬ ಮುಸ್ಲಿಂ ಸಮುದಾಯದ ಇನ್ಸ್ ಪೆಕ್ಟರ್ ಅಂತ ಹೇಳೋದ್ರಲ್ಲಿ ಏನಾದರೂ ಅರ್ಥವಿದೆಯಾ? ಎಂದು ಲಾಡ್ ಪ್ರಶ್ನಿಸಿದರು. ಚುನಾವಣೆ ಹತ್ತಿರವಾದಾಗ ಬಿಜೆಪಿ ನಾಯಕರು ಇಂಥ ಸಂದರ್ಭಗಳಿಗಾಗಿ ತವಕಿಸಿ ವೋಟುಗಳ ಧ್ರುವೀಕರಣಕ್ಕೆ ಬಳಸಿಕೊಳ್ಳುತ್ತಾರೆ. ವಿಷಯದ ಬಗ್ಗೆ ಗೃಹ ಸಚಿವ ಮತ್ತು ಮುಖ್ಯಮಂತ್ರಿಯವರು ಈಗಾಗಲೇ ಪ್ರತಿಕ್ರಿಯೆ ನೀಡಿರುವುದರಿಂದ ತಾನೇನೂ ಹೆಚ್ಚಿಗೆ ಹೇಳಬೇಕಿಲ್ಲ ಎಂದು ಸಚಿವ ಹೇಳಿದರು.
ಬೆಂಗಳೂರು: ಚಿನ್ನದ ಕತ್ತಿ ಶ್ರೀರಾಮನಿಗೆ ಅರ್ಪಣೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ತಿಳಿಸಿದರು. ನಗರದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಹಿಂದೆ ಪ್ರಧಾನಿ ಆಗಿದ್ದಾಗ ನನಗೆ ಒಮನ್ ದೇಶದಲ್ಲಿ ಚಿನ್ನದ ಕತ್ತಿಯನ್ನು ಉಡುಗೋರೆಯಾಗಿ ನೀಡಿದ್ದರು. ಅದನ್ನು ತೆರಿಗೆ ಕಟ್ಟಿ ಬೆಂಗಳೂರಿಗೆ ತರಿಸಿಕೊಂಡು ಶ್ರೀ ಕಾರಂಜಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿರುವ ಶ್ರೀರಾಮ ದೇವರಿಗೆ ಅರ್ಪಿಸಿದೆ. ಆ ಕತ್ತಿಯನ್ನು ನಾನೇ ಇಟ್ಟುಕೊಳ್ಳಬಹುದಿತ್ತು. ಆದರೆ, ದೈವಸೇವೆ ನಮ್ಮ ನಂಬಿಕೆ. ಅದನ್ನೇ ಮಾಡಿದೆ ಎಂದು ಅವರು ಹೇಳಿದರು. https://ainlivenews.com/whatever-dev-goudru-says-to-me-is-a-blessing-cm-siddaramaiah/ ಬಳಿಕ, ಅಲ್ಲಿ ಮೋದಿ ಅವರು ಶ್ರೀರಾಮ ಅಂತಾರೆ. ಉಪವಾಸ, ನದಿಸ್ನಾನ, ತಣ್ಣೀರು ಸ್ನಾನ ಇವೆಲ್ಲ ಮಾಡುತ್ತಿದ್ದಾರೆ. ಇಲ್ಲಿ ಇವರಿಗೆ ಸಿದ್ದರಾಮ ಮಾತ್ರ. ಸಿದ್ದರಾಮ ಹೆಸರಿನಲ್ಲಿ NDA ಸೋಲಿಸಿ 20 ಸೀಟು ಗೆಲ್ಲುತ್ತೇವೆ ಅಹಂನಿಂದ ಇವೆಲ್ಲ ಸೃಷ್ಟಿ ಮಾಡ್ತಿದ್ದಾರೆ. 20 ಸೀಟು ಗೆಲ್ಲೋದು ಎಂದರೆ ಕನಸು ಮಾತ್ರ. ಈ ಬಾರಿ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಎಲ್ಲರ ನಿರೀಕ್ಷೆ ಮೀರಿ ಜನರು ಎನ್ ಡಿಎ ಮೈತ್ರಿಗೆ…
ಬೆಂಗಳೂರು: ಕೋಮುವಾದಿ ಕಿರೀಟ ಧರಿಸಿಕೊಂಡ ದೇವೇಗೌಡ್ರು ಹತಾಶೆಯಲ್ಲಿದ್ದಾರೆ,ಅವರ ಮಾತು ನನಗೆ ಆಶೀರ್ವಾದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು,ನನ್ನ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ನಮ್ಮ ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನಿಸಿದರೆ…
ಮಂಗಳೂರು: ಜಾನಪದ ತಜ್ಞ, ಕವಿ, ಕಥೆಗಾರ. ಅಮೃತ ಸೋಮೇಶ್ವರ ಅವರು ಇಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.ಅಮೃತ ಸೋಮೇಶ್ವರ ಅವರಿಗೆ 89 ವರ್ಷ ವಯಸ್ಸಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಕನ್ನಡ, ತುಳು ಸಾಹಿತಿ,ಯಕ್ಷಗಾನ ಪ್ರಸಂಗಕರ್ತರಾಗಿದ್ದ ಇವರು, ಸಮಾಜಮುಖಿ ಚಂತನೆಯುಳ್ಳ ಸಹೃದಯಿಯಾಗಿದ್ದರು. ಮಂಗಳೂರು ತಾಲೂಕಿನ ಸೋಮೇಶ್ವರ ಗ್ರಾಮದ ಅಡ್ಕ ನಿವಾಸಿಯಾಗಿರುವ ಅಮೃತ ಸೋಮೇಶ್ವರ ಅವರು 1935 ಸೆಪ್ಟೆಂಬರ್ 27 ರಂದು ಜನಿಸಿದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅಮೃತರು, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವರೆಗೆ ಕಲಿತರು. ನಂತರ ಆನಂದಾಶ್ರಮ ಪ್ರೌಢಶಾಲೆಯಲ್ಲಿ 6ನೇ ತರಗತಿಯ ಕಲಿಕೆ ಮುಂದುವರಿಸಿದ ಅವರು 1954ರಲ್ಲಿ ಎಸೆಸೆಲ್ಸಿ ಉತ್ತೀರ್ಣರಾದರು. ಸೋಮೇಶ್ವರ ಅವರು ಅನೇಕ ಕೃತಿಗಳನ್ನು ರಚಿಸಿದ್ದರು. ಸಾಹಿತ್ಯದ ಹೆಚ್ಚಿನ ಒಲವು ಹೊಂದಿದ್ದ ಇವರು ಕಥೆ ಕವನಗಳ ರಚನೆ ಜೊತೆಗೆ ಯಕ್ಷಗಾನ ಪ್ರಸಂಗವನ್ನು ಕೂಡಾ ರಚಿಸಿದ್ದರು. ಸಾಕಷ್ಟು ಧ್ವನಿಸುರುಳಿಗಳಿಗೆ ಸಾಹಿತ್ಯವನ್ನು ಒದಗಿಸಿದ ಹಿರಿಮೆ ಇವರಿಗಿದೆ.
ಬೆಂಗಳೂರು: ನೂರಾರು ವರ್ಷಗಳ ಕಾಲ ನಮ್ಮ ದೇಶವನ್ನು ಆಡಳಿತ ನಡೆಸಿದ ಬ್ರಿಟಿಷರು ಕಾಂಗ್ರೆಸ್ ಪಕ್ಷಕ್ಕೆ ‘ಒಡಕನ್ನು ಮೂಡಿಸಿ ಆಡಳಿತ ನಡೆಸುವ ನೀತಿ’ಯನ್ನು ಕೊಟ್ಟು ಹೋಗಿದ್ದಾರೆ. ಕಾಂಗ್ರೆಸ್ಸಿಗರು ಅದರ ದುರುಪಯೋಗವನ್ನು ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು. https://ainlivenews.com/jetlag-party-in-pub-even-after-expiry-why-didnt-police-give-notice/ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ‘ಬಲವರ್ಧನೆಗಾಗಿ ಭೀಮ ಸಮಾವೇಶ’ದಲ್ಲಿ ಅವರು ಮಾತನಾಡಿದರು. ಇದೊಂದು ಚಿಂತನ ಮಂಥನ ಕಾರ್ಯಕ್ರಮ ಎಂದರು. ನೆಹರೂ 17 ವರ್ಷ, ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ಸೇರಿ ಕಾಂಗ್ರೆಸ್ ಪಕ್ಷವು 55- 60 ವರ್ಷ ದೇಶವನ್ನಾಳಿದೆ. ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ನೆಹರೂ ಕುಟುಂಬದ ಹಾಗೂ ಕಾಂಗ್ರೆಸ್ನ ರಬ್ಬರ್ ಸ್ಟಾಂಪ್ ಆಗಿದ್ದರು ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ಗರೀಬಿ ಹಠಾವೋ ಮೂಲಕ ದಲಿತರ ಏಳಿಗೆ ಆಗಲಿಲ್ಲ. ಬಾಬಾಸಾಹೇಬರ ಹೆಸರು ಹೇಳಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಪಕ್ಷವು ಹಿಂದೆ ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನು ಸೋಲಿಸಿತ್ತು. ಅವರ ಅಂತ್ಯಸಂಸ್ಕಾರಕ್ಕೆ ಸ್ಥಳವನ್ನೂ ಕೊಟ್ಟಿರಲಿಲ್ಲ ಎಂದು…
ಮುಂಬೈ: 15 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಆರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್ಮೆಂಟ್ ಲಿಮಿಟೆಡ್ನ (Aarka Sports and Management Limited) ಮಿಹಿರ್ ದಿವಾಕರ್ ಮತ್ತು ಸೌಮ್ಯ ವಿಶ್ವಶ್ ವಿರುದ್ಧ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ (MS Dhoni) ರಾಂಚಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ (Criminal Case) ದಾಖಲಿಸಿದ್ದಾರೆ. ರಾಂಚಿಯಲ್ಲಿ 2017ರ ಕ್ರಿಕೆಟ್ ಅಕಾಡೆಮಿ ಒಪ್ಪಂದಕ್ಕೆ ಸಂಬಂಧಿಸಿ ಆಗಿರುವ ವಂಚನೆ ವಿರುದ್ಧ ಆರ್ಕಾ ಸ್ಪೋರ್ಟ್ಸ್ ಮ್ಯಾನೇಜ್ಮೆಂಟ್ನ ಇಬ್ಬರು ಅಧಿಕಾರಿಗಳ ವಿರುದ್ಧ ಧೋನಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಿವಾಕರ್ ಒಪ್ಪಂದದಲ್ಲಿದ್ದ ಷರತ್ತುಗಳನ್ನು ಪಾಲಿಸಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಏನಿದು ಷರತ್ತು? – ಉಲ್ಲಂಘನೆಯಾಗಿದ್ದು ಹೇಗೆ? ದಿವಾಕರ್ ಅವರು ಜಾಗತಿಕವಾಗಿ ಕ್ರಿಕೆಟ್ ಅಕಾಡೆಮಿಯನ್ನು ನಡೆಸಲು 2017ರಲ್ಲಿ ಧೋನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದ್ರೆ ಒಪ್ಪಂದದಲ್ಲಿ ಉಲ್ಲೇಖಿಸಲಾದ ಷರತ್ತುಗಳನ್ನ ಪಾಲಿಸಲಿಲ್ಲ. ಅಲ್ಲದೇ ಆರ್ಕಾ ಸ್ಪೋರ್ಟ್ಸ್ನ ಶುಲ್ಕ ಮತ್ತು ಷೇರುಗಳನ್ನೂ ಧೋನಿ ಅವರಿಗೆ ಪಾವತಿಸಿಲ್ಲ ಎಂದು ಹೇಳಲಾಗಿದೆ ಒಪ್ಪಂದಕ್ಕೆ…
ಬೆಂಗಳೂರು: ರಾಜ್ಯದಲ್ಲಿ ಇಂದು 328 ಮಂದಿಯಲ್ಲಿ ಕೊರೊನಾ ಪಾಸಿಟಿವ್ (Corona Positive) ಕಾಣಿಸಿಕೊಂಡಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ನಲ್ಲಿ ಇಂದು ಒಟ್ಟು 7,205 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 328 ಮಂದಿಯಲ್ಲಿ ಪಾಸಿಟಿವ್ ಇರುವುದು ಬೆಳಕಿಗೆ ಬಂದಿದೆ. ಬೆಂಗಳೂರು ನಗರದಲ್ಲಿ 163 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇಂದು 409 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 1,159 ಸಕ್ರೀಯ ಕೇಸ್ಗಳಿದ್ದು, 1,087 ಮಂದಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. 72 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 9 ಮಂದಿ ಐಸಿಯುನಲ್ಲಿದ್ದರೆ, ಮೂವರು ಐಸಿಯು ಜೊತೆ ವೆಂಟಿಲೇಟರ್ ಸಪೋರ್ಟ್ನಲ್ಲಿದ್ದಾರೆ. ಇನ್ನು 51 ಮಂದಿ ಜನರಲ್ ಬೆಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಬಿಟ್ಟರೆ ಮೈಸೂರಿನಲ್ಲಿ ಅತಿ ಹೆಚ್ಚು ಸಕ್ರೀಯ ಪ್ರಕರಣ ದಾಖಲಾಗಿವೆ. ಮೈಸೂರು 26, ಬೆಂಗಳೂರು ಗ್ರಾಮೀಣ 18, ತುಮಕೂರು 15, ಹಾಸನ 12 ಹಾಗೂ ಚಿಕ್ಕಬಳ್ಳಾಪುರದಲ್ಲಿ 10 ಸಕ್ರೀಯ ಪ್ರಕರಣಗಳಿವೆ.