Author: AIN Author

ದೆಹಲಿ : ಕೋಟ್ಯಂತರ ರಾಮಭಕ್ತರ ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯನ್ನು ಕಣ್ತುಂಬಿಕೊಂಡು ಪುನೀತರಾಗಲು ದೇಶಾದ್ಯಂತ ಹಿಂದೂಗಳು ಕಾತರರಾಗಿದ್ದಾರೆ. ಗಣ್ಯಾತಿಗಣ್ಯರ ಸಮಕ್ಷಮದಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದು, ಆ ಮಹತ್ವದ ದಿನ ವಿಶೇಷ ವ್ರತ ಕೈಗೊಳ್ಳಲಿದ್ದಾರೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಅದ್ಧೂರಿಯಾಗಿ ನೆರವೇರಲಿದೆ. ಅಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಜೊತೆಗೆ ವಿಶೇಷ ಹೋಮ-ಹವನ ಜರುಗಲಿದೆ. ಉದ್ಘಾಟನೆ ದಿನ ಪ್ರಧಾನಿ ಮೋದಿ ಅವರು ಉಪವಾಸ ಕೈಗೊಳ್ಳಲಿದ್ದಾರೆ. ಅದೊಂದು ದಿನ ಏನೂ ತಿನ್ನುವುದು ಬೇಡ ಎಂದು ಮೋದಿ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ರಾಮಲಲ್ಲಾ ಪ್ರತಿಷ್ಠಾಪನೆ ವೇಳಾಪಟ್ಟಿ ಜನವರಿ 16 ರಂದು ಸರಯೂ ನದಿಯ ದಡದಲ್ಲಿ ‘ದಶವಿಧ’ ತೀರ್ಥ ಸ್ನಾನ ಜನವರಿ 17 ರಂದು ಬಾಲರಾಮನ ವಿಗ್ರಹವನ್ನು ಮೆರವಣಿಗೆ ಜನವರಿ 18 ರಂದು ಗಣೇಶ ಅಂಬಿಕಾ ಪೂಜೆ, ವರುಣನ ಪೂಜೆ, ಮಾತೃಕಾ ಪೂಜೆ, ಬ್ರಾಹ್ಮಣ ವರಣ, ವಾಸ್ತು ಪೂಜೆ ಜನವರಿ 19 ರಂದು ಅಗ್ನಿ ಸ್ಥಾಪನೆ,…

Read More

ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳಿಂದ ಗೆಲುವು ಪಡೆಯಿತು. ಆ ಮೂಲಕ ಎರಡು ಪಂದ್ಯಗಳ ಟೆಸ್ಟ್‌ ಸರಣಿಯನ್ನು 1-1 ಸಮಬಲ ಮಾಡಿಕೊಂಡಿತು. ಅಂದ ಹಾಗೆ ಪಂದ್ಯದ ಬಳಿಕ ಮಾತನಾಡಿದ ರೋಹಿತ್‌ ಶರ್ಮಾ, ಬೌನ್ಸ್‌ ಪಿಚ್‌ಗಳನ್ನು ಆಡಲು ನಮಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಭಾರತದಲ್ಲಿ ಆಡುವಾಗ ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ  ರೋಹಿತ್‌ ಶರ್ಮಾ, “ಇಂಥಾ ಪಿಚ್‌ಗಳಲ್ಲಿ ಆಡಲು ನಮಗೆ ಯಾವುದೇ ಅಭ್ಯಂತರವಿಲ್ಲ. ಆದರೆ, ಭಾರತದಲ್ಲಿ ಆಡುವಾಗ ಮಾತ್ರ ಎಲ್ಲರೂ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳಬೇಕು ಹಾಗೂ ಭಾರತದ ಪಿಚ್‌ಗಳ ವಿರುದ್ಧ ದೂರ ನೀಡಬಾರದು. ನೀವು ಇಲ್ಲಿಗೆ ಬರುವುದು ನಿಮಗೆ ನೀವು ಸವಾಲು ಹಾಕಿಕೊಳ್ಳಲು. ಅದರಂತೆ ಭಾರತಕ್ಕೆ ಬಂದಾಗ ಕೂಡ ನಿಮಗೆ ಸವಾಲು ಎದುರಾಗುತ್ತದೆ,” ಎಂದು ಹೇಳಿದ್ದಾರೆ. ಮೊದಲ ಎಸೆತದಿಂದಲೇ ಚೆಂಡು ಬ್ಯಾಟ್‌ಗೆ ಎಡ್ಜ್ ಆಗುತ್ತಿತ್ತು. ಮೊಹಮ್ಮದ್‌ ಸಿರಾಜ್ ಮಾರಕ ದಾಳಿ…

Read More

ಪ್ರವಾಸ ಹೋಗುವುದೆಂದರೆ ಯಾರಿಗಿಷ್ಟ ಇರೋದಿಲ್ಲ ಹೇಳಿ .. ಅದು ಬೇರೆ ಬೇರೆ ಹೊಸ ಜಾಗ ನೋಡೋದು ಅಂದ್ರೆ ತುಂಬಾ ಜನಕ್ಕೆ ಏನೋ ಖುಷಿ . ದೇಶ ಸುತ್ತಿನೋಡು ಕೋಶ ಓದಿ ನೋಡು ಅನ್ನುವ ಗಾದೆ ಮಾತಿನ ಹಾಗೆ ದೇಶ ವಿದೇಶಗಳಿಗೆ ಹೋಗೋದು ಅಂದ್ರೆ ಕೆಲವರಿಗೆ ಇಷ್ಟ. ನಾವು ನಿಮಗೆ ಹೇಳ್ತೀವಿ ನೋಡಿ ಅತ್ಯಂತ ಸುಂದರ ಪ್ರವಾಸಿ ತಾಣಗಳ ಬಗ್ಗೆ ತಿಳಿಯೋಣ. ಸಾಂಪ್ರದಾಯಿಕ ಪ್ರವಾಸಿ ಆಕರ್ಷಣೆಗಳು ಒಂದು ಕಾರಣಕ್ಕಾಗಿ ಜನಪ್ರಿಯವಾಗಿವೆ. ಐಫೆಲ್ ಟವರ್‌ನ ಮುಂದೆ ಫೋಟೋ ಸ್ನ್ಯಾಪ್ ಮಾಡುವುದು ಅಥವಾ ಐಸ್‌ಲ್ಯಾಂಡ್‌ನ ಬ್ಲೂ ಲಗೂನ್‌ನಲ್ಲಿ ಸ್ನಾನ ಮಾಡುವುದು ಸ್ವಲ್ಪ ಕ್ಲೀಷೆ ಆಗಿರಬಹುದು, ಆದರೆ ಅಂತಿಮವಾಗಿ ಪೋಸ್ಟ್‌ಕಾರ್ಡ್‌ನಲ್ಲಿ ಬದಲಿಗೆ ಪ್ರಖ್ಯಾತ ಹೆಗ್ಗುರುತನ್ನು ಅಥವಾ ನೈಸರ್ಗಿಕ ಅದ್ಭುತವನ್ನು ವೈಯಕ್ತಿಕವಾಗಿ ನೋಡುವುದರಲ್ಲಿ ಏನಾದರೂ ಶಕ್ತಿಯುತವಾಗಿದೆ ಚೀನಾ: ಚೀನಾದ ಮಹಾಗೋಡೆ 13,000 ಮೈಲುಗಳಷ್ಟು ಉದ್ದವಿರುವ, ಚೀನಾದ ಮಹಾಗೋಡೆಯು UNESCO ವಿಶ್ವ ಪರಂಪರೆಯ ತಾಣವಾಗಿದೆ ಮತ್ತು 2007 ರಲ್ಲಿ ವಿಶ್ವದ ಹೊಸ ಏಳು ಅದ್ಭುತಗಳಲ್ಲಿ ಒಂದಾಗಿ ಆಯ್ಕೆಯಾಗಿದೆ. ಗ್ರೇಟ್ ವಾಲ್‌ನ…

Read More

ಬೆಂಗಳೂರು: ರಾಜ್ಯ ಸರ್ಕಾರದ ಐದನೇ ಗ್ಯಾರೆಂಟಿಯಾಗಿರುವ ಯುವನಿಧಿಗೆ ಅರ್ಜಿಸಲ್ಲಿಕೆ ಪ್ರಾರಂಭವಾಗಿ ಸುಮಾರು 10 ದಿನಗಳು ಕಳೆದಿವೆ. ಈ 10 ದಿನಗಳಲ್ಲಿ ಇಲ್ಲಿಯವರೆಗೆ ಒಟ್ಟು 32,184 ಪದವೀಧರರು ಅರ್ಜಿ ಸಲ್ಲಿಸಿದ್ದಾರೆ ಎಂದು ಕಾರ್ಮಿಕ ಇಲಾಖೆ ಮಾಹಿತಿ ನೀಡಿದೆ. ಇದುವರೆಗೆ ಕೇವಲ 32,184 ಅರ್ಜಿಗಳು ಸಲ್ಲಿಕೆಯಾಗಿವೆ. ಅಂದರೆ ಶೇ 6 ಪ್ರತಿಶತದಷ್ಟು ಅರ್ಹ ಫಲಾನುಭವಿಗಳು ಮಾತ್ರ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಯೋಜನೆ ಅಡಿಯಲ್ಲಿ 2023 ರಲ್ಲಿ ಪದವಿ ಮತ್ತು ಡಿಪ್ಲೊಮಾ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಅವಧಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ, ಬೆಳಗಾವಿ ಮತ್ತು ಬೆಂಗಳೂರು ನಗರ ಜಿಲ್ಲೆಗಳು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ. ಬೆಳಗಾವಿಯಲ್ಲಿ 3,900 ಅರ್ಜಿಗಳು ಸಲ್ಲಿಕೆಯಾಗಿದ್ದು, ಬೆಂಗಳೂರು ನಗರದಲ್ಲಿ 2,853 ಅರ್ಜಿಗಳು ಸಲ್ಲಿಕೆಯಾಗಿವೆ. ಮೂರನೇ ಅತಿ ಹೆಚ್ಚು ಅರ್ಜಿ ಸಲ್ಲಿಕೆ ಬಾಗಲಕೋಟೆ 1,943, ನಂತರದ ಸ್ಥಾನದಲ್ಲಿ ವಿಜಯಪುರ 1,741 ಮತ್ತು ರಾಯಚೂರು 1,714 ಜಿಲ್ಲೆಗಳಿವೆ. ಉಡುಪಿ 236, ಕೊಡಗು 120,…

Read More

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ‘ಮ್ಯಾಕ್ಸ್’ (Max Film) ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ‘ಮ್ಯಾಕ್ಸ್’ ಚಿತ್ರದಲ್ಲಿನ ಸುದೀಪ್ ಲುಕ್ ರಿವೀಲ್ ಆಗಿದ್ದು, ಸಖತ್ ರಗಡ್ ಲುಕ್‌ನಲ್ಲಿ ಕಿಚ್ಚ ಕಾಣಿಸಿಕೊಂಡಿದ್ದಾರೆ. ಮ್ಯಾಕ್ಸ್ ಚಿತ್ರದ ಕಿಚ್ಚನ ಕ್ಲೈಮ್ಯಾಕ್ಸ್ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋ ನಡುವೆಯೂ ಕಿಚ್ಚ ಸುದೀಪ್ (Kiccha Sudeep) ‘ಮ್ಯಾಕ್ಸ್’ ಸಿನಿಮಾದ ಕೊನೆಯ ಹಂತದ ಚಿತ್ರೀಕರಣಕ್ಕೆ ಸುದೀಪ್ ಸಾಥ್ ನೀಡಿದ್ದಾರೆ. ಚಿತ್ರದಲ್ಲಿನ ಲುಕ್ ಹೇಗಿದೆ ಎಂಬುದನ್ನ ಕೂಡ ರಿವೀಲ್ ಮಾಡಿದ್ದಾರೆ ವಿಜಯ್ ಕಾರ್ತಿಕೇಯ ನಿರ್ದೇಶದ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಸುದೀಪ್ ನಟಿಸಿದ್ದಾರೆ. ವಿಭಿನ್ನ ಕಥೆಯಲ್ಲಿ ಸುದೀಪ್ ಜೀವತುಂಬಿದ್ದಾರೆ. ಸಿನಿಮಾದಲ್ಲಿ ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಬೆಳವಾಡಿ ಸೇರಿದಂತೆ ಹಲವರು ನಟಿಸಿದ್ದಾರೆ. ಇನ್ನೂ ‘ಮ್ಯಾಕ್ಸ್’ ಚಿತ್ರದ ಟೈಟಲ್ ಟೀಸರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ವಿಕ್ರಾಂತ್ ರೋಣ (Vikrantrona) ಸಿನಿಮಾದ ನಂತರ ‘ಮ್ಯಾಕ್ಸ್’ ಚಿತ್ರದ ಮೂಲಕ ಸುದೀಪ್ ಬರುತ್ತಿದ್ದು,ಈ  ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ.…

Read More

ಸೂರ್ಯೋದಯ: 06:51, ಸೂರ್ಯಾಸ್ತ : 05:51 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾಸ ಮಾರ್ಗಶಿರ, ಕೃಷ್ಣ ಪಕ್ಷ, ದಕ್ಷಿಣಾಯನಮ, ಹೇಮಂತ ಋತು, ತಿಥಿ: ದಶಮಿ ನಕ್ಷತ್ರ: ಸ್ವಾತಿ, ಯೋಗ: ಧ್ರುತಿ, ಕರಣ: ವನಿಜ, ರಾಹು ಕಾಲ: 09:00 ನಿಂದ 10:30 ತನಕ ಯಮಗಂಡ: 01:30 ನಿಂದ 03:00 ತನಕ ಗುಳಿಕ ಕಾಲ: 06:00 ನಿಂದ 07:30 ತನಕ ಅಮೃತಕಾಲ: ಮ.12:01 ನಿಂದ ಮ.1:43 ತನಕ ಅಭಿಜಿತ್ ಮುಹುರ್ತ: ಬೆ.11:59 ನಿಂದ ಮ.12:43 ತನಕ ಜಾತಕ ಆಧಾರದ ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ ರಾಶಿ ವಿದೇಶಿ ಧನ ವಿನಿಮಯ ಮಾಡುವವರಿಗೆ ಹೆಚ್ಚಿನ ವ್ಯವಹಾರ ನಡೆಯುತ್ತದೆ,ಸ್ತ್ರೀಯರಿಗೆ ಉದ್ಯೋಗ ಸ್ಥಳದಲ್ಲಿ ಸ್ವಲ್ಪ ಕಿರುಕುಳ ,ಲೇವಾದೇವಿಯಂತ ಹಣಕಾಸಿನ ವ್ಯವಹಾರ ಮಾಡುವುದು ಅಷ್ಟು ಶ್ರೇಯಸ್ಕರವಲ್ಲ,ಕಾಲು ಮತ್ತು ಮಂಡಿ…

Read More

ಬೆಂಗಳೂರು:- ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ದ್ವೇಷ ರಾಜಕಾರಣ ಮಾಡಲಾಗುತ್ತಿದೆ. ಆದರೆ ಕಾಲಚಕ್ರ ಉರುಳಲಿದೆ ಎಂದರು. ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ವಿಚಾರದಲ್ಲಿ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ದ್ವೇಷ ರಾಜಕಾರಣ ಮಾಡಲಾಗುತ್ತಿದ್ದು, ಅಧಿಕಾರಿಗಳೂ ರಾಜಕೀಯ ಮಾಡುತ್ತಿದ್ದಾರೆ, ಮಾಡಲಿ. ಭಗವಂತ ಹಾಗು ನ್ಯಾಯಾಲಯದ ಮೇಲೆ ನನಗೆ ನಂಬಿಕೆಯಿದೆ ಎಂದು ಹೇಳಿದರು. ಸಿಬಿಐ ಅವರಿಗೆ ನ್ಯಾಯಾಲಯದ ಮೆಟ್ಟಿಲೇರುವ ಹಕ್ಕಿದೆ, ಅವರು ಹೋಗಿದ್ದಾರೆ. ಅವರು ಏನು ಹೇಳಬೇಕೋ ಹೇಳುತ್ತಾರೆ, ನಾವು ಏನು ಹೇಳಬೇಕೋ ಹೇಳುತ್ತೇವೆ. ಅಂತಿಮವಾಗಿ ನ್ಯಾಯಾಲಯ ತೀರ್ಮಾನ ಮಾಡುತ್ತದೆ. ನ್ಯಾಯಾಲಯದಲ್ಲಿ ಅನ್ಯಾಯ ಆಗುವುದಿಲ್ಲ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನನ್ನ ವಿರುದ್ಧ ಒಂದೇ ಒಂದು ಪ್ರಕರಣವೂ ದಾಖಲಾಗಿಲ್ಲ. ನ್ಯಾಯಾಲಯದ ಆದೇಶವಿಲ್ಲದಿದ್ದರೂ ನನಗೆ ಕಿರುಕುಳ…

Read More

ಬೆಂಗಳೂರು:- ಐಎಲ್‌ಐ, ಸಾರಿ ರೋಗಿಗಳಿಗೂ ಕೋವಿಡ್‌ ಪರೀಕ್ಷೆ ಕಡ್ಡಾಯ ಎಂದು ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಈವರೆಗೆ ಐಎಲ್‌ಐ ಮತ್ತು ಸಾರಿ ರೋಗಿಗಳಲ್ಲಿ ಪ್ರತಿ 20 ಪ್ರಕರಣಗಳಲ್ಲಿ ಒಬ್ಬರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿತ್ತು. ಇನ್ನು ಮುಂದೆ ಎಲ್ಲರಿಗೂ ಪರೀಕ್ಷೆ ನಡೆಸುವಂತೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ’ ಎಂದರು. ಪ್ರತಿ ದಿನ 7,000 ಮಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಈಗ ಕೋವಿಡ್‌ ದೃಢಪ್ರಮಾಣ ದರ ಶೇಕಡ 3.82ರಷ್ಟಿದೆ. ನೆರೆಯ ಕೇರಳದಲ್ಲಿ ಕೋವಿಡ್‌ ದೃಢಪ್ರಮಾಣ ದರ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ ಇಳಿಮುಖವಾಗಿಲ್ಲ. ಆದ್ದರಿಂದ ಕೋವಿಡ್‌ ದೃಢಪಟ್ಟವರ ಮೇಲೆ ತೀವ್ರ ನಿಗಾ ಇರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Read More

ನೆಲಮಂಗಲ:- ದಾಯಾದಿಗಳ ಕಲಹಕ್ಕೆ ಕಟಾವು ಗೆ ಬಂದಿದ್ದ ರಾಗಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ನೆಲಮಂಗಲ ತಾಲೂಕು ಸೋಂಪುರ ಹೋಬಳಿಯ ಎಡೆಹಳ್ಳಿ ಗ್ರಾಮದಲ್ಲಿ ಜರುಗಿದೆ. ರೈತ ಮಂಜುನಾಥ್ ರಾಗಿ ಹೊಲಕ್ಕೆ ಬೆಂಕಿ ಬಿದ್ದಿದ್ದು, ಎಡೆಯಳ್ಳಿ ಗ್ರಾಮದ ಸರ್ವೆ ನಂಬರ್ 97 ರಲ್ಲಿ ಘಟನೆ ಜರುಗಿದೆ. ಕಟಾವಿಗೆ ಬಂದಿದ್ದ ಸುಮಾರು 1 ಎಕರೆ 20 ಗುಂಟೆ ರಾಗಿ ಹೊಲಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ತಿನ್ನುವ ಅನ್ನಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳ ವಿರುದ್ಧ ರೈತ ಮಂಜುನಾಥ್ ಆಕ್ರೋಶ ಹೊರ ಹಾಕಿದ್ದಾರೆ. ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ರೈತ ಮಂಜುನಾಥ್ ಆಕ್ರೋಶ ಹೊರ ಹಾಕಿದ್ದಾರೆ. ಸೋಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ಮಾಗಡಿ:- ಶ್ರೀಕಾಂತ್ ಪೂಜಾರಿ ಪರ ಹೋರಾಟದ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಮಾಜಿ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಶ್ರೀಕಾಂತ್ ಪೂಜಾರಿ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆ ಬಗ್ಗೆ ದಾಖಲೆ ಇದೆ. ಆ ಪೈಕಿ ಕೆಲ ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾನೆ. ಅಂತಹ ವ್ಯಕ್ತಿಗಾಗಿ ನೀವು ಹೋರಾಟ ಮಾಡುತ್ತಿದ್ದೀರಿ. ಅವನೊಬ್ಬನೇ ಹಿಂದೂನಾ? ಬೇರೆ ಹಿಂದೂಗಳೂ‌ ಇದ್ದಾರೆ. ಅವರು ನಿಮ್ಮ‌ ಕಣ್ಣಿಗೆ ಕಾಣುತ್ತಿಲ್ಲವೇ? ಎಂದರು. ‘ಪೂಜಾರಿ ಪರವಾಗಿ ನಡೆಯುತ್ತಿರುವ ಹೋರಾಟದ ಹಿಂದೆ ರಾಜಕೀಯ ದುರುದ್ದೇಶವಿದೆ’ ಎಂದರು. ಇತ್ತ, 1992ರ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾದ ಶ್ರೀಕಾಂತ ಪೂಜಾರಿಗೆ ಹುಬ್ಬಳ್ಳಿಯಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಸೇಷನ್ ಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.

Read More