Author: AIN Author

ಬೆಂಗಳೂರು:- ಶ್ರೀರಾಮನ ಹೆಸರನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಮಭಕ್ತರಿಗೆ ಕಾಂಗ್ರೆಸ್‌ ಸರ್ಕಾರದಿಂದ ತೊಂದರೆಯಾಗುತ್ತಿದೆ ಎಂದು ಬಿಜೆಪಿ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. 31 ವರ್ಷದ ಹಿಂದಿನ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇದಕ್ಕೆ ಬಿಜೆಪಿಯವರು ರಾಜಕೀಯ ಬಣ್ಣ ಹಚ್ಚುತ್ತಿದ್ದಾರೆ ಎಂದರು. ಕಾಂಗ್ರೆಸ್‌ನವರು ನಿಜವಾದ ರಾಮಭಕ್ತರು. ಬಿಜೆಪಿಯವರು ಚುನಾವಣೆಗಾಗಿ ರಾಮನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. 2008-13 ಮತ್ತು 2020-2023ರವರೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇತ್ತು. ಆರ್‌. ಅಶೋಕ್‌ ಗೃಹ ಸಚಿವರಾಗಿದ್ದರು. ಆಗ ಪ್ರಕರಣ ಏಕೆ ಹಿಂಪಡೆಯಲಿಲ್ಲ ಎಂದು ಪ್ರಶ್ನಿಸಿದರು. ವಿರೋಧ ಪಕ್ಷದ ನಾಯಕರಾದ ನಂತರ ಅಶೋಕ್‌ ಟೀಕೆ ಮಾಡುತ್ತಿದ್ದಾರೆ. ಬಿಜೆಪಿ ಚುನಾವಣೆಗೆ ಕಾರ್ಯಕರ್ತರನ್ನು ಬಳಸಿಕೊಂಡು ನಂತರ ಮರೆಯುತ್ತದೆ ಎನ್ನುವುದಕ್ಕೆ ಇದು ಸೂಕ್ತ ನಿದರ್ಶನ ಎಂದು ಟೀಕಿಸಿದರು.

Read More

ಭಾರತದಲ್ಲಿ ಸೆಕೆಂಡ್ ಹ್ಯಾಂಡ್ ಕಾರುಗಳಿಗೆ ದೊಡ್ಡ ಮಾರುಕಟ್ಟೆ ಇದೆ. ಭಾರತದಲ್ಲಿ ಬಳಸಿದ ಕಾರನ್ನು ಖರೀದಿಸಲು ಬಂದಾಗ, ಉತ್ಸಾಹದಲ್ಲಿ ಸಿಕ್ಕಿಹಾಕಿಕೊಳ್ಳುವುದು ಮತ್ತು ಆತುರದ ನಿರ್ಧಾರ ತೆಗೆದುಕೊಳ್ಳುವುದು ಸುಲಭ. ಆದರೆ ನಂತರ ನಷ್ಟ ಮಾಡಿಕೊಳ್ಳುವ ಮೊದಲು ಎಚ್ಚರಿಕೆ ವಹಿಸುವುದು ಉತ್ತಮ. ಹಾಗಾದ್ರೆ ಸೆಕೆಂಡ್ ಹ್ಯಾಂಡ್ ಕಾರು ಖರೀದಿ ಮಾಡಲು ಯಾವುದು ಸೂಕ್ತ ದಾರಿ?, ಕಾರು ಖರೀದಿ ಮಾಡುವ ಮುನ್ನ ಯಾವೆಲ್ಲಾ ವಿಚಾರಗಳನ್ನು ಗಮನಿಸಬೇಕು? ಯಾವ ಕಂಪನಿಯ ಕಾರು ಆಯ್ಕೆ ಮಾಡಬೇಕು ಎನ್ನುವ ಗೊಂದಲ ಮೂಡುವುದು ಸಹಜ. ಈ ಕೆಳಗಿನ ವಿಚಾರಗಳ ಬಗ್ಗೆ ಗಮನ ವಹಿಸಿದರೆ, ಕಾರು ಖರೀದಿ ಬಗ್ಗೆ ಹಲವು ಅನುಮಾನಗಳು ಬಗೆಹರಿದಂತಾಗುತ್ತವೆ. ಮೊದಲೇ ಬಜೆಟ್ ನಿರ್ಧರಿಸಿ ಮುಖ್ಯವಾಗಿ ನೀವು ಯಾವ ಬಜೆಟ್‌ನಲ್ಲಿ ಕಾರು ಖರೀದಿ ಮಾಡಬೇಕು ಎನ್ನುವುದನ್ನು ನಿರ್ಣಯಿಸಿಕೊಳ್ಳಿ. ಬಜೆಟ್‌ಗೆ ಮೀರಿದ ಕಾರುಗಳನ್ನು ಖರೀದಿಸುವ ಉತ್ಸಾಹ ಬೇಡ, ಕೊಳ್ಳುವಾಗ ಕೆಲವು ಸಾವಿರ ವ್ಯತ್ಯಾಸ ಎನಿಸಬಹುದು ಆದರೆ ಮುಂದೆ ಹೆಚ್ಚಿನ ಹೊರೆಗೆ ಕಾರಣವಾಗುತ್ತವೆ ಎನ್ನುವುದನ್ನು ಮರೆಯಬೇಡಿ. ನಂಬಿಕಸ್ಥ ಮೆಕ್ಯಾನಿಕ್ ಸಲಹೆ ನೀವು ವರ್ಷಗಳಿಂದ ಕಾರುಗಳನ್ನು…

Read More

ಬೆಂಗಳೂರು: ಕರ್ನಾಟಕದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಡಾ. ಮುಖ್ಯಮಂತ್ರಿ ಚಂದ್ರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ದೆಹಲಿ ಮತ್ತು ಪಂಜಾಬ್ ಮಾದರಿಯಲ್ಲಿ ರಾಜ್ಯದ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ಪತ್ರ ಬರೆದಿದ್ದಾರೆ. ಒಂದು ವಾರದಿಂದ ರಾಜ್ಯದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ, ತುಮಕೂರು ಸಿದ್ಧಗಂಗಾ ಮಠದಿಂದ ಬೃಹತ್ ಪಾದಯಾತ್ರೆ ಮೂಲಕ ಬೆಂಗಳೂರಿಗೆ ಆಗಮಿಸಲಾಗಿದೆ. ಎಎಪಿ ನಾಯಕರು, ಕಾರ್ಯಕರ್ತರು ಇದೀಗ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಮತ್ತು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದೆ. ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 11 ಸಾವಿರಕ್ಕಿಂತ ಹೆಚ್ಚಿನ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಇವರಿಗೆ ಸರಿಯಾದ ವೇತನ ಸಿಗುತ್ತಿಲ್ಲ. ಸಾವಿರಾರು ಉಪನ್ಯಾಸಕರ ವಯೋಮಿತಿ ಮೀರುತ್ತಿದೆ. ಕೆಲಸ ಕಾಯಂ ಆಗದೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಅವೈಜ್ಞಾನಿಕ ಪದ್ಧತಿಯಿಂದ ಶಿಕ್ಷಣದ ಗುಣಮಟ್ಟ ಹಾಳು ಅತಿಥಿ ಉಪನ್ಯಾಸಕರ…

Read More

ಪ್ರೇಕ್ಷಕರಿಂದ ಹಾಗೂ ಸೆಲೆಬ್ರಿಟಿಗಳಿಂದ ಉತ್ತಮ ಪ್ರತಿಕ್ರಿಯೆಗಳನ್ನು ಪಡದುಕೊಳ್ಳುವಲ್ಲಿ ಕಾಟೇರ ಚಿತ್ರ ಮುಂಚೂಣಿಯಲ್ಲಿದೆ. 2023ರ ಕೊನೆಯಲ್ಲಿ ಬಿಡುಗಡೆಯಾದ ಚಿತ್ರವು ಈವರೆಗೂ 104.58 ಕೋಟಿ ರೂಪಾಯಿ ಕಮಾಯಿ ಮಾಡಿದೆ ಎಂದು ತಿಳಿದು ಬಂದಿದೆ. ವಾರದ ದಿನಗಳಲ್ಲೂ ಚಿತ್ರ ಉತ್ತಮ ಗಳಿಕೆ ಕಂಡಿದ್ದು, ಬಿಡುಗಡೆಯಾದ ಒಂದೇ ವಾರದಲ್ಲಿ ಚಿತ್ರ 100 ಕೋಟಿ ರೂಪಾಯಿ ಗಳಿಕೆ ಮಾಡಿರುವುದು ಮತ್ತಷ್ಟು ವಿಶೇಷವೆನ್ನಿಸಿದೆ. ಚಿತ್ರತಂಡದವರು ಹೇಳಿರುವ ಪ್ರಕಾರ ಸಿನಿಮಾ ಏಳು ದಿನಕ್ಕೆ 104.58 ಕೋಟಿ ರೂಪಾಯಿ ಬಾಚಿಕೊಂಡಿದೆ. ಕನ್ನಡದಲ್ಲಿ ರಿಲೀಸ್ ಆಗಿ ಕಾಟೇರ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡುತ್ತಿರುವುದು ನಮ್ಮೆಲ್ಲರ ಖುಷಿ ಹೆಚ್ಚಿಸಿದೆ. ಟಾಲಿವುಡ್ ಹಾಗೂ ಕಾಲಿವುಡ್​ನಲ್ಲೂ ಕಾಟೇರ ಬಗ್ಗೆ ಚರ್ಚೆ ನಡೆಯುತ್ತಿದೆ. ಅಲ್ಲಿಂದಲೂ ಸಿನಿಮಾಗೆ ಬೇಡಿಕೆ ಬರುತ್ತಿದ್ದು, ಡಬ್ ಮಾಡುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಚಿತ್ರತಂಡದ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ. ಏಳು ದಿನಕ್ಕೆ ಕಾಟೇರ ಚಿತ್ರದ 52.77 ಲಕ್ಷ ಟಿಕೆಟ್ ಮಾರಾಟ ಆಗಿದ್ದು, ಕಳೆದ ಏಳು ದಿನಗಳಲ್ಲಿ 10,961 ಪ್ರದರ್ಶನಗಳು ಕಂಡಿವೆ. ಈ ಪೈಕಿ 6,117…

Read More

ಸಾಕಷ್ಟು ಮಹಿಳೆಯರು ತಮ್ಮ ಅಂದವನ್ನು ಹೆಚ್ಚಿಸಲು ಮೇಕಪ್​​ ಜೊತೆಗೆ ಕೂದಲಿಗೆ ಕಲರಿಂಗ್​​​, ಹೇರ್​​​​ ಸ್ಟ್ರೈಟ್ನಿಂಗ್, ಕರ್ಲಿಂಗ್​​ ಮಾಡಿಸಿಕೊಳ್ಳುತ್ತಾರೆ. ಆದರೆ ನಿಮ್ಮ ಕೂದಲನ್ನು ರೇಷ್ಮೆ ನೂಲಿನಂತೆ ಮಾಡಿಸುವ ಈ ಹೇರ್​​​​ ಸ್ಟ್ರೈಟ್ನಿಂಗ್ ನಿಮ್ಮ ಜೀವಕ್ಕೆ ಕಂಟಕವಾಗಬಹುದು ಎಂದು ತಿಳಿದಿದೆಯೇ? ಕೂದಲು ಸ್ಟ್ರೈಟ್ನಿಂಗ್​​​ನಲ್ಲಿ ಬಳಸುವ ಸಾಕಷ್ಟು ರಾಸಾಯನಿಕಗಳು ಮಹಿಳೆಯರಲ್ಲಿ ಗರ್ಭಾಶಯದ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ವರ್ಷಕ್ಕೆ ನಾಲ್ಕಕ್ಕಿಂತ ಹೆಚ್ಚು ಬಾರಿ ಕೂದಲನ್ನು ಸ್ಟ್ರೈಟ್ನಿಂಗ್ ಮಾಡಿಕೊಳ್ಳುವ ಮಹಿಳೆಯರಿಗೆ ಇತರ ಮಹಿಳೆಯರಿಗಿಂತ ಗರ್ಭಾಶಯದ ಕ್ಯಾನ್ಸರ್ ಬರುವ ಅಪಾಯ ಹೆಚ್ಚು ಎಂದು ತಜ್ಞರು ಹೇಳಿದ್ದಾರೆ. ಕೂದಲು ಸ್ಟ್ರೈಟ್ ಮಾಡಲು ಬಳಸುವ ಕ್ರೀಮ್ ನಲ್ಲಿರುವ ರಾಸಾಯನಿಕಗಳು: ಅಮೋನಿಯಂ ಥಿಯೋಗ್ಲೈಕೋಲೇಟ್ ಬೆಂಜೊ ಫೀನಾಲ್-3 ಸೈಕ್ಲೋ ಸಿಲೋಕ್ಸೇನ್ಸ್ ಡೈಥೈಲಮೈನ್ ಪ್ಯಾರಾಬೆನ್ಸ್ ಫಾರ್ಮಾಲ್ಡಿಹೈಡ್ ಥಾಲೇಟ್ಸ್ ಸೋಡಿಯಂ ಹೈಡ್ರಾಕ್ಸೈಡ್ ಸೋಡಿಯಂ ಥಿಯೊಗ್ಲೈಕೊಲೈಡ್ ಟ್ರೈಕ್ಲೋಸನ್ ಆರೋಗ್ಯ ತಜ್ಞರು ಹೇಳುವುದೇನು? ಫೋರ್ಟಿಸ್ ಆಸ್ಪತ್ರೆ ಸ್ತ್ರೀರೋಗ ವಿಭಾಗದ ನಿರ್ದೇಶಕಿ ಡಾ.ಅರ್ಪಣಾ ಜೈನ್ ಹೇಳುವಂತೆ, “ಕೂದಲು ಸ್ಟ್ರೈಟ್ನಿಂಗ್ ಮಾಡಲು ಬಳಸುವ ವಸ್ತುಗಳಲ್ಲೂ ಈ 9 ಬಗೆಯ ರಾಸಾಯನಿಕಗಳಿವೆ. ಇದು ಮಹಿಳೆಯರಲ್ಲಿ ಸ್ತನ…

Read More

ಬಾದಾಮಿ ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯವನ್ನು ಹೆಚ್ಚಿಸಲು ಸಹ ಉತ್ತಮವಾಗಿದೆ. ಹೌದು, ನೀವು ಕೇವಲ ನಾಲ್ಕು ಬಾದಾಮಿಗಳೊಂದಿಗೆ ದೋಷರಹಿತ ಹೊಳೆಯುವ ಬಿಳಿ ಚರ್ಮವನ್ನು ಹೊಂದಬಹುದು ಮತ್ತು ವಿಳಂಬವಿಲ್ಲದೆ ಚರ್ಮಕ್ಕೆ ಬಾದಾಮಿಯನ್ನು ಹೇಗೆ ಹಚ್ಚುವುದು ಎಂದು ಕಂಡುಹಿಡಿಯೋಣ. ಮೊದಲಿಗೆ, ಒಂದು ಬಟ್ಟಲನ್ನು ತೆಗೆದುಕೊಂಡು ಅದಕ್ಕೆ ನಾಲ್ಕು ಬಾದಾಮಿಗಳನ್ನು ಸೇರಿಸಿ ಮತ್ತು ನೀರನ್ನು ಸುರಿಯಿರಿ ಮತ್ತು ರಾತ್ರಿಯಿಡೀ ನೆನೆಸಿಡಿ. ಮರುದಿನ ನೆನೆಸಿದ ಬಾದಾಮಿಯನ್ನು ಸಿಪ್ಪೆ ಸುಲಿದು ಮಿಕ್ಸಿ ಜಾರ್ ನಲ್ಲಿ ನೀರಿನ ಸಹಾಯದಿಂದ ನಯವಾದ ಪೇಸ್ಟ್ ಆಗಿ ರುಬ್ಬಿಕೊಳ್ಳಬೇಕು ಈ ರುಬ್ಬಿದ ಬಾದಾಮಿ ಮಿಶ್ರಣದಲ್ಲಿ, ಒಂದು ಚಮಚ ಗುಲಾಬಿ ದಳಗಳ ಪುಡಿ ಮತ್ತು ಕಾಲು ಚಮಚ ಅರಿಶಿನವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈಗ ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿ ಹದಿನೈದು ಅಥವಾ ಇಪ್ಪತ್ತು ನಿಮಿಷಗಳ ಕಾಲ ಒಣಗಲು ಬಿಡಿ. ನಂತರ ನೀರಿನಿಂದ ಚರ್ಮವನ್ನು ಸ್ವಚ್ಛಗೊಳಿಸಿ. ನೀವು ಎರಡು ದಿನಗಳಿಗೊಮ್ಮೆ ಈ ಸರಳ ಮನೆಮದ್ದನ್ನು ಅನುಸರಿಸಿದರೆ, ಪವಾಡಗಳು ಸಂಭವಿಸಬಹುದು. ಬಾದಾಮಿಯಲ್ಲಿರುವ ವಿಟಮಿನ್ ಇ ಮತ್ತು ಒಮೆಗಾ…

Read More

ವಿಜಯಪುರ: ಯಾರು ಹೇಳಿಕೆಗಳ ಮೂಲಕ ಭಯೋತ್ಪಾದನೆ ಮಾಡಬಾರದು. ಹೆಳಿಕೆಗಳಿಂದ ಭಯ ಹುಟ್ಟಿಸುವವರು ಭಯೋತ್ಪಾದಕರು ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ (B. K. Hariprasad) ವಿರುದ್ಧ ಪೇಜಾವರ ಶ್ರೀಗಳು (Pejavara shree) ಕಿಡಿಕಾರಿದ್ದಾರೆ. ನಗರದಲ್ಲಿ ( Vijayapura) ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಗೋಧ್ರಾ ಮಾದರಿಯ ಘಟನೆ ಮರುಕಳಿಸಬಹುದು ಎಂಬ ಬಿ.ಕೆ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. https://ainlivenews.com/dkshi-illegal-property-gain-case-cbi-moved-high-court-against-govt-order/ ಈ ವೇಳೆ, ಯಾಕೆ ನೇರವಾಗಿ ಇಲಾಖೆಗಳಿಗೆ ಹೋಗಿ ಮಾಹಿತಿ ನೀಡುತ್ತಿಲ್ಲ? ಇವರು ಯಾರನ್ನು ರಕ್ಷಣೆ ಮಾಡುತ್ತಿದ್ದಾರೆ? ಕೇಳಿದ್ರೆ ಹೇಳುತ್ತೇವೆ ಎನ್ನುವುದು ವಿಧ್ವಂಸಕ ಕೃತ್ಯ ನಡೆಯಲಿ ಎಂದಂತೆ ಅಲ್ಲವೇ? ಇವರು ವಿಧ್ವಂಸಕ ಕೃತ್ಯ ನಡೆಸುವವರನ್ನ ರಕ್ಷಣೆ ಮಾಡ್ತಿದ್ದಾರಾ ಎಂದು ಪ್ರಶ್ನೆಗಳ ಮಳೆ ಸುರಿಸಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಈ ರೀತಿ ಮಾತನಾಡಬಾರದು. ಈಗ ಭಯ ಹುಟ್ಟಿದೆ, ಈಗ ಭಯೋತ್ಪಾದಕರು ಯಾರು? ಯಾರು ಹೇಳ್ತಿದ್ದಾರೋ ಅವರು ಸ್ವತಃ ಭಯೋತ್ಪಾದಕರು ಎಂದು ಆಕ್ರೋಶ ಹೊರಹಾಕಿದ್ದಾರೆ.

Read More

ಮಂಗಳೂರು: ತಾಳಿ ಕಟ್ಟಿದ ಬಳಿಕ ವರನೊಬ್ಬ ಅನಾರೋಗ್ಯ ಕಾರಣ ಕೊಟ್ಟು ಎಸ್ಕೇಪ್ ಆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯಬೇಕಿತ್ತು. ಅಂತೆಯೇ ಯುವತಿ ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್ ಗೆ ಬಂದಿದ್ದಾರೆ. ಆದರೆ ವರ ತಾಳಿ ಕಟ್ಟಿದ ಬಳಿಕ ಭಾರೀ ಹೈಡ್ರಾಮಾ ನಡೆಸಿದ್ದಾನೆ. ನಡೆದಿದ್ದೇನು..?: ಕಲ್ಯಾಣ ಮಂಟಪದಲ್ಲಿ ಅಕ್ಷಯ್ ಮಂಗಳೂರು ಮೂಲದ ಯುವತಿ ಜೊತೆ ಮದುವೆಯಾಗುತ್ತಿರುವ ವಿಚಾರ ಮಾಜಿ ಪ್ರೇಯಸಿ ಗಮನಕ್ಕೆ ಬಂದಿದೆ. ಹೀಗಾಗಿ ಮಾಜಿ ಪ್ರೇಯಸಿ ಕಲ್ಯಾಣಮಂಟಪಕ್ಕೆ ಬಂದು ಕ್ಯಾತೆ ತೆಗೆದಿದ್ದಾಳೆ. ಈ ಹಿನ್ನೆಲೆಯಲ್ಲಿ ವರ, ಅನಾರೋಗ್ಯ ಕಾರಣ ಮುಂದಿಟ್ಟಿದ್ದಾನೆ. ಮದುವೆಗೆ ಬಂದಿದ್ದ ಸಂಬಂಧಿಕರಿಗೆ ಕಿಡ್ನಿಯಲ್ಲಿ ಕಲ್ಲುಂಟಾಗಿ ಆಸ್ಪತ್ರೆಗೆ ದಾಖಲು ಆಗುತ್ತೇವೆ ಅಂತ ಹೇಳಿದ್ದಾನೆ. ಅಲ್ಲದೇ ಸಂಬಂಧಿಕರೇ ವರನನ್ನು ಕಲ್ಯಾಣ ಮಂಟಪದಿಂದ ಕರೆದುಕೊಂಡು ಹೋಗಿದ್ದಾರೆ. https://ainlivenews.com/dkshi-illegal-property-gain-case-cbi-moved-high-court-against-govt-order/ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಗೆ ಶಾದಿ ಡಾಟ್ ಕಾಮ್ ಮೂಲಕ ಅಕ್ಷಯ್ ಪರಿಚಯವಾಗಿದೆ.…

Read More

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ  ಕಾಟೇರ (Katera) ಸಿನಿಮಾ ಕಳೆದ ವಾರದಿಂದ ಎಲ್ಲ ಕಡೆ ತುಂಬಿದ ಪ್ರದರ್ಶನ ಕಾಣುತ್ತಿತ್ತು. ಸಿನಿಮಾ ರಿಲೀಸ್ ಆಗಿ ಕೆಲವೇ ಗಂಟೆಗಳಲ್ಲೇ ಚಿತ್ರದ ಪೈರಸಿ ಹೊರ ಬಂದಿತ್ತು. ಪೈರಸಿ ಲಿಂಕ್ ಗಳನ್ನು ಸಾಕಷ್ಟು ಜನರು ಹಂಚಿಕೊಂಡಿದ್ದರು. ಈ ಕುರಿತಂತೆ ಚಿತ್ರತಂಡವು ಪೈರಸಿ (Piracy)  ಮಾಡುವವರು ವಿರುದ್ಧ ಕ್ರಮಕ್ಕೆ ಮುಂದಾಗಿತ್ತು. ಪೈರಸಿ ಮಾಡುವವರ ವಿರುದ್ಧ ಸ್ವತಃ ದರ್ಶನ್ (Darshan) ಗುಡುಗಿದ್ದರು. ಪೈರಸಿ ಲಿಂಕ್ ಗಳು ಹೆಚ್ಚೆಚ್ಚು ಶೇರ್ ಆಗುತ್ತಿದ್ದಂತೆಯೇ ಅದನ್ನು ಮಾಡುವವರ ಹುಡುಕಾಟಕ್ಕೆ ಚಿತ್ರತಂಡ ಮುಂದಾಗಿತ್ತು. ಕೊನೆಗೂ  ಪೈರಸಿ ಮಾಡಿ, ಆ ಲಿಂಕ್ ಅನ್ನು ನಲವತ್ತು ರೂಪಾಯಿಗೆ ಮಾರುತ್ತಿದ್ದ ರಾಯಚೂರಿ ಜಿಲ್ಲೆಯ, ದೇವದುರ್ಗ ತಾಲೂಕಿನ ಗಂಗನಾಯಕ್ ತಾಂಡದ ಮೌನೇಶ್ ಎನ್ನುವನನ್ನು ಪೊಲೀಸರು ಬಂಧಿಸಿದ್ದಾರೆ. https://ainlivenews.com/is-looting-your-idea-of-utopia-mb-patil-hits-back-at-ct-ravis-statement/ ಕಾಟೇರ ಸಿನಿಮಾ ರಿಲೀಸ್ ಆದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಕುರಿತಂತೆ ದರ್ಶನ್ ಅಭಿಮಾನಿಗಳು ಪೋಸ್ಟ್ ಮಾಡಿದ್ದು, ‘ನಮ್ಮ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾದ, ಮತ್ತು  ಕರುನಾಡೆ…

Read More

ಬೆಂಗಳೂರು: ಸಿಲಿಕಾನ್‌ ಸಿಟಿ  ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರ ಪರಿಶೀಲನೆ ಬಳಿಕ ಹುಸಿ ಮೇಲ್ ಎಂಬುದು ಪತ್ತೆಯಾಗಿದೆ. ಮ್ಯೂಸಿಯಂ ನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, https://ainlivenews.com/is-looting-your-idea-of-utopia-mb-patil-hits-back-at-ct-ravis-statement/ ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತದೆ ಎಂದು‘ Morgue999lol’ ಎಂಬ ಮೇಲ್ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ ಹೆಸರನ್ನು ಉಲ್ಲೇಖಿಸಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದರು. ಈ ಘಟನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮ್ಯೂಸಿಯಂಗೆ ಡಾಗ್ ಸ್ಕ್ವಾಡ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Read More