Author: AIN Author

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಗೆಲ್ಲಲು ಮಾಸ್ಟರ್ ಪ್ಲಾನ್ ರೂಪಿಸಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕರ ಸೇವಕರನ್ನು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿ.ಪ. ಸದಸ್ಯ ಜಗದೀಶ ಶೆಟ್ಟರ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೩೦ ವರ್ಷಗಳ ಹಿಂದಿನ ಪ್ರಕರಣ ವಿಥ್ ಡ್ರಾ ಆಗಬೇಕಿತ್ತು. ಈ ಬಗ್ಗೆ ನಾನು ಮುಖ್ಯಮಂತ್ರಿ ಆಗಿದ್ದಾಗಲೂ ಬಹಳ ಪ್ರಯತ್ನಿಸಿದ್ದೇನೆ. ನನ್ನ ಬಳಿಕ ಆಡಳಿತ ನಡೆಸಿದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಹಿಂದೂ ಕಾರ್ಯಕರ್ತರ ಮೇಲಿನ ಹಿಂಪಡೆಯುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಈಗ ಪ್ರತಿಭಟನೆಯ ನಾಟಕವಾಡುತ್ತಿರುವ ಆರ್.ಅಶೋಕ ಗೃಹ ಸಚಿವರಾಗಿದ್ದಾಗ ಎಷ್ಟು ಪ್ರಕರಣವನ್ನು ಹಿಂಪಡೆಯಲು ಸೂಚಿಸಿದ್ದರು. ರಾಜಕೀಯ ಲಾಭಕ್ಕಾಗಿ ರಸ್ತೆಗೆ ಇಳಿದು ಹೋರಾಟ ಮಾಡುವ ಬಿಜೆಪಿ ನಾಯಕರು ತುಷಾರ್ ಮೆಹ್ತಾ ಅವರನನು ಕರೆಯಿಸಿ ಕೇಸ್ ಫೈಟ್ ಮಾಡಿಸಲಿ. ಲಾಂಗ್ ಪೆಂಡಿAಗ್ ಕೇಸ್ ಹಿನ್ನೆಲೆಯಲ್ಲಿ ಪೊಲೀಸರು ಶ್ರೀಕಾಂತ ಪೂಜಾರಿಯನ್ನು ಬಂಧಿಸಿದ್ದಾರೆ. ಒಬ್ಬ ವ್ಯಕ್ತಿಯ ಬಂಧನವಾದರೆ ಕೋಟ್ಯಾಂತರ ಹಿಂದೂಗಳಿಗೆ ಅನ್ಯಾಯ…

Read More

ಹುಬ್ಬಳ್ಳಿ,: ಮೂವತ್ತು ವರ್ಷಗಳ ಹಿಂದಿನ ಹುಬ್ಬಳ್ಳಿ ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ ಬಗ್ಗೆ ಸರ್ಕಾರ ದಿಕ್ಕು ತಪ್ಪಿಸುವ ಹೇಳಿಕೆ ನೀಡಿದೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಗಂಭೀರ ಆರೋಪ ಮಾಡಿದ್ದಾರೆ. ಶ್ರೀಕಾಂತ್ ಪೂಜಾರಿ ಮೇಲಿನ 16 ಕೇಸ್​ಗಳಲ್ಲಿ, 15 ರಲ್ಲಿ ಅವರು ಖುಲಾಸೆಯಾಗಿದ್ದಾರೆ. ಖುಲಾಸೆಯಾಗಿರುವ ವ್ಯಕ್ತಿಯನ್ನು ಅಪರಾಧಿ ಎಂದು ಹೇಳುವುದು ತಪ್ಪು ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಖುಲಾಸೆಯಾಗಿ ಬಿಡುಗಡೆ ಆಗಿರುವ ವ್ಯಕ್ತಿಯನ್ನು ಅಪರಾಧಿ ಎನ್ನುವುದು ತಪ್ಪು. ಸರ್ಕಾರ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿರುವುದಕ್ಕೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಾಗಿಲ್ವಾ? ಅವರನ್ನು ಅಪರಾಧಿ ಎನ್ನಲು ಆಗುತ್ತದೆಯೇ ಎಂದು ಅವರು ಪ್ರಶ್ನಿಸಿದರು. ಮುಂದಿನ ಹೋರಾಟದ ಬಗ್ಗೆ ಇಂದು ಬೆಂಗಳೂರಿನಲ್ಲಿ ಸಭೆ ನಡೆಯುತ್ತಿದೆ. ಅದರಂತೆ ಮುಂದಿನ ಹೋರಾಟ ನಡೆಯಲಿದೆ ಎಂದು ಅವರು ತಿಳಿಸಿದರು. ಧಾರವಾಡದಲ್ಲಿ ಪ್ರಲ್ಹಾದ್ ಜೋಶಿ ಬದಲು ಶ್ರೀಕಾಂತ್ ಪೂಜಾರಿಗೆ ಬಿಜೆಪಿ ಟಿಕೆಟ್ ನೀಡಲಿ ಎಂಬ ಕಾಂಗ್ರೆಸ್…

Read More

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಹಾಗೂ ಕರವೇ ಅಧ್ಯಕ್ಚ ನಾರಾಯಣ್ ಗೌಡ ಬಿಡುಗಡೆ ಒತ್ತಾಯಿಸಿ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ ನಡೆಸಲಾಯಿತು. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ 124 ನೇ ಪ್ರತಿಭಟನೆ ನಡೆಸಿದ ಹೋರಾಟಗಾರರು, ಪ್ರತಿನಿತ್ಯ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಸತತವಾಗಿ ಕನ್ನಡ ಪರ ಸಂಘಟನೆಗಳ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ಹಾಗೂ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನು ಬಂಧಿಸಿರೋದನ್ನು ವಿರೋಧಿಸಿ ಕೂಡಲೆ ಬಿಡುಗಡೆ ಮಾಡುವಂತೆ ಚಾಮರಾಜನಗರ ಜಿಲ್ಲಾ ಕೇಂದ್ರದ ಭುವನೇಶ್ವರಿ ವೃತ್ತದ ಬಳಿ ಸಮಾವೇಶಗೊಂಡು ಒತ್ತಾಯ ಮಾಡಿದ್ದಾರೆ.            

Read More

ಬೆಂಗಳೂರು: ಶಾಲಾ ವಾಹನಗಳ ಚಾಲಕರಿಗೆ ಪೊಲೀಸ್‌ ವೆರಿಫಿಕೇಷನ್‌ ಕಡ್ಡಾಯಗೊಳಿಸಲಾಗಿದೆ. ಕಡ್ಡಾಯವಾಗಿ ವೆರಿಫಿಕೇಷನ್‌ ಮಾಡಿಸುವಂತೆ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. https://ainlivenews.com/cm-siddaramaiah-met-cricket-legend-sachin-tendulkar-by-chance/ ಶಾಲಾ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ರಾಜ್ಯ ಶಾಲಾ ಶಿಕ್ಷಣ ಇಲಾಖೆಯು ಈ ನಿಯಮ ಜಾರಿಗೆ ತಂದಿದೆ. ಇದಲ್ಲದೇ ವಾಹನ ಚಾಲಕರು ಮಕ್ಕಳೊಂದಿಗೆ ಅಸಭ್ಯ ವರ್ತನೆ ತೋರಿಸುತ್ತಿರುವ ಬಗ್ಗೆ ಪೋಷಕರಿಂದ ಈಗಾಗಲೇ ಇಲಾಖೆಗೆ ಸಾಲು ಸಾಲು ದೂರುಗಳು ಬಂದಿವೆ. ಈ ಹಿನ್ನೆಲೆ ಶಿಕ್ಷಣ ಇಲಾಖೆಯಿಂದ ಹೊಸ ನಿಯಮವನ್ನ ಜಾರಿಗೆ ತರಲಾಗಿದೆ. ನೇಮಕಕ್ಕೂ ಮೊದಲು ಎಲ್ಲಾ ಚಾಲಕರ ಮತ್ತು ಸಹಾಯಕರ ಹಿನ್ನೆಲೆಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ. ಜೊತೆಗೆ ಪ್ರತಿ ಖಾಸಗಿ ಶಾಲಾ ವಾಹನಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಲು ಆದೇಶಿದ್ದು, ನಿಗದಿತ ಸಂಖ್ಯೆಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗದಂತೆ ಚಾಲಕರಿಗೆ ಸೂಚನೆ ನೀಡಲಾಗಿದೆ.

Read More

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ 2023-24ನೇ ಸಾಲಿನ ಮೊದಲನೇ ಹಂತದ ಗ್ರಾಮಸಭೆಯನ್ನು ಕಂಟನಕುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಸಲಾಯಿತು. ಶಾಲಾ ಆವರಣದಲ್ಲಿ ಗ್ರಾಮಸಭೆ ಆಯೋಜನೆ ಮಾಡಿ ದ್ವನಿವರ್ಧಕ ಬಳಸಿದ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಪಾಠ ಪ್ರವಚನಕ್ಕೆ ತೊಂದರೆ ಉಂಟಾಗಿತ್ತು. ಶಾಲಾ ಶಿಕ್ಷಕರ ಬಳಿ ಶಾಲಾ ಆವರಣದಲ್ಲಿ ಗ್ರಾಮ ಸಭೆ ನಡೆಸಲು ಅವಕಾಶ ಕೊಡಲು ಕಾರಣವೇನು ಎಂಬ ಮಾದ್ಯಮಗಳ ಪ್ರಶ್ನೆಗೆ ಬೇಜವಾಬ್ದಾರಿಯಿಂದ ಉತ್ತರಿಸಿದ ಶಿಕ್ಷಕ ಧನಂಜಯ ಅವರು, ಮಾಡಲಿ ಬಿಡಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಿಂತಲೂ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡವರಲ್ಲ, ಏನಾದರೂ ಮಾಡಿಕೊಳ್ಳಲಿ ಎಂದು ಉದ್ಧಟತನದಿಂದ ಉತ್ತರಿಸಿದರು ಎನ್ನಲಾಗಿದೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ರಂಗಪ್ಪ ಅವರು ಪ್ರತಿಕ್ರಿಯಿಸಿ, ಕೂಸಿನ ಮನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಶಾಲಾ ಆವರಣದಲ್ಲಿ ಗ್ರಾಮಸಭೆ ನಡೆಸಲು ಸಂಬಂಧಪಟ್ಟವರು ಯಾವುದೇ ರೀತಿಯ ಅನುಮತಿಯನ್ನೂ ಪಡೆದುಕೊಂಡಿಲ್ಲ. ಈ ಕುರಿತು ಶಾಲಾ ಮುಖ್ಯೋಪಾಧ್ಯಯರಿಂದ ವರದಿ…

Read More

ಬೆಂಗಳೂರು: ಆಸ್ಪತ್ರೆಗಳು ಮತ್ತು ರಕ್ತನಿಧಿಗಳು ರಕ್ತವನ್ನು ಮಾರಾಟ ಮಾಡುವಂತಿಲ್ಲ ಎಂದು ಕೇಂದ್ರ ಸರಕಾರ ಆದೇಶ ಹೊರಡಿಸಿದ್ದು ಇದರ ಹಿಂದೆ ಸಾಕಷ್ಟು ಅಕ್ರಮ ನಡೆಯುತ್ತಿದ್ದು ಇದನ್ನು ತಡೆಯಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. https://ainlivenews.com/electricity-rate-hike-shock-again-for-the-people-of-the-state/ ರಕ್ತಕ್ಕೆ ದುಬಾರಿ ದರ ವಿಧಿಸುವುದನ್ನು ತಪ್ಪಿಸಲು ಈ ನಿರ್ಣಯ ತೆಗೆದುಕೊಳ್ಳಲಾಗಿದೆ. 62ನೇ ಉದ್ದೀಪನ ಸಲಹಾ ಸಮಿತಿ ಸಭೆಯಲ್ಲಿ ಮೇಲಿನ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿದ್ದ ತಜ್ಞರು ರಕ್ತವನ್ನು ಮಾರಾಟ ಮಾಡಬಾರದು ಎಂಬ ಸ್ಪಷ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಪ್ರಸ್ತುತ ಆಸ್ಪತ್ರೆಗಳು, ರಕ್ತನಿಧಿಗಳಲ್ಲಿ ಒಂದು ಯುನಿಟ್ ರಕ್ತಕ್ಕೆ ಸರಾಸರಿ 2 ಸಾವಿರ ರೂ.ಗಳಿಂದ 6 ಸಾವಿರ ರೂ.ಗಳವರೆಗೆ ಹಣ ಪಡೆಯಲಾಗುತ್ತಿದೆ. ಕೇಂದ್ರ ಸರಕಾರ ಇತರ ಎಲ್ಲ ಶುಲ್ಕಗಳನ್ನು ರದ್ದು ಮಾಡಿರುವುದರಿಂದ ರಕ್ತ ನೀಡುವ ಆಸ್ಪತ್ರೆ, ರಕ್ತನಿಧಿಗಳು ಸಾಮಾನ್ಯ ರಕ್ತಕ್ಕೆ 250 ರೂ.ಗಳಿಂದ 1,550 ರೂ. ಮಾತ್ರ ಪಡೆಯಬೇಕಾಗುತ್ತದೆ. ಪ್ಲಾಸ್ಲಾ, ಪ್ಲೇಟ್‌ಲೆಟ್‌ಗಳಿಗಾದರೆ ಒಂದು ಯೂನಿಟ್‌ಗೆ 400 ರೂ. ಮಾತ್ರ ಹಣ ಪಡೆಯಬೇಕು. ರಕ್ತಪೂರೈಕೆ ಮಾಡುವಾಗ ಹೆಚ್ಚುವರಿ ಪರೀಕ್ಷೆಗಳಿಗೆ ಸರಕಾರ ಪ್ರತ್ಯೇಕ ದರ ನಿಗದಿಪಡಿಸಲಿದೆ.

Read More

ಚಾಮರಾಜನಗರ: ಲೋಕಸಭಾ ಚುನಾವಣೆಗೂ ಮುನ್ನವೇ ಯ್ಯೂತ್ ಕಾಂಗ್ರೆಸ್ ಫುಲ್ ಆಕ್ಟೀವ್ ಆಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ಕೇರಳ ಮಾಜಿ ಸಿಎಂ ಉಮನ್ ಚಾಂಡಿ ಪುತ್ರ ಆಗಮಿಸಿದ್ದಾರೆ.  ಬುಡಕಟ್ಟು ಜನರ ಓಲೈಕೆಗೆ ಕಾಂಗ್ರೆಸ್ ಮುಂದಾಗಿದ್ದು, ಕನ್ನಡದಲ್ಲೇ ಮಾತು ಆರಂಭಿಸಿ ಎಲ್ಲರ ಗಮನ ಸೆಳೆದರು. ಹಾಡಿ ಜನರಿಗಾಗಿ ಹೆಲ್ತ್, ಕಣ್ಣಿನ ತಪಾಸಣೆ ಶಿಬಿರ ಹಾಗೂ ಬುಡಕಟ್ಟು ಮಕ್ಕಳಿಗೆ ವಿಧ್ಯಾಭ್ಯಾಸಕ್ಕೆ ಪರಿಕರಗಳ ವಿತರಣೆ ಮಾಡುವುದಾಗಿ ಯೂತ್ ಕಾಂಗ್ರೆಸ್ ಔಟ್ರೀಚ್ ಸೆಲ್ ರಾಷ್ಟ್ರೀಯ ಅಧ್ಯಕ್ಷ ಕೇರಳ ಶಾಸಕ ಚಾಂಡಿ ಉಮನ್ ಬುಡಕಟ್ಟು ಜನರ ಓಲೈಕೆ ಮಾಡಿದರು.

Read More

ಕಲಬುರಗಿ: ರಾಜ್ಯದ ಎಲ್ಲಾ ಭಾಗಗಳಲ್ಲಿ ಸರ್ಕಾರ ಪ್ರತಿಷ್ಠಾನಗಳನ್ನ ಸ್ಥಾಪಿಸಿ ಆ ಪ್ರತಿಷ್ಠಾನಕ್ಕೆ ಅಧ್ಯಕ್ಷ ಮತ್ತು ಸದಷ್ಯರನ್ನ ನೇಮಕ ಮಾಡಿ ಕಲ್ಯಾಣ ಕರ್ನಾಟಕಕ್ಕೆ ಮಾತ್ರ ನಿರ್ಲಕ್ಷ ಮಾಡಿದೆ ಅಂತ ಸಾಹಿತಿ ಸ್ವಾಮಿರಾವ್ ಕುಲಕರ್ಣಿ ಹೇಳಿದ್ದಾರೆ.. ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸ್ವಾಮಿರಾವ್ ಈಗಾಗಲೇ ಬೆಂಗಳೂರು, ಬಾಗಲಕೋಟೆ, ಹಾವೇರಿ ಸೇರಿದಂತೆ 26 ಜಿಲ್ಲೆಗಳಲ್ಲಿ ಪ್ರತಿಷ್ಠಾನಗಳಿವೆ ಆದ್ರೆ ಕಲಬುರಗಿ ಸೇರಿದಂತೆ ಕಲ್ಯಾಣ ಭಾಗಕ್ಕೆ ಮಾತ್ರ ಸರ್ಕಾರ ಕಡೆಗಣನೆ ಮಾಡಿದೆ.ಕಲ್ಯಾಣದಲ್ಲಿಯೂ ಸಾಹಿತಿಗಳು ಕಲಾವಿದರೂ ಬಹಳಷ್ಟು ಜನ ಇದ್ದಾರೆ ಹೀಗಾಗಿ ದಿವಂಗತ ಚನ್ನಣ್ಣ ವಾಲೀಕಾರ್ ಹೆಸರಲ್ಲಿ ಕಲಬುರಗಿಯಲ್ಲೊಂದು ಪ್ರತಿಷ್ಠಾನ ಸ್ಥಾಪನೆ ಮಾಡಿ ಅಂತ ಸರ್ಕಾರದ ಬಳಿ ನಿಯೋಗ ತೆಗೆದುಕೊಂಡು ಹೋಗುವ ಕೆಲಸ ಮಾಡ್ತೇವೆ ಅಂತ ಸುರಪುರ ಪ್ರಕಾಶನ ಹಾಗು ರಂಗಸಂಗಮ ಕಲಾ ವೇದಿಕೆ ತಿಳಿಸಿದೆ.

Read More

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು/ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಇಂದು ಡಿಸಿಎಂ ಡಿ.ಕೆ,ಶಿವಕುಮಾರ್‌ ಅವರು ಯಲಹಂಕ, ಬ್ಯಾಟರಾಯನಪುರ ಹಾಗೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳನ್ನು ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು. ಯಲಹಂಕದಲ್ಲಿ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಡಿಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವರ ನೇತೃತ್ವದಲ್ಲಿ  ಜನರ ಸಮಸ್ಯೆಗಳನ್ನು ಆಲಿಸಿ ಅಲ್ಲೆ ಪರಿಹಾರ ಕಾರ್ಯ ನೀಡಿ ಕೂಡ ಒದಗಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು/ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಸನ್ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಶ್ರೀ ಡಿ.ಕೆ ಶಿವಕುಮಾರ್ ಅವರು ಯಲಹಂಕ, ಬ್ಯಾಟರಾಯನಪುರ ಹಾಗೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಈ ವೇಳೆ ಕಂದಾಯ ಸಚಿವರು ಹಾಗೂ ಬ್ಯಾಟರಾಯನಪುರ ಶಾಸಕರಾದ  ಕೃಷ್ಣ ಬೈರೇಗೌಡ,…

Read More

ಚಾಮರಾಜನಗರ: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನ ಹಿಂದುಜಾಗರಣ ವೇದಿಕೆ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೇಗೂರು ಮಾರ್ಗವಾಗಿ  ಕೆಎ 09 – ಸಿ 0111 ನೋಂದಣಿಯ ಅಶೋಕ್ ಲೈಲ್ಯಾನ್ಡ್ ಮಿನಿ ವಾಹನದಲ್ಲಿ ಗೌಪ್ಯವಾಗಿ ಸಾಗಿಸುತ್ತಿದ್ದ, ವೇಳೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಾದ ನಂಜುಂಡ, ಅಣ್ಣಯ್ಯ ಇತರರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ನಂತರ ಬೇಗೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಕುರಿತಂತೆ ಬೇಗೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Read More