Author: AIN Author

ಬಿಗ್ ಬಾಸ್ ಖ್ಯಾತಿಯ ಶಶಿ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಚಿತ್ರತಂಡ ‘ಮೆಹಬೂಬ’. ಪೋಸ್ಟರ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿಂದು ಕೃಷಿ ಸಚಿವ ಚಲುವರಾಯಸ್ವಾಮಿ ಪೋಸ್ಟರ್ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ. ಬಳಿಕ ಸಚಿವ ಚಲುವನಾರಾಯಣಸ್ವಾಮಿ ಮಾತನಾಡಿ, ಮೆಹಬೂಬಾ ಸಿನಿಮಾಗೆ ಶಶಿ ಪ್ರೊಡ್ಯೂಸರ್ – ಹೀರೋ ಅವರೇ..ಲಾಭ-ನಷ್ಟ ಹಾಗೂ ಹೆಸರು ಅವ್ರದ್ದೇ. ರಾಜ್ಯದ ಜನ ಆಶೀರ್ವಾದ ಮಾಡಬೇಕಾಗುತ್ತದೆ. ನಾಯಕಿ ನನ್ನ ಗೆಳೆಯನ ಮಗಳು. ಹೀಗಾಗಿ ಇಬ್ಬರಿಗೆ ಸಿನಿಮಾ ಸಕ್ಸಸ್ ತರಲಿ. ಇತ್ತೀಚೆಗೆ ಅನೇಕ ಚಿತ್ರಗಳು ಸಕ್ಸಸ್ ಆಗುತ್ತಿವೆ. ಜನರಿಗೆ ಯಾವ ರೀತಿ ಚಿತ್ರಗಳು ಇಷ್ಟಪಡುತ್ತಾರೆ. ಇಷ್ಟಪಡಲ್ಲ ಅನ್ನುವುದು ಊಹೆ ಮಾಡಲು ಆಗುವುದಿಲ್ಲ. ನಿಮ್ಮೆಲ್ಲ ಸಹಕಾರ ಇಡೀ ತಂಡ ಮೇಲೆ ಇರಲಿ ಎಂದರು. ನಾಯಕ ಶಶಿ ಮಾತನಾಡಿ, ಮೆಹಬೂಬ ನನಗೆ ಎಮೋಷನಲ್ ಜರ್ನಿ. ಒಂದು ವಿಷಯವನ್ನು ಜನರಿಗೆ ತಲುಪಬೇಕು ಎನ್ನುವುದು ನಮ್ಮ ಸಿನಿಮಾ ಅಜೆಂಡವಾಗಿರುತ್ತದೆ. 200 ಸಿನಿಮಾಗಳು ಬಂದರು. ಹೆಸರುಮಾಡೋದು 10 ರಿಮದ…

Read More

ಬೆಂಗಳೂರು : ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರು ಸೇರಿದಂತೆ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿ ಭಾಗಗಳಾದ ಉಡುಪಿ, ಮಂಗಳೂರು ಹಾಗೂ ಕಾರವಾರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ…

Read More

ಹಾಸನ: ಹುಟ್ಟಿದ ಒಂದೇ ದಿನಕ್ಕೆ ಗಂಡು ಮಗುವನ್ನು ಮಾರಾಟ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ತಾಯಿ ಗಿರಿಜಾ, ಆಶಾ ಕಾರ್ಯಕರ್ತೆ ಸುಮಿತ್ರಾ, ಮಗುವನ್ನು ಕೊಂಡ ಮಹಿಳೆ ಉಷಾ ಹಾಗು ಮಗು ಕೊಡಲು ಪ್ರೇರಣೆ ನೀಡಿದ ಆರೋಪದಲ್ಲಿ ಶ್ರೀಕಾಂತ್ ಹಾಗು ಸುಬ್ರಹ್ಮಣ್ಯ ಎಂಬುವವರನ್ನು ಬಂಧಿಸಲಾಗಿದೆ. https://ainlivenews.com/1603-vacancies-in-indian-oil-company-today-is-the-last-day-apply-soon/ ತಾಯಿ ಮಗುವಿನ ರಕ್ಷಣೆ ಬಗ್ಗೆ ಗಮನಹರಿಸಬೇಕಿದ್ದ ಆಶಾ ಕಾರ್ಯಕರ್ತೆ ಯಿಂದಲೇ ಅನಧಿಕೃತ ಮಗು ಮಾರಾಟಕ್ಕೆ ಬೆಂಬಲ ನೀಡುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆ ಮುಂದುವರಿದಿದ್ದು, ಮಗುವಿಗೆ ಹಾಸನ ಮಕ್ಕಳ ರಕ್ಷಣಾ ಘಟಕದಲ್ಲಿ ಆಶ್ರಯ ನೀಡಿರುವ ಅಧಿಕಾರಿಗಳು. ಸಕಲೇಶಪುರ ಗ್ರಾಮಾಂತರ ಠಾಣೆ ಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

Read More

ಕಳೆದ ನವೆಂಬರ್ ನಲ್ಲಿ ಮದುವೆಯಾಗಿದ್ದ ಹೆಬ್ಬುಲಿ ಖ್ಯಾತಿಯ ನಟಿ ಅಮಲಾ ಪೌಲ್ (Amala Paul), ಅಭಿಮಾನಿಗಳಿಗೆ ಖುಷಿ ಮತ್ತು ಶಾಂಕಿಂಗ್ ಸುದ್ದಿಯನ್ನು ಒಟ್ಟೊಟ್ಟಿಗೆ ನೀಡಿದ್ದಾರೆ. ಅವರು ಮದುವೆಯಾಗಿ ಇನ್ನೂ ಎರಡು ತಿಂಗಳೂ ಆಗಿಲ್ಲ, ಆಗಲೇ ತಾವು ಗರ್ಭಿಣಿ ಎಂದು ಹೇಳಿಕೊಂಡಿದ್ದಾರೆ. ಪ್ರೆಗ್ನಿಸಿಯ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ. ಮದುವೆಗೂ ಮುನ್ನ ಅಮಲಾ ಗರ್ಭಿಣಿಯಾಗಿದ್ದರಾ ಎನ್ನುವ ಅನುಮಾನವನ್ನು ಹಲವರು ವ್ಯಕ್ತ ಪಡಿಸಿದ್ದಾರೆ. ಕೆಲವರು ಮದುವೆಗೂ ಮುನ್ನ ಅವರು ಸಹಜೀವನ ನಡೆಸುತ್ತಿರಬೇಕು. ಪ್ರೆಗ್ನೆಂಟ್ ಅಂತ ಗೊತ್ತಾದ ತಕ್ಷಣ ಮದುವೆಯಾಗಿರಬೇಕು ಎಂದು ಅನುಮಾನವನ್ನೂ ಹಲವರು ಹಂಚಿಕೊಂಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ‘ಇಬ್ಬರು ಮೂವರಾಗುತ್ತಿದ್ದೇವೆ’ ಎಂದು ನಟಿ ಅಮಲಾ ಬೇಬಿ ಬಂಪ್ (Baby Bump) ಫೋಟೋ ಶೇರ್ ಮಾಡಿ ಬರೆದುಕೊಂಡಿದ್ದರು. ನಟಿಯ ಪೋಸ್ಟ್‌ಗೆ ನಟ-ನಟಿಯರು, ಅಭಿಮಾನಿಗಳು ಶುಭಕೋರಿದ್ದರು. ಜೊತೆಗೆ ಸಾಕಷ್ಟು ಪ್ರಶ್ನೆಗಳನ್ನೂ ಕೇಳಲಾಗಿದೆ. ‘ಹೆಬ್ಬುಲಿ’ ನಟಿ ಅಮಲಾ ಪೌಲ್ ಅವರು 2023ರ ನವೆಂಬರ್‌ನಲ್ಲಿ ಜಗತ್ ದೇಸಾಯಿ (Jagat Desai) ಜೊತೆ ಕೊಚ್ಚಿಯಲ್ಲಿ ಮದುವೆಯಾದರು.…

Read More

ಧಾರವಾಡ: ಇಡೀ ದೇಶವೇ ಕಾತುರದಿಂದ ಕಾಯುತ್ತಿರುವ ದಿನ ಜ.22. ಏಕೆಂದರೆ ಆ ದಿನ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರ ಅಯೋಧ್ಯೆಯಲ್ಲಿ ತಲೆ ಎತ್ತಿ ನಿಲ್ಲಲಿದ್ದಾನೆ. ಆ ದಿನವನ್ನು ಕಣ್ತುಂಬಿಸಿಕೊಳ್ಳಲು ಇಡೀ ದೇಶವೇ ತುದಿಗಾಲ ಮೇಲೆ ನಿಂತಿದೆ. ಈಗಾಗಲೇ ಪ್ರಭು ಶ್ರೀರಾಮಚಂದ್ರನ ಪ್ರಾಣಪ್ರತಿಷ್ಠಾಪನೆಗಾಗಿ ದೇಶದ ಮೂಲೆ ಮೂಲೆಗಳಿಂದ ಬಗೆ ಬಗೆ ವಸ್ತುಗಳು ಹೋಗುತ್ತಿವೆ. ಇದಕ್ಕೆ ನಮ್ಮ ಹೆಮ್ಮೆಯ ಧಾರವಾಡ ಕೂಡ ಹೊರತಾಗಿಲ್ಲ. ಹೌದು! ವಿದ್ಯಾಕಾಶಿ ಧಾರವಾಡ ವಿಶಿಷ್ಟತೆಗಳಲ್ಲಿ ವಿಶಿಷ್ಟತೆ ಹೊಂದಿದ ಜಿಲ್ಲೆ. ಈ ಜಿಲ್ಲೆಯಿಂದ ಇದೀಗ ಮರ್ಯಾದಾ ಪುರುಷೋತ್ತಮನಿಗೆ ಗೊಂಗಡಿಗಳು ಹೋಗುತ್ತಿವೆ. ಗೊಂಗಡಿ ಎಂದರೆ ಅದು ಕಂಬಳಿ. ರೈತರು ಈ ಕಂಬಳಿಗಳನ್ನು ದೇವರ ಸ್ವರೂಪದಲ್ಲಿ ಕಾಣುತ್ತಾರೆ. ಶುಭ ಕಾರ್ಯಗಳಿಗೆ ಈ ಕಂಬಳಿಗಳು ಬೇಕೇ ಬೇಕು.  ಇದೀಗ ಧಾರವಾಡದಲ್ಲಿ ಪ್ರಭು ಶ್ರೀರಾಮ ಚಂದ್ರನಿಗಾಗಿಯೇ ವಿಶೇಷವಾಗಿ ತಯಾರಿಸಲಾದ ಕಂಬಳಿಗಳು ಅಯೋಧ್ಯೆಗೆ ಹೊರಟಿವೆ. ಧಾರವಾಡದ ರೈತರ ಓಣಿ ಎಂದೇ ಕರೆಯಲಾಗುವ ಕಮಲಾಪುರ ಬಡಾವಣೆಯ ಸುಭಾಷ ರಾಯಣ್ಣವರ ಅವರು ಮೂರು ತಲೆಮಾರುಗಳಿಂದ ಕಂಬಳಿ ಕಟ್ಟುತ್ತ ಬಂದಿದ್ದಾರೆ. ಇದೀಗ ಸುಭಾಷ್…

Read More

ಸಂಕ್ರಾಂತಿ ಸಂಭ್ರಮವನ್ನು ಡಬಲ್ ಮಾಡೋದಿಕ್ಕೆ ಬರುತ್ತಿರುವ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಕ್ಯಾಪ್ಟನ್ ಮಿಲ್ಲರ್. ಕನ್ನಡಿಗರು ಕಾತುರದ ಕಣ್ಣುಗಳಿಂದ ಈ ಚಿತ್ರ ಎದುರು ನೋಡುತ್ತಿರುವುದಕ್ಕೆ ಕಾರಣ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್. ಧನುಷ್ ನಾಯಕನಾಗಿ ನಟಿಸಿರುವ ಕ್ಯಾಪ್ಟನ್ ಮಿಲ್ಲರ್ ಚಿತ್ರದಲ್ಲಿ ಶಿವಣ್ಣ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.  ಈಗಾಗಲೇ ಟೀಸರ್ ಹಾಗೂ ಎರಡು ಹಾಡುಗಳ ಮೂಲಕ ಗಮನ ಸೆಳೆದಿರುವ ಈ ಸಿನಿಮಾದ ಮೂರನೇ ಸಾಂಗ್ ಅನಾವರಣಗೊಂಡಿದೆ. ಬಹು ಭಾಷೆಯಲ್ಲಿ ಹಾಡು ರಿಲೀಸ್ ಆಗಿದ್ದು, ಕನ್ನಡದಲ್ಲಿ ಪ್ರಮೋದ್ ಜೋಯಿಸಿ  ಸಾಹಿತ್ಯ ಬರೆದಿದ್ದು, ದರ್ಶನ್ ನಾರಾಯಣ್ ಹಾಗೂ ಶೆಂಬಾಗರಾಜ್ ಧ್ವನಿಯಾಗಿದ್ದಾರೆ. ಜಿ.ವಿ.ಪ್ರಕಾಶ್ ಸಂಗೀತ ಈರಪ್ಪನು ಎಂಬ ಸಾಹಿತ್ಯದ ಮಸ್ತ್ ಗಾನಬಜಾನಕ್ಕೆ ಶಿವಣ್ಣ ಧನುಷ್ ಕುಣಿದು ಕುಪ್ಪಳಿಸಿದ್ದಾರೆ. ಕ್ಯಾಪ್ಟನ್ ಮಿಲ್ಲರ್ ಪ್ಯಾನ್ ಇಂಡಿಯಾ ಸಿನಿಮಾ  ಆಗಿದೆ. ತಮಿಳು, ತೆಲುಗು, ಕನ್ನಡ, ಹಿಂದಿ ಹೀಗೆ ಎಲ್ಲ ಭಾಷೆಯಲ್ಲಿಯ ಈ ಚಿತ್ರ ಬರುತ್ತಿದೆ. ಹಾಗಾಗಿಯೇ ಈ ಹಾಡನ್ನ ಬಹು ಭಾಷೆಯಲ್ಲಿಯೇ ಬಿಡುಗಡೆ ಮಾಡಲಾಗಿದೆ. ಸಿನಿಮಾವನ್ನು ಅರುಣ್ ಮಾಥೇಶ್ವರನ್ ನಿರ್ದೇಶಿಸಿದ್ದಾರೆ. ಧನುಷ್ ಜೋಡಿಯಾಗಿ ಪ್ರಿಯಾಂಕಾ…

Read More

ರಾಮನಗರ: ಅತ್ತ ರಾಮಮಂದಿರ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ (Congress- BJP) ನಡುವೆ ಧರ್ಮ ಯುದ್ಧ ನಡೆಯುತ್ತಿದ್ದರೆ ಇತ್ತ ರಾಮನಗರದ ಕೈ ಶಾಸಕರೊಬ್ಬರು ರಾಮೋತ್ಸವದ ಜಪ ಮಾಡಿದ್ದಾರೆ. ನಾನು ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡ್ತೀನಿ ಎಂದು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ತಿಳಿಸಿದ್ದಾರೆ. ರಾಮಮಂದಿರ (Ram Mandir) ಉದ್ಘಾಟನೆ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ ಎಂಬ ಕುರಿತು ಮಾತನಾಡಿದ ಅವರು, ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಅಂತ ಚಿಂತನೆ ಮಾಡಿದ್ವಿ. ಅದನ್ನ ಭಕ್ತಿ ಪೂರ್ವಕವಾಗಿ ಮಾಡಿಯೇ ಮಾಡ್ತೀವಿ. ನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನ ಪೂಜಿಸ್ತೇನೆ ಎಂದರು. https://ainlivenews.com/1603-vacancies-in-indian-oil-company-today-is-the-last-day-apply-soon/ ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಹಾಗೆಯೇ ರಾಮನ ಪೂಜೆಯನ್ನೂ ಮಾಡುತ್ತೇನೆ. ರಾಮಮಂದಿರ ವಿಚಾರವನ್ನ ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ ನಾವು ಇದನ್ನ ರಾಜಕೀಯವಾಗಿ ಬಳಸಿಕೊಳ್ಳಲ್ಲ. ಜನರನ್ನ ಒಡೆದು ಕೆಲವರು ಇದರಲ್ಲಿ ರಾಜಕೀಯ ಮಾಡ್ತಿದ್ದಾರೆ. ಆದರೆ ಕಾಂಗ್ರೆಸ್ ಗೆ ತನ್ನದೇ ಆದ ಬದ್ಧತೆ, ಸಿದ್ದಾಂತ ಇದೆ ಎಂದು ಶಾಸಕರು ಹೇಳಿದರು. 

Read More

ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಕೃಷ್ಣಂ ಪ್ರಣಯ ಸಖಿ ಚಿತ್ರದ ನಾಯಕಿ ಮಾಳವಿಕ ನಾಯರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ನಾಯಕಿ ಮಾಳವಿಕ ನಾಯರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ  ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಕೃಷ್ಣಂ ಪ್ರಣಯ ಸಖಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ,  ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್,  ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

Read More

ಎರಡು ದಿನಗಳ ಕಾಲ ತಮಿಳುನಾಡು, ಕೇರಳ ಮತ್ತು ಲಕ್ಷದ್ವೀಪ ಪ್ರವಾಸದಲ್ಲಿದ್ದ ಮೋದಿ ಅವರು ಹಲವು ಮನಮೋಹಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಲಕ್ಷದ್ವೀಪದಲ್ಲಿ ಸ್ನಾರ್ಕ್ಲಿಂಗ್ (Snorkeling) ಮಾಡುತ್ತಿರುವ ಫೋಟೋಗಳು ಹಾಗೂ ಕಡಲತೀರಗಳಲ್ಲಿ ಮಾರ್ನಿಂಗ್ ವಾಕ್‌ ಮಾಡುತ್ತಾ ಅನುಭವಿಸಿದ ಸುಂದರ ಕ್ಷಣಗಳ ಫೋಟೋಗಳನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಧಾನಿ ಹಂಚಿಕೊಂಡ ಚಿತ್ರದಲ್ಲಿ, ಅವರು ಸಮುದ್ರತೀರದಲ್ಲಿ ಕುರ್ಚಿಯ ಮೇಲೆ ಕುಳಿತು ಕಾಲ ಕಳೆಯುತ್ತಿರುವುದು, ಈ ವೇಳೆ ಅವರು ಲಕ್ಷದ್ವೀಪದ ಪ್ರಕೃತಿ ಸೌಂದರ್ಯವನ್ನು ಸವಿದಿದ್ದಾರೆ. ಮತ್ತೊಂದು ಚಿತ್ರದಲ್ಲಿ, ಕಪ್ಪು ಕುರ್ತಾ ಪೈಜಾಮಾ ಧರಿಸಿ ಬೀಚ್‌ನಲ್ಲಿ ದಡದಲ್ಲೇ ನಡೆದಾಡುತ್ತಾ ಕಡಲ ತೀರದ ಸೌಂದರ್ಯ ಸವಿದಿದ್ದಾರೆ. ಮತ್ತೊಂದು ಚಿತ್ರದಲ್ಲಿ ಸಮುದ್ರತೀರದಲ್ಲಿ ಶಾಲು ಹೊದ್ದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಪ್ರವಾಸವನ್ನು ಇಷ್ಟಪಡುವ ಜನರು ಖಂಡಿತವಾಗಿಯೂ ಈ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಮೋದಿ, ಪ್ರಾಚೀನ ಕಡಲತೀರಗಳ ಉದ್ದಕ್ಕೂ ಆ ಮುಂಜಾನೆ ನಡಿಗೆಗಳು ಹೆಚ್ಚು ಆನಂದದ ಕ್ಷಣಗಳಾಗಿದ್ದವು. ರಮಣೀಯ ಸೌಂದರ್ಯದ ಜೊತೆಗೆ ಲಕ್ಷದ್ವೀಪದ ಪ್ರಶಾಂತತೆಯೂ ಮನಮೋಹಕವಾಗಿದೆ

Read More

ಮಾಜಿ ಬಿಗ್ ಬಾಸ್ ಸ್ಪರ್ಧಿ, ಮಾಡೆಲ್ ಉರ್ಫಿ ಜಾವೇದ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಎನ್ನುವಂತೆ ಅವರ ಬಾಯಿಗೆ ಮಾಸ್ಕ್ ಕೂಡ ಹಾಕಲಾಗಿದೆ. ಬೆಡ್ ಮೇಲೆ ಮಲಗಿರುವ ಸ್ಥಿತಿಯಲ್ಲೇ ಎರಡು ಕೈಗಳನ್ನು ಮೇಲಕ್ಕೆತ್ತಿ ಗೆಲ್ಲುವ ಸಿಂಬಲ್ ತೋರಿಸಿದ್ದಾರೆ ಉರ್ಫಿ. ಅಷ್ಟಕ್ಕೂ ಉರ್ಫಿಗೆ ಏನಾಯಿತು? ಗೊತ್ತಿಲ್ಲ. ಆದರೆ, ಆಸ್ಪತ್ರೆಯಲ್ಲಿ ಮಲಗಿರುವ ಫೋಟೋವನ್ನು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ. ಆ ಫೋಟೋ ಕಂಡು ಅನೇಕರು ನೆಗೆಟಿವ್ ಕಾಮೆಂಟ್ ಮಾಡಿದ್ದಾರೆ. ಮತ್ತೆ ಬದುಕಿ ಬರಬೇಕು ಎನ್ನುವ ಅರ್ಥದಲ್ಲೂ ಕಾಮೆಂಟ್ ಮಾಡಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಉರ್ಫಿ ಆ ಫೋಟೋವನ್ನು ಇನ್ಸ್ಟಾ ಖಾತೆಯನ್ನು ಡಿಲಿಟ್ ಮಾಡಿದ್ದಾರೆ. ಹಾಗಾಗಿ ಉರ್ಫಿ ಅಭಿಮಾನಿಗಳನ್ನು ದಾರಿ ತಪ್ಪಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಬೇರೆ ಬೇರೆ ಕಾರಣಕ್ಕಾಗಿ ಈ ರೀತಿ ಅವರು ಮಾಡಿದ್ದಾರೆ. ಪೊಲೀಸರು ಅರೆಸ್ಟ್ ಮಾಡಿಕೊಂಡು ಹೋದರು ಎನ್ನುವಂತೆ ಈ ಹಿಂದೆ ಸೀನ್ ಕ್ರಿಯೇಟ್ ಮಾಡಿದ್ದರು. ಅದಕ್ಕಾಗಿ ಅವರ ಮೇಲೆ ದೂರು ಕೂಡ ದಾಖಲಾಗಿತ್ತು. ಈಗ ಆಸ್ಪತ್ರೆಯಲ್ಲಿರುವ…

Read More