Author: AIN Author

ವಿಶೇಷವಾಗಿ ದೇಹವನ್ನು ಆರೋಗ್ಯಕರವಾಗಿ ಮತ್ತು ಫಿಟ್ ಆಗಿ ಇರಿಸಿಕೊಳ್ಳಲು, ನೀವು ದೇಸಿ ತುಪ್ಪವನ್ನು ನಿಯಮಿತವಾಗಿ ಸೇವಿಸಬೇಕು ಎನ್ನುತ್ತಾರೆ. ದೇಸಿ ತುಪ್ಪದ ಗುಣಲಕ್ಷಣಗಳು ದೇಹಕ್ಕೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ಆಯುರ್ವೇದ ತಜ್ಞರು ಸೂಚಿಸುವ ಕೆಲವು ಆಹಾರ ಪದಾರ್ಥಗಳ ಜತೆ ದೇಸಿ ತುಪ್ಪವನ್ನು ಸೇರಿಸಿದರೆ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಹೀಗಾಗಿ ಯಾವ ಆಹಾರ ಪದಾರ್ಥಗಳನ್ನು ಬೆರೆಸಿ ತಿನ್ನಬಹುದು ಎಂಬುದನ್ನು ನಾವೀಗ ತಿಳಿಯೋಣ. ಅರಿಶಿನ, ದೇಸಿ ತುಪ್ಪ: ಪ್ರತಿದಿನ ಒಂದು ಚಮಚ ಅರಿಶಿನವನ್ನು ದೇಸಿ ತುಪ್ಪದೊಂದಿಗೆ ಬೆರೆಸಿ ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಉರಿಯೂತ ನಿವಾರಕ ಗುಣಗಳು ಅರಿಶಿನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ. ಇದಲ್ಲದೆ, ತುಪ್ಪದಲ್ಲಿರುವ ಬ್ಯುಟರಿಕ್ ಆಮ್ಲವು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಎರಡನ್ನು ಒಟ್ಟಿಗೆ ಸೇವಿಸುವುದರಿಂದ ದೇಹದ ಊತ ಮತ್ತು ನೋವನ್ನು ಸುಲಭವಾಗಿ ನಿವಾರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಒಣ ಶುಂಠಿ ಮತ್ತು ದೇಸಿ ತುಪ್ಪ: ಒಣ ಶುಂಠಿಯ ಪುಡಿಯನ್ನು ದೇಸಿ ತುಪ್ಪದೊಂದಿಗೆ ಸೇವಿಸುವುದರಿಂದ ಶೀತ ಮತ್ತು ಕೆಮ್ಮಿನಂತಹ ಸಮಸ್ಯೆಗಳನ್ನು…

Read More

ಮಂಗಳೂರು: ಹೆಸರಿಟ್ಟ ತಕ್ಷಣ ಎಲ್ಲರೂ ರಾಮನಾಗಲು ಸಾಧ್ಯವಿಲ್ಲ. ಸಿದ್ದರಾಮಯ್ಯರಲ್ಲಿ ರಾಮನ ಹೆಸರಿದೆ, ರಾವಣನ ಗುಣವಿದೆ ಎಂದು ನಿಕಟಪೂರ್ವ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ. ಮಾಜಿ ಸಚಿವ ಆಂಜನೇಯ ಅವರು ಸಿದ್ದರಾಮಯ್ಯನೇ ರಾಮ ಎಂಬ ಹೇಳಿಕೆ ವಿಚಾರವಾಗಿ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ರಾಮ ಎಂಬುದು ಭಾವನಾತ್ಮಕ ನಂಬಿಕೆಗಳ ಸಂಕೇತ. ಮರ್ಯಾದಪುರುಷ ರಾಮನನ್ನು ಆದರ್ಶಪುರುಷನಾಗಿ ಸ್ವೀಕರಿಸಲಾಗಿದೆ. ರಾಮನಿಗೆ ಇನ್ನೊಂದು ಹೋಲಿಕೆಯಿಲ್ಲ. ರಾಮನಿಗೆ ರಾಮನೇ ಹೋಲಿಕೆ. ಹೆಸರಿಟ್ಟ ತಕ್ಷಣ ಎಲ್ಲರೂ ರಾಮನಾಗಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದರು. ರಾಜ್ಯದಲ್ಲಿ ಗೋದ್ರಾ ಮಾದರಿಯ ಹತ್ಯಾಕಾಂಡಕ್ಕೆ ಸಂಚು, ಅಯೋಧ್ಯೆಗೆ ಹೋಗುವವರಿಗೆ ಭದ್ರತೆ ಕೊಡಬೇಕೆಂದು ಹೇಳಿಕೆ ನೀಡಿರುವ ಬಿ.ಕೆ.ಹರಿಪ್ರಸಾದ್ ಅವರ ಮೇಲೆ ಕಿಡಿ ಕಾರಿದ ಸಂಸದ ನಳಿನ್ ಕುಮಾರ್ ಕಟೀಲು ಅವರು, ತಕ್ಷಣ ಹರಿಪ್ರಸಾದ್ ಬಂಧನವಾಗಲಿ ಎಂದು ಸರಕಾರವನ್ನು ಆಗ್ರಹಿಸಿದರು. https://ainlivenews.com/stomach-ache-immediately-after-eating-so-try-this-home-remedy/ ಈ ಬಗ್ಗೆ ಸಿಎಂ, ಗೃಹಸಚಿವರು, ಉಪ ಮುಖ್ಯಮಂತ್ರಿಗಳು ತಮಗೇನು ಗೊತ್ತಿಲ್ಲ ಎನ್ನುತ್ತಿದ್ದಾರೆ. ಬಿ.ಕೆ.ಹರಿಪ್ರಸಾದ್ ತಮ್ಮಲ್ಲಿರುವ ಮಾಹಿತಿಯನ್ನು ಗೃಹ ಇಲಾಖೆಗೆ ನೀಡಲಿ. ಇಲ್ಲದಿದ್ದಲ್ಲಿ…

Read More

ಬೆಂಗಳೂರು:- ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ನಲ್ಲೂ ಊಟದಲ್ಲಿ ಜಿರಳೆ ಕಂಡು ಬಂದಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ನಲ್ಲಿ ಊಟ ಮಾಡುವಾಗ ಹೈಕೋರ್ಟ್ ವಕೀಲೆಗೆ ಜಿರಳೆ ಸಿಕ್ಕಿದೆ. ಗುರುವಾರ ಸಂಜೆ ನಡೆದ ಘಟನೆ ಇದಾಗಿದೆ. ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವ ದಿ ಕ್ಯಾಪಿಟಲ್ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ಕಳೆದ ದಿನ ಸಂಜೆ ಹೈಕೋರ್ಟ್ ವಕೀಲೆ ದಿ ಕ್ಯಾಪಿಟಲ್ ಹೋಟೆಲ್‌ಗೆ ಊಟಕ್ಕಾಗಿ ಹೋಗಿದ್ದರು. ಈ ವೇಳೆ ಪನ್ನೀರ್ ಗ್ರೇವಿಯನ್ನು ಆರ್ಡರ್ ಮಾಡಿದ್ದರು. ಆದರೆ ಇದನ್ನು ಸೇವಿಸುವಾಗ ಅವರಿಗೆ ಜಿರಳೆ ಕಂಡು ಬಂದಿದೆ. ಇದರಿಂದ ವಕೀಲೆ ಬೆಚ್ಚಿಬಿದ್ದಿದ್ದಾರೆ. ಹೈಕೋರ್ಟ್ ವಕೀಲೆ ಶೀಲಾ ಅವರಿಗೆ ಪ್ರತಿಷ್ಠಿತ ಹೋಟೆಲ್ ಊಟದಲ್ಲಿ ಜಿರಳೆ ಕಂಡುಬಂದಿದೆ. ಈ ವೇಳೆ ಕೋಪಗೊಂಡ ಅವರು ಹೋಟೆಲ್ ಸಿಬ್ಬಂದಿಗೆ ತರಾಟೆ ತೆಗೆದುಕೊಂಡಿದ್ದಾರೆ. ಆಗ ಸಿಬ್ಬಂದಿ ಉಡಾಫೆ ಮಾತನಾಡಿ ಬೇರೆ ಊಟ ಕೊಡುವುದಾಗಿ ಹೇಳಿದ್ದಾರೆ. ಇದರಿಂದ ಕೋಪಗೊಂಡ ಶೀಲಾ ಅವರು ನೇರ ಹೋಟೆಲ್ ಕಿಚನ್‌ಗೆ ತೆರಳಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಹೋಟೆಲ್ ಕಿಚನ್‌ಗೆ ತೆರಳುತ್ತಿದ್ದಂತೆ ಶೀಲಾ ಅವರು ಮತ್ತೊಮ್ಮೆ ಶಾಕ್…

Read More

ಬೆಳಗ್ಗೆಯ ತಿಂಡಿ ಮತ್ತು ಮಧ್ಯಾಹ್ನ ಊಟಕ್ಕೂ ಒಂದೇ ಆಗುವ ರೀತಿಯ ರೆಸಿಪಿ ಹೇಳುತ್ತಿದ್ದೇವೆ. ಪುಲಾವ್ ತಣ್ಣಗಾದ ನಂತರ ಬಹುತೇಕರಿಗೆ ಇಷ್ಟ ಆಗಲ್ಲ. ಇಂದು ನಾವು ಹೇಳುವ ಶೈಲಿಯಲ್ಲಿ ಪುಲಾವ್ ಮಾಡಿದ್ರೆ ತುಂಬಾನೇ ಸಾಫ್ಟ್ ಆಗಿರುತ್ತದೆ. ಸೋಯಾಬೀನ್ ಮತ್ತು ಪಾಲಕ್ ಬಳಸಿ ತುಂಬಾನೇ ಸಾಫ್ಟ್ ಆಗಿ ಮಾಡೋದು ಹೇಗೆ ಅಂತ ಹೇಳುತ್ತಿದ್ದೇವೆ. ಹೀಗೆ ಪುಲಾವ್ ತಯಾರಿಸಿದ್ರೆ ಎಲ್ಲರಿಗೂ ಇಷ್ಟವಾಗುತ್ತದೆ. ಸೋಯಾಬೀನ್-ಪಾಲಕ್ ಪುಲಾವ್ ಮಾಡಲು ಬೇಕಾಗುವ ಸಾಮಾಗ್ರಿಗಳು ಅಕ್ಕಿ: ಒಂದು ಕಪ್ ಸೋಯಾಬಿನ್: ಒಂದು ಕಪ್ ಪಾಲಕ್: ಒಂದು ಕಪ್ ಪುದಿನಾ: ಅರ್ಧ ಕಪ್ ಕೋತಂಬರಿ ಸೊಪ್ಪು: ಒಂದು ಹಿಡಿಯಷ್ಟು ಲವಂಗ: ಮೂರು ಪುಲಾವ್ ಎಲೆ: ಮೂರು ಚಕ್ಕೆ: ಅರ್ಧ ತುಂಡು ಈರುಳ್ಳಿ: ಒಂದು ಟೊಮೆಟೋ: ಒಂದು ಹಸಿ ಮೆಣಸಿನಕಾಯಿ: ಎರಡು ಹಸಿ ಶುಂಠಿ: ಅರ್ಧ ಇಂಚು ಜೀರಿಗೆ: ಒಂದು ಟೀ ಸ್ಪೂನ್ ಗೋಡಂಬಿ: 10 ರಿಂದ 15 ಹುಣಸೆ ಹಣ್ಣು: ನಿಂಬೆ ಹಣ್ಣಿನ ಗಾತ್ರದಷ್ಟು ತುಪ್ಪ: ಎರಡು ಟೀ ಸ್ಪೂನ್ ಅಡುಗೆ ಎಣ್ಣೆ:…

Read More

ವಿಜಯಪುರ:`ಹೆಸರಲ್ಲಿ ರಾಮ ಅಂತಿದ್ದರೆ ಸಾಲದು ಗುಣ ಇರಬೇಕಲ್ಲವೆ!? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ಮುಖಂಡ ಸಿಟಿ ರವಿ ನೀಡಿರುವ ಹೇಳಿಕೆ ವಿಚಾರವಾಗಿ ಸಚಿವ ಎಂಬಿ ಪಾಟೀಲ್ ಅವರು ನೀಡಿರುವ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಎರಡನೇ ಬಾರಿ ಸಿಎಂ ಆಗಿದ್ದಾರೆ. ಜನ ಆಯ್ಕೆ ಮಾಡಿ ಕಳುಹಿಸಿದ್ದಾರೆ. ಸಿಟಿ ರವಿ ಅವರನ್ನು ಮನೆಗೆ ಕಳುಹಿಸಿದ್ದಾರೆ. ಜನಪರ ಯೋಜನೆ ಕೊಟ್ಟಿದ್ದಾರೆ, ನುಡಿದಂತೆ ನಡೆದಿದ್ದಾರೆ. ಇನ್ನು ಏನು ಬೇಕಂತೆ ಎಂದು ಪ್ರಶ್ನಿಸಿದರು. ಸಿಟಿ ರವಿ ಐದು ವರ್ಷ ಸರ್ಕಾರ ಇತ್ತು. ಏನೂ ಮಾಡಲಿಲ್ಲ. ಬದಲಾಗಿ ಬಜೆಟ್ ಗಿಂತ ಹೆಚ್ಚು ಖರ್ಚು ಮಾಡಿ ಲಕ್ಷಾಂತರ ಕೋಟಿ ಹೊರೆಯಿಟ್ಟು ದಿವಾಳಿ ಎಬ್ಬಿಸಿದ್ದರು. ಬಜೆಟ್ ಕಿಂತ ಎಲ್ಲಾ ಇಲಾಖೆಗಳಲ್ಲಿ 10 ಸಾವಿರ 20 ಸಾವಿರ ಕೋಟಿ ಹೆಚ್ಚಿಗೆ ಖರ್ಚು ಮಾಡಿದ್ದಾರೆ. ಎಲ್ಲ ವ್ಯವಸ್ಥೆ ಹದಗೆಡಿಸಿದ್ದಾರೆ. ಇವರು ರಾಮರಾಜ್ಯ ಮಾಡೋಕೆ ಹೋಗ್ತಾರಾ!? ಎಂದರು. https://ainlivenews.com/stomach-ache-immediately-after-eating-so-try-this-home-remedy/ ಇದೇ ರಾಮರಾಜ್ಯದ ಕಲ್ಪನೆಯೇ? ಹಿಗ್ಗಾಮುಗ್ಗಾ. ಲೂಟಿ ಹೊಡೆಯೋದು ಇದೇ ನಿಮ್ಮ ರಾಮರಾಜ್ಯದ…

Read More

ಬೆಂಗಳೂರು:- ಶೀಘ್ರವೇ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿ ಪಟ್ಟಿ ಬಿಡುಗಡೆ ಆಗಬಹುದು ಎಂಬ ನಿರೀಕ್ಷೆ ಹುಸಿಯಾಗಿದ್ದು, ಇದು ಆಕಾಂಕ್ಷಿಗಳಲ್ಲಿ ಮತ್ತೆ ನಿರಾಸೆ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಬುಧವಾರ ದಿಲ್ಲಿಗೆ ತೆರಳಿದ್ದರು. ಈ ಹಿನ್ನೆಲೆಯಲ್ಲಿ ತಿಂಗಳುಗಳಿಂದ ನನೆಗುದಿಗೆ ಬಿದ್ದಿದ್ದ ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಪ್ರಕ್ರಿಯೆಗೆ ಮರುಚಾಲನೆ ದೊರೆಯಲಿದ್ದು, ಅಂತಿಮ ಪಟ್ಟಿ ಕೂಡ ಬಿಡುಗಡೆಯಾಗಬಹುದು ಎಂಬ ನಿರೀಕ್ಷೆ ಗರಿಗೆದರಿದ್ದವು. ಆಕಾಂಕ್ಷಿಗಳು ಕೂಡ ದಿಲ್ಲಿಯತ್ತ ನೋಟ ಹರಿಸಿದ್ದರು. ಆದರೆ “ದಿಲ್ಲಿ ಭೇಟಿ’ ಕೇವಲ ಲೋಕಸಭಾ ಚುನಾವಣೆ ಚರ್ಚೆಗೆ ಸೀಮಿತವಾಯಿತು. ಇದು ಆಕಾಂಕ್ಷಿಗಳಲ್ಲಿ ತೀವ್ರ ಬೇಸರ ಉಂಟುಮಾಡಿದೆ. ಪ್ರತಿ ಬಾರಿ ದಿಲ್ಲಿಗೆ ಹೋದಾಗಲೂ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮೂಲಕ ಶಾಸಕರು, ಹಿರಿಯ ಕಾರ್ಯಕರ್ತರಲ್ಲಿ “ಅಧಿಕಾರ ಭಾಗ್ಯ’ ಸಿಗಬಹುದು ಎಂಬ ಆಸೆ ಮೊಳಕೆಯೊಡೆಯುತ್ತದೆ. ನಾಯಕರು ಮರಳುತ್ತಿದ್ದಂತೆ ನಿರಾಸೆಯ ಉತ್ತರ ಸಿಗುತ್ತದೆ. ಇದು ಆಕಾಂಕ್ಷಿಗಳ ಅಸಮಾಧಾನಕ್ಕೂ ಕಾರಣವಾಗುತ್ತಿದೆ. ಬೆಳಗಾವಿ ಅಧಿವೇಶನಕ್ಕೂ ಮೊದಲೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಈಗ ಮತ್ತೂಂದು ಅಧಿವೇಶನ ಹತ್ತಿರ…

Read More

ಕಳೆದ ಬಾರಿ ಅಭಿಮಾನಿಗಳನ್ನು ಭೇಟಿಯಾಗದೆ ಕುಟುಂಬ ಸದಸ್ಯರೊಂದಿಗೆ ದುಬೈನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯಶ್ ಈ ವರ್ಷ ಪತ್ರ ಬರೆದಿದ್ದು, ” ಜನವರಿ 8.. ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನು ನನ್ನ ಜತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ. ನನಗೂ ಅಷ್ಟೇ ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ. ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ. ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ರಂದು ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ. ನಿಮ್ಮಗಳ ಅಭಿಮಾನ ನನ್ನ ಅನುಪಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು. ಸದಾ ಕಾಲ ನನ್ನ ಜತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟು ಹಬ್ಬದ ಉಡುಗೊರೆ. ನಿಮ್ಮ ಪ್ರೀತಿಯ ಯಶ್” ಎಂದು ಪೋಸ್ಟ್ ಮಾಡಿದ್ದಾರೆ. ಯಶ್ ಸದ್ಯ ”ಟಾಕ್ಸಿಕ್” ಚಿತ್ರದ ಕೆಲಸದಲ್ಲಿ ಬಹಳಷ್ಟು ಬ್ಯುಸಿಯಾಗಿದ್ದಾರೆ. ಬಹುನಿರೀಕ್ಷಿತ ಚಿತ್ರವನ್ನು ಗೀತು ಮೋಹನ್‌ದಾಸ್ ನಿರ್ದೇಶಿಸುತ್ತಿದ್ದು ದೊಡ್ಡ ಬಜೆಟ್ ಯೋಜನೆಯಾಗಿದೆ. ಕರೀನಾ ಕಪೂರ್ ಖಾನ್ ಕೂಡ ಚಿತ್ರದಲ್ಲಿ ನಟಿಸಲಿದ್ದಾರೆ…

Read More

ನವದೆಹಲಿ: ಅದಾನಿ (Adani) ಹಿಂಡೆನ್‌ಬರ್ಗ್‌ ಶಾರ್ಟ್‌ ಸೆಲ್ಲಿಂಗ್‌ ಪ್ರಕರಣದಲ್ಲಿ ಸೆಬಿ ಬದಲು ಬೇರೆ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕೆಂಬ ವಾದವನ್ನು ಸುಪ್ರೀಂ ಕೋರ್ಟ್‌ (Supreme Court) ತಿರಸ್ಕರಿಸಿದೆ. ಈ ಪ್ರಕರಣದ ತನಿಖೆ ನಡೆಸಲು ಸೆಬಿ ಸಮರ್ಥವಾಗಿದೆ. ಮೂರು ತಿಂಗಳ ಒಳಗಡೆ ಸೆಬಿ ಸಂಪೂರ್ಣವಾಗಿ ತನಿಖೆ ನಡೆಸಬೇಕೆಂದು ಕೋರ್ಟ್‌ ಸೂಚಿಸಿದೆ. ಸಿಜೆಐ ಡಿವೈ ಚಂದ್ರಚೂಡ್, ನ್ಯಾ.ಜೆಬಿ ಪರ್ದಿವಾಲಾ ಮತ್ತು ನ್ಯಾ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ನವೆಂಬರ್‌ನಲ್ಲಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ದಾನಿ ಕಂಪನಿಗಳು ತನ್ನ ಷೇರಿನ ಬೆಲೆಗಳನ್ನು ಕೃತಕವಾಗಿ ಹೆಚ್ಚಿಸಿದೆ ಎಂದು ಹಿಂಡೆನ್‌ಬರ್ಗ್ ಸಂಶೋಧನಾ ವರದಿ (Hindenburg Research Report) ಬಳಿಕ ವಿವಿಧ ಅದಾನಿ ಕಂಪನಿಗಳ ಷೇರು ಮೌಲ್ಯದಲ್ಲಿ ತೀವ್ರ ಕುಸಿತವಾಗಿ ಸುಮಾರು 100 ಶತಕೋಟಿ ಡಾಲರ್‌ ಸಂಪತ್ತು ಕರಗಿತ್ತು. ಪ್ರಕರಣದ ತನಿಖೆ ವಿಶೇಷ ತನಿಖಾ ತಂಡ (SIT) ರಚಿಸಬೇಕು ಎಂದು ಕೋರಿ ಹಲವು ಮಂದಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು.  ಕೋರ್ಟ್‌ ಹೇಳಿದ್ದೇನು? ಅದಾನಿ ವಿರುದ್ಧದ 22 ಆರೋಪಗಳ ಪೈಕಿ 20ರ…

Read More

ಬೆಂಗಳೂರು:- ನೈಂಟಿ ಎಣ್ಣೆ ಕೊಡಿಸದಿದ್ದಕ್ಕೆ ಹಿರಿಯ ನಾಗರೀಕನ ಮೇಲೆ ಪುಂಡಾಟ ನಡೆಸಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಅಲ್ಲದೇ ಹಿರಿಯರು ಎನ್ನುವುದನ್ನು ಲೆಕ್ಕಿಸದೇ ಇಟ್ಟಿಗೆಯಿಂದ ಮುಖಕ್ಕೆ ಹಲ್ಲೆ ಮಾಡಿ ಕಾಲಲ್ಲಿ ಒದ್ದು ವಿಕೃತಿ ಮೆರೆಯಲಾಗಿದೆ. ಗಿರಿನಗರದ ಮೂಕಾಂಭಿಕನಗರದಲ್ಲಿ ಘಟನೆ ಜರುಗಿದೆ. ಘಟನೆ ನಂತರ ಆರೋಪಿ ಧರ್ಮ ತಲೆಮರೆಸಿಕೊಂಡಿದ್ದಾನೆ. ಸಿಂಗಾರ ವೇಲು ಎಂಬುವವರು ಗಿರಿನಗರದ ಮನೆ ಬಳಿ ಕಬಾಬ್ ತಿನ್ನುತ್ತಿದ್ರು. ಈ ವೇಳೆ ಎಂಟ್ರಿಕೊಟ್ಟಿದ್ದ ಆರೋಪಿ ಧರ್ಮ, ನೈಂಟಿ ಎಣ್ಣೆ ಕೊಡಿಸು ಅಂತ ಸಿಂಗಾರ ವೇಲುರಿಗೆ ಪೀಡಿಸಿದ್ದಾನೆ. ಕೊಡಿಸದಿದ್ದಾಗ ಕಾಲಲ್ಲಿ ಒದ್ದಿದ್ದಲ್ಲದೇ, ಇಟ್ಟಿಗೆಯಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆ ಪರಿಣಾಮ ಸಿಂಗಾರ ವೇಲುರ ತುಟಿ ಹರಿದು ಹೋಗಿದೆ. ಸದ್ಯ ಆಸ್ಪತ್ರೆಯಲ್ಲಿ ಸಿಂಗಾರವೇಲು ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದಾರೆ. ಹಲ್ಲೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡಿಸೆಂಬರ್ 29 ರ ರಾತ್ರಿ 8:30 ರ ಸುಮಾರಿಗೆ ಘಟನೆ ಜರುಗಿದ್ದು, ಗಿರಿನಗರ ಪೊಲೀಸರಿಂದ ಆರೋಪಿ ಧರ್ಮನಿಗಾಗಿ ತಲಾಶ್ ನಡೆದಿದೆ.

Read More

ಕನ್ನಡದ ನಟಿ ರಶ್ಮಿಕಾ ಮಂದಣ್ಣ ಸದ್ಯ ‘ಅನಿಮಲ್’ (Animal) ಸಿನಿಮಾದ ಸಕ್ಸಸ್ ಅಲೆಯಲ್ಲಿ ತೇಲುತ್ತಿದ್ದಾರೆ. ಇದರ ನಡುವೆ ಅಭಿಮಾನಿಯೊಬ್ಬ, ನಿಮ್ಮಂತೆಯೇ ಪತ್ನಿ ಸಿಗಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಅಳಲು ತೋಡಿಕೊಂಡಿದ್ದಾರೆ. ಅದಕ್ಕೆ ರಶ್ಮಿಕಾ, ಸ್ವೀಟ್ ಆಗಿ ರಿಪ್ಲೈ ನೀಡಿದ್ದಾರೆ. ‘ಅನಿಮಲ್’ ಚಿತ್ರದ ಸಕ್ಸಸ್‌ನಿಂದ ಬಾಲಿವುಡ್‌ನಲ್ಲಿ ಭದ್ರ ನೆಲೆ ಕಂಡುಕೊಂಡಿದ್ದಾರೆ. ಈ ಖುಷಿಯ ನಡುವೆ ರಶ್ಮಿಕಾ ಮಂದಣ್ಣ ಅಭಿಮಾನಿಗೆ ಮದುವೆ ಬಗ್ಗೆ ರಿಯಾಕ್ಟ್ ಮಾಡಿರೋದು ಸಖತ್ ಸದ್ದು ಮಾಡುತ್ತಿದೆ. ಅಭಿಮಾನಿಯೊಬ್ಬ ರಶ್ಮಿಕಾ (Rashmika Mandanna) ಫೋಟೋ ಶೇರ್ ಮಾಡಿ, ನೀವು ನಮ್ಮ ನ್ಯಾಷನಲ್ ಕ್ರಶ್ ಮೇಡಂ ಎಂದು ಬರೆದುಕೊಂಡಿದ್ದಾರೆ. ಬಳಿಕ ಒಂದು ದಿನ ನಾನು ನಿಮ್ಮ ರೀತಿಯ ಪತ್ನಿಯನ್ನು ಪಡೆಯುತ್ತೇನೆ ಎಂಬ ಭರವಸೆ ಇದೆ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ರಶ್ಮಿಕಾ ಗಮನಕ್ಕೂ ಬಂದಿದ್ದು, ನಟಿ ಪ್ರತಿಕ್ರಿಯೆ ನೀಡಿದ್ದಾರೆ. ಅಹ್ಹಹಾ.. ನಾನು ಮದುವೆಯಾದಾಗ ನನ್ನ ಪತಿ ಕೂಡ ಹೀಗೆ ಭಾವಿಸುತ್ತಾರೆ ಎಂದು ಅಂದುಕೊಂಡಿದ್ದೇನೆ ಎಂದು ರಶ್ಮಿಕಾ ಉತ್ತರಿಸಿದ್ದಾರೆ. ಈ ಪೋಸ್ಟ್ ಸಖತ್ ವೈರಲ್…

Read More